Category: ಅಂಕಣ

ಅಂಕಣ

ತಾಯ್ತನ ಎನ್ನುವದು ಬರಿದೆ ಜೈವಿಕ ತಾಯ್ತನಕ್ಕೆ ಸಂಬಂಧ ಪಟ್ಟುದಲ್ಲ. ಅದೊಂದು ಭಾವ. ಆ ಭಾವವಿದ್ದವರೆಲ್ಲಾ ತಾಯಂದಿರಾಗಬಹುದು ಎನ್ಬುವುದು ಸಾವಿತ್ರಿಯವರಿಂದ ಸಾಬೀತಾಗುತ್ತದೆ. ಆಕೆ ತಮ್ಮದೇ ಒಂದು ಮಗುವನ್ನು ಹೆರಲಿಲ್ಲ. ಆದರೆ ದೀನ ದಲಿತರ ಪಾಲಿಗೆ ನಿಜವಾದ ಮಾತೃಪೂರ್ಣ ತಾಯಿಯೇ ಆದರು.

ಅಂಕಣ ಬರಹ ಕೇಡಿಲ್ಲದ ಪದ ದೊರಕೊಂಬುದು ಕಿನ್ನರಿ ಬೊಮ್ಮಯ್ಯ ವಚನಕಾರರಲ್ಲಿಯೇ ಒಂದಷ್ಟು ಸಿಟ್ಟು ಸೆಡವುಗಳುಳ್ಳ ಮನುಷ್ಯ. ನೇರ ನಡೆ – ನುಡಿಗೆ ಹೆಸರಾದಂತೆ, ಪರೀಕ್ಷಿಸಿಯೇ ಎಲ್ಲವನ್ನೂ ಎಲ್ಲರನ್ನೂ ಒಪ್ಪುವವನು. ಇದಕ್ಕೆ ಸಾಕ್ಷಿಯಾಗಿ ಶೂನ್ಯಸಂಪಾದನೆಗಳಲ್ಲಿ ಬಂದಿರುವ ಅಕ್ಕನನ್ನು ಪರೀಕ್ಷಿಸುವ ಸಂದರ್ಭವನ್ನೊಮ್ಮೆ ನೋಡಿ. ಅವಳನ್ನು ಪರೀಕ್ಷಿಸಿ ‘ಹುಲಿನೆಕ್ಕಿ ಬದುಕಿದೆನು’೧ ಎಂದು ಅಕ್ಕನ‌ನ್ನು ಹುಲಿಯೆಂದು ಕರೆದು ಗೌರವಿಸಿ ಅವಳು ಕೊಡುವ ಉತ್ತರಕ್ಕೆ ಭಯದಿಂದಲೇ ಮಾತನಾಡುತ್ತಾನೆ. ಈ ಸಂದರ್ಭವು ಶೂನ್ಯಸಂಪಾದನೆಗಳಲ್ಲಿ ಬಹುಮಹತ್ವದ ಭಾಗ. ವಚನಚಳುವಳಿಯ ಕೊನೆಯ ಹಂತದಲ್ಲಿನ ಕ್ರಾಂತಿಕಲ್ಯಾಣವಾದ ಸಂದರ್ಭದಲ್ಲಿ ನಡೆದ ಯುದ್ಧವನ್ನು […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-11 ಆತ್ಮಾನುಸಂಧಾನ ಕೇರಿ — ಕೊಪ್ಪಗಳ ನಡುವೆ…. ಬನವಾಸಿಯಿಂದ ಅಪ್ಪನಿಗೆ ಅಂಕೋಲಾ ತಾಲೂಕಿನ ಮಂಜಗುಣಿ ಎಂಬ ಊರಿನ ಶಾಲೆಗೆ ವರ್ಗವಾಯಿತು. ನಮ್ಮ ಪರಿವಾರ ನಾಡುಮಾಸ್ಕೇರಿಯಲ್ಲಿ ಮತ್ತೆ ನೆಲೆಸುವ ಅವಕಾಶ ಪಡೆಯಿತು. ಅಪ್ಪ ದಿನವೂ ಗಂಗಾವಳಿ ನದಿ ದಾಟಿ ಮಂಜಗುಣೆಯ ಶಾಲೆಗೆ ಹೋಗಿ ಬರುತ್ತಿದ್ದರೆ ನಾನು ಸಮೀಪದ ಜೋಗಣೆ ಗುಡ್ಡ’ ಎಂಬ ಭಾಗದಲ್ಲಿರುವ ಪೂರ್ಣ ಪ್ರಾಥಮಿಕ ಶಾಲೆಗೆ ಏಳನೆಯ ತರಗತಿಯ ಪ್ರವೇಶ ಪಡೆದುಕೊಂಡಿದ್ದೆ. ತಮ್ಮ, ತಂಗಿಯರು ಮನೆಯ ಸಮೀಪವೇ ಇರುವ ಕಿರಿಯ […]

