Category: ಅಂಕಣ

ಅಂಕಣ

ಅಂಕಣ ಬರಹ ರಂಗ ರಂಗೋಲಿ – ೪ ಚಾವಡಿಯಲ್ಲಿ ರಂಗ ಗೀತೆ ಎಂಟನೇ ತರಗತಿಯ ಕ್ಲಾಸಿನಲ್ಲಿ ಪುಟ್ಟ ಗುಬ್ಬಚ್ಚಿ ದೇಹದ ನಾನು ಮೊದಲನೇ ಬೆಂಚಿನಲ್ಲಿ ಮುದುಡಿ ಕುಳಿತಿದ್ದೆ. ” ದೇವದಾಸಿ ಪದ್ದತಿ,ಬಸವಿ ಪದ್ದತಿ,ಗೆಜ್ಜೆಪೂಜೆ ನಿಷೇಧಿಸಿದರು” ತರಗತಿಯಲ್ಲಿ ಕನ್ನಡದ  ಬಾಲಕೃಷ್ಣ  ಮೇಷ್ಟ್ರು ಕರ್ನಾಟಕದ ಇತಿಹಾಸದ ಬಗ್ಗೆ ಬಿಡುವಿನಲ್ಲಿ ಕಥೆಯ ರೂಪದಲ್ಲಿ ಹೇಳುತ್ತಿದ್ದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಮಾದರಿ ಮೈಸೂರಿನ ಕರ್ತೃ. ಜಾರಿಗೆ ತಂದ ಈ ಕಾನೂನುಗಳು ಹೊಸದಾದ ಮನ್ವಂತರಕ್ಕೆ ನಾಂದಿ ಹಾಡಿತ್ತು. ಥಟ್ಟನೆ ನನ್ನ ಕಣ್ಣೆದುರು, ಆ ದೊಡ್ಡ […]

ಅಂಕಣ ಬರಹ ಎಡವಿದವನಿಗೂ ಸಣ್ಣ ಸಹಾನುಭೂತಿ ಸಿಗಲಿ ಬಹುಶಃ ನಾನವಾಗ ನಾಲ್ಕನೆಯ ತರಗತಿಯಲ್ಲಿದ್ದೆ. ಅಂದು ಭಾನುವಾರ. ಅವತ್ತು ನಾವೆಲ್ಲ ಹೀಗೇ ಆಟ ಆಡುತ್ತಿದ್ದೆವು. ಶಾಲೆಯ ಸುತ್ತಮುತ್ತ ನಾನು, ಶ್ರುತಿ, ಸ್ವಪ್ನ ಮತ್ತೆ ಇನ್ನೂ ಒಂದಿಷ್ಟು ಗೆಳತಿಯರು, ಆಡಿ ಆಡಿ ಸುಸ್ತಾದೆವು. ಕೊನೆಗೆ ನೀರು ಕುಡಿಯಬೇಕೆನಿಸಿತು ಎಲ್ಲರಿಗೂ. ಅಲ್ಲಿಯೇ ಇದ್ದ ಬೋರನ್ನು ಹೊಡೆಯತೊಡಗಿದೆವು. ನೀರು ಬಂತು. ಒಬ್ಬೊಬ್ಬರೇ ನೀರು ಹೊಡೆಯುವುದು, ಉಳಿದೆಲ್ಲರು ಸರತಿಯಲ್ಲಿ ಮುಖತೊಳೆದು ನೀರುಕುಡಿಯುವುದು ಮಾಡುತ್ತಿರುವಾಗ, ನಾನೊಂದಿಷ್ಟು ಬೋರು ಹೊಡೆಯುವ ಉಳಿದವರು ಕುಡಿಯಲಿ ಎಂದು ಹಿಂದೆ ಬಂದೆ. […]

