Category: ಅಂಕಣ

ಅಂಕಣ

ಅಂಕಣ ಬರಹ ಅಂಜನಾ ಬರೆಯುತ್ತಾರೆ ಜಗಲಿಯೆನ್ನುವ ಮೊದಲಪ್ರೇಮ ಸೂರ್ಯ ಮೂಡುವ ಹೊತ್ತು ಬರಿಗಾಲಲ್ಲಿ ಒಮ್ಮೆ ಅಂಗಳಕ್ಕಿಳಿದು ನೋಡಿ. ಮಣ್ಣಿನೊಂದಿಗಿನ ಮೊದಲಪ್ರೇಮದ ಸ್ಪರ್ಶ ಅಂಗಾಲುಗಳನ್ನು ತಾಕಿ ಹೃದಯವನ್ನು ಸೋಕುತ್ತದೆ; ಬಾಗಿಲುಗಳಾಚೆ ಬಂದು ಸುರಿವ ಮಳೆಗೆ ಒಮ್ಮೆ ಮುಖವನ್ನೊಡ್ಡಿ ನೋಡಿ. ಮಳೆಯೊಂದಿಗಿನ ಮೊದಲಪ್ರೇಮದ ಸುಖ ಮುಂಗುರುಳನ್ನು ತೋಯಿಸಿ ಹನಿಹನಿಯಾಗಿ ನೆಲಕ್ಕಿಳಿಯುತ್ತದೆ; ಒಂದು ಏಕಾಂತದ ಸಂಜೆಯಲ್ಲಿ ಸದ್ದಿಲ್ಲದೆ ಅರಳುತ್ತಿರುವ ಜಾಜಿಯ ಮೊಗ್ಗುಗಳನ್ನು ಅಂಗೈಯಲ್ಲಿ ಹಿಡಿದು ನೋಡಿ. ಪರಿಮಳದೆಡೆಗಿನ ಮೊದಲಪ್ರೇಮದ ಭಾವ ಇಂದ್ರಿಯಗಳ ಹಂಗು ತೊರೆದು ಗಾಳಿಯೊಂದಿಗೆ ತೇಲಿ ಹಗುರಾಗುತ್ತದೆ. ಮೃದುವಾದ ಪುಟ್ಟಪುಟ್ಟ […]

ಎ.ಕೆ.ರಾಮಾನುಜನ್ ಅವರ ಆಯ್ದ ಪ್ರಬಂಧಗಳು ಎ.ಕೆ.ರಾಮಾನುಜನ್ ಅವರ ಆಯ್ದ ಪ್ರಬಂಧಗಳು                ಅನುವಾದ : ಓ.ಎಲ್. ನಾಗಭೂಷಣÀ ಸ್ವಾಮಿ ಅನುವಾದ : ಓ.ಎಲ್. ನಾಗಭೂಷಣÀ ಸ್ವಾಮಿ ಪ್ರ: ಮನೋಹರ ಗ್ರಂಥಮಾಲಾ ಪ್ರ.ವರ್ಷ :೨೦೧೨ ಬೆಲೆ : ರೂ.೨೦೦.೦೦ ಪುಟಗಳು: ೩೫೦ ಕನ್ನಡದವರೇ ಆಗಿದ್ದರೂ ಇಂಗ್ಲಿಷ್‌ನಲ್ಲೇ ತಮ್ಮ ಪ್ರಮುಖ ಸಾಹಿತ್ಯ ಕೃತಿಗಳನ್ನು ರಚಿಸಿದ ಎ.ಕೆ.ರಾಮಾನುಜನ್ ಅವರು ಸಾಹಿತ್ಯ, ಭಾಷೆ, ಸಂಸ್ಕೃತಿ ಚಿಂತನೆ, ತೌಲನಿಕ ಅಧ್ಯಯನ ಮೊದಲಾದ ಹಲವಾರು ಮಹತ್ವದ ವಿಚಾರಗಳ ಕುರಿತಾಗಿ ಬರೆದ ಪ್ರಬಂಧಗಳನ್ನು  ಓ.ಎಲ್. ನಾಗಭೂಷಣ ಸ್ವಾಮಿಯವರು […]

