Category: ಅಂಕಣ

ಅಂಕಣ

ಕಬ್ಬಿಗರ ಅಬ್ಬಿ – ಸಂಚಿಕೆ -7 ಕಾವ್ಯ, ವಾಸ್ತವ ಮತ್ತು ‌ವಿಜ್ಞಾನಗಳು ಮುಖಾಮುಖಿಯಾದಾಗ ಕಾವ್ಯ, ವಾಸ್ತವ ಮತ್ತು ‌ವಿಜ್ಞಾನಗಳು  ಮುಖಾಮುಖಿಯಾದಾಗ ಓಹ್! ನಮಸ್ಕಾರ ಸಾರ್!.. ಬನ್ನಿ..ಬನ್ನಿ.. ಹೀಗೆ ಬನ್ನಿ! ಇದೇ ನೋಡಿ! ನಮ್ಮ ಕವಿಗಳ ಮನೆಯ ಡ್ರಾಯಿಂಗ್ ರೂಂ,  ಎಷ್ಟು ವಿಶಾಲವಾಗಿದೆ ಅಲ್ವಾ. ಕೆಲವೇ ಕೆಲವು ಪೀಠೋಪಕರಣಗಳು, ಅವರಿವರು ಬಂದಾಗ, ಮುಖಕ್ಕೆ ಮುಖ ಕೊಟ್ಟು ಮಾತಾಡಲು, ಕೆಲವೊಮ್ಮೆ ಮುಖವಾಡ ತೊಟ್ಟು ಮಾತಾಡಲೂ. ಸ್ವರಗಳು ಕಂಪಿಸುವ ಮಾತುಗಳು, ಸ್ವರಗಳು ಸರೀಸೃಪದ ಹಾಗೆ ಹರಿದಾಡುವ ಮಾತುಗಳು, ಹಾವಿನಂತೆ ಬುಸುಗುಟ್ಟುವ ಮಾತುಗಳು, […]

ಹೆಣ್ಣೊಡಲಾಳದ ನೋವಿನ ದನಿಗಳು ಅಂಕಣ ಬರಹ ಊರ ಒಳಗಣ ಬಯಲುಲೇಖಕಿ-ವಿನಯಾಪ್ರಕಾಶಕರು- ಛಂದ ಪುಸ್ತಕಬೆಲೆ-೪೦/-              ನಮ್ಮ ಮನೆಯಿಂದ ಒಂದುವರೆ ಕಿ.ಮಿ ಹೋದರೆ ಗಂಗಾವಳಿ ನದಿ ಸಮುದ್ರಕ್ಕೆ ಸೇರುವ ಸ್ಥಳ ಬರುತ್ತದೆ. ಅಲ್ಲಿಯೇ ಸ್ವಲ್ಪ ಹಿಂದೆ ಗಂಗಾವಳಿ ನದಿಯನ್ನು ದಾಟಿಸುವ ಸ್ಥಳವಿದೆ. ಮೊದಲೆಲ್ಲ ದೋಣಿಯಲ್ಲಿ ದಾಟಿಸುತ್ತಿದ್ದರು. ಈಗ ದೊಡ್ಡದೊಂದು ಬಾರ್ಜು ಬಂದಿದೆ. ಮಕ್ಕಳಿಗೆ ಒಂದು ಚಂದದ ಅನುಭವವಾಗಲೆಂದು ಕೆಲವೊಮ್ಮೆ ಅಲ್ಲಿಂದ ಬಾರ್ಜಿನಲ್ಲಿ ದಾಟಿ ಸಮೀಪದ ಮಾಸ್ಕೇರಿ ಎಂಬ ಊರಿಗೆ ಹೋಗಿ ಬರುವುದೂ […]

