ಮುಗಿಲ ಮಲ್ಲಿಗೆ
ಕಥೆ ಮುಗಿಲ ಮಲ್ಲಿಗೆ ರೂಪಕಲಾ ಕೆ.ಎಂ. ಕತ್ತಲೆಯ ಸೆರಗನ್ನು ಹೊದ್ದು ಮಲಗಿದ್ದ ರಸ್ತೆಯಲ್ಲಿ, ವೇಗವಾಗಿ ಚಲಿಸುತ್ತಿದ್ದ ಬಸ್ಸು.. ಅದಕ್ಕಿಂತಲೂ ವೇಗದಲ್ಲಿ ಓಡುತ್ತಿತ್ತು ಹರೀಶನ ಮನಸ್ಸು. ಆಗಾಗ ಎದುರಾಗುವ ವಾಹನಗಳ ಬೆಳಕು ಬಂದು ಕಣ್ಣಿಗೆ ಹೊಡೆದರೂ, ಮನಸ್ಸು ಮಾತ್ರ ಕತ್ತಲೆಯ ಗೂಡಾಗಿತ್ತು.. ಪಕ್ಕದ ಸೀಟಿನಲ್ಲಿ ರಾಧಿಕ ಗಾಢವಾದ ನಿದ್ರೆಯಲ್ಲಿದ್ದಳು.. ಬಸ್ಸಿನ ಪ್ರಯಾಣದಲ್ಲಿಯೂ ಗೊರಕೆ ಹೊಡೆಯುತ್ತ ಮಲಗಿದ್ದ ಸಹ ಪ್ರಯಾಣಕರನ್ನು ನೋಡಿ, ‘ಚಿಂತೆಯಿಲ್ಲದವರೆಗೆ ಸಂತೆಯಲ್ಲೂ ನಿದ್ರೆಯಂತೆ’ ಅನ್ನೊ ಮಾತು ಅವನಿಗೆ ನೆನಪಾಯಿತು.. ಅವನ ಮನ ಪದೇ ಪದೆ ಪ್ರದೀಪನನ್ನೇ ಮೆಲಕು […]
ಮರಳಿ ತವರಿಗೆ
ಸಣ್ಣ ಕಥೆ ಮರಳಿ ತವರಿಗೆ ನಾಗರಾಜ್ ಹರಪನಹಳ್ಳಿ ಕರೋನಾ ಕಾರಣವಾಗಿ ತವರು ಮನೆಗೆ ಕೊಲ್ಲಾಪುರ ದಿಂದ ಬಂದಿದ್ದ ರೋಶನಿ ತನ್ನೆರಡು ಮಕ್ಕಳೊಂದಿಗೆ ಹೈಸ್ಕೂಲ್ ಗೆಳತಿ ಶರ್ಮಿತಾಳನ್ನು ಕಾಣಲು ಹೊರಟಳು.ಮಲೆ ನಾಡಿನ ಒಂಟಿ ಮನೆಗಳು ಅಡಿಕೆ ತೆಂಗು ಹಾಗೂ ಕಾಡಿನ ಮರಗಳ ಮಧ್ಯೆ ಅಡಗಿರುವುದೇ ಹೆಚ್ಚು. ಶರ್ಮಿತಾಳ ತಾಯಿ ಮನೆ ಎದುರು ದನಗಳಿಗೆ ಕರಡ ಬೆಳೆಯಲು ಬಿಟ್ಟಿದ್ದ ಬಯಲು ಭೂಮಿ , ಜೂನ್ ತಿಂಗಳು ಎರಡು ವಾರ ಸುರಿದ ಮಳೆಯ ಕಾರಣ , ಅದಾಗಲೇ ಹಸಿರಾಗಿ ಇತ್ತು. ಮೊದಲ […]
ದನ ಕಾಯೋದಂದ್ರ ಏನ ಮ್ಮ
