Category: ಕಥಾಗುಚ್ಛ

ಕಥಾಗುಚ್ಛ

ಕಥಾಯಾನ

ಕೆಪ್ಪ ಅಂಜನಾ ಹೆಗಡೆ ಕೆಪ್ಪನ ಕಥೆ ಶುರುವಾಗುವುದು ನವರಾತ್ರಿಯಿಂದ. ನವರಾತ್ರಿಯೆಂದರೆ ಅದು ಅಂತಿಂಥ ನವರಾತ್ರಿಯಲ್ಲ. ಹಳೇಮನೆ ರಾಮಚಂದ್ರಣ್ಣನ ನವರಾತ್ರಿಯೆಂದರೆ ಯಲ್ಲಾಪುರ ತಾಲೂಕಿನಲ್ಲೆಲ್ಲ ಮನೆಮಾತಾದ ನವರಾತ್ರಿ ಅದು. ಚೌತಿ ಹಬ್ಬ ಮುಗಿದು ಇನ್ನೇನು ಹತ್ತೋ ಹದಿನೈದೋ ದಿನವಾಗುವಷ್ಟರಲ್ಲಿ ರಾಮಚಂದ್ರಣ್ಣನ ನವರಾತ್ರಿಯ ಧಾವಂತ ಶುರುವಾಗುತ್ತಿತ್ತು. ಅಟ್ಟದ ಮೇಲಿನ ಅಡಿಕೆ ಕಂಬಗಳನ್ನು ಒಂದೊಂದಾಗಿ ಕೆಳಗಿಳಿಸಿ ದೇವರಮನೆಯಲ್ಲಿ ನಿಲ್ಲಿಸುವುದರಿಂದ ಶುರುವಾಗುವ ನವರಾತ್ರಿ ಸಂಭ್ರಮ ಹಳೆಮನೆಯಲ್ಲಿ ವಿಜಯದಶಮಿಯವರೆಗೂ ಇರುತ್ತಿತ್ತು. ಅಲ್ಯೂಮಿನಿಯಂ ಬೋಗುಣಿಯೊಂದರಲ್ಲಿ ತಾನೇ ಕೈಯಾರೆ ತಯಾರಿಸಿಕೊಂಡ ಗೋಧಿಅಂಟಿನೊಂದಿಗೆ ಪ್ರತೀರಾತ್ರಿ ರಾಮಚಂದ್ರಣ್ಣ ಶಾರದೆಯ ಮಂಟಪ ರೆಡಿಮಾಡಲು […]

ಕಥಾಯಾನ

ಕಿರಿ ದೇವರಿಗೆ ಮರದ ಜಾಗಟೆ. ಕೆ.ಎನ್.ಮಹಾಬಲ ಹನ್ನೊಂದು  ಗಂಟೆಗೆ ಬಾಸ್ ನ ಕೋಣೆ ಒಳಗೆ ಹೋಗಿ ಬಂದ ಅಟೆಂಡರ್ ಸಿದ್ದಲಿಂಗು “ಬಾಸ್ ಸಿಟ್ಟಾಗಿದ್ದಾರೆ.’ಏನಯ್ಯ ನನಗೆ ಹುಷಾರಿಲ್ಲ .ನೆಗಡಿ,ತಲೆಭಾರ ಸ್ವಲ್ಪ ಜ್ವರನೂ ಬಂದಂತಿದೆ.ನೀನು ನೋಡಿದ್ರೆ ಇಷ್ಟೊಂದು ಫೈಲ್ ತಂದು ಕುಕ್ಕುತ್ತಿದ್ದೀಯಾ’ಎಂದು ರೇಗಿದರು  ಎನ್ನುತ್ತಾ ಹೊರಗೆ ಬಂದ ಸಿದ್ದಲಿಂಗು “ಈ ಸಾಹೇಬರಿಗೆ ಹುಷಾರಿಲ್ಲ  ಅಂತ ಯಾರಿಗಾದ್ರೂ ಕನಸು  ಬಿದ್ದಿರತ್ತಾ?’ ಎಂದು ಗೊಣಗಿಕೊಂಡ. ಆ ಬಾಸ್ ಗೆ ಹುಷಾರಿಲ್ವ? ಏನಂತೆ ?ಯಾವಾಗಿಂದ?ಡಿಪಾರ್ಟಮೆಂಟಿನಲ್ಲಿದ್ದ ಎಲ್ಲ ಉದ್ಯೋಗಿಗಳು ಒಟ್ಟಿಗೇ ಪ್ರತಿಕ್ರಿಯಿಸಿದರು. “ಬೆಳಿಗ್ಗೆ   ನಾನು ಅವರು ಬರೋ ಹೊತ್ತಲ್ಲಿ ಬೇರೆ ಡಿಪಾರ್ಟ್ ಮೆಂಟಿಗೆ ಹೋಗಿದ್ದೆ.ಅವರು  ಬಂದ […]

