Category: ಅಂಕಣ

ಅಂಕಣ

ಅವ್ಯಕ್ತಳ ಅಂಗಳದಿಂದ

ದೌರ್ಬಲ್ಯ-ಸಾಮರ್ಥ್ಯ -2 ಅವ್ಯಕ್ತ ನನ್ನ ಹಿಂದಿನ ಕಥೆಯಲ್ಲಿ ಹೇಳಿದ ರೀತಿ ನಮ್ಮ ದೃಷ್ಟಿಕೋನ ದಲ್ಲಿ ಬದಲಾವಣೆಯಾದಂತೆ ನಮ್ಮ ದೌರ್ಬಲ್ಯಗಳು ನಮ್ಮ ಸಾಮರ್ಥ್ಯಗಳಾಗಿ ಬದಲಾಗುತ್ತವೆ….. ಇದಕ್ಕೆ ಅಂಟಿಕೊಂಡಂತೆ ಇನ್ನೊಂದು ಕಥೆಯನ್ನು ಎಳೆ ಎಳೆಯಾಗಿ ಬಿಡಿಸಿ ತಿಳಿದುಕೊಳ್ಳಲು ಪ್ರಯತ್ನಿಸೋಣ… ಸಾಮಾನ್ಯವಾಗಿ ಮಕ್ಕಳು ಅಥವಾ ಕೆಲವು ದೊಡ್ಡವರು ತಮಗೆಲ್ಲ ತಿಳಿದಿದೆ ಎಂದು ಪ್ರತಿಯೊಂದು ಘಟನೆಯನ್ನು ಪ್ರತಿಯೊಬ್ಬರನ್ನು ಸರಿ-ತಪ್ಪುಗಳಲ್ಲಿ, ಒಳ್ಳೆಯದು-ಕೆಟ್ಟದ್ದು ಗಳಲ್ಲಿ ತೂಗಿ ತಮ್ಮ ಹಳೆಯ ಅನುಭವಗಳ ಮೇರೆಗೆ ಅವರದೇ ಆದ ಒಂದು ದೃಷ್ಟಿಕೋನವನ್ನು ಮಾಡಿಕೊಂಡು ಬಿಡುತ್ತಾರೆ.. ಅವರಿಗೆ ಅದೇ ಸರಿ…ಈ ನಿಟ್ಟಿನಲ್ಲಿ […]

ಜ್ಞಾನಪೀಠ ಪ್ರಶಸ್ತಿ ವಿಜೇತರು

ದ.ರಾ.ಬೇಂದ್ರೆ ಕೆ.ಶಿವು ಲಕ್ಕಣ್ಣವರ ವರ ಕವಿ ದ. ರಾ. ಬೇಂದ್ರೆಗೆ ಅಂಬು ತಾಯಿಯೇ ಬದುಕಿನ ಮೊದಲ ಪ್ರೇರಕ ಶಕ್ತಿ..! ಈ ಅಂಬು ತಾಯಿಯ ನೆನಪಿನಲ್ಲಿ ದ.ರಾ.ಬೇಂದ್ರೆಯವರು ‘ಅಂಬಿಕಾತನಯದತ್ತ’ವಾದರು… ಈ ಅಂಬಿಕಾತನಯದತ್ತ ಕಾವ್ಯನಾಮದಿಂದ ಕನ್ನಡಿಗರ ಮನೆಮಾತಾಗಿರುವ ದತ್ತಾತ್ರೆಯ ರಾಮಚಂದ್ರ ಬೇಂದ್ರೆಯವರು 31ನೆ ಜನವರಿ 1896ರಂದು ಧಾರವಾಡದ ಪೋತನೀಸರ ಓಣಿಯಲ್ಲಿರುವ ಗುಣಾರಿಯವರ ಮನೆಯಲ್ಲಿ ಹುಟ್ಟಿದರು. ಅವರ ತಂದೆ ರಾಮಚಂದ್ರ ಪಂತರು. ತಾಯಿ ಅಂಬೂ ತಾಯಿ. ತಂದೆಯವರು ತೀರಿಕೊಂಡ ಮೇಲೆ ತನ್ನ ಇನ್ನೊಬ್ಬ ಚಿಕ್ಕಪ್ಪ ಬಂಡೋಪಂತರ ಆಶ್ರಯದಲ್ಲಿ ಬೇಂದ್ರೆಯವರ ಬಡ ಕುಟುಂಬ […]

