Category: ಅಂಕಣ

ಅಂಕಣ

ಅಂಕಣ ಬರಹ ಮಹಿಳೆಯರು ಹೊರ ಜಗತ್ತಿಗೆ ತೆರೆದುಕೊಂಡಾಗಿದೆ ದೀಪ್ತಿ ಭದ್ರಾವತಿ ಪರಿಚಯ: ದೀಪ್ತಿ ಭದ್ರಾವತಿ ಕನ್ನಡದ ಕತೆಗಾರ್ತಿ. ಮೂಲತಃ ದಕ್ಷಿಣ ಕನ್ನಡದವರಾದರು, ದೀಪ್ತಿ ನೆಲೆ ನಿಂತದ್ದು ಭದ್ರಾವತಿಯಲ್ಲಿ.‌ ಆರೋಗ್ಯ ಇಲಾಖೆಯಲ್ಲಿ ನೌಕರಿ. ಕವಿತೆ ಬರೆಯುತ್ತಿದ್ದ ದೀಪ್ತಿ ಆರಂಭದಲ್ಲಿ ಕಾಗದದ ಕುದುರೆ, ಗ್ರೀನ್ ರೂಂನಲ್ಲಿ ಎಂಬ ಎರಡು ಕವಿತಾ ಸಂಕಲನ ಪ್ರಕಟಿಸಿದರು. ಆ‌ ಬದಿಯ ಹೂ, ಗೀರು ಇವರ ಕಥಾ ಸಂಕಲನಗಳು. ಆ ಬದಿಯ ಹೂ ಸಂಕಲನಕ್ಕೆಕತೆಗಳಿಗೆ ಮಾಸ್ತಿ ಕಥಾ ಪ್ರಶಸ್ತಿ ಪಡೆದವರು‌, ಗೀರು ಕಥಾ ಸಂಕಲನಕ್ಕೆ ಪಾಟೀಲ […]

ಅಂಕಣ ಬರಹ   ವಸಾಹತುವಿನಿಂದ ಬಿಡುಗಡೆಗೆ ಭಾಷೆ ಕೊಟ್ಟವ ( ಬಸವಣ್ಣನವರ ಒಂದು ವಚನದ ಭಾಷಿಕ ವಿವೇಚನೆ ) ಕನ್ನಡ ಸಾಹಿತ್ಯ ಸಂಸ್ಕೃತದ ಪ್ರಭಾವಕ್ಕೆ ಸಿಕ್ಕು ವಸ್ತು, ರೂಪ, ಅಭಿವ್ಯಕ್ತಿಯ ಕ್ರಮದಲ್ಲಿ ಬೆಳವಣಿಗೆ ಹೊಂದಿ ಜನಸಾಮಾನ್ಯರಿಂದ ಬಹುದೂರ ನಿಂತಿದ್ದುದು ಎಲ್ಲಕಾಲದಲ್ಲಿಯೂ ಸತ್ಯವೇ ಸರಿ. ಹನ್ನೆರಡನೆಯ ಶತಮಾನದ ವಚನ ಚಳುವಳಿಯ ಸಾಹಿತ್ಯ ರೂಪ ಮತ್ತು ಅದರೊಳಗಿನ ಸಂವೇದನೆಗಳು ನೆಲದ ಬೇಡಿಕೆ, ಸದ್ಯದ ತುರ್ತಿಗೆ ಸ್ಪಂದಿಸಿ ಜನಸಾಮಾನ್ಯರ ನಾಡಿಮಿಡಿತಕ್ಕೆ ಸ್ಪಂದಿಸಿದ್ದು. ಸಂಸ್ಕೃತದ ಮಾರ್ಗ ಸಂಪ್ರದಾಯಕ್ಕೆ, ಮಹಾಕಾವ್ಯ ಪರಂಪರೆಗೆ ವಿರುದ್ಧವಾಗಿ ತನ್ನದೇ […]