ಅಂಕಣ ಬರಹ ಮುಗಿಲ ಪ್ರೇಮದಿ ಕಳೆಗಟ್ಟಿತು ಇಳೆ ನನ್ನ ಅರಳಿದ ಬೊಗಸೆಯೊಳಗೆ ಅವಳು ಸುರಿದ ಹಣದಲ್ಲಿ  ಮಡಚಿದ ಹತ್ತು, ಐದು, ಎರಡು, ಒಂದರ ‌ನೋಟುಗಳು. ಅಘ್ರಾಣಿಸಿದರೆ ಅವಳ ಬೆವರು ಹಾಗೂ ಹಸುಗಳ ಉಸಿರನ ಪರಿಮಳ ಬೆರೆತುಬಂದಂತೆ. ಆ ದಿನ ಬೆಳಗ್ಗೆ ನನ್ನಜ್ಜಿ ನನ್ನನ್ನು ಹತ್ತಿರ ಕರೆದು ಕೂರಿಸಿಕೊಂಡಳು “ಬಾಳೀ, ನಿನ್ನ ಶಾಲೆಯಲ್ಲಿ ಇವತ್ತು ಗಮ್ಮತ್ತು ಅಲ್ವಾ. ನೀನು ಕಲಾವಿದೆ. ತಗೋ 100 ರೂಪಾಯಿ. ಇವತ್ತು ಹೊಸ ದಿರಿಸು ತಗೋ. ನಿನ್ನಿಷ್ಟದ್ದು. ಅದನ್ನು ಹಾಕಿಕೊಂಡು ಹೋಗು. ನೋಡು,ನಿನ್ನ ಖುಷಿ  […]

ಅಂಕಣ ಬರಹ ಒಂದು ಹಾವಿನ ಕಥೆ ಮತ್ತು ನಾವು ಕೆಲವು ಒತ್ತಡಗಳು ಹುಟ್ಟಿಕೊಳ್ಳುತ್ತವೆ. ಎಂಥದೋ ಅನಿವಾರ್ಯತೆ ಕಾಡುತ್ತದೆ. ಮಾಡಬೇಕೆಂದುಕೊಂಡದ್ದನ್ನು ಮಾಡಲಾಗುತ್ತಿಲ್ಲ ಎನ್ನುವ ಚಡಪಡಿಕೆ, ನೋವು, ಹತಾಶೆ… ಬೇಕಾದವರನ್ನು ಮನಸಿಗೆ ಹತ್ತಿರವಾದವರನ್ನು ನಾವಾಗೇ ಹಚ್ಚಿಕೊಂಡವರನ್ನು ಎದೆಗೆ ತಬ್ಬುವ ಮನಸಿದ್ದಾಗಲೂ ದೂರ ನಿಲ್ಲಬೇಕಾದ ಸಂಯಮದ ಪ೫ರೀಕ್ಷೆಗೆ ತಯಾರಾಗಬೇಕಾಗಿ ಬರುವ ಪರಿಸ್ಥಿತಿಯನ್ನು ಧ್ವನಿ ತೆಗೆಯದೇ ಬಯ್ದುಕೊಳ್ಳುತ್ತಾ ಒಳಗೊಳಗೇ ಹಟಕ್ಕೆ ಬೀಳುತ್ತೇವೆ. ಅದು ನಮ್ಮ ಮೇಲಿನ ನಮ್ಮ ಹಟ. ಚೌಕಟ್ಟನ್ನು ದಾಟಿದರೆ ನಮಗೆ ನಾವು ದಕ್ಕಿಬಿಡುತ್ತೇವೆಂದು ನಮಗೆ ಗೊತ್ತು. ಆದರೆ ನಮಗೆ ಅದಕ್ಕೆ […]

ಚಲನೆಯ ವೇಗ ಜಾಸ್ತಿ ಇರುವುದರಿಂದ ಅಂತರವು ಕೂಡ ಜಾಸ್ತಿಯಾಗ್ತಾ ಹೋಗ್ತಾ ಇದೆ ಆಧುನಿಕತೆ ಸ್ಪರ್ಶ ಹೆಚ್ಚಾಗಿ ನಮ್ಮ ಮೂಲ ಸಂಸ್ಕೃತಿಯನ್ನು ನಾವು ಕಳೆದುಕೊಳ್ಳುತ್ತಿದ್ದೇವೆ ಎಂದು ಅನಿಸುತ್ತದೆ.

