ಶರಣರ ಸಂಗಾತಿ ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ ಪುಣೆ ಸಾವಿಲ್ಲದ ಶರಣರು ಲಿಂಗತತ್ವ ನಿಷ್ಠ. ಹಡಪದ ಅಪ್ಪಣ್ಣ ಸಂಗಮೇಶ್ವರ ಅಪ್ಪಣ್ಣ ಹಡಪದ ಅಪ್ಪಣ್ಣ ಇಬ್ಬರೂ ಒಬ್ಬರೇ ಕಾಲ – ಹನ್ನೆರಡನೆಯ ಶತಮಾನ ಬಸವ ಸಮಕಾಲೀನ ಶರಣಒಟ್ಟು ವಚನಗಳು – 102 +250=352ಅಂಕಿತ: ಬಸವಪ್ರಿಯ ಕೂಡಲ ಚೆನ್ನಸಂಗಮದೇವ ,/ ಬಸವ ಪ್ರಿಯ ಚೆನ್ನಬಸವಣ್ಣ ಊರು- ಕೂಡಲ ಸಂಗಮ ,ಮುಸುಬಿನಾಳ ಹಡಪದ ಅಪ್ಪಣ್ಣನವರು 12ನೇ ಶತಮಾನದ ವಚನಕಾರರು ಮತ್ತು ಬಸವಣ್ಣನವರ ಆಪ್ತ ಕಾರ್ಯದರ್ಶಿ. ಇವರು ಬಸವಣ್ಣನವರ ಬಲಗೈ ಬಂಟರೆಂದು ಪ್ರಸಿದ್ಧರು. ‘ಅನುಭವ ಮಂಟಪದಲ್ಲಿ’ ಪ್ರಮುಖ ಪಾತ್ರ ವಹಿಸಿದ್ದರು. ಇವರು ‘ಬಸವಪ್ರಿಯ ಕೂಡಲ ಚೆನ್ನಬಸವಣ್ಣ’ ಎಂಬ ಅಂಕಿತನಾಮದಲ್ಲಿ 250ಕ್ಕೂ ಹೆಚ್ಚು ವಚನಗಳನ್ನು ರಚಿಸಿದ್ದಾರೆ. ಇವರ ಪತ್ನಿ ಲಿಂಗಮ್ಮನವರು ಕೂಡ ವಚನಗಾರ್ತಿಯಾಗಿದ್ದರು ಅಪ್ಪಣ್ಣನ ಹೆಸರಿನ ಹಿಂದೆ ಸೇರಿದ ‘ಸಂಗಮೇಶ್ವರ’ (ಕೂಡಲಸಂಗಮ) ಈತನ ಸ್ಥಳವಾಗಿರಬೇಕು. ವಚನಗಳಲ್ಲಿ ಲಿಂಗ ತತ್ವ ಷಟಸ್ಥಲ ಬೋಧೆ ಕಾಯಕ ದಾಸೋಹದ ಮಹತ್ವ ಮುಂತಾದ ಅನೇಕ ವಿಷಯಗಳ ಮೇಲೆ ಭಿನ್ನ ಚಿಂತನೆ ನಡೆಸಿದವರು. ಎಲ್ಲವೂ ತಾತ್ವಿಕವಾಗಿವೆ. ಅನ್ಯಮತ ಖಂಡನೆ, ಶಿವಪಾರಮ್ಯ ಸ್ಥಾಪನೆಗೆ ವಿಶೇಷ ಸ್ಥಾನ ಸಂದಿದೆ. ಶರಣಸ್ತುತಿ, ಶೂನ್ಯಸಿಂಹಾಸನ, ಅನುಭವ ಮಂಟಪಗಳ ಉಲ್ಲೇಖ, ಪ್ರಭುದೇವರು ಕಲ್ಯಾಣಕ್ಕೆ ಬಂದ ಪ್ರಸಂಗ ಮತ್ತು ಆರೋಗಣೆ ನಡೆಸಿದ ಸಂದರ್ಭಗಳನ್ನು ಪ್ರಸ್ತಾಪಿಸುವುದು ಮಹತ್ವದ ಅಂಶಗಳೆನಿಸಿವೆ. ತುಂಬ ದೀರ್ಘವಾಗಿದ್ದು ಗದ್ಯಲಕ್ಷಣವನ್ನು ಹೊಂದಿದ ರಚನೆಗಳ ಜೊತೆಗೆ ಮುಕ್ತಕ ರೂಪದ ವಚನಗಳೂ ಸಮಾವೇಶಗೊಂಡಿವೆ. ಲಿಂಗತತ್ವ ಸಂಗಮೇಶ್ವರ ಅಪ್ಪಣ್ಣನಿಗೆ ಅಪಾರವಾಗಿದೆ. ತರ್ಕ ಶಕ್ತಿ ಅಗಾಧವಾಗಿದೆ. ಲಿಂಗಾಯತ ತತ್ತ್ವ ಪ್ರತಿಪಾದನೆ ವಿಶೇಷವಾಗಿ ಕಂಡು ಬರುತ್ತದೆ. ಶಿವಪಾರಮ್ಯ, ಅನ್ಯಮತ ಖಂಡನೆ, ಬ್ರಾಹ್ಮಣರ ಕರ್ಮಠತನದ ಖಂಡನೆ, ಅಷ್ಟಾವರಣ, ಪಂಚಾಚಾರಗಳ ವಿವರಣೆ ಇವನ ವಚನಗಳಲ್ಲಿ ಬಂದಿದೆ. ಸಂಗಮೇಶ್ವರ ಅಪ್ಪಣ್ಣ ಮತ್ತು ಹಡಪದ ಅಪ್ಪಣ್ಣ ಇಬ್ಬರೂ ಒಬ್ಬರೇ ಇತ್ತೀಚಿನ ನನ್ನ ಅಧ್ಯಯನ ಮತ್ತು ಸಂಶೋಧನೆಯಿಂದ ನಾನು ಸಂಗಮೇಶ್ವರ ಅಪ್ಪಣ್ಣ ಮತ್ತು ಹಡಪದ ಅಪ್ಪಣ್ಣ ಇಬ್ಬರೂ ಒಬ್ಬರೇ ಎಂದು ಖಚಿತ ಪಡಿಸಲು ಇಚ್ಛಿಸುತ್ತೇನೆ . ಇದಕ್ಕೆ ಕೆಲ ಪುರಾವೆಗಳನ್ನೂ ಇಲ್ಲಿ ನೀಡುತ್ತಿದ್ದೇನೆ. 1 ವಚನಾಂಕಿತ – ಬಸವಪ್ರಿಯ ಕೂಡಲ ಚೆನ್ನಸಂಗಮದೇವ -ಈ ವಚನಾಂಕಿತ ಸಂಗಮೇಶ್ವರ ಅಪ್ಪಣ್ಣ ಮತ್ತು ಹಡಪದ ಅಪ್ಪಣ್ಣನವರ ವಚನಾಂಕಿತವಾಗಿದ್ದು ಇಬ್ಬರೂ ಒಬ್ಬರೇ ಎನ್ನುವ ನಿರ್ಧಾರ ಬಲವಾಗುತ್ತದೆ. 2 ಇಬ್ಬರ ವಚನಗಳಲ್ಲಿ -ಲಿಂಗ ತತ್ವ ಷಟಸ್ಥಲ, ಸಿದ್ಧಾಂತ ಅಪಾರವಾಗಿ ಕಂಡು ಬರುತ್ತದೆ. ವಚನ ರಚನಾ ಕೌಶಲ್ಯ,ಭಾವ,ಚಿಂತನೆಗಳು ಒಂದೇ ರೀತಿಯಾಗಿ ಕಂಡು ಬರುತ್ತವೆ.3 ಹಡಪದ ಅಪ್ಪಣ್ಣ ಮತ್ತು ಸಂಗಮೇಶ್ವರ ಅಪ್ಪಣನವರ ವಚನಗಳಲ್ಲಿ ತಮ್ಮ ಬಸವಣ್ಣನವರ ಸಂಬಂಧವು ಎದ್ದು ಕಾಣುತ್ತದೆ,ಹೀಗಾಗಿ ಇಬ್ಬರೂ ಬೇರೆ ಬೇರೆ ಅಲ್ಲ ಒಬ್ಬರೇ ಎಂದು ನಿರ್ಧರಿಸಬಹುದು. 3 ಹಡಪದ ಅಪ್ಪಣ್ಣ ಬಾಗೇವಾಡಿಯ ಹತ್ತಿರದ ಮುಸುಬಿನಾಳ ಗ್ರಾಮದವನು, ಅವನ ಹೆಂಡತಿ ಲಿಂಗಮ್ಮ ಅದೇ ಊರಿನ ಹೂಗಾರ ನಾಗಪ್ಪನ ಮಗಳು ಎಂದು ಇತ್ತೀಚಿನ ಅಧ್ಯಯನ ಮತ್ತು ಸಂಶೋಧನೆಯಿಂದ ತಿಳಿದು ಬರುತ್ತದೆ. ಬಾಲಕ ಬಸವಣ್ಣ ಬಾಗೇವಾಡಿ ಅಗ್ರಹಾರದ ವಿರುದ್ಧ ಬಂಡೆದ್ದು ಮನೆ ಬಿಟ್ಟು ಹೋಗುವಾಗ ಅಕ್ಕ ಅಕ್ಕನಾಗಮ್ಮ ಪತಿ ಶಿವಸ್ವಾಮಿ ಜೊತೆಗೆ ಹಿರಿಯ ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮ ಅವರ ಜೊತೆಗೆ ಕೂಡಲ ಸಂಗಮಕ್ಕೆ ಹೋಗಿರಬಹುದು , ಹನ್ನೆರಡು ವರುಷ ಕೂಡಲ ಸಂಗಮ್ಮದಲ್ಲಿ ಇದ್ದು ತನ್ನ ಕಾಯಕ ಮಾಡುತ್ತಾ ಬಸವಣ್ಣನವರ ಅಧ್ಯಯನಕ್ಕೆ ಸಹಾಯ ಮಾಡುತ್ತ ಮುಂದೆ ಮಂಗಳವೆಡೆಗೆ ಹೋಗಿ ಬಸವಣ್ಣನವರ ನೆರಳಂತೆ ನಿಂತದ್ದು ಸ್ಪಷ್ಟವಾಗಿ ಕಂಡು ಬರುತ್ತದೆ. 4 ಮಾದಲಾಂಬಿಕೆಯ ತಾಯಿಯ ತವರು ಮನೆ ಕೂಡಲಸಂಗಮವಾಗಿದ್ದು ಬಾಗೇವಾಡಿ ಅಗ್ರಹಾರ ತೊರೆದ ಬಸವಣ್ಣನಿಗೆ ಆಶ್ರಯಕ್ಕೆ ಬಂದಿದ್ದು ಮಾದಲಾಂಬಿಕೆಯ ತಾಯಿಯ ತವರು ಮನೆ ಕೂಡಲ ಸಂಗಮ, ಸಹೋದರ ಮಾವ ಬಲದೇವನು ಸಹಾಯ ಮಾಡಿದ್ದೂ ಗಮನಾರ್ಹ, ಇದನ್ನು ಜಾನಪದ ಕವಿಗಳು ಹೇಳುತ್ತಾರೆ. 5 ಬಹಳ ವರ್ಷಗಳವರೆಗೆ ಹಡಪದ ಅಪ್ಪಣ್ಣ ಕೂಡಲ ಸಂಗಮದಲ್ಲಿ ಇದ್ದ ಕಾರಣ ಅವನನ್ನು ಕಲ್ಯಾಣದ ಶರಣರು ಆರಂಭದಲ್ಲಿ ಸಂಗಮೇಶ್ವರ ಅಪ್ಪಣ್ಣ ಎಂದು ಕರೆದಿರಬಹುದು, ಮುಂದೆ ಅಪ್ಪಣ್ಣ ಕಲ್ಯಾಣಕ್ಕೆ ಬಂದ ಮೇಲೆ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ನೇಮಕ ಗೊಂಡ ಮೇಲೆ ಆಡಳಿತದ ಆಸ್ಥಾನದ ಕಡತಗಳನ್ನು,ಕಚೇರಿ ಪತ್ರಗಳನ್ನು,ಮಂತ್ರಿಯ ಆದೇಶಗಳನ್ನು ಇಡಲು ಅಡಪ ( ಕಟ್ಟಿಗೆಯ ಡಬ್ಬಿ) ತನ್ನೊಂದಿಗೆ ಇಡುತ್ತಿದ್ದನು. ಕಲ್ಯಾಣಕ್ರಾಂತಿಯಲ್ಲಿ ಹಡಪದ ಅಪ್ಪಣ್ಣನವರ ಪಾತ್ರ ಬಲು ದೊಡ್ಡದು, ಬಸವಣ್ಣನವರ ಯೋಜನೆ ಚಿಂತನಾಕ್ರಮದಲ್ಲಿ ಪಾಲ್ಗೊಂಡ ವೈಚಾರಿಕ ಶರಣ, ಬಸವಣ್ಣನವರ ಆಸೆಯಂತೆ ಹಡಪದ ಅಪ್ಪಣ್ಣನವರು ನೀಲಾಂಬಿಕೆಯನ್ನು ಕೂಡಲ ಸಂಗಮಕ್ಕೆ ಕರೆ ತರಲು ಹೇಳಿದಾಗ, ಅವರ ಆದೇಶದಂತೆ ಅಪ್ಪಣ್ಣನವರು ನೀಲಮ್ಮನನ್ನು ಕರೆದುಕೊಂಡು ಬರುವಾಗ ತಂಗಡಗಿಗೆ ಬಂದಾಗ ಬಸವಣ್ಣನವರ ಸಾವಿನ ಸುದ್ಧಿ ಕೇಳಿ ಬರುತ್ತದೆ, ಆಗ ನೀಲಮ್ಮ ಮತ್ತು ಅಪ್ಪಣ್ಣನವರು ಅಲ್ಲಿಯೇ ಐಕ್ಯವಾಗಿದ್ದು ನದಿಯ ದಡದಲ್ಲಿ ಇಬ್ಬರ ಸಮಾಧಿಯ ಕುರುಹು ಸ್ಮಾರಕಗಳು ಕಂಡು ಬರುತ್ತವೆ. ಸಂಗಮೇಶ ಅಪ್ಪಣ್ಣನವರ ಕೆಲ ವಚನಗಳಅಂಗ ಲಿಂಗವೆಂದರಿದಾತಂಗೆ, ಅಂಗದಲೆ ಐಕ್ಯ.ಕಂಗಳು ಲಿಂಗವೆಂದರಿದಾತಂಗೆ, ಕಂಗಳಲೆ ಐಕ್ಯ.ಕರವೆ ಲಿಂಗವೆಂದರಿದಾತಂಗೆ, ಕರದಲೆ ಐಕ್ಯ.ಈ ತ್ರಿವಿಧದ ನೆಲೆಯ, ಶ್ರುತಿ ಸ್ಮೃತಿಗಳರಿಯವು.ಎಮ್ಮ ಬಸವಪ್ರಿಯ ಕೂಡಲಚನ್ನಸಂಗಮದೇವನಲ್ಲಿಈ ಇರವ ಶರಣರೆ ಬಲ್ಲರು./1 ಅಂಗದ ಕಳೆ ಲಿಂಗದಲ್ಲಿ ಲೀಯವಾಗದು.ಲಿಂಗದ ಕಳೆ ಅಂಗದಲ್ಲಿ ಲೀಯವಾಗದು.ಮಾತಿನಮಾಲೆಯ ಬೊಮ್ಮವೇತರದೊ ?ಕಾಯ ಭಕ್ತನಾದರೆ ಭೃತ್ಯಾಚಾರವಿರಬೇಕು.ಪ್ರಾಣ ಜಂಗಮವಾದಡೆ ಅರಿದಿರಬೇಕು.ಇಂತು ಭಕ್ತಿಜ್ಞಾನವುಳ್ಳವರಲ್ಲದೆ ಭಕ್ತರಲ್ಲ, ಶರಣರಲ್ಲ.ಹಿರಿಯರು ಬಂದಡೆ ಇದಿರೆದ್ದು ಬಾರದವರ ಮನೆಗೆ ಅಡಿಯ ಇಡೆವೆಂದು,ಬಸವಪ್ರಿಯ ಕೂಡಲಚನ್ನಸಂಗನ ಶರಣರು ಕಾಡಿಹರು ಕಾಣಾ,ಸಂಗನಬಸವಣ್ಣಾ./2 ಅಂದಂದಿಗೆ ನೂರು ತುಂಬಿತ್ತೆಂಬ ದಿಟವಿರಬೇಕು.ಸಂದ ಪುರಾತನರ ನೆನೆಯುತ್ತಿರಬೇಕು.ಜಂಗಮ ಮಠಕ್ಕೆ ಬಂದಡೆ, ವಂಚನೆಯಿಲ್ಲದೆ ಮಾಡಬೇಕು.ಎನಗಿದೇ ವರವನೀವುದು, ಬಸವಪ್ರಿಯ ಕೂಡಲಚನ್ನಸಂಗಮದೇವಾ./4 ಅಗ್ಗದ ಹರಿಬ್ರಹ್ಮರ ಮರೆದೊಮ್ಮೆ ಹರಂಗೆ ಸಮವೆಂದಡೆ,ಅವನು ಚಾಂಡಾಲನು. ಅವನ ಮುಖವ ನೋಡಲಾಗದು.ಅದೆಂತೆಂದಡೆ: ಯೋ ಮಹಾದೇವಮನ್ಯೇನ ಹೀನದೇವೇನ ದುರ್ಮತಿಃ |ಸಕೃತ್ಸಾಧಾರಣಂ ಬ್ರೂಯಾದಂತ್ಯಜಾನಾಂತ್ಯಜೋಂತಜಃ ||ಇಂತೆಂದುದಾಗಿ, ನಿಮಗೆ ಕಿರುಕುಳದೈವಂಗಳ ಸಮವೆಂದುಬಗಳುವನ ಬಾಯಿ ಪಾಕುಳತಪ್ಪದು,ಬಸವಪ್ರಿಯ ಕೂಡಲಚನ್ನಸಂಗಮದೇವಾ./5 ಅಜಹರಿಸುರರೆಲ್ಲರು ಅಳಿದವರಲ್ಲದೆ, ಉಳಿದವರಿಲ್ಲ.ಶಿವನೆ ನಿತ್ಯನೆಂದು ಹೊಡೆವಡುತ್ತಿವೆ ವೇದ.ಉತೈನಂ ವಿಶ್ವಾಭೂತಾನಿ ಸದೃಷ್ಟೋ ಮೃಡಯಾತಿನಃ |ನಮೋಸ್ತು ನೀಲಗ್ರೀವಾಯ ಸಹಸ್ರಾಕ್ಷಾಯ ಮೀಡುಷೇ ||ಎಂಬ ಶ್ರುತಿ, ಬಸವಪ್ರಿಯ ಕೂಡಲಚನ್ನಸಂಗಯ್ಯನೊರ್ವನೆನಿತ್ಯನೆಂದು ಹೊಗಳುತ್ತಲಿದೆ./7 ಅನಿಮಿಷನಾದ ನಿಬ್ಬೆರಗಿನ ಲಿಂಗೈಕ್ಯನು, ಭಾವ ನಿರ್ಭಾವವನೆಯ್ದಿ,ಜ್ಞಾನವೆ ಪರಮಾಶ್ರಯವಾಗಿಪ್ಪ ಲಿಂಗೈಕ್ಯನು,ಮಹವನೊಳಕೊಂಡ ಮಹಿಮ ಲಿಂಗೈಕ್ಯನು,ಬಸವಪ್ರಿಯ ಕೂಡಲ ಚನ್ನಸಂಗಯ್ಯಾ ನಿಮ್ಮ ಶರಣ ಪ್ರಭುದೇವರು./9 ಅನೇಕ ಪರಿಯ ಭಕ್ತಿಯ ವೇಷವನಳವಡಿಸಿಕೊಂಡು,ಮನೆಮನೆದಪ್ಪದೆ ತಿರುಗುವೆನು.ಅವರ ಇಚ್ಛಿಗೆ ಅನುಮಾನವಿಡಿದು ನುಡಿವೆನು.ಅವರ ಮನಧರ್ಮವನರಿಯದೆ ನುಡಿದೆನಾದಡೆ,ಅನೇಕ ಪರಿಯಲ್ಲಿ ಭಂಗಬಡುವೆನು.ದಿಟದ ಭಕುತನಂತೆ,ಪುರಾತರ ವಚನಂಗಳ ಉದರ ನಿಮಿತ್ತವಾಗಿ ಬಳಸುವೆನು.[ಕಡು] ಪಾಪಿಗಿನ್ನೇನು ಹದನಯ್ಯ,ಬಸವಪ್ರಿಯ ಕೂಡಲಚೆನ್ನ ಸಂಗಮದೇವಾ ?/10 ಅಯ್ಯಾ ಎನ್ನ ಹಲ್ಲ ಮರೆಯಲ್ಲಿಪ್ಪ ಬೆಲ್ಲವ ಕಂಡು, ಎಲ್ಲರೂ ಮೆಲಬಂದರು.ಬೆಲ್ಲಗಳಿದ್ದಡೆ ನಿಲಲೀಸದೆ ಎನ್ನ ಕಾಡುತ್ತಿದಾರೆಯೆಂದು,ಆ ಬೆಲ್ಲವನಲ್ಲಿಯೆ ನುಂಗಿದಡೆ, ಹಲ್ಲು ಮುರಿದವು.ಮೆಲಬಂದವರೆಲ್ಲ ಅಲ್ಲಿಯೆ ಬಯಲಾದರು.ನಾ ನಿಮ್ಮಲ್ಲಿ ಕೂಡಿ ಸುಖಿಯಾದೆನಯ್ಯಾ,ಬಸವಪ್ರಿಯ ಕೂಡಲಚೆನ್ನಸಂಗಮದೇವಾ./11 ಅಯ್ಯಾ ಮರದೊಳಗಣ ಕಿಚ್ಚು ಮರನ ಸುಡುತ್ತಿದ್ದಿತ್ತಯ್ಯಾ.ಮರ ಬೆಂದು ನಿಂದುರಿಯಿತ್ತು , ಮಣ್ಣು ಜರಿದು ಬಿದ್ದಿತ್ತು.ಉರಿ ಹೊಗೆ ನಂದಿತ್ತು , ಸ್ವಯಂಪ್ರಕಾಶವಾಗಿಪ್ಪ ಉರಿ ಉಳಿಯಿತ್ತು.ಆ ಉರಿ ಬಂದು ಎನ್ನ ಕರಸ್ಥಲದಲ್ಲಡಗಿತ್ತು .ಇದ ಕಂಡು, ನಾ ಬೆರಗಾಗಿ ನೋಡುತ್ತಿದ್ದೆನಯ್ಯಾ,ಬಸವಪ್ರಿಯ ಕೂಡಲಚೆನ್ನ ಸಂಗಮದೇವಾ./12 ಅಲ್ಲಿಂದತ್ತ ಪಶ್ಚಿಮಚಕ್ರಕ್ಕೆ ಏಕದಳ ಪದ್ಮ,ಹವಣಿಸಬಾರದ ತೇಜ, ಏಕಾಕ್ಷರ,ಕುರುಹಿಡಬಾರದ ನಾದ, ಅಪ್ರದರ್ಶನ ವರ್ಣ,ನಿಭರ್ಿನ್ನ ಶಕ್ತಿ, ಸರ್ವಾತ್ಮನೆಂಬ ಜಂಗಮವೆ ಅಧಿದೇವತೆ.ಪರಿಪೂರ್ಣ ಜಂಗಮಲಿಂಗ, ಅಕ್ಷರಾಕ್ಷ[ರ]ತೀತ, ನಿಶ್ಶಬವಾಗಿಪ್ಪುದು.ಇಂತಪ್ಪ ಲಿಂಗಾಂಗವೆ ತಾನಾಗಿ, ಅವಿರಳ ಜಂಗಮಭಕ್ತಿಯ ಮಾಡಬಲ್ಲಾತನೆ,ಬಸವಪ್ರಿಯ ಕೂಡಲಚೆನ್ನಸಂಗಯ್ಯನಲ್ಲಿಸಂಗನಬಸವಣ್ಣನಯ್ಯಾ, ಪ್ರಭುವೆ./16 ಎನ್ನ ತನು ನಿಮ್ಮ ಸೇವೆಯಲ್ಲಿ ಸವೆದು,ಎನ್ನ ಮನ ನಿಮ್ಮ ನೆನಹಿನಲ್ಲಿ ಸವೆದು,ಎನ್ನರಿವು ನಿಮ್ಮ ಘನದೊಳಗೆ ಸವೆದು, ನಿಶ್ಚಲ ನಿಜೈಕ್ಯವಾಗಿ,ಬಸವಪ್ರಿಯ ಕೂಡಲಚೆನ್ನಸಂಗಯ್ಯಾ,ನೀ ನಾನೆಂಬುದೇನಾಯಿತ್ತೆಂದರಿಯೆನು./24 ಹಡಪದ ಅಪ್ಪಣ್ಣನವರ ಕೆಲ ವಚನಗಳು ಅಂಗ ಲಿಂಗವಾಯಿತ್ತೆಂಬಿರಿ, ಲಿಂಗ ಅಂಗವಾಯಿತ್ತೆಂಬಿರಿ.ಅಂಗ ಲಿಂಗ ಸಂಬಂಧ ಎಲ್ಲರಿಗೆ ಎಂತಾಯಿತ್ತು ಹೇಳಿರಣ್ಣಾ.ಅಂಗ ಲಿಂಗ ಸಂಬಂಧವಾದರೆ, ಗುರುವಿನಲ್ಲಿ ಗುಡ್ಡನಾಗಿರಬೇಕು,ಲಿಂಗದಲ್ಲಿ ನಿಷ್ಠನಾಗಿರಬೇಕು, ಜಂಗಮದಲ್ಲಿ ಅವಧಾನಿಯಾಗಿರಬೇಕು.ಇವ ಮೂರರಲ್ಲಿ ದೂರಾಗಿಪ್ಪರ ಎನಗೊಮ್ಮೆ ತೋರದಿರಾ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ ಕರವನರಿದಂಗೆ ಕಮಲದ ಹಂಗೇಕೊ?ಇರವನರಿದಂಗೆ ಪರದ ಹಂಗೇಕೊ ?ಪರವನರಿದಂಗೆ ಇರವದ ಹಂಗೇಕೊ?ಇಹ ಪರವೆಂಬ ಉಭಯವಳಿದ ಶರಣಂಗೆಮರ್ತ್ಯದ ನರರ ಹಂಗೇಕೊ ಹೇಳಾ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ? ಮನವನರಿದಂಗೆ ಮತದ ಹಂಗೇಕೊ ?ನಿತ್ಯವನರಿದಂಗೆ ತೀರ್ಥದ ಹಂಗೇಕೊ ?