Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ಓ, ಅವನೇ.. ಪೂರ್ಣಿಮಾ ಸುರೇಶ್ ಅವನನ್ನು ಇಷ್ಟ ಪಟ್ಟಿದ್ದು ಹೇಗೆ,ಯಾವಾಗ? ಪ್ರಶ್ನೆಯಾಗದಿರು ಒಳಗಿನವಳೇ.. ಅದೆಷ್ಟು ಬಾರಿ ಸಮಜಾಯಿಷಿ ನೀಡಿದ್ದೇನೆ ಕಿರಿಕಿರಿ ಮಾಡದಿರು ಹೀಗೆಲ್ಲ ಏನು-ಯಾಕೆಗಳನ್ನು ಎದುರಿಟ್ಟು ! ನಾನು ಬದುಕುತ್ತಿದ್ದೇನೆ ಎಂಬುದಷ್ಟೇ ಸತ್ಯ. ಆದರೆ ಅವಳಿಗದು ರುಚಿಸದು. ಮನಸ್ಸಿಗೆ ಪಾತಿ ಮಾಡಿದ್ದು, ನೆಟ್ಟ ಗಿಡ ಕುಡಿಯೊಡೆದದ್ದು.. ಮೊಗ್ಗು ಕಟ್ಟಿದ್ದು ನೆನಪಿಸುತ್ತಾಳೆ. ನನ್ನ ಅವಳ ಹಾದಿಗೆಳೆಯುತ್ತಾಳೆ ಬಲವಂತವಾಗಿ. “ಗೊತ್ತಿಲ್ಲ”- ಹಾರಿಕೆ ಉತ್ತರನೀಡಲಾರೆ. ನಾನು ನನ್ನ ದಾರಿಯಲ್ಲಿ ಅವನು ತನ್ನ ಗುರಿಯತ್ತ ನಡೆವಾಗ ಒಂದೊಂದು ತಿರುವಿನಲ್ಲೂ ಕಾಡಕುಸುಮ… -ಕೆಂಪಿನ ಕೇಪಳ, […]

ಕಾವ್ಯಯಾನ

ಸ್ವಾತಿ ಮುತ್ತು ಮಧು ವಸ್ತ್ರದ್ ಬಾಲ್ಯದಾ ದಿನಗಳಲ್ಲಿ ತಾಯ್ತಂದೆ,ಅಣ್ಣಂದಿರ ಬೆಚ್ಚಗಿನಾ ಗೂಡಿನಲ್ಲಿ ನಲಿದಿದ್ದ ಮುಗ್ಧತೆಗೆ ಸಿಕ್ಕಿದ್ದು ವಾತ್ಸಲ್ಯದಮುತ್ತು ಶಾಲೆಯಾ ದಿನಗಳಲ್ಲಿ ವಿದ್ಯೆಯಾ ಕಲಿಯುವಲ್ಲಿ ಗುರುಗಳಿಂದ ಸಿಕ್ಕಿದ್ದು ಮಾರ್ಗದರ್ಶನದ ನುಡಿ ಮುತ್ತು.. ಹರಯದಾ ಬನದಲ್ಲಿ ಮುಂಜಾನೆಯ ಮಂಜಿನಲಿ ಚಿಗುರೆಲೆಯ ಅಂಚಿನಲಿ ನನ್ನ ನೋಡಿ ನಕ್ಕಿದ್ದು ಇಬ್ಬನಿಯಮುತ್ತು ಸಪ್ತಪದಿಯ ತುಳಿದಲ್ಲಿ ನವಜೀವನದ ಹೊಸಿಲಲ್ಲಿ ಮೊದಲರಾತ್ರಿಯ ಗುಂಗಿನಲ್ಲಿ ನಲ್ಲ ನನಗಿತ್ತಿದ್ದು ಒಲವಿನ ಮುತ್ತು ನವಮಾಸ ಮುಗಿಯುತಲಿ ತಾಯ್ತನದ ಮೋಡಿಯಲಿ ನನ್ನ ಮುದ್ದಿನ ಕರುಳಕುಡಿಗೆ ಕಣ್ಮುಚ್ಚಿ ನಾನಿತ್ತಿದ್ದು ಮಮತೆಯ ಮುತ್ತು ತುಂಬುಪ್ರೀತಿಯ ಬಾಳಿನಲ್ಲಿ […]