ಕಥಾಯಾನ

ಮನಸು ಮಂಜುಗಡ್ಡೆಯಲ್ಲ. ಜ್ಯೋತಿ ಗಾಂವಕರ್ “ಈಗೀಗ ಏನೂ ನಿರೀಕ್ಷೆಗಳೇ ಇಲ್ಲ ನೋಡು ಭಾವನಾತ್ಮಕ ಅವಲಂಬನೆಯೂ ಇಲ್ಲ ಆಪ್ತವಾಗಿ  ಏನೋ ಹೇಳ್ಕೊಬೇಕು ಅನ್ಸೋದೇ ಇಲ್ಲ ಎದೆ ಬಂಡೆಯಾಗ್ತಿದೆ ಅನ್ನಿಸ್ತಿದೆ “ ಅಂತ ಗೆಳತಿಯೊಬ್ಬಳು ನಿರ್ಭಾವುಕವಾಗಿ ಹೇಳಿಕೊಳ್ಳುತ್ತಿದ್ದರೆ ….. ” ಹಾಗಾದರೆ ಬಂಡೆಯ ಮೇಲಿಂದ ಇಳಿಯುವ ಜಲಪಾತದಂತಹ ಭೋರ್ಗರೆತವೇನು ? ಭಾವುಕತೆಗೆ ಹುಟ್ಟಿದ ಕಣ್ಣೀರಲ್ಲವಾ” ಅಂತ  ಹೇಳಿ ಅವಳನ್ನು ಆ ನಿರ್ಲಿಪ್ತ ಭಾವದಿಂದ ಹೊರತರುವದಕ್ಕೆ ಪ್ರಯತ್ನಿಸುತ್ತಿದ್ದೆ… “ನಿಜ ಬಿಡು ಎಷ್ಟೇ ಕಲ್ಲಾಗಿದ್ದೇವೆಂದರೂ ಈ ಹೆಣ್ಣುಮಕ್ಕಳಿಗೆ ಕರಗೋದು ಅಭ್ಯಾಸ ….ಅತಿ ಭಾವುಕತೆ […]

ಕಥಾಯಾನ

ಜುಗ್ಗ ರಾಮಣ್ಣ ಊರಲ್ಲಿ ಎಲ್ಲರೂ ರಾಮಣ್ಣನನ್ನು ಕರೆಯುತ್ತಿದ್ದುದು ಜುಗ್ಗ ರಾಮಣ್ಣ ಅಂತಲೆ. ಅವನ ಮನೆ ಇದ್ದ ಬೀದಿಯ ಉಳಿದ ಮನೆಗಳವರು ತಮ್ಮ ನೆಂಟರಿಗಾಗಲಿ, ಪರಿಚಯದವರಿಗಾಗಲಿ ಮನೆಯ ವಿಳಾಸ ಕೊಡಬೇಕಾದರೆ ಬಸ್ ಸ್ಟ್ಯಾಂಡಿನಿಂದ ದಾವಣಗೆರೆ ರಸ್ತೆಯ ಕಡೆ ನಾಲ್ಕು ಹೆಜ್ಜೆ ಬಂದು ಜುಗ್ಗ ರಾಮಣ್ಣನ ಬೀದಿ ಎಲ್ಲಿ ಬರುತ್ತೆ ಅಂತ ಯಾರನ್ನೇ ಕೇಳಿದರೂ ಸಾಕು ನಾವಿರುವ ಬೀದಿ ತೋರಿಸ್ತಾರೆ ಅಂತ. ಅಷ್ಟರಮಟ್ಟಿಗೆ ಆ ಊರಿನವರು ಆ ಹೆಸರಿಗೆ ಹೊಂದಿಕೊಂಡು ಬಿಟ್ಟಿದ್ದರು. ಇದು ರಾಮಣ್ಣನ ಮನೆಯವರಿಗಷ್ಟೆ ಅಲ್ಲದೆ ಸ್ವತ: ರಾಮಣ್ಣನಿಗು […]