ಅಂಕಣ ಬರಹ ಹೂವು ಹೊರಳುವ ಹಾದಿ ಬಾಲ್ಕನಿ ಎಂದಾಗಲೆಲ್ಲ ನನಗೆ ಹೂವಿನ ಕುಂಡಗಳು ನೆನಪಾಗುತ್ತವೆ. ಪುಟ್ಟಪುಟ್ಟ ಕುಂಡಗಳ ಕೆಂಪು ಗುಲಾಬಿ, ಗುಲಾಬಿ ಬಣ್ಣದ ನುಣುಪಾದ ಕುಂಡಗಳಲ್ಲರಳಿದ ದುಂಡು ಮಲ್ಲಿಗೆ, ದುಂಡನೆಯ ಕುಂಡದಲ್ಲೊಂದು ಹಸುಗೂಸಿನಂಥ ಮೊಳಕೆ, ಮೊಳಕೆಯೊಂದು ಮೊಗ್ಗಾಗುವ ಪ್ರಕ್ರಿಯೆ ಹೀಗೆ ಹೂಗಳ ದೊಡ್ಡದೊಂದು ಪ್ರಪಂಚವೇ ಪುಟ್ಟ ಬಾಲ್ಕನಿಯಲ್ಲಿ ಎದುರಾಗುತ್ತದೆ. ಅರಳಿಯೂ ಅರಳದಂತಿರುವ ಕೆಂಪು ದಾಸವಾಳ ಬೆಳಗನ್ನು ಸ್ವಾಗತಿಸಿದರೆ, ಮುಳುಗುವ ಸೂರ್ಯನನ್ನು ಮಲ್ಲಿಗೆಯ ಪರಿಮಳ ಬೀಳ್ಕೊಡುತ್ತದೆ; ಮಧ್ಯರಾತ್ರಿಯಲ್ಲಿ ಅರಳಿದ ಬ್ರಹ್ಮಕಮಲಗಳೆಲ್ಲ ಚಂದಿರನಿಗೆ ಜೊತೆಯಾಗುತ್ತವೆ. ಸಮಯ ಸಿಕ್ಕಾಗ ಹೂಬಿಡುವ ನಾಗದಾಳಿ, […]

“ಭವ”ದ ಬಂಧಗಳಲ್ಲೇ ಅರಳಿದ ಸಾರ್ಥಕ ಸಾಲುಗಳು

“ಭವ”ದ ಬಂಧಗಳಲ್ಲೇ ಅರಳಿದ ಸಾರ್ಥಕ ಸಾಲುಗಳು ಫೇಸ್ಬುಕ್ಕಿನ ತುಂಬ ಹರಡುವ ಪದ್ಯದ ಘಮಲಿಗೆ ತಮ್ಮ ದನಿಯನ್ನೂ ಸೇರಿಸಲು ಹಾತೊರೆಯುತ್ತಿರುವ ಅಸಂಖ್ಯ ಕವಿ ಮನಸ್ಸುಗಳ ನಡುವೆ ಕೊಟ್ರೇಶ್ ತಂಬ್ರಳ್ಳಿ ಅಮರಗೋಳಮಠ ಅವರದು ಗಮನಿಸಲೇಬೇಕಾದ ಹೆಸರು. ಸ್ವಲ್ಪ ಹದವೆನ್ನಿಸುವ ಯಾರದೇ ಕವಿತೆಗಳಿಗೆ ತಕ್ಷಣದ ಪ್ರತಿಕ್ರಿಯೆ ನೀಡುವ ಕೊಟ್ರೇಶ್ ಆಗೀಗ ತಮ್ಮ ರಚನೆಗಳನ್ನೂ ಈ ಸಾಮಾಜಿಕ ಜಾಲ ತಾಣದಲ್ಲಿ ಹರಿ ಬಿಟ್ಟು ಪ್ರತಿಕ್ರಿಯೆಗೆ ಕಾಯುತ್ತಾರೆ. ನಿಜಕ್ಕೂ ಚಂದ ಇರುವ ಅವರ ನಿಜದ ರಚನೆಗಳಿಗಿಂತ ತಕ್ಷಣಕ್ಕೆ ಕೋಪ ತರಿಸುವ, ಸ್ವಲ್ಪ ಒರಟೇ ಎನ್ನಿಸುವ […]