ಕಾವ್ಯಯಾನ

ಗಝಲ್ ಡಾ. ಗೋವಿಂದ ಹೆಗಡೆ ಸುಳಿಬಾಳೆಯಂಥ ಹೆಣ್ಣು ನೀನು ತಿಳಿಯದ್ದು ನನ್ನ ತಪ್ಪು ಆಲಿಕಲ್ಲ ಮಳೆಯಂತೆ ಸುರಿದೆ, ಸುರಿದಿದ್ದು ನನ್ನ ತಪ್ಪು ಕನಸಿನ ಪುಟದಲ್ಲಿ ಬರೆದೊಂದು ಹಾಡಂತೆ ಕಂಡೆನೇ ನಿನ್ನ ಎತ್ತಿ ಅಪ್ಪಿದೆ ನೀ ಗರುಕೆಯೆಸಳ, ಹೆಚ್ಚು ಬಯಸಿದ್ದು ನನ್ನ ತಪ್ಪು ಎದೆ ಕೊರೆದ ದುಗುಡಕ್ಕೆ ಹೊರದಾರಿ ಬಯಸಿದವಳು ನೀನು ಕಿವಿಯಾದ ಮಾತ್ರಕ್ಕೆ ಆಸರೆ ನಾನೆಂದು ಉಬ್ಬಿದ್ದು ನನ್ನ ತಪ್ಪು ಫೋಲ್ ವಾಲ್ಟ್ ನಲ್ಲಿ ಜಿಗಿದು ದಾಟಿ ಕೋಲನ್ನು ಕೈ ಬಿಡುವರು ಮಣ್ಣಿಗೆಸೆದೆ ನೀನೆಂದು ಮರುಗುತ್ತ ಉಳಿದಿದ್ದು […]

ಕಾವ್ಯಯಾನ

ಬೆನ್ನ ಮೇಲೆ ಬರೆದ ಮುಳ್ಳಿನ ಚಿತ್ರ ಬಿದಲೋಟಿ ರಂಗನಾಥ್ ಮನುಷ್ಯತ್ವವನ್ನೇ ಗಾಳಿಗೆ ತೂರಿದ ನೀಚ ಮನಸೇ ಹೆಣದ ಮೇಲಿನ ಕಾಸಿಗೆ ನಾಲಿಗೆಯನ್ನೇಕೆ ಚಾಚಿದೆ ? ಜೀವ ಇರುವಾಗ ಇಲ್ಲದ ಹೆಸರಿನ ಮುಂದೆ ನಿನ್ನ ಹೆಸರನ್ನೇಕೆ ಜೋಡಿಸುತ್ತಿ? ನಿಷ್ಠೆ ಇಲ್ಲದ ಮನಸನು ಹೊತ್ತು ಹೊಲಸು ಆಗಿ ಕೆಸರು ರಸ್ತೆ ಚರಂಡಿಗಳಲ್ಲಿ ಉರುಳಿ ಕೈ ತೊಳೆಯದೇ ಹರಿವಿ ನೀರಿಗೆ ಕೈ ಅದ್ದುವ ನಿನ್ನ ನಡೆ ಎಂದಿಗೂ ಗಾಳಿಗೋಪುರ ಇದ್ದ ಸೀರೆಯನು ಉಡದೇ ಅಲ್ಲೆಲ್ಲೋ ಬೇಲಿ ಮೇಲಿರುವ ಸೀರೆಗೆ ಆಸೆ ಪಟ್ಟು […]

