Category: ಅಂಕಣ

ಅಂಕಣ

ಒಳ ಮನಸು ವಿಸ್ತರಿಸಿದ‌ ಕತೆಗಾರ್ತಿ

ಒಳ ಮನಸು ವಿಸ್ತರಿಸಿದ‌ ಕತೆಗಾರ್ತಿ “ಬರವಣಿಗೆ ಮೂಲಕ  ಅಸಹನೀಯ ಮೌನವೊಂದನ್ನು ಮುರಿಯುತ್ತಿದ್ದೇನೆ ಅನಿಸುತ್ತಿದೆ’ ಸುನಂದಾ ಕಡಮೆ ಕತೆಗಾರ್ತಿ  ಸುನಂದಾ ಕಡಮೆ 1967 ರಲ್ಲಿ ಉತ್ತರಕನ್ನಡದ ಅಂಕೋಲಾ ತಾಲೂಕಿನ ಅಲಗೇರಿಯಲ್ಲಿ ಜನಿಸಿದ್ದು.  ಪಕ್ಕದ ಭಾವಿಕೇರಿಯಲ್ಲಿ ಪ್ರೌಢ ಶಿಕ್ಷಣ, ಹುಬ್ಬಳ್ಳಿಯ ಮಹಿಳಾ ಕಾಲೇಜಿನಲ್ಲಿ ಬಿ.ಕಾಂ ಪದವಿಯ ನಂತರ ಕರ್ನಾಟಕ ವಿ.ವಿಯಲ್ಲಿ ಕನ್ನಡ ಎಂ.ಎ. ಸ್ನಾತಕೋತ್ತರ ಪದವಿ ಪಡೆದರು. ಕವಿ ಪ್ರಕಾಶ ಕಡಮೆಯವರೊಂದಿಗೆ  ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ.   ಕಾವ್ಯಾ ಮತ್ತು ನವ್ಯಾ ಎಂಬಿಬ್ಬರು ಮಕ್ಕಳು. 1997ರಲ್ಲಿ ಬರವಣಿಗೆ ಆರಂಭಿಸಿದರು. ಕನ್ನಡ ಸಾಹಿತ್ಯದಲ್ಲಿ ತಮ್ಮದೇ […]

ದಿಕ್ಸೂಚಿ

ಯೋಜನೆಯ ಮೇಲೆ ದೃಷ್ಟಿ ಇರಿಸಿ ದೊಡ್ಡ ಗೆಲುವು ಸಾಧಿಸಿ ಜಯಶ್ರೀ ಜೆ.ಅಬ್ಬಿಗೇರಿ ಇದೀಗ ನಾ ಹೇಳ ಹೊರಟಿರುವುದು ಜಗತ್ಪ್ರಸಿದ್ಧ ತೇನ್ ಸಿಂಗನ ಕಥೆ ಆಗ ಆತ ಇನ್ನೂ ಚಿಕ್ಕವ. ಮನೆಯಂಗಳದಲ್ಲಿ ಕುಳಿತು ಸದಾ ಎವರೆಸ್ಟನ್ನೇ ದಿಟ್ಟಿಸುತ್ತಿದ್ದ. ಪುಟ್ಟ ಬಾಲಕನನ್ನು ಎವರೆಸ್ಟ್ ಪ್ರತಿದಿನವೂ ಪುಳಕಗೊಳಿಸುತ್ತಿತ್ತು. ಆತನನ್ನು ಕಂಡ ತಾಯಿ’ಅದೇಕೋ ದಿನವೂ ಎವರೆಷ್ಟನ್ನೇ ದಿಟ್ಟಿಸಿ ನೋಡುತ್ತಿಯಾ?’ ಎಂದು ಕೇಳಿದಳು.’ಅಮ್ಮಾ ಈ ನನ್ನ ಪುಟ್ಟ ಕಾಲುಗಳಿಂದ ಆ ದೊಡ್ಡ ಹಿಮಪರ್ವತದ ತುದಿಯನ್ನು ಮುಟ್ಟಬಲ್ಲೆನೆ? ಎಂದು ಯೋಚಿಸುತ್ತಿದ್ದೇನೆ.’ ಅದಕ್ಕೆ ತಾಯಿ ‘ಮಗೂ,ಅದು ಯಾವ […]