ಅವ್ಯಕ್ತಳ ಅಂಗಳದಿಂದ

ದೌರ್ಬಲ್ಯದ ಸಾಮರ್ಥ್ಯ ಅವ್ಯಕ್ತ ದೌರ್ಬಲ್ಯದ ಸಾಮರ್ಥ್ಯ ಇವತ್ತಿನ ಕಥೆಯ ವಿಶೇಷವೇ ಹೆಚ್ಚಿನ ಮಕ್ಕಳಲ್ಲಿ ಕಂಡುಬರುವ ತಳಮಳ, ನೋವು-ನಲಿವುಗಳಿಗೆ ಕಾರಣವಾಗುವುದು. ನಾನು ಗಮನಿಸಿದ ಹಾಗೆ ಈ ಸಮಸ್ಯೆ ಎಂಟನೇ ಕ್ಲಾಸಿನ ಪ್ರೌಢ ಮಕ್ಕಳಲ್ಲಿ ಶುರುವಾದರೆ ಎಲ್ಲಿಯವರೆಗೆ ಬೇಕಿದ್ದರೂ ಹೋಗಬಹುದು. ಇವತ್ತಿನ ದಿನ ನಾನೊಂದು ಸಹಜವಾದ ಸಮಸ್ಯೆಯನ್ನು ತೆಗೆದುಕೊಂಡು ಮಕ್ಕಳಲ್ಲಿ ಮಾತನಾಡುವ ಎಂದು ಶುರುಮಾಡಿದೆ. ಅಲ್ಲಿ ಕ್ಲಾಸಲ್ಲಿದ್ದ ಎಲ್ಲ ಮಕ್ಕಳಿಗೂ ಒಂದು ಅಸೈನ್ಮೆಂಟ್ ಕೊಟ್ಟೆ.. ಎಲ್ಲರೂ ಒಂದು ಚೀಟಿ ತೆಗೆದುಕೊಂಡು ನಿಮಗೆ ಸಹಜವಾಗಿ ನೋವುಂಟುಮಾಡುವ ಬೇರೆಯವರ ಟೀಕೆ ಟಿಪ್ಪಣಿಗಳನ್ನು 4 […]

ಜ್ಞಾನಪೀಠ ಪ್ರಶಸ್ತಿ ವಿಜೇತರು

ವಿಶ್ವ ಮಾನವ” ಬರಹಗಾರ ಕುವೆಂಪು..! ಕೆ.ಶಿವು ಲಕ್ಕಣ್ಣವರ ವಿಶ್ವ ಮಾನವ” ಬರಹಗಾರ ಕುವೆಂಪು..! ಮಲೆನಾಡಿನ ಹಿಂದುಳಿದ ವರ್ಗದಿಂದ ಹುಟ್ಟಿ ಬಂದ ಕುವೆಂಪು ಅವರು ತಾವೇ ಹೇಳಿಕೊಂಡಂತೆ ಮಲೆನಾಡಿನ ಕವಿ. ಕುವೆಂಪು ಅವರು ಈ ದೇಶದ ಸಮಕಾಲೀನ ಸೃಜನಶೀಲತೆಯ ಉತ್ಕರ್ಷದ ನಿಜವಾದ ಪ್ರತಿನಿಧಿಯಾಗಿದ್ದಾರೆ. ಅವರ ಸಾಹಿತ್ಯದ ಹರಹು, ವೈವಿದ್ಯ ಮತ್ತು ಎತ್ತರಗಳು ಅವರು ಮೂಡಿಬಂದ ಸಹ್ಯಾದ್ರಿಯ “ಪರ್ವತಾರಣ್ಯ ಪ್ರಪಂಚ”ದಂತೆ ಬೆರಗು ಹುಟ್ಟಿಸುತ್ತದೆ. ಅವರ ಮಹಾಕಾವ್ಯ , ಕಾದಂಬರಿ, ನಾಟಕ, ಕವಿತೆ ಈ ಅರಣ್ಯಾನುಭವಗಳೇ ಮೂಲದ್ರವ್ಯದಂತೆ ಸರ್ವವ್ಯಾಪಿಯಾಗಿದೆ. ಅವರ ಬಹುತೇಕ […]