ಪ್ರಪಂಚದಲ್ಲಿ ಬಹುಶಃ ತಪ್ಪೇ ಮಾಡದಿರುವ ಒಬ್ಬನೇ ಒಬ್ಬ ವ್ಯಕ್ತಿ ಇರಲಿಕ್ಕಿಲ್ಲ. ಯಾವುದಾದರೂ ಒಂದು ಸಂದರ್ಭದಲ್ಲಿ ಏನಾದರೂ ಒಂದು ತಪ್ಪನ್ನು ಮಾಡಿರಲೇ ಬೇಕು. ಮಾಡಿದ ತಪ್ಪನ್ನು ಒಪ್ಪಿಕೊಳ್ಳದೆ , ತಾನು ಯಾವಾಗಲೂ ಸರಿ ಎಂಬ ವರ್ತನೆಯನ್ನು ತೋರಿಸುವ ಬಹಳಷ್ಟು ಮಂದಿಯಿದ್ದಾರೆ

ಅಂಕಣ ಬರಹ ಏಕತಾರಿ ಕಣ್ಮರೆ ಹಲವು ವರುಷಗಳಿಂದ ತತ್ವಪದ ಗಾಯಕರನ್ನು ಭೇಟಿಮಾಡುತ್ತ, ಅವರು ಹಾಡುವ ಪದಗಳನ್ನು ಕೇಳುತ್ತ ತಿರುಗಾಡುತ್ತಿದ್ದೇನೆ. ಈ ಗಾಯನದಲ್ಲಿ ಜೀವಾಳದಂತೆ ಬಳಕೆಯಾಗುತ್ತಿದ್ದ ಏಕತಾರಿ ಮರೆಯಾಗುತ್ತಿರುವುದು ಕಾಣುತ್ತಿದೆ. ಯಾಕಿರಬಹುದು? ಇದರ ಪರಿಣಾಮ ಏನಾಗಿದೆ? ವಿಚಾರ ಮಾಡಬೇಕಿನಿಸಿತು. ತಾಡಿಸಿದರೆ ನುಡಿವ ತೊಗಲಿನ ತಮಟೆ, ಡೋಲು, ಮೃದಂಗ, ಢಕ್ಕೆ, ಹಲಗೆ, ದಮಡಿ, ದಪ್ಪು, ಉರುಮೆಗಳಿವೆ; ಗಾಳಿ ವಾದ್ಯಗಳಾದ ಹಾರ್ಮೋನಿಯಂ, ಕೊಳಲು, ಶಹನಾಯಿಗಳಿವೆ; ಮೀಟಿದರೆ ನಾದ ಹೊರಡಿಸುವ ವೀಣೆ, ಕಿನ್ನರಿ, ಚೌಡಿಕೆ, ಏಕತಾರಿ, ಸಾರಂಗಿಯಂತಹ ತಂತಿವಾದ್ಯಗಳೂ ಇವೆ. ಇವುಗಳಲ್ಲಿ ಏಕತಾರಿಯದೇ […]

ಅಂಕಣ ಬರಹ ಕಬ್ಬಿಗರ ಅಬ್ಬಿ  ಸಾಲುಗಟ್ಟಿದ  ಮನಸ್ಸುಗಳು ಮನೆ ಕಟ್ಟುವಾಗ ಮೊದಲು  ಕಲ್ಲಿನಿಂದ ಗಟ್ಟಿಯಾದ ಅಡಿಪಾಯ, ಆಮೇಲೆ ಕಟ್ಟುವುದೇ ಗೋಡೆ!. ತಳಪಾಯದ ನಾಲ್ಕೂ ಅಂಚುಗಳುದ್ದಕ್ಕೂ ನಾಲ್ಕು ಗೋಡೆಗಳು ಮಧ್ಯದಲ್ಲಿ ಸ್ಪೇಸ್ ಮತ್ತು ಗಾಳಿ ಬಂಧಿಸಲ್ಪಡುತ್ತದೆ. ಒಳಗೆ ಮತ್ತೊಂದಷ್ಟು ಗೋಡೆಗಳು. ಡ್ರಾಯಿಂಗ್ ರೂಂ ಮತ್ತು ಮಲಗುವ ಕೋಣೆ ನಡುವೆ ಗೋಡೆ, ಮನೆಗೆ ಬರುವ ಆಗಂತುಕರಿಂದ ಪ್ರೈವೆಸಿ ಅತ್ಯಗತ್ಯ.  ಆಮೇಲೆ ಅಡುಗೆ ಕೋಣೆ ಮತ್ತು ಡೈನಿಂಗ್ ರೂಂ ನಡುವೆ ಗೋಡೆಗಳು. ಮತ್ತೆ, ದೇವರ ಕೋಣೆ ಎನ್ನಲ್ಪಡುವ ಗೂಡಿನಂತಹ ಚಿಕ್ಕ ಕೋಣೆಗೂ […]

