Category: ಕಾವ್ಯಯಾನ

ಕಾವ್ಯಯಾನ

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ಕಾರ್ಮಿಕರ ಕೂಗು ಈರಪ್ಪ ಬಿಜಲಿ ಕಾರ್ಮಿಕರ ಕೂಗು” ಚೋಟುದ್ದದ ಹೊಟ್ಟೆಚೀಲವ ತುಂಬಿಸಲು ಮನುಜ ಮಾಡುವನು ಕೂಲಿ ಕೆಲಸಗಳನು ಕಟ್ಟಡ,ಬಡಗಿತನ,ವೆಲ್ಡಿಂಗ್ ,ಪೈಪ್ಲೈನಗಳು ಪೇಂಟರ್,ಪೌರ,ಸಿಂಪಿಗಕಮ್ಮಾರಿಕೆ,ಅನೇಕ ಕರ್ಮಗಳು।।1।। ನಮ್ಮಿ ಕಾರ್ಮಿಕರಿಗಿಲ್ಲ ಜೀವನದ ಭದ್ರೆತೆ ಅವರ ಜೀವನವಿರುವುದು ಬಲು ವಿಭಿನ್ನತೆ ಬಂಡ್ವಾಳಷಾಹಿ,ಕಾರ್ಮಿಕರಲ್ಲಿನ ತಾರತಮ್ಯತೆ ದೂರಾಗಿ ಮೂಡಿಬರಲಿ ಎರಡೂಗುಂಪಲಿ ಸರಿಸಮಾತೆ।।2।। ಕಾರ್ಮಿಕರ ಕೂಗು ನೊಂದ ಮನಗಳ ಕೂಗು ಕೇಳುತ ಧನಿಕರು ಹಿಗ್ಗಿಸುವರು ತಮ್ಮಯ ಮೂಗು ಹೃದಯಸಿರಿವಂತಿಕೆಲಿ ಕಾರ್ಮಿಕರ ಮನಸ್ಸದು ಮಗು ವೇತನದ ದಿನದಂದು ಇವರ ಮುಖದಲಿ ಕಿಲಕಿಲ ನಗು।।3।। ಜೀವದ ಅಂಗುತೊರೆದು ಅವಿರತ […]

ಕಾರ್ಮಿಕ ದಿನದ ವಿಶೇಷ -ಕವಿತೆ

ಕವಿತೆ ಬಿಸಿಲ ಹೂಗಳ ಬದುಕು ಲಕ್ಷ್ಮಿ ಪಾಟೀಲ್ ಬಿಸಿಲ ಹೂಗಳ ಬದುಕು ನನಗೆ ನೆರಳಿಗಿಂತಲೂ ಬಿಸಿಲೇ ಇಷ್ಟ ಒಳಗಿನ ಬೆಂಕಿ ಹೊರಗೆ ನೀರಾಗಿ ಹರಿಯುವ ವಿಸ್ಮಯಕ್ಕೆ ಕಾವುಗಳನ್ನೆಲ್ಲ ಕರಗಿಸಿ ನೀರಾಗುವುದನ್ನು ಕಲಿಸುತ್ತವಲ್ಲ ಅದೆಷ್ಟು ಸಲೀಸು… ಬಿಸಿಲನ್ನು ಹಾಸಿ ಹೊದೆದು, ಶ್ರಮದಲ್ಲಿ ಬೆವರಿಳಿಸಿ ಬಿಸಿಲ ಹಾಡುಗಳನ್ನು ಕಟ್ಟಿ ಜೀವನೋತ್ಸಾಹ ಹೇರಿಕೊಂಡು ಹೊರಟವರನ್ನು ಕಂಡು ನಾನೀಗ ದುಃಖಿಸುವುದಿಲ್ಲ ಭಾವಕೋಶಗಳನು ಅರಳಿಸಿ ಬಿಡುವ ಬಾಡದ ಹೂವಾಗಿ ಉಳಿದು ಬಿಡುವ ಬದುಕಿನರ್ಥಗಳನ್ನು ಹಿಗ್ಗಿಸುವ ಇವರನ್ನು ಕಂಡು ಹಿಗ್ಗುತ್ತೇನೆ ಬೆವೆರಿಳಿಸುವ ಕಸಬಿಗೆ ಜೀವ ತುಂಬುತ್ತೇನೆ… […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ಇದ್ದಲ್ಲೆ ಇದ್ದು ಬಿಡಿ. ಜ್ಯೋತಿ ಡಿ.ಬೊಮ್ಮಾ. ಇದ್ದಲ್ಲೆ ಇದ್ದು ಬಿಡಿ. ಇದ್ದಲ್ಲೆ ಇದ್ದು ಬಿಡಿ ನೀವು ಆರಾಮವಾಗಿ ನಿಮ್ಮೂರಿಗೆ ನಿಮ್ಮ ಮನೆಗೆ ಕರೆಸಿಕೊಳ್ಳಲು ಸರ್ಕಾರದ ಬಳಿ ಸೌಲಬ್ಯಗಳಿಲ್ಲ. ವಿದೇಶದಿಂದ ಮರಳುವವರಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಕಲಿಯುತ್ತಿರುವವರಿಗೆ ಬಸ್ ,ಏರೋಪ್ಲೇನ್ ಗಳೆಲ್ಲ ಮೀಸಲಾಗಿವೆ. ನೀವು ಇದ್ದಲ್ಲೆ ಇದ್ದುಬಿಡಿ ಕಾರು ಜೀಪುಗಳಿದ್ದವರು ಬರಲಿ ಅವರವರ ಊರಿಗೆ ಚೆಕ್ ಪೋಸ್ಟ್ ನಲ್ಲಿರುವವರಿಗೆ ಚಳ್ಳೆಹಣ್ಣು ತಿನ್ನಿಸಿ ಹೊತ್ತು ಹರಿಯುವ ಮೊದಲು. ನೀವು ಇದ್ದಲ್ಲೆ ಇದ್ದು ಬಿಡಿ ಕೆಲಸವಿಲ್ಲ ,ತಿನ್ನಲು ಆಹಾರವಿಲ್ಲದಿದ್ದರೂ ಹಿಡಿ ಅನ್ನಕೊಟ್ಟು […]

