Category: ಅಂಕಣ

ಅಂಕಣ

ಹೊತ್ತಾರೆ

ಅಮೇರಿಕಾದಿಂದ ಅಶ್ವಥ್ ಬರೆಯುತ್ತಾರೆ ಅಶ್ವಥ್ ಅಕ್ಕಯ್ಯನೆಂಬ ಯಶೋಧೆ ನಾನು ಆಗತಾನೇ ಬೈಕಿನಿಂದಿಳಿದು ಹೆಲ್ಮೆಟ್ ತೆಗೆಯುತ್ತಿದ್ದೆ. ಹೊಲದ ಕಡೆ ಹೊರಟಿದ್ದ ರಂಗಪ್ಪಣ್ಣ ನನ್ನನ್ನು ನೋಡಿ ತಕ್ಷಣ ಗುರುತಿಸಲಾಗದೇ, ಹಾಗೆಯೇ ಸ್ವಲ್ಪ ಹೊತ್ತು ನಿಂತರು. “ ಓಹೋಹೋಹೋಹೋ… ಏನ್ ಅಳಿಮಯ್ಯಾ, ಅಪ್ರೂಪದಂಗೆ….. ಎಷ್ಟೊಂದ್ ವರ್ಷ ಆಗಿತ್ತಲ್ಲ ನಿಮ್ಮನ್ನ ನೋಡಿ, ಹಾಂ?” ಅಂತ ತನ್ನದೇ ರಾಗದಲ್ಲಿ ರಂಗಪ್ಪಣ್ಣ ಮಾತಾಡಿಸಿ ಹೆಗಲಮೇಲೆ ಹೊತ್ತಿದ್ದ ನೇಗಿಲನ್ನೂ ಇಳಿಸದಂತೆ ಹಾಗೆಯೇ ನೋಡುತ್ತಾ ನಿಂತರು. “ಏನ್ ಮಾಡೋದು ರಂಗಪ್ಪಣ್ಣ? ಹೊಟ್ಟೆಪಾಡು, ಊರುಬಿಟ್ಟು ಊರಿಗೆ ಹೋದ ಮೇಲೆ ಅಪರೂಪವೇ […]

ಅವ್ಯಕ್ತಳ ಅಂಗಳದಿಂದ

ಅರಿವು ಅವ್ಯಕ್ತ ಎಲ್ಲಾ ಮಕ್ಕಳ ರಿಸಲ್ಟ್ ಗಳು ಒಂದಾದಮೇಲೊಂದು ಮೆಸೇಜ್ ಗಳಾಗಿ ನನ್ನ ಬಳಿ ಬರುತ್ತಿವೆ, ಕೆಲವು ಮೆಸೇಜ್ ಗಳು, ಕೆಲವು ಮುಖಗಳು, ಪ್ರಸನ್ನತೆಯ ಅಲೆಗಳು, ಸ್ವೀಟಿನ ಡಬ್ಬಗಳು, ಕೃತಜ್ಞತೆಗಳು,ಕಥೆಗಳು ಒಂದಾದಮೇಲೊಂದು ಸಿಹಿ ಸುದ್ದಿಗಳು ಎಳೆ ಎಳೆಯಾಗಿ ಹರಿದುಬಂದರೆ ನನಗೆ ಮಾತ್ರ ಮನಸ್ಸಿನಲ್ಲೊಂದು ಆತಂಕ! ಮುಖದಲ್ಲಿ ನಗುವಿದ್ದರೂ ಬಾಯಿ ತುಂಬಾ ಆಶೀರ್ವಾದಗಳಿದ್ದರೂ ಅವಳ ರಿಸಲ್ಟ್ ಏನಾಯ್ತು?! ಇನ್ನೂ ವಿಷಯ ಬರಲಿಲ್ಲವಲ್ಲ ಎಂಬುದು ಮಾತ್ರ ಮನಸಲ್ಲಿ ಬೇರೂರಿತ್ತು. ಬರುವ ಮಕ್ಕಳನ್ನೆಲ್ಲಾ ಕೇಳುವುದು “ಅವಳ ರಿಸಲ್ಟ್ ಏನಾಯ್ತು?” “ಯಾರಿಗಾದರೂ ಸಿಕ್ಕಿ […]

