ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಯುದ್ದ ಮಲ್ನಾಡ್ ಮಣಿ ಮಾಯ ಜಾಲದ ಮಾಂತ್ರಿಕನೊಬ್ಬನ ಮಾಯೆಯಾಟದ ಛಾಯೆಯ ಕರಿನೆರಳು ಸುಡುತಿದೆ ಭೂಮಂಡಲವನ್ನು. ತುಪಾಕಿಗಳ ಗುಂಡಿನ ಘನಘೋರ ಶಬ್ದ ಗಗನ ಚುಂಬಿಯಾಗಿತ್ತು ನರ ಮಂಡಲದ ವಿಷವರ್ತುಲದಲ್ಲಿ ವಿಲವಿಲ ಒದ್ದಾಡಿ ಬೆತ್ತಲಾಗಿ ನಿಂತಿದೆ ಬದುಕು. ಅರೆಗಳಿಗೆಯ ಅಲ್ಪಸುಖದಲ್ಲಿ ತಲ್ಲೀನನಾಗಿದ್ದೆ, ಚಾಟಿಯ ಏಟು ಬೀಸಿ ಬರುತ್ತಿತ್ತು ನನ್ನೆಡೆಗೆ, ತಂಗಾಳಿಯಲ್ಲಿ ವಿಷ ಬೆರತದ್ದು‌ ಗೊತ್ತಾಗಲೆ ಇಲ್ಲ. ಯದ್ಧಕ್ಕೆ ಸಜ್ಜು ಮಾಡುತ್ತಿದ್ದೆ ತುಕ್ಕು ಹಿಡಿದ ಅಲಗನ್ನು ಮಸೆಯುತ್ತಿದ್ದೆ, ವೈರಿಯು ಅದನ್ನೆ ನಡೆಸಿರಬೇಕು. ನನಗೆ ಶತ್ರು ಭಯ, ಶತ್ರುವಿಗೆ ನನ್ನ ಭಯ, ಆದರು ಮೆರೆಯುತ್ತಿದ್ದೆವು ಐಶ್ವರ್ಯ ಮದದಿಂದ. ಯುದ್ಧಕ್ಕೆ ಕ್ಷಣಗಣನೆ,ಹುಮ್ಮಸ್ಸು, ಹುರುಪು, ಕತ್ತಿಗೆ ತಣಿಯದ ರಕ್ತ ದಾಹ. ಶತ್ರು ವಿನಾಶದಲ್ಲಿ ನನಗೆ ತಿಳಿಯಲಿಲ್ಲ ನನ್ನವರ ಹಸಿವು ಏಕೆ? ನನ್ನದು ತೋರಿಕೆಯ ಸಂಭ್ರಮ, ಶ್ರೀಮಂತಿಕೆಯ ತೋರು ನೋಟ. ಅಸ್ತ್ರ ಪ್ರಯೋಗಕ್ಕೆ ಸನ್ನದ್ದರಾಗಿದ್ದ ನಮ್ಮಿಬ್ಬರಿಗು ಅದಾವ ಮಾಟಗಾರ ಮಂತ್ರಿಸಿದನೊ…. ಆ ಮಾಯೆ ನಮ್ಮಿಬ್ಬರ  ದೇಹದ ರಕ್ತ ಹೀರುತ್ತಿರುವುದು ತಿಳಿಯಲೆ  ಇಲ್ಲ. ಆ ಮಾಯೆ ಅಮಾಯಕ ನನ್ನ ಜನರನ್ನು ಹೆಣಮಾಡುತ್ತಿರುವುದು ತಿಳಿಯಲೇ ಇಲ್ಲ. ಮದ್ದು ನನ್ನಲ್ಲಿರಲಿಲ್ಲ ನನ್ನಲ್ಲಿದ್ದ ಮದ್ದು‌ ರಕ್ತ ಸುರಿಸುವುದಕ್ಕೆ ಮಾತ್ರ.