ಕಾರ್ಮಿಕದಿನದ ವಿಶೇಷ-ಕವಿತೆ

ಕವಿತೆ ಮೇ ಕವಿತೆ ಲಕ್ಷ್ಮೀ ದೊಡಮನಿ ಮೇ ಕವಿತೆ ನೆನಪಾಗುವಿರಿ ನೀವಿಂದು ಬಂದಿದೆ ಮೇ ಒಂದು ಹೊಗಳುವೆವು ನಾವಿಂದು ಬಂದಿದೆ ಮೇ ಒಂದು ಬಸವರಸರ ತತ್ವದ ತೆರದಿ ಕೈಲಾಸದಲಿ ಇರುವಿರಿ ಬರೆಯಿಸಿಕೊಳ್ಳುವಿರಿ ನೀವಿಂದು ಬಂದಿದೆ ಮೇ ಒಂದು ಕಣ್ಣ ಗಾರೆ,ಬಸವಳಿದ ಮೊಗ,ತನು ಎಲುಬು ಹಂದರ ಅರಿವಿಗೆ ಬರುವಿರಿ ನಮಗಿಂದು ಬಂದಿದೆ ಮೇ ಒಂದು ನಿಮ್ಮನ್ನು ವಿಭಜಿಸಿ ದುಡಿಸಿಕೊಳ್ಳುವ ಧೂರ್ತರಿಂದ ಅಣಗಿಸಿಕೊಳ್ಳುವಿರಿ ನೀವಿಂದುಬಂದಿದೆ ಮೇ ಒಂದು ನಿಮ್ಮಕಾರ್ಯ,ತ್ಯಾಗ,ಬಲಿದಾನಗಳ ಸಂದರ್ಶನ ನಡೆದು ಪ್ರೇರಣೆಯಾಗುವಿರಿ ನಮಗೆಂದು ಬಂದಿದೆ ಮೇ ಒಂದು ಒಂದೇ […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ಕಾರ್ಮಿಕರ ದಿನದಂದು ಹಾಲು ಉಕ್ಕಿದ್ದು ಅಂಜನಾ ಹೆಗಡೆ ಕಾರ್ಮಿಕರ ದಿನದಂದು ಹಾಲು ಉಕ್ಕಿದ್ದು ವಾಟ್ಸಾಪ್ ಫೇಸ್ ಬುಕ್ ಗಳಲ್ಲಿ ಕಾರ್ಮಿಕ ದಿನದ ಶುಭಾಶಯ! “ಕಾಯಕವೇ ಕೈಲಾಸ” ನೆನಪಾಗಿ ಮೈ ನಡುಗಿತು ಕೈಲಾಸ ಕೈತಪ್ಪಿದ ನೋವು ಬಾಧಿಸಿ ಬಾತ್ ರೂಮನ್ನಾದರೂ ತೊಳೆಯಲಿಕ್ಕೆಂದು ಟೊಂಕಕಟ್ಟಿ ನಿಂತೆ ಎಲ್ಲ ಬ್ರ್ಯಾಂಡ್ ಗಳ ಕ್ಲೀನರುಗಳ ಒಂದುಗೂಡಿಸಿ ಬ್ರಶ್ ಗಳನ್ನೆಲ್ಲ ಗುಡ್ಡೆ ಹಾಕಿ ತಲೆಗೊಂದು ಷವರ್ ಕ್ಯಾಪ್ ಹಾಕಿ ಸೈನಿಕಳಾದೆ ಹೊಳೆವ ಟೈಲ್ಸು ಕಾಮೋಡುಗಳೆಲ್ಲ ಜೈಕಾರ ಕೂಗಿದಂತಾಗಿ ಒಳಗೊಳಗೇ ಸಂಭ್ರಮಿಸಿದೆ ವಾಷಿಂಗ್ ಮಷಿನ್ನಿನ […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ಕಾಯಕದ ದಿನ ನಗರ ಸತ್ತು‌ ಹೋಗಿದೆ ನಾಗರಾಜ ಹರಪನಹಳ್ಳಿ ಕಾಯಕದ ದಿನ ನಗರ ಸತ್ತು‌ ಹೋಗಿದೆ ಕಾಯಕ‌ ಜೀವಿಗಳ ದಿನ ನಗರ ಸತ್ತು‌ ಹೋಗಿದೆ ಬೆವರು ಸುರಿಸಿ‌ ಬದುಕುವ ಜನರ‌ ಹೊರದಬ್ಬಿದೆ ಮಹಲುಗಳ ಕಟ್ಟಿ ಗುಡಿಸಲಲಿ ಬದುಕಿದ ಜನ ಗುಳೆಬಂದ ನಾಡಿಗೆ ಹಸಿವು ಹೊತ್ತು ಮರಳಿದ್ದಾರೆ ಮಡಲಲ್ಲಿ ಕಣ್ಣೀರು ನಿಟ್ಟುಸಿರು ತುಂಬಿಕೊಂಡು ಭೂಮಿ ಬಿಟ್ಟು ಬಂದದ್ದಕ್ಕೆ ಪರಿತಪಿಸಿದ್ದಾರೆ ಈ‌ ಬಿಸಿಲಿಗೂ ಕರುಣೆಯಿಲ್ಲ ಕಾಯಕದ ಮಂತ್ರ ಕೊಟ್ಟ ಬಸವಣ್ಣ, ದುಡಿಮೆಯಲ್ಲಿ ಪಾಲು ಕೇಳಿದ ಕಾರ್ಲಮಾರ್ಕ್ಸ ಮಣ್ಣಲ್ಲಿ ಮಣ್ಣಾಗಿ […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ಕಾರ್ಮಿಕರು ನಾವು ಡಾ.ಪ್ರಸನ್ನ ಹೆಗಡೆ ಕಾರ್ಮಿಕರು ನಾವು ಕಾರ್ಮಿಕರು ನಾವು ಯಂತ್ರದ ವೀಣೆಯ ತಂತಿಯ ಮೀಟುವ ವೈಣಿಕರು ನಾವು ಕಾರ್ಮಿಕರು ನಾವು ಆರ್ಥಿಕ ದೋಣಿಯ ಚಂದದಿ ನಡೆಸುವ ನಾವಿಕರು ನಾವು ಕಾರ್ಮಿಕರು ನಾವು ಒಡೆಯನ ಕನಸಿನ ಬೀಜವ ಬಿತ್ತುವ ಜೀವಿಗಳು ನಾವು ಕಾರ್ಮಿಕರು ನಾವು ಹಗಲಿರುಳೆನ್ನದೆ ನಿಲ್ಲದೆ ನಡೆಯುವ ಕಾಲನ ಕಾಲುಗಳು ನಾವು ಕಾರ್ಮಿಕರು ನಾವು ಮಳೆಬಿಸಿಲೆನ್ನದೆ ಕಾರಣ ಒಡ್ಡದೆ ದುಡಿಯುವ ಜನ ನಾವು ಕಾರ್ಮಿಕರು ನಾವು ಗಣಿಯೊಳಗಿಳಿದು ಕುಲುಮೆಯೊಳ್ಬೆಂದು ಹೊನ್ನಾಗುವ ಜನ ನಾವು ಕಾರ್ಮಿಕರು […]

