ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ನೆನಪ ತಿಜೋರಿ ಶಾಲಿನಿ ಆರ್. ನೆನಪಿಗೊಂದು ಮೊಳೆ ಹೊಡೆಯುತಿದ್ದೇನೆ, ಯಾರಿರದ ಇರುಳಲಿ ಚಂದಿರನ ಬೆಳಕಲಿ, ಮೆಲ್ಲನೆ ಅರಳಿದ ನೈದಿಲೆಗು ಸಂಕೋಚ, ಸದ್ದು ಕೇಳಿಸಿತೇ ಅವನಂಗಳಕು! ಸುದ್ದಿಯಾಗದಿರಲಿದು ಹೊಸ್ತಿಲಾಚೆ, ಮರಳಿ ಮನದ ಮೂಲೆಗೆ ನೆನಪುಗಳ ಜೇಡ ಬಲೆ ಸುಮ್ಮನೆ ಜಿನುಗಿದ ಕಣ್ಣಹನಿಗೂ ದಿಗಿಲು, ನಗುವ ಕತ್ತಲಿಗೂ ಬಿಕ್ಕು ಕೇಳಿಸಿತೇ? ಮತ್ತೆ ನೋಡುತ್ತೇನೆ ಗೋಡೆಯ ಕ್ಯಾಲೆಂಡರ್ ದಿನದ ಅಂಕ, ನಗೆಯ ಅನುರಣಿತ ಬೇಡದೆ ಉಳಿದ ಮಾವಿನ ಚೂರುಗಳು ಮರುಗುವಾಗ ಮನದಾಚೆಯ ಹೆದ್ದಾರಿಲಿ ಭಾರಿ ಮಳೆಯ ಸದ್ದು ತೊಯ್ದರು ತೋಯದ ನಿರ್ಲಿಪ್ತ ಮನ ತುಕ್ಕು ಹಿಡಿದಿದೆ ಬಾಗಿಲ ಚಿಲಕ ನಿಟ್ಟುಸಿರ ಹನಿಗೆ ನಿಲ್ಲುವ ಗಳಿಗೆಯಲಿ ಹರಿವ ಹುನ್ನಾರಿದು ನೀರಿನ ಸಲಿಗೆ ಹಿಡಿದ ಬಟ್ಟಲಲಿ ಪಡೆವ ಆಕಾರ ನೆನಪ ಕಡಲಿಗೆ ಓ! ನೆನಪ ತಿಜೋರಿಯ ಕೀಲಿ ಕೈ ಕಳೆದಿದೆ, ಹೆಕ್ಕಿ ಹೇಗೆ ಎತ್ತಿಡಲಿ ಹೇಳೆ, ಮರಳಿ ಪೆಟ್ಟಿಗೆಗೆ ಮತ್ತೆ ಮತ್ತೆ ಕಳೆದು ಹೋಗದಂತೆ ನಾಳೆಗೆ , ಮತ್ತೆ ಅವನಿಗೆ ತಿಳಿಯದಂತೆ ಕೊನೆವರೆಗೆ… ******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಒಡೆದ ಕನ್ನಡಿ ವಿಭಾ ಪುರೋಹಿತ ಒಡೆದ ಕನ್ನಡಿ ಬಿಂಬದಲಿ ಬದುಕು ಹುಡುಕುವ ಹುಚ್ಚು ಎಂದೋ ಬಸವಳಿಯಬೇಕಿತ್ತು ನಿಂತನೀರಿಗೆ ಬಿದ್ದ ತುಂತುರು ಹನಿಗಳ ಪ್ರೇಮ ಮತ್ತೆ ನಗಿಸಿತ್ತು. ಎಷ್ಟು ತುಂಡಾದರೂ ಇಡಿಯಾಗಿ ಬೆಳೆವ ಮಣ್ಣು ಹುಳುವಿನ ಹಟವು ಬೆರಗು ಕಂಡಿತ್ತು ಕಣಕಣದ ಉಸಿರು ಜೀವಂತವಾಗಿ ಬೆಳೆದು