Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ಖಾಲಿಯಾಗುಳಿಸಿದವನು ಶಿವಲೀಲಾ ಹುಣಸಗಿ ಈಗೆಲ್ಲಿ ಮಾಯವಾದೆ ನಿನ್ನೊಡನಾಟದ ಬಿಸಿಯೊಳಗೆ ಬೀಸಿದಬ್ಬರದ ಬಿರುಗಾಳಿಯಲಿ ಸಿಲುಕಿ ಹೊಯ್ದಾಡುತಿಹೆ ದೇಹದ ಕಣಕಣದಲೂ ಬೆರೆತ ನೀನು ಬಯಸಿದಾಗ ಕೈ ಜಾರುವ ಮೀನು ಹೆಪ್ಪುಗಟ್ಟಿದ ನರಗಳಲಿ ನೆತ್ತರು ಹರಿಸಿ ನೀನಪ್ಪಿದಾಗ ಬಯಕೆ ಕಾಡಿತ್ತು ನಿನ್ನೊಳಗೊಂದಾಗುವ  ಕ್ಷಣದೆ  ಬಟಾಬಯಲು ಗಾಳಿಯ ಹುಯಿಲು ಮರುಚಣ ಮುತ್ತಿದ ಮೌನದ ಹೊರತಾಗೇನು ಉಳಿದಿಲ್ಲವಿಲ್ಲಿ ಕನಸಿಗೆ ಮುನ್ನುಡಿಯಾದವನು ಬೆನ್ನುಡಿಯಾಗಲಿಲ್ಲ ನನಸಿಗೆ ಇಲ್ಲೀಗ ಅದೇ ಕೋಣೆ ಅದೇ ಕನಸುಗಳು ಅದೇ ಹಾಸಿಗೆದಿಂಬುಗಳು ಮತ್ತೆ ಮರಳುವೆಯೇನು ಹಸಿವಾದಾಗ? ಎದೆಗೊರಗಿ ಮಲಗಿದವ ಹೇಳಿ ಹೋಗಬಾರದಿತ್ತೇನು ಪಿಸುಮಾತಿನಲಾದರೂ! […]

ಕಾವ್ಯಯಾನ

ಜಿಂಕೆಗೆ ಜೀವ ಬರಲು ಧಾಮಿನಿ ಪ್ರಿಯಾ ಜಿಂಕೆಯಂತೆ ಚಿಮ್ಮುತ್ತಿದ್ದೆನು ನಾನು ಕಾರಣ ನೀನು ನನ್ನ ಸಹಕಾರದಿಂದಲೇ ಮುಗಿದಿತ್ತೆಲ್ಲ ಜೀವನ ಪೂರ್ತಿ ನಡೆಯುವಂತದ್ದಲ್ಲ ಮೈಮೇಲೆ ಹರಿದಾಡಿದಂತೆ ಹಾವು ಮುದಗೊಳಿಸುವಂತ ಕಾವು ಹಾವಿನೊಂದಿಗೆ ಸರಸವೇ ನಾಗಮಂಡಲ ನೋಡಿಲ್ಲವೇ ಬೆಣ್ಣೆಯಂತಹ ಮೈ ಕರಗಿತ್ತಲ್ಲಾ ಸೈ ಕೈ ಕಾಲುಗಳಿಗೆ ಎಂತದೋ ಹುರುಪು ಇಲ್ಲಿ ಬಲಾತ್ಕಾರವಿಲ್ಲ ಸಮರ್ಪಣೆಯೇ ಒನಪು ಜಿಂಕೆಯಂತೆಯೇ ಗಾಬರಿಯಾಗಿದ್ದೆನಾ ಕಾರಣ ನೀನೇನಾ ? ಎಂತಾ ಅದ್ರಷ್ಟವಂತೆಯೇ ನೀ ಇವನನ್ನು ಇವನೇ ಎಂದುಕೋ ಬೇಡ ಬಿಡಿ ಇಲ್ಲಿ ಅವನೇತಕೋ ಏನೂ ಕಡಿಮೆಯಿಲ್ಲ ಸಂಭ್ರಮಕೋ […]

