Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ಕ್ವಾರಂಟೈನ್ ದಿನಗಳಿವು ಶಾಲಿನಿ ಆರ್. ಅಮ್ಮನ ಆ ಮೂರು ದಿನ ಕಾಗೆ ಮುಟ್ಟಿದೆ ಮುಟ್ಟ ಬೇಡ ಎಂದು ದೂರ ಕುಳಿತ ಮುಟ್ಟಿನ ಆ ದಿನ, ಇಂದು ನಾನೆ ಯಾರನ್ನು ಮುಟ್ಟಿಸಿಕೊಳದೆ ದೂರದಿ ನಿಂತು  ದಿನ ದೂಡುತಿರು ಕ್ವಾರಂಟೈನ್ ದಿನ, ತರಕಾರಿ ಕೊಳ್ಳುವಾಗ ಮಾರುವವನಿಗಿಂತ ಮಾರು ದೂರ ನಿಂತು ಕೊಳ್ಳುವ ಕ್ವಾರಂಟೈನ್ ದಿನ, ದಿನಸಿ ಸಾಮಾನಿನ ಖರೀದಿಗೂ ಬಂದಿದೆ ಕೊಡುವ ಕೊಳ್ಳುವವನ ಮಧ್ಯೆ ಲಕ್ಣ್ಮಣರೇಖೆಯ ಕ್ವಾರಂಟೈನ್ ದಿನ ಪ್ರತಿಯೊಬ್ಬರ ಮಧ್ಯೆದಲ್ಲೂ ಸಿಲುಕಿ ನಲುಗುತಿದೆ ಮುಗಿಯಲಾರದೆ ನರಳುತಿದೆ ಕ್ವಾರಂಟೈನ್ ದಿನ, […]

ಕಾವ್ಯಯಾನ

ಮುಗಿಯದ ಹಾಡು ಎನ್.ಶೈಲಜಾ ಹಾಸನ ಇಡುವ ಹೆಜ್ಜೆ ಜೊತೆ ಜೊತೆಹೆಜ್ಜೆ ಕೂಡಿದ ಪಲುಕುಪರಿ ಪರಿಯ ಕುಲುಕುನಾನೆಂತು ಬಣ್ಣಿಸಲಿನೀ ಒಲಿದೆ,ನನ್ನ ಒಲಿಸಿದೆಬೆಸೆದಿದೆ ಬಂಧನಮನವೀಗ ಹೂ ನಂದನ  ಒಲವ ಬಂಧನದಿ ಸುಖವಿದೆಸಿರಿಯಿದೆ,ಮಧುವಿದೆ,ಸವಿಯಿದೆನಡೆದ ಹಾದಿಯಲ್ಲಿಬಣ್ಣಗಳ ಚೆಲುವಿದೆ ಮೌನದ ಹಾಡಲಿನೂರು ಕವಿತೆಕಣ್ಣ ಬೆಳಕಲಿ ಪ್ರೇಮದಣತೆನೋಟದಂಚಿನಲಿಕೋರೈಸುವ ಮಿಂಚುನೋಟದಾಳದಲಿ ನಲ್ಮೆಯ ಜಲಪಾತತುಂಟ ನಗೆಯಲಿಸಾವಿರ ಪುಳಕ ಕನಸುಗಳ ಸಾಕಾರಎದೆಯ ಗೂಡಲಿನಿನ್ನೊಲುಮೆಯಹುಚ್ಚು ನದಿಯಲಿಕೊಚ್ಚಿ ಹೋದವಳುತೇಲಿ ತೇಲಿ ತೇಲುತಲಿಇರುವ ಹುಚ್ಚು ಖೋಡಿಮನಸ್ಸು ನನ್ನದು ಮುಟ್ಟಲಾಗದು,ತಟ್ಟಲಾಗದುಮೆಟ್ಟಲಾಗದುಮುಪ್ಪಾನು ಮುಪ್ಪಿಗೆಒಲುಮೆಯ ಮನಸಿಗೆಗೆಲುವಿನ ಸೊಗಸು ದಾಂಪತ್ಯ ಗೀತೆಗೆಅನುರಾಗದ ಪಲ್ಲವಿಶೃಂಗಾರದ   ಅನುಪಲ್ಲವಿಮುಗಿಯದ ಹಾಡು ಇದು *******

