ಉಯ್ಯಾಲೆ
ಟಿ.ಎಸ್.ಶ್ರವಣಕುಮಾರಿ ಉಯ್ಯಾಲೆ ಉಯ್ಯಾಲೆ ಈಗಾರು ತಿಂಗಳಿನಿಂದಲೂ ಸೀತಕ್ಕನಿಗೆ ಅಷ್ಟು ಅರಾಮಿಲ್ಲ. ದಿನಕ್ಕೊಂದೊಂದು ತೊಂದರೆ. ಡಾಕ್ಟರಿಗೆ ತೋರಿಸಿಯೂ ಏನೂ ಪ್ರಯೋಜನವಾಗಿಲ್ಲ. ಅವರ ಪ್ರಕಾರ ವಯಸ್ಸಾಗಿರುವುದನ್ನು ಬಿಟ್ಟರೆ ಬೇರೇನೂ ಇಲ್ಲ. ಆದರೆ ಸೀತಕ್ಕನಿಗೆ ಮಾತ್ರಾ ದಿನದಿಂದ ದಿನಕ್ಕೆ ನಿತ್ರಾಣ. ಐವತ್ತು ಜನ ಬಂದರೂ ಹೆದರದೆ ಅಡುಗೆ ಮಾಡುತ್ತಿದ್ದವಳಿಗೆ ಈಗ ಐದು ಜನಕ್ಕೂ ಮಾಡಲೂ ಸಾದ್ಯವಾಗದಂತಾಗಿದೆ. ಈಗೊಂದು ತಿಂಗಳಿನಿಂದಂತೂ ಪೂರಾ ಹಾಸಿಗೆ ಹಿಡಿದು ಬಿಟ್ಟಿದ್ದಾಳೆ. ಶಾಮಿ, ಸರಳನೂ ತಮ್ಮ ಕೈಲಾದ್ದೆಲ್ಲಾ ಮಾಡುತ್ತಿದ್ದಾರೆ. ಸೀತಕ್ಕನಿಗೋ, ಹುಶಾರು ತಪ್ಪಿದಾಗಿನಿಂದಾಗಲೂ ಮಕ್ಕಳಿಗಾಗಿ ಹಂಬಲಿಸುವಂತಾಗಿದೆ. ಅವರೇನು ಹತ್ತಿರ […]
ಯಾರೂ ಓದದೆಯೇ ಹೋದ ಕತೆ…
ಟಿ.ಎಸ್.ಶ್ರವಣ ಕುಮಾರಿ ಯಾರೂ ಓದದೆಯೇ ಹೋದ ಕತೆ… ಇದೋ ಅತ್ಯಂತ ಜನನಿಬಿಡವಾದ ಮಾರುಕಟ್ಟೆ ಪ್ರದೇಶ. ಈ ಮಾರುಕಟ್ಟೆ ಸಂಕೀರ್ಣ ಮತ್ತು ಅದರ ಸುತ್ತಮುತ್ತಲಿನ ಅಂಗಡಿಗಳಲ್ಲಿ ಮಾರದ, ಸಿಗದ ವಸ್ತುವೇ ಇಲ್ಲ ಎಂದುಕೊಳ್ಳಿ. ಸಣ್ಣ ಪುಟ್ಟ ಸಾಸುವೆ, ಪಿನ್ನು ಇಂತಹ ವಸ್ತುಗಳನ್ನು ಮಾರುವ ಅಂಗಡಿಗಳಿಂದ ಹಿಡಿದು ಕಾರು, ರಿಯಲ್ ಎಸ್ಟೇಟ್ ಏಜೆನ್ಸಿಯಂತ ದೊಡ್ಡ ವಹಿವಾಟುಗಳೂ ಇಲ್ಲಿವೆ. ಇವೆಲ್ಲವೂ ಇಲ್ಲಿದೆ ಎಂದ ಮೇಲೆ ಇವನ್ನೆಲ್ಲಾ ಮಾರುವವರು, ಕೊಳ್ಳುವ ಗಿರಾಕಿಗಳು, ಸರಕನ್ನು ಹೊರುವ ಹಮಾಲಿಗಳು, ಸಾಗಿಸುವ ಚಾಲಕರು, ವ್ಯವಹಾರವನ್ನು ಕುದುರಿಸುವ ದಲ್ಲಾಳಿಗಳು, ಪಾರ್ಕಿಂಗ್ ಕಾಸು ವಸೂಲಿ ಮಾಡುವ ಹುಡುಗರು, ಇವೆಲ್ಲ ವ್ಯವಹಾರಗಳನ್ನು ನೋಡಿ ಮಜಾ ತೆಗೆದುಕೊಳ್ಳುವ, ಅಂದಿನ […]
ಕಥಾಗುಚ್ಛ
ವಿಧಿ! ಆರ್.ಸುನೀಲ್ ತರೀಕೆರೆ ರಂಗಪ್ಪನ ಮನೆ ಮುಂದೆ ಬೆಂಕಿ ಬಿದ್ದ ಸುದ್ದಿ ಊರಲ್ಲೆಲ್ಲಾ ಐದೇ ನಿಮಿಷಕ್ಕೆ ಹರಡಿಹೋಯಿತು.ಆ ಸುದ್ದಿ ನನ್ನ ಕಿವಿಗೂ ಬಿದ್ದ ಕ್ಷಣದಿಂದ ಮನಸ್ಸು ವ್ಯಾಕುಲಗೊಳ್ಳತೊಡಗಿತು.ಛೇ..ಅಂತೂ ಇಂತೂ ರಂಗಪ್ಪ ಹೋಗ್ನಿಟ್ಟ.! ಬದುಕಿದ್ದಾಗ ಅವನು ಪಟ್ಟ ಪಾಡು ನೆನೆಸಿಕೊಂಡು ಸಅಯ್ಯೋ ಅಂತ ಒಂದು ಕಡೆ ಅನ್ನಿಸತೊಡಗಿದರೆ ಮತ್ತೊಂದು ಕಡೆ ಬಿಡು ಅವನು ಹೋದದ್ದು ಒಳ್ಳೆಯದೇ ಆಯಿತು ಇಲ್ಲದಿದ್ದರೆ ಪಾಪ ಇನ್ನೂ ನೋವು ಅನುಭವಿಸುತ್ತಿದ್ದ.ಏನ್ ಈಗಾಗ್ಲೇ ಕಮ್ಮೀ ನೋವು ಅನುಭವಿಸಿದ್ದಾನಾ ಅವ್ನು..?!ಇಷ್ಟು ದಿನ ಅವ್ನು ಬದುಕಿದ್ದೂ ಸತ್ತಂಗೆ ತಾನೇ […]
ಕಥಾಗುಚ್ಛ
ಜೀವನವೆಂದರೆ ಹೀಗೇನೆ ಟಿ.ಎಸ್.ಶ್ರವಣಕುಮಾರಿ ಪುಟ್ಟ ದೀಪೂಗೆ ಇವತ್ತು ಶಾಲೆಯಿಂದ ಬರುವಾಗಲೇ ಎರಡು ರೆಕ್ಕೆ ಹುಟ್ಟಿಕೊಂಡು ಬಿಟ್ಟಿತ್ತು. ಯಾವಾಗಲೂ ತನ್ನನ್ನು ಎರಡನೆಯ ಸ್ಥಾನಕ್ಕೆ ತಳ್ಳುತ್ತಿದ್ದ ಪುನೀತನನ್ನು ಅವನು ಎರಡನೆಯ ಸ್ಥಾನಕ್ಕೆ ಕಳಿಸಿ ತಾನು ಅವನ ಜಾಗದಲ್ಲಿ ಹೆಮ್ಮೆಯಿಂದ ನಿಂತಿದ್ದ. ಟೀಚರ್ ಮಾರ್ಕ್ಸ್ ಕಾರ್ಡ್ ಕೊಡೋವಾಗ ಪುನೀತನ ಮುಖ ನೋಡ್ಬೇಕಿತ್ತು. `ತಾನೇ ಫಸ್ಟ್ ಬರೋದು ಅನ್ನೋ ಜಂಭ… ಬೀಗ್ತಾ ಎಲ್ಲರ ಕಡೆ ನೋಡ್ತಾ ಇದ್ದ. ಆದರೆ ತನ್ನ ಹೆಸರು ಹೇಳಿದ ತಕ್ಷಣ ಅವನ ಮುಖ ಹೇಗಾಗಿ ಹೋಯಿತು…. ಹಾ! ಹಾ! […]