ಮೂರನೆ ಆಯಾಮ

ಕೈರಳಿಯ ದೇವನಾಡಿನಲ್ಲಿ ರಂಗಪಯಣ ಪುಸ್ತಕದ ಹೆಸರು- ರಂಗ ಕೈರಳಿಲೇಖಕರು- ಶ್ರೀ ಕಿರಣ ಭಟ್ಬೆಲೆ- ೧೫೦/- ಪುಸ್ತಕದ ಹೆಸರು- ರಂಗ ಕೈರಳಿಲೇಖಕರು- ಶ್ರೀ ಕಿರಣ ಭಟ್ಬೆಲೆ- ೧೫೦/- ಕೂಸೆ ಅಡ್ರೆಸ್ ಹೇಳು… ಕಿರಣ ಭಟ್ಟರ ಫೋನ್.ಶ್ರೀದೇವಿ ಕೆರೆಮನೆ, ಹಬ್ಬುವಾಡ, ಕಾರವಾರ ಬರೆದುಹಾಕು ಸಾಕು. ಬರ್‍ತು.ಅಷ್ಟೇ ಸಾಕೇನೆ? ಕೆ.ಎಚ್.ಬಿ ಹಾಕದು ಬ್ಯಾಡ್ದಾ? ರೋಡ್ ನಂಬರ ಹೇಳ್ಬಿಡೆ…ನಿಂಗೆ ಬೇಕರೆ ಕೆ.ಎಚ್.ಬಿ. ಡಿ-೬ ರಸ್ತೆ ಎಲ್ಲ ಹಾಕು. ಹಾಕದಿದ್ರು ಬರ್‍ತು. ಚಿಂತೆ ಮಾಡಡ… ನಾನು ನಗುತ್ತ ಹೇಳಿದೆ.ವರ್ಲ್ಡ್ ಫೇಮಸ್ಸು ಮಾರಾಯ್ತಿ ನೀನು… ನಕ್ಕಿದ್ದರು.ಎಂತಕ್ಕೋ… […]

ಸಂಪ್ರೋಕ್ಷಣ

ಕನಸಿನ ಚಾದರ ಬರಹ-02 ಬಣ್ಣಗಳಂತೆಯೇ ಕನಸುಗಳದ್ದೂ ಒಂದು ಮೋಹಕ ಲೋಕ. ಕನಸು ಕಾಣದ ಅಥವಾ ಕನಸುಗಳೇ ಬೀಳದ ಮನುಷ್ಯರಿಲ್ಲ. ಕನಸು ಬೀಳುವುದು ವಿಜ್ಞಾನ ಅಥವಾ ವೈದ್ಯಕೀಯಕ್ಕೆ ಸಂಬಂಧಪಟ್ಟ ಸಂಗತಿಯಾದರೆ, ಕನಸು ಕಾಣುವುದೊಂದು ಮನಸ್ಥಿತಿ ಅಥವಾ ಭಾವನೆಗಳಿಗೆ ಸಂಬಂಧಪಟ್ಟಿದ್ದು. ರಾತ್ರಿ ಬಿದ್ದ ಕನಸೊಂದು ಬೆಳಿಗ್ಗೆ ಎದ್ದೇಳುವಷ್ಟರಲ್ಲಿ ಮರೆತುಹೋಗುವುದುಂಟು; ಬಾಲ್ಯದ ಅವೆಷ್ಟೋ ಕನಸುಗಳು ಯೌವನಾವಸ್ಥೆಯಲ್ಲಿ ಅಥವಾ ಯೌವನದ ಅವೆಷ್ಟೋ ಕನಸುಗಳು ಬದುಕು ಕಟ್ಟಿಕೊಳ್ಳುವ ಧಾವಂತದಲ್ಲಿ ಮರೆಯಾಗುವುದುಂಟು. ಆದರೆ ಈ ಕನಸಿನ ಪ್ರಕ್ರಿಯೆ ಮಾತ್ರ ನಿರಂತರ. ಕಾಲೇಜಿನ ದಿನಗಳಲ್ಲಿ ಕುಡಿಮೀಸೆಯಂಚಿನಲ್ಲಿ ಸೊಗಸಾಗಿ […]