ಕಾವ್ಯಯಾನ

ಸುರಿಮಳೆ ವೀಣಾ ರಮೇಶ್ ಧೋ ಎಂದಿದೆ ನಗುಮಳೆ ಮನಸಿನ ಸುಂದರ ನಗರಿಯಲಿ ನಿನ್ನ ನಸುನಗುವಿನ ಸಿಹಿ ಸಿಂಚನದ ಕಳೆ ಬಿಸಿಯೇರಿದ ವಿರಹದ ಕಾವಿಗೆ ಒಂದಷ್ಟು ತಂಪು ನೀಡಿದೆ,,ಎಡಬಿಡದೆ ಸುರಿವ ನಿನ್ನ ನಗುವಿನ ನರ್ತನದಲಿ ಮನದ ಇಳೆ ನನ್ನ ಮೈ ಮನಗಳು ಒದ್ದೆಯಾಗಿವೆ ತುಸು ಮೆಲ್ಲ ಬೀಸಿದೆ ನೆನಪಿನ ತಂಗಾಳಿ ಕತ್ತಲೆಯ ಮೌನವಷ್ಟೇ ಸೀಳಿದೆ ತಬ್ಬಿ ಈ ಸುಳಿಗಾಳಿ ಮತ್ತದೇ ಸಿಹಿ ಹನಿಗಳು ಆಳಕೆ ಸುರಿದಿದೆ, ನಾ ತೇಲಿ ಹೋಗುವಷ್ಟು ಹರ್ಷ ಧಾರೆಯಲಿ ನೆನೆಯದಂತೆ ಬಚ್ಚಿಟ್ಟು ಕೊಂಡಿರುವೆ ನೆನಪುಗಳು […]

ಕಾವ್ಯಯಾನ

ಸ್ವರ ಮಾಧುರ್ಯ ಬಿ ಅರುಣ್ ಕುಮಾರ್ ಹೃದಯ ವೀಣೆ ನಾದ ಅಲೆ ಅಲೆಯಾಗಿ ಮನ ಕಡಲಿಗೆ ತಾಕುತಿದೆ ನೋಡು ಒಳಗೆ ಒಮ್ಮೆ ಕಡಲತೀರ ತೆರೆ ತಾಕಲಾಟ ಭಾವಕೋಶ ಪತಂಗದಾಟ ಬಾನುಲಿ ದಿಗಂತ ಮುಟ್ಟಲು ಹಕ್ಕಿಗಳುಲಿಯುತ ಪುಟ ನೆಗೆತ ಪಂಚ ಇಂದ್ರಿಯ ನಿಗ್ರಹಿಸಿ ಒಂದೊಮ್ಮೆ ಕೇಳಿ ನೋಡು ಕರ್ಣಾನಂದ ಉಕ್ಕಿ ಹರಿದು ಆನಂದಬಾಷ್ಪ ಹೊಮ್ಮುವುದು ಒಲವಿನಾಲಿಂಗನ ಮಿಲನ ನಿಸರ್ಗ ಸ್ತನಪಾನ ಚೈತನ್ಯ ಏಳು ಸಾಗರಗಳ ಎಲ್ಲೆ ಮೀರಿ ಕೋಗಿಲೆ ಕಳಕಂಠ ಬೆರೆಸಿದೆ ನಾಕು ತಂತಿಯಲಿ ಹುಟ್ಟಿದ ಸಪ್ತ ಸ್ವರಗಳ […]

ಕಾವ್ಯಯಾನ

ಗಝಲ್ ತೇಜಾವತಿ ಹೆಚ್.ಡಿ. ಮೌನದ ಮಾತು ಅರ್ಥವಾಯಿತು ನಿನ್ನಿಂದ ಕಾಣದ ಕನಸು ಗೋಚರವಾಯಿತು ನಿನ್ನಿಂದ ಹದವಾದ ಭೂಮಿ ಬಂಜರಾಗಿತ್ತು ನೀನಿಲ್ಲದೆ ಉತ್ತುವ ಕಾರ್ಯ ಅರ್ಥವಾಯಿತು ನಿನ್ನಿಂದ ಪ್ರೀತಿ ಹೃದಯದಿಂದ ಒಸರುತ್ತಿತ್ತು ರಸಜೇನಾಗಿ ಸವಿಯ ಸವಿವುದು ಶುರುವಾಯಿತು ನಿನ್ನಿಂದ ನೆರಳೂ ಹಿಂಬಾಲಿಸಲು ಅದುರುತ್ತಿತ್ತು ನನ್ನನ್ನು ಕಣ್ಣಲ್ಲಿ ಬೆಳಕು ಒಮ್ಮೆಲೇ ಪ್ರಜ್ವಲಿಸಿತು ನಿನ್ನಿಂದ ಕಾಯಕ್ಕೂ ಆತ್ಮಕ್ಕೂ ಹೊಂದಿಕೆ ಇರಲಿಲ್ಲ ಎನ್ನಲ್ಲಿ ಮನದೊಳಗೆ ತೇಜಸ್ಸಿರುವುದು ತಿಳಿಯಿತು ನಿನ್ನಿಂದ *******

Back To Top