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನಿನ್ನ ಧ್ಯಾನ ಮಲ್ನಾಡ್ ಮಣಿ ಅರಳು ಮಲ್ಲಿಗೆಯ ಮಾಲೆ ಮಾಡಿ ನಿನ್ನ ಕೊರಳ ಧ್ಯಾನಿಸುತ್ತಲಿರುವೆ. ಎಂದು ಬರುವೆಯೆಂದು ದಾರಿ ಕಾಯುವ ಶಬರಿ ನಾನು. ದೇಹ ಮಲ್ಲಿಗೆ ಗೀಡವು ಭಾವ ಅದರ ಹೂವು, ನಿನ್ನ ನೆನಪಿನ ನೀರನೆರೆದು ಹೂ ಕಿತ್ತು ಕಟ್ಟಿ ಮಾಲೆ ಮಾಡಿದೆ. ನಿನ್ನ ದಾರಿ ಕಾದು ಮತ್ತೆ ಮಲ್ಲೆ ಹೂವ ಕಂಡೆ, ಅರಳು ಮಲ್ಲಿಗೆ ನಗುವ ಬೀರಿತು. ಹೊತ್ತು ಹಾದು ಹೋದರು ನಿನ್ನ ಸುಳಿವು ಕಾಣದು ಬರುವ ಸಂಜೆಗೆಂಪು ನಗುವ ಮಾಸಿತು. ನೆರಳಿನಲ್ಲಿ ನನ್ನ ನೆರಳು ಮುಳುಗಿ ಮಾಯವಾಯಿತು ಮತ್ತೆ ಮಲ್ಲೆ ಹೂವ ಕಂಡೆ ಹೂವು ಭಿರಿದು ಬಾಡಿತು. ನಿನ್ನ ದಾರಿ ಕಾಯುತಿರುವ ಕಾಯ ತಣಿಯದು. ಮತ್ತೆ ನಿನ್ನ ನೇನಪ ಎರೆದು ಭಾವದೊಲುಮೆಯ ಹೂವ ಅರಳಿಸಿ ಮತ್ತೆ ಮಾಲೆ ಮಾಡಿ ಕಾಯುವೆ. ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಡಾ.ಗೋವಿಂದ ಹೆಗಡೆ ಈ ಬೆಳಗು ಎಂದಿನಂತಿಲ್ಲ ಈ ಬದುಕು ಎಂದಿನಂತಿಲ್ಲ ಅಲೆಗಳೆಷ್ಟು ಕ್ಷುಬ್ಧವಾಗಿವೆ ಈ ಕಡಲು ಎಂದಿನಂತಿಲ್ಲ ಮಧುಶಾಲೆಗೇ ಗರ ಬಡಿದು ಈ ಗುಟುಕು ಎಂದಿನಂತಿಲ್ಲ ಎಂಥ ಮರುಳಿತ್ತು ಸಂಜೆಯಲ್ಲಿ ಈ ಇರುಳು ಎಂದಿನಂತಿಲ್ಲ ಮುಖ ತಿರುಗಿಸಿ ನಡೆದಳಲ್ಲ ಯಾಕವಳು ಎಂದಿನಂತಿಲ್ಲ ಎದೆಯೂಟೆ ಬತ್ತಿಹೋಯಿತೇ ಈ ಮಡಿಲು ಎಂದಿನಂತಿಲ್ಲ ಬಾಂದಳಕೆ ಬೆಂಕಿ ಬಿದ್ದಿದೆ ಈ ಮುಗಿಲು ಎಂದಿನಂತಿಲ್ಲ ಸಾಂತ್ವನವ ಅರಸಿದೆ ‘ಜಂಗಮ’ ಈ ಹೆಗಲು ಎಂದಿನಂತಿಲ್ಲ ********

ಕಾವ್ಯಯಾನ Read Post »