ಲಹರಿ
ಖಾಸಗಿ ಬಸ್ ಪಯಣ ಜಿ.ಹರೀಶ್ ಬೇದ್ರೆ ಇದು ನಿಮ್ಮ ಗಮನಕ್ಕೆ ಬಂದಿದೆಯೋ ಇಲ್ಲವೋ ಗೊತ್ತಿಲ್ಲ. ಇದನ್ನು ಓದಿದ ಮೇಲಾದರೂ ಗಮನಿಸಿ, ನಾನು ಹೇಳಿದ್ದು ನಿಜವೆನಿಸಿ ನೀವು ನಗದಿದ್ದರೆ ಹೇಳಿ. ಅಂಥಹ ವಿಚಾರ ಏನೂ ಅಂತೀರಾ, ಅದೇ ಬಸ್ಸಗಳು ಹಾಗೂ ಅದರಲ್ಲಿನ ಸಂಚಾರ. ಅದರಲ್ಲಿ ಸಿಗುವ ವಿವಿಧ ರೀತಿಯ ಅನುಭವಗಳು. ನೋಡಿ ಸರ್ಕಾರಿ ಬಸ್ಸುಗಳು ತುಂಬಾ ಗೌರವಸ್ಥ ಹೆಣ್ಣಿನಂತೆ ನಿಲ್ದಾಣಕ್ಕೆ ಬಂದು ಊರಿಂದ ಊರಿಗೆ ಹೋದರೆ, ಖಾಸಗಿ ಬಸ್ಸುಗಳು ಆಗ ತಾನೇ ಪ್ರಾಯಕ್ಕೆ ಬಂದ ಹುಡುಗಿ ಎಲ್ಲರೂ ತನ್ನನೇ […]
ಕಥಾಗುಚ್ಛ
ವೃದ್ದಾಶ್ರಮ ಎಂಬ ಬೆಳಕು. ಸುಮಾ ಉಮೇಶ್ ಗೌಡ ಮೊಮ್ಮಕ್ಕಳು ಶಾಲೆಗೆ ಹೋದ್ರು, ಮಗ ಸೊಸೆ ಕೆಲಸಕ್ಕೆ ಹೋದ್ರು, ಬಾಗಿಲು ಭದ್ರ ಪಡಿಸಿದ ರಾಯರು ಪತ್ನಿಯ ಫೊಟೋ ನೋಡುತ್ತಾ ಕುಳಿತರು ಏಕಾಂಗಿ ಆಗಿ… ಗಂಡು ಎಷ್ಟೆ ದರ್ಪದಿಂದ ಇದ್ರು ಪತ್ನಿ ಮರಣಿಸಿದ ಮೇಲೆ ಹಲ್ಲು ಕಿತ್ತ ಹಾವಿನಂತೆ, ಯಾರಿಗೆ ಬುಸುಗುಡಿದ್ರು ಹೇದರಿಕೊಳ್ಳೊರು ಯಾರು..? ರಾಯರ ಬದುಕು ಇದಕ್ಕೆ ಹೊರತಾಗಿರಲಿಲ್ಲ… ಸದಾ ಚಟುವಟಿಕೆ ಇಂದ ಇರುವ ರಾಯರಿಗೆ, ನಿವೃತ್ತಿ ಅನ್ನೋದೇ ಶಾಪವಾದ್ರು, ಪತ್ನಿಯ ನಗು ಮುಖ, ಹುಸಿ […]
ಸಣ್ಣಕಥೆ