ಸಹಜ ನಡಿಗೆಯ ರುದ್ರ ನರ್ತನದ ಭಾವಗಳಂತೆ ಕುಮಾರ್ ಹೊನ್ನೇನಹಳ್ಳಿ‌ ಪದ್ಯಗಳು . ಕುಮಾರ್ ಹೊನ್ನೇನಹಳ್ಳಿ ವೃತ್ತಿಯಿಂದ ಶಿಕ್ಷಕ ಮತ್ತು ಶಿಕ್ಷಕರ ತರಬೇತುದಾರ ಅಂದರೆ ರಿಸೋರ್ಸ್ ಪರ್ಸನ್. ಅವರ ವೃತ್ತಿಯ ಕಾರಣ ಅಂದರೆ ಸಂಪನ್ಮೂಲ ವ್ಯಕ್ತಿಯಾಗಿರುವ ಕಾರಣ ಜಗತ್ತಿನ ಸಮಸ್ತ ಆಗು ಹೋಗುಗಳ ಅರಿವು ಮತ್ತು ಅಂಥ ಸಂಗತಿಗಳು ಒಟ್ಟೂ ಸಮಾಜದ ಮೇಲೆ ಬೀರುವ ಪರಿಣಾಮಗಳನ್ನೂ ಪ್ರಮಾಣಗಳನ್ನೂ ಆನುಷಂಗಿಕವಾಗಿ ಅವರು ಪ್ರಸ್ತಾಪಿಸದೇ ಅನ್ಯ ಮಾರ್ಗಗಳು ಇರುವುದಿಲ್ಲ. ಹಾಗಾಗಿಯೇ ಏನೋ ಇವರ ಕವಿತೆಗಳಲ್ಲಿ ಐತಿಹಾಸಿಕ ವ್ಯಕ್ತಿಗಳೂ ವರ್ತಮಾನದ ಸಂಗತಿಗಳೂ ಆಗೀಗ […]

ಏಕಾಗ್ರತೆಯ ಬೆನ್ನೇರಿ ಗೆಲುವಿನ ನಗೆ ಬೀರಿ ಅಯ್ಯೋ! ನನ್ನ ಎಲ್ಲ ಕೆಲಸಗಳು ಅರ್ಧಂಬರ್ಧ. ಯಾವುದೂ ಪೂರ್ಣ ಮಾಡೋಕೆ ಆಗುತ್ತಿಲ್ಲ ಏಕಾಗ್ರತೆ ಇಲ್ಲದೇ ನನಗೆ ಅಡಚಣೆ ಆಗ್ತಿದೆ.ಇದನ್ನು ಸಾಧಿಸೋದು ಹೇಗೆ ತಿಳಿಯುತ್ತಿಲ್ಲ? ಎನ್ನುವುದು ಇತ್ತೀಚಿನ ಅನೇಕ ವಿದ್ಯಾರ್ಥಿಗಳ ಮತ್ತು ದಾವಂತದ ಬದುಕಿನಲ್ಲಿ ಕಾಲು ಹಾಕುತ್ತಿರುವ ಬಹುತೇಕ ಜನರ ದೊಡ್ಡ ದೂರು. ಏಕಾಗ್ರತೆಯಿಲ್ಲದೇ ಯಾವುದೇ ಕೆಲಸ ಮಾಡಲು ಆಗುವುದಿಲ್ಲ. ಹೀಗಾಗಿ ಎಲ್ಲದರಲ್ಲೂ ವೈಫಲ್ಯತೆಯ ನೋವು ಕಾಡುತ್ತದೆ. ಒತ್ತಡದ ಕೂಪದಲ್ಲಿ ಬಿದ್ದವರೆಲ್ಲ ಸುಲಭವಾಗಿ ಏಕಾಗ್ರತೆಯನ್ನು ಕಳೆದುಕೊಂಡು ನರಳುತ್ತಾರೆ. ಯಾವುದೇ ಒಂದು ನಿರ್ದಿüಷ್ಟ […]

