Category: ಅಂಕಣ

ಅಂಕಣ

ಪೇಟಿಮಾಂತ್ರಿಕ ಬೆಳಗಾವಿಯಲ್ಲಿರುವ ಪಂಡಿತ್ ರಾಮಭಾವು ಬಿಜಾಪುರೆ ಅವರನ್ನು ಕಾಣಬೇಕೆಂದು ನನಗೆ ಅನಿಸಿತು. ಮಿತ್ರರಾದ ಕುಸಗಲ್ಲರಿಗೆ ವಿಷಯ ತಿಳಿಸಲು `ನಾವು ಇದೇ ಊರಾಗಿದ್ರೂ ಅವರ ಮನೀಗ್ ಹೋಗಿಲ್ಲ, ಬರ್ರಿ ಸರ’ ಎಂದು ಕರೆದೊಯ್ಯಲು ಒಪ್ಪಿದರು. ಮುಸ್ಸಂಜೆ ಹೊತ್ತಿಗೆ ಶ್ರೀ ಕುಸುಗಲ್ಲ, ಅವರ ಮಗಳು ಕವಿತಾ, ಸ್ನೇಹಿತ ಡಾ. ಕೋಲ್ಕಾರ ಅವರೊಡನೆ ಬಿಜಾಪುರೆ ಅವರಲ್ಲಿಗೆ ಹೊರಟೆ. ಹಳೇ ಬೆಳಗಾವಿಯ ಬೀದಿಗಳು. ಪಶ್ಚಿಮಘಟ್ಟದ ಜಿರ್ರೋ ಮಳೆಧಾರೆ. ಕಚಿಪಿಚಿ ಕೆಸರು. ಹಸುರು ಕಕ್ಕುವ ಗಿಡಮರಪೊದೆ. ಮನೆಯ ಛಾವಣಿ ಕಾಂಪೌಂಡು ಗೋಡೆಗಳು ಹಸಿರು ಸ್ವೆಟರುಟ್ಟಂತೆ […]

ದೇವರ ವಾನಪ್ರಸ್ತ.

ರಾತ್ರಿಯಿಡೀ ಕಗ್ಗತ್ತಲು. ಯಾಕಿಲ್ಲ, ಅಮವಾಸ್ಯೆಯ ರಾತ್ರೆಯದು. ಗುಹೆಯೊಂದರಲ್ಲಿ ಮಲಗಿದ್ದ ಶಿಲಾಮಾನವ ರಾತ್ರೆ ಕಳೆಯುತ್ತಿದ್ದ. ಸುತ್ತ ,ಅಡವಿ. ಅದೊಂದು ನಿದ್ದೆಯಲ್ಲದ ನಿದ್ದೆ. ಗಾಳಿಗೆ ಮರಗಳ ಸುಂಯ್..ಸುಂಯ್.. ಒಂಥರಾ ನೀರವ ಕಗ್ಗತ್ತಲು. ಕಣ್ಣಿಗೇನೂ ಕಾಣಿಸದಾದಾಗ, ಕಿವಿ ಅತ್ಯಂತ ಸೂಕ್ಷ್ಮವಾಗುತ್ತೆ. ದೂರದಿಂದ, ನರಿಗಳು ಊಳಿಡುವ ಶಬ್ಧ, ಪಟ್ಟೆ ಹುಲಿ ನಡೆಯುವಾಗ,ಓಡುವಾಗ ಶಬ್ಧಮಾಡುವುದಿಲ್ಲ. ಸೈಲೆಂಟ್ ಕಿಲ್ಲರ್ ಅದು! ಹ್ಞಾ! ಕೇಳಿಸಿತಲ್ಲ, ಜಿಂಕೆಯ ಮರಣಾಕ್ರಾಂದನ..ಖಂಡಿತಾ ಹುಲಿ ಹಿಡಿದಿರಬೇಕು, ನಾಳೆ ಸಿಗುತ್ತೆ ಅದರ ಅವಶೇಷಗಳು. ಹೇಗಿದ್ದರೂ, ಗುಹೆಯ ಬಾಗಿಲಿಗೆ ಬಂಡೆ ಪಾರ್ಶ್ವದಿಂದ ಮುಚ್ಚಿದೆ. ಹುಲಿಗೂ ಭಯವಿದೆ. […]