ಕಾವ್ಯಯಾನ

ಕಾರ್ಮಿಕ ದಿನದ ವಿಶೇಷ-ಗಝಲ್

ಗಝಲ್ ತೇಜಾವತಿ ಹೆಚ್.ಡಿ. ಗಝಲ್ ಕನಿಷ್ಠ ಕೂಲಿಗಾಗಿ ಮೈಯೊಳು ಬೆವರ ಹರಿಸುವೆವು ಕಾರ್ಮಿಕರು ನಾವು ಒಂದ್ಹೊತ್ತಿನ ಗಂಜಿಗಾಗಿ ಶ್ರಮದ ಬದುಕ ಸಾಗಿಸುವೆವು ಕಾರ್ಮಿಕರು ನಾವು ಕರ್ತವ್ಯ ನಿಷ್ಠೆಯಲಿ ಹಗಲಿರುಳೆನ್ನದೆ ಸ್ವಾರ್ಥವ ತೊರೆದು ಹೋರಾಡುವೆವು ಬಿಸಿಲು ಮಳೆ ಗಾಳಿಗೆ ಜಗ್ಗದೆ ತನುವ ಒಡ್ದುವೆವು ಕಾರ್ಮಿಕರು ನಾವು ಮಲಗಲು ಸೂರಿಲ್ಲದೆ ಮೈಗೆ ಹೊದಿಕೆಯಿಲ್ಲದೆ ಚಳಿಗೆ ನಲುಗಿದರೂ ಒಡೆಯನಿಗೆ ಸುಸಜ್ಜಿತ ಅರಮನೆ ನಿರ್ಮಿಸುವೆವು ಕಾರ್ಮಿಕರು ನಾವು ಕೃಷಿಯನ್ನೇ ನಂಬಿ ಮುಗಿಲನ್ನು ನೋಡುತ ಮಳೆಯ ಕಾಯುವೆವು ದೇಶಕ್ಕಾಗಿ ಹೊಲವ ಉತ್ತು ಅನ್ನವ ಬೆಳೆಯುವೆವು ಕಾರ್ಮಿಕರು ನಾವು ಪೌರರಾಗಿ ಸಮಯ ಪಾಲಿಸಿ ಕಾಯಕವೇ ಕೈಲಾಸ ತತ್ವದೊಳು ಸ್ವಚ್ಛತೆಯ ಮಹತ್ವ ಸಾರುತ ಬದುಕುವೆವು ಕಾರ್ಮಿಕರು ನಾವು ಅಪಾಯವೇ ಇರಲಿ ಪ್ರಾಣವೇ ಹೋಗಲಿ ಹಂಗು ತೊರೆದು ಬಾಳುವೆವು ಅದರಲ್ಲೇ ಸಾರ್ಥಕ ದಿನಗಳ ದೂಡುವೆವು ಕಾರ್ಮಿಕರು ನಾವು ಜನ ನಾಯಕ ಸರ್ಕಾರ ಸಮಸ್ಯೆಯ ಆಲಿಸಿ ಸ್ಪಂದಿಸದಿದ್ದರೂ ಸರಿಯೇ ಮಾನವೀಯ ತೇಜಸ್ಸಿನೊಂದಿಗೆ ನಮ್ಮಯ ಗುಣವ ಮೆರೆಯುವೆವು ಕಾರ್ಮಿಕರು ನಾವು *********

ಕಾರ್ಮಿಕ ದಿನದ ವಿಶೇಷ-ಗಝಲ್ Read Post »