ಪರಮಾರ್ಥವನರಿದಂಗೆ ಪ್ರಸಾದದ ಹಂಗೇಕೊ ?ಜ್ಯೋತಿಯನರಿದಂಗೆ ಕತ್ತಲೆಯ ಹಂಗೇಕೊ?ಲೋಕವನರಿದಂಗೆ ವ್ಯಾಕುಲದ ಹಂಗೇಕೊ?ಈ ತೆರನನರಿದಂಗೆ ಮುಂದಾವ ಭೀತಿಯುಂಟು ಹೇಳಾ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ ? ಹಡಪದ ಅಪ್ಪಣ್ಣ ಮತ್ತು ಸಂಗಮೇಶ್ವರ ಅಪ್ಪನವರ ವಚನಗಳಲ್ಲಿ ಸಾಮ್ಯತೆಯಿದೆ . ಬಹುತೇಕ ವಚನಗಳಲ್ಲಿ ಲಿಂಗ ತತ್ವ ಷಟಸ್ಥಲ ತಾತ್ವಿಕ ಚಿಂತೆಗಳಲ್ಲಿ ಸಾಮ್ಯತೆ ಎದ್ದು ಕಾಣುತ್ತದೆ. ಹೀಗಾಗಿ ಇವರಿಬ್ಬರೂ ಒಬ್ಬರೇ ಎನ್ನುವ ತೀರ್ಮಾನಕ್ಕೆ ಬರಲಾಗುವುದು. ಹಡಪದ ಅಪ್ಪಣ್ಣ ಕ್ಷೌರಿಕ ವೃತ್ತಿಯವನೇ ? ಹೀಗಾಗಿ ಅಡಪ ಜನಬಳಕೆಯಲ್ಲಿ ಹಡಪ ಆಗಿದೆ ಅಡಪವನ್ನು ಇಟ್ಟುಕೊಂಡವ ಅಡಪದವ ಅಥವಾ ಹಡಪದ ಎಂದು ಬಂದಿದೆ.ಕಲ್ಯಾಣದ ಚಾಲುಕ್ಯರ ಕಳಚೂರ್ಯರ ರಾಜ್ಯದ ವಿಸ್ತಾರ ಎಷ್ಟಿತ್ತಂದರೆ ಛಪ್ಪನ್ನೈವತ್ತಾರು ರಾಜ್ಯಗಳಿದ್ದವು ಎಂದು ಬಸವಣ್ಣನವರ ವಚನವೊಂದರಲ್ಲಿ ಕಾಣಬಹುದು. ಮಹಾರಾಷ್ಟ್ರದ ಮಂಗಳವೆಡೆ, ಉದ್ಗೀರ, ಲಾತೂರ, ಸೋಲಾಪುರ, ತುಳಜಾಪುರ, ಪಂಡರಾಪುರ ಜತ್ತ ಅಕ್ಕಲಕೋಟ ಮುಂತಾದ ಪ್ರದೇಶಗಳ ಭೂ ಪ್ರದೇಶವು ಆಂಧ್ರ ವೆಂಗಿಪಳು ಕರ್ನಾಟಕ ಮುಂತಾದ ಪ್ರದೇಶಗಳನ್ನು ಮುಂತಾದ ಕಡೆಗಳಲ್ಲಿ ಚಾಲುಕ್ಯ ರಾಜ್ಯರ ಆಡಳಿತದ ಶಿಲ್ಪ ಕಲೆ ಶಾಸನಗಳು ಮತ್ತು ಗುಡಿ ಗೋಪುರಗಳ ಶೈಲಿ ಚಾಲುಕ್ಯರದ್ದಾಗಿತ್ತು. ಬಿಜ್ಜಳನೂ ಕ್ಷೌರಿಕ ಕುಲದ ಶೈವನೆಂದು ಕೆಲ ಸಂಶೋಧಕರು ತಮ್ಮ ಅಭಿಮತ ವ್ಯಕ್ತ ಪಡಿಸಿದ್ದಾರೆ. ಹಡಪದ ಅಪ್ಪಣ್ಣ ಅವನ ಹೆಂಡತಿ ಮುಸುಬಿನಾಳ ಹೂಗಾರ ನಾಗಪ್ಪನ ಮಗಳು ಲಿಂಗಮ್ಮ ಎಂದು ತಿಳಿದು ಬರುತ್ತದೆ. ಬಸವಣ್ಣ ಬಿಜ್ಜಳನ ಪ್ರಧಾನಿ ಅರ್ಥ ಸಚಿವ ದಂಡನಾಯಕನಾಗಿದ್ದನು ಇವರ ಆಪ್ತ ಕಾರ್ಯದರ್ಶಿಯಾಗಿ ಹಡಪದ ಅಪ್ಪಣ್ಣ ಕಲ್ಯಾಣದಲ್ಲಿ ಕ್ಷೌರಿಕ ವೃತ್ತಿಯನ್ನು ಕೈಗೊಂಡಿದ್ದನು ಎಂದೆನ್ನುವುದು ನನ್ನ ದೃಷ್ಟಿಯಲ್ಲಿ ಸರಿ ಅನಿಸುವುದಿಲ್ಲ. ರಾಜ್ಯಾಡಳಿತ ದಾಖಲೆಗಳು ಕಾಗದ ಪಾತ್ರಗಳು ಬೇರೆ ಬೇರೆ ರಾಜರ ಸಾಮಂತರ ಒಲೆಗಳು ಮುಂತಾದ ಅನೇಕ ಮಹತ್ತರ ದಾಖಲೆಗಳನ್ನು ಸಂಗ್ರಹಿಸಿ ಇಡಲು ಕಟ್ಟಿಗೆಯಿಂದ ಮಾಡಿದೆ ಒಂದು ಡಬ್ಬಿ ಅದಕ್ಕೆ ಈಗಲೂ ಅಡಪ ಎಂದು ಉತ್ತರ ಕರ್ನಾಟಕದಲ್ಲಿ ಕರೆಯುತ್ತಾರೆ. ಮಹಾ ಮನೆಯಲ್ಲಿ ಪ್ರಸಾದವಾದ ಮೇಲೆ ತಾಂಬೂಲ ವಿತರಿಸುವ ರೇಚಣ್ಣನೂ ಅಡಪವನ್ನು ಹೊಂದಿದ್ದನ್ನು . ಅಡಪವನ್ನು ಹೊಂದಿದವ ಅಡಪದವ ಅಥವಾ ಹಡಪದ ಎಂಬ ತಪ್ಪು ಉಚ್ಚಾರಣೆಯಿಂದಾಗಿ ಹಡಪದ ಎಂದು ಹೆಸರು ಬಂತು. ಕ್ಷೌರಿಕ ಕಾರ್ಯವನ್ನು ಮಾಡುವವರು ಈಗಲೂ ಕೂಡ ಹಳ್ಳಿಯಲ್ಲಿ ಅಡಪವನ್ನು ಇಟ್ಟುಕೊಂಡು ಮನೆ ಮನೆಗೆ ಹೋಗಿ ಕ್ಷೌರಿಕ ಸೇವೆ ಮಾಡುತ್ತಾರೆ. ಹಡಪದ ಅಪ್ಪಣ್ಣನವರು ಕ್ಷೌರಿಕ ಕುಲದಲ್ಲಿ ಹುಟ್ಟಿದರೂ ಸಹಿತ ಅವರು ಪ್ರಧಾನಿ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯ ಮಾಡಿದರು ಎಂದು ತಿಳಿದು ಬರುತ್ತದೆ. ಚೆನ್ನಬಸವಣ್ಣನವರ ಮೇಲೆ ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮರ ಪ್ರಭಾವ ಬಸವಣ್ಣನವರು ಬಾಗೇವಾಡಿ ಅಗ್ರಹಾರವನ್ನು ಬಿಟ್ಟು ಕೂಡಲ ಸಂಗಮಕ್ಕೆ ಹೋಗುವಾಗ ಅಕ್ಕನಾಗಮ್ಮ ಮತ್ತು ಅವಳ ಪತಿ ಶಿವಸ್ವಾಮಿಗಳ ಜೊತೆಗೆ ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮನವರೂ ಹೋಗಿದ್ದರು. ಹಡಪದ ಅಪ್ಪಣ್ಣ ಕೂದಲ ಸಂಗಮ್ಮದಲ್ಲಿ ಮಾದಲಾಂಬಿಕೆಯ ತವರು ಮನೆಯಲ್ಲಿ ಕೃಷಿ ಮಾಡುತ್ತಿರಬಹುದು ಅಥವಾ ಬಸವಣ್ಣನವರು ತಮ್ಮ ಶಿಕ್ಷಣವನ್ನು 12 ವರುಷ ಕೂಡಲ ಸಂಗಮದಲ್ಲಿ ಮಾಡುತ್ತಿರುವಾಗ ಕ್ಷೌರಿಕ ವೃತ್ತಿಯನ್ನು ಮಾಡುತ್ತಿರಬಹುದು. ಬಲದೇವರ ಆಮಂತ್ರಣದ ಮೇರೆಗೆ ಬಸವಣ್ಣ ಅಕ್ಕನಾಗಮ್ಮ ಬಾಲಕ ಚೆನ್ನಬಸವಣ್ಣ ಮತ್ತು ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮ ಮಂಗಳವೇಡೆಗೆ ಹೋದರು. ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮ
ಧಾರಾವಾಹಿ ಸಂಗಾತಿ-34 ಡಾ.ವಿಶ್ವನಾಥ್ ಎನ್ ನೇರಳೆಕಟ್ಟೆ ಅರ್ಜುನ ಉವಾಚ ರಣವೀರನಾಗಬೇಕಾದ ಮಣಿಪುರದರಸ ಮಣಿದ ನನಗೆ ‘ಮಣಿಪುರದರಸು ಬಭ್ರುವಾಹನ ನಿಮ್ಮ ಯಜ್ಞಾಶ್ವವನ್ನು ಕಟ್ಟಿಹಾಕಿದ್ದಾನೆ. ಬಿಡಿಸಿಕೊಂಡುಹೋಗುವ ಸಾಮರ್ಥ್ಯವಿದ್ದರೆ ಯುದ್ಧರಂಗದಲ್ಲಿ ಪರಾಕ್ರಮ ತೋರುವವರಾಗಬೇಕು’ ಎಂಬ ಸಂದೇಶವದು ನಮ್ಮನ್ನು ತಲುಪಿತು. ಅದಾಗಲೇ ಸೂರ್ಯ ಅಸ್ತಂಗತನಾಗಿದ್ದ. ಆ ದಿನ ಯುದ್ಧ ನಡೆಯುವುದು ಸಾಧ್ಯವಿರಲಿಲ್ಲ. ಇನ್ನೇನಿದ್ದರೂ ಮರುದಿನವಷ್ಟೇ ಕದನಕೋಲಾಹಲ ಆರಂಭ.ನನ್ನ ಆಪ್ತರ ಜೊತೆ ಮರುದಿನದ ಯುದ್ಧತಂತ್ರಗಳನ್ನು ಚರ್ಚಿಸಿದೆ. ಸಮರ್ಥನೆನಿಸಿಕೊಂಡ ಬಭ್ರುವಾಹನನನ್ನು ಹೀನಾಯವಾಗಿ ಸೋಲಿಸಿದರೆ ನನ್ನ ವಿಜಯಮಾಲೆಗೆ ಹೊಸದೊಂದು ಕುಸುಮದ ಆಗಮನವದು ಖಚಿತ ಎನಿಸಿತು. ಬಭ್ರುವಾಹನನ ಸ್ಮರಣೆಯಲ್ಲಿಯೇ ಇರುಳು ಕಳೆಯಿತು.ಬೆಳಕು ಮೂಡಿತು. ನಿತ್ಯಕರ್ಮಗಳನ್ನು ಪೂರೈಸಿದೆ. ಜಪತಪಾದಿಗಳನ್ನು ಮುಗಿಸಿದೆ. ಕೃಷ್ಣ ಪಾದಪದ್ಮಗಳನ್ನು ನೆನೆದೆ. ನಮ್ಮ ಪಾಳಯದ ವೀರರೆಲ್ಲರನ್ನೂ ಕರೆಸಿದೆ. ಅವರ ಜೊತೆಗೆ ಯುದ್ಧರಂಗಕ್ಕೆ ಹೊರಟೆ.ಅನುಸರಿಸುತ್ತಿತ್ತು ಅನುಸಾಲ್ವಕನ ಸೇನೆ ನನ್ನನ್ನು. ಯುಕ್ತಿಯ ಯಾದವ ಚತುರಂಗವದು ಜೊತೆಗಿತ್ತು. ಒಡನೆಯೇ ಬಂತು ವೃಷಕೇತುವಿನ ವ್ಯಗ್ರಸೇನೆ. ಯುದ್ಧಚತುರ ಯೌವನಾಶ್ವನ ದಂಡು ಹಿಂದೆಯೇ ಇತ್ತು. ಹಂಸಧ್ವಜನ ಹೋರಾಟದ ಪಡೆಯದು ಮುನ್ನುಗ್ಗುತ್ತಿತ್ತು. ಘನವಾದ್ಯಗಳ ಧ್ವನಿಯದು ಮೊಳಗಿರಲು ನಾವೆಲ್ಲರೂ ಬಂದುಸೇರಿದೆವು ರಣರಂಗವನ್ನು.ನಾನು ಮುಂಚೂಣಿಯಲ್ಲಿದ್ದೆ. ಬಭ್ರುವಾಹನನ ಆಗಮನಕ್ಕಾಗಿ ನನ್ನ ಕಣ್ಣು ಕಾತರಿಸುತ್ತಿತ್ತು. ಅಪಾರ ಜನಸಮೂಹದೊಂದಿಗೆ ಮಣಿಪುರದೊಡೆಯ ಬರುತ್ತಿರುವುದು ಕಂಡಿತು. ನೋಡಿದೆ! ಸರಿಯಾಗಿ ಇನ್ನೊಮ್ಮೆ ನೋಡಿದೆ! ಯುದ್ಧೋನ್ಮುಖವಾಗಿ ಬರುತ್ತಿರುವ ದಂಡು ಅದಲ್ಲ ಎಂದು ತೋರಿತು ನನಗೆ.ಘನವಾದ್ಯದ ಮೊರೆತವಿರಲಿಲ್ಲ. ಕಾಳಗದ ಆರ್ಭಟವದು ಅಲ್ಲಿರಲಿಲ್ಲ. ಶುಭಸೂಚಕವಾದ ಇಂಪು ವಾದನಗಳ ಧ್ವನಿಯದು ಕೇಳಿಬರುತ್ತಿತ್ತು. ಕಳಶ, ಕನ್ನಡಿಗಳನ್ನು ಹಿಡಿದು ಅಲಂಕೃತರಾಗಿ ಮಂದಗಮನೆಯರಾಗಿ ಸಾಗಿಬರುತ್ತಿದ್ದರು ಲಲಿತಾಂಗಿಯರು. ಬ್ರಾಹ್ಮಣರಿದ್ದರು ಆ ಮೆರವಣಿಗೆಯಲ್ಲಿ, ವೇದಮಂತ್ರಗಳನ್ನು ಪಠಿಸುತ್ತಾ. ಈ ಬಗೆಯಲ್ಲಿ ಯುದ್ಧಕ್ಕೆ ಆಗಮಿಸುವುದೂ ಇದೆಯೇ! ಎಂದು ಅಚ್ಚರಿಯಾಯಿತು ನನಗೆ.ಮೆರವಣಿಗೆಯ ಮೊಟ್ಟಮೊದಲಲ್ಲಿದ್ದ ಬಭ್ರುವಾಹನ. ಹತ್ತಿರ ಬಂದAತೆಲ್ಲಾ ಅವನ ರೂಪವದು ಸ್ಪಷ್ಟವಾಯಿತು. ಒಂದಷ್ಟು ವರ್ಷಗಳಿಗೆ ಮೊದಲು ನಾನು ಹೇಗಿದ್ದೆನೋ ಹಾಗೆಯೇ ಇದ್ದಾನೆ.ನೇರವಾಗಿ ಬಂದ ನನ್ನೆಡೆಗೆ, ನಗುವನ್ನು ಸೂಸುತ್ತಾ. ಕದನ ಭಾವವದು ಅವನ ಮುಖದಲ್ಲಿ ಎಳ್ಳಷ್ಟೂ ಕಾಣಿಸಲಿಲ್ಲ. ನನಗೆ ತೀರಾ ಸನಿಹದವನಾಗಿ ನಿಂತ, ಆನಂದದಿAದ ನನ್ನ ಮೊಗವನ್ನು ನಿಟ್ಟಿಸುತ. ಒಡನೆಯೇ ತನ್ನ ಶಿರದಲ್ಲಿ ಶೋಭಿಸುತ್ತಿದ್ದ ಕಿರೀಟವನ್ನು ತೆಗೆದ. ನನ್ನ ಪಾದಗಳ ಬಳಿಯಿಟ್ಟ. ಅದು ಶರಣಾಗತಿಯ ಸಂಕೇತ. ಅಚ್ಚರಿಯಾಯಿತು ನನಗೆ. ಯುದ್ಧಕ್ಕೂ ಮೊದಲೇ ಶರಣು ಬಂದನೇ ಈತ! ಎನಿಸಿತು. ಮುಂದೇನು ಮಾಡಲಿದ್ದಾನೋ ಎಂಬAತೆ ನೋಡಿದೆ. ಅನರ್ಘ್ಯ ರತ್ನಗಳನ್ನು ನನ್ನ ಪಾದಮೂಲಕ್ಕೆ ಸುರಿದ. ಎರಡೂ ಕೈಗಳನ್ನು ಜೋಡಿಸಿ ನಮಸ್ಕರಿಸಿದ. ಹಾಗೆಯೇ ಸಾಷ್ಟಾಂಗ ಪ್ರಣಾಮವನ್ನೇ ಮಾಡಿದ, ನೆಲದ ಮೇಲೆ ಒರಗಿ.ತಕ್ಷಣವೇ ಅಲ್ಲಿ ನೆರೆದಿದ್ದ ಮಣಿಪುರದ ಜನರು, ಹೆಂಗಳೆಯರು ನನ್ನ ಮೇಲೆ ಮುತ್ತಿನ ಮಳೆಗರೆದರು. ಬಗೆಬಗೆಯ ಕಾಣಿಕೆಗಳನ್ನು ನನಗಿತ್ತರು ಅಲ್ಲಿಯ ಸಚಿವರು. ಪರಾಕ್ರಮದ ಮಾತು, ಹರಿತ ಬಾಣಗಳ ಪ್ರಯೋಗ, ಹೀಗಳೆವ ಹೀನನನುಡಿ ಇವುಗಳನ್ನೆಲ್ಲಾ ನಿರೀಕ್ಷಿಸಿ ಹೋಗಿದ್ದ ನಾನು ಬಭ್ರುವಾಹನನ ವಿನಯಶೀಲತೆ, ಅಲ್ಲಿನ ಜನರ ಮುತ್ತಿನ ಮಳೆ, ಅಪೂರ್ವ ಕಾಣಿಕೆಗಳು ಇದನ್ನೆಲ್ಲಾ ಕಂಡು ವಿಸ್ಮಯಚಕಿತನಾದೆ. ನನ್ನ ಜೊತೆಗಿದ್ದ ನನ್ನ ಆಪ್ತರೂ ಸಹ ಅಚ್ಚರಿಯ ಸಾಗರದಲ್ಲಿ ಮುಳುಗಿಹೋಗಿದ್ದರು. ಕೇಳಿದೆ ಬಭ್ರುವಾಹನನಲ್ಲಿ, “ಏನಿದೆಲ್ಲಾ?! ಯಾಕೆ ಈ ಪರಿಯ ವಿನಯಶೀಲತೆ?!”ಒಡನೆಯೇ ಅವನು ನನ್ನನ್ನು ‘ತಂದೆ’ ಎಂದು ಸಂಭೋದಿಸಿದ. ನನ್ನ ಕಣ್ಣುಗಳರಳಿದವು, ಚಕಿತತೆಯಿಂದ. “ನಾನು ನಿಮ್ಮ ಮಗ. ನೀವಂದು ತೀರ್ಥಯಾತ್ರೆಗೆಂದು ಇಲ್ಲಿಗೆ ಬಂದಾಗ ನಿಮ್ಮಿಂದ ಜನಿಸಿದವನು ನಾನು. ನನ್ನ ತಾಯಿ ಚಿತ್ರಾಂಗದೆ. ಪ್ರೀತಿಯಿಂದ ಸಲಹಿದವಳು ಉಲೂಪಿ. ನೀವೆನ್ನ ಜನಕ ಎಂಬ ಸತ್ಯವನ್ನು ಅರಿಯದೆಯೇ ಕಟ್ಟಿದೆ ಕುದುರೆಯನ್ನು. ಕ್ಷಮಿಸಬೇಕು ನಾ ಮಾಡಿದ ಈ ಬಗೆಯ ತಪ್ಪನ್ನು” ಎಂದವನು ತಪ್ಪು ಮಾಡಿ ಸಿಕ್ಕಿಬಿದ್ದ ಎಳೆಮಗುವಿನಂತೆ ಕಾಲಿಗೆ ಬಿದ್ದ.ನಾನು ಏನೊಂದು ನುಡಿಯನ್ನೂ ಆಡಲಿಲ್ಲ. ನನ್ನನ್ನೇ ನೋಡುತ್ತಿದ್ದರು ನನ್ನಾಪ್ತರು, ಆತ್ಮೀಯರು. ಇದಾವ ಹೊಸ ಬಾಂಧವ್ಯವಿದು ಬಂದಪ್ಪಿದೆ ಈ ಅರ್ಜುನನನ್ನು ಎಂಬ ಭಾವವಿತ್ತು ಅವರ ಆ ಕಣ್ಣೋಟದಲ್ಲಿ. ಬಭ್ರುವಾಹನ ನನ್ನ ಮಗ ಎನ್ನುವುದನ್ನು ಸಂಪೂರ್ಣವಾಗಿ ನಂಬಿದAತಿತ್ತು ಅವರ ಮಾತುಗಳು.“ನಿನ್ನ ಮಗನಾದ ಈ ಬಭ್ರುವಾಹನ ಮಹಾ ಪರಾಕ್ರಮಿ. ವೈಭವಯುತನಾಗಿದ್ದಾನೆ. ಹೊಗಳಿಕೆಗೆ ಅರ್ಹನೆನಿಸಿಕೊಂಡಿದ್ದಾನೆ. ನಿನ್ನನ್ನೇ ಹೋಲುತ್ತಾನೆ ರೂಪದಲ್ಲಿ. ಪಾದವನ್ನಪ್ಪಿರುವ ಈತನನ್ನು ಕ್ಷಮಿಸದೆಯೇ ಸುಮ್ಮನೆ ಏಕೆ ನಿಂತೆ?! ಮನ್ನಿಸು ಅವನನ್ನು” ಎಂದರು ಅವರೆಲ್ಲರೂ.ಹೀಗೆ ಬಭ್ರುವಾಹನ ನಡೆದುಕೊಳ್ಳುವುದರ ಹಿಂದೆ ಒಂದು ಬಲವಾದ ಕಾರಣವಿತ್ತು. ಹಿಂದಿನ ದಿನ ನಮ್ಮ ಕುದುರೆಯನ್ನು ಕಟ್ಟಿಸಿದ್ದ ಆತ ನಮ್ಮೆದುರಿನ ಯುದ್ಧಕ್ಕೆ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದ. ಈ ಸಮಯದಲ್ಲಿಯೇ ಅವನ ತಾಯಿಗೆ ಈ ವಿಷಯ ಗೊತ್ತಾಯಿತಂತೆ. ತಕ್ಷಣವೇ ಅವನ ಬಳಿಹೋಗಿ, “ಅರ್ಜುನ ನಿನ್ನ ತಂದೆ. ಅವನ ಕುದುರೆಯನ್ನು ಕಟ್ಟಿರುವುದು ಸರಿಯಲ್ಲ” ಎಂದಳAತೆ. ಈ ವಿಚಾರವನ್ನು ಸುಬುದ್ಧಿಯ ಜೊತೆಗೆ ಚರ್ಚಿಸಿದನಂತೆ ಬಭ್ರುವಾಹನ. “ತಂದೆಯೆAದು ತಿಳಿಯದೇ ಇದ್ದಾಗ ಕುದುರೆಯನ್ನು ಕಟ್ಟಿಸಿದವ ನೀನು. ಈಗ ನಿಜ ವಿಚಾರ ತಿಳಿದ ಬಳಿಕವೂ ಹಾಗೆಯೇ ನಡೆದುಕೊಳ್ಳುವುದು ಉಚಿತವಲ್ಲ” ಎಂಬ ಸಲಹೆಯನ್ನು ನೀಡಿದನಂತೆ ಸುಬುದ್ಧಿ. ಈ ಕಾರಣಕ್ಕೇ ಬಭ್ರುವಾಹನ ಯುದ್ಧಚಂತನೆಯನ್ನು ತೊರೆದು, ಶರಣಾಗತನಾಗಿ ನನ್ನೆದುರಿಗೆ ಬಂದದ್ದು.ನನಗಂತೂ ಬಭ್ರುವಾಹನ ನುಡಿದದ್ದೆಲ್ಲವೂ ಕಟ್ಟುಕಥೆ ಎಂದೇ ತೋರಿತು. ನನ್ನನ್ನು ಎದುರಿಸಲಾರದ ಅಧೈರ್ಯಕ್ಕೆ ಒಳಗಾದವನು ಸುಳ್ಳು ಹೇಳುತ್ತಿದ್ದಾನೆ ಎನಿಸಿತು. ಹೀಗಿದ್ದಾಗಲೇ ನಮ್ಮವರಾಡಿದ “ಕ್ಷಮಿಸು ಮಗನನ್ನು” ಎಂಬ ಮಾತು ನನ್ನನ್ನು ಕೆರಳಿಸಿತು. ಉಗ್ರನೋಟ ಬೀರಿದೆ ಬಭ್ರುವಾಹನನೆಡೆಗೆ… ಡಾ.ವಿಶ್ವನಾಥ್ ಎನ್ ನೇರಳೆಕಟ್ಟೆ