ಕಾವ್ಯಯಾನ

ತಾರೆಗಣ್ಣು ಸ್ವಭಾವ ಕೋಳಗುಂದ ಪಾದಗಳು ಬಿರುಕು ಬಿಟ್ಟಿವೆ ನೆರಕೆ ಬಳಿದು ವರ್ಷವಾಗುತ್ತಾ ಬಂತು ದೀಪದ ಕಮಟು ಆರಿಲ್ಲ ಓರೆ ಕದ ಮುಚ್ಚಿಲ್ಲ ಪದೇ ಪದೇ ಗುಯ್ಗುಡುವ ಸೊಳ್ಳೆ ರೇಗಿಸುತ್ತಲೇ ತಾಳ್ಮೆಗೆ ಸವಾಲು ಇನ್ನೂ ಕುದಿ ಬಂದಿಲ್ಲ ಚಿಪ್ಪು ಹಸೀಟ್ಟು ಒಯ್ದು ತಿರುವಿ ಕಟ್ಟಲು ಅದರ ಗೊಣ್ಣೆ ಆಗಾಗ ಇಣುಕುತ್ತ ಸ್ವಾರೆಗೂ ಗಂಗ್ಳಕ್ಕೂ ಕಣ್ಣು ಕೊಂಡಿ ಹಾಕುತ್ತಿದೆ ಉರಿಯದ ಹೊಲೆ, ಹಾಲಿಲ್ಲದ ಮೊಲೆ ಹರುಕು ಅಂಗಿ ಹಸಿವಿನ ಜೊತೆ ಕಾದು ಕಾದು ಸೋತಿತ್ತು ತೇಪೆಗೆ ಸೂಜಿಗಣ್ಣಾಗಿ ಸೂರಂಚಲಿ ತೂಗಿತ್ತು […]

ಕಾವ್ಯಯಾನ

ಕೊರೊನ ಕಾಲದಲ್ಲಿ… ಶ್ವೇತಾ ಎಂ ಯು. ಕರೋನಾ ಕಾಲದಲ್ಲಿ ಕೂತುಂಡು ಮೈ ಭಾರ ಹೆಚ್ಚಿಸಿದವರ ನಡುವೆ ದುಡಿಮೆಯಿಲ್ಲದೆ ಜೀವಭಯದಿಂದ ಬದುಕೊ ಹಠವು ನಾಳೆ ಹೇಗೆಂದು ಸೊರಗಿದವರು ಅನಾಯಾಸವಾಗಿ ಸಿಕ್ಕ ರಜೆಗೆ ಹಾಯಾಗಿ ಪ್ರವಾಸ ಮಾಡಲಾಗದೆ ಮರುಗುತಿರುವ ಮಂದಿಯ ನಡುವೆ ತವರ ಸೇರಿಕೊಳ್ಳಲು ಉಟ್ಟ ಬಟ್ಟೆಯಲಿ ಬರಿಗಾಲಲ್ಲಿ ನಡೆದು ಬೀದಿ ಪಾಲಾದವರು ಚೆಂದ ಸೀರೆಯುಟ್ಟು ತುಟಿಗೊಂದಿಷ್ಟು ಹೆಚ್ಚೇ ರಂಗು ಬಳಿದ ಲಲನೆಯರು ರಾಜಕೀಯ ಭವಿಷ್ಯವು ಲೆಕ್ಕಾಚಾರವು ಸಹಾಯ ಹಸ್ತ ಚಾಚಿ ತೆಗೆದ ಸೆಲ್ಫಿಗೆ ನಗುವ ಚೆಲ್ಲಿ, ಕೈ ಚಾಚಿದ […]

ಕಾವ್ಯಯಾನ

ಗಝಲ್ ಹೇಮಗಂಗಾ ಕೊರೋನಾ ಕನಸುಗಳ ಕಮರಿಸಿದೆ ಮರಳಿ ಊರ ಸೇರುವುದು ಹೇಗೆ ? ಹಾಳು ಸುರಿವ ಬೀದಿ ಮಸಣವಾಗಿದೆ ಮರಳಿ ಊರ ಸೇರುವುದು ಹೇಗೆ ? ಶಾಂತವಾಗಿ ಹರಿಯುತ್ತಿದ್ದ ಬಾಳಕಡಲಿನಲಿ ಎಣಿಸದ ಉಬ್ಬರವಿಳಿತ ಇರುವ ನೆಲೆ ಜೀವಗಳ ನಲುಗಿಸಿದೆ ಮರಳಿ ಊರ ಸೇರುವುದು ಹೇಗೆ ? ದುಡಿಮೆ ಆದಾಯವಿಲ್ಲದ ಬದುಕು ನರಕಸದೃಶವಲ್ಲದೇ ಮತ್ತೇನು ? ತಿನ್ನುವ ಅನ್ನಕೂ ತತ್ವಾರವಾಗಿದೆ ಮರಳಿ ಊರ ಸೇರುವುದು ಹೇಗೆ ? ಅನುಕಂಪವಿಲ್ಲದ ಸಾವು ಹಗಲಲ್ಲೂ ಭೀತಿಯ ಕಾರಿರುಳ ಹರಡಿದೆ ಬೆದರಿದ ಮನ […]