ಪ್ರೀತಿ ಹಬ್ಬಿತ್ತು. ಬುಡಕಡಿದ ಮರಗಳಿಗೆ ಚಿಗುರುಣಿಸುವ ಪ್ರಕೃತಿ ವಾತ್ಸಲ್ಯ ವು ದಂಗುಬಡಿಸಿತ್ತು, ನರನಾಡಿಗಳ ನೆಲದ ಮೋಹ ಆಳಕ್ಕಿಳಿದ ಛಲವು ತುಂಬಾ ಕಾಡಿತ್ತು. ಕಡಲಲೆಗಳಾ ಸದ್ದಿನಲ್ಲಿ ವಾಸ್ತವದ ಕೊನೆಯಿರದ ಸಂಕೋಲೆಯಲಿ ಗೆದ್ದು ಬದುಕಿದೆ, ಸ್ವಾಭಿಮಾನದ ಜಿದ್ದಿನಲಿ ಮೈಮನಸು ಬುದ್ಧಿಯಲಿ ಆತ್ಮವಿಶ್ವಾಸದ ಹೊಸತೆನೆ ಅರಳಿತ್ತು *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಸ್ವರ್ಗಸ್ತ ಅಜ್ಜಿಯ ಬಯಕೆ ಸಿ.ಎಚ್.ಮಧುಕುಮಾರ ನಾನೂ ಸ್ವರ್ಗಕ್ಕೆ ಹೋಗಿದ್ದೆ. ಅಲ್ಲಿ ನನ್ನಜ್ಜಿ ಮಾತಿಗೆ ಸಿಕ್ಕರು. ಮೊದಲಿನಂತೆ ದುಂಡನೆಯ ದೇಹವಿಲ್ಲ, ಸೊರಗಿ ಸಣಕಲಾಗಿದ್ದರು. ಅದೂ ಸ್ವರ್ಗದ ನಿವಾಸಿಯಾಗಿ! ಆತುರದಿಂದಲೇ ಪ್ರಶ್ನಿಸಿದೆ: ಯಾಕಜ್ಜಿ? ಒಂದು ಕಡೆ ಕುಂತ್ರು ಕೂರದ ಜೀವ ನಿನ್ನದು ಯಾರು ಎಷ್ಟೇ ಗೊಣಗಿದರೂ ನಿನ್ನಿಷ್ಟದಂತೆಯೇ ಬದುಕಿದವಳು ನೀನು ಇಲ್ಲಾದರೂ ನೆಮ್ಮದಿ ಕಾಣಬಾರದೆ? ಅಜ್ಜಿ ಹೇಳಿತು: ನನಗಿಲ್ಲಿ ಏನೂ ಕೊರತೆಯಿಲ್ಲ. ಮಕ್ಕಳು ಮೊಮ್ಮಕ್ಕಳ ಗಿಜಿಗಿಜಿ ಸದ್ದು ವಾರಗೆಯವರೊಂದಿಗಿನ ಒಡನಾಟ ಮನೆಮಂದಿ, ನೆಂಟರಿಷ್ಟರಿಗೆ ಊಟಕ್ಕಿಕ್ಕಿ ಉಂಡವರು ತೃಪ್ತಿಯಾಗಿ ತೇಗಿದ ಸದ್ದು ನನಗಿಲ್ಲಿ ಕೇಳುತ್ತಿಲ್ಲ! ಮತ್ತೆ ನನ್ನನ್ನು ನಿನ್ನೊಡನೆ ದಿನದ ಮಟ್ಟಿಗಾದರೂ ಕರೆದೊಯ್ಯುವೆಯ? *************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಸಿಗಲಾರದ ಅಳತೆ ವಸುಂದರಾ ಕದಲೂರು ನೀನು, ನಿನ್ನ ಕಣ್ಣು ಕೈ ಮನಸ್ಸು ನಾಲಗೆಗಳಲ್ಲಿ ಅಂದಾಜು ಪಟ್ಟಿ ಹಿಡಿದು ಅಳೆದೆ ಅಳೆದೆ ಅಳೆದೆ ಅಳೆಯುತ್ತಲೇ ಇದ್ದೀಯೆ.. ಸರಿ, ಅಳೆದುಕೋ ಹಾಗೆ ಅಳತೆಗೆ ದಕ್ಕುವುದಾದರೆ ನೀ ಅಳೆಯುವುದಾದರೂ ಏನನ್ನು! ಒಂದಷ್ಟು ಅಂದಾಜು ಸಿಗುವ ಗಾತ್ರ- ಗೋತ್ರ; ಉಬ್ಬುತಗ್ಗು ಅವಯವ- ಅವ್ವವ್ವಾ !! ಅಷ್ಟೇ. ಅಷ್ಟಕ್ಕೇ ನಿನಗೆ ದಕ್ಕಿಬಿಟ್ಟರೆ, ರೇ… ಅರೇ ಹೋಗು, ಅಳೆದುಕೋ ನಿನ್ನಾ ಅಳತೆಗೋಲು ಅಂದಾಜು ಶತಮಾನ ಹಳತು ಅದರ ಗೋಲು. ಮಾಡಿಕೊಂಡು ಬಂದದ್ದು ಬರೀ ರೋಲುಕಾಲು. ಅಳೆದೂ ಸುರಿದೂ; ಸುರಿದೂ ಅಳೆದೂ ಸರಕು ಎಂದೋ ಬರಿದಾದ ಒಂದು ಗುಜರಿ ಮಾಲು. ಅಕೋ.., ಅಳೆದು ಕೋ ನೀನು ಅಳೆದು ಕೋ.. ಖೋ.. ಖೋ.. ಹೋಗು ನೀ ಅತ್ತ, ನೀ ಸದಾ ಅತ್ತತ್ತ. ನಿನಗೆ ಈ ಅಳತೆ ಎಂಬುದು ಒಂದು ನಿಮಿತ್ತ. ಅಳತೆಯಿಂದ ಅವಳನು ಯಾರೂ ಗಿಟ್ಟಿಸಿಕೊಳಲಾಗದ್ದು ಎಂದೆಂದಿಗೂ ನಿಶ್ಚಿತ. ತಿಳಿ ಅಳತೆಗೆ ನಿಲುಕದ್ದು ಅಪಾರ ಅನೂಹ್ಯ ಅದೋ ಅವಳ ಚಿತ್ತ. ******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಮನದ ಮಾಮರ ಸುವರ್ಣ ವೆಂಕಟೇಶ್ ಮನದ ಮಾಮರಕ್ಕೆ ಮದ ಮತ್ಸರದ ಕಟ್ಟೆ ಕಟ್ಟಿ ಸ್ವಾರ್ಥದ ಜಲವ ಹರಿಸಿ ಬೇರು ಪಸರಿಸಿ ನೇರಳಾಗಿ ನಿಲ್ಲು ಎಂದೊಡನೆ ಎಂತಯ್ಯಾ!! ಮೋಹದ ಕಿರಣವ ತಾಡಿಸಿ ಬೆಂಕಿಯ ಮಳೆ ಸುರಿಸಿ ಮರಳುಗಾಡಿನಲ್ಲಿ ನೆಡಸಿ ಹಚ್ಚ ಹಸಿರಿನ ತರು ಲತೆ ಹೊತ್ತು ಎದ್ದು ನಿಲ್ಲಂದರೆ ಎಂತಯ್ಯಾ!! ಭಾವ ಇಲ್ಲದ ಭಕುತಿ ತೋರಿಸಿ ಅಹಂಕಾರದ ತೊಗಟೆ ಊಡಿಸಿ ಬಿಸಿಲಿನಿಂದ ಬಲೆಯ ಹೆಣೆದು ವಿಷ ಬೀಜವ ಬಿತ್ತಿ ಅಮೃತದ ಸಿಹಿ ಬಯಸಿದೋಡನೆ ಎಂತಯ್ಯಾ!! *********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಟಂಕಾ ರೇಖಾ ವಿ.