ಮಾಸದ ನೆನಪು

ನಾನು ಕಂಡ ಹಿರಿಯರು ಅರ್ಥವಿದ:ಎಚ್ಚೆಸ್ಕೆ ಡಾ.ಗೋವಿಂದ ಹೆಗಡೆ ಅರ್ಥವಿದ:ಎಚ್ಚೆಸ್ಕೆ (೧೯೨೦-೨೦೦೮) ಮೈಸೂರಿನಲ್ಲಿ ಎಂ ಬಿ ಬಿ ಎಸ್ ಓದುತ್ತಿದ್ದೆ.೧೯೮೭ರಲ್ಲಿ ಇರಬಹುದು,’ಗ್ರಾಮಾಂತರ ಬುದ್ಧಿಜೀವಿಗಳ ಯುವ ಬಳಗ,ಭೇರ್ಯ’ ಎಂಬ ಸಂಘಟನೆ ಕವಿಗೋಷ್ಠಿಯನ್ನು ಏರ್ಪಡಿಸಿತ್ತು.’ಕವನ ತನ್ನಿ,ಓದಿ!”ಎಂಬ ಕೋರಿಕೆಯೂ ಇತ್ತು.ಸರಿ,ನಾನೂ ಭಾಗವಹಿಸಿದೆ. ಹಿರಿಯ ಬರಹಗಾರರಾದ ಸಿ.ಭೈರವಮೂರ್ತಿ ಸಭೆಯಲ್ಲಿ ಇದ್ದ ನೆನಪು. ಮರು ತಿಂಗಳ ಕಾರ್ಯಕ್ರಮಕ್ಕೆ ಪತ್ರ ಮೂಲಕ ಆಹ್ವಾನ ಬಂತು. ಹಿರಿಯ ಲೇಖಕ ಎಚ್ಚೆಸ್ಕೆ ಇರುತ್ತಾರೆ ಎಂಬ ಮಾತಿತ್ತು. ಸರಿ, ನಾನು ಹೋದೆ. ಹಳೆಯ ಕಾಲದ ಮನೆ. ಈಗ ಶಿಶುವಿಹಾರವೋ ಏನೋ ಆಗಿತ್ತು. […]

ಅವ್ಯಕ್ತಳ ಅಂಗಳದಿಂದ

ಅವ್ಯಕ್ತಳ ಅಂಗಳದಿಂದ ಅವ್ಯಕ್ತ ಎಲ್ಲಾ ಮಕ್ಕಳ ರಿಸಲ್ಟ್ ಗಳು ಒಂದಾದಮೇಲೊಂದು ಮೆಸೇಜ್ ಗಳಾಗಿ ನನ್ನ ಬಳಿ ಬರುತ್ತಿವೆ, ಕೆಲವು ಮೆಸೇಜ್ ಗಳು, ಕೆಲವು ಮುಖಗಳು, ಪ್ರಸನ್ನತೆಯ ಅಲೆಗಳು, ಸ್ವೀಟಿನ ಡಬ್ಬಗಳು, ಕೃತಜ್ಞತೆಗಳು,ಕಥೆಗಳು ಒಂದಾದಮೇಲೊಂದು ಸಿಹಿ ಸುದ್ದಿಗಳು ಎಳೆ ಎಳೆಯಾಗಿ ಹರಿದುಬಂದರೆ ನನಗೆ ಮಾತ್ರ ಮನಸ್ಸಿನಲ್ಲೊಂದು ಆತಂಕ! ಮುಖದಲ್ಲಿ ನಗುವಿದ್ದರೂ ಬಾಯಿ ತುಂಬಾ ಆಶೀರ್ವಾದಗಳಿದ್ದರೂ ಅವಳ ರಿಸಲ್ಟ್ ಏನಾಯ್ತು?! ಇನ್ನೂ ವಿಷಯ ಬರಲಿಲ್ಲವಲ್ಲ ಎಂಬುದು ಮಾತ್ರ ಮನಸಲ್ಲಿ ಬೇರೂರಿತ್ತು. ಬರುವ ಮಕ್ಕಳನ್ನೆಲ್ಲಾ ಕೇಳುವುದು “ಅವಳ ರಿಸಲ್ಟ್ ಏನಾಯ್ತು?” “ಯಾರಿಗಾದರೂ […]