ಅಂಕಣ

ಆಗದು ಎಂದು ಹೇಳಲು ಕಲಿಯಿರಿ ಕಲಿಸಿರಿ ಎಲ್ಲದಕ್ಕೂ ಹೂಂ ಎನ್ನುವ ಸ್ವಭಾವ ಬಹಳ ಜನರಲ್ಲಿ ಬೇ ರೂರಿದೆ. ಹೀಗಾಗಿ ಅವರೆಲ್ಲ ಹೌದಪ್ಪಗಳಾಗಿದ್ದಾರೆ.ಪ್ರತಿ ಯೊಂದು ಕೆಲಸಕ್ಕೂ ಹೂಂ ಎಂದು ಒತ್ತಡ ಆತಂಕವನ್ನು ಅನಾಯಾಸವಾಗಿ ತಾವೇ ಮೈ ಮೇಲೆ ಎಳೆದು ಕೊಳ್ಳುತ್ತಾ ರೆ.ಯಾವುದಕ್ಕೂ ಇಲ್ಲ ಎಂದು ಹೇಳಿ ರೂಢಿಯೇ ಇಲ್ಲ. ಇಲ್ಲ ಎಂದು ಹೇಳುವುದು ಅಗೌರವ ಎಂದೇ ಭಾವಿಸಿದ್ದೇ ವೆ.ನನಗೀಗ ತಾವು ಹೇಳಿದ ಕೆಲಸ ಮಾಡಲಾಗುವುದಿಲ್ಲ. ನಾನು ಬೇರೊಂದು ಕಾರ್ಯದಲ್ಲಿ ಮಗ್ನನಾಗಿದ್ದೇನೆ ಎಂದು ಎದುರಿಗಿನವರು ನಮ್ಮನ್ನು ತಪ್ಪಾಗಿ ತಿಳಿಯುತ್ತಾರೆಂದು ನಾವೇ […]

ಮುಖಾಮುಖಿ

ಅಂಕಣ ಬರಹ ಮುಖಾಮುಖಿಯಲ್ಲಿ ರೇಖಾಭಟ್ ನಮ್ಮೊಳಗಿನ ಪ್ರೀತಿ, ಕರುಣೆ, ಮಮತೆಗಳೇ ದೇವರು ರೇಖಾ ಗಜಾನನ ಭಟ್ಟ ವಜ್ರಳ್ಳಿ ಹತ್ತಿರದ ಹೊನ್ನಗದ್ದೆಯವರು. ಯಲ್ಲಾಪುರದ ಕುಂದೂರು ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ. ಇವರ ಪತಿ ಹೈಸ್ಕೂಲ್ ಶಿಕ್ಷಕರು. ಗಾಯನ ಮತ್ತು ಬರವಣಿಗೆ ಇವರ ಹವ್ಯಾಸಗಳು. ಗಜಲ್ ಬರೆಯುವುದರ ಮೂಲಕ ಕನ್ನಡ ಸಾಹಿತ್ಯವನ್ನು ಪ್ರವೇಶಿಸಿದ್ದಾರೆ. ಇವರ ಚೊಚ್ಚಿಲ ಕೃತಿಯನ್ನು ಮಡಿಲ ನಕ್ಷತ್ರವನ್ನು ಅದಿತಿ ಪ್ರಕಾಶನ ಪ್ರಕಟಿಸಿದೆ. ಈ ಕೃತಿಯ ಪ್ರಕಟಣೆಗೆ ಕನ್ನಡ ಪುಸ್ತಕ ಪ್ರಾಧಿಕಾರ ಧನ ಸಹಾಯ ಮಾಡಿದೆ. ಕನ್ನಡದಲ್ಲಿ ಯುವ ಬರಹಗಾರರನ್ನು […]