ಧಾರಾವಾಹಿ ಸಂಗಾತಿ-125 ರುಕ್ಮಿಣಿ ನಾಯರ್ ಒಬ್ಬ ಅಮ್ಮನ ಕಥೆ ಸುಮತಿಗೆ ಡಯಾಲಿಸಿಸ್ ಮಾಡಿಸಲು ಮಗಳ ಪ್ರಯತ್ನ ಮರುದಿನ ಬೆಳಿಗ್ಗೆ ಸುಮತಿಯ ಎರಡನೇ ಮಗಳು ತನ್ನ ತಾಯಿಯ ಚಿಕಿತ್ಸೆಯನ್ನು ಮಾಡುತ್ತಿದ್ದ ವೈದ್ಯರ ಬಳಿಗೆ ಹೋದಳು. ಅವಳನ್ನು ನೋಡಿದ ವೈದ್ಯರು…. ಏನಮ್ಮ ನಿನ್ನ ತಾಯಿ ಹೇಗಿದ್ದಾರೆ?…. ಎಂದು ಕೇಳಿದರು. ಹಿಂದಿನ ದಿನ ತಂಗಿಯು ಹೇಳಿದ್ದ ವಿಚಾರವನ್ನು ಮಾತನಾಡಲೆಂದು ಅವಳು ವೈದ್ಯರಲ್ಲಿಗೆ ಬಂದಿದ್ದಳು…. _ಸರ್ ನನ್ನ ತಾಯಿಯ ಆರೋಗ್ಯ ಸುಧಾರಿಸಲು ಬೇರೆ ಯಾವ ಚಿಕಿತ್ಸೆಯೂ ಇಲ್ಲವೇ?”… ಎಂದು ಕೇಳಿದಳು. ಆಗ ವೈದ್ಯರು…. “ಇದೆಯಮ್ಮಾ….. ಆದರೆ ಅದು ಬಹಳ ದುಬಾರಿ…. ನಿನ್ನ ತಾಯಿಯ ಆಂತರಿಕ ಅಂಗಾಂಗಗಳೆಲ್ಲವೂ ತಮ್ಮ ಕಾರ್ಯವನ್ನು ನಿರ್ವಹಿಸಲು ವಿಫಲವಾಗಿವೆ….. ಆದರೆ ಆಗಾಗ ಡಯಾಲಿಸಿಸ್ ಮಾಡಿಸುವ ಮೂಲಕ ನಿನ್ನ ತಾಯಿಯ ಆರೋಗ್ಯವನ್ನು ಸ್ವಲ್ಪ ಹೆಚ್ಚು ಕಾಲ ಸುಧಾರಿಸಿಕೊಳ್ಳುವಂತೆ ಮಾಡಬಹುದು”….. ಎಂದು ವೈದ್ಯರು ಹೇಳಿದ ಈ ವಿಚಾರ ಆ ಹುಡುಗಿಗೆ ಸರಿಯಾಗಿ ತಿಳಿದಿರಲಿಲ್ಲ ಹಾಗಾಗಿ…._ “ಡಯಾಲಿಸಿಸ್ ಎಂದರೇನು, ಸರ್?”… ಎಂದು ಕೇಳಿದಳು….”ನಮ್ಮ ಶರೀರವನ್ನು ನಿರಂತರವಾಗಿ ಶುದ್ಧೀಕರಣಗೊಳಿಸಲು ಮುಖ್ಯವಾಗಿ ಕಿಡ್ನಿಗಳು ಕೆಲಸ ಮಾಡಬೇಕು…. ಅವುಗಳು ಕೆಲಸ ಮಾಡಲು ವಿಫಲವಾದಾಗ ರಕ್ತದಲ್ಲಿನ ವಿಷಕಾರಿ ತ್ಯಾಜ್ಯ ಮತ್ತು ಹೆಚ್ಚುವರಿ ದ್ರವವನ್ನು ಕೃತಕವಾಗಿ ಫಿಲ್ಟರ್ ಮಾಡಿ ಸ್ವಚ್ಛಗೊಳಿಸುವ ಪ್ರಕ್ರಿಯೆಯನ್ನು ಡಯಾಲಿಸಿಸ್ ಎಂದು ಕರೆಯುತ್ತಾರೆ…. ಇದನ್ನು ಮಾಡಿಸಿದರೆ ಇನ್ನೂ ಸ್ವಲ್ಪ ಹೆಚ್ಚು ಕಾಲ ನಿನ್ನ ತಾಯಿ ಜೀವಂತವಾಗಿರಬಹುದು…. ಆದರೆ ಇದನ್ನು ಆಗಾಗ ಮಾಡಿಸುತ್ತಿರಬೇಕಾಗುತ್ತದೆ…. ಇದರ ಖರ್ಚು ಅಧಿಕ…. ಎಂದರು”….. “ಹಾಗಾದರೆ ನನ್ನ ತಾಯಿಗೆ ಈ ಚಿಕಿತ್ಸೆಯನ್ನು ಕೊಡಬಹುದಲ್ಲವೇ?”… ಎಂದು ಕೇಳಿದಳು. ಅವಳ ಮಾತಿಗೆ,… “ಹೌದು ಆಕೆಯು ಹೆಚ್ಚಿನ ಕಾಲ ಬದುಕುಳಿಯಬೇಕಾದರೆ ಈ ಚಿಕಿತ್ಸೆಯನ್ನು ನಿಮ್ಮ ತಾಯಿಗೆ ಕೊಡಿಸಲೇಬೇಕು”…. ಎಂದಾಗ….” ಸರ್ ದಯವಿಟ್ಟು ಆದಷ್ಟು ಬೇಗ ನನ್ನ ತಾಯಿಗೆ ಈ ಚಿಕಿತ್ಸೆಯನ್ನು ಕೊಡಿಸಿ”…. ಎಂದು ಆ ಹುಡುಗಿ ಕೇಳಿಕೊಂಡಾಗ, ಅವಳ ಮುಗ್ದತೆಯನ್ನು ಅರಿತ ವೈದ್ಯರು…. “ಮಗು ಈ ಚಿಕಿತ್ಸೆಯನ್ನು ಇಲ್ಲಿ ನಮ್ಮ ಆಸ್ಪತ್ರೆಯಲ್ಲಿ ಕೊಡಲು ಸಾಧ್ಯವಿಲ್ಲ…. ಅದಕ್ಕೆ ಬೇಕಾದ ಉಪಕರಣಗಳು ಇಲ್ಲಿಲ್ಲ…. ಈ ಚಿಕಿತ್ಸೆಯನ್ನು ಕೊಡಲು ವಿಶೇಷ ಯಂತ್ರವು ಬೇಕಾಗಿದೆ…. ಇದು ಬಹಳ ಅಪರೂಪಕ್ಕೆ ಈ ಚಿಕಿತ್ಸೆಗೆಂದೇ ವಿಶೇಷವಾದ ಆಸ್ಪತ್ರೆಗಳಲ್ಲಿ ಲಭ್ಯವಿರುತ್ತದೆ”…. ಎಂದು ವೈದ್ಯರು ಹೇಳಿದಾಗ…. “ಯಾವ ಆಸ್ಪತ್ರೆಯಲ್ಲಿ ಈ ಚಿಕಿತ್ಸೆಯನ್ನು ಕೊಡಬಹುದು?… ಎಂದು ಕೇಳಿದಳು,…. “ಬೆಂಗಳೂರಿನ ಕಿಡ್ನಿ ಫೌಂಡೇಶನ್ ಎನ್ನುವ ಆರೋಗ್ಯ ಸಂಸ್ಥೆಯಲ್ಲಿ ಮಾತ್ರ ಈ ಚಿಕಿತ್ಸೆ ಲಭ್ಯವಿದೆ…. ಸಾಧ್ಯವಾದರೆ ಅಲ್ಲಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಮ್ಮ”…. ಎಂದು ವೈದ್ಯರು ಹೇಳಿದರು. ಅದನ್ನು ಕೇಳಿದ ಹುಡುಗಿಯ ಮುಖದಲ್ಲಿ ಚಿಂತೆಯ ಗೆರೆಗಳು ಮೂಡಿದವು. ಏನು ಮಾಡಬೇಕು ಎನ್ನುವುದು ಹೊಳೆಯಲಿಲ್ಲ. ವೈದ್ಯರಿಗೆ ಧನ್ಯವಾದ ತಿಳಿಸಿ, ಕೊಠಡಿಯಿಂದ ಹೊರ ನಡೆದಳು. ಆಸ್ಪತ್ರೆಯ ಹುಲ್ಲು ಹಾಸಿನ ಮೇಲೆ ಕುಳಿತುಕೊಂಡು ಆಲೋಚನೆ ಮಾಡ ತೊಡಗಿದಳು. ಅಕ್ಕ-ಬಾವನಿಗೆ ಹೇಳಿದರೆ ಹೇಗೆ? ಅವರು ಏನಾದರೂ ಸಹಾಯ ಮಾಡಬಹುದೇ? ಹಾಗೆ ಯೋಚಿಸಿದಾಗ ಅವರಿಂದ ಅದು ಸಾಧ್ಯವಿಲ್ಲ ಎಂದು ಅವಳಿಗೆ ಅನಿಸಿತು. ಏಕೆಂದರೆ ಅವರು ಕೂಡ ಹೆಚ್ಚು ಹಣವಂತರಾಗಿರಲಿಲ್ಲ. ಬಾವ ಟಿಂಬರ್ ಕೆಲಸದಿಂದ ಬರುವ ಆದಾಯದಲ್ಲಿ ಅಕ್ಕ ಮತ್ತು ಮಕ್ಕಳ ಖರ್ಚು ವೆಚ್ಚ ಯೋಗಕ್ಷೇಮಗಳನ್ನು ನೋಡಿಕೊಳ್ಳುತ್ತಿದ್ದಾರೆ. ತಾಯಿಯ ತಮ್ಮಂದಿರು ಹಾಗೂ ನೆಂಟರಿಷ್ಟರನ್ನು ಕೇಳುವಂತೆ ಇಲ್ಲ. ತಾಯಿಯ ಎರಡನೇ ತಮ್ಮ ಅವರ ಕೈಲಿ ಆಗುವಷ್ಟು ಮತ್ತು ಅವರ ಶಕ್ತಿಯನ್ನೂ ಮೀರಿ ಹಲವು ಸಲ ನಮಗೆ ಸಹಾಯ ಮಾಡಿದ್ದಾರೆ. ಇನ್ನು ನೆಂಟರಿಷ್ಟರು ಇದ್ದರೂ ಕೂಡ ಅಮ್ಮನ ಕಷ್ಟಕರ ಜೀವಿತ ಹಾಗೂ ಅಪ್ಪ ತೀರಿ ಹೋದ ನಂತರ ಒಬ್ಬರ ಸುಳಿವೂ ಇಲ್ಲ. ನೆಂಟರಿಷ್ಟರಾದ ಯಾರನ್ನೂ ಆಶ್ರಯಿಸದೇ ಸ್ವಾಭಿಮಾನದಿಂದ ಬದುಕಿದ ತಾಯಿ ನಮಗೂ ಅದನ್ನೇ ಕಲಿಸಿದ್ದಾರೆ. ಇನ್ನು ಉಳಿದಿರುವುದು ನಮಗೆ ಆಶ್ರಯವಿತ್ತು ನಮ್ಮ ಕಷ್ಟಕ್ಕೆ ಸದಾ ಹೆಗಲಾಗಿ ನಿಂತಿರುವವರು ನಮ್ಮ ಎಸ್ಟೇಟಿನ ದಯಾಳುವಾದ ಸಾಹುಕಾರರು ಮತ್ತು ಅವರ ಪತ್ನಿ ‘ಅಮ್ಮ’. ಅವರಲ್ಲಿ ಈ ಬಗ್ಗೆ ತಿಳಿಸಿ ನೋಡೋಣ. ಏಕೆಂದರೆ ಜೀವನ ನಿರ್ವಹಣೆಗೆ ದಾರಿ ಮಾಡಿಕೊಟ್ಟಿದ್ದಲ್ಲದೇ, ಈವರೆಗೂ ಅಮ್ಮನಿಗೆ ಬೇಕಾದ ಇನ್ಸುಲಿನ್ ಚುಚ್ಚುಮದ್ದು ಹಾಗೂ ಕಣ್ಣಿನ ಕ್ಯಾಟರಾಕ್ಟ್ ಶಸ್ತ್ರಚಿಕಿತ್ಸೆ ಮತ್ತು ಇನ್ನಿತರೆ ಚಿಕಿತ್ಸೆಗಳಿಗೆ ಅವರು ಸಹಾಯ ಮಾಡಿದ್ದಾರೆ. ಬಹುಶಃ ಈ ವಿಚಾರ ತಿಳಿದರೆ ಖಂಡಿತ ನಮಗೆ ಏನಾದರೂ ಒಂದು ಸಹಾಯ ಮಾಡಿಯೇ ಮಾಡುತ್ತಾರೆ ಎಂಬ ವಿಚಾರ ಮನಸ್ಸಿಗೆ ಬಂದಾಗ, ನನ್ನ ತಾಯಿ ಆಸ್ಪತ್ರೆಯಲ್ಲಿ ದಾಖಲಾಗಿ ಇರುವಾಗಲೇ ನಾನು ಎಸ್ಟೇಟ್ ಗೆ ಹೋಗಿ ಅಲ್ಲಿ ಸಾಹುಕಾರರನ್ನು ಕಂಡು ಅವರಲ್ಲಿ ಈ ಬಗ್ಗೆ ಮಾತನಾಡಿ ವಿನಂತಿಸಿಕೊಳ್ಳುತ್ತೇನೆ. ಅವರು ಖಂಡಿತ ನಮಗೆ ಸಹಾಯ ಮಾಡುತ್ತಾರೆ ಎನ್ನುವ ಭರವಸೆ ಮೂಡಿದ ಕೂಡಲೇ ಕುಳಿತಲ್ಲಿಂದ ಎದ್ದು ನೇರವಾಗಿ ವಾರ್ಡಿಗೆ ಹೋದಳು. ಈ ವಿಷಯವನ್ನು ತಾಯಿಗೆ ತಿಳಿಸಲಿಲ್ಲ. ಏನಾದರೂ ಒಂದು ವ್ಯವಸ್ಥೆ ಆದ ಮೇಲೆ ತಿಳಿಸಿದರಾಯ್ತು. ಈಗಲೇ ಹೇಳಿ ಮನಸ್ಸಿನಲ್ಲಿ ಇಲ್ಲದ ಆಸೆಯನ್ನು ತರಿಸುವುದು ಬೇಡವೆಂದು ತೀರ್ಮಾನಿಸಿದಳು. ತಾಯಿ ಊಟ ಮಾಡಿದ ನಂತರ ಅಲ್ಲಿಂದ ಆಶ್ರಮಕ್ಕೆ ಹೊರಟಳು. ಅವಳ ಕಾಲೇಜಿನ ಕಲಿಕೆ ಆಶ್ರಮದ ಮಕ್ಕಳಿಗೆ ಪಾಠ ಮಾಡುವುದು ಜೊತೆಗೆ ಅಮ್ಮನ ಆರೈಕೆ ಅವಳ ಗೆಳತಿಯ ಸಹಾಯದಿಂದ ನಿರಾತಂಕವಾಗಿ ನಡೆಯುತ್ತಿತ್ತು. ಆಶ್ರಮದ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದ ಸೆಕ್ರೆಟರಿ ಅವರನ್ನು ಭೇಟಿ ಮಾಡಿದಳು. ನಾಳೆ ತಾನು ಕಾಲೇಜಿಗೆ ರಜೆ ಹಾಕಿ ಎಸ್ಟೇಟಿಗೆ ಹೋಗಿ ಸಾಹುಕಾರರನ್ನು ಹಾಗೂ ಅವರ ಪತ್ನಿ ‘ಅಮ್ಮ’ನನ್ನು ಕಂಡು ತನ್ನ ತಾಯಿಯ ಡಯಾಲಿಸಿಸ್ ಗೆ ಸಹಾಯವನ್ನು ಕೋರಿ, ಅಲ್ಲಿರುವ ತನ್ನ ತಂಗಿಯನ್ನು ಕಂಡು ಅವಳಿಗೆ ವಿಷಯ ತಿಳಿಸಿ ಸಂಜೆ ಪುನಹ ಆಶ್ರಮಕ್ಕೆ ಬರುರುವುದಾಗಿ ವಿನಂತಿಸಿಕೊಂಡು ಅವರ ಅನುಮತಿಯನ್ನು ಪಡೆದಳು. ಆತ ಒಬ್ಬ ದಯಾಳು ಮನುಷ್ಯನಾದ ಕಾರಣ ಹಾಗೂ ಸುಮತಿಯ ಮಗಳ ಜವಾಬ್ದಾರಿಯುತ ನಡೆಯನ್ನು ಮೆಚ್ಚುತ್ತಿದ್ದ ಕಾರಣ ಅವಳಿಗೆ ತನ್ನಿಂದಾದ ಎಲ್ಲಾ ಸಹಾಯವನ್ನು ಮಾಡುತ್ತಿದ್ದರು. ತನ್ನ ಗೆಳತಿಗೂ ಈ ವಿಷಯವನ್ನು ತಿಳಿಸಿದಳು. ಅವಳು…. “ನಿಶ್ಚಿಂತೆಯಿಂದ ಹೋಗಿ ಬಾ… ಇಲ್ಲಿನ ಎಲ್ಲಾ ಕೆಲಸವನ್ನು ನಾನು ನೋಡಿಕೊಳ್ಳುತ್ತೇನೆ…. ಮೊದಲು ನಿನ್ನ ತಾಯಿಯ ಆರೋಗ್ಯದ ಕಡೆ ನಿನ್ನ ಗಮನವನ್ನು ಹರಿಸು…. ಆದಷ್ಟು ಬೇಗ ನಿನ್ನ ತಾಯಿ, ಚಿಕಿತ್ಸೆಯನ್ನು ಪಡೆಯುವಂತಾಗಲಿ”… ಎಂದಳು.
ಧಾರಾವಾಹಿ ಸಂಗಾತಿ–27 ಸವಿತಾ ದೇಶಮುಖ ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್ ಚೇತನ *ನಿಜಾಂ ಪ್ರಾಂತಿಕ ಪರಿಷತ್ತಿನ ಸ್ಥಾಪನೆ ಮತ್ತು ಕನ್ನಡವಚನ ಸಾಹಿತ್ಯದ ಜಾಗೃತಿ* ಹನ್ನೆರಡನೇ ಶತಮಾನದ ಶರಣರ ವಚನಗಳು ಸಾಮಾಜಿಕ ನ್ಯಾಯದ ಸಂದೇಶವನ್ನು ಸಾರಿದವು. ಈ ವಚನಗಳ ಪ್ರಭಾವವು ಇಂದಿನ ಕಲ್ಯಾಣ ಕರ್ನಾಟಕ ಹೈದರಾಬಾದ ಕರ್ನಾಟಕ ಪ್ರದೇಶದ ಗಡಿಭಾಗಗಳಲ್ಲಿಯೂ ಆಳವಾಗಿ ಬೇರೂರಿತ್ತು.ನಿಜಾಂ ಆಡಳಿತದ ಕಾಲದಲ್ಲಿ ಕನ್ನಡ ಭಾಷೆ ಮತ್ತು ವಚನ ಸಾಹಿತ್ಯಕ್ಕೆ ಸೂಕ್ತ ಪ್ರೋತ್ಸಾಹ ದೊರೆಯದಿದ್ದರೂ, ಕನ್ನಡಾಭಿಮಾನಿಗಳು ಮತ್ತು ಶರಣ ತತ್ವದ ಅನುಯಾಯಿಗಳು ಈ ಪರಂಪರೆಯನ್ನು ಜೀವಂತವಾಗಿಡಲು ನಿರಂತರವಾಗಿ ಶ್ರಮಿಸಿದರು. ಅದೇ ಸಮಯದಲ್ಲಿ ೧೯೩೪ ರಲ್ಲಿ ಹರಡೇಕರ್ ಮಂಜಪ್ಪನವರು ವಚನ ಧರ್ಮ ಗ್ರಂಥವೆಂದು ವಚನ ಸಪ್ತಾಹವನ್ನು ಪ್ರಾರಂಭಿಸಿದ್ದರು.ಬೀದರ ಜಿಲ್ಲೆಯಲ್ಲಿ ಬಸವ ತತ್ವ ಪ್ರಚಾರ ತುಂಬಾ ವ್ಯಾಪಕವಾಗಿತ್ತು.ಪ್ರಭುರಾಜ ಕಂಬಳಿ ಬಾಬಾ, ಸಂಗ್ರಾಮಪ್ಪ ವಕೀಲ ಹಾಗೂ ಜಯದೇವಿ ತಾಯಿಯವರು ಒಂದಾಗಿ “ನಿಜಾಂ ಪ್ರಾಂತಿಕ ಪರಿಷತ” ಎಂಬ ಸಂಸ್ಥೆಯನ್ನು ಸ್ಥಾಪಿಸಿದರು. *ಕತ್ತಲೆಯೆಂಬ ಅಜ್ಞಾನ |ಭ್ರಾಂತಿಎಂಬೋ ಭೂತರಾತರಿ ಹಗಲು ಕುಣಿದಿತ್ತು- ಲೋಕದಪ್ರೇತಗಳೆಲ್ಲ ಭೂತಾಗಿ ಕೂಣಿದಿತ||* ಎನ್ನುವಂತೆ…. ಜಗದಿ ಅಜ್ಞಾನವೆಂಬುವುದು ಭೂತ ಪ್ರೇತವಾಗಿ ಕುಣಿಯುವ ಸಮಯದಲ್ಲಿ ವಚನಗಳನ್ನು ಶರಣರು ನಮ್ಮ ಕೈಯಲ್ಲಿ ಇಟ್ಟರು. ಇಂಥ ಅಮೂಲ್ಯವಾದ ಜ್ಞಾನವನು ಉಳಿಸಿಕೊಂಡು ಬೆಳೆಸಿಕೊಂಡು ಹೋಗುವದುಕ್ಕೆ ಕರೆ ನೀಡಿದರು….ಜಯದೇವಿತಾಯಿಯವರು . ಪರಿಷತ್ತಿನ ಪ್ರಮುಖ ಧ್ಯೇಯ ಕನ್ನಡ ಭಾಷೆ, ಶರಣರ ವಚನ ಸಾಹಿತ್ಯ ಮತ್ತು ಬಸವ ತತ್ವಗಳನ್ನು ಜನಸಾಮಾನ್ಯರಲ್ಲಿ ಹರಡುವುದಾಗಿತ್ತು.ಪರಿಷತ್ತಿನ ಆಶ್ರಯದಲ್ಲಿ ಒಂದು ವಾಚನಾಲಯ ಸ್ಥಾಪಿಸಲಾಯಿತು. ಅಲ್ಲಿ ಬಸವ ಸಾಹಿತ್ಯ, ವಚನ ಸಂಕಲನಗಳು ಹಾಗೂ ಕನ್ನಡದ ಅಮೂಲ್ಯ ಕೃತಿಗಳನ್ನು ಸಾರ್ವಜನಿಕರ ಓದಿಗಾಗಿ ಲಭ್ಯವಾಗುವಂತೆ ಮಾಡಲಾಯಿತು. ಸಾಹಿತ್ಯದ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಈ ವಾಚನಾಲಯ ಪ್ರಮುಖ ಕೇಂದ್ರವಾಯಿತು.ಅಷ್ಟೇ ಅಲ್ಲದೆ, ಜಗಜ್ಯೋತಿ ಬಸವೇಶ್ವರ, ಅಕ್ಕ ಮಹಾದೇವಿ, ಚೆನ್ನಬಸವಣ್ಣ ಮೊದಲಾದ ಶರಣ ಮಹಾತ್ಮರ ಜಯಂತಿಗಳನ್ನು ಪ್ರತಿವರ್ಷ ಅರ್ಥಪೂರ್ಣವಾಗಿ ಆಚರಿಸುವ ಸಂಪ್ರದಾಯವನ್ನು ಆರಂಭಿಸಲಾಯಿತು.ಜಯಂತಿ ಕಾರ್ಯಕ್ರಮಗಳಲ್ಲಿ ವಚನ ಪಾರಾಯಣ, ಉಪನ್ಯಾಸಗಳು, ಚಿಂತನ ಗೋಷ್ಠಿಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಶರಣರ ಆದರ್ಶಗಳನ್ನು ಜನರಿಗೆ ಪರಿಚಯಿಸಲಾಯಿತು.ಈ ರೀತಿಯಾಗಿ ನಿಜಾಂ ಪ್ರಾಂತಿಕ ಪರಿಷತ್ತು ಕನ್ನಡ ಭಾಷೆಯ ಉಳಿವು, ವಚನ ಸಾಹಿತ್ಯದ ಪ್ರಸಾರ ಮತ್ತು ಶರಣ ಸಂಸ್ಕೃತಿಯ ಪುನರುಜ್ಜೀವನಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿತು. *ಅಪರೂಪವಾದ |ಅಪರಮಿತ ಜ್ಞಾನವಿಪರೀತ ಅಜ್ಞಾನದ ಮಾಯೆ ನುಂಗಿದವುವಚನಗಳು, ರೂಪಿಸಿ ಶರಣರ ಲೋಕವ || *ಎಂದು ಸಾರುತ….. ಜಯದೇವಿ ತಾಯಿಯವರ ನೇತೃತ್ವ ಮತ್ತು ಸಹೋದ್ಯೋಗಿಗಳ ಸೇವಾಭಾವದಿಂದ ಈ ಸಂಸ್ಥೆ ಕಲ್ಯಾಣ ಕರ್ನಾಟಕದಲ್ಲಿ ಕನ್ನಡ ಮತ್ತು ವಚನ ಚಳವಳಿಗೆ ಹೊಸ ಚೈತನ್ಯವನ್ನು ನೀಡಿತು. ನಿಜಾಂ ಪ್ರಾಂತಿಕ ಪರಿಷತ್ತು ಕನ್ನಡ ಭಾಷೆ, ವಚನ ಸಾಹಿತ್ಯ ಮತ್ತು ಬಸವತತ್ವದ ಪ್ರಸಾರಕ್ಕಾಗಿ ನಿರಂತರವಾಗಿ ಶ್ರಮಿಸಿತು…..