ಅಂಕಣ ಬರಹ ಕತೆಗಾರ ರಾಮಕೃಷ್ಣ ಗುಂದಿ ಅವರ ಆತ್ಮಕಥೆ ….7 ಅಲಗೇರಿಯಲ್ಲಿ ಬೆಂಕಿ ಮತ್ತು ಮೊಲ             ನಾಗಮ್ಮಜ್ಜಿಯ ಅಂತ್ಯಸಂಸ್ಕಾರ ಅನಿವಾರ್ಯವಾಗಿ ಕಾರವಾರದಲ್ಲಿ ನಡೆದುಹೋಯಿತು. ಕ್ರಿಯಾ ಕರ್ಮಗಳನ್ನು ಪೂರ್ಣಗೊಳಿಸುವವರೆಗೆ ಊರಿಗೆ ಮರಳುವ ಹಾಗೆಯೂ ಇರಲಿಲ್ಲ. ತಾತ್ಕಾಲಿಕವಾಗಿ ನಮ್ಮ ಪರಿವಾರ ಕಾರವಾರ ತಾಲೂಕಿನ ಅರಗಾ ಎಂಬಲ್ಲಿ ಶಾನುಭೋಗಿಕೆಯಲ್ಲಿರುವ ನಾರಾಯಣ ಆಗೇರ ಎಂಬ ಜಾತಿ ಬಂಧುವೊಬ್ಬರ ಮನೆಯಲ್ಲಿ ವಾಸ್ತವ್ಯ ಮಾಡಬೇಕಾಯಿತು. ಶಾನುಭೋಗರ ಪತ್ನಿ (ಅವಳ ಹೆಸರೂ ನಾಗಮ್ಮ) ನನ್ನ ಯೋಗಕ್ಷೇಮಕ್ಕೆ ನಿಂತಳು. ತಬ್ಬಲಿ ತನದಲ್ಲಿ ನೊಂದು ಹಾಸಿಗೆ ಹಿಡಿದ ಅವ್ವ, […]

ಅಂಕಣ ಬರಹ ಶಾಲಾರಂಗದೊಳಗೊಂದು ಕೋಲಾಟ ಠಣ್…ಠಣ್… ಠಣ್.. ಗಂಟೆಯ ಸದ್ದು ಒಂಭತ್ತು ಸಾರಿ  ಕೇಳಿಸಿತಾ! ಹಾಂ!! ಅದು ನಮ್ಮ ಶಾಲೆಯ ಬೆಳಗಿನ ಗಂಟೆ.   ನನ್ನಜ್ಜಿಯ ಹಣೆಯ ನಡುವಿನ ಕುಂಕುಮದ ಬೊಟ್ಟಿನಂತೆ ನಮ್ಮ ಊರಿನ ಕೇಂದ್ರ ಭಾಗದಲ್ಲಿ ಆಧಾರ ಸ್ತಂಭದಂತೆ ಕೂತಿತ್ತು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ. ಹೌದು ಅದು ನಮ್ಮ ಶಾಲೆ.  ನಮ್ಮ ಹಳ್ಳಿಯ ಶಾಲೆ.  ಬಲಗಾಲಿಟ್ಟು ಒಳಗೆ ಬರಬೇಕು. ಮೊದಲು ಕಾಣಿಸುವುದೇ ಬಿಳೀ ಕಂಬದ ಧ್ವಜಸ್ತಂಭ. ಅದರ ಬುಡದಲ್ಲಿ ಕಟ್ಟೆ . ಅದರ ಹಿಂದೆ, […]

ಅಂಕಣ ಬರಹ ಅರಿವಿನ ನಾವೆಯ ಮೇಲೆ ಸುಖ ಪಯಣ… “Every human being lives in a perpetual state of insuffiency. No matter who you are or what you have achieved, you still want a little more than what you have right now…“ -Sadhguru (Inner Engineering) ಕೊರತೆಯ ಶಾಶ್ವತ ಸ್ಥಿತಿಯೊಂದು ನಮ್ಮೊಳಗೆ ಸದಾ ಜಾಗೃತ ಮತ್ತು ಜೀವಂತ ಇಲ್ಲದೆ ಹೋಗಿದ್ದಿದ್ದರೆ ನಾವೆಲ್ಲ ಬಹುಶಃ ಕೈಕಟ್ಟಿ […]