ಸ್ವಾತ್ಮಗತ

ಬಂಡಾಯ ಸಾಹಿತ್ಯದ ವಿವಿಧ ಮಜಲುಗಳು..! ಶಿವು ಲಕ್ಕಣ್ಣವರ ಬಂಡಾಯ ಸಾಹಿತ್ಯ ಆಧುನಿಕ ಕನ್ನಡ ಸಾಹಿತ್ಯದ ಈಚಿನ ಹಂತ… ನವೋದಯ, ಪ್ರಗತಿಶೀಲ, ನವ್ಯಗಳ ಅನಂತರದ ಸಾಹಿತ್ಯ ಚಳವಳಿ ಇದು. ಇದನ್ನು ನವೋತ್ತರ ಸಾಹಿತ್ಯವೆಂದೂ ಕರೆಯಲಾಗಿದೆ. ಎಪ್ಪತ್ತರ ದಶಕದ ಉತ್ತರಾರ್ಧದಲ್ಲಿ ಕನ್ನಡ ಸಾರಸ್ವತ ಪ್ರಪಂಚದಲ್ಲಿ ಕೇಳಿಬರುತ್ತಿರುವ, ಎಲ್ಲ ಪ್ರಗತಿಪರ ಹಾಗೂ ದಲಿತ ಬರಹಗಾರರಿಂದ ಸೃಷ್ಟಿಯಾದ ಮತ್ತು ಸೃಷ್ಟಿಗುತ್ತಿರುವ ಸಾಹಿತ್ಯವಿದು. ಬಂಡಾಯ ಸಾಹಿತ್ಯದ ಉಗಮ– 1970 ರ ದಶಕದಲ್ಲಿ ಅನೇಕ ಸಾಮಾಜಿಕ, ರಾಜಕೀಯ ಘಟನೆಗಳು ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆಗಳನ್ನು ತಂದವು. ಬದುಕಿನಲ್ಲಿ […]

ಮಗುವಾಗಿಸುವ ಸುಂದರ ಹೂ ಮಾಲೆ

ಪುಟ್ಟಲಕ್ಷ್ಮಿ ಕಥೆಗಳುಲೇಖಕರು- ರಘುನಾಥ ಚ ಹಬೆಲೆ-೮೦/-ಪ್ರಕಾಶನ-ಅಂಕಿತ ಪುಸ್ತಕ ಚಿಕ್ಕ ಮಕ್ಕಳ ಲೋಕವೇ ಬೇರೆ ರೀತಿಯದ್ದು. ಕಂಡಿದ್ದೆಲ್ಲವೂ ಅಚ್ಚರಿಯ ವಿಷಯವೇ. ನಾನು ಮೂರನೇ ತರಗತಿಯಲ್ಲಿದ್ದಾಗ ನನ್ನ ಪಕ್ಕದ ಮನೆಯಲ್ಲಿ ದೀಪಾ ಕೊಡ್ಲೆಕೆರೆ ಎನ್ನುವ ನಾಲ್ಕನೆ ತರಗತಿಯ ಗೆಳತಿಯೊಬ್ಬಳಿದ್ದಳು. ಅವಳ ತಂದೆ ಅಲ್ಲೇ ಸಮೀಪದ ಮತ್ತೊಂದು ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದರು. ಅವರು ನಮ್ಮ ಹೆಸರಾಂತ ಕಥೆಗಾgರಾಗಿರುವ ಚಿಂತಾಮಣಿ ಕೊಡ್ಲೆಕೆರೆ ಹಾಗೂ ಮಹಾಬಲಮೂರ್ತಿ ಕೊಡ್ಲೆಕೆರೆಯವರ ಚಿಕ್ಕಪ್ಪ. ನಾನು ದೀಪಾ ಆಗಲೇ ಕವನ ಬರೆಯುತ್ತೇವೆಂದು ಏನೇನೋ ಬರೆಯುತ್ತಿದ್ದೆವು. ಆಗ ನಾವಿದ್ದ ಅಮ್ಮಿನಳ್ಳಿ ಎಂಬ […]