ಕಥಾಯಾನ

ಮಧುವಂತಿ ಅಂಜನಾ ಹೆಗಡೆ “ನೀನ್ಯಾಕೆ ಮದ್ವೆ ಆದೆ?” ರಜನಿ ಅವಿನಾಶನನ್ನು ಭೇಟಿಯಾದಾಗ ಕೇಳಿದ ಮೊದಲನೇ ಪ್ರಶ್ನೆ ಇದು. ಬೆಂಗಳೂರಿನ ಲಾ ಕಾಲೇಜೊಂದರ ಉಪನ್ಯಾಸಕ ಅವಿನಾಶ ಅವನ ಅಸಂಬದ್ಧ ಮಾತುಕತೆಗಳಿಂದ, ನಡೆವಳಿಕೆಯಿಂದ ರಜನಿಗೆ ಉಪನ್ಯಾಸಕ ಅಂತ ಅನ್ನಿಸುತ್ತಲೇ ಇರಲಿಲ್ಲ. ವಾರದ ಐದೂ ದಿನ ಬೆಳಗಿನ ಕ್ಲಾಸು ಮುಗಿಸಿ, ಊಟ ಮಾಡಿ ಮಲಗಿ ಎದ್ದವ ರಜನಿಗೊಂದು ಫೋನ್ ಮಾಡುವುದು ಅವಿನಾಶನ ದಿನಚರಿಗಳಲ್ಲೊಂದು. ಇವತ್ತು ಕ್ಲಾಸಲ್ಲಿ ಹಾಗಾಯ್ತು ಹೀಗಾಯ್ತು , ಹುಡುಗಿಯೊಬ್ಬಳು ಪಾಠ ಮಾಡುವಾಗ ನನ್ನನ್ನೇ ನೋಡ್ತಾ ಇದ್ಲು ಅಂತೆಲ್ಲ ಅವಿನಾಶ […]

ಕಥಾಯಾನ

ಮನದ ಮುಗಿಲ ಹಾದಿ ರೇಶ್ಮಾ ಗುಳೇದಗುಡ್ಡಾಕರ್ ಕುಸುಮಾ- ಸರಳ ರೂಪ ,ಯಾವ ಹಮ್ಮು ಬಿಮ್ಮುಗಳಿಗೆ ಅವಳಲ್ಲಿ ಜಾಗವಿರಲಿಲ್ಲ  . ಬ್ಯಾಂಕ್ ಒಂದರ ಉದ್ಯೋಗ. ಪ್ರತಿಷ್ಠಿತ ಕಂಪನಿಯಲ್ಲಿ ಉನ್ನತ ಹುದ್ದೆ ಯ ಪತಿ ಅತ್ತೆ-ಮಾವನ ಒಬ್ಬನೇ ಮಗ. ಮುಂದಿನ ಬೀದಿಯಲ್ಲಿ ನಾದಿನ ಮನೆ ಸ್ಥಿತಿ ವಂತ ಕುಟುಂಬ . ಮದುವೆಯಾಗಿ ಹತ್ತು ವರ್ಷ ಕಳೆದರೂ ಅವಳಿಗೆ ಮಗುವಿನ ಭಾಗ್ಯ ಇರಲಿಲ್ಲ . ಇದಕ್ಕೆ ಅವಳಲ್ಲಿ ಯಾವ ದೋಷವು ಇರಲಿಲ್ಲ..!!! . ತನ್ನಲ್ಲಿ ಇಲ್ಲದ ತಪ್ಪಿಗೆ ಅವಳಲ್ಲಿ ಮಾಗಲಾರದ ಗಾಯವಾಗಿ  […]

