Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ಕಾಮಿ೯ಕರ ದಿನ ಎನ್. ಆರ್ .ರೂಪಶ್ರೀ ಕಾಮಿ೯ಕರ ದಿನ ತುತ್ತು ಅನ್ನಕ್ಕಾಗಿ ಬಾಳನ್ನು ತೆತ್ತು ತೆತ್ತು ಹಗಲಿರುಳು ದುಡಿತದ ನೆರಳಿನಲಿ ಸಾಗುತಿದೆ ಕಾಮಿ೯ಕನ ಹೊತ್ತು. ದಿನ ದಿನವೂ ಅನುದಿನವೂ ನೋವು ನರಳಾಟ ಅರಳುವುದು ಕಣ್ಣಿನಲ್ಲಿ ಕುಡಿಮಿಂಚು ನಗೆಯಾಟ ಬಲ್ಲಿದರ ಬಂಧನದಿ ಸದಾ ಶೋಷಣೆಯ ಸೆರಗು ಇದೇ ಏನೋ ಕಾಮಿ೯ಕನ ಜೀವನಕೆ ಸಂತಸದ ಮೆರಗು. ತಾನು ತನ್ನದೆನ್ನುವ ಹಕ್ಕಿನ ಹಂದರ ಹಸಿದು ಬಸವಳಿದಿದೆ ಆಸೆ ಆಮಿಷಗಳ ದೂರದ ಬಯಕೆಗಳ ಗೋಪುರದ ಗುಮ್ಮಟ ತಲೆಯೆತ್ತಿ ನಿಂತಿದೆ. ದು:ಕ ದುಗುಡ ದುಮ್ಮಾನಗಳಿಗೆ […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ಕಾವಲಿಯಿಂದ_ಕೆಂಡಕ್ಕೆ ಲಕ್ಷ್ಮಿಕಾಂತಮಿರಜಕರ ಕಾವಲಿಯಿಂದ_ಕೆಂಡಕ್ಕೆ ಚರಂಡಿ ಬದಿಯ ಮುರುಕಲು ಶೆಡ್ ಗಳಲ್ಲಿ ಸಹಿಸುತ್ತ ಕಚ್ಚುವ ಸೊಳ್ಳೆಗಳ ನೋವು ನಾಳೆಯೂ ಕೆಲಸಕ್ಕೆ ಹೋಗದಿದ್ದರೆ ಹೊಟ್ಟೆಗೇನೂ ಸಬೂಬು ಹೇಳುವುದೆಂದು ಚಿಂತಾಮಗ್ನದಲ್ಲಿ ನಾವಿರುವಾಗ ನೀವಾಗಲೇ ಚಪ್ಪಾಳೆ ತಟ್ಟುವ ಸಂತೋಷದಲ್ಲಿ ಮೈಮರೆತು ಮೀಯುತ್ತಿದ್ದಿರಿ ನಿಮ್ಮ ನಿಮ್ಮ ಅರಮನೆಗಳ ಬಾಲ್ಕನಿಗಳಲ್ಲಿ ನಿಂತು ನಿಮ್ಮ ಚಪ್ಪಾಳೆಯ ಲಯಬದ್ಧ ಸದ್ದಿಗೆ ಸಮವಲ್ಲ ಬಿಡಿ ನಮ್ಮ ಹಸಿದ ಹೊಟ್ಟೆಗಳ ತಾಳ ತಿಂಗಳಪೂರ್ತಿ ಸಾಕಾಗುವಷ್ಟು ದಿನಸಿಗೋದಾಮು ಪೇರಿಸಿಡಲು ನೀವು ನಗುತ್ತಲೇ ಹೆಣಗಾಡುತ್ತಿದ್ದ ಸಮಯದಲ್ಲಿ ನಮ್ಮ ಬದುಕು ಪೇರಿಕಿತ್ತಿತ್ತು ಬಿಸಿಲಿಗೆ ಕಾದು […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕೂಲಿಯವನ ಮಗ ನಾನು ವಾಯ್.ಜೆ.ಮಹಿಬೂಬ ಕೂಲಿಯವನ ಮಗ ನಾನು ಬಡವನಾದರೇನಂತ ಇಲ್ಲೆನಗ ಬ್ಯಾಸರ ಕಣ್ಣತುಂಬ ನಿದ್ದೀಗಿ ಗುಡಿಸಲೆಮಗೆ ಆಸರ !!ಪ!! ಕೂಲಿಯವನ ಮಗನಾನು ಬಿಸಿಲೆಮಗೆ ಸಹೋದರ ನಮ್ಮಪ್ಪ ಅಂತಾನ ಮುಗಿಲೆ ನಮಗೆ ಹಂದರ !!೧!! ಅವ್ವನ ಸೀರಿ ಶೆರಗೇ ಒರಿಸೇತಿ ಬೆವರ ಹಾಸಿಗೆ ಆಗತೈತಿ ಅಪ್ಪನ ಹರಕ ಧೋತರ!!೨!! ಹಬ್ಬಕವರು ಕಾಣಲಿಲ್ಲ ಹೊಸ ಸೀರಿ-ದೋತರ ಸತ್ತಾಗ ಕಟ್ಟತೀರಿ ಅರವಿ ಐದು ಮೀಟರ್ !!೩! ******