ಮನುಷ್ಯತ್ವ, ನಂಬಿಕೆಗಳ ಜಾಗವನ್ನು ಇಂದು ಹಣ ಆಳುತ್ತಿದೆ’ ಎಂ.ಟಿ.ನಾಯ್ಕ ಶಿಕ್ಷಕ, ಕವಿ  ಎಂ.ಟಿ.ನಾಯ್ಕ ಕುಮಟಾ ತಾಲ್ಲೂಕಿನ ಹೆಗಡೆ. ಹೈಸ್ಕೂಲ್ ಹಂತದಿಂದಲೇ ಬರವಣಿಗೆ ಪ್ರಾರಂಭಿಸಿದವರು. ತಾಲ್ಲೂಕು, ಜಿಲ್ಲಾ ಸಾಹಿತ್ಯ ಸಮ್ಮೇಳನಗಳಲ್ಲಿ ಕಾವ್ಯ ವಾಚನ, ಆಕಾಶವಾಣಿ ಧಾರವಾಡ ಮತ್ತು ಕಾರವಾರ ಕೇಂದ್ರಗಳಲ್ಲಿ ಸುಮಾರು ಐದು ಬಾರಿ ಕಾವ್ಯವಾಚನ ಮಾಡಿದ್ದಾರೆ. ಕ್ರೈಸ್ಟ್ ಕಾಲೇಜು ಬೆಂಗಳೂರು , ಜೆ ಎಸ್. ಎಸ್ ಕಾಲೇಜು ಧಾರವಾಡ ಗಳಲ್ಲಿ ನಡೆದ  ಬೇಂದ್ರೆ ಸ್ಮೃತಿ ಕಾವ್ಯ ಸ್ಪರ್ಧೆಗಳಲ್ಲಿ ಬಹುಮಾನ ಬಂದಿವೆ. ಬೆಂಗಳೂರಿನ  ಸಾಂಸ್ಕೃತಿಕ ಪತ್ರಿಕೆ ` ಸಂಚಯ […]

ಡಾ.ಪಾರ್ವತಿ ಜಿ.ಐತಾಳ್ ಅವರು ಪ್ರತಿ ಮಂಗಳವಾರ ಮತ್ತು ಶುಕ್ರವಾರ ಈ ಅಂಕಣದಲ್ಲಿ ಅನ್ಯವಾಷೆಗಳಿಂದ ಕನ್ನಡಕ್ಕೆಅನುವಾದಗೊಂಡ ಕೃತಿಗಳ ಓದಿಗೆ ಪೂರಕವಾಗಿ ಅವುಗಳ ಪರಿಚಯ ಮಾಡಿಕೊಡಲಿದ್ದಾರೆ ಕೊಸಿಮೊ ಕೊಸಿಮೊ ( ಕಾದಂಬರಿ)ಮೂಲ : ಇಟಾಲೋ ಕಾಲ್ವಿನೊಕನ್ನಡಕ್ಕೆ : ಕೆ.ಪಿ.ಸುರೇಶಪ್ರ : ಅಭಿನವಪ್ರಕಟಣೆಯ ವರ್ಷ : ೨೦೦೮ಬೆಲೆ : ರೂ.೧೦೦ ಪುಟಗಳು : ೨೧೬ ಜಗತ್ಪ್ರಸಿದ್ದ  ಲೇಖಕ ಇಟಾಲೋ ಕಾಲ್ವಿನೋ ಅವರ  ಕಾದಂಬರಿಯ ಇಂಗ್ಲಿಷ್ ಅನುವಾದ ‘ದಿ ಬ್ಯಾರನ್ ಇನ್ ದ ಟ್ರೀಸ್’ ಇದನ್ನು ಸುರೇಶ್ ಅವರು ‘ಕೊಸಿಮೋ’ಎಂಬ ಅದರ ನಾಯಕನ […]