ಇಂಥ ಉದ್ದೇಶಕ್ಕಾಗಿ ಮೈಸೂರು ಮತ್ತು ಬೆಂಗಳೂರಿನಂತಹ ಕನ್ನಡದ ಸಾಂಸ್ಕೃತಿಕ ಕೇಂದ್ರಗಳಿಂದ ಖ್ಯಾತ ಸಾಹಿತಿಗಳು, ಚಿಂತಕರು ಮತ್ತು ಉಪನ್ಯಾಸಕರನ್ನು ಆಹ್ವಾನಿಸಿ ಸಾರ್ವಜನಿಕ ಉಪನ್ಯಾಸಗಳನ್ನು ಏರ್ಪಡಿಸಲಾಗುತ್ತಿತ್ತು.ಅಂತಹ ಪ್ರಮುಖ ಅತಿಥಿಗಳಲ್ಲಿ…. ತಾ.ರಾ.ಸು. ಮತ್ತು ಅ.ನಾ.ಕೃ ಮೊದಲಾದ ಪ್ರಸಿದ್ಧ ಸಾಹಿತಿಗಳೂ ಭಾಗವಹಿಸಿ, ಕನ್ನಡ ಸಾಹಿತ್ಯ, ಶರಣರ ವಚನಗಳು ಮತ್ತು ಬಸವ ತತ್ವಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.ಈ ಸಂಘಟನೆಯ ಕಾರ್ಯಗಳು ಕೇವಲ ಸಾಹಿತ್ಯಕ್ಕೆ ಸೀಮಿತವಾಗಿರದೆ, ಸಮಾಜದ ಕಷ್ಟ ಸುಖಗಳಿಗೆ ಸ್ಪಂದಿಸುವ ಜನಪರ ಚಳವಳಿಯಾಗಿದ್ದವು. ಕಾರ್ಯಕರ್ತರು ಹಳ್ಳಿಹಳ್ಳಿಗೆ ತೆರಳಿ ಬಸವತತ್ವದ ಸಮಾನತೆ, ಕಾಯಕ, ದಾಸೋಹ, ಜಾತ್ಯಾತೀತತೆ ಹಾಗೂ ಮಾನವೀಯ ಮೌಲ್ಯಗಳನ್ನು ಜನರಿಗೆ ತಿಳಿಸುತ್ತಿದ್ದರು. ಸಮಾಜದಲ್ಲಿ ಅಸಮಾನತೆ, ಅಜ್ಞಾನ ಮತ್ತು ಸಾಮಾಜಿಕ ಬೇಧಭಾವವನ್ನು ನಿವಾರಿಸಿ, ಸಮಾನತೆಯ ಸಮಾಜ ನಿರ್ಮಾಣವೇ ಅವರ ಪ್ರಮುಖ ಧ್ಯೇಯವಾಗಿತ್ತು. *ನೆಲದ ಸತ್ವದ ಮೇಲೆ |ಹೊಲ ಬೆಳೆಯುವಂತೆಮೂಲ ತನ್ನ ಅರುವಿನ ಬೀಜ- ಬೆಳೆದಿತ್ತುಸಕಲ ಶರಣ ತತ್ವ ಪ್ರಪಂಚ ವಿಸ್ತಾರ||* ತನ್ನರಿವನ್ನೇ ಗುರುವನ್ನಾಗಿಸಿ ದೇಹವನ್ನೇ ದೇಗುಲುಮಾಡಿ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಕರೆ ಕೊಡುವ ವಚನಗಳನ್ನು ಪ್ರಚಾರಗೊಳಿಸುವ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದ್ದರು. ಈ ರೀತಿಯ ಕಾರ್ಯಕ್ರಮಗಳಿಗೆ ನಿಜಾಂ ಸರ್ಕಾರದಿಂದ ಹಲವು ರೀತಿಯ ಪ್ರತಿರೋಧ ಮತ್ತು ನಿರ್ಬಂಧಗಳು ಎದುರಾದರೂ, ಪರಿಷತ್ತಿನ ಕಾರ್ಯಕರ್ತರು ಹಿಂದೆ ಸರಿಯಲಿಲ್ಲ.ಪ್ರತಿವರ್ಷ ಶ್ರಾವಣ ಮಾಸದಲ್ಲಿ ವಚನ ಸಪ್ತಾಹವನ್ನು ಅತ್ಯಂತ ಅರ್ಥಪೂರ್ಣವಾಗಿ ಆಯೋಜಿಸುತ್ತಿದ್ದರು. ಈ ಸಪ್ತಾಹದಲ್ಲಿ ವಚನ ಪಾರಾಯಣ, ಉಪನ್ಯಾಸಗಳು, ಚಿಂತನ ಗೋಷ್ಠಿಗಳು, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಶರಣರ ಆದರ್ಶಗಳ ಕುರಿತು ವಿಶೇಷ ಪ್ರವಚನಗಳನ್ನು ನಡೆಸಲಾಗುತ್ತಿತ್ತು. ಈ ಕಾರ್ಯಕ್ರಮಗಳ ಮೂಲಕ ವಚನ ಸಾಹಿತ್ಯವನ್ನು ಜನಜೀವನದೊಂದಿಗೆ ಬೆಸೆದು, ಕನ್ನಡ ಭಾಷೆ, ಶರಣ ಸಂಸ್ಕೃತಿ ಮತ್ತು ಶರಣ ಸಂದೇಶವನ್ನು ಗ್ರಾಮೀಣ ಪ್ರದೇಶಗಳಿಗೂ ಯಶಸ್ವಿಯಾಗಿ ತಲುಪಿಸಲಾಯಿತು. ವಚನ ಸಪ್ತಾಹ ಮತ್ತು ಕನ್ನಡ ಜಾಗೃತಿಯ ಕಾರ್ಯಕ್ರಮಗಳು ಪರಿಷತ್ತಿನ ಆಶ್ರಯದಲ್ಲಿ ನಡೆಯುತ್ತಿದ್ದ ವಚನ ಸಪ್ತಾಹವು ಕೇವಲ ಧಾರ್ಮಿಕ ಕಾರ್ಯಕ್ರಮವಾಗಿರದೆ, ಕನ್ನಡ ಭಾಷೆ, ವಚನ ಸಾಹಿತ್ಯ ಮತ್ತು ಸಾಮಾಜಿಕ ಜಾಗೃತಿಯ ಮಹೋತ್ಸವವಾಗಿತ್ತು. *ನಿಮ್ಮಅಡಿಗಳು ದೊರೆತು|ಹಮ್ಮು ಜರಿದು ಹೋಯ್ತು ನೆಮ್ಮದಿಯಿತು ಎನ ಮನಕ್ಕೆ -ಬಸವಣ್ಣ ಒಮ್ಮನವಾಯಿತು ನಿಮ್ಮಲ್ಲಿ||*ಎಂದು ಬಸವಣ್ಣನನು ಹಾಡಿ ಹೊಗಳುತ್ತಾ ತತ್ವಗಳನ್ನು ಪ್ರಚಾರ ಮಾಡಲಾರಂಭಿಸಿದರು. ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಅನೇಕ ಖ್ಯಾತ ವಿದ್ವಾಂಸರು, ಧಾರ್ಮಿಕ ಮುಖಂಡರು, ಸಾಹಿತಿಗಳು ಹಾಗೂ ಸಮಾಜ ಸುಧಾರಕರು ಆಗಮಿಸಿ ಜನರನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದರು.ಈ ಕಾರ್ಯಕ್ರಮಗಳಲ್ಲಿ ತರಳಬಾಳು ಸ್ವಾಮಿಗಳು, ಎಸ್ ನಿಜಲಿಂಗಪ್ಪ, ಎಂ.ಆರ್ ಶ್ರೀನಿವಾಸ್ ಮೂರ್ತಿ, ಸ್ವಾಮಿ ರಮಾನಂದ ತೀರ್ಥರು, ಮಾನ್ವಿ ನರಸಿಂಹರಾಯರು, ಸಿದ್ದಯ್ಯ ಪುರಾಣಕ, ಬಾಮಣಗಾವ್ಕರ್ ಅಮರಾವತಿ ,ಬಸಪ್ಪ ಮಂಡಗಿ ವಕೀಲರು ,ಚನ್ನಬಸವ ಪಟ್ಟದೇವರು, ವಿಶ್ವನಾಥ್ ರೆಡ್ಡಿ ಮುದನ್ನಾಳ, ವಿದ್ಯಾಧರ್ ಗುರೂಜಿ, ಬಿ. ಮಹದೇವಪ್ಪ, ಭೀಮಣ್ಣ ಖಂಡ್ರೆ ಮೊದಲಾದ ದಿಗ್ಗಜರನ್ನು ಕರೆಯಿಸಿ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತಿತ್ತು ಹಾಗೂ ಸಮಾಜದ ಗಣ್ಯರು ಭಾಗವಹಿಸುತಿದ್ದರು. ಶರಣರ ಆದರ್ಶಗಳನ್ನು ಜನಸಾಮಾನ್ಯರಿಗೆ ತಲುಪಿಸಲಾಗುತ್ತಿತ್ತು. ಜೊತೆಗೆ, ಗ್ರಾಮೀಣ ಪ್ರದೇಶಗಳಲ್ಲಿ ಸಂಗ್ರಾಮ ವಾಚನಾಲಯಗಳ ಸ್ಥಾಪನೆ, ಕನ್ನಡ ಶಾಲೆಗಳ ಆರಂಭ ಹಾಗೂ ಕನ್ನಡ ಶಿಕ್ಷಣದ ವಿಸ್ತರಣೆಗೆ ವಿಶೇಷ ಆದ್ಯತೆ ನೀಡಲಾಗುತ್ತಿತ್ತು.ಈ ಎಲ್ಲಾ ಚಟುವಟಿಕೆಗಳ ಮೂಲ ಉದ್ದೇಶ ಕನ್ನಡ ಭಾಷೆಯನ್ನು ಬೆಳೆಸುವುದು, ವಚನ ಸಾಹಿತ್ಯವನ್ನು ಜನಜೀವನದೊಂದಿಗೆ ಬೆಸೆಯುವುದು ಮತ್ತು ಬಸವಣ್ಣನವರ ಸಮಾನತೆ, ಕಾಯಕ ಹಾಗೂ ದಾಸೋಹದ ತತ್ವಗಳ ಆಧಾರದ ಮೇಲೆ ಜಾತಿ–ಧರ್ಮ ಭೇದವಿಲ್ಲದ, ಪ್ರಗತಿಪರ ಸಮಾಜವನ್ನು ನಿರ್ಮಿಸುವುದಾಗಿತ್ತು.ನಿಜಾಂ ಆಡಳಿತದ ಪರಿಸ್ಥಿತಿಯಲ್ಲಿಯೂ ಈ ಕಾರ್ಯಗಳು ಕನ್ನಡದ ಸಾಂಸ್ಕೃತಿಕ ಪುನರುಜ್ಜೀವನಕ್ಕೆ ಮಹತ್ತರ ಕೊಡುಗೆಯನ್ನು ನೀಡಿದವು. ಸೋಲಾಪುರ ಗಡಿಭಾಗ, ಕನ್ನಡಿಗರ ಆಶಯ ಮತ್ತು ಕರ್ನಾಟಕ ಸೇರ್ಪಡೆಗೆ ನಡೆದ ಚಳವಳಿ ೧೯೪೯ರ ಸಮಯ….ಸೋಲಾಪುರ ಪ್ರದೇಶವು ಭಾಷೆ, ಸಂಸ್ಕೃತಿ ಮತ್ತು ಆಡಳಿತದ ದೃಷ್ಟಿಯಿಂದ ಪ್ರಮುಖ ಚರ್ಚೆಯ ಕೇಂದ್ರವಾಗಿತ್ತು.ಆ ಕಾಲದಲ್ಲಿ ಸೋಲಾಪುರ ತಾಲೂಕನ್ನು ಆಡಳಿತಾತ್ಮಕ ಅನುಕೂಲಕ್ಕಾಗಿ ದಕ್ಷಿಣ ಸೋಲಾಪುರ ಮತ್ತು ಉತ್ತರ ಸೋಲಾಪುರ ಎಂದು ವಿಭಜಿಸಲಾಯಿತು. ವಿಭಜನೆಯು ಆಡಳಿತಾತ್ಮಕವಾಗಿದ್ದರೂ, ಆ ಭಾಗದಲ್ಲಿ ವಾಸಿಸುತ್ತಿದ್ದ ವಿವಿಧ ಭಾಷಿಕ ಸಮುದಾಯಗಳ ಆಶಯಗಳಿಗೆ ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿತು.ಅದೇ ಅವಧಿಯಲ್ಲಿ ರಾಷ್ಟ್ರೀಯ ಸ್ವಾತಂತ್ರ್ಯ ಚಳವಳಿಯನ್ನು ಬಲಪಡಿಸುವ ಉದ್ದೇಶದಿಂದ ಕಾಂಗ್ರೆಸ್ ಸಂಘಟನೆಯನ್ನು ಯುವಜನರ ಮಟ್ಟದಲ್ಲಿ ವಿಸ್ತರಿಸುವ ಪ್ರಯತ್ನಗಳು ನಡೆಯುತ್ತಿದ್ದವು.೧೯೪೯ರಲಿ ಜವಹರಲಾಲ್ ನೆಹರು ಸೋಲಾಪುರಕ್ಕೆ ಭೇಟಿ ನೀಡಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಯುವಜನರ ಪಾತ್ರ, ರಾಷ್ಟ್ರೀಯ ಏಕತೆ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ಕುರಿತು ಅವರು ಕರೆ ನೀಡಿದರು. ಈ ಪ್ರದೇಶದ ಕನ್ನಡಿಗರು ತಮ್ಮ ಭಾಷೆ, ಸಂಸ್ಕೃತಿ ಮತ್ತು ಶೈಕ್ಷಣಿಕ ಹಕ್ಕುಗಳ ರಕ್ಷಣೆಗೆ ಸೂಕ್ತ ಆಡಳಿತ ವ್ಯವಸ್ಥೆಯ ಅಗತ್ಯವಿದೆ ಎಂದು ಪ್ರತಿಪಾದಿಸಿದರು.ಕನ್ನಡ ಭಾಷೆಗೆ ಆಡಳಿತದಲ್ಲಿ, ಶಿಕ್ಷಣದಲ್ಲಿ ಹಾಗೂ ಸಾರ್ವಜನಿಕ ಬದುಕಿನಲ್ಲಿ ಸಮರ್ಪಕ ಸ್ಥಾನಮಾನ ದೊರೆಯಬೇಕೆಂಬ ಬೇಡಿಕೆಯನ್ನು ಅವರು ರಾಷ್ಟ್ರೀಯ ನಾಯಕರ ಮುಂದಿಟ್ಟರು. ಸೋಲಾಪುರ ಮತ್ತು ಅದರ ಸುತ್ತಮುತ್ತಲಿನ ಗಡಿಭಾಗಗಳಲ್ಲಿ ಕನ್ನಡಿಗರ ಜೊತೆಗೆ ಮರಾಠಿ ಭಾಷಿಕರೂ ಗಣನೀಯ ಸಂಖ್ಯೆಯಲ್ಲಿ ವಾಸಿಸುತ್ತಿದ್ದರು. ಇಲ್ಲಿ ಕನ್ನಡ ಮಾತನಾಡುವ ಜನ ೪೮% ಇದ್ದರೆ ೩೪% ಅಷ್ಟು ಜನ ಮರಾಠಿ ಮಾತನಾಡುವರು ಹಾಗೂವಿಜಯಪುರ ಅಂದಿನ ಬಿಜಾಪುರ ಮತ್ತು ಅಕ್ಕಲಕೋಟಿನ ಜನ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ನಂಟು ಹೊಂದಿದ್ದ ಅನೇಕ ಗಡಿಭಾಗಗಳ ಜನರು ತಮ್ಮ ಪ್ರದೇಶವು ಕರ್ನಾಟಕದೊಂದಿಗೆ ಸೇರಬೇಕು ಎಂಬ ಆಶಯವನ್ನು ವ್ಯಕ್ತಪಡಿಸುತ್ತಿದ್ದರು. ಭಾಷಾವಾರು ರಾಜ್ಯಗಳ ಪರಿಕಲ್ಪನೆ ಬಲವಾಗುತ್ತಿದ್ದ ಸಂದರ್ಭದಲ್ಲಿ, ಕನ್ನಡ ಮಾತನಾಡುವ ಪ್ರದೇಶಗಳು ಒಂದೇ ಆಡಳಿತದ ಅಡಿಯಲ್ಲಿ ಇರಬೇಕು ಎಂಬ ಅಭಿಪ್ರಾಯವೂ ಬೆಳೆಯತೊಡಗಿತು.ಇಂಥ ಚಳವಳಿಗಳು ನಂತರ ಭಾಷಾವಾರು ರಾಜ್ಯಗಳ ಪುನರ್ರಚನೆ ಕುರಿತ ರಾಷ್ಟ್ರೀಯ ಚರ್ಚೆಗೆ ಪೂರಕವಾದವು. ಕನ್ನಡಿಗರ ಭಾಷಾ ಹಕ್ಕು, ಸಾಂಸ್ಕೃತಿಕ ಅಸ್ತಿತ್ವ ಮತ್ತು ಆಡಳಿತಾತ್ಮಕ ನ್ಯಾಯಕ್ಕಾಗಿ ನಡೆದ ಈ ಪ್ರಯತ್ನಗಳು ಕರ್ನಾಟಕ ಏಕೀಕರಣ ಚಳವಳಿಯ ಪ್ರಮುಖ ಹಿನ್ನೆಲೆಯಾಗಿ ಪರಿಣಮಿಸಿದವು. (ಮುಂದುವರೆಯುವುದು) ಸವಿತಾ ದೇಶಮುಖ
ಶರಣ ಸಂಗಾತಿ ಸಾವಿಲ್ಲದ ಶರಣರು ಶಶಿಕಾಂತ್ ಪಟ್ಟಣ ರಾಮದುರ್ಗ ಷಟ್ಪದಿಯ ಕವಿ ರಾಘವಾಂಕ ರಾಘವಾಂಕನು ಹರಿಹರನ ಸೋದರಳಿಯ ಮತ್ತು ಶಿಷ್ಯ ತನ್ನ ಸಾಹಿತ್ಯ ರಚನೆಯ ಆರಂಭದಲ್ಲಿ ರಾಘವಾಂಕನು ಕೇವಲ ವೈಷ್ಣವ ಪರಂಪರೆಯ ಕಾವ್ಯಗಳನ್ನು ರಚಿಸಿದನೆಂದು ಮತ್ತು ತನ್ನ ಗುರು ಮತ್ತು ಸೋದರ ಮಾವನಿಗೆ ಆ ಪುರಾಣಗಳನ್ನು ತೋರಿಸಿದಾಗ ಸಿಟ್ಟಿಗೆದ್ದ ಹರಿಹರ ತನ್ನ ಶಿಷ್ಯ ಮತ್ತು ಸೋದರಳಿಯನಿಗೆ ಬಾಯಿಯ ಮೇಲೆ ಬಡಿದನೆಂದು ಆಗ ಐದು ಹಲ್ಲುಗಳು ಉದರಿದವೆಂದು ಮುಂದೆ ನೀನು ಶರಣರ ಜೀವನಾಧಾರಿತ ಕೃತಿಗಳನ್ನು ಬರೆಯಬೇಕು ಅಂದರೆ ಮಾತ್ರ ನಿನಗೆ ಉದುರಿ ಹೋದ ಹಲ್ಲುಗಳು ಮರಳಿ ಬರುತ್ತವೆ ಎಂದು ಆಜ್ಞಾಪಿಸಿದನಂತೆ. ಆಗ ರಾಘವಾಂಕ 1ಸಿದ್ಧರಾಮ ಪುರಾಣ2.ಸೋಮನಾಥ ಚರಿತೆ3. ವೀರೇಶ ಚರಿತೆ4.ಶರಭ ಚಾರಿತ್ರ5.ಹರಿಹರ ಮಹತ್ವ ಎಂಬ ಶರಣರ ಲಿಂಗಾಯತ ತತ್ವಗಳ ಚರಿತೆಯನ್ನು ಬರೆದನಂತೆ ಮತ್ತೆ ಹಲ್ಲುಗಳು ಕಾಣಿಸಿಕೊಂಡವು ಎಂಬ ಪ್ರತೀತಿ ಇದೆ. ಇದು ಹರಿಹರನ ಸಾತ್ವಿಕ ಕೋಪ ಮತ್ತು ರಾಘವಾಂಕನ ಗುರು ಭಕ್ತಿಯನ್ನು ತೋರುತ್ತದೆ. ರಾಘವಾಂಕ ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ಲಿಂಗಾಯತ ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ. ಈತನ ಜೀವನ ಹಾಗೂ ಕೃತಿಗಳು ಇವನ ಅನಂತರದ ಕೆಲವು ಕವಿಗಳಿಗೆ ಕುತೂಹಲದ, ಗೌರವದ ವಿಷಯಗಳಾಗಿದ್ದವು.ಇವನ ಜೀವನ ಸಂಗತಿಗಳು ತಕ್ಕಮಟ್ಟಿಗೆ ಚೆನ್ನಬಸವಪುರಾಣದಲ್ಲಿ, ಗುರುರಾಜ ಚಾರಿತ್ರದಲ್ಲಿ, ಭೈರವೇಶ್ವರಕಾವ್ಯ ಕಥಾಮಣಿ ಸೂತ್ರರತ್ನಾಕರದಲ್ಲಿ, ಪದ್ಮರಾಜ ಪುರಾಣದಲ್ಲಿ , ಹರಡಿಕೊಂಡಿವೆ.ಎಲ್ಲಕ್ಕೂ ಮಿಗಿಲಾಗಿ ರಾಘವಾಂಕನ ಕವಿಕಾವ್ಯ ಜೀವನವನ್ನೇ ವಸ್ತುವಾಗಿ ಮಾಡಿಕೊಂಡ ಸಿದ್ದನಂಜೇಶನ ರಾಘವಾಂಕ ಚಾರಿತ್ರ ಒಂದು ವಿಶೇಷ ರೀತಿಯ ಕೃತಿಯಾಗಿದೆ. ಜನನ ಮತ್ತು ಜೀವನ ರಾಘವಾಂಕ ಹಂಪೆಯಲ್ಲಿ ಹುಟ್ಟಿ ಬೆಳೆದವ. ಇವನ ತಂದೆ ಮಹಾದೇವಭಟ್ಟ ,ತಾಯಿ ರುದ್ರಾಣಿ. ಹರಿಹರ ಇವನ ಸೋದರ ಮಾವ ಮತ್ತು ಗುರು. ಆತ ದೀಕ್ಷಾಗುರು, ಕಾವ್ಯಗುರುವೂ ಹೌದು. ಹರಿಹರನಂತೆ ರಾಘವಾಂಕನೂ ಪಂಪಾ ವಿರೂಪಾಕ್ಷನ ಪರಮಭಕ್ತ. ಹಂಪೆಯ ಶಂಕರಪ್ರಭು , ಹಂಪೆಯ ಮಾದಿರಾಜ, ಹಂಪೆಯ ಹರೀಶ್ವರ ಇದು ರಾಘವಾಂಕನ ಗುರುಪರಂಪರೆ.ತಾನು ಹರಿಹರನ ವರಸುತ ಎಂದು ಈತ ಹೇಳಿಕೊಂಡಿದ್ದಾನೆ.