ಗೆಳೆಯನ ಮಕ್ಕಳು

ಗೆಳೆಯನ ಮಕ್ಕಳು ಅಂಕಣ ಬರಹ ಎಷ್ಟೊ ವರ್ಷಗಳ ಬಳಿಕ ಗೆಳೆಯನ ಮನೆಗೆ ಹೋಗಬೇಕಾಯಿತು. ಅವನೂ ಅವನ ಹೆಂಡತಿಯೂ ಪ್ರೀತಿಯಿಂದ ಬರಮಾಡಿಕೊಂಡರು. ನಾನು ಅವರ ಮನೆ ಹೊಕ್ಕಾಗ ಎಂಟು ವರ್ಷದ ಮಗಳು ಬೊಂಬೆಗೆ ಸೀರೆಯುಡಿಸುತ್ತಿದ್ದಳು. ಹನ್ನೆರಡು ವರುಷದ ಮಗ ಸೋಫಾದಲ್ಲಿ ಮೈಚೆಲ್ಲಿ ಕಾಲನ್ನು ಆಗಸಕ್ಕೆ ಚಾಚಿ ಲ್ಯಾಪ್‍ಟಾಪಿನಲ್ಲಿ ವಿಡಿಯೊ ಗೇಂ ಆಡುತ್ತಿದ್ದ. ಮನೆಗೆ ಬಂದು ಹೋದವರ ಬಗ್ಗೆ ಖಬರಿಲ್ಲದಷ್ಟು ತನ್ಮಯನಾಗಿದ್ದ. ನನ್ನ ಗೆಳೆಯ `ಅಪ್ಪಿ ನೋಡೊ. ನನ್ನ ಕ್ಲಾಸ್‍ಮೇಟ್ ಬಂದಾನ. ಅಂಕಲ್‍ಗೆ ನಮಸ್ಕಾರ ಮಾಡು’ ಎಂದರೂ ಕಣ್ಣೆತ್ತಿ ನೋಡಲಿಲ್ಲ. […]

ಬಾನ್ಸುರಿ ಮತ್ತು ರಾಧೆ

ಕಬ್ಬಿಗರ ಅಬ್ಬಿ – ಸಂಚಿಕೆ -6 ಭೂಪೇಶ್ವರೀ ರಾಗದ ಆಲಾಪದ ಮಂದ್ರಸ್ಥಾಯಿಯ ಸ್ವರಗಳು, ಸಾಯಂಕಾಲದ ಸಾಂದ್ರತೆಯನ್ನು ಜೇನಿನಂತಾಗಿಸಿ, ಧಾರೆಯೆಷ್ಟು ಎಳೆಯಾದರೂ ಕಡಿಯದಂತೆ, ವಾತಾವರಣವನ್ನು ಆರ್ದ್ರವಾಗಿಸಿತ್ತು. ಗಾಯಕನ ( ಒ ಎಸ್. ಅರುಣ್‌) ನಾಭಿಯಿಂದ ಹೊರಟ ಸ್ವರಕಂಪನದ ತರಂಗ, ಎದೆಯನ್ನು ಹೊಕ್ಕು, ಭಾವ ಹೀರಿ, ಕಂಠದಿಂದ ಹೊರಹರಿಯುವಾಗ,  ಆಗಷ್ಟೇ ಸೋನೆ ಮಳೆ ನಿಂತು, ವಾತಾವರಣದ ತಂಪೊಳಗೂ ಆರ್ದ್ರ ಭಾವ. ಬಾನ್ಸುರಿಯ ದಪ್ಪ ಬಿದಿರಿನ ರಂಧ್ರಗಳಿಂದ ಸ್ವಾತಂತ್ರ್ಯ ಪಡೆದ ನಾದಸೆಲೆ ಅಂತರಂಗದ ಅಂತರ್ನಾದವೇ ಆಗಿತ್ತು. ತಬಲಾದ ಮೇಲೆ ಹೂಪಕಳೆಗಳು ತಡವಿದಂತೆ […]