ಕಾವ್ಯಯಾನ

ಅರಿವು ಬಿ.ಎಸ್.ಶ್ರೀನಿವಾಸ್ ಹೊತ್ತಾಯಿತು ಗೊತ್ತಾಯಿತು ಪಯಣ ಮುಗಿಯಲಿದೆಯೆಂದು ರವಿಯು ಮುಳುಗಿ ತಾರೆ ಮಿನುಗಿ ಶಶಿ ಆಗಸ ಬೆಳಗುವನೆಂದು ಹೊತ್ತಾಯಿತು ಗೊತ್ತಾಯಿತು ಗಳಿಸಿದ್ದು ಉಳಿಸಿದ್ದು ಚಿಟಿಕೆಯಷ್ಟೇ ಎಂದು ಅರಿಯುವುದು ಅಳಿಸುವುದು ಬೆಟ್ಟದಷ್ಟಿದೆಯೆಂದು ಹೊತ್ತಾಯಿತು ಗೊತ್ತಾಯಿತು ಬಾಳಲೆಕ್ಕಾಚಾರದಲಿ ಒಂದನೊಂದು ಕೂಡಿದರೆ ಎರಡೇ ಆಗಬೇಕಿಲ್ಲವೆಂದು ಶೂನ್ಯವೂ ಮೂಡಬಹುದೆಂದು ಹೊತ್ತಾಯಿತು ಗೊತ್ತಾಯಿತು ಭರದಿ ಹರಿದ ನದಿಯು ಧುಮುಕಿ ಕಡಲ ಸೇರಲಿದೆಯೆಂದು ತನ್ನತನವ ಕಳೆದುಕೊಂಡು ಅಲೆಅಲೆಯಲಿ ಸುಳಿಯುವುದೆಂದು ಹೊತ್ತಾಯಿತು ಗೊತ್ತಾಯಿತು ನನ್ನದೆಂಬುದೆಲ್ಲ ನನ್ನದೇ ಆಗಿರಬೇಕಿಲ್ಲವೆಂದು ಋಣಸಂದಾಯವಾಗದೆ ಬಿಡುಗಡೆಯು ಸಾಧ್ಯವೇ ಇಲ್ಲವೆಂದು ಕಿರುಪರಿಚಯ: ಹವ್ಯಾಸಿ ಬರಹಗಾರರು, […]

ಕಾವ್ಯಯಾನ

ಡಾ.ಗೋವಿಂದ ಹೆಗಡೆಯವರ ಎರಡು ಪದ್ಯಗಳು ನಕ್ಕು ಬಿಡು. ಉಂಡ ಕಹಿಗುಳಿಗೆಗಳ ತಪಸೀಲು ಬೇಕಿಲ್ಲ ಸವೆಸಿದ ಕೊರಕಲು ದಿಣ್ಣೆ ದಾರಿಗಳಿಗೆ ಎಡವಿದ ಗಾಯ ನಟ್ಟ ಮುಳ್ಳುಗಳಿಗೆ ಪುರಾವೆಯಿಲ್ಲ ಹನಿಗೂಡಿದ ಕಣ್ಣುಗಳಲ್ಲಿ ತಿರುಗಿ ನೋಡಿ ಒಮ್ಮೆ ನಕ್ಕು ಬಿಡು, ಗೆಳತಿ! ಕೂಡಿ ನಡೆದ ದಾರಿಗಳು ಬೇರಾದ ಹೆಜ್ಜೆಗಳು ಏರು ದಾರಿಯ ಕುಂಟುನಡೆ-ಗೆ ಒದಗದ ಊರುಗೋಲುಗಳು ಬೆನ್ನಿಗೆರಗಿದ ಬಾರುಕೋಲುಗಳು ಎಲ್ಲ ಅನುಭವ ಸಂತೆಯಲ್ಲೊಮ್ಮೆ ನಿಂತು ಗೆಳತೀ, ನಕ್ಕುಬಿಡು ದಾರಿ ಹೂವಿನದಲ್ಲ ನೆರಳು- ನೀರು ಸಿಗುವ ಖಾತರಿಯಿಲ್ಲ ಮುಗಿವ ಮುನ್ನ ಹಗಲು ಸೇರುವುದು […]