ಅಂಕಣ ಬರಹ ಸಂಗಾತಿಯ ಮೌನ ಪಂಡಿತ್ ರವಿಶಂಕರ್ ನಿಧನರಾದಾಗ ಅವರ ಸಂಗೀತ ಪ್ರತಿಭೆ, ಪ್ರಯೋಗಶೀಲತೆ, ಪ್ರಶಸ್ತಿಗಳನ್ನು ಮೆಚ್ಚುವ ಬರೆಹಗಳು ಪ್ರಕಟವಾದವು. ಕೆಲವು ಪತ್ರಿಕೆಗಳು ಮಾತ್ರ ಅವರ ಖಾಸಗಿ ಬದುಕಿನ ಬಗ್ಗೆ ಬರೆದವು. ಅಲ್ಲಿ ಅವರ ಪ್ರೇಯಸಿಯರ, ಮಡದಿಯರ ಹಾಗೂ ವಿಚ್ಛೇದನಗಳನ್ನು ಕುರಿತ ಮಾಹಿತಿಯಿತ್ತು. ಈ ಲೇಖನಗಳಿಗೆ ರವಿಶಂಕರ್ ಅವರನ್ನು ಬದನಾಮಿ ಮಾಡುವ ಇರಾದೆ ಏನಿರಲಿಲ್ಲ. ಹೆಸರಾಂತ ಕಲಾವಿದರು ವೈಯಕ್ತಿಕ ಜೀವನದಲ್ಲಿ ತಮ್ಮ ಸಂಗಾತಿಗಳನ್ನು ನಡೆಸಿಕೊಂಡ ವಿಶ್ಲೇಷಣೆಯಿತ್ತು. ಇವುಗಳಲ್ಲಿ ರವಿಶಂಕರರ ಮೊದಲ ಪತ್ನಿಯೂ ಗುರು ಉಸ್ತಾದ್ ಅಲ್ಲಾವುದ್ದೀನಖಾನರ ಪುತ್ರಿಯೂ […]

ಕಬ್ಬಿಗರ ಅಬ್ಬಿ -9 ಕನಸು ಕಲಿಸುವ ಕವಿತೆಗಳು ಆಫೀಸ್‌ನಲ್ಲಿ ದಿನವಿಡೀ ದುಡಿದು, ಚಿಂತೆಯ ಗೆರೆಗಳು ಹಣೆಯಲ್ಲಿ ಮೂಡಿ ಮನೆಗೆ ಬಂದಾಗ, ಬಿಸಿ ಬಿಸಿ ಕಾಫಿಯ ಜತೆಗೆ ಭಾವ ಗೀತೆ ಕೇಳುತ್ತೇನೆ. ಕುದಿದು ಕೆನೆಗಟ್ಟಿದ ಮನಸ್ಸನ್ನು ತಣಿಸಿ, ತಂಪು ಐಸ್ ಕ್ರೀಂ ಮಾಡುವ ಶಕ್ತಿ ಈ ಕವಿತೆಗಳಿಗೆ. ಹಾಡು ಕೇಳುತ್ತಾ ಭೃಂಗದ ಬೆನ್ನೇರಿ ಬಂತು ಕಲ್ಪನಾ ವಿಲಾಸ, ಅಂತ ಸ್ಮೃತಿ ಪಟಲದಿಂದ ಅಕ್ಷಿಪಟಲಕ್ಕೆ ಚಿತ್ರಗಳು ಪ್ರೊಜೆಕ್ಟ್ ಆಗಿ, ಕನಸುಗಳಿಗೆ ರೆಕ್ಕೆ ಮೂಡುತ್ತವೆ. ಬದುಕಿನಲ್ಲಿ ವೈಫಲ್ಯಗಳು ಹಲವು. ಆದರೂ ನೂರರಲ್ಲಿ […]