ಉತ್ತಮರ ಸಂಗ ಎನಗಿತ್ತು ಸಲಹೊ

ಸಂಬಂಧಗಳು ಹುಟ್ಟಿಕೊಳ್ಳುವುದು ಅಂಥ ವಿಶೇಷವಾದ ಸಂಗತಿಯೇನಲ್ಲ. ಹುಟ್ಟಿಕೊಂಡ ಸಂಬಂಧಗಳು ಎಲ್ಲಿಯವರೆಗೆ ಬಾಳುತ್ತವೆ, ನಮ್ಮ ಬದುಕಿನ ಚಲನೆಯಲ್ಲಿ ಅವುಗಳ ಮಹತ್ವವೇನು, ಅವು ಯಾವ ಬಗೆಯ ಹೊಸತನವನ್ನು ನಮ್ಮ ಯೋಚನೆಗಳಿಗೆ ಒದಗಿಸಬಲ್ಲವು ಎನ್ನುವ ಆಧಾರದ ಮೇಲೆ ಸಂಬಂಧಗಳ ಗುಣಮಟ್ಟದ ನಿರ್ಧಾರವಾಗುತ್ತದೆ. ಈ ಗುಣಮಟ್ಟದ ಮೌಲ್ಯಮಾಪನ ಯಾವುದೇ ರೂಪ, ಆಕಾರ ಅಥವಾ ಹೆಸರುಗಳ ಪ್ರಾಪಂಚಿಕ ಚೌಕಟ್ಟಿನೊಳಗೆ ನಡೆಯುವಂಥದ್ದಲ್ಲ. ತಲೆದಿಂಬಿನ ಪಕ್ಕದಲ್ಲಿ ನೆಮ್ಮದಿಯಿಂದ ನಿದ್ರಿಸಿರುವ ಮೊಬೈಲ್ ನಲ್ಲಿ ಪಾಪ್ ಅಪ್ ಆಗುವ ಗುಡ್ ಮಾರ್ನಿಂಗ್ ಮೆಸೇಜುಗಳಲ್ಲಿ ಹದಿನೈದು ವರ್ಷಗಳ ನಂತರ ಮತ್ತೆ ಜೊತೆಯಾದ […]

ಅಪಾಯ ಎದುರಿಸುವ ಬಗೆ ಹೀಗೆ . ನಾನೀಗ ತಮ್ಮೊಂದಿಗೆ ಹಂಚಿಕೊಳ್ಳುತ್ತಿರುವ ಕಥೆ ರಷ್ಯಾದ ಖ್ಯಾತ ಸಾಹಿತಿ ಲಿಯೋ ಟಾಲ್ ಸ್ಟಾಯ್ ಬರೆದದ್ದು. ಒಮ್ಮೆ ಇಬ್ಬರು ಗೆಳೆಯರು ಕಾಡಿನಲ್ಲಿ ಹೋಗುತ್ತಿದ್ದರು. ಕಾಡು ಪ್ರಾಣಿಗಳು ಪೊದೆಗಳ ಹಿಂದೆ ಅಡಗಿರಬಹುದೆಂಬ  ಭಯದಿಂದ ಇಬ್ಬರೂ ಕೈ ಕೈ ಹಿಡಿದು ಸಾಗುತ್ತಿದ್ದರು.  ಕಾಡಿನ ದಾರಿಯನು ಗೆಲುವಾಗಿ ಸಾಗಲು ಅತಿ ಪ್ರೀತಿಯಿಂದ ಅದು ಇದು ಹರಟುತ್ತ ಸಾಗುತ್ತಿದ್ದರು. ಒಮ್ಮೆಲೇ ಕರಡಿ ಕಾಣಿಸಿಕೊಂಡಿತು.ಕರಡಿ ಇನ್ನೂ ದೂರದಲ್ಲಿತ್ತು. ಹಾಗಾಗಿ ಹೇಗಾದರೂ ಅದರಿಂದ ಬಚಾವಾಗಬೇಕೆಂದು ಉಪಾಯ ಮಾಡಲು ಅವರಿಬ್ಬರಿಗೂ ಕೆಲ […]