ಕಾವ್ಯಯಾನ

ಮೌನದ ಮಡುವಿನೊಳಗೆ ಸಂತೆಬೆನ್ನೂರು ಫೈಜ್ನಾಟ್ರಾಜ್ ಮನಸ್ಸು ನೀರಿಂದ ಹೊರಬಂದ ಮೀನು ಇಂದಿನಿಂದ ಅಲ್ಲ ಅಂದಿನಿಂದಲೂ…! ಕಾರಣವಲ್ಲದ ಕಾರಣಕ್ಕೆ ಸುಖಾ ಸುಮ್ಮನೆ ಮಾತಿಗೆ ಮಾತು ಬೆಳೆದು’ಮೌನ’ ತಾಳಿ ತಿಂಗಳ ಮೇಲೆ ಹನ್ನರೆಡು ದಿನಗಳಾದವು! ದಾಂಪತ್ಯ ಆದಾಗ್ಯೂ ನೂರಾರು ಕ್ಷಣಗಳನ್ನು ಹೇಗೆಂದರೆ ಹಾಗೆ ಎಲ್ಲೆಂದರೆ ಅಲ್ಲಿ ಸರಸದಿ ಹಾಡು ಹಳೆಯದಾದರೇನು ಎಂಬಂತೆ  ಕಳೆದಿದ್ದೂ ಒಂದು ‘ಮಾತು’ ನೂರು ಸುಖಗಳನ್ನು ಕೊಲ್ಲುತ್ತೆ ಅನ್ನೋದೆಷ್ಟು ಘಾಟು ಅಲ್ವಾ? ಜಗಳ ಆಡೋದು ಇಬ್ಬರಿಗೂ ಚಟ ಅಲ್ಲ, ಚಾಳೀನೂ ಇಲ್ಲ. ಒಣ ಅಹಂ ಇಷ್ಟು ಅಂತರ […]

ಕಾವ್ಯಯಾನ

ಆರ್ಭಟ ಅವ್ಯಕ್ತ ದಿನಕರನ ಉದಯ, ಅಳಿವಿಲ್ಲದ ಅಂಧಾಕಾರವಾಗಿದೆ, ಶಶಿಧರನ ತಂಪು, ಕೋಲ್ಮಿಂಚಿನ ಧಗೆಯಾಗಿದೆ. ನೀಲಿ ಗಗನದಲಿ ಕಾರ್ಮೋಡ ಕವಿದು ನಿಂತಿದೆ, ತಂಪು ಗಾಳಿಯಲಿ ದುರ್ಗಂಧ ಪಸರುತ್ತಿದೆ, ತಿಳಿ ನೀರಿನಲಿ ವಿಷದ ತೊಟ್ಟೊಂದು ಸೇರಿದೆ, ಹಸಿರು ತುಂಬಿರಬೇಕಾದ ನೆಲ ಬಂಜರಾಗಿ ಹೋಗಿದೆ… ಸ್ತಬ್ಧ ಶಿಲೆಗಳ ಕಣ್ಣಂಚಿನಲ್ಲಿ ಒಂದು ಹನಿ ನೀರಿಲ್ಲ, ಯಾವ ರೋಧನೆಗೂ ಕಿವಿಯೊಂದು ಒಡೆಯಲಿಲ್ಲ, ಮಿಡಿವ ಕಲ್ಲು ಚೂರಾದರೂ ಮನಕೆ ನಾಟಲಿಲ್ಲ, ದೈತ್ಯಾಕಾರದ ಭುಜಗಳಿಗೆ ವ್ಯಾಘ್ರತ್ವದ ಅರಿವಿಲ್ಲ, ಆ ಭಯಂಕರ ಆಕ್ರಂದ! ಯಾವ ಪಾಪದ ಶಿಕ್ಷೆಯೋ ಇದು, […]