ಕಿರುಗಥೆ ದನ ಕಾಯೋದಂದ್ರ ಏನಮ್ಮ ರಶ್ಮಿ .ಎಸ್. ಅರ್ನಿ, ಹೋಂವರ್ಕ್ ಮಾಡಿಲ್ಲ… ಇಲ್ಲಮ್ಮ… ಮಾಡಾಂಗಿಲ್ಲ? ಇಲ್ಲಮ್ಮ… ಆಯ್ತು ಹಂಗಾರ… ನಾಳೆಯಿಂದ ಸಾಲೀಗೆ ಹೋಗಬ್ಯಾಡ… ದನಾ ಕಾಯಾಕ ಹೋಗು… ದನಾ ಕಾಯೂದಂದ್ರೇನಮ್ಮ.. ದನಾ ಕಾಯೂದಂದ್ರ ಒಂದು ನಾಲ್ಕು ಎಮ್ಮಿ ಕೊಡಸ್ತೀನಿ. ಎಮ್ಮಿ ಎಲ್ಲೆಲ್ಲಿ ಅಡ್ಡಾಡ್ತಾವ ಅಲ್ಲೆಲ್ಲ ಅದರ ಹಿಂದ ಹಿಂದೇ ಅಡ್ಯಾಡಬೇಕು. ಶಗಣಿ ಹಾಕಿದ್ರೂ, ಸುಸು ಮಾಡಿದ್ರೂ ಅದರ ಜೊತಿಗೇ ಇರಬೇಕು. ಶಗಣಿ ಹಾಕೂದಂದ್ರ? ಎಮ್ಮಿ ಕಕ್ಕಾ ಮಾಡೂದು.. ಅವಾಗೂ ಬಿಟ್ಟು ಹೋಗೂಹಂಗಿಲ್ಲಾ? ಇಲ್ಲ… ಓಹ್… ಆಸಮ್…ನಾ ಎಮ್ಮೀ […]
ನಿರುತ್ತರ
ಕಥೆ ನಿರುತ್ತರ ಚಂದ್ರಿಕಾ ನಾಗರಾಜ್ ಹಿರಿಯಡಕ ಸೆರಗಿನಲ್ಲಿ ಹೆರಕಿ ತಂದಿದ್ದ ಹೂವುಗಳನ್ನು ಒಂದೊಂದಾಗಿಯೇ ತನ್ನ ಪಾಡಿಗೆ ತಾನು, ಹಮ್ಮು ಬಿಮ್ಮಿಲದೇ, ಪ್ರಫುಲ್ಲ ಮನಸ್ಥಿಯಲ್ಲಿ ಹರಿಯುತ್ತಿದ್ದ ತೊರೆಯಲ್ಲಿ ಹರಿಯ ಬಿಡುತ್ತಿದ್ದೆ. ಅದು ಹೂವ ಚಿತ್ತಾರದ ಸೀರೆಯುಟ್ಟ ನೀರೆಯಂತೆ ಬಳುಕುತ್ತಾ ಸಾಗುತ್ತಿತ್ತು. ನಾನೇಕೋ ಇಂದು ಅದನ್ನು ಆಸ್ವಾದಿಸುವ ಮನಸ್ಥಿತಿಯಲ್ಲಿ ಇಲ್ಲ. ಕೈಗಳು ಶಾಂತವಾಗಿ ತೊರೆಯ ಮೈ ಸವರುತ್ತಿತ್ತಷ್ಟೆ, ಮನವು ಪ್ರಕ್ಷುಬ್ಧ ಕಡಲಾಗಿತ್ತು. ದುಃಖ ಹೆಪ್ಪು ಗಟ್ಟಿತ್ತು. ಅದು ಒಡೆದು ಹೋಗಲು ಅವನೇ ಬರಬೇಕು. ಅವನ ಮೈಗಂಧವ ತಂಗಾಳಿ ನನ್ನ ನಾಸಿಕಗಳಿಗೆ […]
ನಿಯತ್ತು
ಕಥೆ ನಿಯತ್ತು ಎಂ. ಆರ್.ಅನಸೂಯ ಹೊರಗಡೆ ಯಾರೋ ಬೆಲ್ ಮಾಡಿದರು,ಆಗ ಅಡುಗೆ ಮನೆಯಲ್ಲಿದ್ದ ಜಾನಕಿ ಅಲ್ಲಿಂದಲೇ ಮಗಳಿಗೆ” ನೋಡೇ ಸುಧಾ ಅದ್ಯಾರು”. ಬಾಗಿಲು ತೆಗೆಯದೆ ಕಿಟಕಿಯಿಂದಲೇ ಹೊರಗಡೆ ನಿಂತಿದ್ದವರನ್ನು ಸುಧಾ “ಯಾರು ಬೇಕಿತ್ತು” ಎಂದು ಕೇಳಿದಳು. ಸುಮಾರು ಐವತ್ತು ವರ್ಷದ ಅವರು “ನನ್ನ ಹೆಸರು ಇಸ್ಮಾಯಿಲ್. ನಿಮ್ಮ ತಾಯಿಯವರ ಹತ್ರ ಮಾತಾಡ ಬೇಕಿತ್ತು . ಸ್ವಲ್ಪ ಕರೆಯಮ್ಮ’ ಎಂದರು. ಒಳಗೆ ಬಂದು ” ಅಮ್ಮ, ಅದ್ಯಾರೊ ಇಸ್ಮಾಯಿಲ್ ಅಂತೆ ನಿನ್ನತ್ರ ಮಾತಾಡಬೇಕಂತೆ” ಎಂದಾಗ ಯಾರಪ್ಪ ಅವ್ರು ಎನ್ನುತ್ತಾ […]