ಸ್ವಾತ್ಮಗತ

ಪಾಟೀಲ್ ಪುಟ್ಟಪ್ಪನವರಿಗೆ ನೂರರ ಸಂಭ್ರಮ ಕೆ.ಶಿವುಲಕ್ಕಣ್ಣವರ ಟಿಯೆಸ್ಸಾರ್ ಪ್ರಶಸ್ತಿ ಪುರಸ್ಕೃತ, ಪತ್ರಿಕೋದ್ಯಮ ಭೀಷ್ಮ ನಾಡೋಜ ಡಾ.ಪಾಟೀಲ ಪುಟ್ಟಪ್ಪರಿಗೆ ನೂರಾರ ಸಂಭ್ರಮ..! ಪಾಟೀಲ ಪುಟ್ಟಪ್ಪರು 1921ರಿಂದ ಪತ್ರಿಕೋದ್ಯಮವನ್ನು ಕನ್ನಡ ಪರ ಹೋರಾಟಕ್ಕೆ ದುಡಿಸಿಕೊಳ್ಳುತ್ತಿರುವ ಧೀಮಂತ. ಪಾಟೀಲ ಪುಟ್ಟಪ್ಪನವರು ಹುಟ್ಟಿದ್ದು 1921ರಲ್ಲಿ. ಈಗಿನ ಹಾವೇರಿ ಜಿಲ್ಲೆಯ ಕುರುಬಗೊಂಡದಲ್ಲಿ. ತಂದೆ ಸಿದ್ಧಲಿಂಗಪ್ಪ, ತಾಯಿ ಮಲ್ಲಮ್ಮ… ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದ ಅಪರೂಪದ ಪ್ರತಿಭಾವಂತ ಪಾಪು. ಸ್ವಾತಂತ್ರ್ಯ ಬರುವುದಕ್ಕೆ ಒಂದು ವರ್ಷ ಮೊದಲೇ ಪತ್ರಿಕೋದ್ಯಮಕ್ಕೆ ಕಾಲಿಟ್ಟ ಪಾಪು, ಬರಹಗಳು ಅಂದೂ […]

ಸ್ವಾತ್ಮಗತ

ಸಂಕ್ರಾಂತಿಯ ಸಂಭ್ರಮ ಕೆ.ಶಿವು ಲಕ್ಕಣ್ಣವರ ಸೂರ್ಯನ ಉತ್ತರಾಯಣದ ಪರ್ವ ಕಾಲ..! ಸಂಕ್ರಾಂತಿಯ ಆಚರಣೆ ಏಕೆ? ಈ ದಿನ ಎಳ್ಳಿಗೆ ಮಹತ್ವವೇಕೆ.!? ಭೂಮಿ ಮೇಲೆ ನಡೆಯುವ ಎಲ್ಲಾ ಚಟುವಟಿಕೆಗಳಿಗೂ ಸೂರ್ಯನೇ ಆಧಾರ. ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸೂರ್ಯನು ಪ್ರವೇಶಿಸುವ ಕಾಲಕ್ಕೆ ಸಂಕ್ರಾಂತಿ ಅಥವಾ ಸಂಕ್ರಮಣ ಎಂದು ಕರೆಯಲಾಗುತ್ತದೆ… ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ […]