ಕಂಪ್ಲಿ ೧ . ಲಲಿತ ರಾಗ ಕಲಿತೆನು ಈಗ ನಿನ್ನ ಜೊತೆಗೆ ಭಾವ ತುಂಬಿ ಕೊಡುವ ಪ್ರೇಮ ಸುಧೆಯೊಳಗೆ…… ೨. ನಿನಗೆ ಬೊಜ್ಜು ಮೂರ್ನಾಲ್ಕು ಗೊಜ್ಜನು ತಿಂದೆ ಏತಕೆ ಆ್ಯಸಿಡಿಟಿ ಕಾರಣ ಹಾಳಾಯಿತು ಹೊಟ್ಟೆ……. ೩. ಯಾಕೆ ಹುಡುಗ ತಂಟೆ ಮಾಡುತಿಯಾ ಒಂಟಿತನಕೆ ಭಂಗ ಮಾಡಬೇಡ ಬಿಟ್ಟು ಹೋಗ ಬೇಡ……… ೪. ನೀ ಕೊಟ್ಟ ಪೆಟ್ಟು ಮರಿಲಿಲ್ಲ ಗುರು ಆಧಾರವಾದೆ ನನ್ನ ಜೀವನದ ಬಂಡಿ ಸಾಗಿಸಲು….. ********* ರೇಖಾ ವಿ ಕಂಪ್ಲಿ

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ತಿಪ್ಪೆಗುಂಡಿಯಲ್ಲಿ ಮಗು ಫಾಲ್ಗುಣ ಗೌಡ ಅಚವೆ ಅಲ್ಲಿ ಮುರ್ಕಿಯಲ್ಲಿರುವತಿಪ್ಪೆಗುಂಡಿಯಲ್ಲಿ ಎಸೆದು ಹೋಗಿದ್ದಾಳೆಇದೀಗ ಎಂಬಂತೆ ಒಂದು ಮಗು. ನವೆಂಬರ್ ಬೆಳಗಿನ ಚುಮು ಚುಮುಚಳಿಯಲ್ಲಿ ಅಮ್ಮನ ಮಡಿಲಲ್ಲಿರಬೇಕಾದಂತೆಅಲ್ಲೇ ಗುಲ್ ಮೋಹರ್ ಮರಗಳಲ್ಲಿಹೊಡೆದು ಕೂಡ್ರಿಸಿದಂತೆಬೆಳ್ಳಕ್ಕಿಗಳು ಸಣ್ಣಗೆ ಮುಸುಗುತ್ತಿವೆ. ಗಸ್ತು ತಿರುಗುವ ಇರುವೆಗಳುಯಾರನ್ನೋ ಕರೆತರಲು ಹೊರಟಂತೆಎಲ್ಲಿಗೋ ಪಯಣ ಹೊರಟಿವೆ. ತುಸು ತಡವಾಗಿ ವಾಕಿಂಗ್ ಹೊರಟವರುಮಂಕಿ ಕ್ಯಾಪ್ ಬಿಟ್ಟು ಬಂದವರಂತೆತಡವರಿಸುತ್ತ ಎದೆಗೆ ಕೈ ಕಟ್ಟಿಕೊಂಡುಹೊರಡುವ ಸನ್ನಾಹದಲ್ಲಿಅವರದೇ ರಾತ್ರಿಯಹಳಸಿದ ಕನಸುಗಳ ಜೊತೆಗೆ. ಹಾಸಿಗೆ ಮಡಚಿಟ್ಟು ಆಗಸಮುಖ ತೊಳೆದು ಕೊಳ್ಳುತ್ತಿದೆಮೋಡಗಳ ಮರೆಯಲ್ಲಿಬೆಳಗಿನ ಕೆಲಸಕ್ಕೆ ತಡವಾಯಿತೆಂಬರಾತ್ರಿ ನರಳಿಕೆಯ ಮುಖ ಭಾವದಲ್ಲಿ. ಪುರಸೊತ್ತು ಮಾಡಿಕೊಂಡುಬಸುರಾದವಳಿಗೆ ತೀಟೆಗೆಂಬಂತೆಹೊಟ್ಟೆಯ ತಿಂಗಳುಗಳಜವಾಬ್ದಾರಿಯಿಂದ ಯಾವಮುಸುಕಿನಲ್ಲಿ ಹುಗಿಸಿದ್ದಳೊ? ತಮ್ಮದೇ ಧಾವಂತದಲ್ಲಿ ಹಾಲು ತರಲುಹೊರಟವರಿಗೇನು ಗೊತ್ತುಅಲ್ಲೆ ಮಗು ಅಳುವ ಸದ್ದು?