ಶಬ್ಧಭಾರವಿಲ್ಲದ ಮನದ ಮಾತುಗಳು

ಅಂಕಣ ಬರಹ ಶಾಂತಿ ಬೀಜಗಳ ಜತನಲೇಖಕರು- ಪ್ರಕಾಶ ಖಾಡೆಯಾಜಿ ಪ್ರಕಾಶನಬೆಲೆ-೧೨೦ ಶಾಂತಿ ಬೀಜಗಳ ಜತನಲೇಖಕರು- ಪ್ರಕಾಶ ಖಾಡೆಯಾಜಿ ಪ್ರಕಾಶನಬೆಲೆ-೧೨೦ ಜಗತ್ತು ವಿಚಿತ್ರ ಸಂದಿಗ್ಧತೆಯಲ್ಲಿದೆ. ಯಾರನ್ನು ನಂಬುವುದೋ, ಯಾರನ್ನು ಮಿತ್ರರೆನ್ನುವುದೋ ಎನ್ನುವ ದ್ವಂದ್ವ ಎಲ್ಲರನ್ನೂ ಕಾಡುತ್ತಿರುವ ಈ ಹೊತ್ತಿನಲ್ಲಿ ಆತ್ಮೀಯ ಮಿತ್ರರೂ ಶತ್ರುಗಳಾಗಿಬಿಡುವ ವಿಕಲ್ಪತೆಯ ದಿನಗಳಿವು. ನಾವು ಮನುಷ್ಯರೋ ಅಥವಾ ಮನುಷ್ಯ ರೂಪದಲ್ಲಿರುವ ಆತ್ಮ ಸತ್ತ ದೇಹಗಳೋ ಎಂಬ ಅನುಮಾನ ನಮ್ಮನ್ನೇ ಕಾಡುತ್ತಿರುವ ಈ ವಿಚಿತ್ರ ಸನ್ನಿವೇಶದಲ್ಲಿ ಹಿರಿಯ ಕವಿ ಪ್ರಕಾಶ ಖಾಡೆಯವರು ಮಾನವಿಯತೆಯನ್ನು ಹುಡುಕುತ್ತ ಹೊರಡುತ್ತಾರೆ.ಏನೂ ಬೇಡವೆಂದುಮನುಷ್ಯ […]

ಬೆಳಗಾಗ ನಾನೆದ್ದು ಯಾರ್‍ಯಾರ ನೆನೆಯಲಿ ಅಂಕಣ ಬರಹ ಬೆಳಗು ಎನ್ನುವುದೊಂದು ಸುಂದರ ಅನುಭೂತಿ. ಮನೆಯ ಮಾಳಿಗೆಯ ಗಾಜಿನ ಹಂಚಿನಿಂದಲೋ, ಅಪಾರ್ಟ್ಮೆಂಟಿನ ಬಾಲ್ಕನಿಯ ಬಾಗಿಲಿನಿಂದಲೋ, ರಾತ್ರಿಪಾಳಿ ಮುಗಿಸಿ ಮರಳುತ್ತಿರುವ ಕ್ಯಾಬ್ ನ ಕಿಟಕಿಯಿಂದಲೋ ಸಿಕ್ಕಿದ ಅವಕಾಶಗಳನ್ನೆಲ್ಲ ಬಳಸಿಕೊಂಡು ಹುಟ್ಟುವ ಬೆಳಗು ಹೊಸದಿನವೆನ್ನುವ ಹೊಸ ಚೈತನ್ಯವನ್ನು ದೊರಕಿಸಿಕೊಡುತ್ತದೆ. ತುಳಸಿಕಟ್ಟೆಯ ಹೊಸಮಣ್ಣಿನಲ್ಲಿ ಉರಿಯುತ್ತಿರುವ ಅಗರಬತ್ತಿಯ ಪರಿಮಳ ರಸ್ತೆ ದಾಟಿದರೆ, ರಸ್ತೆಯ ತುದಿಯಲ್ಲಿರುವ ಟೀ ಅಂಗಡಿಯ ಘಮ ಮೇನ್ ರೋಡನ್ನು ತಲುಪುತ್ತದೆ; ಬಸ್ ಸ್ಟ್ಯಾಂಡ್ ನಿಂದ ಹೊರಡಲು ರೆಡಿಯಾದ ಬಸ್ಸಿನೊಳಗೆ ಮಲ್ಲಿಗೆಮಾಲೆ ಬಳುಕುವಾಗ, […]

Back To Top