Category: ಅಂಕಣ

ಅಂಕಣ

ಸೃಜನಶೀಲರಾಗಿ ಯಶಸ್ವಿ ವ್ಯಕ್ತಿಗಳಾಗಿ ಸಾಮಾನ್ಯವಾಗಿ ನಾವು ಮಾಮೂಲಿ ಕೆಲಸಗಳನ್ನು ಮಾಮೂಲಿ ರೀತಿಯಲ್ಲಿ ಮಾಡಿ ಅತ್ಯದ್ಭುತ ಫಲಿತಾಂಶ ಬಯಸುತ್ತೇವೆ. ನಾವು ಮಾಡುತ್ತಿರುವ ಕೆಲಸವನ್ನು ಎಂದಿನಂತೆ ಮಾಡುವ ರೀತಿಯಲ್ಲಿಯೇ ಮುಂದುವರೆಸಿದರೆ ಹಿಂದೆ ಬಂದ ಫಲಿತಾಂಶವೇ ಬರುವುದು ಸಹಜ. ಕೆಲವರು ನಾವು ಮಾಡುತ್ತಿರುವ ಕೆಲಸವನ್ನೇ ಮಾಡಿ ನೋಡ ನೋಡುತ್ತಿದ್ದಂತೆ ಗೆಲುವು  ಪಡೆಯುತ್ತಾರೆ. ಎಲ್ಲರ ನೆದರಿನಲ್ಲಿಯೂ ಮಿಂಚುತ್ತಾರೆ.ತಾವೂ ಹಿಗ್ಗಿ ಹಲಸಿನಕಾಯಿಯಾಗುತ್ತಾರೆ.  ಅದನ್ನು ನಾವು ಬೆರಗುಗಣ್ಣುಗಳಿಂದ ನೋಡುತ್ತಲೇ ಇದ್ದು ಬಿಡುತ್ತೇವೆ. ಅವರು ಅದೃಷ್ಟವಂತರು ಎಂಬ ಹಣೆಪಟ್ಟಿ ಕಟ್ಟುತ್ತೇವೆ. “ಮನುಷ್ಯನು ತನ್ನ ಕುರಿತು ತಾನೇನು ಅಂದುಕೊಳ್ಳುತ್ತಾನೋ […]

ಮಕ್ಕಳು ಮತ್ತು ನಿಸರ್ಗ ನನ್ನನ್ನು ಮತ್ತೆ ಮತ್ತೆ ಹಿಡಿದಿಡುತ್ತವೆ ತಮ್ಮಣ್ಣ ಬೀಗಾರ ಮಕ್ಕಳ ಸಾಹಿತಿ ತಮ್ಮಣ್ಣ ಅವರ ಕುರಿತು… ತಮ್ಮಣ್ಣ ಬೀಗಾರ ಅವರು ಯಲ್ಲಾಪುರದ ಬೀಗಾರದವರು.‌1959 ನವ್ಹೆಂಬರ್ 22 ರಂದು ಜನಿಸಿದರು. ಸ್ನಾತಕೋತ್ತರ ಪದವೀಧರ , ಸಿದ್ದಾಪುರದ ಬಿದ್ರಕಾನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಕಳೆದ 37 ವರ್ಷಗಳಿಂದ ಮಕ್ಕಳ ಜೊತೆ ಮಕ್ಕಳಾಗಿದ್ದರು. ಮಕ್ಕಳ ಸಾಹಿತ್ಯದ ಬಗ್ಗೆ ಬರೆಯುವವರು ವಿರಾಳತೀ ವಿರಳ. ಅದರೆ ತಮ್ಮಣ್ಣ ಮಕ್ಕಳ ಸಾಹಿತ್ಯವನ್ನು ತಮ್ಮ ಅಭಿವ್ಯಕ್ತಿಯಾಗಿ ಆಯ್ಕೆ […]

