Category: ಅಂಕಣ

ಅಂಕಣ

ಅಂಕಣ ಬರಹ ದಿ ಲಾಸ್ಟ್ ಲೆಕ್ಚರ್ ದಿ ಲಾಸ್ಟ್ ಲೆಕ್ಚರ್ ( ಆತ್ಮ ಕಥನ ರೂಪದ ಉಪನ್ಯಾಸಗಳು)ಮೂಲ : ರ‍್ಯಾಂಡಿ ಪಾಶ್ ಕನ್ನಡಕ್ಕೆ : ಎಸ್.ಉಮೇಶ್ಪ್ರ : ಧಾತ್ರಿ ಪಬ್ಲಿಕೇಷನ್ಸ್ಪ್ರಕಟಣೆಯ ವರ್ಷ : ೨೦೦೮ಬೆಲೆ : ರೂ.೧೦೦ಪುಟಗಳು : ೧೯೩ ಮೂಲಕೃತಿಯ ಅದ್ಭುತ ಜನಪ್ರಿಯತೆಯಿಂದಾಗಿ ಕನ್ನಡಕ್ಕೂ ಬಂದು ಕನ್ನಡದಲ್ಲೂ ಮಾರಾಟ ಮತ್ತು ಜನಪ್ರಿಯತೆಗಳ ದೃಷ್ಟಿಯಿಂದ ಅಪಾರ ಯಶಸ್ಸು ಪಡೆದ ಕೃತಿಯಿದು. ಮೂಲ ಲೇಖಕ ರ‍್ಯಾಂಡಿ ಪಾಶ್ ಜಠರದ ಕ್ಯಾನ್ಸರಿನಿಂದ ಪೀಡಿತನಾಗಿ ಇನ್ನು ಕೆಲವೇ ತಿಂಗಳುಗಳಷ್ಟೇ ಬದುಕುವನೆಂದು ವೈದ್ಯಕೀಯ […]

ಅಂಕಣ ಬರಹ ಬಾಗದ ಬದುಕು ನಾನು ಶಿವಮೊಗ್ಗೆಯಲ್ಲಿದ್ದ ದಿನಗಳಲ್ಲಿ ಹಲವು ತಲೆಮಾರಿಗೆ ಸೇರಿದ ಸ್ವಾತಂತ್ರ್ಯ ಹೋರಾಟಗಾರರು, ಗಾಂಧಿವಾದಿಗಳು ಹಾಗೂ ಸಮಾಜವಾದಿಗಳು ಬೀದಿಯಲ್ಲಿ ಓಡಾಡಿಕೊಂಡಿದ್ದನ್ನು ಕಾಣುತ್ತಿದ್ದೆ. ಹೆಚ್ಚಿನವರು ಗಾಂಧಿ ಇಲ್ಲವೇ ಲೋಹಿಯಾರ ವ್ಯಕ್ತಿತ್ವ ಅಥವಾ ಚಿಂತನೆಯ ಭಾವಕ್ಕೆ ಸಿಕ್ಕು ಬದುಕಿನ ಹಾದಿ ರೂಪಿಸಿಕೊಂಡವರು. ಸಮಕಾಲೀನ ಚುನಾವಣಾ ರಾಜಕಾರಣದಲ್ಲಿ ಇವರ ಯಾರ ಹೆಸರೂ ಚಾಲ್ತಿಯಲ್ಲಿರುತ್ತಿರಲಿಲ್ಲ. ಹೀಗಾಗಿ ಮಾಧ್ಯಮಗಳೂ ಇವರ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಆದರೆ ಇವರು ಮಲೆನಾಡಿನ ಮಳೆಗಾಲದಲ್ಲಿ ಮೋಡಗಳ ಮರೆಯಿಂದ ತಟ್ಟನೆ ಕಾಣಿಸಿಕೊಂಡು ಬೆಳಗುವ ಸೂರ್ಯನಂತೆ ಸನ್ನಿವೇಶ ಬಂದಾಗ ಪ್ರತ್ಯಕ್ಷವಾಗುತ್ತಿದ್ದರು. […]