ಕಾವ್ಯಯಾನ

ಕನಸಿನೂರಿನ ಅಪ್ಪ ಐಶ್ವರ್ಯ ಎಲ್.. ಬೆಳಕ ಹೊತ್ತು ಬಂದ ಸೂರ್ಯನೂ ಹೋಗುವ ಹೊತ್ತಾಯಿತು ಹೊರಗೆ ಹೋದ ಅಪ್ಪನು ಬಂದಾನೂ, ಕೈ ತುಂಬ ಬೊಂಬೆ ತಿಂಡಿಗಳ ತಂದಾನೂ ಅವರಿವರ ಮನೆಯ ಅಪ್ಪಂದಿರಂತೆಯೇ ನನ್ನಪ್ಪನೆಂದು ಕಣ್ಣಳತೆಗೆ ಎಟುಕುವವರೆಗೂ ಮನೆಯ ಮುಂದಿನ ಕಂಬವನೇರಿ ಕಾದು ಕುಳಿತೆ, ಬೆಳೆದು ಬುದ್ದಿಬರುವವರೆಗೆ…… ಏರಿದ ಕಂಬಕ್ಕಾದರೂ ಅರಿವಾಗಿರಬಹುದು ಅಪ್ಪನೆಂಬ ಕನಸು ಬೇರೂರಿದ್ದು ನನ್ನೊಳಗೆ, ಅರಿವಾಗಲೇ ಇಲ್ಲ ದೇವರಿಗೆ, ಅಪ್ಪನ ಕರೆದೊಯ್ದೆಬಿಟ್ಟಿದ್ದನು ನಂಗೆ ಬುದ್ದಿಬರುವುದರೊಳಗೆ………. ಜಡಕು ಕೂದಲಿಗೆ ಜುಟ್ಟುಕಟ್ಟಿ, ಕಪ್ಪು ಕಾಡಿಗೆಯಲಿ ಕಾಸಗಲದ ಬೊಟ್ಟಿಟ್ಟು ನನ್ನಿಷ್ಟದ ಫ್ರಾಕನ್ನೆ […]

ಕಾವ್ಯಯಾನ

ಜರೂರು ಬಂದೊದಗಿದೆ ಗೌರಿ.ಚಂದ್ರಕೇಸರಿ ದೇವ ಮಾನವರೆಲ್ಲ ಏನಾದರು? ತಪದಲ್ಲಿರುವರಾ ಇಲ್ಲಾ ಮೌನ ವ್ರತದಲ್ಲಿರುವರಾ? ಇಲ್ಲಾ ನಿದ್ರೆಯಲ್ಲಿ ಕಳೆದು ಹೋದರಾ? ಸೂರ್ಯ ಚಂದ್ರರುದಿಸುವುದು ತಮ್ಮಿಂದ ಎಂದವರು ಸ್ಪರ್ಷ ಮಾತ್ರದಿಂದಲೇ ಕಾಯಿಲೆಗಳ ಮಾಯ ಮಾಡುವೆ ಎಂದವರು ಅಂಗೈ ನೋಡಿ ತಾಳೆ ಹಾಕುವವರು ಪೂಜೆಗೈದು ಪಾಪವ ತೊಳೆಯುವವರು ಏನಾದರು? ಕೂಗು ಕೇಳುತ್ತಿಲ್ಲವೆ ಹಾಹಾಕಾರ ಕಾಣುತ್ತಿಲ್ಲವೆ? ಭೂ ಮಂಡಲವನ್ನೇ ಆವರಿಸಿದೆ ಅನಿಷ್ಠ ಎಲ್ಲೆಲ್ಲೂ ಹಿಡಿ ಅನ್ನಕ್ಕಾಗಿ ಚಾಚಿವೆ ಕೈಗಳು ಕುಣಿಕೆ ಹಿಡಿದು ಕಾದಿದೆ ಸಾವು ಬನ್ನಿ ನಿಮ್ಮ ಜರೂರು ಈಗ ಬಂದೊದಗಿದೆ ಹೊತ್ತಿರುವ […]