ಕಾವ್ಯಯಾನ

ಕಾರ್ಮಿಕ ದಿನದ ವಿಶೇಷ-ಕವಿತೆ

ಬೆವರ ಹನಿಗಳು ಚೈತ್ರಾ ಶಿವಯೋಗಿಮಠ ಬೆವರ ಹನಿಗಳು ದುಡಿಯುವ ಕೈಗಳು, ದೇವರ ಕೈಗಳು ಹೊಲದಲಿ ಕೃಷಿಕ ಗಡಿಯಲಿ ಸೈನಿಕ ದುಡಿಯಲು ಕಾರ್ಮಿಕ ಕಾಯಕ ಯೋಗದ ಹರಿಕಾರರು ಬಸವಾದಿ ಪ್ರಮಥರು ದುಡಿಮೆ, ಶ್ರಮದ ಮಹತ್ವ ಸಾರಿದ ಜಗದ ಶ್ರೇಷ್ಠ ಕಾರ್ಮಿಕರು ದುಡಿಯುವ ಜೀವಗಳಿಗೆ ಸದಾ ಸಮೃದ್ಧಿಯಿರಲಿ ದುಡಿಸುವವರಿಗೆ, ಶ್ರಮಿಕರಿಗೆ ಪ್ರೀತಿ-ಗೌರವ ನೀಡುವ ಬುದ್ಧಿ ಸರ್ವದಾ ಇರಲಿ ಕಠಿಣ ಪರಿಶ್ರಮ ದುಡಿಮೆಯೇ ರಾಮನಾಮ. ಕಾರ್ಮಿಕನಿಗಿಲ್ಲ ವಿರಾಮ! ಇವರಿಗೆ, ದುಡಿಮೆಯೆ ದೈವ ಸ್ವಾಭಿಮಾನವೆ ಭವ-ಭಾವ ಪರಿಶ್ರಮವೆ ವಿಭವ! ಬೇಕು, ಚಿಪ್ಪಿಗೆ ಸ್ವಾತಿ ಮುತ್ತಾಗಲು ದೇಶಕೆ ಕಾರ್ಮಿಕ ಅಭಿವೃದ್ಧಿಯಾಗಲು ಮನೆಯ ಗೃಹಿಣಿ ರಜೆಯೇ ಇರದ ಕಾರ್ಮಿಕ ಗುಡಿಸಿ, ಸಾರಿಸಿ, ಬೇಯಿಸಿ ಎಲ್ಲರ ಹೊಟ್ಟೆ ಹೊರೆಯುವ ಶ್ರಮಿಕ ಅರೆಬರೆ ತುಂಬಿದರೂ ಹೊಟ್ಟೆ ದುಡಿಯಲು ಸದಾ ಸಿದ್ಧ ರಟ್ಟೆ ಬಲ ಒಂದೆಯಲ್ಲ, ಮತಿಯೂ ಅಸ್ತ್ರ ಮಾತು, ಬುದ್ಧಿಮತೆಯೆ ದುಡಿಯುವ ಸಾಫ್ಟ್ ಕಾರ್ಮಿಕರ ಶಸ್ತ್ರ ********

ಕಾರ್ಮಿಕ ದಿನದ ವಿಶೇಷ-ಕವಿತೆ Read Post »