ಕಬ್ಬಿಗರ ಅಬ್ಬಿ -8 ನಿಸರ್ಗಕ್ಕೂ ಬೇಕು ಸ್ವಾತಂತ್ರ್ಯ ಈ ನೆಲ, ಈ ಜಲ ಈ ಆಕಾಶಈ ಜೀವ ಈ ಭಾವ ಅನಂತಾವಕಾಶಈ ಕಲ್ಲು ಪರಮಾಣು ಒಳದೇವರ ಕಣ್ಣುಈ ಸ್ಥಾವರ ಈ ಜಂಗಮ ಪ್ರಾಣ ವಿಹಂಗಮಈ ವಾತ ನಿರ್ವಾತ ಆತ್ಮನೇ ಆತ್ಮೀಯಈ ಅಂಡ ಬ್ರಹ್ಮಾಂಡ ಉಸಿರಾಡುವ ಕಾಯ ಕಾವ್ಯದೊಳಗೆ ಜೀವರಸವಿದೆ.ರಸದ ಸೆಲೆಯಿದೆ.ಕುದಿಸಮಯವನ್ನೂ ತಣಿಸುವ ಪ್ರೀತಿಯಿದೆ.ಕಲ್ಲ ಮೊಟ್ಟೆಯನ್ನೂ ಕಾವು ಕೊಟ್ಟು ಮರಿ ಮಾಡುವ ಸೃಷ್ಟಿ ತಂತುವಿನ ತರಂಗವಿದೆ.ಕವಿಯ ಕಣ್ಣೊಳಗೆ ಮೂಡಿದ ಪ್ರತೀ ವಸ್ತುವಿನ ಬಿಂಬ ಜೀವಾತ್ಮವಾಗಿ ಕಾವ್ಯದೇಹ ತೊಟ್ಟು ಹೊರ […]

ಬೆಳಕಿನ ರೋಚಕತೆ ನೀಡುವ ಬೆಳದಿಂಗಳು. ಪುಸ್ತಕ- ಬೆಳದಿಂಗಳು ಕವಿ- ಗುರು ಹಿರೇಮಠ ವಿಶ್ವೃಷಿ ಪ್ರಕಾಶನ ಬೆಲೆ-೧೨೦/- ಗುರು ಹಿರೇಮಠ ತುಮಕೂರು ಟು ಹೊಸ್ಪೇಟ್ ಎಂದೇ ನನಗೆ ಪರಿಚಯವಾದವರು. ಮೃದು ಮಾತಿನ ಅಷ್ಟೇ ನಾಚಿಕೆ ಸ್ವಭಾವದ ಹುಡುಗ. ಯಾವಾಗ ಎದುರಿಗೆ ಸಿಕ್ಕರೂ ಒಂದು ನಗೆಯ ಹೊರತಾಗಿ ಬೇರೆ ಮಾತು ಆಡಲು ಬರುವುದೇ ಇಲ್ಲವೇನೋ ಎಂಬಷ್ಟು ಮೌನಿ. ಅವರ ಚುಟುಕುಗಳ ಸಂಕಲನ ಬೆಳದಿಂಗಳು ಓದಿದಾಗ ಅವರ ಮೌನಕ್ಕೊಂದು ಅರ್ಥ ದೊರಕಿತು ನನಗೆ. ಹೇಳಬೇಕಾದುದ್ದನ್ನೆಲ್ಲ ಚುಟುಕಾಗಿ ಮೂರು ನಾಲ್ಕು ಸಾಲುಗಳಲ್ಲಿ ಹೇಳಿ […]