ಕಾರ್ಮಿಕ ದಿನದ ವಿಶೇಷ-ಕವಿತೆ

ಕಾರ್ಮಿಕ-ಶ್ರಮಿಕ ಪ್ರೊ.ಕವಿತಾ ಸಾರಂಗಮಠ ಕಾರ್ಮಿಕ-ಶ್ರಮಿಕ ದೇವನಿತ್ತ ಭೂಮಿಯಲ್ಲಿ ಶ್ರಮಿಕ ಪ್ರಾಮಾಣಿಕತೆಯ ಧನಿಕ ಸಮಯದ ಪರಿಪಾಲಕ ನಿತ್ಯ ದುಡಿದು ತಿನ್ನುವ ಕಾಯಕ! ಕರ್ಮದಿಂದ ಜಗವೆಲ್ಲ ಸುಗಮ ಕರ್ಮದಿಂದಲೇ ಸಂತಸದ ಉಗಮ ಹರಿಸುತ ನಿತ್ಯ ಬೆವರ ಸುಮ ಜಗವೆಲ್ಲ ಹರಡುವ ಶ್ರಮದ ಕುಸುಮ! ಶ್ರಮದೊಂದಿಗೆ ದಿನಚರಿ ಆರಂಭ ಅವಿರತ ದುಡಿದ ಬೆವರಲವನ ಬಿಂಬ ಸಹಿಸುವ ಧನಿಕರ ದಬ್ಬಾಳಿಕೆ ಆದರೂ ಇವನ ಕೆಲಸಕಿಲ್ಲ ಹೋಲಿಕೆ! ಕಟ್ಟುವ ನಿತ್ಯ ಕಾಯಕದ ಕಟ್ಟೆ ಕೈಯಲ್ಲಿ ಹಿಡಿದು ಉಣ್ಣುವ ಕರ್ಮದ ತಟ್ಟೆ ತೊಟ್ಟರೂ ಚಿಂದಿ ಬಟ್ಟೆ […]

ಕಾರ್ಮಿಕ ದಿನದ ವಿಶೇಷ-ಕವಿತೆ

ಸನ್ಮಾನ ಸಂಮ್ಮೋದ ವಾಡಪ್ಪಿ ಸನ್ಮಾನ ಗಳಿಕೆಗೆ ಸ್ವಾಭಿಮಾನದ ದಿಟ್ಟ ಹೆಜ್ಜೆ ಇಡುತ ಬೆವರ‌ ಹನಿಗಳ ಸುರಿಸಿ ದುಡಿಮೆಯಲಿ ನಗುತ ಭವ್ಯ ದೇಶದ ಏಳಿಗೆಯ ಬೆನ್ನೆಲಬು ನಾವು ಶ್ರಮದ ದಾರಿ ಜೀವನದುದ್ದಕ್ಕೂ ನಡೆಯುತಿಹೆವು ಒಗ್ಗಟ್ಟಿನಲಿ ಒಕ್ಕೊರಲಿನ ಶಿಸ್ತಿನ ನಡೆಯು ದಣಿವಿಲ್ಲದ‌ ಚಲನೆ ನಿಲ್ಲಬೇಕು ಮನೆಯು ಸಹಿಷ್ಣುತೆಯಿಂದ ಸದಾ‌ ಕಾರ್ಯೋನ್ಮುಖ ಆತ್ಮವಿಶ್ವಾಸದ ಪಡೆ ಆಗನೆಂದು ವಿಮುಖ ಕಾರ್ಮಿಕರು ಒಂದೇ‌ ಸೂರಿನಲಿ ಬಂಧುಗಳು ಸಮಯ‌‌ ಪಾಲನೆ, ಶ್ರದ್ಧೆಯೇ ಪ್ರಮಾಣಗಳು ತಂತ್ರಜ್ಞಾನ ಕಾರ್ಯತಂತ್ರದಲ್ಲಿ‌ಯೂ ಪರಿಣಿತರು ಆರ್ಥಿಕತೆಯ ಬುನಾದಿ ನಿರಂತರ ಸಾಧಕರು ದಿನ‌‌ ವಾರ […]