ಕಥಾಯಾನ

ಸಂಬಂಧಗಳ ನವೀಕರಣ ಸುಧಾ ಹೆಚ್.ಎನ್ ನನ್ನಿಂದ ಆಗಲ್ಲ ಮೇಡಂ, ನನಗೆ ಅವನ ಜೊತೆ ಹೆಂಡತಿತರ ಸಂಸಾರ  ಮಾಡಕ್ಕೆ ಸಾಧ್ಯನೇ ಇಲ್ಲ,ನನಗೆ ಡೈವರ್ಸ್ ಬೇಕು” ಅಂದಳು ಹುಡುಗಿ. ಇಪ್ಪತ್ತೊಂದರ ಹರೆಯದ ಲಕ್ಷಣವಾದ ವಿದ್ಯಾವಂತೆ.       ತಾಯಿಯನ್ನು ಕಳೆದುಕೊಂಡು ತಂದೆಯ ಆನಾದಾರಕ್ಕೊಳಗಾಗಿ ಅನಾಥವಾಗಿದ್ದ ಎರಡು ವರ್ಷದ, ಈ ಹುಡುಗಿಯನ್ನು ಮೊಮ್ಮಗಳ ನಾಥೆಯಿಂದ ಮಡಿಲಿಗೆ ಹಾಕಿಕೊಂಡಿದ್ದಳು,ತಾಯಿಯ ತಾಯಿ ಅಂದರೆ ಅಜ್ಜಿ. ಅಜ್ಜಿ…ಮತ್ತವಳ ಹುಟ್ಟು ಕುರುಡ ಮಗನೇ ಇವಳ ಬಂದು-ಬಳಗ ಎಲ್ಲಾ,ಅಜ್ಜಿ ಹೊಲ, ಮನಿ ಚಾಕರಿ ಎಂದು ಬಿಡುವಿಲ್ಲದೆ ದುಡಿಯುತ್ತಿದ್ದರೆ,ಹುಡುಗಿಗಿಂತ […]

ಕಥಾಯಾನ

ಅಂಜಲಿ ಜ್ಯೋತಿ ಬಾಳಿಗ  ಇಂಜಿನಿಯರಿಂಗ್ ಕೆಲಸದ ನಿಮಿತ್ತ  ಅಮೇರಿಕಾಕ್ಕೆ ಹೋದ ಅಂಜಲಿ ‘ವೀಸಾ’ ರಿನಿವಲ್ ಗಾಗಿ ಮತ್ತೆ ಭಾರತಕ್ಕೆ ಬಂದಿದ್ದಳು. ಬೆಂಗಳೂರು ವಿಮಾನ ನಿಲ್ದಾಣದಿಂದ ಮೊದಲೇ ಕಾಯ್ದಿರಿಸಿದ ‘ಪಂಚತಾರಾ’ ಹೊಟೇಲ್ ಗೆ ಹೋಗಿ ಫ್ರೆಶ್ ಆಗಿ ತನ್ನ ಗೆಳತಿಯನ್ನು ಭೇಟಿ ಮಾಡಬೇಕೆಂದು ವೆರೆಂಡಾದ ಬಳಿ ಬಂದಾಗ ತನ್ನ ಗತ ಜೀವನದ ಭಾಗವಾಗಿರುವ ವ್ಯಕ್ತಿಯನ್ನು ಹೊಟೇಲ್ ‌ನ ಪಾರ್ಕಿಂಗ್ ನಲ್ಲಿ ನೋಡಿದೊಡನೆ ಭಯದಿಂದ ಕಂಪಿಸತೊಡಗಿದಳು. ತಾನು ಯಾರನ್ನು ಜೀವನದುದ್ದಕ್ಕೂ  ನೋಡಬಾರದು ಅಂದುಕೊಂಡಿದ್ದಳೋ ಆ ವ್ಯಕ್ತಿಯ ಆಗಮನವು,ಅವಳ ಬದುಕನ್ನು ಮತ್ತೊಮ್ಮೆ […]

ಕಥಾಯಾನ

 ಒಂದು ಹನಿ ನೀರಿನ ಕಥೆ ಜ್ಯೋತಿ ಬಾಳಿಗಾ ಸದಾಶಿವ ರಾಯರಿಗೆ ಆರೋಗ್ಯದಲ್ಲಿ ತೊಂದರೆ ಆಗಿ ಆಸ್ಪತ್ರೆಗೆ ಸೇರಿಸಿದ್ದಾರಂತೆ. ಹಳ್ಳಿಯಿಂದ ನಿನ್ನ ಮಾವನ ಪೋನು ಬಂದಿತ್ತು ಸಚಿನ್. ರಾಯರು ಹೇಗಿದ್ದಾರೆ ಅಂತ ಒಮ್ಮೆ ನೋಡಿಕೊಂಡು ಬರೋಣ ಅಂದರೆ ಅಷ್ಟು ದೂರ ಪ್ರಯಾಣ ನನ್ನಿಂದ ಸಾಧ್ಯವಿಲ್ಲ ಮಗನೇ….ನಿನ್ನ ವಿದ್ಯಾಭ್ಯಾಸಕ್ಕೆ ತುಂಬಾ ಸಹಾಯ ಮಾಡಿದ್ದಾರೆ ರಾಯರು. ನೀನಾದರೂ ಅವರ ಬಗ್ಗೆ ವಿಚಾರಿಸಿಕೊಂಡು ಬಾ ಎಂದು ಅಪ್ಪಾಜಿ ಹೇಳಿದಾಗ,ಆಸ್ಪತ್ರೆ ಎಂದರೆ ಮಾರು ದೂರ ಓಡುವ ನನಗೆ ಏನು ಮಾಡುವುದೆಂದು ತಿಳಿಯದೇ ಹುಂಗುಟ್ಟಿದೆ. ಊರಿಗೆ […]