ಹೊತ್ತಾರೆ

ಅಮ್ಮನೂರಿನ ನೆನಪುಗಳು. ಅಮೇರಿಕಾದಿಂದ ಅಶ್ವಥ್ ಸಾಮ್ರಾಜ್ಯ ಪ್ರೈಮರಿ ಸ್ಕೂಲಿನಲ್ಲಿ ವೀರಮಾತೆ ಜೀಜಾಬಾಯಿ ಅನ್ನುವ ಶಿವಾಜಿಯ ಒಂದು ಪಾಠ ಇತ್ತು. ಜೀಜಾಬಾಯಿ ಶಿವಾಜಿಯ ಬಾಲ್ಯದಲ್ಲಿ ಪುರಾಣಕತೆಗಳನ್ನೂ, ವೀರಪುರುಷರ ಸಾಹಸಗಳನ್ನೂ ಬಾಲಕ ಶಿವಾಜಿಗೆ ಮನಮುಟ್ಟುವ ಹಾಗೆ ಪಾಠ ಹೇಳಿಕೊಡುತ್ತಿದ್ದಳು. ಇಂತಹ ವೀರಮಾತೆಯ ಪಾಲನೆಯಲ್ಲಿಯೇ ಬೆಳೆದ ಶಿವಾಜಿ ಒಂದು ದಿನ ತನ್ನ ತಂದೆಯು ಸ್ವಾಭಿಮಾನ ಮರೆತು ಸುಲ್ತಾನರ ಮುಂದೆ ತಲೆಬಾಗಿ ನಮಸ್ಕರಿಸುವುದು ಸಹಿಸಿಕೊಳ್ಳಲಾಗದೇ ತನ್ನದೇ ಸಾಮ್ರಾಜ್ಯವನ್ನು ಸ್ಥಾಪಿಸುವ ಶಪಥ ಮಾಡಿದ್ದನು. ಇದು ಪಾಠದ ಸಾರಾಂಶವಾಗಿತ್ತು. ಮೊದಲನೇ ಸಾರ್ತಿ ಈ ಪಾಠ ಕೇಳಿಸಿಕೊಂಡಾಗ, […]

ಸ್ವಾತ್ಮಗತ

ಪೂರ್ಣವಾಗದ ಸ್ವಾತಂತ್ರ ಹೋರಾಟಗಾರರ ಸ್ಮಾರಕ ಕೆ.ಶಿವು ಲಕ್ಕಣ್ಣವರ ಇನ್ನೂ ಪೂರ್ಣವಾಗಿಲ್ಲ ಹಾವೇರಿಯ ‘ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ವಸ್ತುಸಂಗ್ರಹಾಲಯ’..! 1934ನೇ ಇಸವಿಯಲ್ಲಿ ಗಾಂಧೀಜಿ ಶಿರಸಿ, ಹಾನಗಲ್ ಮೂಲಕ ಹಾವೇರಿ ಪ್ರವಾಸ ಹೊರಟಿದ್ದರು. ಆಗ ನೊಂದ ದಲಿತ ಹೆಣ್ಣು ಮಗಳೊಬ್ಬಳು ಹೋಗುತ್ತಿರುವುದನ್ನು ಗಮನಿಸುತ್ತಾರೆ ಗಾಂಧೀಜಿ. ಆಕೆಯನ್ನು ವೀರನಗೌಡ ಅವರ ಮೂಲಕ ಆಶ್ರಮಕ್ಕೆ ಸೇರಿಸುತ್ತಾರೆ. ಮುಂದೆ ಗಾಂಧೀಜಿ ಸಲಹೆಯಂತೆ ಸಂಗೂರು ಕರಿಯಪ್ಪ ಅವರು ಆ ಹೆಣ್ಣು ಮಗಳನ್ನು ಮದುವೆಯಾಗುತ್ತಾರೆ. ಹೀಗೆ ಸ್ವಾತಂತ್ರ್ಯ ಸಂಗ್ರಾಮದ ಕಾಲಗಟ್ಟ, ಸಮಾನತೆ, ಸಾಮರಸ್ಯವನ್ನೂ ಸಾರುತ್ತಾರೆ… ‘ನಮ್ಮ ನೆಲದಲ್ಲೇ […]