ಸ್ವಾತ್ಮಗತ

ದೇವನೂರು ಮಹಾದೇವರೂ..! ಮತ್ತವರು ಹುಡುಕಿದ ಹೊಸ ಅಭಿವ್ಯಕ್ತಿ ಕ್ರಮಗಳ ಪ್ರಸ್ತುತತೆಯೂ.!! ದೇವನೂರ ಮಹಾದೇವ ದೇವನೂರ ಮಹಾದೇವ ಅವರು ಹುಟ್ಟಿದ್ದು ಜೂನ್ 10, 1948ರಂದು. ಹಾಗೆಂದು ಅವರ ಬಳಿ ಹೋಗಿ ‘ಹ್ಯಾಪಿ ಬರ್ತ್ ಡೇ ಸಾರ್’ ಅಂತ ಹೇಳಿದರೆ, ‘ಇವನ್ಯಾವನಯ್ಯಾ ಮಿಕ’ ಎಂದು ಗಂಭೀರರಾಗಿಬಿಡುತ್ತಾರೇನೋ ಅನಿಸುತ್ತದೆ. ಅವರು ಮನುಷ್ಯನ ಮೂಲ ಆಳವನ್ನು ತಲುಪದ ಯಾವ ಆಚರಣೆಗಳನ್ನೂ ಒಪ್ಪುವವರಲ್ಲವೇನೋ ಎಂದೆನಿಸುತ್ತಿದೆ. ದೂರದರ್ಶನ ಬಂದ ಪ್ರಾರಂಭದ ದಿನಗಳಲ್ಲಿ ಇರಾನ್, ಇರಾಕ್ ದೇಶಗಳ ಯುದ್ಧಗಳು ಕ್ರಿಕೆಟ್ ಆಟ ನೇರ ಪ್ರಸಾರವಾಗುವಂತೆ ವಾರ್ತೆಗಳಲ್ಲಿ ಪ್ರಸಾರವಾಗುತ್ತಿದ್ದವು. […]

ದಿಕ್ಸೂಚಿ

ಆಲಸ್ಯತನ ಓಡಿಸಿ ಅಚ್ಚರಿಗಳ ಸಾಧಿಸಿ. ಜಯಶ್ರೀ ಜೆ.ಅಬ್ಬಿಗೇರಿ ಕಳ್ಳತನ ಮಾಡಿ ಸಿಕ್ಕಿ ಬಿದ್ದ ವ್ಯಕ್ತಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರು ‘ನಿನ್ನ ಪರವಾಗಿ ಹೇಳುವುದೇನಾದರೂ ಇದ್ದರೆ ಹೇಳಬಹುದು ಎಂದು ಹೇಳಿದಾಗ ಅದಕ್ಕೆ ಆತ “ನ್ಯಾಯಾಧೀಶರೇ, ನನ್ನ ಜೊತೆಗೆ ನನ್ನ ತಂದೆ ತಾಯಿಗೂ ಶಿಕ್ಷೆ ವಿಧಿಸಿ. ಅವರನ್ನೂ ಜೈಲಿಗೆ ಕಳಿಸಿ” ಎಂದ. ನ್ಯಾಯಾಧೀಶರು ಕಾರಣ ಕೇಳಿದಾಗ ಕಳ್ಳ ಹೇಳಿದ “ನಾನು ಚಿಕ್ಕವನಿದ್ದಾಗ ಶಾಲೆಯಲ್ಲಿ ಒಂದು ಪೆನ್ಸಿಲ್ ಕದ್ದೆ. ನಮ್ಮ ತಂದೆ ತಾಯಿಗೆ ಗೊತ್ತಾದರೂ ಅವರು ಏನನ್ನೂ ಹೇಳಲಿಲ್ಲ. ನಂತರ ಬೇರೆ […]