ಮಿಸ್ಟರ್ ಅನ್ ಫ್ರೆಂಡ್
ತೆಲುಗಿನಿಂದ ಅನುವಾದವಾದ ಕಥೆ ತೆಲುಗು ಮೂಲಃ ಶ್ರೀ ರಾಮದುರ್ಗಂ ಮಧುಸೂದನ ರಾವು ಕನ್ನಡಕ್ಕೆ: ಚಂದಕಚರ್ಲ ರಮೇಶ ಬಾಬು ಈಗೇನು ಮಾಡೋದು…..? ಗೇಟಿನಿಂದಲೇ ಹೊರಗೋಡಿಸಿದ್ದರೆ ಚೆನ್ನಾಗಿರೋದಾ….. ಈಗಂತೂ ಆ ಛಾನ್ಸ್ ಇಲ್ಲ. ಬಂದು ಕೂತಿದ್ದಾನೆ. ಬರೀ ಪರರ ಜೀವನಗಳಲ್ಲಿ ಇಣುಕಿ ನೋಡುವುದು ಬಿಟ್ಟರೆ ಇಷ್ಟು ವರ್ಷಗಳ ತನ್ನ ಜೀವನದಲ್ಲಿ ಮಾಡಿದ್ದು ಬೇರೇ ಏನಾದರೂ ಇದೆಯಾ ? ಎಲ್ಲಿ ಸಿಕ್ಕರೆ ಅಲ್ಲಿ…. ಯಾವಗ ಸಿಕ್ಕರೆ ಅವಾಗ…. ಹೇಗೆ ಸಿಕ್ಕರೆ ಹಾಗೆ ತೂರಿಬಿಡೋದೇ! ********** ಉಂಡಾಡಿ….. ಗಾಳಿ ಜೀವ…. ಶಿವಕುಮಾರನ […]
ಪಾರಿವಾಳ ರಾಣಿ
ಕಥೆ ಪಾರಿವಾಳ ರಾಣಿ ಹರೀಶ್ ಗೌಡ ಒಂದು ಪ್ರೇಮ ಕಥೆ ಕ್ರಿ ಶ ಮತ್ತು ಕ್ರಿ ಪೂ ದಲ್ಲಿ ಹಿಂದೆ ಜಗತ್ತು ಹೇಗಿತ್ತು? ಸ್ವಚ್ಚಂದ ಜಗತ್ತು ಪ್ರಕೃತಿಯ ಮಡಿಲಿನಲ್ಲಿ ಸರ್ವರು ಸಮಾನರೆಂಬ ಭಾವನೆ ಇದ್ದಂತ ಕಾಲ. ಮತ್ತು ಜಾತಿ ವರ್ಣ ಇದರ ತಕರಾರು ಇಂದಿನದಲ್ಲ ಹಿಂದಿನಿಂದಲೂ ಇದೆ ಅದೆಲ್ಲ ಬಿಡಿ ನಮ್ಮ ಕಥೆ ಶುರು ಮಾಡೊಣ ಓದೊಕೆ ನೀವ್ ರೇಡಿ ಅಲ್ವ ಮತ್ತೆ ಬನ್ನಿ ಯಾಕ್ ತಡ. ಸುತ್ತಲೂ ಬೆಟ್ಟ ಗುಡ್ಡಗಳು ಕಾಡು ನದಿಗಳ ಮಧ್ಯೆ ನೂರಾರು […]
ಬಣ್ಣದ ಚಿಟ್ಟೆಗಳು