ಕಥಾಯಾನ

ಸುನಂದಾಬಾಯಿ ಕೊಡ ಮಲ್ಲಿಕಾರ್ಜುನ ಕಡಕೋಳ ಸುತ್ತ ನಾಕಿಪ್ಪತ್ತು ಹಳ್ಳಿಗಳಲ್ಲಿ ಅವರ  ಬಡತನ ಪ್ರಸಿದ್ದವಾಗಿತ್ತು.  ತಲೆಮಾರುಗಳಿಂದ ಶೀಲವಂತರ  ಸುನಂದಾಬಾಯಿ ಭಗವಂತ್ರಾಯ  ದಂಪತಿಗಳು ಪಡೆದುಕೊಂಡ  ಆಸ್ತಿಯೆಂದರೆ ಕಿತ್ತುತಿನ್ನುವ ಬಡತನ.  ಅದನ್ನೇ ಹಾಸುಂಡು ಬೀಸಿ  ಒಗೆಯುವಂತಿತ್ತು. ಅವರೂರು  ಮಾತ್ರವಲ್ಲ. ಸುತ್ತ ಹತ್ತಾರು ಹಳ್ಳಿಯ ಮಂದಿ ಘೋರ ಬಡತನದ ಬಗ್ಗೆ  ಮಾತಾಡುವಾಗ ಶೀಲವಂತರ ಭಗಂತ್ರಾಯರ ಬಡತನ ಉಲ್ಲೇಖಿಸದೇ ಇರಲಿಕ್ಕೆ  ಸಾಧ್ಯವಿರುತ್ತಿರಲಿಲ್ಲ.   ಅವರು ಉಪವಾಸದ ದಿನಗಳನ್ನು  ನೆನಪಿಡುತ್ತಿರಲಿಲ್ಲ., ಅಂಬಲಿ ಕುಡಿದ  ದಿನಗಳನ್ನು ನೆನಪಿಡುತ್ತಿದ್ದರು. ಈ  ದಿನಗಳೇ ಅಪರೂಪ. ಸಜ್ಜೆ ಹಿಟ್ಟಿನ  ಗಂಜಿಗೆ ರುಚಿ ಬರಲೆಂದು ಸೇರಿಸಲು  ” ಉಪ್ಪಿಗೂ ” ಅವರಲ್ಲಿ ಬಡತನವಿತ್ತು.  ಅಂತೆಯೇ ಉಪವಾಸದ ದಿನಗಳೇ  ಹೇರಳ. ಗಂಜಿ ಕುಡಿದ ದಿನಗಳೇ ವಿರಳ. ಸುನಂದಾಬಾಯಿಗೆ ಜಾಂಬಳ ಬಣ್ಣದ  ಒಂದೇ ಒಂದು ಸೀರೆ ಇತ್ತು. ಮೈ ಮೇಲಿನ  ಆ ಒಂದು ಸೀರೆಯನ್ನು ಜಳಕ  ಮಾಡುವಾಗ ಅರ್ಧರ್ಧ ತೋಯಿಸುತ್ತಾ ಒಣಗಿಸಿಕೊಳ್ಳುತ್ತಿದ್ದಳು. ಅಷ್ಟಕ್ಕೂ ಆಕೆ ಹೊಲಕ್ಕೆ ಹೋದಾಗ ನಿರ್ಜನ ಕರ್ಮನಹಳ್ಳದಲ್ಲಿ ಜಳಕ ಮಾಡುತ್ತಿದ್ದಳು. ಕೂಲಿನಾಲಿ ಮಾಡುವಾಗ ಸೀರೆ, ಗಿಡಗಂಟಿಗಳಿಗೆ ತಾಗದಂತೆ ಮತ್ತು ಕುಂತೇಳುವಾಗ  ಜಿಗಿಸತ್ತ ಸೀರೆ ಟಸಕ್ಕನೆ ಹರಿದು  ಹೋಗದಂತೆ ಕಟ್ಟೆಚ್ಚರ ವಹಿಸುತ್ತಿದ್ದಳು. […]

Back To Top