ಸ್ವಾತ್ಮಗತ

ಕನ್ನಡದ ಪ್ರಸಿದ್ಧ ಗಜಲ್ ಕೃತಿಕಾರ ಶಾಂತರಸ ಹೆಂಬೆರಳುರರೂ..! ಕೆ.ಶಿವು ಲಕ್ಕಣ್ಣವರ ಕನ್ನಡದ ಪ್ರಸಿದ್ಧ ಗಜಲ್ ಕೃತಿಕಾರ ಶಾಂತರಸ ಹೆಂಬೆರಳುರರೂ..! ಹಾಗೂ ಅಪ್ಪನ ಕುರಿತ ಇವರ ಮಗಳು ಭಾರತಿ ಮೋಹನ ಕೋಟಿಯವರ ಆಲಾಪನೆಯೂ..!! ಕನ್ನಡದ ಪ್ರಸಿದ್ಧ ಗಜಲ್ ಕವಿ. ಇವರು ಕನ್ನಡದ ಹೆಸರಾಂತ ಸಾಹಿತಿ. ಇವರು ೧೯೯೨ರಲ್ಲಿ ತಮಗೆ ನೀಡಲಾಗಿದ್ದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಭ್ರಷ್ಟ ಸರಕಾರ, ಜನೋಪಯೋಗಿಯಗಿಲ್ಲದ ಸರಕಾರದಿಂದ ಪ್ರಶಸ್ತಿ ಪಡೆಯುವುದಿಲ್ಲವೆಂದು ಹೇಳಿ ತಿರಸ್ಕರಿಸಿದ್ದರು. ಇವರು ೨೦೦೬ರಲ್ಲಿ ಬೀದರದಲ್ಲಿ ಜರುಗಿದ ೭೩ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. […]

ನಾನು ಕಂಡ ಹಿರಿಯರು

ನಂಜುಂಡು ನಗು ಹಂಚಿದ ಪರಮೇಶ್ವರ: ಎಸ್. ವಿ. ಪಿ. ಡಾ.ಗೋವಿಂದ ಹೆಗಡೆ ಇಂದು ಫೆಬ್ರವರಿ ೮, ಹಲವು ರೀತಿಗಳಲ್ಲಿ ಕನ್ನಡದ ತೇರನ್ನು ಕಟ್ಟಿದ ಪ್ರೊ ಎಸ್ ವಿ ಪರಮೇಶ್ವರ ಭಟ್ಟರ ಜನ್ಮದಿನ. ಆ ಪ್ರಯುಕ್ತ ಕನ್ನಡದ ಕಟ್ಟಾಳುವಿಗೆ ನಮನಗಳನ್ನು ಸಲ್ಲಿಸುತ್ತ ಅವರ ನೆನಪಿನ ಈ ಬರಹ. ನಂಜುಂಡು ನಗು ಹಂಚಿದ ಪರಮೇಶ್ವರ: ಎಸ್. ವಿ. ಪಿ. (೧೯೧೪-೨೦೦೦) ೧೯೮೫-೮೯ರವರೆಗೆ , ಮೈಸೂರಿನಲ್ಲಿ ಎಂ ಬಿ ಬಿ ಎಸ್ ಓದುತ್ತಿದ್ದಾಗ ಅಲ್ಲಿನ ತಾತಯ್ಯನವರ ವಿದ್ಯಾರ್ಥಿನಿಲಯ ‘ಅನಾಥಾಲಯ’ದಲ್ಲಿ ವಾಸವಾಗಿದ್ದೆ. ಆರ್ಥಿಕವಾಗಿ […]