ಅಭಿವ್ಯಕ್ತಿ ಮನುಷ್ಯರ ಸಹಜ ಪ್ರಕ್ರಿಯೆ

ಮಹಾಂತೇಶ್ ಪಲದಿನ್ನಿ ಮಿಥುನ ಶಿಲ್ಪಗಳ ಮೂಲಕ ಸಾಮಾಜಿಕ ಎಚ್ಚರಿಕೆ ನೀಡುವ  ಸಂದೇಶವೂ ಇದೆ ‘ * ಕಲಾವಿದ ಡಾ.ಮಹಾಂತೇಶ್ ಎಂ.ಪಲದಿನ್ನಿ . ವಿಜಾಪುರ ಇವರ ಊರು. ಹುಟ್ಟಿದ್ದು ೧೯೮೪. ಕಲಾ ಶಿಕ್ಷಣ ಕಲಿತದ್ದು ಹಂಪಿ ಕನ್ನಡ ವಿವಿ ಶಿಲ್ಪಕಲಾ ವಿಭಾಗದಲ್ಲಿ. ಬಿಎಫ್‌ಎ ಶಿಲ್ಪಕಲೆ ಕಲಿತ ಅವರು ಮೈಸೂರಿನ ಕಾವಾದಲ್ಲಿ ಮಾಸ್ಟರ್ ಆಫ್ ಆರ್ಟ ಕಲಿತರು. ನಂತರ ಶಿಲ್ಪಕಲೆಯಲ್ಲಿ ಎಂ.ಫಿಲ್.ಪದವಿ ಹಾಗೂ ಡಾಕ್ಟರೇಟ್ ಪದವಿಗಳನ್ನು ಹಂಪಿ ಕನ್ನಡ ವಿ.ವಿ.ಯಿಂದ ಪಡೆದರು. ಹಂಪಿ ವಿಶ್ವ ವಿದ್ಯಾಲಯದ ಶಿಲ್ಪಕಲಾ ವಿಭಾಗ ಬದಾಮಿ […]

ಕಬ್ಬಿಗರ ಅಬ್ಬಿ – ಸಂಚಿಕೆ ೩

ಶ್ರಾವಣ ಗೀತ ಮಹಾದೇವ ಕಾನತ್ತಿಲ ಸಂಕ್ರಮಣ! ಹೌದು, ಸಂಕ್ರಮಣ, ಒಂದು ಸ್ಥಿತಿಯಿಂದ ಇನ್ನೊಂದಕ್ಕೆ, ಮತ್ತೆ ಮತ್ತೊಂದಕ್ಕೆ!.  ಅಂಗಳದಲ್ಲಿ ಲಂಗದಾವಣಿ ಹಾಕಿ ಕುಣಿದು ಹಾರುತ್ತಿದ್ದ ಹುಡುಗಿ, ಪುಷ್ಪವತಿಯಾಗಿ, ಗಾಂಭೀರ್ಯ ತುಂಬಿ, ಗಜಗಾಮಿನಿಯಾದಾಗ ಸಂಕ್ರಮಣ. ಒಂದು ಮುಂಜಾನೆ, ಕಪ್ಪುಹಸಿರು ಜಡ ಎಲೆಗಳ ಮಾಮರದಲ್ಲಿ, ನಸುಗೆಂಪು ತಳಿರು ಚಿಗುರೊಡೆದಾಗ ಮರಕ್ಕೆ ಸಂಕ್ರಮಣ. ನಲವತ್ತರ ನಸುಕಲ್ಲಿ, ಕಣ್ಣು ಮಬ್ಬಾಗಿ ನೆಟ್ಟ ನೇರ ನೋಟಕ್ಕೆ, ಚಾಳೀಸು ಬಂದಾಗ ಸಂಕ್ರಮಣ. ಅರುವತ್ತಕ್ಕೆ ವೃತ್ತಿಯಿಂದ ನಿವೃತ್ತಿ ಸಂಕ್ರಮಣ. ಹೆಚ್ಚೇನು! ಸೂರ್ಯೋದಯ,ಸೂರ್ಯಾಸ್ತಮಾನ ದಿನ ರಾತ್ರೆಗಳ ಅದಲು ಬದಲು ಸಂಕ್ರಮಣ!. […]