ಕಾರ್ಮಿಕ ದಿನದ ವಿಶೇಷ-ಕವಿತೆ

ಭರವಸೆಯ ಬದುಕು ಪ್ರತಿಭಾ ಹಳಿಂಗಳಿ ಭರವಸೆಯ ಬದುಕು ದುಡಿಯುವ ಕೈಗಳೇ ನಿವೇನು ಬೇಡುತಿರುವಿರಿ ಹೊತ್ತು, ಹೊತ್ತಿನ ಊಟ ಇರಲೊಂದು ನೆಲೆ ಇಷ್ಟು ಸಾಕಲ್ಲವೇ? ಇಲ್ಲ ಸಾಕಾಗಲಿಲ್ಲ ನಾವೇನು ಯಂತ್ರಗಳಲ್ಲ, ನಮ್ಮ ‌ದೇಹದಲ್ಲೂ ಹರಿದಾಡುತಿದೆ ರಕ್ತ ಅದು ಕೂಡ ಕೆಂಪಲ್ಲವೇ ನಿಮ್ಮೆಲ್ಲರ‌ ಹಾಗೆ. ಬೆವರು ಸುರಿಯುತಿಹೆ ನಮ್ಮ ಹಣೆಯ ಮೇಲೆ ಅದು ಯಾರದೋ ಸಂಪತ್ತಿನ ಬಂಡವಾಳವಂತೆ ಹಗಲು, ರಾತ್ರಿ ಶ್ರಮವಹಿಸಿ ಮೈಯೆಲ್ಲ ಹಣ್ಣಾಗಿಸಿ ದುಡಿಯುತಿರೆ ನಾವು ನೀವು ಕೊಡುವ ಕಾಸು ಧರ್ಮದ್ದೇನಲ್ಲ. ಇಂದು ಬೆವರು ಹರಿಸಿದಾಗಲೇ ದೊರಕುವದು ಅನ್ನ […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ಗಝಲ್ ಪ್ರತಿಮಾ ಕೋಮಾರ ಗಜಲ್ ಕರವೆರಡು ಕೊರಡಾದರೂ ಸೋಲುವುದಿಲ್ಲ  ಅವನು ಉಳಿ ಮೇಲೆ ಉಳಿ ಬಿದ್ದರೂ ಎದೆಗುಂದುವುದಿಲ್ಲ ಅವನು ಕತ್ತಲೇ ಮನೆಯಾದರೂ ಕೊರಗುವುದಿಲ್ಲ ಅವನು ಎಲ್ಲರಿಗೂ ಬೆಳಕನ್ನೇ ಹಂಚಿದರೂ ಬೀಗುವುದಿಲ್ಲ ಅವನು ಒಡಲಾಳದಲ್ಲಿ ಹರಿದರೂ ಲಾವಾ, ಹೇಳಿಕೊಳ್ಳುವುದಿಲ್ಲ ಅವನು ಉಳ್ಳವರು ತುಳಿಯುತ್ತಲಿದ್ದರೂ ಚಕಾರವೆತ್ತುವುದಿಲ್ಲ ಅವನು ಮಳೆ,ಬಿಸಿಲು ,ಚಳಿ ಏನೇ ಇದ್ದರೂ ಅಳುಕುವುದಿಲ್ಲ  ಅವನು ಕಾಯಕದಲ್ಲಿ ಮೇಲು ಕೀಳೆಂಬ ಭಾವ ತೋರುವುದಿಲ್ಲ ಅವನು ಆಲಸ್ಯದಿ ದುಡಿಯದೇ ಕುಳಿತು ಉಣ್ಣುವುದಿಲ್ಲ ಅವನು ಕಾಯಕವೇ ಕೈಲಾಸ ಎಂಬ ತತ್ವ ಮರೆಯುವುದಿಲ್ಲ […]