ಕಾವ್ಯಯಾನ

ಒಂದು ಕವಿತೆ ಅಮೃತಾ ಮೆಹಂದಳೆ ಈಗ ನಿನ್ನ ವಿರಾಮ ಸಮಯವಲ್ಲವೇ? ಬಿಡುವಿನಲ್ಲಿ ನೆನೆಯುತ್ತಿರುವೆಯಾ ನನ್ನ ನೀನು? ಲಟಿಗೆ ಮುರಿದ ಬೆರಳು ಸ್ಪರ್ಶಕ್ಕಾಗಿ ಹಂಬಲಿಸಿರಬಹುದೇನು? ಚಾಚಿದ ಕಾಲು ಬಯಸಿತಾ ಸಹನಡಿಗೆಯನ್ನು? ಏನೋ ಹುಡುಕುವ ಕ್ಯಾಮರಾ ಕಣ್ಣು ನನ್ನದೇ ಚಿತ್ರ ಸೆರೆಹಿಡಿಯುತ್ತಿದೆಯೇನು? ತುಟಿಸೋಕಿ ಸುಟ್ಟ ಕಹಿಕಾಫಿ ನಿನ್ನ ಪಾಲಿನ ನಾನಲ್ಲವೇನು? ನನ್ನ ಪ್ರೀತಿಯ ಹಾಡು ನಿನ್ನ ಪಾಡಾಗಿ ಕಿವಿಯ ಸೋಕುತ್ತಿರಬಹುದೇನು? ಇಲ್ಲಿ ಬೀಸಿದ ಗಾಳಿ ಸುತ್ತಿ ಸುಳಿದು ನಿನ್ನಾತ್ಮವ ಪುಳಕಿಸಬಾರದಿತ್ತೇನು? ನನ್ನ ಕಣ್ಣು ಕತ್ತಲು ಕಪ್ಪುಪಟ್ಟಿ ಕಟ್ಟದೆಯೇ.. ಕಿವಿ ಮುಚ್ಚಿಹೋಗಿದೆ […]

ಕಾವ್ಯಯಾನ

ನದಿಯಾಗು. ಶಾಲಿನಿ ಆರ್. ಶಾಲಿನಿ ಆರ್. ಆಸೆಗಳಿವೆ ನೂರಾರು ನೂರಾರು ಬಯಕೆ, ಎತ್ತಲಿಂದೆತ್ತಣಕೂ ನಿನ್ನ ಸೇರುವ ಹರಕೆ, ಹಸಿರುಲ್ಲಿನ ನಡುವೆ ಇಬ್ಬನಿ ಬನಿಯೊಳಗೆ ನಾನಿದಿದ್ದರೆ, ನಿನ್ನ ಪಾದ ಪ್ರಾತಃ ಸ್ಪರ್ಶಕೆ ನಾ ಸದಾ ಕಚಗುಳಿಯಿಡುತಿದ್ದೆ, ನಿನ್ನ ನೋಡುವ ಕನ್ನಡಿ ನಾನಾಗಿರೆ, ನಿನ್ನಂತರಂಗನರಿವ ಬೆರಗು ನಾನಾಗಿ ಬಳಿಯಿರುತಿದ್ದೆ, ನೀ ನಡೆವ ಹಾದಿಗೆ ಮರವು ನಾನಾದೊಡೆ, ನಿನ್ನ ದಣಿವಿಗೆ ನಾ ನೆರಳಾಗ ಬಯಸಿದ್ದೆ, ನೀ ನೋಡುವ ನೋಟದ ಕಣ್ಣು ನಾನಗಿದ್ದರೆ, ಭರವಸೆಯ ಬೆಳದಿಂಗಳ ಕಣ್ಗಿರಿಸಿ ತಣಿಯುತಿದ್ದೆ, ನಿನ್ನ ನಿಜ ಪ್ರೀತಿ […]