ಅಂಕಣ ಬರಹ ಹುಣಿಸೆ ಮರದ ಕತೆ ಹುಣಿಸೆ ಮರದ ಕತೆತಮಿಳು ಮೂಲ : ಸುಂದರ ರಾಮಸ್ವಾಮಿಅನುವಾದ : ಕೆ.ನಲ್ಲತಂಬಿಪ್ರ : ಲಂಕೇಶ್ ಪ್ರಕಾಶನಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೧೫೦ಪುಟಗಳು : ೧೯೨   ಪರಿಸರ ಕಾಳಜಿಯನ್ನು ಹೊಂದಿದ ಒಂದು ವಿಶಿಷ್ಟ ಕಾದಂಬರಿಯಿದು. ಅದೊಂದು ಪುಟ್ಟ ಹಳ್ಳಿಯಲ್ಲಿ, ಮೂರು ರಸ್ತೆ ಕೂಡುವ ಸ್ಥಳದಲ್ಲಿ  ಆ ಹುಣಿಸೆ ಮರವಿತ್ತು.  ಆ ಜಾಗ ಜನರ ಓಡಾಟ-ಗಿಜಿ ಗಿಜಿಗಳಿಂದ ತುಂಬಿ ಲವಲವಿಕೆಯಿಂದ ಕೂಡಿತ್ತು. ತನ್ನಷ್ಟಕ್ಕೆ ಹುಟ್ಟಿಕೊಂಡ ಆ ಹುಣಿಸೆ  ಮರವು ಮಾನವನ […]

ಅಂಕಣ ಬರಹ ಅಸಾಮಾನ್ಯದ ವ್ಯಕ್ತಿ ಚಿತ್ರ ಇವನು… ಬಾಲ್ಯದಲ್ಲಿ ಅಜ್ಜನ ಊರು ಮತ್ತು ಅಜ್ಜನ ಮನೆ ಎನ್ನುವ ಆ ಜಾಗ ಎಷ್ಟೊಂದು ಆಸ್ಥೆಯ ಆಕರ್ಷಣೆಯ  ಜಾಗವಾಗಿತ್ತು… ಅದೆಷ್ಟು ಖುಷಿಯಿಂದ ಅಜ್ಜನ ಮನೆಗೆ ಬರುತ್ತಿದ್ದೆವು… ಅಜ್ಜನ ಮನೆಯ ಮಾಳಿಗೆ, ಪಡಸಾಲೆ, ನೆಲಾಗಾಣೆ, ಅಟ್ಟ, ಗಣಿಗೆ, ಬಾದಾಳ, ಸಗಣಿ ನೆಲ, ಮಣ ಗಾತ್ರದ ಒಂಟಿ ತಲೆ ಬಾಗಿಲು, ಪಡಸಾಲೆಯ ನಾಲ್ಕು ಕಂಬಗಳು, ಅಡುಗೆ ಮನೆಯ ಮಜ್ಜಿಗೆ ಕಡೆಯುವ ಕಂಬ,  ದನಾಕ್ಕೆ, ತಿಪ್ಪೆ, ಬಾರುಕೋಲು, ಹಗೇವಿನ, ಸಗಣಿ, ಗಂಜಲ…. ಇನ್ನೂ ಅಸಂಖ್ಯ […]

ಅಂಕಣ ಬರಹ ಹೊಸ ದನಿ ಹೊಸ ಬನಿ-೧೨. ಚದುರಿದ ಚಿತ್ರಗಳಲ್ಲೇ ಅರಳುವ ಹೂವುಗಳಂಥ ನರಸಿಂಹ ವರ್ಮ ಕವಿತೆಗಳು ವಿಟ್ಲದ ನರಸಿಂಹ ವರ್ಮ “ಆಕಾಶದ ಚಿತ್ರಗಳು” ಹೆಸರಿನ ಕವನ ಸಂಕಲನವನ್ನು ೨೦೧೯ರಲ್ಲಿ ಪ್ರಕಟಿಸುವುದರ ಮೂಲಕ ಈಗಾಗಲೇ ಸಾಹಿತ್ಯ ಲೋಕಕ್ಕೆ ಪರಿಚಿತರಾಗಿದ್ದಾರೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕಾನೂನು ಅಧಿಕಾರಿಯಾಗಿ ಕೆಲಸ ಮಾಡುತ್ತಿರುವ ಅವರ ಕವಿತೆಗಳಲ್ಲಿ ಹುಡುಕಿದರೂ ವಾದ ವಿವಾದಗಳಾಗಲೀ, ವ್ಯವಸ್ಥೆಯ ಪರ ಅಥವ ವಿರೋಧದ ನಿಲುವಾಗಲೀ ಇಲ್ಲದೇ ಇರುವುದು ವಿಶೇಷ. ಜೊತೆಗೇ ವರ್ತಮಾನದ ಸಂಗತಿಗಳಿಗೆ ಥಟ್ಟನೆ ಪ್ರತಿಕ್ರಯಿಸಿ ಪದ್ಯವೊಂದನ್ನು […]