ಕಾವ್ಯಯಾನ

ಕಾವ್ಯಯಾನ

ಕಾಮಿ೯ಕರ ದಿನ ಎನ್. ಆರ್ .ರೂಪಶ್ರೀ ಕಾಮಿ೯ಕರ ದಿನ ತುತ್ತು ಅನ್ನಕ್ಕಾಗಿ ಬಾಳನ್ನು ತೆತ್ತು ತೆತ್ತು ಹಗಲಿರುಳು ದುಡಿತದ ನೆರಳಿನಲಿ ಸಾಗುತಿದೆ ಕಾಮಿ೯ಕನ ಹೊತ್ತು. ದಿನ ದಿನವೂ ಅನುದಿನವೂ ನೋವು ನರಳಾಟ ಅರಳುವುದು ಕಣ್ಣಿನಲ್ಲಿ ಕುಡಿಮಿಂಚು ನಗೆಯಾಟ ಬಲ್ಲಿದರ ಬಂಧನದಿ ಸದಾ ಶೋಷಣೆಯ ಸೆರಗು ಇದೇ ಏನೋ ಕಾಮಿ೯ಕನ ಜೀವನಕೆ ಸಂತಸದ ಮೆರಗು. ತಾನು ತನ್ನದೆನ್ನುವ ಹಕ್ಕಿನ ಹಂದರ ಹಸಿದು ಬಸವಳಿದಿದೆ ಆಸೆ ಆಮಿಷಗಳ ದೂರದ ಬಯಕೆಗಳ ಗೋಪುರದ ಗುಮ್ಮಟ ತಲೆಯೆತ್ತಿ ನಿಂತಿದೆ. ದು:ಕ ದುಗುಡ ದುಮ್ಮಾನಗಳಿಗೆ ತಂಪೆರೆಯುವ ಸಿಂಚನದ ಮಿಂಚಾಗಿ ಬಂದಿರುವುದು ಕಾಮಿ೯ಕರ ದಿನವೆಂಬ ಶುಭ ಶಕುನದ ಒಸಗೆ *******

ಕಾವ್ಯಯಾನ Read Post »