ಈತ ಸಂಸ್ಕೃತ ಭಾಷೆಗಳಲ್ಲಿಯೂ ಸಮಸ್ತ ಲೌಕಿಕ ವೈದಿಕ ವಿದ್ಯೆಗಳಲ್ಲಿಯೂ ಪರಿಣಿತನಾಗಿದ್ದ . ‘ಉಭಯಕವಿ ಕಮಲರವಿ’ಯಾದ ಈತ ಹರಿಶ್ಚಂದ್ರಕಾವ್ಯವನ್ನು ರಚಿಸಿ ಪಂಪಾಪುರದ ದೇವರಾಜನ ಸಭೆಯಲ್ಲಿ ಓದಿ ವಿದ್ವಾಂಸರನ್ನೊ ರಾಜನನ್ನೂ ಮೆಚ್ಚಿಸಿದ್ದ್ದ.. ರಾಜ ಇವನಿಗೆ ‘ಕವಿಶರಭಭೇರುಂಡ’ ಎಂಬ ವಾದದ ಪೆಂಡೆಯವನ್ನು ಕೊಟ್ಟು ಸನ್ಮಾನಿಸಿದ. ರಾಜಸಭೆಯಲ್ಲಿ ಹೀಗೆ ಮೆಚ್ಚುಗೊಂಡ ಹರಿಶ್ಚಂದ್ರಕಾವ್ಯವನ್ನು ರಾಘವಾಂಕ ಹೊನ್ನ ಹರಿವಾಣದಲ್ಲಿರಿಸಿ ತಂದು ತನ್ನ ಗುರುವು ಮಾವನೂ ಆದ ಹರಿಹರನ ಮುಂದಿರಿಸಿ ಅವನ ಆಶೀರ್ವಾದಗಳನ್ನು ಬೇಡಿದಾಗ , ಆತ ಮೆಚ್ಚಲೊಲ್ಲದೆ , ನರಸ್ತುತಿ ಮಾಡಿದ ತಪ್ಪಿಗಾಗಿ ರಾಘವಾಂಕನ ಹಲ್ಲುಗಳನ್ನು ಮುರಿದ. ಅನಂತರ ಶೈವಕೃತಿಪಂಚಕಗಳನ್ನು ರಚಿಸಿ ಮರಳಿ ತನ್ನ ಹಲ್ಲುಗಳನ್ನು ಪಡೆದ. ಒಮ್ಮೆ ಓರಂಗಲ್ಲಿನ ಪ್ರತಾಪರುದ್ರದೇವನ ಸಭೆಯಲ್ಲಿ ಏಕದ್ವಿತ್ರಿಸಂಧಿಗ್ರಾಹಿಗಳೆಂಬ ಕುಕವಿಗಳನ್ನು ತನ್ನ ಮೀಸಲು ಕವಿತೆಯಾದ ವೀರೇಶ ಚರಿತ್ರೆಯನ್ನು ಓದುವುದರ ಮೂಲಕ ಭಂಗಿಸಿ ಪ್ರತಾಪರುದ್ರನಿಂದ ಉಭಯಕವಿ ಶರಭಭೇರುಂಡ ಎಂಬ ಹೆಸರು ಪಡೆದ.ಅನಂತರ ಹಂಪೆಗೆ ಬಂದು ಹರಿಹರನ ಆಜ್ಞಾನುಸಾರವಾಗಿ ಬೇಲೂರಿಗೆ ಹೋಗಿ ಅಲ್ಲಿ ಬಯಲಾದ.ಇದರಲ್ಲಿ ಐತಿಹಾಸಿಕತೆ ಹಾಗು ಸಾಂಕೇತಿಕತೆಗಳೆರಡೂ ಬೆರೆತಿವೆ. ರಾಘವಾಂಕ ಹರಿಹರನ ವರಸುತನೆಂಬ ಹೆಮ್ಮೆಯ ಶಿಷ್ಯ . ಉಭಯ ಭಾಷಾಪಂಡಿತ ತನ್ನ ಪ್ರತಿವಾದಿಗಳೊಂದಿಗೆ ಸೆಣಸಿ ಬದುಕುವ ಛಲ ಉಳ್ಳವ ಎನ್ನುವ ಅಂಶಗಳು ಹೆಚ್ಚು ವಾಸ್ತವಸಮೀಪವಾದವು. ರಾಘವಾಂಕನ ಹಲ್ಲುಗಳನ್ನು ಹರಿಹರ ಮುರಿದದ್ದು ಅನಂತರ ರಾಘವಾಂಕನು ಶೈವಕೃತಿ ಪಂಚಕಗಳನ್ನು ಬರೆದು ಹಲ್ಲುಗಳನ್ನು ಪಡೆದದ್ದು ಈ ದಂತಕತೆ ವಸ್ತು ರೀತಿಗಳೆರಡರಲ್ಲೂ ಹರಿಹರನ ಪರಂಪರೆಗೆ ವಿರೋಧವಾಗಿ ನಡೆದುಕೊಂಡ ರಾಘವಾಂಕನ ಬಗೆಗೆ ಹರಿಹರ ಪರಂಪರೆ ತೋರಿಸಿದ ಪ್ರತಿಕ್ರಿಯೆಯನ್ನೂ ಅನಂತರ ರಾಘವಾಂಕ ಹರಿಹರ ಪರಂಪರೆಯೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಸಾಂಕೇತಿಸುತ್ತದೆ ಎನ್ನಬಹುದು. ಕೃತಿಗಳುರಾಘವಾಂಕನ ಕಾವ್ಯಗಳು ಆರು ಕೃತಿಗಳು೧.ಹರಿಶ್ಚಂದ್ರ ಕಾವ್ಯ.೨.ಸಿದ್ಧರಾಮ ಪುರಾಣ೩.ಸೋಮನಾಥ ಚರಿತೆ೪. ವೀರೇಶ ಚರಿತೆ೫.ಶರಭ ಚಾರಿತ್ರ೬.ಹರಿಹರ ಮಹತ್ವ – ಈ ಕೃತಿ ಇನ್ನೂ ಸಿಕ್ಕಿಲ್ಲ. ಇವಗಳಲ್ಲಿ ಮೊದಲ ನಾಲ್ಕು ದೊರೆತು ಪ್ರಕಟವಾಗಿದೆ.ಶರಭ ಚಾರಿತ್ರ ಹಾಗೂ ಹರಿಹರ ಮಹತ್ವ ಇನ್ನೂ ದೊರೆತಿಲ್ಲ.ಇದೂ ಅಲ್ಲದೆ “ದೇವಾಂಗ ದಾರಿಮಯ್ಯನ ಪುರಾಣ”ಎಂಬ ಸಾಂಗತ್ಯ ಗ್ರಂಥವೊಂದು ದೊರಕಿದ್ದು , ರಾಘವಾಂಕನ ಅಂಕಿತದಲ್ಲಿದೆ. ಇದನ್ನು ರಾಘವಾಂಕ ಬರೆದನೇ ಇಲ್ಲವೆ ಎನ್ನುವ ಬಗ್ಗೆ ಖಚಿತವಾಗಿ ತಿಳಿಯಬೇಕಾಗಿದೆ. ವಿಮರ್ಶೆ:ಕನ್ನಡ ಸಾಹಿತ್ಯದಲ್ಲಿ ರಾಘವಾಂಕ ಪ್ರಧಾನವಾಗಿ ಪ್ರಯೋಗಶೀಲನಾದ ಸ್ವತಂತ್ರ ಮನೋಧರ್ಮದ ಕವಿ.’ ಜನ ಬದುಕಬೇಕೆಂದು ಕಾವ್ಯಮುಖದಿಂಪೇಳ್ದನನಪೇಕ್ಶೆಯಿಂದ’ ಎಂಬುದು ಇವನ ಕಾವ್ಯೋದ್ದೇಶವಾಗಿತ್ತು. ಮಹಾಕವಿ ಹರಿಹರನ ಸಮಕಾಲೀನನೂ , ವರಸುತನೂ ಆದ ಈತ ಹರಿಹರನ ಪ್ರಭಾವದ ಸೆಳೆತಕ್ಕೆ ಪ್ರತಿಯಾಗಿ ನಿಂತು ತನ್ನದೇ ಆದೊಂದು ಪರಂಪರೆಯನ್ನು ನಿರ್ಮಿಸಿಕೊಂಡವ.ತನಗೆ ಹಿನ್ನೆಲೆಯಲ್ಲಿದ್ದ ಹರಿಹರನ ರಗಳೆಯ ರೀತಿಯನ್ನು ಅನುಸರಿಸದೆ ಮೊತ್ತಮೊದಲಿಗೆ ಷಟ್ಪದಿ ರೂಪವನ್ನು ಪಳಗಿಸಿ ದೀರ್ಘ ಕಥಾನಿರೂಪಣೆಗೆ ಸೊಗಸಾಗಿ ಅಳವಡಿಸಿಕೊಂಡದ್ದು ಇವನ ಮಹತ್ವದ ಸಾಧನೆ.ಕನ್ನಡ ಸಾಹಿತ್ಯದಲ್ಲಿ ಕವಿ ರನ್ನನನ್ನು ಬಿಟ್ಟರೆ ಅಷ್ಟೇ ನಾಟ್ಯ ಪ್ರತಿಭೆಯನ್ನು ಪ್ರಕಟಿಸಿದ ಮತೊಬ್ಬ ಕವಿ ರಾಘವಾಂಕ.ಹರಿಶ್ಚಂದ್ರಕಾವ್ಯಹರಿಶ್ಚಂದ್ರಕಾವ್ಯ ರಾಘವಾಂಕನ ಕೃತಿಗಳಲ್ಲಿಯೇ ಶ್ರೇಷ್ಥವಾದುದು ಮಾತ್ರವಲ್ಲ . ಕನ್ನಡ ಸಾಹಿತ್ಯದಲ್ಲಿಯೇ ಅಪೂರ್ವವಾದ ಕೃತಿ.ರಾಘವಾಂಕನಿಗಿಂತ ಹಿಂದಿನ ಎಲ್ಲ ಆಕಾರಗಳೊಡನೆ ಇದರ ಸಂವಿಧಾನವನ್ನು ಹೋಲಿಸಿದರೆ ಭಾರತೀಯ ಸಾಹಿತ್ಯದಲ್ಲಿಯೇ ಕಾಣದೊರೆಯುವ ನೂತನ ಸನ್ನಿವೇಶಸೃಷ್ಟಿ , ಕೃತಿಬಂಧೆ ಇಲ್ಲಿದೆ ಎಂಬುದು ಹೆಮ್ಮೆಯ ಸಂಗತಿ ಎಂದು ವಿದ್ವಾಂಸರು ಈ ಕಾವ್ಯದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಹರನೆಂಬುದೇ ಸತ್ಯ ಸತ್ಯವೆಂಬುದೇ ಹರನು’ ಎನ್ನುವ ತತ್ವವನ್ನು ಜೀವನಕ್ಕೆ ಅಳವಡಿಸಿ ಬದುಕಿದ ಸತ್ಯಸಾಧಕ ಹರಿಶ್ಚಂದ್ರನ ಕರುಣಾದ್ಭುತವಾದ ಕಥೆಯೇ ಹರಿಶ್ಚಂದ್ರಕಾವ್ಯ.. ಇದರಲ್ಲಿ ಹದಿನಾಲ್ಕು ಸ್ಥಳಗಳಿದ್ದು ವಾರ್ಧಕ ಷಟ್ಪದಿಯಲ್ಲಿ ರಚಿತವಾಗಿದೆ.ಹರಿಶ್ಚಂದ್ರನ ಪಾತ್ರ ಸತ್ಯ ಸಾಕ್ಷಾತ್ಕಾರಕ್ಕಾಗಿ ನಿರಂತರವೂ ಹೂರಾಡುವ ಆದರ್ಶಾಭೀಪ್ಸೆಯ ಪ್ರತಿಮೆಯಾಗಿದೆ. ಈ ಕೃತಿಯಲ್ಲಿ ಕಂಡುಬರುವ ಶೈಲಿಹದ , ನಾಟ್ಯಮಯವಾದ ಸನ್ನಿವೇಶಗಳು , ಪಾತ್ರಗಳಲ್ಲಿ ಕಂಡುಬರುವ ವೈವಿಧ್ಯ , ಇವೆಲ್ಲವನ್ನೂ ವ್ಯಾಪಿಸಿರುವ ದರ್ಶನ ಇವುಗಳಿಂದ ಈ ಕೃತಿಯನ್ನು ರಾಘವಾಂಕನ ಮಹಾಕಾವ್ಯವೆಂದು ಹೇಳಬಹುದು. ಸಿದ್ಧರಾಮ ಪುರಾಣ‘ಕಾಯಕವೇ ಕೈಲಾಸ’ ಎಂಬ ಶರಣರ ವಚನಕ್ಕೆ ಜೀವಂತ ವ್ಯಾಖ್ಯಾನದಂತೆ ಬಾಳಿದ ಸಿದ್ಧರಾಮನ ಜೀವನವನ್ನು ಕುರಿತ ಕೃತಿ . ‘ ಸಾಕಾರ ನಿಷ್ಠೆ ಭೂತಂಗಳೊಳಗನುಗುಕಂಪತಾನೆ ಪರಬೊಮ್ಮ’ ಎಂಬ ಸೂತ್ರವೆ ಸಿದ್ಧರಾಮ ಚರಿತ್ರೆಯಲ್ಲಿ ಅಡಕವಾಗಿರುವ ತತ್ವ. ಇದು ರಾಘವಾಂಕನ ಧರ್ಮ ಶ್ರದ್ಧೆಯ ಸಾತ್ವಿಕ ಪ್ರತಿನಿಧಿಯಾಗಿದೆ.ಸೋಮನಾಥ ಚರಿತೆಸೌರಾಶ್ಟ್ರದ ಶಿವಭಕ್ತನಾದ ಆದಯ್ಯ ಪುಲಿಗೆರೆಗೆ ಬಂದು ಸೌರಾಶ್ಟ್ರದ ಸೋಮನಾಥನನ್ನು ಅಲ್ಲಿಯ ಜೈನ ಬಸದಿಯಲ್ಲಿ ಪ್ರತಿಷ್ಠಾಪಿಸಿದ ವೀರಮಾಹೆಶ್ವರ ಮನೋಧರ್ಮವನ್ನು ವ್ಯಗ್ರವಾಗಿ ನಿರೂಪಿಸುವ ಕೃತಿ.ವೀರೇಶ ಚರಿತೆ ಹಾಗೂ ಶರಭ ಚಾರಿತ್ರ ಶಿವಪುರಾಣದ ಕಥೆಗಳು. ವೀರೇಶ ಚರಿತೆಯನ್ನು ಕವಿ ಮೀಸಲುಗವಿತೆ ಎಂದು ಕರೆದಿದ್ದಾನೆ.ಈ ಕೃತಿಯಲ್ಲಿ ರಾಘವಾಂಕ ಪ್ರಯೋಗಿಸಿ ನೋಡಿರುವ ಉದ್ದಂಡ ಷಟ್ಪದಿ ರೌದ್ರರಸವನ್ನು ಅಲೆಅಲೆಯಾಗಿ ಅಭಿವ್ಯಕ್ತಪಡಿಸುವ ಪ್ರಯತ್ನವನ್ನು ತೋರಿಸುತ್ತದೆ.ಶಿವನ ಅವತಾರದ ವೀರಭದ್ರನಿಂದ ದಕ್ಷಯಜ್ಞ ದ್ವಂಸವಾದ ಕಥೆಯೇ ಇದರ ವಸ್ತು. ಇತರೆ ದೇವತೆಗಳಿಗಿಂತ ಶಿವನೇ ಶ್ರೇಶ್ಠ ಎಂಬುದನ್ನು ಸಾರುವ ಉದ್ದೇಶ ಇಲ್ಲಿದೆ.ಶರಭ ಚಾರಿತ್ರ ಹೆಸರೇ ಸೂಚಿಸುವಂತೆ ಮಹಾವಿಷ್ಣುವಿನ ಅವತಾರವನ್ನು ಇಕ್ಕಿಮೆಟ್ಟಿದ ಶಿವನ ಶರಭಾವತಾರದ ಮಹಿಮೆಯನ್ನು ಕುರಿತದ್ದೆಂದು ತೋರುತ್ತದೆ. ವಚನ ರಗಳೆಯ ನಂತರದ ನಡುಗನ್ನಡದ ಸಾಹಿತ್ಯದ ಯುಗ ಪ್ರವರ್ತಕನೆಂದು ಪ್ರತೀತಿ ಪಡೆದ ಹೊಸ ಪ್ರತಿಮೆಗಳನ್ನು ಬಳಸಿದ ಜ್ಞಾನವುಳ್ಳ ಕವಿಯಾಗಿದ್ದಾನೆ.ಸಿದ್ಧರಾಮನ ಚರಿತೆಯಲ್ಲಿ ಕಂಡು ಬೆರಗಾದರಾ ಪುಣ್ಯ ದಂಪತಿಗಳು ಎನ್ನುವ ಕಾವ್ಯದಲ್ಲಿಬಾಲಕನು ಮಲ್ಲಯ್ಯನನ್ನು ಕಾಣುವ ಹಂತದಲ್ಲಿ ಅಳುತ್ತ ಗುಹೆ ಗವ್ವರಗಳ ಮುಂದೆ ಮರಳಿನ ಹುಡಿಯಲ್ಲಿ ಬಿಕ್ಕುತ್ತಿರುವಾಗ ತರು ಗುಲ್ಮ ಲತೆಗಳೆದ್ದು ಅಳುತಿರ್ದವು, ಗುಹೆ ಗವ್ವರಗಳು ಬಾಲಕ ಸಿದ್ಧರ್ಮಯ್ಯನ ಅಳುವಿನ ಆಕ್ರಂದನವನ್ನು ಮಾರ್ದನಿಸುತ್ತಿದ್ದವು ಎಂದು ಸೊಗಸಾಗಿ ವರ್ಣಿಸಿದ್ದಾನೆ. ಶರಣರ ಆಶಯಗಳನ್ನು ಅರ್ಥೈಸಿಕೊಂಡು ನ್ಯಾಯ ಒದಗಿಸಲು ಶ್ರಮಿಸಿದ ದಿಟ್ಟ ಕವಿ ರಾಘವಾಂಕ. ರಾಘವಾಂಕರ ಹೆಸರಿನಲ್ಲಿ ಕೆಲ ಪ್ರಕ್ಷಿಪ್ತ ಚರಿತ್ರೆಗಳು ಸೊಲ್ಲಾಪೂರ ಭಾಗದಲ್ಲಿ ಹುಟ್ಟಿಕೊಂಡು ಸಾಹಿತ್ಯ ಮತ್ತು ಶರಣರ ಚರಿತ್ರೆಗೆದ್ರೋಹ ಮಾಡಿವೆ.————————————————————————– ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ
ಧಾರಾವಾಹಿ ಸಂಗಾತಿ ಡಾ.ವಿಶ್ವನಾಥ್ ಎನ್ ನೇರಳೆಕಟ್ಟೆ ಅರ್ಜುನ ಉವಾಚ ಮದನಾರಿಯಂತಿತ್ತು ಮಣಿಪುರ ಮದನಾರಿಯಂತಿತ್ತು ಮಣಿಪುರ ಮಣಿಪುರವನ್ನು ನಾವು ಸೇರಿದ ವೇಳೆಗೆ ಮಳೆಯ ಮಣಿಗಳು ಗಗನಮುಖದಿಂದ ಧರಣಿವದನದೆಡೆಗೆ ಬೀಳುತ್ತಿದ್ದವು. ವರ್ಷ ಕಾಲ ಆರಂಭವಾಗಿತ್ತು. ಮಳೆಯ ನೀರಿಗಾಗಿಯೇ ಕಾದುಕುಳಿತಿದ್ದ ಚಾತಕ ಪಕ್ಷಿಗಳು ಹನಿಹನಿಗಳನ್ನು ಕುಡಿಯುತ್ತಿದ್ದ ಪರಿಯನ್ನು ಕಂಡು ಅಸೂಯೆಯನ್ನು ತಾಳದಾದವು ಹಂಸಗಳು. ತಮಗೆ ಸಲ್ಲಬೇಕಾದ ವರ್ಷಧಾರೆಯನ್ನು ಭೂಮಿ ಸೇರುವುದಕ್ಕೂ ಮೊದಲೇ ಕುಡಿದು ಮುಗಿಸುತ್ತಿವೆ ಚಾತಕ ಪಕ್ಷಿಗಳು ಎಂಬ ಮತ್ಸರ ಹಂಸಗಳಲ್ಲಿ. ಭರದಿಂದ ಓಡುತ್ತಿದ್ದವು ಆಚೆಗೆ.ಮಣಿಪುರದ ಸಮೃದ್ಧತೆಯನ್ನೇ ಕಾಣುತ್ತಾ ಬರುತ್ತಿದ್ದೆ ನಾನು. ಚಿನ್ನ ಬೆಳ್ಳಿಗಳ ಕೋಟೆಗಳಿದ್ದವು. ಮಾಣಿಕ್ಯ ವಜ್ರವೈಢೂರ್ಯಗಳಿಂದ ಮಾಡಲ್ಪಟ್ಟ ಕೊತ್ತಳಗಳ ಸಾಲುಗಳಿದ್ದವು. ಕೆಂಪು ಹವಳದ ತೋರಣಗಳಿದ್ದವು. ಮುತ್ತು ರತ್ನಗಳಿಂದ ನಿರ್ಮಿಸಲಾದ ಗೋಪುರಗಳಿದ್ದವು. ಚಿತ್ರಚಿತ್ತಾರಗಳಿಂದ ಶೋಭಿಸುತ್ತಿದ್ದವು ಅಲ್ಲಿಯ ದ್ವಾರಗಳು. ಹಗಲಿಗೆ ಹೆದರಿ ಚದುರಿಹೋಗಿದ್ದ ಬೆಳದಿಂಗಳು ಮಣಿಪುರವನ್ನು ಹೊಕ್ಕು, ಮುತ್ತಿಗೆ ಹಾಕಿ, ಯುದ್ಧಕ್ಕಾಗಿ ಕಾದು ಕುಳಿತಿರಲು ಅದರ ಜೊತೆಗಿನ ಯುದ್ಧಕ್ಕಾಗಿ ಇಲ್ಲಿಗೆ ಬಂದು ಇಡಿಯ ನಗರವನ್ನು ವಶಪಡಿಸಿಕೊಂಡಿದೆ ಎಳೆಬಿಸಿಲು ಎಂಬAತೆ ತೋರುತ್ತಿತ್ತು ಮಣಿಪುರದಲ್ಲಿದ್ದ ಸೌಧಗಳು, ಕೋಟೆಗಳು. ಬೆಳದಿಂಗಳ ಕಾಂತಿಯನ್ನು ಎತ್ತರೆತ್ತರದ ಸೌಧಗಳಲ್ಲಿ ಕಾಣಬಹುದಾಗಿತ್ತು. ಹೊಚ್ಚಹೊಸತಾದ ಚಿನ್ನದ ಕೋಟೆಗಳ ಹೊಳಪದು ಎಳೆಬಿಸಿಲಿನ ನೆನಪನ್ನು ಮೂಡಿಸುವಂತಿತ್ತು.ಶ್ರೇಷ್ಠವಾದ ಗಿರಿಶಿಖರಗಳನ್ನು ಮೀರಿಸುವಂತಿದ್ದ ಅಲ್ಲಿಯ ಚಿನ್ನದ ಗೋಪುರಗಳು ಹೆಣ್ಣಿನ ದಪ್ಪ ಮೊಲೆಯಂತೆ ತೋರಿದವು, ನನ್ನ ಕಣ್ಣಿಗೆ. ಲಾವಣ್ಯವತಿಯ ಬಾಹುಬಳ್ಳಿಯಂತೆ ಕಾಣುತ್ತಿತ್ತು ಅಲ್ಲಿಯ ರಾಜಮಾರ್ಗ. ಕಮಲಮುಖಿಯ ಸುಂದರ ವದನದಂತಿತ್ತು ಅರಮನೆ. ಮೇಲೆ ಹಾರಾಡುತ್ತಿದ್ದ ಧ್ವಜಗಳು ಮುಗುದೆಯ ಮುಂಗುರುಳನ್ನು ಜ್ಞಾಪಿಸುವಂತಿದ್ದವು. ಮದನಾರಿಯ ಮಣಿಹಾರವಾಗಿತ್ತು ಕಟ್ಟಿದ್ದ ತೋರಣಗಳು. ಕೋಟೆಗಳವು ಹೆಣ್ಣಿನ ಮೈಯ್ಯಲ್ಲಿ ಶೋಭಿಸುವ ಉಡುಗೆಯಿದ್ದ ಹಾಗೆ. ನಗರದ ಗಡಿಯದು ಸುಂದರಿಯ ಸೊಂಟವನ್ನಲAಕರಿಸುವ ಡಾಬು. ಅಲ್ಲಿನ ಶ್ವೇತವರ್ಣದ ಗೃಹಗಳು ಹೆಣ್ಣಿನ ದಂತಗಳು. ಮಣಿಪುರ ನಗರವದು ಚೆಲುವ ನಾರಿಯಂದದಿ ಗೋಚರವಾಯಿತು ನನ್ನ ದೃಷ್ಟಿಗೆ.ಅತೀವ ಜನಸಮೂಹವಿತ್ತು ನಗರದೊಳಗೆ. ಗುಂಪುಗುAಪಾಗಿ ನಗರವನ್ನು ಪ್ರವೇಶಿಸುವವರಿದ್ದರು. ಅಲ್ಲಿಂದ ತಂಡೋಪತAಡವಾಗಿ ಹೊರಹೋಗುವವರಿದ್ದರು. ಆನೆಗಳು, ಕುದುರೆಗಳು ಎಲ್ಲೆಡೆಯೂ ಕಾಣಸಿಗುತ್ತಿದ್ದವು. ಪುರಜನರು ತೋರುತ್ತಿದ್ದರು ದೆಸೆದೆಸೆಯಲ್ಲಿ. ಮಣಿಪುರದ ಅರಸನಾಗಿದ್ದವ ಬಭ್ರುವಾಹನ. ಇವನಿಗೆ ಅನುದಿನವೂ ಸಾವಿರ ಬಂಡಿಗಳಷ್ಟು ಧನಕನಕಗಳು ಸಲ್ಲುತ್ತಿದ್ದವು ರಾಜರ ಕಡೆಯಿಂದ. ನನ್ನ ಜೊತೆಯಲ್ಲಿದ್ದ ಹಂಸಧ್ವಜ ಅರಸನೂ ಸಹ ಬಭ್ರುವಾಹನನಿಗೆ ತಪ್ಪದೆಯೇ ಕಪ್ಪಕಾಣಿಕೆಗಳನ್ನು ಸಲ್ಲಿಸುವವನಾಗಿದ್ದ.“ಅಧಿಕ ಸೊಗಸಿನಿಂದ ಕಂಗೊಳಿಸುತ್ತಿದೆ ಈ ನಗರ. ಇದನ್ನಾಳುತ್ತಿರುವ ಅರಸ ಯಾರು? ಅವನು ಕುದುರೆಯನ್ನು ಕಟ್ಟಿ, ನಮ್ಮೊಡನೆ ಯುದ್ಧ ಹೂಡುವ ಮನಸ್ಸು ಮಾಡಿಯಾನೇ?” ಎಂದು ಪ್ರಶ್ನಿಸಿದೆ ಹಂಸಧ್ವಜನಲ್ಲಿ.