ಅಂಕಪಟ್ಟಿ ಬಾಲ್ಯ ಪುಸ್ತಕ-ಅಂಕಪಟ್ಟಿ ಬಾಲ್ಯಕವಿ- ರವಿರಾಜ ಸಾಗರಪ್ರಕಾಶನ- ಮಾತೋಶ್ರೀ ಈರಮ್ಮ ವಡ್ಡನಕೇರಿ ಪ್ರತಿಷ್ಟಾನ, ಕಮಲಾಪುರಬೆಲೆ-೧೩೦/- ಸ್ಪರ್ಧಾಲೋಕದಿ ಬೇಕೇ ಬೇಕಂತೆತರತರ ಪ್ರಮಾಣ ಪತ್ರಗಳುಕಷ್ಟವಾದರೂ ಮಾಡಲೇ ಬೇಕಂತೆನಾವು ಬಯಸದ ಪಾತ್ರಗಳು    ಇದು ಇಂದಿನ ದಿನಮಾನದ ಎಲ್ಲಾ ಮಕ್ಕಳ ಸಮಸ್ಯೆ. ಮಕ್ಕಳ ಮನಸ್ಸನ್ನು ಯಾರು ಅರ್ಥ ಮಾಡಿಕೊಳ್ಳುತ್ತಾರೆ ಹೇಳಿ? ನಮಗೆ ಹೆಚ್ಚು ಅಂಕಕೊಡುವ ರೋಬೋಟ್ ಬೇಕಿದೆಯೇ ಹೊರತು, ನಮ್ಮಿಂದ ಮುದ್ದಿಸಲ್ಪಟ್ಟು, ನಮ್ಮನ್ನೂ ಪ್ರೀತಿಸುವ ಮಗು ಬೇಕಾಗಿಲ್ಲ. ಎಲ್ಲ ಅಪ್ಪ ಅಮ್ಮಂದಿರಿಂದ ಹಿಡಿದು, ಶಿಕ್ಷಣ ಇಲಾಖೆಯಿಂದ ಹಿಡಿದು ಸಮಾಜದ ಎಲ್ಲರಿಗೂ ಮಗುವಿನ […]

ಅಶ್ವತ್ಥಮರದ ಮೇಲೊಂದು ಗುಬ್ಬಿಗೂಡು ಈ ಮರ-ಗಿಡಗಳದ್ದು ಒಂದು ವಿಸ್ಮಯದ ಲೋಕ. ಒಂದಿಂಚು ಕತ್ತರಿಸಿದರೆ ನಾಲ್ಕಾರು ಟಿಸಿಲೊಡೆದು ಚಿಗುರಿಕೊಳ್ಳುವ ಗಿಡ ಕಣ್ಣೆದುರೇ ಮರವಾಗಿ ಬೆಳೆದುಬಿಡುವ ಪ್ರಕ್ರಿಯೆಯೊಂದು ಅಚ್ಚರಿ ಮೂಡಿಸುತ್ತದೆ. ಆ ಬೆಳವಣಿಗೆಯ ಬೆರಗಿನ ಲೋಕದಲ್ಲಿ ದಿನಕ್ಕೊಂದು ಹೊಸ ನೋಟ, ನೋಟದಲೊಂದಿಷ್ಟು ಹೊಸ ಅನುಭವಗಳು ಅವಿತು ಕುಳಿತಿರುತ್ತವೆ. ಹಾಗೆ ಅಡಗಿ ಕುಳಿತ ಅನುಭವಗಳೆಲ್ಲ ಸಮಯ ಸಿಕ್ಕಾಗ ಗಾಳಿ-ಬೆಳಕು-ನೆರಳುಗಳೊಂದಿಗೆ ಮಾತುಕತೆ ನಡೆಸುತ್ತ, ಮಳೆಗೊಂದು ಕೊಡೆ ಹಿಡಿದು ಚಲಿಸುತ್ತ ತಮ್ಮ ಇರುವಿಕೆಯನ್ನು ಗಟ್ಟಿಗೊಳಿಸಿಕೊಳ್ಳುತ್ತವೆ. ಗಾಳಿಯೊಂದಿಗೆ ಹಾರಿಬಂದ ಧೂಳಿನ ಕಣವೊಂದು ಎಲೆಯನ್ನಾಶ್ರಯಿಸಿದರೆ, ಬೆಳಕಿನೊಂದಿಗೆ ಬಿಚ್ಚಿಕೊಳ್ಳುವ […]

Back To Top