ಕಾವ್ಯಯಾನ

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ಕಾವಲಿಯಿಂದ_ಕೆಂಡಕ್ಕೆ ಲಕ್ಷ್ಮಿಕಾಂತಮಿರಜಕರ ಕಾವಲಿಯಿಂದ_ಕೆಂಡಕ್ಕೆ ಚರಂಡಿ ಬದಿಯ ಮುರುಕಲು ಶೆಡ್ ಗಳಲ್ಲಿ ಸಹಿಸುತ್ತ ಕಚ್ಚುವ ಸೊಳ್ಳೆಗಳ ನೋವು ನಾಳೆಯೂ ಕೆಲಸಕ್ಕೆ ಹೋಗದಿದ್ದರೆ ಹೊಟ್ಟೆಗೇನೂ ಸಬೂಬು ಹೇಳುವುದೆಂದು ಚಿಂತಾಮಗ್ನದಲ್ಲಿ ನಾವಿರುವಾಗ ನೀವಾಗಲೇ ಚಪ್ಪಾಳೆ ತಟ್ಟುವ ಸಂತೋಷದಲ್ಲಿ ಮೈಮರೆತು ಮೀಯುತ್ತಿದ್ದಿರಿ ನಿಮ್ಮ ನಿಮ್ಮ ಅರಮನೆಗಳ ಬಾಲ್ಕನಿಗಳಲ್ಲಿ ನಿಂತು ನಿಮ್ಮ ಚಪ್ಪಾಳೆಯ ಲಯಬದ್ಧ ಸದ್ದಿಗೆ ಸಮವಲ್ಲ ಬಿಡಿ ನಮ್ಮ ಹಸಿದ ಹೊಟ್ಟೆಗಳ ತಾಳ ತಿಂಗಳಪೂರ್ತಿ ಸಾಕಾಗುವಷ್ಟು ದಿನಸಿಗೋದಾಮು ಪೇರಿಸಿಡಲು ನೀವು ನಗುತ್ತಲೇ ಹೆಣಗಾಡುತ್ತಿದ್ದ ಸಮಯದಲ್ಲಿ ನಮ್ಮ ಬದುಕು ಪೇರಿಕಿತ್ತಿತ್ತು ಬಿಸಿಲಿಗೆ ಕಾದು ಬೆಂಕಿಯಾಗಿದ್ದ ರಸ್ತೆ ಮೇಲೆ ಹೊತ್ತು ತಲೆಮೇಲೊಂದು ಕೈಯಲ್ಲೊಂದು ಗಂಟುಮೂಟೆ ಸೋತಕಾಲುಗಳಿಗೆ ಸಾಂತ್ವನ ಹೇಳುತ್ತ ಭಾರವಾದ ಹೆಜ್ಜೆಗಳನ್ನು ಕಿತ್ತಿಡುತ್ತ ಹಲ್ಲಿಯ ಬಾಯಿಯ ಸಿಕ್ಕಿ ಬಿದ್ದಿದ್ದ ಕೀಟದಂತೆ ತಲೆಮೇಲಿಂದ ಆಗಷ್ಟೇ ಹಾರಿಹೋಗಿತ್ತು ದೂರದೇಶಗಳಿಂದ ರಾಜರಾಣಿಯರನ್ನು ಹೊತ್ತು ತಂದಿದ್ದ ವಿಶೇಷ ವಿಮಾನ ನಮ್ಮ ಬರಿಗಾಲುಗಳ ಮೆರವಣಿಗೆಯನ್ನು ಅಣುಕಿಸುತ್ತ ಇಡಿ ದೇಶಕ್ಕೆ ದೇಶವೇ ಮನೆ ಮುಂದೆ ದೀಪ ಬೆಳಗಿಸಿ ಸೆಲ್ಫಿ ತೆಗೆಸಿಕೊಳ್ಳುವ ಸಂಭ್ರಮದ ಮುಂದೆ ಹಸಿವಿನಿಂದ ರಸ್ತೆಬದಿಯಲ್ಲಿ ನಂದಿಹೋದ ಎಷ್ಟೋ ಬಡಜ್ಯೋತಿಗಳ ಪ್ರಾಣ ಯಾರಿಗೂ ಮಹತ್ವವೆನಿಸಲೇ ಇಲ್ಲ ಬೆನ್ನಿಗಂಟಿದ ಬಡತನದ ಶಾಪಕ್ಕೆ ಉಳ್ಳವರ ದೌರ್ಜನ್ಯ, ಅತ್ಯಾಚಾರದ ಕಾಟಕ್ಕೆ ಜಾತಿ ಶೋಷಣೆಯ ಅವಮಾನಕ್ಕೆ ಬೇಸತ್ತು ನಗರಕ್ಕೆ ಗುಳೆ ಬಂದಿದ್ದು ನಮ್ಮದೇ ತಪ್ಪು ಪುರಾತನ ಕಾಲದಿಂದಲೇ ನಮ್ಮಿಂದ ಅಂತರ ಕಾಪಾಡಿಕೊಂಡೇ ಬದುಕಿದ್ದ ದೇವಾನುದೇವತೆಗಳ ಮಕ್ಕಳು ನೀವು ಅಗೋಚರ ವೈರಾಣು ಕೃಪೆಯಿಂದ ನಮ್ಮ ನಡುವಿನ ಅಂತರಕ್ಕೆ ಈಗಂತೂ ಅಜಗಜಾಂತರ ವ್ಯತ್ಯಾಸ ನಿಮಗಷ್ಟೇ ಸಿಗಲಿ ಚಂದಿರನೂರಿನ ದಾರಿ ಜೊತೆಗೆ ಹರುಷ,ಸಂತೃಪ್ತಿ ಖುಷಿ,ಸುಗ್ಗಿ,ಸುಖದ ಸಂತೆಯೂ ನಮ್ಮೂರಿನ ಬತ್ತಿದ ಹೊಳೆಬದಿಯ ಮುಳ್ಳು ಕಂಟಿಗಳ ಜಾಗವೇ ನಮಗಿರಲಿ ಇದ್ದೇಇರುತ್ತವೆ ಜೊತೆಗೆ ಬೇಡವೆಂದರೂ ಕಷ್ಟ,ದುಃಖ, ನಿರಾಸೆ ನಿಲ್ಲದ ನಿಟ್ಟುಸಿರು,ಬಿಕ್ಕಳಿಕೆಯೂ ನಮಗೀಗ ಖಾತರಿಯಾಗಿದೆ ಬಡವರ ಬದುಕು ಕಾವಲಿಯಿಂದ ಕೆಂಡಕ್ಕೆ ಬಿದ್ದಿರುವುದು ********