ಅಂಕಣ ಬರಹ ಕತೆಗಾರ್ತಿ ಆಶಾ ಜಗದೀಶ್ಮುಖಾಮುಖಿಯಲ್ಲಿ “ಹೆಣ್ಣು ನನ್ನ ಬರಹದ ಮೂಲ ಕಾಳಜಿ” ಕವಿತೆಗಳನ್ನು ಯಾಕೆ ಬರೆಯುತ್ತೀರಿ ? ಉತ್ತರ: ಕವಿತೆಯನ್ನು ನಾನು ಬರೆಯುತ್ತೇನೆ ಎನ್ನುವುದು ತಪ್ಪಾಗುತ್ತದೆ. ಕವಿತೆಗಳೇ ನನ್ನಿಂದ ಬರೆಸಿಕೊಳ್ಳುತ್ತವೆ ಎನ್ನುವುದು ಸರಿ. ನನ್ನೊಳಗೆ ಅಂತಹುದೊಂದು ತೀವ್ರತೆಯನ್ನು ಇಟ್ಟುಕೊಳ್ಳದೆ ಬರೆಯುವುದು ನನಗೆ ಕಷ್ಟ. ಕವಿತೆ ಹುಟ್ಟುವ ಕ್ಷಣ ಯಾವುದು ? ಉತ್ತರ: ಯಾವ ಕ್ಷಣವಾದರೂ ಸರಿ ಅದು ನನ್ನನ್ನು ಕಾಡಬೇಕು. ಸತಾಯಿಸಬೇಕು. ಇನ್ನು ಬರೆಯದೆ ಉಳಿಯಲಾರೆ ಅನ್ನಿಸುವಂತೆ ಮಾಡಬೇಕು. ಆಗ ಮಾತ್ರ ಕವಿತೆ ಹುಟ್ಟುತ್ತದೆ. ಹಾಗಾಗಿ […]

ಅಂಕಣ ಬರಹ ಅಲೆಯ ಮೊರೆತ ಅಲೆಯ ಮೊರೆತ( ಕಾದಂಬರಿ)ತಮಿಳು ಮೂಲ : ಕಲ್ಕಿಅನುವಾದ : ಶಶಿಕಲಾ ರಾಜಪ್ರ : ಸಾಹಿತ್ಯ ಅಕಾಡೆಮಿಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೪೨೦ಪುಟಗಳು : ೬೯೨ ವಾಸ್ತವವಾದಿ ಶೈಲಿಯಲ್ಲಿರುವ ಈ ಕಾದಂಬರಿಯು ಒಂದು ಕಾಲ್ಪನಿಕ ಕಥೆಯನ್ನು ವಸ್ತುವಾಗಿ ಹೊಂದಿದ್ದರೂ  ಭಾರತಕ್ಕೆ ಸ್ವಾತಂತ್ರ್ಯ   ಸಿಗುವ ಮೊದಲು ನಡೆದ ಎಲ್ಲ ಸಂಗತಿಗಳನ್ನೂ ಐತಿಹಾಸಿಕ ಸತ್ಯಗಳೊಂದಿಗೆ ಯಥಾವತ್ತಾಗಿ ನಿರೂಪಿಸುತ್ತದೆ.         ಪಟ್ಟಾಮಣಿಯಮ್ ಕಿಟ್ಟಾವಯ್ಯರ್, ಸರಸ್ವತಿ ಅಮ್ಮಾಳ್, ಪದ್ಮಾಚಲ ಶಾಸ್ತಿç ಅಯ್ಯರ್, ಕಾಮಾಕ್ಷಿ ಅಮ್ಮಾಳ್, ದೊರೆಸ್ವಾಮಿ […]

ಅಂಕಣ ಬರಹ-14 `ಸಣ್ಣ’ಸಂಗತಿ ನರಸಿಂಹಸ್ವಾಮಿಯವರ ಪುಟ್ಟ ಕವಿತೆಯೊಂದಿದೆ-ಹೆಸರು `ಸಣ್ಣಸಂಗತಿ’. ಅದು ಸಾಹಿತ್ಯ ವಿಮರ್ಶೆಯಲ್ಲಿ ಶ್ರೇಷ್ಠ ಕವನವೆಂದೇನೂ ಚರ್ಚೆಗೊಳಗಾಗಿಲ್ಲ. ಆದರೆ ಮತ್ತೆಮತ್ತೆ ಕಾಡುತ್ತದೆ. ಅದರ ವಸ್ತು ತಾಯೊಬ್ಬಳ ದುಡಿತ. ಅಲ್ಲೊಂದು ಸನ್ನಿವೇಶವಿದೆ: ನಡುರಾತ್ರಿ. ಕುಟುಂಬದ ಸಮಸ್ತ ಸದಸ್ಯರೂ ಗಾಢನಿದ್ದೆಯಲ್ಲಿದ್ದಾರೆ. ಅವರಲ್ಲಿ ಎಳೆಗೂಸಿನ ತಾಯಿಯೂ ಸೇರಿದ್ದಾಳೆ. ಆಕೆಯ ಮಂಚದ ಪಕ್ಕದಲ್ಲಿರುವ ತೊಟ್ಟಿಲಲ್ಲಿ ಕೂಸಿದೆ. ಅದು ಗಾಳಿಯಲ್ಲಿ ಕಾಲು ಅಲುಗಿಸುತ್ತ ಹೊದಿಕೆಯನ್ನು ಕಿತ್ತೆಸೆಯುತ್ತಿದೆ. ಎಲ್ಲರಂತೆ ಆಕೆಯೂ ನಿದ್ದೆಯಲ್ಲಿ ಮುಳುಗಿರುವಳು. ಆದರೆ ಅವಳ ಕೈ ಮಗುವಿನ ಹೊದಿಕೆಯನ್ನು ಸರಿಪಡಿಸುತ್ತಿದೆ. `ನಿದ್ದೆ ಎಚ್ಚರಗಳಲಿ ಪೊರೆವ […]