ಆಚೆ ಮನೆಯಲ್ಲಿ ದಿನ ಬೆಳಗಾದರೆಅಳುವ ಸದ್ದುಗಳುಅನವರತ ಧಾವಿಸುತ್ತಿರುತ್ತವೆ. ತಮ್ಮ ಏಕಾಂತಕ್ಕೆ ಭಂಗ ಬರುವದೆಂದುಬಿಟ್ಟು ಹೊರಟವರ ಮನಸುಇಡೀ ಜಗವನೊಂದು ಮಾಡುವಅಳುವ ಆಲಿಸುತ್ತಿದ್ದರೂಅಲೆಯದ ಸಮುದ್ರದಂತೆಸ್ತಬ್ಧಗೊಂಡಂತಿದೆಕೀಳರಿಮೆಯ ಬೇಲೆಯಲ್ಲಿ. ಹೊಸ ವಾತಾವರಣಕ್ಕೆ ಹೊಂದಿಕೊಳ್ಳದೇಕರಳು ಕತ್ತರಿಸಿದ ರಕ್ತ ಒಸರುತ್ತಿರುವಮಗು ಮುಂದುವರೆಸಿದೆ ತನ್ನ ಪ್ರತಿಭಟನೆಇದನಾಲಿಸದೇ ಎಸೆದವರುನಸುಕಿನ ರೈಲು ಹತ್ತಿ ಹೊರಟಿದ್ದರುಅದು ಹೋದ ನಿಲ್ದಾಣದೆಡೆಗೆ. ರಸ್ತೆಯಲ್ಲಿ ಹೊರಟ ಹೆಂಗಸರ ಬಾಯಲ್ಲಿಪ್ರಕಟವಾದ ತಾಜಾ ಸುದ್ದಿಯೆಂದರೆಎಲ್ಲಿಂದಲೋ ಬಂದ ನಾಯಿಹೊತ್ತು ಹೋಯ್ತಂತೆ! *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ದೂರದ ಊರು ನಡೆಯುತ್ತಾ ನಡೆಯುತ್ತಾ ಹೋರಟ ಅಪ್ಪನ ಎದೆಯ ಉಸಿರು ಜೋರಾಗಿತ್ತು. ಬೀಸುವ ಬಿರುಗಾಳಿಯ ತಂಪಿಗೆ ನನ್ನಪ್ಪನ ಹೆಗಲು ಬಿಸಿಕಾವು ನೀಡುತ್ತಿತ್ತು. ನನ್ನ ಪಾದಗಳಿಗೆ ನೋವಾಗಬಾರದೆಂದು ನನ್ನಪ್ಪ ತನ್ನ ಪಾದಗಳ ನೆತ್ತರನು ಲೆಕ್ಕಿಸಲೇ ಇಲ್ಲ. ಹಸಿವು ಎನ್ನ ಕಾಡದಿರಲೆಂದು ದಾರಿ ಮಧ್ಯ ಮಧ್ಯದಲಿ ಕೈತುತ್ತ ನೀಡುತ್ತಲೇ ಇದ್ದ . ತನಗೆ ಹಸಿವಾಗದೆಂದು ಮುಗುಳು ನಗೆ ನಕ್ಕು ಮುಂದೆ ನಡೆಯುತ್ತಲೇ ಇದ್ದ. ಊರಿನ ದಾರಿಯು ಕಂಡ ಮೇಲೆ ಅಪ್ಪ ಬಲು ಸಂತಸ ಪಟ್ಟು ನನ್ನನ್ನು ಸುರಕ್ಷಿಸಿದೆ ಎಂದು ನಿರಾಳತೆಯಲ್ಲಿ ನಿಟ್ಟುಸಿರು ಬಿಟ್ಟ. ನಾ ಮತ್ತೊಮ್ಮೆ ಎದೆಗವಚಿಕೊಂಡಾಗ ನನ್ನಪ್ಪನ ಬಿಗಿ ಉಸಿರು ತಂಪಾಗೆ ಇತ್ತು. ಎಂದೂ ಬಿಸಿ ಉಸಿರಿನ ಅಪ್ಪುಗೆ‌ ನನಗೆ‌ ಸಿಗಲೇ‌ ಇಲ್ಲ. ಕಾರಣ ಅಪ್ಪ ನನ್ನ ಬಿಟ್ಟು ಬಹು ದೂರ ಹೋದನಲ್ಲ. ತನ್ನ ಉಸಿರಂತೆ ಇದ್ದ ನನ್ನ ತಬ್ಬಲಿ ಗೈದನಲ್ಲ. ( ಕೋರಾನಾ ಮಹಾಮಾರಿಯು ತಂದ ದಾರುಣ ಕಥೆಯ ವ್ಯಥೆ ಇದು.) ******** ರಜಿಯಾ ಕೆ.ಬಾವಿಕಟ್ಟೆ

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಹೀಗೆಯೇ ಬಂದು ಬಿಡುತ್ತಾರೆ ಕೆಲವರು ಶೀಲಾ ಭಂಡಾರ್ಕರ್ ಹೀಗೆಯೇ ಬಂದು ಬಿಡುತ್ತಾರೆ ಕೆಲವರು ಮೌನವಾಗಿದ್ದ, ಶೂನ್ಯವಾಗಿದ್ದ, ಏಕಾಂಗಿ ಬದುಕಿನೊಳಗೆ, ಒಮ್ಮೆಲೇ ಬಂದು ಬಿಡುತ್ತಾರೆ ಕೆಲವರು ಇದ್ದಕ್ಕಿದ್ದಂತೆ ಅಕಾಲದ ಮಳೆ ಹನಿಗಳು ರಸ್ತೆಯಲ್ಲಿ ನಡೆಯುವವರನ್ನು ತೋಯಿಸಿದ ಹಾಗೆ. ಛತ್ರಿಯನ್ನು ಮನೆಯಿಂದ ತರುವುದರೊಳಗೆ ತಂದರೂ ಬಿಚ್ಚುವುದರೊಳಗೆ ಅಥವಾ ಹಾಗೇ ಸುಮ್ಮನೆ ತೋಯುವುದು ಕೂಡ ಅಪ್ಯಾಯವೆನಿಸುವ ಹಾಗೆ ಭೋರೆಂದು ಸುರಿಸುರಿದು ಬಟ್ಟೆಗಳ ಮೇಲೆ, ಮುಚ್ಚದ ಅಂಗಾಂಗಗಳ ಮೇಲೆ, ಕಣ್ಣುಗಳೊಳಗೆ, ಕಿವಿಗಳಲ್ಲಿ, ಮುಟ್ಟಲಾಗದ ದೇಹದ ಸಂಧಿಗೊಂದಿಗಳಲ್ಲಿ, ದಾರಿ ಹುಡುಕುತ್ತಾ, ನುಸುಳಿದಂತೆ ಬಂದು ಬಿಡುತ್ತಾರೆ ಕೆಲವರು ಮೌನವಾಗಿದ್ದ ಏಕಾಂಗಿ ಬದುಕಿನೊಳಗೆ. ಖುಷಿಯೆನಿಸುತ್ತದೆ ರಸ್ತೆಯಲ್ಲಿ ನಡೆಯುತ್ತಿರುವಾಗ ಅಚಾನಕ್ಕಾಗಿ ಹೀಗೆ ಒದ್ದೆಯಾಗುವುದು ಏನೋ ಒಂದು ರೀತಿಯ ಖುಷಿ ಕೊಡುತ್ತದೆ. ಮಳೆ ಸಂಪೂರ್ಣ ನಿಂತ ಮೇಲೆ ಇನ್ನೂ ನಡೆಯುತ್ತಲೇ ಇರುವಾಗಲೇ ಮೋಡಗಳೆಡೆಯಿಂದ ಇಣುಕುವ ಬಿಸಿಲಿಗೆ ಬಟ್ಟೆ ಮತ್ತು ನಾನು ನನ್ನ ಮೈಮೇಲಿನ ಹನಿಗಳು ಒಣಗುತಿದ್ದೇವೆ. ಇನ್ನು ಮನೆವರೆಗಿನ ದಾರಿ ಮಳೆ ಬರದೆ ಬಿಸಿಲು ಸುರಿದರೆ ಸಾಕು. ಮಳೆಗೆ ತೋಯ್ದ ಎಲ್ಲವೂ ಒಣಗಿದರೆ ಖುಷಿ ಇದೆ..