ಮಣಿಪುರದರಸನ ಸಾಮರ್ಥ್ಯವನ್ನು ಬಣ್ಣಿಸತೊಡಗಿದ ಚಂಪಕಾ ನಗರಿಯ ದೊರೆ. “ಮಣಿಪುರವೆಂಬ ಈ ನಗರವನ್ನು ಪಾಲಿಸುತ್ತಿರುವವನು ಬಭ್ರುವಾಹನ ಎಂಬ ರಾಜ. ಸಮರ್ಥ ದೊರೆ ಎಂಬ ಪ್ರಸಿದ್ಧಿ ಪಡೆದವನವನು. ದೊರೆಗಳಲ್ಲಿ ಶ್ರೇಷ್ಠನೆನಿಸಿಕೊಂಡವನು. ಇವನ ಸಾಮರ್ಥ್ಯ ಸಾಧನೆಗಳನ್ನು ಒಪ್ಪಿಕೊಂಡ ಅರಸರು ಪ್ರತೀದಿನವೂ ತಪ್ಪದೆ ಸಾವಿರ ಬಂಡಿ ಕನಕವನ್ನು ತಂದೊಪ್ಪಿಸುತ್ತಾರೆ ಇವನಿಗೆ. ಒಂದುವೇಳೆ ಲೋಪವಾದರೆ ಶಿಕ್ಷೆಯಿತ್ತಾನು ಎಂಬ ಭೀತಿ ಎಲ್ಲರಲ್ಲಿಯೂ ಇದೆ” ಎಂದ ಹಂಸಧ್ವಜ, ಬಭ್ರುವಾಹನನ ಸಚಿವನ ಬಗೆಗೆ ಹೇಳತೊಡಗಿದ.“ಸುಬುದ್ಧಿಯೆಂಬ ಸಚಿವನಿದ್ದಾನೆ ಇವನಿಗೆ. ಈ ನಗರವನ್ನು ನಿಜಾರ್ಥದಲ್ಲಿ ಪಾಲಿಸುತ್ತಿರುವವನು ಅವನೇ. ಧರ್ಮಕ್ಕೆ ಒಂದಿಷ್ಟೂ ಚ್ಯುತಿ ಬಾರದ ರೀತಿಯಲ್ಲಿ ಆಡಳಿತವನ್ನು ನಡೆಸುತ್ತಿದ್ದಾನೆ. ಪ್ರಜೆಗಳ ಬಗೆಗೆ ಅನುರಾಗವನ್ನು ಇಟ್ಟುಕೊಂಡಿದ್ದಾನೆ. ಪುರದ ಜನರಿಗೆ ಸೌಖ್ಯ ನೀಡುವವರಾಗಿ ಗುರುತಿಸಿಕೊಂಡಿದ್ದಾರೆ ಈ ರಾಜ ಸಚಿವರು” ಎಂದ ಹಂಸಧ್ವಜನಿಗೆ ಬಭ್ರುವಾಹನನ ಸೇನೆಯ ಸಾಮರ್ಥ್ಯ ತಿಳಿದಿತ್ತು.ಒಂದೇ ಕಿವಿಯಿರುವ ಕಪ್ಪನೆಯ ಕುದುರೆಗಳು, ಶುದ್ಧ ಶ್ವೇತವರ್ಣದ ಆನೆಗಳು, ಚಿನ್ನದ ರಥಗಳು ಅಗಣಿತ ಸಂಖ್ಯೆಯಲ್ಲಿದ್ದವು ಮಣಿಪುರದಲ್ಲಿ. ಅವುಗಳ ಸಂಖ್ಯೆ ಅದೆಷ್ಟು ಎನ್ನುವುದು ಬಭ್ರುವಾಹನನ ಕರಣಿಕರಿಗೇ ತಿಳಿದಿರಲಿಲ್ಲ. ಉಳಿದ ಸಾಮಾನ್ಯ ಕುದುರೆ, ಆನೆ, ರಥಗಳ ಲೆಕ್ಕಾಚಾರವದು ಸುಲಭವಾಗಿ ಸಿಗುವಂತಿರಲಿಲ್ಲ. ಪರಾಕ್ರಮಶಾಲಿಯಾದ ಅರಸನಿವನು ಎನ್ನುವುದು ನನಗೆ ದೃಢವಾಯಿತು.ಮಣಿಪುರದಲ್ಲಿದ್ದ ಜನರೆಲ್ಲರೂ ಹರಿಭಕ್ತರಾಗಿದ್ದರು. ವೇದ ಶಾಸ್ತçಗಳನ್ನು ತಿಳಿದವರಾಗಿದ್ದರು. ಸತ್ಯವನ್ನೇ ನುಡಿಯುವ ವ್ರತವನ್ನು ಪಾಲಿಸುತ್ತಿದ್ದರು. ಕೋಪವನ್ನು ತೊರೆದವರಾಗಿದ್ದರು. ಅಹಿಂಸೆಯೆಡೆಗೆ ಮನಸ್ಸು ಮಾಡಿದ್ದರು. ತಮ್ಮನ್ನು ತಾವು ಚೆನ್ನಾಗಿ ಅರ್ಥಮಾಡಿಕೊಂಡವರಾಗಿದ್ದರು. ಕದನ ಸಮರ್ಥರಾಗಿದ್ದರು. ದಾನದ ಗುಣವಿತ್ತು. ಅಸೂಯೆ ಇದ್ದವರಲ್ಲ. ಅಲ್ಲಿಯ ಸಕಲ ನಾರಿಯರು ಪತಿವ್ರತೆಯರೆನಿಸಿಕೊಂಡಿದ್ದರು. ಹೀಗೆ ಸರ್ವ ಸಜ್ಜನರನ್ನೇ ಒಳಗೊಂಡ ಈ ನಗರವನ್ನು ಶ್ರೀಮನ್ನಾರಾಯಣ ಎರಡನೇ ವೈಕುಂಠವಿದು ತನ್ನ ಪಾಲಿಗೆ ಎಂಬ ಮಮಕಾರದಿಂದ ಪೊರೆಯುತ್ತಿದ್ದ.“ಬಭ್ರುವಾಹನನೆಂಬ ಈ ಬಲುವೀರ ಕಟ್ಟದಿರುತ್ತಾನೆಯೇ ಯಜ್ಞಾಶ್ವವನ್ನು!” ಎಂದ ಹಂಸಧ್ವಜ. ಹೀಗೆ ಅವನು ನುಡಿದ ಕ್ಷಣದಲ್ಲಿಯೇ ಹದ್ದೊಂದು ಹಾರಿಬಂದು ನನ್ನ ಕಿರೀಟದ ತುದಿಯಲ್ಲಿ ಕಾಲೂರಿ ಕುಳಿತಿತು. ನನ್ನ ಗಮನಕ್ಕಿದು ಬಂದಿರಲಿಲ್ಲ. ನನ್ನ ಜೊತೆಗಿದ್ದ ವೀರರು ವಿವರಿಸಿದರು ಇದನ್ನು. ಸೋಲಿನ ಸೂಚನೆಯಿದು ಎಂದು ನುಡಿದರವರು ಆತಂಕದಿAದ.ಹೀಗೆ ಚಿಂತೆಯ ಕಾರ್ಮೋಡವೊಂದು ನಮ್ಮನ್ನು ಕವಿದ ಕ್ಷಣದಲ್ಲಿಯೇ ಬಭ್ರುವಾಹನ ಅವನ ಸೇವಕರನ್ನು ಅಟ್ಟಿ, ನಮ್ಮ ಕುದುರೆಯನ್ನು ಕೊಂಡೊಯ್ದು, ಕಟ್ಟಿಸಿಯೇಬಿಟ್ಟ. ಡಾ.ವಿಶ್ವನಾಥ್ ಎನ್ ನೇರಳೆಕಟ್ಟೆ
ಧಾರಾವಾಹಿ ಸಂಗಾತಿ-124 ರುಕ್ಮಿಣಿ ನಾಯರ್ ಒಬ್ಬ ಅಮ್ಮನ ಕಥೆ ಮೊಮ್ಮಕ್ಕಳು ಬಂದ ಖುಶಿ ಆಸ್ಪತ್ರೆಗೆ ಬಂದ ಸುಮತಿಯ ಎರಡನೇ ಮಗಳು ಸಂಜೆ ವಾರ್ಡಿಗೆ ಕಾಫಿ-ಬ್ರೆಡ್ ಬಂದಾಗ ಸರತಿಯಲ್ಲಿ ನಿಂತು ಪಡೆದುಕೊಂಡು ಅಮ್ಮನಿಗೆ ಕೊಟ್ಟಳು. ಕಾಫಿ ಕುಡಿದು ತಾಯಿ ಮಲಗಿದ ನಂತರ ವಾರ್ಡಿನ ಹೊರಗಿನ ವೆರಾಂಡಾದ ಮೆಟ್ಟಿಲಿನ ಮೇಲೆ ಕುಳಿತು ತನ್ನ ಪಠ್ಯ ಪುಸ್ತಕವನ್ನು ತೆರೆದು ಓದಲು ಪ್ರಾರಂಭಿಸಿದಳು. ಓದಿನಲ್ಲಿ ಸಂಪೂರ್ಣ ಮಗ್ನಳಾಗಿದ್ದ ಅವಳ ಕುತ್ತಿಗೆಯನ್ನು ಎರಡು ಪುಟ್ಟ ಕೈಗಳು ಬಿಗಿಯಾಗಿ ಅಪ್ಪಿಕೊಂಡವು. ತಿರುಗಿ ನೋಡಿದಾಗ ತನ್ನ ಹಿಂದೆ ತುಂಟತನದಿಂದ ನಗುತ್ತಾ ನಿಂತಿದ್ದ ಅಕ್ಕನ ಮಗನನ್ನು ಕಂಡಳು. ತಲೆ ಎತ್ತಿ ನೋಡಿದಾಗ ಬಾವ ಹಾಗೂ ಮಗುವನ್ನು ಎತ್ತಿಕೊಂಡು ನಿಂತಿರುವ ಅಕ್ಕನನ್ನು ಕಂಡಳು. ಅವಳಿಗೆ ಬಹಳ ಆನಂದವಾಯಿತು. ಅಕ್ಕನ ಮಗನನ್ನು ಎತ್ತಿಕೊಂಡು…”ಬನ್ನಿ…ಅಮ್ಮ ಈಗತಾನೇ ಮಲಗಿದ್ದಾಳೆ”…ಎಂದು ಹೇಳುತ್ತಾ ಅಕ್ಕ-ಬಾವನನ್ನು ಒಳಗೆ ಕರೆದುಕೊಂಡು ನಡೆದಳು. ಅಕ್ಕನ ಕಂಕುಳಲ್ಲಿ ಇದ್ದ ಪುಟ್ಟ ಮಗು ಚಿಕ್ಕಮ್ಮನ ಕಡೆಗೆ ಎತ್ತಿಕೋ ಎನ್ನುವಂತೆ ಎರಡೂ ಕೈಗಳನ್ನು ಚಾಚಿತು. ಅಕ್ಕನ ಮಗನ ಕೆನ್ನೆಯನ್ನು ಮೃದುವಾಗಿ ಸವರುತ್ತಾ… “ಪುಟ್ಟಾ ನೀನು ಇಲ್ಲಿ ಕುಳಿತು ಅಜ್ಜಿಯನ್ನು ಎಬ್ಬಿಸು….ನಾನು ನಿನ್ನ ತಂಗಿಯನ್ನು ಎತ್ತಿಕೊಳ್ಳುತ್ತೇನೆ”… ಎಂದ ಚಿಕ್ಕಮ್ಮನ ಮಾತಿಗೆ… “ಹೂಂ”….ಎಂದ ಆ ಮಗು ಖುಷಿಯಿಂದ ಅಜ್ಜಿಯ ಪಕ್ಕ ಕುಳಿತು…..”ಅಮ್ಮಾಮ್ಮಾ…ಣೀಚೇ…ಞಾಯೀ.. ವನ್ನಿಟ್ಟುಂಡ್”….( ಅಜ್ಜೀ ಎದ್ದೇಳು ನಾನು ಬಂದಿದ್ದೇನೆ) ಎಂದು ತೊದಲು ನುಡಿಯಲು, ಮೊಮ್ಮಗನ ಧ್ವನಿ ಕೇಳಿ ಎಚ್ಚೆತ್ತ ಸುಮತಿ ಎದ್ದು ಕುಳಿತು ಮೊಮ್ಮಗನನ್ನು ಅಪ್ಪಿಕೊಂಡಳು. ಹಿರಿಯ ಮಗಳು, ಪುಟ್ಟ ಮೊಮ್ಮಗಳು ಮತ್ತು ಅಳಿಯ ಎಲ್ಲರನ್ನೂ ಕಂಡು ಸುಮತಿ ಹರ್ಷಿತವಾದಳು. ಅಳಿಯನನ್ನು ಉದ್ದೇಶಿಸಿ ಅಲ್ಲಿಯೇ ಇದ್ದ ಸ್ಟೂಲ್ ನ ಮೇಲೆ ಕುಳಿತುಕೊಳ್ಳುವಂತೆ ಹೇಳಿದಳು. ಅಳಿಯ ‘ಹ್ಮೂ’ಎಂದು ತಲೆಯಾಡಿಸಿ ಸ್ಟೂಲ್ ಮೇಲೆ ಕುಳಿತುಕೊಂಡ. ಹಿರಿಯಮಗಳು ಅಮ್ಮನ ಪಕ್ಕದಲ್ಲಿಯೇ ಕುಳಿತುಕೊಂಡಳು. ಮೊಮ್ಮಗ ಅಜ್ಜಿಯ ತೊಡೆಯನ್ನು ಏರಿ ಕುಳಿತುಕೊಂಡ….”ಅಜ್ಜಿಗೆ ಹುಷಾರಿಲ್ಲ ಕಂದಾ… ಬೆಡ್ ಮೇಲೆ ಕುಳಿತುಕೋ”…. ಎಂದು ಸುಮತಿಯ ಅಳಿಯ ತನ್ನ ಮಗನಿಗೆ ಹೇಳಿದರೂ ಅವನು ಕೇಳಲಿಲ್ಲ. …”ಉಹೂಂ… ಞಾ…. ಇವೀಡೆಯೇ ಇಚ್ಚಾಂ”… (ನಾನು ಇಲ್ಲಿಯೇ ಕುಳಿತುಕೊಳ್ಳುತ್ತೇನೆ) ಎಂದು ಹೇಳುತ್ತಾ ಅಜ್ಜಿಯ ಮುಖವನ್ನೊಮ್ಮೆ ನೋಡಿದ. ಸುಮತಿ ಪ್ರೀತಿಯಿಂದ ಮೊಮ್ಮಗನ ಕೆನ್ನೆಗೆ ಹೂ ಮುತ್ತೊಂದನ್ನು ಕೊಟ್ಟು….”ಕುಳಿತುಕೊಳ್ಳಲಿ ತೊಂದರೆಯಿಲ್ಲ”…. ಎಂದು ಹೇಳುತ್ತಾ ಮೊಮ್ಮಗನ ತಲೆಯನ್ನು ನೇವರಿಸಿದಳು. ಅಳಿಯ ಒಂದು ಕ್ಷಣ ಏನನ್ನೋ ಯೋಚಿಸುತ್ತಾ …”ಅಮ್ಮಾ ಹೇಗಿದ್ದೀರಿ?…ಎಂದು ಕೇಳಿದಾಗ….”ಪರವಾಗಿಲ್ಲಪ್ಪ”… ಎಂದು ಉತ್ತರಿಸಿದಳು ಸುಮತಿ…. “ಡಾಕ್ಟರ್ ಏನು ಹೇಳಿದರು ಅಮ್ಮಾ”…..ಎಂದು ಹಿರಿಯ ಮಗಳು ಸುಮತಿಯನ್ನು ಕೇಳಲು,…”ಸ್ವಲ್ಪ ದಿನ ಇಲ್ಲಿದ್ದು ಔಷಧೋಪಚಾರ ತೆಗೆದುಕೊಂಡರೆ ಸರಿ ಹೋಗುತ್ತದೆ ಎಂದು ಡಾಕ್ಟರ್ ಹೇಳಿದ್ದಾರೆ”….ಎಂದು ಹೇಳುತ್ತಾ ಸುಮತಿ ಎರಡನೇ ಮಗಳ ಕಡೆಗೆ ನೋಡಿದಳು. ಅಕ್ಕನ ಮಗಳನ್ನು ಎತ್ತಿಕೊಂಡು ಅವಳನ್ನು ಮುದ್ದು ಮಾಡುತ್ತಿದ್ದ ಎರಡನೇ ಮಗಳ ಮುಖ ಅಮ್ಮನ ಮಾತು ಕೇಳಿ ಮ್ಲಾನವಾಯಿತು. ಇದನ್ನು ಗಮನಿಸಿದ ಹಿರಿಯ ಮಗಳು ತಂಗಿಯ ಕಡೆಗೆ ನೋಡುತ್ತಾ….”ಏನು ಹೇಳಿದರು ಡಾಕ್ಟರ್?…ನೀನೇಕೆ ಹೀಗೆ ಇದ್ದಕ್ಕಿದ್ದ ಹಾಗೆ ಮಂಕಾದೆ”…. ಎಂದು ಕೇಳಲು ಆಮೇಲೆ ಹೇಳುತ್ತೇನೆ ಎಂಬಂತೆ ಸನ್ನೆ ಮಾಡಿದಳು. ಸುಮತಿ ಇದ್ಯಾವುದನ್ನೂ ಗಮನಿಸದೇ ಮೊಮ್ಮಗನ ಬಾಲಭಾಷೆಯನ್ನು ಕೇಳುವುದರಲ್ಲೇ ಮಗ್ನಳಾಗಿದ್ದಳು. ತನ್ನ ಅಣ್ಣ ಅಜ್ಜಿಯ ತೊಡೆಯ ಮೇಲೆ ಕುಳಿತು ಮುದ್ದು ಮಾಡಿಸಿಕೊಳ್ಳುತ್ತಿರುವುದನ್ನು ಕಂಡ ಅವನ ಪುಟ್ಟ ತಂಗಿ ತಾನೂ ಅಜ್ಜಿಯ ಬಳಿ ಹೋಗುತ್ತೇನೆ ಎನ್ನುವಂತೆ ಚಿಕ್ಕಮ್ಮನ ತೋಳಿಂದ ಕೆಳಗೆ ಇಳಿಯುವ ಪ್ರಯತ್ನ ಮಾಡುತ್ತಿದ್ದಳು. ಅದನ್ನು ಗಮನಿಸಿದ ಸುಮತಿ…. “ಬಾ ನನ್ನ ಮುದ್ದು ಮೊಮ್ಮಗಳೇ…. ಅಜ್ಜಿಯ ತೊಡೆ ಮೇಲೆ ಕುಳಿತುಕೋ”… ಎಂದು ಹೇಳುತ್ತಾ ಮೊಮ್ಮಗಳನ್ನು ಎತ್ತಿಕೊಂಡು ಮಗುವಿನ ಕೆನ್ನೆಗೆ ಮುತ್ತಿಟ್ಟಳು. ಮೊಮ್ಮಕ್ಕಳ ಜೊತೆ ಕಾಲ ಕಳೆಯುತ್ತಾ ಸುಮತಿ ತನ್ನ ಅನಾರೋಗ್ಯದ ಆಯಾಸವನ್ನು ಮರೆತಳು. ಅವರಿಬ್ಬರನ್ನು ಮುದ್ದಾಡುತ್ತಾ ಅವಳಿಗೆ ಸಮಯ ಹೋದದ್ದೇ ತಿಳಿಯಲಿಲ್ಲ. ವಾರ್ಡಿನ ಬಾಗಿಲಿನ ಮುಂದೆ ಆಸ್ಪತ್ರೆಯ ಊಟದ ತಳ್ಳುಗಾಡಿ ಬಂದು ನಿಂತಿತು. ಅಡುಗೆಯವ…..” ಎಲ್ಲರೂ ಬನ್ನಿ ಬೇಗ ಊಟ ತೆಗೆದುಕೊಳ್ಳಿ”…. ಎಂದು ಕೂಗಿದ. ಸುಮತಿಯ ಎರಡನೇ ಮಗಳು ಊಟದ ತಟ್ಟೆ ಹಾಗೂ ಒಂದು ಬಟ್ಟಲನ್ನು ಹಿಡಿದು ಸರತಿಯ ಸಾಲಿನಲ್ಲಿ ನಿಂತಳು. ರಾತ್ರಿಯ ಊಟಕ್ಕೆ ಅನ್ನ ಮತ್ತು ಸಾರು ಇತ್ತು. ಮಧ್ಯಾಹ್ನದ ಊಟಕ್ಕೆ ಅನ್ನ ಸಾರು ಒಂದು ಮೊಟ್ಟೆ ಎರಡು ಬಾಳೆಹಣ್ಣು ಆಸ್ಪತ್ರೆಯಿಂದ ಕೊಡುತ್ತಿದ್ದರು. ಅಡುಗೆಯವರು ಊಟ ಬಡಿಸಿದಾಗ ಅದನ್ನು ತೆಗೆದುಕೊಂಡು ಬಂದು ಅಲ್ಲಿದ್ದ ಸಣ್ಣ ಕಪಾಟಿನ ಮೇಲೆ ಮತ್ತೊಂದು ತಟ್ಟೆಯಿಂದ ಮುಚ್ಚಿಟ್ಟಳು….”ಬನ್ನಿ ಮಕ್ಕಳೇ…. ಅಜ್ಜಿ ಊಟ ಮಾಡಲಿ…. ನಾವು ಈಗ ಮನೆಗೆ ಹೋಗೋಣ…. ನಾಳೆ ಮತ್ತೆ ಅಜ್ಜಿಯನ್ನು ನೋಡಲು ಅಮ್ಮನ ಜೊತೆ ನೀವಿಬ್ಬರೂ ಇಲ್ಲಿಗೆ ಬರಬಹುದು”… ಎಂದು ಹೇಳಿ, ಹೆಂಡತಿಯ ಕಡೆಗೆ ತಿರುಗಿ ಹೋಗೋಣವೇ ಎಂಬಂತೆ ನೋಡಿದ. ಪತಿಯ ನೋಟದ ಅರ್ಥವನ್ನು ಅರಿತ ಸುಮತಿಯ ಹಿರಿಯ ಮಗಳು ‘ಸರಿ’ ಎನ್ನುವ ತಲೆ ಆಡಿಸಿ ಮಗಳನ್ನು ಸುಮತಿಯ ಮಡಿಲಿನಿಂದ ಎತ್ತಿಕೊಂಡಳು. ಆ ಪುಟ್ಟ ಮಗು ತಾನು ಬರುವುದಿಲ್ಲವೆಂದು ಹಠ ಮಾಡಿತು. ಮೊಮ್ಮಗನೂ ಅಜ್ಜಿಯ ಕುತ್ತಿಗೆಯನ್ನು ಬಿಗಿಯಾಗಿ ಅಪ್ಪಿಕೊಂಡು ಞಾಯಿ…ವನ್ನಿಲ್ಲ….ಅಮ್ಮಾಮ್ಮೆಡೆ ಕೂಡೆ ಇಚ್ಚಾಂ….(ನಾನು ಬರುವುದಿಲ್ಲ ಅಜ್ಜಿಯ ಜೊತೆ ಇಲ್ಲೇ ಇರುತ್ತೇನೆ) ಎಂದು ಹೇಳಿದ. ಅವನನ್ನು ಪುಸಲಾಯಿಸಿ ಕರೆದುಕೊಂಡು ಹೋಗಲು ಅಳಿಯ ಹರಸಾಹಸ ಪಡಬೇಕಾಯಿತು…._ನಾಳೆ ಮತ್ತೆ ಬರೋಣ”… ಎಂದು ಹೇಳಿದಾಗ ಒಲ್ಲದ ಮನಸ್ಸಿನಿಂದ ವಾರ್ಡಿನ ಬಾಗಿಲಿನಿಂದ ಆಚೆ ಮರೆಯಾಗುವವರೆಗೂ ಅಜ್ಜಿಯನ್ನೇ ನೋಡುತ್ತಾ ಅಪ್ಪ ಅಮ್ಮನ ಜೊತೆಗೆ ಹೋದ. ಮೊಮ್ಮಕ್ಕಳನ್ನು ಕಳುಹಿಸಲು ಸುಮತಿಗೆ ಮನಸ್ಸಿಲ್ಲದಿದ್ದರೂ ಮತ್ತೆ ಬರುತ್ತಾರೆ ಅಲ್ಲವೇ ಎನ್ನುವ ಕಾರಣದಿಂದ ಕಳುಹಿಸಿಕೊಟ್ಟಳು.….”ಅಮ್ಮ ಈಗ ಊಟ ಮಾಡು…. ನರ್ಸ್ ಬಂದು ಔಷಧಿ ಕೊಡುವ ಸಮಯವಾಯಿತು…. ತಡ ಮಾಡಬೇಡ”… ಎಂದ ಮಗಳ ಮಾತಿಗೆ ತಲೆಯಾಡಿಸಿ, ಊಟದ ತಟ್ಟೆಯನ್ನು ಅವಳ ಕೈಯಿಂದ ಪಡೆದಳು. ತಾಯಿ ಊಟ ಮುಗಿಸಿದ ನಂತರ ಅಲ್ಲಿಯೇ ತಟ್ಟೆಯಲ್ಲಿ ಕೈ ತೊಳೆಯಲು ನೀರನ್ನು ಕೊಟ್ಟಳು. ಆಸ್ಪತ್ರೆಯ ಕೈ ತೊಳೆಯುವ ಜಾಗ ಸ್ವಲ್ಪ ದೂರ ಇದ್ದಿದ್ದರಿಂದ ದಿನವೂ ಹೀಗೆ ತಟ್ಟೆಯಲ್ಲಿ ಕೈ ತೊಳೆಯಲು ಹೇಳುತ್ತಿದ್ದಳು. ನಂತರ ತಾನು ಹೋಗಿ ಶುಚಿಯಾಗಿ ತಟ್ಟೆಯನ್ನು ತೊಳೆದುಕೊಂಡು ಬಂದು ಇಡುತ್ತಿದ್ದಳು. ನರ್ಸ್ ಬಂದು ರಾತ್ರಿಯ ಔಷಧಿಯನ್ನು ಕೊಟ್ಟರು. ಔಷಧಿಯನ್ನು ಕುಡಿದು ಸುಮತಿ ದಿಂಬನ್ನು ಬೆನ್ನಿನ ಹಿಂದೆ ಇಟ್ಟು ಒರಗಿ ಕುಳಿತುಕೊಂಡಳು. ತಾಯಿಯ ಹಾಸಿಗೆ ಪಕ್ಕದಲ್ಲಿಯೇ ಸ್ಟೂಲನ್ನು ಎಳೆದುಕೊಂಡು ಮಗಳು ಕುಳಿತುಕೊಂಡು ತಾಯಿಯ ಹಸ್ತವನ್ನು ತನ್ನ ಎರಡೂ ಕರಗಳಲ್ಲಿ ಹಿಡಿದುಕೊಂಡ ತಾಯಿಯ ಮುಖವನ್ನೇ ಎವೆಯಿಕ್ಕದೇ ದಿಟ್ಟಿಸಿ ನೋಡಿದಳು.