ಅಂಕಣ ಬರಹ ರಾಮಕೃಷ್ಣ ಗುಂದಿ ಆತ್ಮಕತೆ–03 ಅಕ್ಷರ ಬೀಜದ ಬೆಳಕಿನತ್ತ….. ಗುಂದಿ ಹಿತ್ತಲಿನ ಎರಡೂ ಕುಟುಂಬಗಳು ಗೇಯ್ದು ಉಣ್ಣುವ’ ಬದುಕಿನಲ್ಲಿ ಸಂತೃಪ್ತಿ ಕಂಡಿದ್ದವು. ಅಕ್ಷರ ದಾರಿದ್ರö್ಯದ ದಟ್ಟ ಬಡತನವೊಂದು ಅವರಿಗೆ ಬಡತನವೇ ಅನ್ನಿಸಿರಲಿಲ್ಲ. ಅಂಥ ಕುಟುಂಬಗಳಲ್ಲಿ ಗಣಪು ಎಂಬ ಹುಡುಗನೊಬ್ಬ ಹೇಗೋ ಅಕ್ಷರ ಕಲಿಕೆಗೆ ಆಸೆಪಟ್ಟು ಅಕ್ಷರ ಬೀಜದ ಬೆಳಕಿನ ಬೆನ್ನು ಹತ್ತಿದ. ಸಮೀಪದ ಹೆಗ್ರೆ ಶಾಲೆಯಲ್ಲಿ ಅ, ಆ ಕಲಿಕೆಯ ಹಂತದಲ್ಲೆ ತಾಯಿ ತೀರಿಕೊಂಡಳು. ಶಾಲೆ ಕಲಿಯುವ ಹಂಬಲಕ್ಕೆ ಮತ್ತುಷ್ಟು ತೊಡಕುಗಳಾದವು. ಮತ್ತೆ ಕೆಲವು ದಿನಗಳ […]

ಅಂಕಣ ಬರಹ ಕಗ್ಗಗಳ ಲೋಕ ಆದರಣೀಯ ಡಾII ಡಿ. ವಿ. ಗುಂಡಪ್ಪನವರು ರಚಿಸಿದ ‘ಮಂಕುತಿಮ್ಮನ ಕಗ್ಗ’ ಒಂದು ಮೇರುಕೃತಿ. ಅವರ ಒಂದೊಂದು ಮುಕ್ತಕವೂ ಕೂಡ ಸಾರ್ವಕಾಲಿಕ ಸತ್ಯ! ಜೀವನದಲ್ಲಿ ಎದುರಾಗುವ ಸಾವಿರಾರು ಪ್ರಶ್ನೆಗಳಿಗೆ ತತ್ವಶಾಸ್ತ್ರ,ಸ್ವಾನುಭವ ಮತ್ತು ಆಧ್ಯಾತ್ಮದ ಹಿನ್ನೆಲೆಯಲ್ಲಿ ಉತ್ತರ ನೀಡುವ ಕಗ್ಗಗಳು ಓದುಗರಿಗೆ ಆಪ್ತವಾಗಿ ಬಿಡುತ್ತವೆ. ಒಬ್ಬ ಸಾಮಾನ್ಯ ಮನುಷ್ಯನಂತೆ ಮೈತ್ರಿಭಾವದಿಂದ ಬರೆದ ಈ ಕಗ್ಗಗಳು ಅಸಂಖ್ಯ ಮಂದಿಗೆ ಸಾಂತ್ವನ ನೀಡುತ್ತವೆ. “ಎಲ್ಲದರಲ್ಲೂ, ಎಲ್ಲರಲ್ಲೂ ಒಳ್ಳೆಯದನ್ನೇ ಕಂಡು , ಜೀವನದ ಸೊಬಗನ್ನು ಸವಿಯಬೇಕು” ಎಂದು ದಾರಿತೋರುವ […]