ಪ್ರೀತಿ ಆನಂದ್ ಕೊರಟಿ ಆಫೀಸಿಗೆÉ ತಡವಾಗುತ್ತಿದೆ, ಬೇಗ ಹೋಗಬೇಕು…’ ಅವನು ತನ್ನ ಕೋಟನ್ನು ಭುಜದ ಮೇಲೆ ಹಾಕಿಕೊಳ್ಳುತ್ತಾ ಜೋರಾಗಿ ಹೇಳಿದ. ಮೆಟ್ಟಿಲುಗಳನ್ನು ಇಳಿದು ಮನೆಯಿಂದ ಹೊರಗೆ ಓಡುತ್ತಾ ಹೊರಟ. ಅವನು ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದಂತೆ, ಅವಳು ಓಡುತ್ತಾ ಮೆಟ್ಟಿಲಿಳಿದು ಬಂದಳು. ‘ತಡಿ, ತಡಿ….’ ಎಂದು ಕೂಗಿದಳು, ಆದರೆ ಅಷ್ಟರಲ್ಲಿ ಅವನು ಹೊರಟು ಹೋಗಿದ್ದ. ಅವಳ ಮುಖ ಮುದುರಿದ ಕಾಗದದಂತೆ ಆಯಿತು. ‘ಅವನು ಹೋಗುವಾಗ ನನಗೆ ಮುತ್ತಿಕ್ಕುವುದನ್ನು ಮರೆತ’ ತನಗೆ ಆದ ನೋವಿನಿಂದ ನಡುಗುವ ಧ್ವನಿಯಲ್ಲಿ ಪಿಸುಗುಟ್ಟಿದಳು. ಅವಳು […]
ಕಥಾಗುಚ್ಛ
ಜಿ.ಹರೀಶ್ ಬೇದ್ರೆ ಯಾಣ ಬಿಸಿಲು ಬೆವರಿಗೆ ಹೊಂದಿಕೊಂಡು ಬೆಳೆದಿದ್ದ ಮೈಮನಗಳಿಗೆ ಮೊದಲ ಬಾರಿಗೆ ಥರಗುಟ್ಟುವ ಚಳಿಯಲ್ಲಿ ಹೊದೆಯಲು ಏನೂ ಇಲ್ಲದೆ ರಾತ್ರಿಯೆಲ್ಲಾ ಮುದುಡಿಕೊಂಡೇ ಮಲಗಿ, ಪುಣ್ಯಾತ್ಮರ ಮನೆಯೊಂದರಲ್ಲಿ ತಾಮ್ರದ ಹಂಡೆಯಲ್ಲಿ ಹದವಾಗಿ ಕಾಯಿಸಿದ ನೀರನ್ನು ಸ್ನಾನ ಮಾಡುವ ಅವಕಾಶ ಸಿಕ್ಕಿತು. ಒಮ್ಮೆ ಹಬೆಯಾಡುವ ಬಿಸಿನೀರು ಮೈಮೇಲೆ ಬಿದ್ದೊಡನೆ ಹಿಂದಿನ ದಿನ ನಡೆದೂ ನಡೆದು ಸುಸ್ತಾಗಿದ್ದ ನೋವೆಲ್ಲಾ ಅರ್ಧ ಮಾಯವಾದಂತಾಗಿತ್ತು. ಬಚ್ಚಲು ಮನೆಯೂ ಹಿಂಭಾಗದಲ್ಲಿ ಇದದ್ದರಿಂದ ಎಲ್ಲರೂ ಸ್ನಾನ ಆಗುವ ತನಕ ಅಲ್ಲೇ ಹಿಂದೆ ಗಿಡಮರಗಳನ್ನು ನೋಡುತ್ತಾ, ಮಾತನಾಡುತ್ತಾ […]