ಧಾರಾವಾಹಿ ಸಂಗಾತಿ-26 ಸವಿತಾ ದೇಶಮುಖ ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕನ್ನಡಾಬಿಮಾನ *ಗಡಿ ಭಾಗವೆಂದರೆ |ಕಡಿಮೆ ಇಲ್ಲ ಕನ್ನಡಕೆ ಉಡಿಯ ತುಂಬುವೆ ಕನ್ನಡ -ತಾಯಿಗೆಒಡವೆಯ ಇಡಿಸುವೆ ಪದಗಳ||*ಅಂತ ಹಾಡುತ ಜಯದೇವಿ ತಾಯಿಯವರು ಗಡಿಭಾಗದಲ್ಲಿರುವ ಕನ್ನಡಿಗರ ಕನ್ನಡಾಭಿಮಾನವನ್ನು ಹೃದಯಸ್ಪರ್ಶಿಯಾಗಿ ವ್ಯಕ್ತಪಡಿಸಿದ್ದಾರೆ. ಗಡಿಭಾಗದಲ್ಲಿ ವಾಸಿಸುವುದರಿಂದ ಕನ್ನಡದ ಮೇಲಿನ ಪ್ರೀತಿ, ಗೌರವ ಅಥವಾ ನಿಷ್ಠೆ ಕಡಿಮೆಯಾಗುವುದಿಲ್ಲ ಸ್ಪಷ್ಟಪಡಿಸುತ್ತ* ಉಡಿಯ ತುಂಬುವೆ ಕನ್ನಡ ಪದಗಳ …ಎಂಬುದು ಸಾಂಕೇತಿಕವಾಗಿದೆ. ಮುತ್ತೈದೆಯಾದ ಕನ್ನಡಾಂಬೆಯ ಉಡಿಯನ್ನು ಕನ್ನಡದ ಮಧುರ ಪದಗಳು, ಸಾಹಿತ್ಯ, ಸಂಸ್ಕೃತಿ ಮತ್ತು ಸೇವೆಯಿಂದ ತುಂಬಿಸಿ ಅವಳನ್ನು ಗೌರವಿಸುವ ಸಂಕಲ್ಪವನ್ನು ವ್ಯಕ್ತಪಡಿಸುತ್ತ…. *ಒಡವೆ ಇಡಿಸುವೆ ಕನ್ನಡ ಪದಗಳ* ಎಂಬುದು ಕನ್ನಡದ ಸುಂದರ ಪದಗಳೇ ಕನ್ನಡ ತಾಯಿಗೆ ಧರಿಸುವ ಅಮೂಲ್ಯ ಆಭರಣಗಳೆಂಬ ಭಾವವನ್ನು ತಿಳಿಸುತ್ತದೆ. ಬಂಗಾರ, ಬೆಳ್ಳಿ ಅಥವಾ ರತ್ನಗಳಿಗಿಂತ ಶ್ರೇಷ್ಠ ಕನ್ನಡದ ಪದಗಳು…. ಸಾಹಿತ್ಯ ಮತ್ತು ಸಂಸ್ಕೃತಿಯೇ ಕನ್ನಡಾಂಬೆಯ ನಿಜವಾದ ಅಲಂಕಾರವೆಂದು ಸಾರುವ ತ್ರಿಪದಿ ಗಡಿಭಾಗದ ಕನ್ನಡಿಗರ ಅಚಲ ಕನ್ನಡಾಭಿಮಾನವನ್ನು, ಕನ್ನಡ ತಾಯಿಯನ್ನು ಪದಗಳ ಮೂಲಕ ಆರಾಧಿಸುವ ಮನೋಭಾವವನ್ನು ಹಾಗೂ ಕನ್ನಡ ಭಾಷೆಯನ್ನು ಸಾಹಿತ್ಯ ಮತ್ತು ಸಂಸ್ಕೃತಿಯಿಂದ ಮತ್ತಷ್ಟು ಶ್ರೀಮಂತಗೊಳಿಸುವ ಸಂಕಲ್ಪವನ್ನು ಸುಂದರವಾಗಿ ಅಭಿವ್ಯಕ್ತಿಸುತ್ತ… ಮನದಾಳಕ್ಕೆ ಇಳಿಯುವಂತಹ ತ್ರಿಪದಿಗಳು ರಚಿಸಿದರು…. ಗಡಿನಾಡಿನಲ್ಲಿ ಬದುಕಿದ ತಾಯಿಯವರು…ನಿಸರ್ಗದ ಮಡಿಲಿನಲ್ಲಿ ಹುಟ್ಟಿದ ನದಿಯೊಂದು ತನ್ನ ತಾಯಿನಾಡನ್ನು ತೊರೆದು ಹರೆವಂತೆ ಕನ್ನಡದ ಅಸ್ಮಿತೆಯನ್ನು ಎಲ್ಲೆಡೆ ಹರಡಿದವರಲ್ಲಿ ಒಬ್ಬರಾದರು!!! ಜಯದೇವಿ ತಾಯಿಯವರ ಹೃದಯವೂ ಕನ್ನಡದ ನೆಲ, ಕನ್ನಡದ ಜನ ಮತ್ತು ಕನ್ನಡದ ಸಂಸ್ಕೃತಿಯನ್ನು ಎಂದಿಗೂ ಬಿಟ್ಟು ದೂರವಾಗಲಿಲ್ಲ.ಬೆಟ್ಟಗಳಂತೆ ಅಚಲವಾದ ಅವರ ಕನ್ನಡ ಪ್ರೇಮ, ಸಾಗರದಷ್ಟು ವಿಶಾಲವಾಗಿತ್ತು. ಮಳೆಯ ಹನಿಗಳು ಭೂಮಿಗೆ ಜೀವ ತುಂಬುವಂತೆ, ಅವರ ಕನ್ನಡದ ಪ್ರೀತಿ ಸಾವಿರಾರು ಜನರ ಮನಗಳಲ್ಲಿ ಭಾಷೆಯ ಮೇಲಿನ ಗೌರವವನ್ನು ಅರಳಿಸಿತು.ವಸಂತ ಬಂದಾಗ ಮರಗಳು ಹೊಸ ಚಿಗುರು ಬಿಡುವಂತೆ, ತಾಯಿಯವರ ಮಾತುಗಳನ್ನು ಕೇಳಿದ ಪ್ರತಿಯೊಬ್ಬರ ಮನದಲ್ಲೂ ಕನ್ನಡದ ಹೊಸ ಚೈತನ್ಯ ಮೊಳೆಯುತ್ತಿತ್ತು. ಪರಿಮಳವನ್ನು ಎಲ್ಲೆಡೆ ಹರಡುವ ಹೂವಿನಂತೆ, ಅವರ ಕನ್ನಡದ ಅಭಿಮಾನ ಎಲ್ಲೆಡೆ ಪಸರಿಸಿತು. ಅವರು ಕನ್ನಡವನ್ನು ಕೇವಲ ಸಾಹಿತ್ಯದ ಭಾಷೆಯಾಗಿ ನೋಡದೆ, ಬದುಕಿನ ಮೌಲ್ಯಗಳನ್ನು ಬೆಳೆಸುವ ಸಂಸ್ಕೃತಿಯ ಭಾಷೆಯಾಗಿ ಕಂಡರು. ಜಯದೇವಿ ತಾಯಿಯವರಿಗೆ ಕನ್ನಡವೇ ಉಸಿರು, ಅವರ ಆತ್ಮ, ಅವರ ಬದುಕಿನ ಧ್ಯೇಯವಾಗಿತ್ತು…. ಕನ್ನಡವನ್ನೇ ಬದುಕಿದರು…!!!ಅವರ ಪ್ರತಿಯೊಂದು ಮಾತಿನಲ್ಲಿ ಕನ್ನಡದ ಲಾಲಿತ್ಯ,ಪ್ರತಿಯೊಂದು ಬರಹದಲ್ಲಿ ಕನ್ನಡದ ಸೌಂದರ್ಯ, ಪ್ರತಿಯೊಂದು ಕಾರ್ಯದಲ್ಲಿ ಕನ್ನಡದ ಪರಿಮಳ ತುಂಬಿಕೊಂಡಿತ್ತು. ಅವರ ದೃಷ್ಟಿಯಲ್ಲಿ ಕನ್ನಡ ಎಂದರೆ ಕರುಣೆ, ಸಂಸ್ಕಾರ, ಶರಣ ತತ್ವಗಳ ಪ್ರತಿಪಾದನೆ, ಜ್ಞಾನ ಮತ್ತು ಆತ್ಮಗೌರವದ ಪ್ರತೀಕ. ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಕನ್ನಡದಲ್ಲಿ ಮಾತನಾಡಬೇಕು, ಕನ್ನಡದಲ್ಲಿ ಓದಬೇಕು, ಕನ್ನಡದಲ್ಲೇ ಯೋಚಿಸಬೇಕು ಎಂಬ ಆಶಯವನ್ನು ಅವರು ತಮ್ಮ ಬದುಕಿನ ಮೂಲಕವೇ ಸಾರಿದರು. ಅವರಿಗೆ ಕನ್ನಡ ತಾಯಿ ಎಂದರೆ ದೇವತೆ. ತಾಯಿಯ ಮಡಿಲು ಮಗುವಿಗೆ ಹೇಗೆ ಸುರಕ್ಷಿತ ಆಶ್ರಯವೋ, ಹಾಗೆಯೇ ಕನ್ನಡ ಭಾಷೆ ಕನ್ನಡಿಗರಿಗೆ ಆತ್ಮೀಯ ನೆಲೆ ಎಂದು ಅವರು ನಂಬಿದ್ದರು. ಆ ಕಾರಣಕ್ಕಾಗಿಯೇ ಕನ್ನಡದ ಬೆಳವಣಿಗೆಗೆ ಸಂಬಂಧಿಸಿದ ಪ್ರತಿಯೊಂದು ಕಾರ್ಯಕ್ಕೂ ಅವರು ತಮ್ಮ ಸಮಯ, ಶ್ರಮ ಮತ್ತು ಪ್ರತಿಭೆಯನ್ನು ಸಮರ್ಪಿಸಿದರು. ಕನ್ನಡದ ಮೇಲಿನ ಅವರ ಪ್ರೀತಿ ಆಕಾಶದಷ್ಟು ಅಪಾರ, ಭೂಮಿಯಷ್ಟು ಸಹನಶೀಲ, ನದಿಯಷ್ಟು ನಿರಂತರ, ವಟವೃಕ್ಷದಷ್ಟು ಆಶ್ರಯದಾಯಕವಾಗಿತ್ತು. ಕನ್ನಡದ ಗೌರವ ಕುಂದಿದಾಗ ಅವರ ಮನ ನೋಯುತ್ತಿತ್ತು, ಕನ್ನಡದ ಕೀರ್ತಿ ಹೆಚ್ಚಾದಾಗ ಅವರ ಮುಖ ಅರಳಿದ ಹೂವಿನಂತೆ ಸಂತೋಷದಿಂದ ಕಂಗೊಳಿಸುತ್ತಿತ್ತು.ಜಯದೇವಿ ತಾಯಿಯವರ ಕನ್ನಡಾಭಿಮಾನ ಇಂದು ಪ್ರತಿಯೊಬ್ಬ ಕನ್ನಡಿಗನಿಗೂ ಆದರ್ಶ. ಭಾಷೆಯನ್ನು ಪ್ರೀತಿಸುವುದು ಎಂದರೆ ಭಾಷೆಯ.. ಸಂಸ್ಕೃತಿ, ಸಾಹಿತ್ಯ, ಪರಂಪರೆ ಮತ್ತು ಮೌಲ್ಯಗಳನ್ನು ಉಳಿಸಿ ಬೆಳೆಸುವುದೇ ನಿಜವಾದ ಕನ್ನಡಾಭಿಮಾನ ಎಂಬುದನ್ನು ಅವರು ತಮ್ಮ ಬದುಕಿನ ಮೂಲಕ ಸಾರಿ ತೋರಿಸಿದರು. *ಶರಣ ಸಾಹಿತ್ಯವು ….ಕನ್ನಡಾಂಬೆಯ ದಿವ್ಯ ಬೆಳಕು*ಶರಣ ಸಾಹಿತ್ಯವು ಕನ್ನಡ ನಾಡಿನ ಆತ್ಮ, ಕನ್ನಡ ಭಾಷೆಯ ದಿವ್ಯ ಬೆಳಕು, ಕನ್ನಡಾಂಬೆಗೆ ಬೆಳಗುವ ಅಮರ ದೀಪವಾಗಿದೆ. ಇದು ಬದುಕನ್ನು ಬೆಳಗಿಸುವ ಜ್ಞಾನಜ್ಯೋತಿ. ಅಜ್ಞಾನ, ಅಂಧಶ್ರದ್ಧೆ, ಜಾತಿ-ಮತದ ಸಂಕೋಲೆಗಳನ್ನು ಕಳಚಿ ಸಮಾನತೆ, ಪ್ರೀತಿ, ಕರುಣೆ, ಸತ್ಯ ಮತ್ತು ನೈತಿಕತೆಯ ದಾರಿಯನ್ನು ತೋರಿದ ಮಹಾನ್ ಚಳುವಳಿ ನಡೆದದ್ದು ವಚನ ಸಾಹಿತ್ಯದ ಮೂಲಕ ಕನ್ನಡದಲ್ಲಿ ಅಂತ ಹೇಳುತ್ತಿದ್ದರು. ಹನ್ನೆರಡನೇ ಶತಮಾನದಲ್ಲಿ ಬಸವಾದಿ ಶರಣರು ವಚನಗಳ ಮೂಲಕ ಕನ್ನಡವನ್ನು ಜನಸಾಮಾನ್ಯರ ಹೃದಯಕ್ಕೆ ತಲುಪಿಸಿದರು. ಅರಮನೆಯ ಭಾಷೆಯಾಗಿದ್ದ ಕನ್ನಡವನ್ನು ಜನರ ಬದುಕಿನ ಭಾಷೆಯನ್ನಾಗಿ ರೂಪಿಸಿದರು. ಅವರ ವಚನಗಳು ಇಂದಿಗೂ ದಾರಿದೀಪಗಳಾಗಿ ಹೊಳೆಯುತ್ತಿವೆ. ಆದ್ದರಿಂದ ಶರಣ ಸಾಹಿತ್ಯವನ್ನು ಕನ್ನಡದ ದಿವ್ಯ ಬೆಳಕು ಎಂದು ಕರೆಯುವುದು ಅತ್ಯಂತ ಸಮಂಜಸ. *ಕತ್ತಲನ್ನು ಓಡಿಸುವ ಸೂರ್ಯನ ಕಿರಣಗಳಂತೆ, ಶರಣ ಸಾಹಿತ್ಯವು ಅಜ್ಞಾನವನ್ನು ದೂರ ಮಾಡಿ ಜ್ಞಾನದ ಹರಡುವದೆಂದು ಜಯದೇವಿ ತಾಯಿಯವರು ಅಭಿಮಾನದಿಂದ ನುಡಿಯವರು * ಮಳೆಯು ಭೂಮಿಯನ್ನು ಹಸನಾಗಿಸುವಂತೆ, ಈ ಸಾಹಿತ್ಯವು ಮನಸ್ಸುಗಳನ್ನು ಪ್ರೀತಿ, ಸಹಾನುಭೂತಿ ಮತ್ತು ಮಾನವೀಯತೆಯಿಂದ ಹಸನಾಗಿಸಿದೆಂದು. ಕನ್ನಡಿಗರ ಅಮೂಲ್ಯ ಸಂಪತ್ತಾಗಿ….ಇಡೀ ಮಾನವಕುಲಕ್ಕೆ ಸ್ಫೂರ್ತಿಯಾಗಿರುವ ಶ್ರೇಷ್ಠ ಪರಂಪರೆಯಾಗಿದೆ. ಶರಣ ಸಾಹಿತ್ಯದ ಬೆಳಕು ಎಂದಿಗೂ ಆರದು. ಅದು ಪ್ರತಿಯೊಂದು ಕನ್ನಡಿಗನ ಹೃದಯದಲ್ಲಿ ಸತ್ಯದ ಜ್ಯೋತಿಯಾಗಿ, ಸಮಾನತೆಯ ಸಂದೇಶವಾಗಿ, ಮಾನವೀಯತೆಯ ಮಹಾಪ್ರಕಾಶವಾಗಿ ಶಾಶ್ವತವಾಗಿ ಬೆಳಗುತ್ತಲೇ ಇರುತ್ತದೆ. ಕನ್ನಡ ಇರುವವರೆಗೆ, ಕನ್ನಡದ ದಿವ್ಯ ಬೆಳಕಾಗಿ ಶರಣ ಸಾಹಿತ್ಯವು ಅನಂತ ಕಾಲದವರೆಗೆ ಜನಮನಗಳನ್ನು ಪ್ರಕಾಶಮಾನಗೊಳಿಸುತ್ತಲೇ ಇರುತ್ತದೆ. ಎಂದು ರಾಜಾರೋಷವಾಗಿ ಎಲ್ಲ ಭಾಷಣಗಳಲ್ಲಿ ತಾಯಿಯವರು ಸಾರುತ್ತಿದ್ದರು. *ಕನ್ನಡದ ದಿವ್ಯ ಬೆಳಕಾದ ಶರಣ ಸಾಹಿತ್ಯವು ಕನ್ನಡವನ್ನು ಮತ್ತೆ ಪ್ರಜ್ವಲಿಸುವಂತೆ ಮಾಡಿತು ಅಂತ ಜಯದೇವಿ ತಾಯಿಯವರು ನುಡಿಯುತ್ತಿದ್ದರು…!!! ಹನ್ನೆರಡನೇ ಶತಮಾನದಲ್ಲಿ ಶರಣರ ವಚನ ಕ್ರಾಂತಿಯು ಇಡೀ ಕರ್ನಾಟಕದ ಸಾಂಸ್ಕೃತಿಕ ಮತ್ತು ಸಾಮಾಜಿಕ ಬದುಕಿನ ಮೇಲೆ ಅಪಾರ ಪ್ರಭಾವ ಬೀರಿತ್ತು. ಆದರೆ ಕಾಲಕ್ರಮೇಣ, ವಿಶೇಷವಾಗಿ ಹೈದರಾಬಾದ ಕರ್ನಾಟಕ ಭಾಗದಲ್ಲಿ ಹಲವು ಶತಮಾನಗಳ ಆಡಳಿತಾತ್ಮಕ ಮತ್ತು ಸಾಂಸ್ಕೃತಿಕ ಬದಲಾವಣೆಗಳಿಂದ ತೆಲುಗು, ಮರಾಠಿ ಹಾಗೂ ಉರ್ದು ಭಾಷೆಗಳ ಪ್ರಭಾವ ಹೆಚ್ಚಾಯಿತು. ಇದರ ಪರಿಣಾಮವಾಗಿ ಕನ್ನಡ ಭಾಷೆಯ ಬಳಕೆ, ಅದರ ಬಳಕೆ ಮತ್ತು ಶರಣ ಸಾಹಿತ್ಯದ ಅರಿವು ಅನೇಕ ಪ್ರದೇಶಗಳಲ್ಲಿ ಕ್ಷೀಣಿಸತೊಡಗಿತು. ಇಂತಹ ಸಂದರ್ಭದಲ್ಲಿ, ಕನ್ನಡದ ಆತ್ಮಸ್ವರೂಪವಾಗಿರುವ ಶರಣ ಸಾಹಿತ್ಯದ ಜ್ಯೋತಿಯನ್ನು ಮತ್ತೆ ಜನಮನಗಳಲ್ಲಿ ಪ್ರಜ್ವಲಿಸುವ ಮಹತ್ತರ ಸಂಕಲ್ಪವನ್ನು ಜಯದೇವಿ ತಾಯಿಯವರು ಕೈಗೊಂಡರು. ವಚನ ಸಾಹಿತ್ಯವನ್ನು ಮನೆಮನೆಗೆ, ಮನಸ್ಸುಮನಸ್ಸಿಗೆ ತಲುಪಿಸುವ ಮೂಲಕ ಕನ್ನಡದ ಆತ್ಮಗೌರವವನ್ನು ಮರುಜಾಗೃತಗೊಳಿಸಿದರು. ಅವರ ಪ್ರಯತ್ನವು ಸಾಹಿತ್ಯದ ಪ್ರಸಾರ ಮಾಡುತ… ಕನ್ನಡದ ಮೆರುಗನ್ನು ಪುನರುಜ್ಜೀವನಗೊಳಿಸುವ ಶರಣರ ಮೌಲ್ಯಗಳ ಪುನರ್ಸ್ಥಾಪನೆ ಮತ್ತು ಸಾಂಸ್ಕೃತಿಕ ಸ್ವಾಭಿಮಾನದ ಮಹಾಯಜ್ಞವಾಗಿತ್ತು. ಸತ್ಯಶರಣರ ಪಾದವ ನೆನೆದರೆ |ಚಿಂತೆ ಚಿತೆಯು ಶಮನಾಗುವದು ||ಶಾಂತ ಚಿತ್ತ ನಿಜ ಹಂತವನೇರುತ |ತಸಂತಸದಿ ನಲಿದಾಡುವದು||ಎನ್ನುತ…..ಶರಣರ ವಚನಗಳನ್ನು ಜನಜೀವನದೊಂದಿಗೆ ಬೆಸೆದು, ಕನ್ನಡದ ದಿವ್ಯ ಬೆಳಕನ್ನು ಮತ್ತೆ ಪ್ರಜ್ವಲಿಸಿದ ಸಾಂಸ್ಕೃತಿಕ ಸಾಧಕಿಯಾಗಿ ಜಯದೇವಿ ತಾಯಿಯವರು ಚಿರಸ್ಮರಣೀಯರಾಗಿದ್ದಾರೆ. ಅವರ ಸೇವೆಯಿಂದ ಶರಣ ಸಾಹಿತ್ಯವು ಮತ್ತೊಮ್ಮೆ ಜನಮನಗಳಲ್ಲಿ ಜ್ಞಾನಜ್ಯೋತಿಯಾಗಿ ಹೊಳೆಯಿತು…. ಕನ್ನಡದ ಹೊಳಪು ಹೊಸ ಉತ್ಸಾಹದಿಂದ ನಾಡಿನಾದ್ಯಂತ ಹರಡಿತು. ಜಯದೇವಿ ತಾಯಿಯವರಲ್ಲಿ ಶರಣ ಸಾಹಿತ್ಯದ ಮೇಲಿನ ಅಭಿರುಚಿ ಬಾಲ್ಯದಲ್ಲಿಯೇ ಮೊಳಕೆಯೊಡೆದಿತ್ತು. ವಚನಗಳಲ್ಲಿದ್ದ ಮೌಲ್ಯಗಳು, ಸಮಾನತೆಯ ಸಂದೇಶ ಮತ್ತು ಸರಳವಾದ ಜೀವನದರ್ಶನವು ಅವರ ಮನಸ್ಸನ್ನು ಆಳವಾಗಿ ಸೆಳೆದಿತ್ತು.ವಚನಗಳನ್ನು ಓದಿ ಅರ್ಥೈಸಬೇಕೆಂಬ ಅಪಾರ ಜಿಜ್ಞಾಸೆಯೇ ಅವರಿಗೆ ಕನ್ನಡ ಕಲಿಯುವ ಪ್ರೇರಣೆಯಾಯಿತು.ಅಕ್ಷರಜ್ಞಾನವನ್ನು ಗಳಿಸುವುದಕ್ಕಾಗಿಯೇ, ಶರಣರ ವಚನಗಳ ಅಮೃತ ಸತ್ವವನ್ನು ಆಸ್ವಾದಿಸುವ ಮಹದಾಸೆಯಿಂದ ಅವರು ಕನ್ನಡವನ್ನು ಅಭ್ಯಾಸ ಮಾಡಿದರು. ಕನ್ನಡ ಭಾಷೆಯನ್ನು ಸಂವಹನದ ಮಾಧ್ಯಮವಾಗಿ..ಶರಣರ ಚಿಂತನೆಗಳ ಅಪೂರ್ವ ಲೋಕಕ್ಕೆ ಕರೆದೊಯ್ಯುವ ಪವಿತ್ರ ಸೇತುವೆಯೆಂದು ಭಾವಿಸಿದರು.ವಚನಗಳ ಮೇಲಿನ ಅಪಾರ ಪ್ರೀತಿ, ಅಧ್ಯಯನಶೀಲತೆ ಮತ್ತು ಕನ್ನಡಾಭಿಮಾನವೇ ಮುಂದೆ ಅವರನ್ನು ಶರಣ ಸಾಹಿತ್ಯದ ಪ್ರಚಾರಕಿ, ಕನ್ನಡ ಸಂಸ್ಕೃತಿಯ ಮುಂಚೂಣಿ ಸೇವಕಿ ಹಾಗೂ ವಚನ ಸಂದೇಶವನ್ನು ಜನಮನಗಳಿಗೆ ತಲುಪಿಸಿದ ಮಹಾನ್ ಸಾಧಕಿಯನ್ನಾಗಿ ರೂಪಿಸಿತು.(ಮುಂದುವರೆಯುವುದು) ಸವಿತಾ ದೇಶಮುಖ