ಅಂಕಣ ಬರಹ ಪಡುವಣ ನಾಡಿನ ಪ್ರೇಮವೀರ ಪಡುವಣ ನಾಡಿನ ಪ್ರೇಮವೀರಇಂಗ್ಲಿಷ್ ಮೂಲ : ಜೆ.ಎಂ. ಸಿಂಜ್ ಕನ್ನಡಕ್ಕೆ : ಡಾ.ಬಸವರಾಜ ನಾಯ್ಕರ್ಗೀತಾಂಜಲಿ ಪಬ್ಲಿಕೇಷನ್ಸ್ಪ್ರಕಟಣಾ ವರ್ಷ : ೨೦೦೮ಬೆಲೆ : ರೂ.೧೨೫ಪುಟಗಳು : ೨೪೦ ಐರ್‌ಲ್ಯಾಂಡಿನ ಪ್ರಸಿದ್ಧ ನಾಟಕಕಾರ ಜೆ.ಎಂ.ಸಿಂಜ್‌ನ ಐದು ನಾಟಕಗಳು ಇಲ್ಲಿವೆ. ಸುಸಂಸ್ಕೃತ ಮನೆತನದಲ್ಲಿ ಹುಟ್ಟಿ ಬೆಳೆದ ಸಿಂಜ್ ತನ್ನ ಬಾಲ್ಯವನ್ನು ದಕ್ಷಿಣ ಡಬ್ಲಿನ್‌ನ ಗುಡ್ಡಗಾಡು ಪ್ರದೇಶದಲ್ಲಿ ಕಳೆದಿದ್ದ. ಆದ್ದರಿಂದಲೇ ನಿಸರ್ಗ ಸೌಂದರ್ಯದ ಬಗ್ಗೆ ಅಪಾರ ಒಲವನ್ನು ಅವನು ಬೆಳೆಸಿಕೊಂಡ. ಅವನ ನಾಟಕಗಳಲ್ಲಿ ಹಳ್ಳಿಯ ಬದುಕಿನ […]

ಅಂಕಣ ಬರಹ ಮಾತಲ್ಲಿ ಹಿಡಿದಿಡಲಾಗದ ಚಿತ್ರ… ಕೆಲವರ ವ್ಯಕ್ತಿತ್ವವೇ ಹಾಗಿರುತ್ತದೆ. ಜೇನು ತುಪ್ಪದಲ್ಲಿ ಅದ್ದಿ ತೆಗೆದಷ್ಟು ಸವಿಯಾಗಿ. ಅದೆಷ್ಟು ವಿನಯತೆ, ಅದೆಷ್ಟು ಭೂಮಿಗಿಳಿದ ಮನುಷ್ಯ ಎನಿಸಿಬಿಡುವಂತೆ. ಮನುಷ್ಯ ಏನೂ ಗೊತ್ತಿಲ್ಲದ ಸಂದರ್ಭದಲ್ಲಿ ಮುಗ್ಧನಷ್ಟೇ ಸ್ವಾರ್ಥಿಯೂ ಇರುತ್ತಾನೆ. ಅದು ಪುಟ್ಟ ಮಗುವಿನಲ್ಲಿ ಕಂಡು ಬರುವಂತಹ ಮುಗ್ಧತೆ ಮತ್ತು ಸ್ವಾರ್ಥ. ತದ ನಂತರ ಬೆಳೆಯುತ್ತ ಬೆಳೆಯುತ್ತಾ ಅವನ್ನು ತನಗೆ ಬೇಕಾದ ಹಾಗೆ ಬಳಸುವುದನ್ನು ಕಲಿಯುತ್ತಾನೆ. ಆದರೆ ಜ್ಞಾನ ಸಂಪಾದನೆ ಮಾಡುತ್ತಾ ಮಾಡುತ್ತಾ ವಿನೀತನಾಗಿ ಬಿಡುತ್ತಾನೆ. ಅವನೆಲ್ಲಾ ಅಹಂಕಾರವೂ ಸತ್ತುಹೋಗುತ್ತದೆ. ಜ್ಞಾನ […]

Back To Top