ಅಂಕಣ ಬರಹ ರಂಗ ರಂಗೋಲಿ-03 ಜಾತ್ರೆಯ ಲೋಕ ಕಲಾವಿದಳೆನಿಸಿಕೊಳ್ಳುವ ಹಂಬಲಿಕೆಗೆ,ಒಲವಿಗೆ ಬಾಲ್ಯದ ಅನುಭವಸ್ವನಗಳು  ಓಂ ಕಾರಗಳಾಗಿ ಮೂಡಿರಬೇಕು. ಹಲವು ಕಥೆಗಳು,ಹಲವು ಪಾತ್ರಗಳು,ಆ ಪಾತ್ರಗಳ ಅಭಿನಯ..ಎದುರಿಗೊಬ್ಬ ಕಾಣದ ನಿರ್ದೇಶಕ. ಅವನಿಗೆ ಶರಣಾಗಿ ಬದುಕಿನ ರಂಗಭೂಮಿಯಲ್ಲಿ ಬಗೆಬಗೆಯ ಪಾತ್ರ ಕಥೆ ಅನಾವರಣಗೊಳ್ಳುತ್ತಿತ್ತು. ಈ ‘ಸಿರಿ’ ನೋಟ ಒಬ್ಬ ಕಲಾವಿದೆಯ ಒಳಗನ್ನು..ಅಥವಾ ಕಲೆಯ ಬಗ್ಗೆ ಅತೀವ ಪ್ರೀತಿಭಾವವನ್ನು ಚಿಲುಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿತು. ಊರ ಉತ್ಸವ ಮುಗಿದರೂ ಅದೇ‌ ಮಂಪರು.  ನಾಲ್ಕು ದಿನದ ಜಾತ್ರೆ ರಥೋತ್ಸವದೊಂದಿಗೆ ಸಂಪನ್ನಗೊಳ್ಳುತ್ತಿತ್ತು. ಮರುದಿನವೂ ಹಗಲಿಗೆ ಬೆಳಗಾದಾಗ […]

ಹೊಸ ಅಂಕಣ ಧಮ್ಮಲಾಲ್ ಛೋಪ್ರಾ ತೆಲುಗು ಮೂಲ : ಮಧುರಾಂತಕಂ ನರೇಂದ್ರಕನ್ನಡಕ್ಕೆ : ಕುಂ. ವೀರಭದ್ರಪ್ಪಪ್ರ : ಆಕೃತಿ ಪುಸ್ತಕ, ಬೆಂಗಳೂರುಪ್ರಕಟಣೆಯ ರ್ಷ : ೨೦೧೭ಬೆಲೆ : ರೂ.೧೦೦ಪುಟಗಳು : ೧೧೨ ವಿಶಿಷ್ಟ ಕಥಾವಸ್ತು, ತಂತ್ರ ಮತ್ತು ವಿನ್ಯಾಸಗಳಿರುವ  ಈ ಕಾದಂಬರಿಯಲ್ಲಿ  ನಡೆಯುವ ಹೆಚ್ಚಿನೆಲ್ಲ ಘಟನೆಗಳು ಮತ್ತು ಪಾತ್ರಗಳು ಎದುರಾಗುವ ಸನ್ನಿವೇಶಗಳು ಆಮ್‌ಸ್ಟರ್‌ಡಾಂ ನಗರದ ವಿಮಾನ ನಿಲ್ದಾಣದಲ್ಲಿ ನಡೆಯುತ್ತವೆ . ಕಥೆಯ ನಿರೂಪಕ ವಿಚಿತ್ರ ಹೆಸರಿನ ಗರ‍್ರಂಕೊಂಡ ಗರ‍್ರಂ ಪುರೌತು. ಜೈಸಲ್ಮೇರ್ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕ.  ಆತ ಮೆಕ್ಸಿಕೋದಲ್ಲಿ […]

Back To Top