ಅಂಕಣ ಬರಹ

ಸಂಪ್ರೋಕ್ಷಣ ಬಣ್ಣಗಳಲ್ಲದ್ದಿದ ಬದುಕು ಅಂಜನಾ ಹೆಗಡೆ ಬಣ್ಣಗಳೇ ಇರದಿದ್ದರೆ ಜಗತ್ತು ಹೇಗಿರುತ್ತಿತ್ತು ಯೋಚಿಸಿ ನೋಡಿ. ಪುಟ್ಟ ಮಗುವೊಂದು ಬಣ್ಣದ ಬಲೂನುಗಳ ಹಿಂದೆ ಓಡುವ ದೃಶ್ಯವೇ ಕಾಣಸಿಗುತ್ತಿರಲಿಲ್ಲ. ಗಾಳಿಪಟವೊಂದು ಚೂರುಚೂರೇ ನೆಗೆಯುತ್ತ ಆಕಾಶಕ್ಕೆ ಎಗರಿ ಬಣ್ಣದ ಲೋಕವೊಂದನ್ನು ಸೃಷ್ಟಿಸುತ್ತಲೇ ಇರಲಿಲ್ಲ. ಕೆಂಡಸಂಪಿಗೆಗೆ ಕೆಂಡದಂತಹ ಬಣ್ಣವಿರುತ್ತಿರಲಿಲ್ಲ. ಕಾಮನಬಿಲ್ಲೊಂದು ಹುಟ್ಟುತ್ತಲೇ ಇರಲಿಲ್ಲ. ಬಣ್ಣಗಳಿಲ್ಲದಿದ್ದರೆ ಕಲೆ, ಸೌಂದರ್ಯ, ಪ್ರಕೃತಿ ಇವೆಲ್ಲವುಗಳ ಪರಿಕಲ್ಪನೆ ಬೇರೆಯೇ ಏನೋ ಆಗಿರುತ್ತಿತ್ತು. ಅದೇನಾಗಿರಬಹುದಿತ್ತು ಎಂದು ಒಂದು ಸೆಕೆಂಡು ಯೋಚಿಸಿದರೂ ಒಂದಿಷ್ಟು ಬಣ್ಣಗಳೂ ಯೋಚನೆಯೊಂದಿಗೆ ಅಂಟಿಕೊಳ್ಳುತ್ತವೆ.      ಯೋಚನೆಗಳಷ್ಟೇ ಅಲ್ಲದೇ […]

ದಿಕ್ಸೂಚಿ

ವಿಶಾಲ ಗೋಲದೊಳಗೆ ಎಂದೆಂದಿಗೂ ಅನಿಶ್ಚತತೆ ಜಯಶ್ರೀ ಜೆ.ಅಬ್ಬಿಗೇರಿ . ಅನಿಶ್ಚಿತತೆ ಎಂದ ಕೂಡಲೇ ನನಗೆ ನೆನಪಿಗೆ ಬರೋದು ತತ್ವಜ್ಞಾನಿಯೊಬ್ಬನ ಜೀವನದ ನೈಜ ಘಟನೆ.ಆತ ಪ್ರಸಿದ್ಧ ಪಾಶ್ಚಿಮಾತ್ಯ ತತ್ವಜ್ಞಾನಿ ನರ‍್ಮನ್ ಕಸಿನ್ಸ್.ಆತನ ದಿ ಅನಾಟಮಿ‌‌ ಆಫ್ ಇಲ್ನೆಸ್ ಎಂಬ ಗ್ರಂಥ ತುಂಬಾ ಪ್ರಸಿದ್ಧಿಯನ್ನು ಹೊಂದಿದೆ.ಇಂಥ ಸಾಧಕನಿಗೆ ರಕ್ತ ಕ್ಯಾನ್ಸರ್ ಎಂದು ಗೊತ್ತಾಯಿತು.ಇದನ್ನು ಕೇಳಿ ಆತನಿಗೆ ಬರಸಿಡಿಲು ಬಡಿದಂತಾಯಿತು.ಆದರೆ ಅವನು ತನ್ನ ಮನೋಭಾವನೆ ಯಿಂದ ಅದನ್ನು ಗುಣಪಡಿಸಿಕೊಳ್ಳಬೇಕೆಂದು ನಿರ್ಧರಿಸಿದ ಹಾಸ್ಯ ಚಲನಚಿತ್ರಗಳನ್ನು ನೋಡತೊಡಗಿದ.ಸುಮಾರು ೫೦೦ ಹಾಸ್ಯ ಚಲನಚಿತ್ರಗಳನ್ನು ನೋಡಿದ್ದರ ಪರಿಣಾಮ […]

ಸ್ವಾತ್ಮಗತ

ಬಾಳಾಸಾಹೇಬ ಲೋಕಾಪುರ ಬಾಳಾಸಾಹೇಬ ಲೋಕಾಪುರ ಅವರ ಸಾಹಿತ್ಯ ಕೃಷಿಯೂ..!ಮತ್ತವರ ಉಧೋ ಉಧೋ ಎನ್ನುವ ಉತ್ತರ ಕರ್ನಾಟಕದ ಭಾಷೆಯೂ.!! ಬಾಳಾಸಾಹೇಬ ಲೋಕಾಪುರ ಇವರು ನವ್ಯೋತ್ತರ ಸಾಹಿತಿಗಳು. ಬಾಗಲಕೋಟದ ಸಕ್ರಿ ಕಾಲೇಜಿನಲ್ಲಿ ಭೂಗೋಳ ಶಾಸ್ತ್ರದ ಉಪನ್ಯಾಸಕರಾಗಿದ್ದಾರೆ… ಇವರ ಕೃತಿಗಳು ಹೀಗಿವೆ– ಕಥಾಸಂಕಲನಗಳು– ಕವಣಿಗಲ್ಲು,ಹಾರುವ ಹಕ್ಕಿ ಮತ್ತು ಆಕಾಶ,ತನು ಕರಗದವರಲ್ಲಿ,ಕಂಗಳು ತುಂಬಿದ ಬಳಿಕ, ಇವರ ಕಾದಂಬರಿಗಳು– ಉಧೊ ಉಧೊಹುತ್ತಬಿಸಿಲುಪುರನೀಲಗಂಗಾ. ಇವರ ಕವನ ಸಂಕಲನಗಳು– ಭ್ರಮರಂಗೆ. ಇವರು ಪಡೆದ ಪ್ರಸಸ್ತಿಗಳು– ಕನ್ನಡ ಸಾಹಿತ್ಯ ಅಕಾಡಮಿ ಪ್ರಸಸ್ತಿಚದುರಂಗ ಪ್ರಸಸ್ತಿಹೀಗೆ ಹತ್ತು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ […]

ಆರೋಗ್ಯ ಅರಿವು

ಆಗಾಗ್ಗೆ ಹಿಂತಿರುಗಿ ನೋಡಬೇಕು… ಡಾ ವಿಜಯಲಕ್ಷ್ಮಿ ( ರಮಾ) ಪುರೋಹಿತ “ಆಗಾಗ್ಗೆ ಹಿಂತಿರುಗಿ ನೋಡಬೇಕುಭವಿಷ್ಯದ ಹಾದಿಯಲ್ಲಿ ಸಾಗುತ್ತ. ಆರೋಗ್ಯದ ಸಂರಕ್ಷಣೆ ಪ್ರತಿಯೊಬ್ಬ ಮನುಷ್ಯನ ಮಹದಾಸೆ ಏನಾದರೂ ಸಾಧಿಸಬೇಕೆಂಬ ಉತ್ಕಟ ಬಯಕೆ ಇದ್ದೇ ಇರುತ್ತದೆ.ಅದು ಸಂತೋಷಕರ ಸಂಗತಿಯೇ.ಈ ಕಾಲದಲ್ಲಿಯ ಜೀವನ ಆನಂದಮಯ ಹಾಗೂ ತೃಪ್ತಿಕರವಾಗಿರದೇ ಎಲ್ಲೊ ಕಳೆದುಕೊಂಡಹಾಗೆ,ಏನೊ ಹುಡುಕುತ್ತಿರುವ ಹಾಗೆ ಬಹಳ ಜನರನ್ನು ಕಾಣುತ್ತೇವೆ.ಯಾವದರಲ್ಲಿಯೂ ಸಮಧಾನ ಇಲ್ಲ.ಇನ್ನು ಕೆಲವರಿಗಂತೂ ಭಯವೇ ಜೀವನದಲ್ಲಿ ಆವರಿ ಸಿದೆ.ಚಿಕ್ಕವರಿಗೆ ಶಾಲಾ,ಕಾಲೇಜಿನಲ್ಲಿ ಅಂಕಗಳಿಸುವ ತುಡಿತವಿದ್ದರೆ,ಯುವಕರಿಗೆ ಜೀವನೋಪಾಯದ ಚಿಂತೆ  ವಯಸ್ಕರಿಗೆ ಅನಾರೋಗ್ಯದ ಛಾಯೆ ಅಷ್ಟೇ ಅಲ್ಲದೇ […]

Back To Top