ಅಂಕಣ ಬರಹ ನಿರ್ಮಲಾ‌ ಶೆಟ್ಟರ್ ಕಥೆಯ ಕೇಂದ್ರ ಒಳಮನದಲ್ಲಿ ಬೇರುಬಿಟ್ಟರೂ ಅದರ ವ್ಯಾಪ್ತಿ ಜಗದಗಲ ಪರಿಚಯ: ನಿರ್ಮಲಾ ಶೆಟ್ಟರ ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದವರು. ಧಾರವಾಡ ಜಿಲ್ಲೆಯಲ್ಲಿ ಹೈಸ್ಕೂಲ್ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಅತ್ಯುತ್ತಮ ಬೋಧನೆಯಿಂದ ತಾಲೂಕಾಮಟ್ಟದ ಹಾಗೂ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದಿದ್ದಾರೆ. ಈ ವರೆಗೂ ‘ಬೆಳಕಿನೊಡನೆ ಪಯಣ’ ಮತ್ತು ‘ನಿನ್ನ ಧ್ಯಾನಿಸಿದ ಮೇಲೂ’ ಎನ್ನುವ ಎರಡು ಪುಸ್ತಕಗಳು ಪ್ರಕಟಗೊಂಡಿರುತ್ತವೆ. ಅದರಲ್ಲಿ ಒಂದು ಕಾವ್ಯಸಂಕಲನವಾದರೆ, ಇನ್ನೊಂದು ಗಜಲ್ ಸಂಕಲನವಾಗಿದೆ. ಸಧ್ಯ, ‘ಸರಹದ್ದುಗಳಿಲ್ಲದ ಭೂಮಿಯ […]

ಅಂಕಣ ಬರಹ ಕಬ್ಬಿಗರ ಅಬ್ಬಿ ಮಗುವಿನ ಪರಿಮಳ ಆ ಮಗು ಹುಟ್ಟಿ ಆಗಷ್ಟೇ ಮೂರು ತಿಂಗಳು ದಾಟಿರಬೇಕು. ಬೆಳಕಿನತ್ತ ಮುಖ ಮಾಡುತ್ತೆ. ಹೊಸ ಮುಖಗಳನ್ನು ನಿರ್ಮಲ ಕಣ್ಣುಗಳೊಳಗೆ ತುಂಬಿ ಏನೋ ನೆನಪಿಸಿಕೊಂಡಂತೆ ತನ್ನಷ್ಟಕ್ಕೇ ಮುಗುಳು ನಕ್ಕು ದೃಷ್ಟಿ ಬದಲಿಸುತ್ತೆ.  ಮಾಮನಿಗೆ ಆ ಮಗುವಿನೊಂದಿಗೆ ಆಡುವುದೆಂದರೆ ಇಷ್ಟ!. ಆತ, ಮಗುವಿನ ನುಣುಪು ಹೊಟ್ಟೆಗೆ, ಹೊಕ್ಕುಳ ಸುತ್ತ ತನ್ನ ಮೂಗು ಸವರಿ ” ಪಂಬಳ ಪಂಬಳ ಬತ್ತನ್ನೇ!” ( ಪರಿಮಳ ಪರಿಮಳ ಬರ್ತಿದೇ!) ಅಂತ ಆಘ್ರಾಣಿಸುತ್ತಾನೆ. ಮಗು ತನ್ನ ಬೊಚ್ಚುಬಾಯಿ […]

ಅಂಕಣ ಬರಹ ಘೋರಾರಣ್ಯದಲ್ಲಿ ಹಾರುವ ಹಂಸೆ ಸಮಾಜದಲ್ಲಿ ತುಳಿತಕ್ಕೊಳಗಾದ ಜನರ ಪರವಾದ ನಿಲುವನ್ನು ತಾಳಿದ ಸಾಹಿತ್ಯಕ ಮತ್ತು ಧಾರ್ಮಿಕ ಚಳುವಳಿಯೆಂದರೆ ಅದು ವಚನಸಾಹಿತ್ಯ. ಅದರ ಉಗಮಕ್ಕೆ ಕಾರಣವಾದದ್ದು ಬಸವಾದಿ ಪ್ರಮಥರ ಧಾರ್ಮಿಕ ತಾತ್ವಿಕ ಸುಧಾರಣೆಗಳು ಅದರೊಂದಿಗಿನ ಸಾಮಾಜಿಕ ಸುಧಾರಣೆ. ಅವಿದ್ಯಾವಂತರಿಂದ ವಿದ್ಯಾವಂತರವರೆವಿಗೂ ತಮ್ಮದೇಯಾದ ಸಾಮಾಜಿಕ, ಧಾರ್ಮಿಕವಾಗಿ ಜೀವನಕ್ರಮದ ಬಗೆಗಿನ ಕಾಳಜಿಯ ಅಭಿವ್ಯಕ್ತಿಯು ಮುಕ್ತವಾಗಿ ನಡೆದದ್ದಾಗಿದೆ. ಸಮಾಜ ಸುಧಾರಣೆಯು ಮುಖ್ಯ ಆಶಯವಾಗಿ ವಚನಗಳು ರಚನೆಯಾದರೂ ಅದರೊಂದಿಗಿನ ಸಾಹಿತ್ಯಿಕ ಅಂಶಗಳು ಉಪೋತ್ಪನ್ನವಾಗಿ ಹೊಂದಿ ವಚನಗಳು ರಚಿಸಲ್ಪಟ್ಟವು. ಆ ಚಳುವಳಿಯಲ್ಲಿನ ‘ಕಂಭದ […]