ಹೀಗೆ ಒದ್ದೆಯಾಗುವುದರಲ್ಲೂ. ಹೀಗೆಯೇ ಬಂದು ಬಿಡುತ್ತಾರೆ ಕೆಲವರು ಇದ್ದಕ್ಕಿದ್ದಂತೆ ಅಕಾಲದ ಮಳೆ ಹನಿಗಳು ರಸ್ತೆಯಲ್ಲಿ ನಡೆಯುವವರನ್ನು ತೋಯಿಸುವ ಹಾಗೆ. ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನಿನ್ನ ಹುಡುಕಾಟದಲ್ಲಿ ನಾಗರಾಜ ಹರಪನಹಳ್ಳಿ ಉರಿ ಉರಿ ಬಿಸಿಲು ಎಲ್ಲಿ ಹುಡುಕಲಿ ಪ್ರೇಮವ ತಕ್ಷಣ ಕಂಡದ್ದು ನಿನ್ನ ಮೊಗದ ಮುಗುಳ್ನೆಗೆ ಆಸೆಯ ಬೆನ್ನು ಹತ್ತಿದೆ ಓಡಿದೆ ಓಡಿದೆ ದಣಿವರಿಯದೆ ಓಡಿದೆ ಕೊನೆಗೆ ಸಿಕ್ಕದ್ದು ದುಃಖ ಇನ್ನೆನು‌ ಮುಗಿಯಿತು ಅನ್ನುವಾಗ ಕಂಡದ್ದು ನಿನ್ನ ಮುಖದ ಮಂದಹಾಸ ಮೋಕ್ಷವನ್ನೇನು ಹುಡುಕಿ ಹೊರಡಲಿಲ್ಲ ನಾನು ಪ್ರೀತಿಯ ಹುಡುಕಿ ಹೊರಟಿದ್ದು ನಿಜ , ಆದರೆ ನೀ ಹೇಳಿದ ಬಯಲಿನಂತಹ ಪ್ರೀತಿ‌ ಈ ಹುಲುಮಾನವರಿಗೆ ಅರ್ಥವಾದೀತು ಹೇಗೆ ಗೌತಮ ಸಾವಿಲ್ಲದ ಮನೆಯ ಸಾಸಿವೆ ತರಲು ಸೋತದ್ದು ನಿಜ ನನ್ನ ತಾಯಿ ಆದರೆ ; ನಿನ್ನ ಒಗಟಿನ ಮಾತು ನಿಶಬ್ದ ಮೌನ ಅರ್ಥವಾದೀತು ಹೇಗೆ ಬುದ್ಧದೇವ ಮುಪ್ಪು , ಯೌವ್ವವ ; ಹಸಿವು ನಿನಗೆ ಅರ್ಥವಾದಂತೆ ಈ ಜಗದ ಕೇವಲ ಮನುಷ್ಯರಿಗೆ ಅರ್ಥವಾಗದವು ಕಾರಣ ಅವರು ಬದುಕಿನ ಅಶ್ವಾಶತೆಯ ಅರಿಯದ ಮರೆವಿನ ಮಹಾಪುರುಷರು ಬುದ್ಧ ನಾನಿನ್ನು ಬರುತ್ತೇನೆ ಸಾಕಾಗಿದೆ ಈ‌ ಜಗದ ಜಂಜಡ ನನಗೆ ಏಕಾಂತದ ಅರ್ಥ ಹುಡುಕಬೇಕಿದೆ ಜನರ ಗೊಂದಲಗಳ ಅರಿಯುತ್ತಲೇ… *********

ಕಾವ್ಯಯಾನ Read Post »

You cannot copy content of this page