ಅವ್ಯಕ್ತಳ ಅಂಗಳದಿಂದ

ಅವ್ಯಕ್ತ ಕನಸು-ಮನಸು-ನನಸು ಮಕ್ಕಳಲ್ಲಿ ಭವಿಷ್ಯದ ಬಗ್ಗೆ ಬೇರೆ ಬೇರೆ ತರಹದ ನಿಲುವುಗಳು ಇರುತ್ತವೆ. ಕೆಲವರು ಅವರಿಗೆ, ಪ್ರತಿವರ್ಷ ಪರೀಕ್ಷೆಯಲ್ಲಿ ಬರುವ ಅಂಕಗಳನ್ನು ಮನಸ್ಸಲ್ಲಿಟ್ಟುಕೊಂಡು ಅದಕ್ಕೆ ಅನುಕೂಲಕರವಾಗಿ ಮುಂದೋಗ್ತಾರೆ ಇನ್ನು ಕೆಲವರು, ಮನೆಯಲ್ಲಿ ತಂದೆ-ತಾಯಿ ಹೇಳುವುದನ್ನು ಬಿಟ್ಟು ಬೇರೆ ಸ್ವಂತಿಕೆಯನ್ನು ಉಪಯೋಗಿಸುವುದೇ ಇಲ್ಲ. ಇನ್ನು ಮೂರನೇ ತರಹದ ಮಕ್ಕಳು ಯಾವುದೋ ಒಂದು ವಿಷಯದಲ್ಲಿ ಆಕರ್ಷಿತರಾಗಿ ಆ ವಿಷಯದ ವಿಶೇಷ ಗಳನ್ನೆಲ್ಲಾ ತಿಳಿದುಕೊಂಡು, ಅದನ್ನು ಗುರಿಯಾಗಿಟ್ಟುಕೊಂಡು ಹಂತಹಂತವಾಗಿ ಸಾಧಿಸುತ್ತ ಹೋಗೋರು.ಯಾವುದೇ ರೀತಿ ಮಕ್ಕಳಾದರೂ ಅವರಲ್ಲಿ ಆತ್ಮ ವಿಶ್ವಾಸ ಇರುವುದು ಅತಿಮುಖ್ಯ […]

ಸ್ವಾತ್ಮಗತ

ಶಾಂತವೇರಿ ಗೋಪಾಲಗೌಡರು.! ಮಾನವ ಸರಳ-ಸಮಾನತೆಯ, ನಿಮ್ನವರ್ಗದ ನಾಯಕ, ಸ್ವಾತಂತ್ರ್ಯ ಹೋರಾಟಗಾರ, ಸಮಾಜವಾದಿ ಶಾಂತವೇರಿ ಗೋಪಾಲಗೌಡರು.! ಕೆ.ಶಿವು ಲಕ್ಕಣ್ಣವರ ನಾನು ಒಂದಿಷ್ಟು ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಸಮಾಜವಾದಿಗಳ ಬಗೆಗೆ ಬರೆಯುತ್ತಿದಂತೆ ನಮ್ಮ ಎಲ್ಲ ಮಾನವ ಸಮಾನ ಮನಸ್ಕ ಮನುಷ್ಯರ ಬಗೆಗೂ ಒಂದಿಷ್ಟು ಲೇಖನ ಬರೆಯಿರಿ ಎಂದು ಗೆಳೆಯರು ಕಿವಿಮಾತು ಹೇಳಿದರು. ಆಗ ಆ ನಿಟ್ಟಿನಲ್ಲಿ ಯೋಚಿಸಿದಾಗ ಮೊದಲು ಶಾಂತವೇರಿ ಗೋಪಾಲಗೌಡರ ಬಗೆಗೇ ಬರೆಯುವುದೇ ಉತ್ತಮ ಎಂದು ನಮ್ಮ ಶಾಂತವೇರಿ ಗೋಪಾಲಗೌಡರ ಮಾಹಿತಿ ಹೆಕ್ಕಿದೆ. ಇಂತಹ ಸಮಾಜವಾದಿಗಳ ಬಗೆಗೆ ಸಾಕಷ್ಟು […]