ಕಾವ್ಯಯಾನ

ಗಝಲ್ ಬಸವರಾಜ ಕಾಸೆ ಹೊತ್ತಲ್ಲದ ಹೊತ್ತಲ್ಲಿ ಪದೇ ಪದೇ ಗುನುಗುನಿಸುವ ಹಾಡೊಂದು ನೀನು/ ತನ್ನಷ್ಟಕ್ಕೇ ತಾ ಪುಟಿದೇಳುವ ಉತ್ಸಾಹಕ್ಕೆ ಗೊತ್ತಿರದ ಸ್ಪೂರ್ತಿಯೊಂದು ನೀನು// ಆ ರೆಪ್ಪೆ ಮಿಟುಕಿದಷ್ಟು ಬಾರಿ ಕ್ಷಣಕ್ಕೊಮ್ಮೆ ಕಾಣೆಯಾಗಿ ವಾಪಸ್ಸಾಗುವ ನಾನು/ ಮೆದು ಕುಣಿತದ ಕಣ್ಣ ಹುಬ್ಬು ಹುಟ್ಟು ಹಾಕುವ ಅನುಭವವೊಂದು ನೀನು// ಸರಸರನೆ ಸೆಳೆದೆಳೆದು ಸಾಗರ ಒಳಗೆಳೆದುಕೊಂಡಂತೆ ಸಂಜೆ ಸೂರ್ಯನನ್ನು/ ಮರಳು ದಡದ ಮೇಲೆ ಮೆಲ್ಲಗೆ ಮೆಲುಕುವ ಮಲ್ಲಿಗೆ ದಂಡೆಯೊಂದು ನೀನು// ನೀ ಬರುವ ಸಮಯಕ್ಕೆ ಕಾಯುವ ಭಾವಗಳು ಹರಿಯುವವು ಮಳೆಗಾಲದ ಹೊಳೆಯಾಗಿ/ […]

ಕಾವ್ಯಯಾನ

ನನಗಷ್ಟೆ ಗೊತ್ತು! ಲೋಕೇಶ್ ಅಷ್ಟು ಸುಲಭವಲ್ಲ ನಿನ್ನ ಉಳಿಸಿಕೊಳ್ಳುವುದು ಅಷ್ಟು ಸಲೀಸು ಅಲ್ಲ ನಿನ್ನ ಕಳೆದುಕೊಳ್ಳುವುದು ನೀನೆಂದು ಉನ್ಮಾದ ರುಚಿಗೆ ತಾಕೀದೊಡನೇ ನೀ ಕರೆದೊಯ್ಯುವ ಜಗತ್ತು ನನಗಷ್ಟೇ ಗೊತ್ತು! ನೀನೆಂದು ಭಾವನ್ಮೊದಾ ಮನಕ್ಕೆ ನೆನಪದೊಡನೇ ನೀ ಆವರಿಸಿಕೊಳ್ಳುವ ನಿಯತ್ತು ನನಗಷ್ಟೇ ಗೊತ್ತು! ನೀನೆಂದು ಸವಿ ವಿನೋದ ಮಾತಿಗೆ ಜೊತೆಯಾದೊಡನೇ ನೀ ಆಪ್ತವಾಗುವ ಅವಲತ್ತು ನನಗಷ್ಟೇ ಗೊತ್ತು! ನೀನೆಂದು ಉಸಿರ ನಾದ ಏರಿ ಇಳಿದೊಡನೇ ನನ್ನ ಎದೆಯಲ್ಲೆಳೆವ ಹೆಸರಂತು ನನಗಷ್ಟೇ ಗೊತ್ತು *************