ಬಾಗಿಲುಗಳ ಆಚೀಚೆ ಬಾಗಿಲುಗಳ ಆಚೀಚೆ ಏನೆಲ್ಲ ಇರಬಹುದು! ಹುಟ್ಟಿದ ಭಾವನೆಗಳನ್ನೆಲ್ಲ ಹುಷಾರಾಗಿ ನಿರ್ವಹಿಸುವ ಮನಸ್ಸಿನಂತೆಯೇ ಬಾಗಿಲುಗಳು ಕೂಡಾ. ಅಗತ್ಯಕ್ಕೆ, ಅವಶ್ಯಕತೆಗೆ ಅನುಗುಣವಾಗಿ ತೆರೆದುಕೊಳ್ಳುವ ಒಂದೊಂದು ಬಾಗಿಲಿಗೂ ಅದರದೇ ಆದ ಪುಟ್ಟ ಹೃದಯವೊಂದು ಇರಬಹುದು; ಆ ಹೃದಯದ ಬಡಿತಗಳೆಲ್ಲವೂ ಮನೆಯೊಳಗಿನ ಮೌನವನ್ನೋ, ಅಂಗಡಿಗಳ ವ್ಯವಹಾರವನ್ನೋ, ಸಿನೆಮಾ ಹಾಲ್ ನ ಕತ್ತಲೆಯನ್ನೋ, ರಸ್ತೆಯೊಂದರ ವಾಹನಗಳ ವೇಗವನ್ನೋ ತಮ್ಮದಾಗಿಸಿಕೊಳ್ಳುತ್ತ ಏರಿಳಿಯುತ್ತಿರಬಹುದು. ಹೀಗೆ ಎಲ್ಲ ಪ್ರಾಪಂಚಿಕ ನೋಟ-ಅನುಭವಗಳನ್ನು ತಮ್ಮದಾಗಿಸಿಕೊಳ್ಳುವ ಬಾಗಿಲುಗಳಿಗೆ ಒಮ್ಮೊಮ್ಮೆ ಕೃಷ್ಣ-ರಾಧೆಯರ, ಶಿವ-ಪಾರ್ವತಿಯರ ಹೃದಯಗಳೂ ಅಂಟಿಕೊಂಡು ಈ ಬಾಗಿಲು ಎನ್ನುವ ವಿಸ್ಮಯದ […]

ಯಾಕೀ ಪುನರುಕ್ತಿ? ಅಭಿಮಾನಿ ಓದುಗರೊಬ್ಬರು ಪತ್ರ ಬರೆದು ತಮ್ಮ ಪ್ರತಿಕ್ರಿಯೆ ತಿಳಿಸಲು ನನ್ನ ಫೋನ್ ನಂಬರ್ ಕೇಳಿದರು. ಕೊಟ್ಟದ್ದು ತಪ್ಪಾಯಿತು. ಅವರು ಯಾವಾಗೆಂದರೆ ಆವಾಗ ಸಣ್ಣಸಣ್ಣ ವಿಚಾರಕ್ಕೆಲ್ಲ ಕರೆಯಲಾರಂಭಿಸಿದರು. ಪ್ರತಿಸಲವೂ ಅರ್ಧ ತಾಸು ಕಮ್ಮಿಯಿಲ್ಲದ ಮಾತು. ನಿಜವಾದ ಸಮಸ್ಯೆ ಸಮಯದ್ದಾಗಿರಲಿಲ್ಲ. ಅವರು ಒಂದೇ ಅಭಿಪ್ರಾಯವನ್ನು ಬೇರೆಬೇರೆ ಮಾತುಗಳಲ್ಲಿ ಹೇಳುತ್ತಿದ್ದರು. ಸೂಚ್ಯವಾಗಿ ಹೇಳಿನೋಡಿದೆ. ಮುಟ್ಟಿದಂತೆ ಕಾಣಲಿಲ್ಲ. ಫೋನು ಎತ್ತಿಕೊಳ್ಳುವುದನ್ನು ನಿಲ್ಲಿಸಿದೆ. ಕಡೆಗೆ ನಂಬರ್ ಬ್ಲಾಕ್ ಮಾಡಬೇಕಾಯಿತು. ಮತ್ತೊಬ್ಬ ನಿವೃತ್ತ ಶಿಕ್ಷಕರು ಸಜ್ಜನರು ಹಾಗೂ ಶಿಷ್ಯವತ್ಸಲರು. ಹಿಂದೆಂದೊ ನಡೆದದ್ದನ್ನು ಇಸವಿ […]