ಶರಣ ಸಂಗಾತಿ ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಮೌನ ಯೋಗಿ ಶ್ರೀ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರು ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರು ಕರ್ನಾಟಕದ ಶರಣ ಪರಂಪರೆಯ ಅತ್ಯಂತ ಶ್ರೇಷ್ಠ ಹಾಗೂ ಅವಿಸ್ಮರಣೀಯ ಮೌನಯೋಗಿಗಳಾಗಿದ್ದಾರೆ. ಗದಗ ಜಿಲ್ಲೆಯ ಗದಗ ತಾಲ್ಲೂಕಿನ ಬಳಗಾನೂರು ಗ್ರಾಮದ ಚಿಕ್ಕೇನಕೊಪ್ಪ ಮಠದಲ್ಲಿ ನೆಲೆಸಿ, ತಮ್ಮ ತಪಃಶಕ್ತಿಯಿಂದ ಜನಸಾಮಾನ್ಯರ ಉದ್ಧಾರಕ್ಕಾಗಿ ಶ್ರಮಿಸಿದ ಮಹಾಪುರುಷರಾಗಿದ್ದಾರೆ. ವ್ಯಕ್ತಿತ್ವ ಮತ್ತು ಜೀವನ ಶೈಲಿಅವಧೂತ ಜೀವನ: ಚನ್ನವೀರ ಶರಣರು ತನುವಿನಲ್ಲಿ ನಿರ್ಮೋಹತ್ವ, ಮನದಲ್ಲಿ ನಿರಹಂಕಾರ ಮತ್ತು ಜ್ಞಾನದಲ್ಲಿ ಪರಮಾನಂದವನ್ನು ರೂಢಿಸಿಕೊಂಡು ಸರಳವಾಗಿ ಬದುಕಿದವರು. ಮೌನಯೋಗಿ: ಅವರು ಒಬ್ಬ ಅವಧೂತ ಫಕೀರನಂತೆ ಜೀವಿಸುತ್ತಾ, ಸಮಾಜಕ್ಕೆ ಶಾಂತಿ ಮತ್ತು ಸೌಹಾರ್ದತೆಯ ದಾರಿಯನ್ನು ತೋರಿಸಿದ ಮಹಾನ್ ತಪಸ್ವಿ. ಸಾಹಿತ್ಯ ಮತ್ತು ಇತಿಹಾಸಶರಣರ ಪುರಾಣ: ಗದಗದ ವೀರೇಶ್ವರ ಪುಣ್ಯಾಶ್ರಮದ ಖ್ಯಾತ ಸಂಗೀತಜ್ಞರಾದ ಪಂ. ಪುಟ್ಟರಾಜ ಗವಾಯಿಗಳು ಇವರ ಜೀವನ ಚರಿತ್ರೆಯನ್ನು ಆಧರಿಸಿ ಚಿಕೇನಕೊಪ್ಪದ ಚೆನ್ನವೀರ ಶರಣರ ಪುರಾಣ ಎಂಬ ಕೃತಿಯನ್ನು ರಚಿಸಿದ್ದಾರೆ. ಜಾತ್ರೆ ಮತ್ತು ಪುಣ್ಯಸ್ಮರಣೋತ್ಸವ ವಾರ್ಷಿಕ ಉತ್ಸವ: ಪ್ರತಿವರ್ಷ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಇವರ ಪುಣ್ಯಸ್ಮರಣೋತ್ಸವ ಮತ್ತು ಮಹಾ ರಥೋತ್ಸವವನ್ನು ಸಡಗರದಿಂದ ಆಚರಿಸಲಾಗುತ್ತದೆ. ಶರಣರ ಬುತ್ತಿ: ಈ ಜಾತ್ರೆಯ ಒಂದು ವಿಶಿಷ್ಟ ಸಂಪ್ರದಾಯವೆಂದರೆ, ಸುತ್ತಮುತ್ತಲಿನ ಹಳ್ಳಿಗಳ ಮಹಿಳೆಯರು ಭಕ್ತರಿಗಾಗಿ ಸಾವಿರಾರು ರೊಟ್ಟಿ, ಶೇಂಗಾ ಹೋಳಿಗೆ ಮತ್ತು ಕರ್ಜಿಕಾಯಿಗಳನ್ನು ತಯಾರಿಸಿ, ಬುತ್ತಿಯನ್ನು ತಲೆಯ ಮೇಲೆ ಹೊತ್ತು ಮೆರವಣಿಗೆಯ ಮೂಲಕ ಶ್ರೀಮಠಕ್ಕೆ ತರುತ್ತಾರೆ. ಸಾಮಾಜಿಕ ಸೇವೆಗಳು: ಜಾತ್ರೆಯ ಸಂದರ್ಭದಲ್ಲಿ ಉಚಿತ ಸಾಮೂಹಿಕ ವಿವಾಹಗಳು, ನೇತ್ರ ಚಿಕಿತ್ಸಾ ಶಿಬಿರಗಳು, ರಕ್ತದಾನ ಮತ್ತು ಆರೋಗ್ಯ ತಪಾಸಣೆಗಳನ್ನು ಹಮ್ಮಿಕೊಳ್ಳುವ ಮೂಲಕ ಶ್ರೀಮಠವು ಜನಪರ ಕಾರ್ಯಗಳನ್ನು ಮಾಡುತ್ತದೆ. ಶ್ರೀಮಠದ ಸಮಾಜ ಸೇವೆ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ ಮಠವು ಕೇವಲ ಧಾರ್ಮಿಕ ಕೇಂದ್ರವಾಗಿರದೆ ಶಿಕ್ಷಣ ಸಂಸ್ಥೆಗಳು, ಉಚಿತ ಪ್ರಸಾದ ನಿಲಯ (ದಾಸೋಹ) ಮತ್ತು ಸಾವಯವ ಕೃಷಿ ಹಾಗೂ ಗೋಶಾಲೆಯನ್ನು ನಡೆಸುವ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆ ನೀಡುತ್ತಿದೆ. ಚಿಕ್ಕೇನಕೊಪ್ಪದ ಮೌನಯೋಗಿ, ಪೂಜ್ಯ ಶ್ರೀ ಚನ್ನವೀರ ಶರಣರ ವೈಯಕ್ತಿಕ ಲೌಕಿಕ ಜೀವನ ಮತ್ತು ಅವರ ತಂದೆ-ತಾಯಿಗಳ ನಿಖರವಾದ ಹೆಸರುಗಳ ಕುರಿತು ಇತಿಹಾಸದ ದಾಖಲೆಗಳಲ್ಲಾಗಲಿ ಅಥವಾ ಸಾರ್ವಜನಿಕ ಮೂಲಗಳಲ್ಲಾಗಲಿ ಯಾವುದೇ ಸ್ಪಷ್ಟ ಮಾಹಿತಿಯು ಲಭ್ಯವಿಲ್ಲ. ಇದಕ್ಕೆ ಪ್ರಮುಖ ಕಾರಣಗಳು ಮತ್ತು ಅವರ ಹಿನ್ನೆಲೆಯ ಕುರಿತಾದ ಕೆಲವು ಮುಖ್ಯ ಸಂಗತಿಗಳು ಅವಧೂತ ಹಾಗೂ ಮೌನ ಪರಂಪರೆ: ಶ್ರೀ ಚನ್ನವೀರ ಶರಣರು ಒಬ್ಬ ಪರಮ ಅವಧೂತರಾಗಿ ಮತ್ತು ಮೌನಯೋಗಿಯಾಗಿ ಜೀವಿಸಿದರು. ಅವರು ತಮ್ಮ ಪೂರ್ವಾಶ್ರಮದ (ಸಂಸಾರದ ಅಥವಾ ಹುಟ್ಟಿನ) ವಿವರಗಳನ್ನು ಸಂಪೂರ್ಣವಾಗಿ ತೊರೆದು, ಕೇವಲ ಲೌಕಿಕ ಜಗತ್ತಿನ ಕಲ್ಯಾಣಕ್ಕಾಗಿ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಬೆಳಕಿಗೆ ಬಾರದ ಹಿನ್ನೆಲೆ: ಇತಿಹಾಸದ ಪ್ರಕಾರ, ಅವರು ಬಳಗಾನೂರಿನ ಚಿಕ್ಕೇನಕೊಪ್ಪ ಮಠಕ್ಕೆ ಬಂದು ನೆಲೆಸಿದ ನಂತರವೇ ಅವರ ದಿವ್ಯ ತಪಃಶಕ್ತಿ ಮತ್ತು ಪವಾಡಗಳು ಜನಸಾಮಾನ್ಯರಿಗೆ ತಿಳಿಯತೊಡಗಿದವು. ಹೀಗಾಗಿ ಅವರ ತಂದೆ, ತಾಯಿ ಅಥವಾ ಬಾಲ್ಯದ ಲೌಕಿಕ ವಿವರಗಳು ಮರೆಯಾಗಿ, ಅವರು ಕೇವಲ “ಚಿಕ್ಕೇನಕೊಪ್ಪದ ಶರಣರು” ಎಂದೇ ಪ್ರಸಿದ್ಧರಾದರು. ಸಾಹಿತ್ಯದಲ್ಲಿ ಉಲ್ಲೇಖ: ಪಂ. ಪುಟ್ಟರಾಜ ಗವಾಯಿಗಳು ಬರೆದಿರುವ ಚಿಕೇನಕೊಪ್ಪದ ಚೆನ್ನವೀರ ಶರಣರ ಪುರಾಣ ಗ್ರಂಥದಲ್ಲಿಯೂ ಇವರ ಅಧ್ಯಾತ್ಮಿಕ ಸಾಧನೆ, ಪವಾಡಗಳು ಮತ್ತು ಸಮಾಜ ಮುಖಿ ಸೇವೆ ಬಗ್ಗೆ ಹೇಳಿದ್ದಾರೆಯೇ ಹೊರತು ಅವರ ಪೂರ್ವಾಶ್ರಮದ ಬಗ್ಗೆ ಮಾಹಿತಿ ನೀಡಿಲ್ಲ. ಚಿಕ್ಕೇನಕೊಪ್ಪದ ಮಹಾನ್ ತಪಸ್ವಿ ಶ್ರೀ ಚನ್ನವೀರ ಶರಣರ ನಿಖರವಾದ ಹುಟ್ಟಿದ ದಿನಾಂಕ ಮತ್ತು ವರ್ಷ ಇತಿಹಾಸದ ದಾಖಲೆಗಳಲ್ಲಿ ಎಲ್ಲೂ ಲಭ್ಯವಿಲ್ಲ. ಅವರು ಒಬ್ಬ ಸಿದ್ಧ ಪುರುಷರಾಗಿದ್ದು, ಸಂಸಾರ ಹಾಗೂ ಕಾಲದ ಗಡಿಯಿಂದ ದೂರವಿದ್ದ ಕಾರಣ ಅವರ ಬಾಲ್ಯ ಮತ್ತು ಜನನದ ವಿವರಗಳು ಬೆಳಕಿಗೆ ಬಂದಿಲ್ಲ. ಅವರ ಮಹಾಸಮಾಧಿ (ಮರಣ) ಹಾಗೂ ಪುಣ್ಯಸ್ಮರಣೆಯ 1. ಮರಣ / ಲಿಂಗೈಕ್ಯರಾದ ವಿವರ ಲಿಂಗೈಕ್ಯರಾದ ತಿಂಗಳು: ಶ್ರೀ ಚನ್ನವೀರ ಶರಣರು 1995 ಜನೆವರಿ ತಿಂಗಳ ಅವಧಿಯಲ್ಲಿ ಲಿಂಗೈಕ್ಯರಾದರು (ಮಹಾಸಮಾಧಿ ಹೊಂದಿದರು).: ಘನಮೌನಿಗಳು: ಶರಣರನ್ನು ಇತಿಹಾಸದಲ್ಲಿ “ಘನಮೌನಿ ಚಿಕ್ಕೇನಕೊಪ್ಪದ ಚನ್ನವೀರ ಶರಣರು” ಎಂದು ಕರೆಯಲಾಗುತ್ತದೆ. ಅವರು ಮೌನವ್ರತವನ್ನು ಆಚರಿಸುತ್ತಿದ್ದರಿಂದ ತಮ್ಮ ಜನ್ಮ ವೃತ್ತಾಂತವನ್ನು ಯಾರೊಂದಿಗೂ ಹಂಚಿಕೊಳ್ಳಲಿಲ್ಲ. ದೈವೀಪುರುಷ: ಭಕ್ತರ ನಂಬಿಕೆಯ ಪ್ರಕಾರ, ಅವರು ಯಾವುದೇ ಸಾಮಾನ್ಯ ಮನುಷ್ಯನಂತೆ ಹುಟ್ಟು-ಸಾವಿನ ಬಂಧನಕ್ಕೆ ಒಳಗಾಗದೆ, ಕೇವಲ ಲೋಕ ಕಲ್ಯಾಣಕ್ಕಾಗಿ ಬಂದು ಮಠದಲ್ಲಿ ನೆಲೆಸಿದ ದೈವೀ ಸ್ವರೂಪಿಯಾಗಿದ್ದರು.ಪ್ರತಿ ವರ್ಷ ಜನೆವರಿ ತಿಂಗಳಲ್ಲಿ ನಡೆಯುವ ಅವರ ಪುಣ್ಯಸ್ಮರಣೆಯ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಂಡು ಶರಣರ ಗದ್ದುಗೆಯ ದರ್ಶನ ಪಡೆಯುತ್ತಾರೆ. ಸಮಾಜಮುಖಿ ಕಾರ್ಯಕ್ರಮಗಳನ್ನು ನಿಯೋಜಿಸುವ ಮೂಲಕ ಬಸವ ತತ್ವ ಪ್ರಸಾರ ಮಾಡಿದರು. ಮೌನವೇ ತಪಸ್ಸು ಮಾತು ಬೆಳ್ಳಿ ಮೌನ ಬಂಗಾರ ಎಂದು ತಿಳಿದು ಭಕ್ತರಿಗೆ ಸಂದೇಶ ನೀಡುತ್ತಿದ್ದರು. ಒಬ್ಬ ಶ್ರೇಷ್ಠ ಶಿವಯೋಗ ಸಾಧಕರು. ಸಾವಿಲ್ಲದ ಶರಣರು. ಬಸವ ಮಾರ್ಗದ ರೂವಾರಿಗಳು ಚಿಕ್ಕೇನಕೊಪ್ಪದ ಶರಣರು. _______________________ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ
ಅಂಕಣ ಸಂಗಾತಿ ಜ್ಯೋತಿ ಡಿ ಬೊಮ್ಮಾ ಮನದ ಮಾತುಗಳು ನಶೆ ಮುಕ್ತರಾಗಲಿ ಯುವಜನತೆ ಈ ವಾರ ಮಾದಕ ವ್ಯಸನ ನಿವಾರಣಾ ಸಪ್ತಾಹ ಆಚರಿಸಲಾಯಿತು. ಕುಡಿತ ಮತ್ತು ಮಾದಕ ಪದಾರ್ಥಗಳ ವ್ಯಸನ ಯುವ ಪಿಳಿಗೆಗೆ ಒಂದು ಶಾಪ.ಯಾವಾಗ ವ್ಯಸನಕ್ಕ ಬಲಿ ಆಗ್ತಾರ ಅಂತ ಗೊತ್ತಾಗಲ್ಲ.ಗೊತ್ತಾಗುವಷ್ಟರಲ್ಲಿ ವ್ಯಸನಿಗಳಾಗಿ ಅದರಿಂದ ಹೊರ ಬರಲಾರದವರಾಗಿರತಾರ.ಇತ್ತೀಚಿಗೆ ಲಡಾಖ್ ಪ್ರವಾಸ ಹೋಗಿದ್ಧ.ಇಷ್ಟು ದಿನ ಅಲ್ಲಿ ಮದ್ಯಪಾನಕ್ಕ ಅವಕಾಶ ಇರಲಿಲ್ಲ.ಈಗ ಸರ್ಕಾರ ಅವಕಾಶ ಮಾಡಕೊಟ್ಟದ.ಅದರ ಅಗತ್ಯ ಇರಲಿಲ್ಲ ನಿಜ.ಆದ್ರ ಸರ್ಕಾರ ಕ್ಕ ಮದ್ಯ ಮಾರಾಟ ಒಂದು ದೊಡ್ಡ ಆದಾಯ.ಬ್ಯಾರೆ ಬಿಸಿನೆಸ್ ನಿಂದ ಬರುವ ಟ್ಯಾಕ್ಸ್ ಗಿಂತ ಮದ್ಯ ಮಾರಾಟದಿಂದ ಬರುವ ಟ್ಯಾಕ್ಸ್ ಸರ್ಕಾರ ಕ್ಕ ಉಪಯೋಗ. ಆದ್ರ ಇದರಿಂದ ಆಗುವ ಉಪಯೋಗ ಅನುಪಯೋಗ ಜನ ಸಾಮಾನ್ಯರು ಚರ್ಚಿಸಬೇಕು.ಅಲ್ಲಿ ಇರುವದು ದಯಡಿಯುವ ವರ್ಗ.ಗಳಿಸಿದ ದುಡ್ಡಲ್ಲಿ ಸಂಸಾರ ನೋಡಕೊಂಡು ಆರಾಮ ಇದ್ರು.ಈಗ ಮದ್ಯ ಅವರಿಗೆ ಅಧಪತನಕ್ಕ ಕರೆದೊಯ್ಯತದ. ಸುಲಭವಾಗಿ ಸಿಗುವದರಿಂದ ದುಡಿದ ತಮ್ಮ ದಣಿವು ಪರಿಹಾರ ಮಾಡಕೊಳ್ಳಾಕ ಮದ್ಯದ ಮೊರೆ ಹೋಗತಾರ.ಕ್ರಮೇಣ ವ್ಯಸನಿಗಳಾಗತಾರ.ಆದ್ರ ಅಲ್ಲಿನ ಸರ್ಕಾರ ದವರ ಹೆಳಿಕೆ ಬ್ಯಾರೆ.ಯುವ ಜನ ಬ್ಯಾರೆ ಬ್ಯಾರೆ ನಶೆ ಪದಾರ್ಥ ಉಪಯೋಗಿಸಿ ಹಾಳಾಗುವದನ್ನು ತಡೆಯಲು ಮದ್ಯ ಮಾರಾಟದ ಪರವಾನಿಗೆ ಕೊಡಲಾಗಿದೆ ಎಂದು ಹೇಳತಾರಂತೆ.ಒಂದು ವ್ಯಸನಕ್ಕೆ ಮತ್ತೊಂದು ವ್ಯಸನ ಪರ್ಯಾಯ ಆಗಲ್ಲ.ಮದ್ಯ ಮಾರಾಟ ಮುಕ್ತ ರಾಜ್ಯಗಳು ಇವೆ.ಸಿಗಲಾರದು ಎಂದು ಜನ ಅದರ ಗೋಜಿಗೆ ಹೋಗದಿರಬಹುದು.ಉಳ್ಳವರು ಬೇರೆ ವ್ಯವಸ್ಥೆ ಮೂಲಕ ತರಿಸಿಕೊಂಡು ಕುಡಿಬಹುದು. ಆದ್ರೆ ಮುಕ್ತವಾಗಿ ಸಿಗುವದರಿಂದ ಆಗುವ ಅಧಪತನ , ಸಿಗದಿದ್ದಾಗ ಆಗದು.ಅದಕ್ಕೆ ಮದ್ಯ ಮಾರಾಟದ ನಿಷೇಧ ಒಳ್ಳೆದು. ಒಮ್ಮೆ ಓದಿದ ನೆನಪು.ಝೆನ್ ಝಿ ಗಳು ಕುಡಿಯುವದಕ್ಕ ಅಷ್ಟು ಒಲವು ತೊರಿಸುತ್ತಿಲ್ಲ ಎಂದು. ಆದ್ರ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮುಕ್ತ ವಾಗಿ ಮದ್ಯ ಮತ್ತು ಗಾಂಜಾ ಇತರ ಮಾದಕ ಪದಾರ್ಥಗಳ ಸೇವನೆ ಮಾಡತಾರೆ.ಇಂಜಿನಿಯರಿಂಗ್ , ವೈದ್ಯಕೀಯ ವಿದ್ಯಾರ್ಥಿಗಳೆ ಇದಕ್ಕೆ ಹೆಚ್ಚು ಬಲಿ ಆಗತಿದ್ದಾರೆ.ಯೌವನದ ಅಮಲಿನಲ್ಲಿ ಏನು ಮಾಡಿದ್ರು ನಡಿತದ ಎಂಬ ದೋರಣೆ. ಗೆಳೆಯರೊಂದಿಗೆ ಸೇರಿ ಒಂದು ಹೊಸ ಅನುಭವ ಎಂದು ಶುರು ಮಾಡುವದು ಯಾವಾಗ ತಮಗ ವ್ಯಸನ ಆಗತದ ಎಂದು ಅರಿವಾಗುವಷ್ಟರಲ್ಲಿ ಅದರಿಂದ ಹೊರ ಬರಲಾರದವರಂಗ ಆಗಿರತಾರ.ಹಾಗಂತ ಎಲ್ಲ ವಿದ್ಯಾರ್ಥಿಗಳು ವ್ಯಸನಿಗಳೆ ಅಂತ ಹೆಳಕ್ಕಾಗಲ್ಲ.ತಮ್ಮ ಬುದ್ಚಿಯ ಸೀಮೀತದಲ್ಲಿ ಇರುವವರು ಮಾದಕ ವಸ್ತು ಗಳನ್ನು ಒಂದು ಪ್ರಯೋಗವಾಗಿ ಉಪಯೋಗಿಸಿಕೊಂಡು ಬಿಡತಾರ.ಅದನ್ನೆ ದಿನಚರಿ ಮಾಡಿಕೊಂಡವರ ವ್ಯಸನ ಬಿಡಿಸೋದು ಕಷ್ಟ. ಕಾಲೇಜ್ ಯುನಿವರ್ಸಿಟಿ ಗಳಲ್ಲಿ ಮಾದಕ ವಸ್ತುಗಳನ್ನು ಎಲ್ಲಿಂದ ತರತಾರ..! ಇವುಗಳನ್ನು ನಿಯಂತ್ರಣ ಮಾಡಲು ಅಲ್ಲಿನ ಸಿಬ್ಬಂದಿ ಪ್ರಯತ್ನ ಮಾಡಬಹುದು . ಆದ್ರ ವಿದ್ಯಾರ್ಥಿಗಳು ಕದ್ದು ಮುಚ್ಚಿ ಮಾಡುವ ವ್ಯಸನಕ್ಕ ಅವರು ಕುರುಡಾಗಿರತಾರ ಅಂತ ಕಾಣತದ.ನನ್ನ ಮಗ ಕಲಿಯುವ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಗಾಂಜಾ ಮತ್ತಿತರ ನಶೆ ಪದಾರ್ಥಗಳನ್ನು ಉಪಯೋಗಿಸುವದನ್ನು ಹೇಳತಿರತಾನೆ.ಅದು ಕೆಟ್ಟದ್ದು ಎಂದು ಅವರಿಗೂ ಗೊತ್ತು.ಆದ್ರೂ ಯೌವನದ ಹುರುಪು.ಈಗಲ್ಲದಿದ್ರೆ ಮಜಾ ಮತ್ಯಾವಾಗ ಮಾಡೋದು , ಒಂದು ಸಲ ಮಾಡಿ ನೋಡೋಣ , ಹೀಗೆ ಒಂದು ಪ್ರಯೋಗವಾಗಿ ಶುರುಮಾಡತಾರೆ. ಮಾದಕ ಪದಾರ್ಥಗಳ ಬಗ್ಗೆ ನಮಗೆ ಗೊತ್ತಿರುವದಕ್ಕಿಂತ ಹೆಚ್ಚು ನಮ್ಮ ಮಕ್ಕಳಿಗೆ ಗೊತ್ತಿರತದ. ಅದರಿಂದ ಆಗುವ ದುಷ್ಪರಿಣಾಮ ಗಳ ಬಗ್ಗೆಯೂ ತಿಳಿದಿರತದ.ನಾವು ಅವರಿಗೆ ಎಚ್ಚರಿಕೆ ಕೊಡಬಹುದು.ಆದ್ರ ನಿಯಂತ್ರಿಸಲಿಕ್ಕ ಆಗಲ್ಲ.ಅದರ ಪರಿಣಾಮ ದುಷ್ಪರಿಣಾಮ ಸ್ವತಃ ಅವರು ತಿಳಕೊಂಡು ತಮ್ಮನ್ನು ತಾವು ನಿಯಂತ್ರಣ ಮಾಡಕೊಳ್ಳಬೇಕು. ನಶೆ ಪದಾರ್ಥಗಳ ಬಳಕೆ ಮಾಡುವುದು ಬೇಡ ಅಂತ ಎಲ್ಲಾ ಹೆತ್ತವರಂತೆ ನಾನು ನನ್ನ ಮಕ್ಕಳಿಗೆ ಹೇಳತೇನೆ.ಆದ್ರ ಬೇಡವೇ ಬೇಡ ಅಂತ ಹೆಳಲಾರೆ.ಗೆಳೆಯರ ಸಂಗಡ ಅವರು ಬೆರೆತು ಅವರಿಷ್ಟ ಇದ್ರೆ ಉಪಯೋಗಿಸಲಿ , ಎಚ್ಚರಿಕೆ ಮಾತ್ರ ಸದಾ ಇರಲಿ ಎಂಬುದು ಸೂಚಿಸತೆನ ಯುವ ಜನ ಮದ್ಯಕ್ಕಿಂತ ಇತರ ನಶೆ ಪದಾರ್ಥ ಗಳಿಗೆ ಬಲಿ ಆಗತಿರೋದು ಶೋಚನೀಯ.ಇಂತಹ ನಶೆಗಳು ದೇಶವಿದೇಶಗಳ ನೆಲದಲ್ಲಿ ಸಾಂಕ್ರಾಮಿಕ ವಾಗಿ ವ್ಯಾಪಿಸತಿವೆ. ಇವುಗಳನ್ನು ತೆಡಯಲು ಪೋಲಿಸ್ ಪಡೆಗಳು ಶ್ರಮಿಸಬೇಕು.ಕಾಲೇಜ್ ಗಳಲ್ಲಿ ವಿದ್ಯಾರ್ಥಿ ಗಳ ಕೈಗೆ ಸಿಗದಂಗ ನಿಯಂತ್ರಿಸಬೇಕು. ಆದ್ರ ಈಗಿನ ಸಿನಿಮಾಗಳಲ್ಲಿ ಹೀರೋ ಸಿಗರೇಟ್ ಮತ್ತು ಡ್ರಗ್ ವ್ಯಸನಿ ಆಗಿರತಾನ.ಅವನನ್ನು ಹೀರೋ ಅನ್ನತೀವಿ.ಇಂತಹ ಹೀರೋಗಳು ಸಮಾಜಕ್ಕ ಏನು ಸಂದೇಶ ಕೊಡತಾರ..ಈಗಿನ ಎಲ್ಲಾ ಸಿನಿಮಾಗಳಲ್ಲೂ ಹೀರೋ ನ್ ಕೈಯಲ್ಲಿ ಉರಿಯುವ ಸಿಗರೇಟ್ ಇರತದ. ಮುಂದಿನ ಎರಡ್ಮೂರು ವರ್ಷಗಳಲ್ಲಿ ನಮ್ಮ ರಾಜ್ಯ ವ್ಯಸನ ಮುಕ್ತವಾಗಿ ಮಾಡಲಾಗತದ ಅಂತ ಸರ್ಕಾರ ಹೆಳ್ಯಾದ.ಒಳ್ಳೆದು.ನಶೆ ಪದಾರ್ಥಗಳು ವಿದ್ಯಾರ್ಥಿ ಗಳ ಕೈಗೆ ಸಿಗದಂಗ ಮೊದಲು ನಿಯಂತ್ರಿಸಬೇಕು.ನಶೆ ಪದಾರ್ಥಗಳು ನಮ್ಮ ರಾಜ್ಯದಲ್ಲಿ ತಯ್ಯಾರಾಗದಂತೆ , ಹೊರಗಿನಿಂದ ಬರದಂತೆ ನಿಯಂತ್ರಣ ಮಾಡೊದು ಮುಖ್ಯ. ಮದ್ಯ ಮತ್ತು ಇತರ ಮಾದಕ ಪದಾರ್ಥ ಗಳಲ್ಲಿ ಬಹಳ ವ್ಯತ್ಯಾಸ ಇರತದಂತ.ಮದ್ಯಕ್ಕಿಂತ ಹತ್ತು ಪಟ್ಟು ಹೆಚ್ಚು ದುಷ್ಪರಿಣಾಮ ಆಗತದಂತ ಈ ಮಾದಕ ವಸ್ತುಗಳನ್ನು ಉಪಯೋಗಿಸುವ ದರಿಂದ.ಗೊತ್ತಿರಲಾರದವ್ರು ಯಾರೂ ಇಲ್ಲ ಈಗ.ಗೊತ್ತಿದ್ರೂ ಒಂದು ಸಲ ನೋಡೊಣ ಎಂಬ ಪ್ರಯೋಗ ಯುವಜನತೆಯ ಆಸೆ.ಇದೇ ಕ್ರಮೇಣ ವ್ಯಸನ ಆಗೊದು ದುರಂತ. ವಿದ್ಯಾರ್ಥಿಗಳು ಜಸ್ಟ್ ಫನ್ ಎಂದು ಶುರುಮಾಡುವ ನಶೆಗಳು ಅವರ ಜೀವಕ್ಕೆ ಮಾರಕ ಆಗತಾವೆ ಅಂತ ಅರ್ಥಾಗಲ್ಲ.ಆದರೂ ಒಂದು ಸಮಾಧಾನ.ಈಗೀನ ವಿದ್ಯಾರ್ಥಿಗಳು ತಮ್ಮ ಜೀವನದ ಒಳ್ಳೆದು ಕೆಟ್ಟದ್ದು ತಾವೇ ನಿರ್ಧರ ಮಾಡ್ತಾರ.ಅವರಲ್ಲಿ ವಿವೇಚನೆ ಅದ.ದೊಡ್ಡ ನಗರಗಳಲ್ಲಿ ಪಬ್ ಗಳಲ್ಲಿ ಕಾಣುವ ಯುವಕ ಯುವತಿಯರೆಲ್ಲ ಹೆಚ್ಚಾಗಿ ಸ್ವಾವಲಂಬಿ ಗಳು. ವ್ಯಸನದ ಪರಿಣಾಮ ಬಲ್ಲವರು, ತಮ್ಮ ಮಿತಿಯಲ್ಲಿ ಜೀವನವನ್ನು ಎಂಜಾಯ್ ಮಾಡುವದಕ್ಕೆ ಆಕ್ಷೇಪ ಮಾಡಲಾಗದು.ಆದ್ರೆ ದುಡಿಯುವ ವರ್ಗದ ವ್ಯಸನಿಗಳ ಜೀವನ ಶೋಚನೀಯ.ಮಾದಕವಸ್ತು ನಿಯಂತ್ರಣ ಮಾಡುವದೆ ಇದಕ್ಕೆಲ್ಲ ಪರಿಹಾರ. ಜ್ಯೋತಿ ಡಿ ಬೊಮ್ಮಾ