ಕಾರ್ಮಿಕ ದಿನದ ವಿಶೇಷ-ಕವಿತೆ

ನಾವು ಮತ್ತು ಅವರು ಶೋಭಾ ನಾಯ್ಕ. ಹಿರೇಕೈಕಂಡ್ರಾಜಿ. ನಾವು ಮತ್ತು ಅವರು ಇಲಿ ಕೊರೆದ ಮನೆ ಗೋಡೆಗೆ ಮಣ್ಣ ಮೆತ್ತಿಯೇ ಬಂದಿದ್ದಾರಿಲ್ಲಿ ಮಹಡಿ ಮನೆಗೆರಡು ಕಂಬ ಎಬ್ಬಿಸಲು ಅವರ ಮೈ ಬೆವರಿಗಷ್ಟು ಕೂಡಿಸಿ, ಕಳೆದು ಲೆಕ್ಕಹಾಕಿ ಕೂಲಿ ಕೊಡುವ ನಾವುಗಳು ನಮ್ಮ ಮೈ ಬೆವರನ್ನು ಹೇಳಿದಷ್ಟು ಕಟ್ಟಿ ಇಳಿಸಿ ಬರುತ್ತೇವೆ. ಸಂಜೆ ಮೀನು ಮತ್ತು ಮಾರುದ್ದ ಜಡೆಯ ಮಗಳಿಗೆರಡು ರಿಬ್ಬನ್ನು ಒಯ್ಯುವಾಗ ನಗುತ್ತವೆ ಅವರ ಕೈಯಲ್ಲಿ ನಾವೇ ಕೊಟ್ಟ ನೋಟುಗಳು ಇಲ್ಲಿನ ಬರಕತ್ತಿನ ಬದುಕ ಕಂಡು ಕೊನೆಗೂ […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ನಾವು ಕಾರ್ಮಿಕರು ಸಾಯಬಣ್ಣ ಮಾದರ ನಾವು ಕಾರ್ಮಿಕರು ನಮ್ಮಗರಿವಿಲ್ಲದೆ ಹಗಲು ಇರುಳು ಚಲಿಸುತ್ತಿವೆ ಕಷ್ಟಕಾರ್ಪಣ್ಯಕೆ ಬರವಿಲ್ಲದೆ ಚಲಿಸುತ್ತಿದೆ ಜೀವ ಮುಸುಕು ಹೊದ್ದು ಹಸುರನುಟ್ಟು ನಾಳೆ ಎಂಬುವುದು ಭಯವಿಲ್ಲದೆ! ತಲೆಯೊಡೆದು ಬದಕುವವರು ನಾವಲ್ಲ ಬರಿ ದುಡಿದು ತಿನ್ನುವರು ನಾವೆಲ್ಲ ! ನಿಮ್ಮ ಗೋಪುರ ಮೀನಾರಗಳಿಗೆ ನಮ್ಮ ಎಲುಬುಗಳೆ ಹಂದರವಾಗಿ ನಿಮ್ಮ ತೆವಳುವ ಕನಸುಗಳಿಗೆ ನಮ್ಮ ಸ್ವಪ್ನದೆಲೆಗಳಾಗಿ ಚಲಿಸುತ್ತಿದ್ದೇವೆ ಮಾಸಿದ ಬಣ್ಣ ಬಳಿದುಕೊಂಡು ನಿಮ್ಮ ಭಾಷೆ-ಭಾವಗಳು ನುಂಗಿ ಹಾಕಿವೆ ಎಷ್ಟೊಂದು ಜೀವಗಳು ಉಸಿರಿನ ಸಮಾಧಿಗಳ ಮೇಲೆ ಆಕಾಶದಲ್ಲಿ ಹಾರಾಡಿ […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ಕಾರ್ಮಿಕರ ಕೂಗು ಈರಪ್ಪ ಬಿಜಲಿ ಕಾರ್ಮಿಕರ ಕೂಗು” ಚೋಟುದ್ದದ ಹೊಟ್ಟೆಚೀಲವ ತುಂಬಿಸಲು ಮನುಜ ಮಾಡುವನು ಕೂಲಿ ಕೆಲಸಗಳನು ಕಟ್ಟಡ,ಬಡಗಿತನ,ವೆಲ್ಡಿಂಗ್ ,ಪೈಪ್ಲೈನಗಳು ಪೇಂಟರ್,ಪೌರ,ಸಿಂಪಿಗಕಮ್ಮಾರಿಕೆ,ಅನೇಕ ಕರ್ಮಗಳು।।1।। ನಮ್ಮಿ ಕಾರ್ಮಿಕರಿಗಿಲ್ಲ ಜೀವನದ ಭದ್ರೆತೆ ಅವರ ಜೀವನವಿರುವುದು ಬಲು ವಿಭಿನ್ನತೆ ಬಂಡ್ವಾಳಷಾಹಿ,ಕಾರ್ಮಿಕರಲ್ಲಿನ ತಾರತಮ್ಯತೆ ದೂರಾಗಿ ಮೂಡಿಬರಲಿ ಎರಡೂಗುಂಪಲಿ ಸರಿಸಮಾತೆ।।2।। ಕಾರ್ಮಿಕರ ಕೂಗು ನೊಂದ ಮನಗಳ ಕೂಗು ಕೇಳುತ ಧನಿಕರು ಹಿಗ್ಗಿಸುವರು ತಮ್ಮಯ ಮೂಗು ಹೃದಯಸಿರಿವಂತಿಕೆಲಿ ಕಾರ್ಮಿಕರ ಮನಸ್ಸದು ಮಗು ವೇತನದ ದಿನದಂದು ಇವರ ಮುಖದಲಿ ಕಿಲಕಿಲ ನಗು।।3।। ಜೀವದ ಅಂಗುತೊರೆದು ಅವಿರತ […]

Back To Top