ಅಂಕಣ

ಅವ್ಯಕ್ತಳ ಅಂಗಳದಿಂದ ಅವ್ಯಕ್ತ ಸಹಾನುಭೂತಿ, ತಳಮಳಗಳನ್ನು ತಿಳಿಗೊಳಿಸುತ್ತದೆ… ನಂಬಿಕೆ ಸತ್ಯವನ್ನು ಹೊರತರುತ್ತದೆ… ಸ್ವಾತ್ಮಾರೂಪ ಧರ‍್ಯದ ಬೀಜವನ್ನು ಬಿತ್ತುತ್ತದೆ… ನರ‍್ಭಯತೆ ಸ್ವಾತಂತ್ರ‍್ಯವನ್ನು ಪೋಷಿಸುತ್ತದೆ…. ಪ್ರೀತಿ-ವಿಶ್ವಾಸ, ಹಾದಿಯಲ್ಲಿ ದಾರಿದೀಪ ವಾಗುತ್ತದೆ… ಇದನ್ನರಿತ ನಾನು, ಹಂತಹಂತವಾಗಿ ಇವೆಲ್ಲವನ್ನೂ ಪೂರೈಸ ತೊಡಗಿದೆ..ಮೊದಲನೆಯದಾಗಿ ಅವಳ ಭಯ ಕಡಿಮೆಯಾಗಿ ನನ್ನ ಮೇಲೆ ನಂಬಿಕೆ ಹೆಚ್ಚಿಸಿದರೆ ಮಾತ್ರ, ಓದುವುದನ್ನು ಬರೆಯುವುದನ್ನು ಸರಿಪಡಿಸಬಹುದು. ಏಕೆಂದರೆ 10ನೇ ಕ್ಲಾಸಲ್ಲಿ ಅವಳು ಪಾಸಾಗುವುದು ಅವಳ ಪೋಷಕರಿಗೆ ಅಗತ್ಯವಾಗಿತ್ತು.ಅದಕ್ಕೆ ಪೀಠಿಕೆಯಂತೆ ಅವಳ ಚಿತ್ರಗಳನ್ನು, ಬರಹಗಳನ್ನು ಹೊಗಳಲು ಹಾಗೂ ಅದಕ್ಕೆ ಸೂಕ್ತವಾದ ಮಾರ್ಗದರ್ಶನ ನೀಡಲು […]

ಅಂಕಣ

ಹೊತ್ತಾರೆ ಅಮ್ಮನೂರಿನ ನೆನಪುಗಳು ಅಮೇರಿಕಾದಿಂದ ಅಶ್ವಥ್ ಬರೆಯುತ್ತಾರೆ ಅಶ್ವಥ್ ಅಮ್ಮ…  ಅಜ್ಜಿಯನ್ನು ನಾನು ಅಮ್ಮ ಅಂತ ಕರೆಯುತ್ತಿದ್ದುದು. ನನ್ನ ಬಾಲ್ಯದ ಮುಕ್ಕಾಲು ಪಾಲಿಗಿಂತಲೂ ಹೆಚ್ಚು ಅಮ್ಮನ ಜೊತೆಯಲ್ಲೇ ಕಳೆದಿದ್ದರಿಂದ ನೆನಪುಗಳ ರಾಶಿಯೇ ಇದೆ. ಹಾಗಾಗಿ ನಾನು ನಿಧಾನವಾಗಿ ಸಂದರ್ಭಗಳನ್ನೆಲ್ಲ ಪೋಣಿಸುತ್ತಾ ಒಂದೊಂದೇ ಬರಹ ಬರೆಯುತ್ತಿರುತ್ತೇನೆ. ಮುಂದೆ ಎಲ್ಲವನ್ನೂ ಕ್ರೋಢೀಕರಿಸುವುದೂ ಆಗುತ್ತದೆ. ಒಂದಂತೂ ನಿಜ ಇದುವರೆಗಿನ ನನ್ನ ಬದುಕಿನ ಎಂತಹದ್ದೇ ಮುಖ್ಯ ಸಂದರ್ಭವಾದರೂ ಅಲ್ಲಿ ಅಮೂರ್ತವಾಗಿ ಅಮ್ಮ ಇದ್ದೇ ಇರುತ್ತಾರೆ. ನನಗಿನ್ನೂ ನೆನಪಿದೆ. ನನಗೆ ಬುದ್ಧಿ ತಿಳಿಯುವಾದಾಗಿಂದಲೂ, ಅಮ್ಮ […]

Back To Top