ಕಾವ್ಯಯಾನ

ಯುಗಾದಿಯ ಆ ದಿನ ನೀ.ಶ್ರೀಶೈಲ ಹುಲ್ಲೂರು ಹೆದ್ದಾರಿಗಂಟೇ ಇರುವ ನನ್ನ ಮನೆ ಮಹಲಿನ ಮಹಡಿಯ ಬಾಲ್ಕನಿಯಲಿ ಬಂದು ನಿಂತೆ ಬಿಕೋ ಎನ್ನುವ ಸತ್ತುಬಿದ್ದ ರಸ್ತೆ! ಅಲ್ಲೊಂದು ಇಲ್ಲೊಂದು ಆಗೊಂದು ಈಗೊಂದು ಕಂಡು ಕಣ್ಮರೆಯಾಗುವ ಬೀದಿ ನಾಯಿ ಗಳು ತಮ್ಮ ವಿಸರ್ಜನಾ ವ್ಯೂಹ ದ ಕೊನೆಯ ಅಂಗದ ಅಂತಿಮ ಚಪಲವ ಲೈಟಿನ ಕಂಬಕೆ ಕಾಲೆತ್ತಿ ನೆಲಕೆ ತಳವೊತ್ತಿ ತೀರಿಸಿ ಕೊಂಡು ಕಂಬಿ ಕಿತ್ತವು! ಪ್ರಾಸಕ್ಕಂಟಿದ ‘ಕವಿತೆ ಸಾಲು’ ಇಂದು ನನ್ನನ್ನು ಪರದೇಶಿಯಾಗಿಸಿ ಕ್ರಾಸ್ ಕಂಟ್ರಿ ಓಟಕ್ಕಿಳಿದವು. ಸರಿ,ಬಂದಂತೆ ಬರೆದಿಡುವೆ […]

ಕಾವ್ಯಯಾನ

ಗಝಲ್ ಡಾ.ಗೋವಿಂದ ಹೆಗಡೆ ನಮ್ಮ ಪೇಲವ ನಗುವ ಕಂಡು ನಗುತಿರುವನೇ ದಿನಕರ ನಿಸ್ತೇಜ ಬದುಕನು ಕಂಡು ಮರುಗಿರುವನೇ ದಿನಕರ ವಸಂತ ಬಂದಿದ್ದಾನೆ ನಿಜ, ಎಂದಿನಂತಿಲ್ಲ ದಿನ ನಮ್ಮ ಗೋಳನು ಕಂಡು ಕರಗಿರುವನೇ ದಿನಕರ ಅವನೋ ಧಗಧಗಿಸಿದ್ದಾನೆ ಎಂದಿನ ಉಗ್ರತೆಯಲ್ಲಿ ಹೂಕರಗಳಿಂದ ಎತ್ತಿ ನಮ್ಮ ಮುದ್ದಿಸುವನೇ ದಿನಕರ ಅವನಿಂದಲೇ ನಳನಳಿಸಿದೆ ಇಳೆ, ಎಲ್ಲರ ಬಾಳು ಬಂದಿರುವ ಸಂಕಟಕೆ ಮದ್ದರೆಯುವನೇ ದಿನಕರ ಹೆಣ ಬಣಬೆ ಬಿದ್ದಿದೆ ಜಗದ ಬೀದಿಬೀದಿಗಳಲ್ಲಿ ಭರವಸೆಯ ಕಿರಣ ಸುರಿದು ಪೊರೆಯುವನೇ ದಿನಕರ ಕತ್ತಲು ಸರಿದು ಬೆಳಕು, […]

Back To Top