ಅನುವಾದಿತ ಕೃತಿ ಪ್ರಪಂಚ ಪ್ರವೇಶ ಮೊದಲ ನುಡಿ ಅನುವಾದವೆಂಬ ಪದದ ಸರಿಯಾದ ಅರ್ಥ ತಿಳಿಯದವರು ನಮ್ಮಲ್ಲಿ ಸಾಕಷ್ಟು ಮಂದಿ ಇದ್ದಾರೆ. ಎರಡು ಭಾಷೆಗಳು ತಿಳಿದಿದ್ದರೆ ಸಾಕು ಅನುವಾದ ತಾನೇ ತಾನಾಗಿ ಆಗುತ್ತದೆ ಎಂದು ತಿಳಿಯುವವರಿದ್ದಾರೆ. ಅನುವಾದವೆಂದರೆ ಅದೊಂದು ಯಾಂತ್ರಿಕವಾದ ಕೆಲಸವೆಂದು ಹೇಳುವವರಿದ್ದಾರೆ. ಮನುಷ್ಯನ ಬದುಕಿನಲ್ಲಿ ಭಾಷೆಯ ಮಹತ್ವವೇನು, ಅನುವಾದದ ಮಹತ್ವವೇನು, ಅನುವಾದಕ/ಕಿಯಲ್ಲಿ ಇರಬೇಕಾದ ಪ್ರತಿಭೆಯೇನು, ಪಾಂಡಿತ್ಯವೇನು, ಗುಣಗಳೇನು, ಸೃಜನಶೀಲತೆಯೇನು-ಈ ಯಾವುದರ ಗೊಡವೆಯೂ ಇಲ್ಲದೆ ಸಾಹಿತ್ಯಲೋಕದಲ್ಲಿ ಅನುವಾದಕರಿಗೆ ಮೂಲ ಲೇಖಕರ ನಂತರದ ಸ್ಥಾನ ಕೊಡುವ ಹುನ್ನಾರ ಎಂದಿನಿಂದಲೂ ನಡೆಯುತ್ತಲೇ […]

ಪ್ರತಿಮೆಗಳ ಭಾರಕ್ಕೆ ಹೊಯ್ದಾಡುವ ರೂಪ(ಕ)ಗಳು

ಪ್ರತಿಮೆಗಳ ಭಾರಕ್ಕೆ ಹೊಯ್ದಾಡುವ ರೂಪ(ಕ)ಗಳು 80ರ ದಶಕದ ಆಚೀಚಿನ ವರ್ಷಗಳಲ್ಲಿ ಕನ್ನಡ ಸಾಹಿತ್ಯದಲ್ಲಿ ಫಿಲಾಸಫಿಗಳ ಗುಂಗು ಶುರುವಾಯಿತು. ಇದ್ದಕ್ಕಿದ್ದ ಹಾಗೆ ರಜನೀಶ್, ಬುದ್ಧ, ಜಿಡ್ಡು ಕೃಷ್ಣಮೂರ್ತಿ, ಯೂಜಿ ಮುಂತಾದವರು ಪ್ರಚಾರಕ್ಕೆ ಬಂದರು. ಇವರೆಲ್ಲ ಹೇಳಿದ್ದನ್ನು ಕತೆಗಳಲ್ಲೂ ಕವನಗಳಲ್ಲೂ ಲೇಖನಗಳಲ್ಲೂ ತಂದು ಕೊನೆಗೆ ಆ ಹೆಸರುಗಳನ್ನು ಕೇಳಿದರೆ ಕಿರಿಕಿರಿಯಾಗುವಂತೆ ಮಾಡುವಲ್ಲಿ ನಮ್ಮ ಲೇಖಕರೂ ಸಾಹಿತಿಗಳೂ ಯಶಸ್ವಿಯಾದರು.ಈಗಲೂ ಕೆಲವರು ಲೋಹಿಯಾವಾದವನ್ನು ಮತ್ತೆ ಕೆಲವರು ಅಂಬೇಡ್ಕರರನ್ನೂ ಕೆಲವರು ಗಾಂಧಿಯನ್ನೂ ಹೀಗೇ ಬಳಸುತ್ತ, ಬೆದಕುತ್ತ ತಮ್ಮ ಬರವಣಿಗೆಗೆ ಬಳಸುತ್ತ ಆ ಅಂಥವರ ಹೆಸರನ್ನೇ […]