ಕಾವ್ಯಯಾನ

ಗಝಲ್ ಸಹದೇವ ಯರಗೊಪ್ಪ ಬದುಕಿಗೆ ಅರ್ಥ ಕಲ್ಪಿಸಲು ಉಲಿದೆ ನೀ ಬರಲೇ ಇಲ್ಲ ಒಲವಿಗೆ ಬಲವ ತುಂಬಲು ಕೂಗಿದೆ ನೀ ಬರಲೇ ಇಲ್ಲ ಬೆವರಿನ ಅಂಬಲಿ ಉಂಡು ಒಡಲ ಹಂಬಲ ತಣಿಸುವೆ ಬಾ ಪ್ರೇಮದ ಎಲ್ಲೆ ಮೀರಲು ಗೋಗರೆದೆ ನೀ ಬರಲೇ ಇಲ್ಲ ಇರುಳ ಕಾಲುದಾರಿ ಕತ್ತಲು ಮೆತ್ತಿ ಮೈ ಮುರಿಯುತಿದೆ ಭಾವನೆಗಳ ಬೆಳಕಲಿ ಒಂದಾಗಲು ಕರೆದೆ ನೀ ಬರಲೇ ಇಲ್ಲ ಮದಿರೆಯಲಿ ಅಧರ ಕಳಚಿ ನೂರು ನವಿಲು ಕುಣಿದಂತಾಗಿದೆ ಭಾರವಾದ ತನು ಹಗುರುಗೊಳಿಸಲು ಕೈ ಚಾಚಿದೆ […]

ಕಾವ್ಯಯಾನ

ಗಝಲ್ ಈರಪ್ಪ ಬಿಜಲಿ ಕಗ್ಗೊಲೆಯಾದ ಕನಸುಗಳನು ಗಂಟುಕಟ್ಟಿ ಹೊತ್ತುಕೊಂಡು ನಡೆದಿದ್ದೇವೆ ಹತ್ಯೆಯಾದ ಮನಸುಗಳನು ವಸ್ತ್ರದಲಿ ಸುತ್ತಿಕೊಂಡು ನಡೆದಿದ್ದೇವೆ ।। ವಿಧಿಯಾಟಕೆ ಬದುಕು ಬಲಿಯಾಗಿ ಕೊನೆಯಾದಂತೆ ಕಾಣುತಿದೆ ಬೂಟಾಟಿಕೆ ಮಾತಿಗೆ ಮರುಳಾಗಿ ಬಾಳಬಂಡಿ ಹತ್ತಿಕೊಂಡು ನಡೆದಿದ್ದೇವೆ ।। ಶ್ರಮಿಕರು ಸತ್ತರು ನೆತ್ತರು ಬೀದಿಬೀದಿಗೆಲ್ಲ ನದಿಯಾಗಿ ಹರಿದಿದೆ ಧನಿಕರು ಮೂಗಿಗೆ ಸವರಿದ ತುಪ್ಪವನು ಮೆತ್ತಿಕೊಂಡು ನಡೆದಿದ್ದೇವೆ ।। ಹೊತ್ತೊತ್ತಿಗೂ ಅನ್ನಆಹಾರ ನೀರಿಲ್ಲದೇ ಕ್ಷಣಕ್ಷಣವು ಬಳಲಿದೇವು ಉಸಿರಳಿವ ಮುನ್ನ ಗೂಡುನೆನೆದು ಮನೆ ಸೇರುವಾಸೆ ಕಟ್ಟಿಕೊಂಡು ನಡೆದಿದ್ದೇವೆ।। ಬೆಂದುಬೆಂಡಾದ ಜೀವಿಗಳ ಮೊಗದಲಿ ಬಿಜಲಿ […]

ಕಾವ್ಯಯಾನ

‘ಒಲವ ವಿಜ್ಞಾಪನೆ ವಸುಂಧರಾ ಕದಲೂರು ಹೀಗೆ…ಮಾತು ಮಾತಿಗೂ ಮಾರುತ್ತರ ಬೇಡಎನ್ನವೆಯಲ್ಲಾ ನನ್ನ ಸೋಗೆಮಾತೇ ಆಡದಲೆ ನಾ ನಿನಗೆಅರ್ಥ ಮಾಡಿಸುವುದು ಹೇಗೆ ಚೆಂದದಲಿ  ಮಾತನಾಡದೆಬಿಮ್ಮನೆ ಬಿಗುಮಾನದಲಿನೀ ನಿನ್ನ ಪಾಡಿಗೆ, ನಾ ನನ್ನಷ್ಟಕೆಇರಲೇನು ಸೊಗಸು ಹೇಳು ಮುನಿಸು ಮೋಡ ಕರಗಿಸೋನೆ ಸುರಿದು ಕುದಿ ಮನಸುತಂಪಾಗಿ, ಹಸಿರು ಚಿಗುರಿತೆನೆ ತುಂಬಿ ಬಾಗುದಿರಲೇನು ಚೆಂದ ಮೌನಕ್ಕೂ ಬೇಸರ ಬಂತೀಗಮನಸು ಸೋಲುತಿದೆ ಬಾ ಬೇಗಈ ಬಾಳಿನಾಚೆ ಇನ್ನೇನಿದೆನಾನಿನಗೆ ನೀನನಗೆಂದು ಒಲವಾಗಿದೆ *****