ಅಂಕಣ ಬರಹ ಕತೆಗಾರ ರಾಮಕೃಷ್ಣ ಗುಂದಿ ಅವರ ಆತ್ಮಕಥೆ ….6 ನಾಗಮ್ಮಜ್ಜಿಯ ಅಂತಿಮಯಾತ್ರೆ                 ನಮ್ಮ ತಂದೆಯವರಿಗೆ ಶಿಕ್ಷಕ ವೃತ್ತಿ ದೊರೆಯಿತಾದರೂ ಇಲಾಖೆಯ ನಿಯಮದಂತೆ ಶಿಕ್ಷಕ ತರಬೇತಿ ಮುಗಿಸುವುದು ಅನಿವಾರ್ಯವಾಗಿತ್ತು. ತರಬೇತಿಗಾಗಿ ಆಯ್ಕೆಗೊಂಡು ಅವರು ಕಾರವಾರದ ಟ್ರೇನಿಂಗ್ ಕಾಲೇಜ್ ಸೇರುವಾಗ ಅವ್ವನ ಗರ್ಭದಲ್ಲಿ ನಾನು ಆಡಲಾರಂಭಿಸಿದ್ದೆನಂತೆ. ನಾಗಮ್ಮಜ್ಜಿಯ ಉತ್ಸಾಹಕ್ಕೆ ಮೇರೆಯೇ ಇರಲಿಲ್ಲ. ಅವ್ವನ ಸೀಮಂತ ಇತ್ಯಾದಿ ಸಡಗರದಲ್ಲಿ ಸಂಭ್ರಮಿಸುತ್ತ ತನ್ನ ಕಣ್ಗಾವಲಿನಲ್ಲಿ ಮಗಳ ಬಾಣಂತನಕ್ಕೆ ಬೇಕು ಬೇಕಾದ ಸಿದ್ಧತೆ ಮಾಡಿಕೊಳ್ಳುತ್ತಿದ್ದಳು. ಊರ ಸುತ್ತಲಿನ ಎಲ್ಲಾ ಗ್ರಾಮದೇವತೆಗಳಿಗೆ ಹಣ್ಣು […]

ಅಂಕಣ ಬರಹ ರಂಗ ರಂಗೋಲಿ-06 ಅಜ್ಜಿಯ ಗೂಡಲಿ ಹಾರಲು ಕಲಿತ ಗುಬ್ಬಿ ಮರಿ ಆ ಹಳೇ ಮನೆಯಲ್ಲಿ ತೆಂಗಿನ ಹಸಿ ಮಡಲಿನಿಂದ ಒಂದೊಂದು ಒಲಿಯನ್ನು ತನ್ನ ಚಿಕ್ಕಕತ್ತಿಯಿಂದ ಸರ್ರೆಂದು ಎಳೆದು ನನ್ನ ಆಟಕ್ಕೆ ಹಾವು ,ಬುಟ್ಟಿ, ವಾಚ್,ಕಾಲ್ಗೆಜ್ಜೆ, ಕನ್ನಡಕ ಎಷ್ಟು ಪರಿಕರಗಳು ತಯಾರಾಗುತ್ತಿದ್ದವು. ಮಿದುಳಲ್ಲಿ ಚಿತ್ರವಾದ ಕಲ್ಪನೆಗಳೆಲ್ಲಾ, ಅದ್ಭುತ ಆಟಿಗೆಯಾಗಿ, ಕಲಾಪರಿಕರಗಳಾಗಿ ತಯಾರಾಗುವ ಕಲೆಯ ಕುಲುಮೆಯೇ ಅವರಾಗಿದ್ದರು. ಕಾಡಿಗೆ ಹೋಗಿ ಅದೆಂತದೋ ಕಡ್ಡಿಯಂತಹ ಬಳ್ಳಿ ಎಳಕೊಂಡು ಬರುತ್ತಿದ್ದಳು. ಅದರ ಸಿಪ್ಪೆ ತೆಗೆದು ಹೂ ಬುಟ್ಟಿ,ಅನ್ನ ಬಸಿಯುವ ತಟ್ಟೆ, […]

Back To Top