ಸ್ವಾತ್ಮಗತ

ಹೈದರಾಬಾದ್ ಕರ್ನಾಟಕ 371ನೆ ಕಲಂ ತಿದ್ದುಪಡಿಯ ಬಗ್ಗೆ ಕೆ.ವು ಲಕ್ಕಣ್ಣವರ ಸಮಗ್ರ ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ೩೭೧ ನೇ ಕಲಂ ತಿದ್ದುಪಡಿ ಮಾಡಲೇಬೇಕು..! ದಕ್ಷಿಣ ಕರ್ನಾಟಕಕ್ಕೆ ಉತ್ತರ ಕರ್ನಾಟಕವೆಂದರೆ ಮುಂಬೈ ಕರ್ನಾಟಕ ಹಿಂದುಳಿದ ಪ್ರದೇಶ. ಇನ್ನೂ ಮುಂಬೈ ಕರ್ನಾಟಕಕ್ಕೆ ಹೋಲಿಸಿದರೆ ಹೈದರಾಬಾದ್ ಕರ್ನಾಟಕ ತೀರಾ ಹಿಂದುಳಿದ ಪ್ರದೇಶವಾಗಿದೆ. ಈ ಕಾರಣಕ್ಕಾಗಿಯೇ ಈ ಹೈದರಾಬಾದ್ ಕರ್ನಾಟಕಕ್ಕೆ ೩೭೧ನೇ ಕಲಂ ಜಾರಿ ಮಾಡಿರುವುದು. ಆದರೆ ಈ ೩೭೧ನೇ ಕಲಂ ಜಾರಿಯಾದರೂ ಈ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಗಗನಕುಸುಮವಾಗಿದೆ. ಈ ಕಾರಣಕ್ಕಾಗಿಯೇ […]

ಅವ್ಯಕ್ತಳ ಅಂಗಳದಿಂದ

ಅವ್ಯಕ್ತ ಸಿಟ್ಟು ಸಿಟ್ಟು ಒಬ್ಬ ಮನುಷ್ಯ ಅಂದಮೇಲೆ ಅವನಿಗೆ ಎಲ್ಲಾತರದ ಭಾವನೆಗಳು ಇರುವುದು ಸಹಜ. ಭಾವನೆಗಳ ಸರಮಾಲೆಯಲ್ಲಿ ಅವನು ತನ್ನನ್ನು ತಾನು ವೈಯಕ್ತಿಕವಾಗಿ, ಮಾನಸಿಕವಾಗಿ ಬೆಳೆಸುತ್ತಾನೆ.ಶಾಲೆಗಳಲ್ಲಿ ಈ ನಿಟ್ಟಿನಲ್ಲಿ ಮಕ್ಕಳ ಮೇಲೆ ಪ್ರಭಾವಗಳು ಕಡಿಮೆಯೇ. ಸಮಯದ ಅಭಾವವೊ, ಹೊಸ ಹೊಸ ಕಾನೂನುಗಳ ಮಧ್ಯಸ್ತಿಕೆಯೊ, ಅಂಕಪಟ್ಟಿ ಹಾಗೂ ಅಂಕಗಳ ನಡುವಿನ ಹೋರಾಟವೋ, ತಿಳಿಯದು. ಹೀಗೆ ಒಬ್ಬ ಭಾವನಾ ಲೋಕದ ತಿರುವುಗಳಲ್ಲಿ ಸಿಲುಕಿಕೊಂಡು ಒದ್ದಾಡುತ್ತಾನೆ.  ಇವನೊಬ್ಬ ಅತಿ ತೆಳು ಮೈಕಟ್ಟಿನ ಸರಳ ಜೀವಿ. ‘ಮಿಸ್’ ‘ಮಿಸ್’ ಎಂದು ಹೇಳಿಕೊಂಡು ಇರುವುದೇ ಒಂದು […]

Back To Top