ಕಾರ್ಮಿಕ ದಿನದ ವಿಶೇಷ-ಕವಿತೆ Read Post »

ಕಾವ್ಯಯಾನ

ಕಾರ್ಮಿಕ ದಿನದ ವಿಶೇಷ-ಕವಿತೆ

ಕೂಲಿಯವನ ಮಗ ನಾನು ವಾಯ್.ಜೆ.ಮಹಿಬೂಬ ಕೂಲಿಯವನ ಮಗ ನಾನು ಬಡವನಾದರೇನಂತ ಇಲ್ಲೆನಗ ಬ್ಯಾಸರ ಕಣ್ಣತುಂಬ ನಿದ್ದೀಗಿ ಗುಡಿಸಲೆಮಗೆ ಆಸರ !!ಪ!! ಕೂಲಿಯವನ ಮಗನಾನು ಬಿಸಿಲೆಮಗೆ ಸಹೋದರ ನಮ್ಮಪ್ಪ ಅಂತಾನ ಮುಗಿಲೆ ನಮಗೆ ಹಂದರ !!೧!! ಅವ್ವನ ಸೀರಿ ಶೆರಗೇ ಒರಿಸೇತಿ ಬೆವರ ಹಾಸಿಗೆ ಆಗತೈತಿ ಅಪ್ಪನ ಹರಕ ಧೋತರ!!೨!! ಹಬ್ಬಕವರು ಕಾಣಲಿಲ್ಲ ಹೊಸ ಸೀರಿ-ದೋತರ ಸತ್ತಾಗ ಕಟ್ಟತೀರಿ ಅರವಿ ಐದು ಮೀಟರ್ !!೩! ******

ಕಾರ್ಮಿಕ ದಿನದ ವಿಶೇಷ-ಕವಿತೆ Read Post »

ಕಾವ್ಯಯಾನ

ಕಾರ್ಮಿಕ ದಿನದ ವಿಶೇಷ-ಕವಿತೆ

ಕಾರ್ಮಿಕ-ಶ್ರಮಿಕ ಪ್ರೊ.ಕವಿತಾ ಸಾರಂಗಮಠ ಕಾರ್ಮಿಕ-ಶ್ರಮಿಕ ದೇವನಿತ್ತ ಭೂಮಿಯಲ್ಲಿ ಶ್ರಮಿಕ ಪ್ರಾಮಾಣಿಕತೆಯ ಧನಿಕ ಸಮಯದ ಪರಿಪಾಲಕ ನಿತ್ಯ ದುಡಿದು ತಿನ್ನುವ ಕಾಯಕ! ಕರ್ಮದಿಂದ ಜಗವೆಲ್ಲ ಸುಗಮ ಕರ್ಮದಿಂದಲೇ ಸಂತಸದ ಉಗಮ ಹರಿಸುತ ನಿತ್ಯ ಬೆವರ ಸುಮ ಜಗವೆಲ್ಲ ಹರಡುವ ಶ್ರಮದ ಕುಸುಮ! ಶ್ರಮದೊಂದಿಗೆ ದಿನಚರಿ ಆರಂಭ ಅವಿರತ ದುಡಿದ ಬೆವರಲವನ ಬಿಂಬ ಸಹಿಸುವ ಧನಿಕರ ದಬ್ಬಾಳಿಕೆ ಆದರೂ ಇವನ ಕೆಲಸಕಿಲ್ಲ ಹೋಲಿಕೆ! ಕಟ್ಟುವ ನಿತ್ಯ ಕಾಯಕದ ಕಟ್ಟೆ ಕೈಯಲ್ಲಿ ಹಿಡಿದು ಉಣ್ಣುವ ಕರ್ಮದ ತಟ್ಟೆ ತೊಟ್ಟರೂ ಚಿಂದಿ ಬಟ್ಟೆ ಎಂದು ಬಿಡದವ ಕಾಯಕ ನಿಷ್ಠೆ! ವೃತ್ತಿ ಭೇದಗಳಿಲ್ಲ ನಾ ಮೇಲೆಂಬ ಭಾವವಿಲ್ಲ ಪ್ರಾಮಾಣಿಕತೆಯೆ ಇವನಿಗೆಲ್ಲ ದುಡಿದು ತಿಂದು ಬದುಕಾಗಿಸಿಕೊಂಡಿರುವ ಬೆಲ್ಲ! *******