ಕಥೆ ಬಣ್ಣದ ಚಿಟ್ಟೆಗಳು ವಾಣಿ ಅಂಬರೀಶ ಈ ಊರಿನ ಕುವರ ಆ ಊರಿನ ಕುವರಿ ಅವಳೆಲ್ಲೋ ಇವನ್ನೇಲ್ಲೋ,, ಇನ್ನೂ ಇವರಿಬ್ಬರ ಪ್ರೀತಿ ಇನ್ನೇಲ್ಲೋ.. ಅದೇ ನಾ ಹೇಳ ಬಯಸುವ ಇವರಿಬ್ಬರ ನಡುವೆ ಪ್ರೀತಿ ಬೆಸೆಯುವ ಪ್ರೇಮದ ಕಥೆ.. ಮಲ್ನಾಡಿನ ಮುದ್ದು ಮನಸ್ಸಿನ ಬೆಡಗಿ, ಕೊಡಗಿನ ಕುವರಿ ಈ ಸ್ವಪ್ನ ಸುಂದರಿ, ಇವಳೇ ಈ ಕಥೆಯ ಕಥಾನಾಯಕಿ “ನಯನಶ್ರೀ “ ಈ ಭೂಮಿಯ ಮೇಲಿರುವ ಅದ್ಭುತಗಳಲ್ಲೊಂದಾದ ಆ ಮಲೆನಾಡಿನ ಹಸಿರ ಸಿರಿಯ ಸೊಬಗಿನಲ್ಲಿ ಚಂದದಿ ನಲಿದಾಡುತ ಬೆಳೆದಿರುವಳು ಈ […]
ಶ್ರೀಗಂಧದ ಕೊರಡು
ಕಥೆ ಶ್ರೀಗಂಧದ ಕೊರಡು ಸುಧಾ ಭಂಡಾರಿ ಪಾರು ಎಂದಿನಂತೆ ಊಟದ ನಂತರ ಒಬ್ಬಳೆ ಟಿವಿ ಹಚ್ಗಂಡು ಕೂತಿದ್ಲು.ತುಂಬಾ ದಿನಗಳ ನಂತ್ರ ರಾಜ್ ಕುಮಾರ ನ ‘ ಜೀವನ ಚೈತ್ರ’ ತಾಗಿತ್ತು.ಪಾರುಗೆ ರಾಜ್ ಕುಮಾರ ಸಿನಿಮಾ ಅಂದ್ರೆ ಪಂಚಪ್ರಾಣ. ಸಿನಿಮಾದಲ್ಲಿ ರಾಜ್ಕುಮಾರ್ ಹೆಂಡತಿ ಬಸುರಿ ಎಂದು ಗೊತ್ತಾದಾಗ ಅವಳನ್ನ ಎತ್ಗಂಡು ‘ ಲೇ ನೀನು ನನ್ ಮಗೂನ ತಾಯಿ ಆಗ್ತಿದ್ದೀಯಾ’ ಅಂತ ಮುದ್ದಾಡಿ ಒಂದು ಹಾಡು ಇರೋ ಸೀನ್ ಬರ್ತದೆ..ನೋಡ್ತಾ ನೋಡ್ತಾ ಪಾರೂನ ಅಂತರಂಗದ ಆಸೆ ಮತ್ತೆ ಧುಸ್ಸೆಂದು […]
ಕಥೆ ಋಣ ಎಂ. ಆರ್. ಅನಸೂಯ ಗಿರಿಜಮ್ಮ ತೋಟದಲ್ಲಿ ಮಾವಿನ ಫಸಲನ್ನು ನೋಡುತ್ತಾ “ಈ ಸತಿ ಮಾವಿನ ಫಸಲು ಚೆನ್ನಾಗಿ ಬಂದೈತೆ ಅಲ್ವೇನೋ ನಾಗ” “ಹೂನ್ರಮ್ಮ, ಈ ಸತಿ ಕಾಯಿ ಜಗ್ಗಿ ಹಿಡಿದೈತೆ. ಹಂಗೇನೆ ಹಲಸಿನ ಗಿಡಗಳು, ಹುಣಸೇಗಿಡ ಎಲ್ಲಾದ್ರೂಗನೂ ಚೆನ್ನಾಗಿ ಕಾಯಿ ಹಿಡಿದೈತೆ “ ತೋಟದ ಗೇಟ್ ಬಳಿ ಮೋಟರ್ ಬೈಕ್ ನ ಹಾರ್ನ್ ಸೌಂಡ್ ಕೇಳಿದ ಇಬ್ಬರೂ ಆ ಕಡೆ ನೋಡಿದರೆ ರಾಜಣ್ಣ ಕೈಯಲ್ಲಿ ಕಾಫಿ ಪ್ಲಾಸ್ಕ್ ಹಾಗೂ ಒಂದು ಸಣ್ಣ ಬ್ಯಾಗ್ ನ್ನು […]