ಕಾವ್ಯಯಾನ

ಗಝಲ್ ಹೇಮಗಂಗಾ ಲೌಕಿಕ ಸುಖಗಳು ತೃಣಸಮಾನವೆಂದು ಹೊರಟವಳು ನೀನು ಎಲ್ಲ ತ್ಯಜಿಸಿ ವೈರಾಗ್ಯವನೇ ಆಭರಣದಂತೆ ಧರಿಸಿದವಳು ನೀನು ಮೋಹಿಸಿದ ಕೌಶಿಕನೊಡನೆ ಬಾಳು ಮುಳ್ಳಿನ ಮಂಚವಾಯಿತು ಅರಮನೆಯ ವೈಭೋಗದತ್ತ ಚಿತ್ತವಿಡದೇ ನಡೆದವಳು ನೀನು ಹಸಿವೆ, ನಿದಿರೆ, ಅಂಜಿಕೆಗಳಾವುವೂ ಕಾಡಲಿಲ್ಲ ನಿನ್ನ ಹೇಗೆ ? ಚೆನ್ನಮಲ್ಲಿಕಾರ್ಜುನನ ಅರಸುತ್ತಾ ಕಾನನದಿ ಅಲೆದವಳು ನೀನು ಅಗಣಿತ ಅನುಭವದ ಮೂಸೆಯಲಿ ಪುಟಕ್ಕಿಟ್ಟ ಚಿನ್ನವಾದೆ ಹೆಣ್ಣೂ ಗಂಡಿಗೆ ಸಮಾನವೆಂಬ ತತ್ವ ಜಗಕೆ ಸಾರಿದವಳು ನೀನು ಆಧ್ಯಾತ್ಮವನಪ್ಪಿ ಮೊದಲಿಗಳಾದೆ ಶಿವಶರಣೆಯರ ಸಾಲಿನಲ್ಲಿ ವಚನಕ್ಷೇತ್ರದ ಹೇಮ ಮುಕುಟಕೆ ರತ್ನವಾದವಳು […]

ಕಾವ್ಯಯಾನ

ಮಳೆ ವಸುಂಧರಾ ಕದಲೂರು ಕಿಟಕಿ ಸರಳಾಚೆಸುರಿವ ಮಳೆ ಕಂಡುಮೂಗೇರಿಸುತ್ತೇನೆಮಣ್ಣ ಘಮಲಿಗೆ.. ಬಿದ್ದ ಹನಿಯೆಲ್ಲಾಸಿಮೆಂಟು ರೋಡಿನಲಿಉರುಳಾಡಿ ಕೊಚ್ಚೆಮೋರಿ ಸೇರುವಾಗಎಲ್ಲಿಂದ ಬರಬೇಕುಮಣ್ಣ ವಾಸನೆ.. ಊರ ಮನೆಯಲ್ಲಿಪುಟ್ಟ ತೊರೆಯಾಗಿಮಳೆ ನೀರು ತುಂಬಿಹರಿಯುತ್ತಿದ್ದ ಮೋರಿಗಳುಘಮ್ಮೆನುತ್ತಿದ್ದವು… ಪುಟ್ಟ ಫ್ರಾಕಿನ ಹುಡುಗಿಬಿಟ್ಟ ಕಾಗದದ ದೋಣಿಹೊತ್ತೋಯ್ದು ಮರೆಯಾದನೆನಪೂ ಘಮ್ಮೆಂದಿತು.. ಊರ ಮಳೆ ಕೇರಿ ಮಳೆನೆಲದ ಮಳೆಯಾಗಿತ್ತು.ಹರಿದು ಕಡಲ ಸೇರಿದಟ್ಟ ಮುಗಿಲಾಗಿ ಘಮ್ಮೆಂದಿತು… ಈ ನಗರ ಮಳೆ ಮಾತ್ರಒಂದು ನೆನಪೂ ತುಂಬುವುದಿಲ್ಲ.ಭೋರೆಂದು ಸುರಿದ ಮಳೆಗೆಮಣ್ಣಿಲ್ಲದ ನೆಲವೂ ಇಂಗುವುದಿಲ್ಲಮಣ್ಣಿಲ್ಲದೆ ಘಮಲು ಅಡರುವುದಿಲ್ಲ ********

Back To Top