ಕಾವ್ಯಯಾನ

ನನಗಿಷ್ಟವಾದ ಕವಿತೆ ಕುರಿತು. ಕವಿತೆ ಕವಿಯಿತ್ರಿ-ಪ್ರೊ. ಗೀತಾ ವಸಂತ ಯೂಸ್ ಆಂಡ್ ಥ್ರೋ ಪೆನ್ನು ಬಂದಾಗ ಸಕತ್ತು ಸಂಭ್ರಮ. ಇಂಕು ತುಂಬುವ ರೇಜಿಗೆಯಿಲ್ಲ ನಿಬ್ಬು ಕೊರೆಯುವುದಿಲ್ಲ ಬಳಸು ಬಿಸಾಕು. ಬದುಕು ಎಷ್ಟು ಸರಾಗ.. ಆಮೇಲೆ ಬಂದೇ ಬಂದವು ಯೂಸ್ ಆಂಡ್ ಥ್ರೋ ಲೋಟ ತಟ್ಟೆ ಸಿರಿಂಜು ಹೆಂಡದ ಬಾಟಲು ಸ್ಯಾನಿಟರಿ ಪ್ಯಾಡು ಕಾಂಡೋಮು ಒಳಗೊಳಗೇ ಕೊಳೆತ ಸಂಬಂಧಗಳು ಬಣ್ಣ ಬಣ್ಣದ ರ್ಯಾಪರ್ ಹೊತ್ತವು.. ಪ್ರೇಮದ ನಶೆಯೇರಿಸಿದ್ದ ಅದೇ ಪೆನ್ನು ಲೆಕ್ಕವಿಲ್ಲದಷ್ಟು ಕವಿತೆಗಳ ತಿದ್ದಿ ತೀಡಿ ತಬ್ಬಿಕೊಂಡಾಗ ಎದೆಗೊದ್ದು […]

ಗಝಲ್

ಶಾಂತ ಜೆ ಅಳದಂಗಡಿ ನೀಡೆನಗೆ ನನ್ನೊಡೆಯ ನಿನ್ನೊಲುಮೆ ಬಾಳ ಪಥದಲಿ ಆಗಲೆನಗದು ಹಿರಿಮೆ ನಿನಗಾಗಿ ಮಿಡಿಯುತಿದೆ ಸಂತಸದೆ ನಾಡಿ ಬಾಳದಾರಿಯಲಿ ಅನುಕ್ಷಣ ಸಂತಸ ದೇವನಿತ್ತ ವರದೊಲುಮೆ ಬದುಕ ದಾರಿಯಲಿ ನೀ ಮಾರ್ಗಸೂಚಿ ಸಪ್ತನಾಡಿಗಳೂ ಅರಸುತಿವೆ ದಾರಿ ದೊರೆತರದುವೆ ಮನಕೆ ಸಂತಸ ನಿನ್ನೊಲವು ಜೀವಕದು ಗರಿಮೆ ಆಸೆ ಒಲೆ ಹೂಡಿ ಹಿಡಿದು ಅಗ್ನಿ ನಾಡಿ ಪ್ರೇಮ ಪ್ರೀತಿಯ ಪಾಕ ನಿನಗಾಗಿ ಅಟ್ಟಡಿಗೆ ಉಂಡರದುವೆನಗೆ ಸಂತಸ ಗಮ್ಯ ಸೇರಲು ಇದೆ ಪಯಣವೊಮ್ಮೆ ನಡೆವ ದಾರಿಗೆ ಚೆಲ್ಲುವೆ ಮಲ್ಲಿಗೆ ನಿನಗಾಗಿ ದೃಷ್ಟಿ […]

Back To Top