ನವಿರು ಹಾಸ್ಯದೊಳಗೆ ಚುಚ್ಚುವ ಮೊನಚಿದೆ ಹಿಂದೊಮ್ಮೆ ಪ್ರಮಿಳಾ ರಾಜ್ಯವೊಂದಿತ್ತಂತೆ. ಅಲ್ಲಿ ಮಹಿಳೆಯರೇ ರಾಣಿಯರು, ಅಧಿಕಾರದಲ್ಲಿರುವವರು ಎಲ್ಲಾ. ಅಲ್ಲಿ ಗಂಡಸರಿಗೆ ಪ್ರವೇಶವೇ ಇರಲಿಲ್ಲವಂತೆ. ಸಂತಾನ ಬೇಕಾದ ಸ್ತ್ರೀಯರೂ ರಾಜ್ಯದ ಹೊರಗೆ ಹೋಗಿ ಪಡೆಯಬೇಕಾಗಿತ್ತಂತೆ. ಒಂದುವೇಳೆ ಗಂಡು ಸಂತಾನವನ್ನು ಪಡೆದರೆ ಆ ಮಗುವನ್ನು ಅಲ್ಲಿಯೇ ಬಿಟ್ಟು ಬಿಡುವುದು ಅನಿವಾರ್ಯವಾಗಿತ್ತಂತೆ. ಆದರೆ ಹೆಣ್ಣು ಮಗುವಾಗಿದ್ದರೆ ಮಾತ್ರ ತಮ್ಮ ರಾಜ್ಯಕ್ಕೆ ಕರೆದೊಯ್ಯಬಹುದಿತ್ತಂತೆ. ಅಂತಹುದ್ದೊಂದು ಪ್ರಮಿಳಾ ರಾಜ್ಯವಿದ್ದರೆ  ನಾನೂ ಅಲ್ಲಿಯೇ ಹೋಗಿ ಇರಬಹುದಾಗಿತ್ತು ಎಂದು ಎಷ್ಟೋ ಸಲ ಅಂದುಕೊಳ್ಳುತ್ತಿರುತ್ತೇನೆ. ಎಷ್ಟೊಂದು ಕೆಲಸಗಳು. ಮುಗಿಯದ, ಮುಗಿಯಲೊಲ್ಲದ […]

ಮಾತು ಅರಳುವ ಹೊತ್ತು ನಗುವಿನೊಂದಿಗೆ ಜನ್ಮತಳೆದ ಸಂಬಂಧಗಳ ಭವಿಷ್ಯವನ್ನು ಮಾತು ನಿರ್ಣಯಿಸುತ್ತದೆ. ಮಾತು ಸರಾಗವೆನ್ನಿಸದ ಹೊರತು ಸಂಬಂಧಗಳನ್ನು ಸರಳವಾಗಿಸಿ ಸುಂದರಗೊಳಿಸಲಾಗದು. ಬದುಕಿನ ಸೂಕ್ಷ್ಮಗಳೆಲ್ಲವನ್ನೂ ತನ್ನೆಲ್ಲ ಚಾಣಾಕ್ಷತೆಯನ್ನು ಉಪಯೋಗಿಸಿ ಕಾಪಾಡಿಕೊಳ್ಳುವ ಮಾತು, ಅಗತ್ಯ ಬಿದ್ದಾಗಲೆಲ್ಲ ಸಂಬಂಧಗಳಿಗೊಂದು ಜೀವಂತಿಕೆಯನ್ನೂ ಒದಗಿಸುತ್ತದೆ. ಮಾತುಗಳೇ ಇಲ್ಲದ ಸಂಬಂಧವೊಂದು ಎಲ್ಲಿಯವರೆಗೆ ಜೀವಂತವಾಗಿ ಉಳಿದೀತು; ಎಲ್ಲ ನಕಾರಾತ್ಮಕತೆಯ ಪರಿಹಾರವೆನ್ನುವಂತೆ ಹೃದಯಕ್ಕಿಳಿವ ಮಾತು ಮಾತ್ರವೇ ಸಂಬಂಧಗಳನ್ನೆಲ್ಲ ಸಹೃದಯತೆಯ ಸೆರಗಿನಲ್ಲಿ ಬಚ್ಚಿಟ್ಟು ಸಾಕಿ ಸಲಹೀತು!           ಕಾಲಕಾಲಕ್ಕೆ ತಕ್ಕಂತೆ ಸಂಬಂಧಗಳ ಮೌಲ್ಯದ ಪರಿಕಲ್ಪನೆ ಬದಲಾಗುತ್ತಾ ಹೋದರೂ ಮಾತು ಮಾತ್ರ […]

Back To Top