ದಿಕ್ಸೂಚಿ

ಸೋಲಿನ ಸುಳಿಯಲ್ಲೇ ಗೆಲುವಿನ ತುದಿಯಿದೆ! ಎಷ್ಟೆಲ್ಲ ಅನುಭವಗಳ ಮೂಟೆಯನ್ನು ಬೆನ್ನಿಗೆ ಕಟ್ಟಿಕೊಂಡು ತಿರುಗಿದರೂ ಗೆಲುವು ಮಿಂಚಿನಂತೆ ಅರೆಗಳಿಗೆ ಮಿಂಚಿ ಮಾಯವಾಗುತ್ತದೆ.ಇಲ್ಲಿ ಎಲ್ಲದರಲ್ಲೂ ಒತ್ತಡ. ಯಾವುದೂ ಸರಳ ರೇಖೆಯಲ್ಲಿ ಸಿಗುವುದಿಲ್ಲ. ಎಲ್ಲವನ್ನೂ ವಕ್ರ ರೇಖೆಯ ಕಾಣದ ತಿರುವುಗಳಲ್ಲಿ  ಶ್ರಮ ಹಾಕಿಯೇ ಪಡೆಯಬೇಕು.ಕೆಲವೊಮ್ಮೆ ಶ್ರಮ ಹಾಕಿದರೂ ಮುಖ ಎತ್ತಿಯೂ ನೋಡದೇ, ಬೆನ್ನು ತೋರಿಸಿ ನಗುತ್ತದೆ. ಕೈಗೆ ಸಿಗದೇ ಓಡಿ ಬಿಡುತ್ತದೆ ಗೆಲುವು! ಒಮ್ಮೊಮ್ಮೆ ನನಗೇ ತಿಳಿಯದಂತೆ ಮೇಲಕ್ಕೆತ್ತರಿಸಿ ಕೂರಿಸುತ್ತದೆ. ಮತ್ತೊಮ್ಮೆ ನಿರೀಕ್ಷಿಸಿದರೂ ಕೈಗೆ ಸಿಗದೇ ಕೆಳಕ್ಕೆ ಎಸೆದು ಬಿಡುತ್ತದೆ. ಹೆದರಿಸಿ  […]

ಮುಖಾಮುಖಿ

“ಏಕತಾನತೆಗೆ ಬೇಸತ್ತಾಗ ಕವಿತೆ ಕೈಹಿಡಿಯುತ್ತದೆ” “ಪೋಯಟ್ರಿ ಇಸ್ ಅನ್ ಎಸ್ಕೇಪ್ ಪ್ರಾಮ್ ಪರ್ಸನಾಲಿಟಿ” ನಾಗರೇಖಾ ಗಾಂವಕರ್ ನಾಗರೇಖಾ ಗಾಂವ್ಕರ್ ಅಂಕೋಲಾ ತಾಲೂಕಿನ ಆಡ್ಲೂರು ಗ್ರಾಮದವರು. ನಾಗರೇಖಾ ಅವರು ದಾಂಡೇಲಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಂಗ್ಲಾಭಾಷಾ ಉಪನ್ಯಾಸಕಿ. ಏಣಿ, ಪದಗಳೊಂದಿಗೆ ನಾನು, ಬರ್ಫದ ಬೆಂಕಿ ಎಂಬ ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಪಾಶ್ಚಿಮಾತ್ಯ ಸಾಹಿತ್ಯ ಲೋಕ ಭಾಗ-೧,೨ ನ್ನು ಸಹ ಪ್ರಕಟಿಸಿದ್ದಾರೆ. ಕತೆಗಳನ್ನು ಸಹ ಬರೆಯುವ ಇವರು, ಕೆಲ ಕತಗಳಿಗೆ ಬಹುಮಾನ ಸಹ ಪಡೆದಿದ್ದಾರೆ. ಕನ್ನಡ ಕವಿಗಳ ಕವಿತೆಗಳನ್ನು ಆಂಗ್ಲಭಾಷೆಗೆ […]

Back To Top