ನ್ಯಾನೊ ಕಥೆಗಳು
ಅಂಬ್ರೀಶ್ ಎಸ್ ಹೈಯ್ಯಾಳ್… ಒಂದು– ಬರಗಾಲದಿಂದ ತತ್ತರಿಸಿದ ಜನ ದೇವರ ಮೊರೆ ಹೋದರು. ಮಳೆ ಬರಲೆಂದು ಪ್ರಾರ್ಥಿಸಿದರು. ಆದರೆ ದೇವಸ್ಥಾನದಲ್ಲಿ ಪೂಜಾರಿಯಿಂದ ಪ್ರತಿದಿನವೂ ದೇವರನ್ನು ನೀರಿನಿಂದ ತೊಳೆದು ಹಾಲು ತುಪ್ಪದ ಅಬಿಷೇಕ ಜರಗುತಿತ್ತು. ಎರಡು– ಅದು ಬೇಸಿಗೆ ಸಮಯ.ಅಲ್ಲೊಂದು ಉದ್ಯಾನವನದಲ್ಲಿ. ನೀರಿನ ಕಾರಂಜಿಯಾಟದ ಕಾರ್ಯಕ್ರಮ ಏರ್ಪಾಡಾಗಿತ್ತು. ಹೊಮ್ಮಿಸುವ ಸಂಗೀತಕ್ಕೆ ಬಣ್ಣ ಬಣ್ಣದ ನೀರಿನ ಕಾರಂಜಿ ನೃತ್ಯವಾಡುತಿತ್ತು. ಆದರೆ ಅಲ್ಲಿ ನೋಡುತ್ತಾ ಕುಳಿತ ಪ್ರೇಕ್ಷಕರು ಬಾಯಾರಿಕೆಯಾಗಿ ನೀರಿಲ್ಲದೆ ಪರದಾಡುತಿದ್ದರು. ಮೂರು– ಅಲ್ಲೊಂದು ಕಾಡು. ಕಾಡಿನ ಮದ್ಯೆ ಹರಿಯುವ ನದಿಯೊಂದು […]
ಕಥಾಗುಚ್ಛ
ಹಬ್ಬ ಪ್ರೀತಿಯನ್ನು ಹಬ್ಬಿದರೆ ಸುಮಂಗಳ ಮೂರ್ತಿ ಬಾನುಮತಿ ಈ ಸಾರಿ ವಿಜಯದಶಮಿಯನ್ನು ವಿಶೇಷವಾಗಿ ಆಚರಿಸಬೇಕು, ಅದು ನಮ್ಮ ಕುಟುಂಬದವರಿಗೆ ಮತ್ತು ಬಂದ ಬಂಧು ಬಳಗದವರಿಗೆ ಖುಷಿ ಕೊಡುವ ಹಾಗೆ ಇರಬೇಕು,ಎಂದು ಯೋಚಿಸುತ್ತಿದ್ದ ಅವಳು,ಖರ್ಚಿನ ಬಗ್ಗೆಯೂ ನಿಗಾವಹಿಸಬೇಕಿತ್ತು. ಅವಳು ಒಂದು ಮಧ್ಯಮವರ್ಗದ ಕುಟುಂಬಸ್ಥೆ ಎನ್ನುವುದು ಮರಿಯೋ ಆಗಿಲ್ಲ . ಬಾನುಮತಿಗೆ ಮದುವೆಯಾದ ನಂತರದ ಮೊದಲನೇ ವಿಜಯದಶಮಿ, ಹಾಗಾಗಿ ಗಂಡನ ಮನೆಯ ಪದ್ಧತಿಗಳು ಅವಳಿಗೆ ಅಷ್ಟಾಗಿ ಏನು ತಿಳಿದಿರಲಿಲ್ಲ. ಆ ಕಾರಣದಿಂದ ಅವಳ ಅತ್ತೆಯ ಸಲಹೆ ಕೇಳಿ ಅವರ […]