ಕಾರ್ಮಿಕ ದಿನದ ವಿಶೇಷ-ಕವಿತೆ Read Post »

ಕಾವ್ಯಯಾನ

ಕಾರ್ಮಿಕ ದಿನದ ವಿಶೇಷ-ಕವಿತೆ

ಸನ್ಮಾನ ಸಂಮ್ಮೋದ ವಾಡಪ್ಪಿ ಸನ್ಮಾನ ಗಳಿಕೆಗೆ ಸ್ವಾಭಿಮಾನದ ದಿಟ್ಟ ಹೆಜ್ಜೆ ಇಡುತ ಬೆವರ‌ ಹನಿಗಳ ಸುರಿಸಿ ದುಡಿಮೆಯಲಿ ನಗುತ ಭವ್ಯ ದೇಶದ ಏಳಿಗೆಯ ಬೆನ್ನೆಲಬು ನಾವು ಶ್ರಮದ ದಾರಿ ಜೀವನದುದ್ದಕ್ಕೂ ನಡೆಯುತಿಹೆವು ಒಗ್ಗಟ್ಟಿನಲಿ ಒಕ್ಕೊರಲಿನ ಶಿಸ್ತಿನ ನಡೆಯು ದಣಿವಿಲ್ಲದ‌ ಚಲನೆ ನಿಲ್ಲಬೇಕು ಮನೆಯು ಸಹಿಷ್ಣುತೆಯಿಂದ ಸದಾ‌ ಕಾರ್ಯೋನ್ಮುಖ ಆತ್ಮವಿಶ್ವಾಸದ ಪಡೆ ಆಗನೆಂದು ವಿಮುಖ ಕಾರ್ಮಿಕರು ಒಂದೇ‌ ಸೂರಿನಲಿ ಬಂಧುಗಳು ಸಮಯ‌‌ ಪಾಲನೆ, ಶ್ರದ್ಧೆಯೇ ಪ್ರಮಾಣಗಳು ತಂತ್ರಜ್ಞಾನ ಕಾರ್ಯತಂತ್ರದಲ್ಲಿ‌ಯೂ ಪರಿಣಿತರು ಆರ್ಥಿಕತೆಯ ಬುನಾದಿ ನಿರಂತರ ಸಾಧಕರು ದಿನ‌‌ ವಾರ ಮಾಸ ವರುಷ ದಿಟ್ಟ ದುಡಿಮೆ ವಿವಿಧ ಕಾರ್ಯ ಅನೇಕ‌ ಕ್ಷೇತ್ರದ ಹಿರಿಮೆ ಕಾರ್ಮಿಕರ ಬಲ ದಕ್ಷತೆ ದೇಶದ ಹೆಮ್ಮೆ ಶಕ್ತಿ ಯುಕ್ತಿ ಕಾರ್ಯದಿ ಇವರೇ ರಾಷ್ಟ್ರದ ಗರಿಮೆ ಮೇ ದಿನವು ಕಾರ್ಮಿಕರಿಗಾಗಿ ಒಂದು ದಿನ ಪ್ರತಿಯೊಬ್ಬರ ಶ್ರಮಕೆ ಈ ಕವನದಿ ಸನ್ಮಾನ *******

ಕಾರ್ಮಿಕ ದಿನದ ವಿಶೇಷ-ಕವಿತೆ Read Post »

You cannot copy content of this page