ವಚನಚಳುವಳಿಗೆ ಕನ್ನಡ ಸಾಹಿತ್ಯದಲ್ಲಿ ಬಹುದೊಡ್ಡ ಸ್ಥಾನವಿದೆ. ವಚನಗಳಲ್ಲಿ ಆಡಿದ, ಸಾರಿದ, ಸಾಧಿಸಿ ತೋರಿಸಿದ ಮೌಲ್ಯಗಳು ಕೇವಲ ಘೋಷಣೆಗಳಾಗದೆ ನಡೆ ನುಡಿಯಲ್ಲಿ ಒಂದಾಗಿ ಏಕವನ್ನು ಸ್ಥಾಪಿಸಿದ ಕಾರಣದಿಂದ ವಚನಕಾರರು ಈ ನೆಲದಲ್ಲಿ ಮಾನ್ಯ ಮತ್ತು ಮುಖ್ಯರಾಗುತ್ತಾರೆ.

ಅಂಕಣ ಬರಹ ವಸಂತ ಬಂದ! ರಂಗಕ್ಕೆ ರಂಗು ತಂದ!! ವೈಶಾಲಿ ನಗರದ ಬೀದಿ. ವೈಭವದ ಅರಮನೆ. ಅದು ರಾಜನ ಅರಮನೆಯಲ್ಲ. ನಗರದ ಮುಖ್ಯ ನೃತ್ಯಗಾರ್ತಿ,ರಾಜನರ್ತಕಿ ಆಮ್ರಪಾಲಿಯ ಮನೆ. ಆಮ್ರಪಾಲಿ ಚಿಗುರು ಮಾವಿನ ತಳಿರಂತಹವಳು. ಅವಳ ಸೌಂದರ್ಯದ ಕಥನ ಕೇಳಿ ನೆರೆ ಹೊರೆಯ ರಾಜರೂ, ರಾಜಕುಮಾರರೂ ಬಂದಿದ್ದಾರೆ. ಅವಳ ಪ್ರೇಮ ಭಿಕ್ಷೆಗಾಗಿ ಹೊರಬಾಗಿಲಲ್ಲಿ ಸರದಿಯಲ್ಲಿ ಕಾಯುತ್ತಿದ್ದಾರೆ. ಆಕೆ ಒಳಗಡೆ ಇದ್ದಾಳೆ, ಪ್ರಣಯದ ತುರೀಯದ ಅಮಲಲ್ಲಿ. ಆದರೂ ಅದೇನೋ ಬೇಸರ. ಅವಳನ್ನು ಆವರಿಸಿದೆ. ಎಲ್ಲವೂ ಇದ್ದರೂ ಏನೋ ಕೊರತೆ. ತಳಮಳ.  […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-10 ಆತ್ಮಾನುಸಂಧಾನ ಬನವಾಸಿಯಲ್ಲಿ ನೋವಿನ ನೆನಪುಗಳು ಬಾಲ್ಯದ ನಾಲ್ಕು ವರ್ಷಗಳನ್ನು ಬನವಾಸಿಯಲ್ಲಿ ಕಳೆಯುವ ಅವಕಾಶ ದೊರೆತದ್ದು ನನ್ನ ಬದುಕಿನಲ್ಲಿ ಒದಗಿ ಬಂದ ಭಾಗ್ಯವೆಂದೇ ನಾನು ಭಾವಿಸಿದ್ದೇನೆ. ಅತ್ಯಂತ ಆಪ್ತ ಸ್ನೇಹಿತರಾಗಿ ದೊರೆತ ಮುಖೇಶ್ ಕುಚಿನಾಡ, ಸೊಮಶೇಖರ ಒಡಿಯರ್, ಅಶೋಕ ಪಾಳಾ, ಸೆಂಟ್ರಲ್ ಕೆಫೆಯ ಸದಾನಂದ ಶೆಟ್ಟಿ, ಕಿರಾಣಿ ಅಂಗಡಿಯ ಸಚ್ಚಿದಾನಂದ ಮೂಡ್ಲಗಿರಿ ಶೆಟ್ಟಿ ಮುಂತಾದ ಗೆಳೆಯರ ಒಡನಾಟದಲ್ಲಿ ಅತ್ಯಂತ ಮಧುರವಾದ ಅನುಭವಗಳು ನನಗೆ ದಕ್ಕಿವೆ. ಈ ಗೆಳೆಯರೆಲ್ಲ ಆಟ ಪಾಠ […]

ಅಂಕಣ ಬರಹ ಕಬ್ಬಿಗರ ಅಬ್ಬಿ ಮೌ..ನದ ನಡುವಿನ ಮೌನ ಸುಮಾರು ಮೂವತ್ತು ವರ್ಷಗಳ ಹಿಂದೆ ಕಾಡಿನ ನಟ್ಟ ನಡುವೆ, ಟೆಂಟ್ ನೊಳಗೆ ಮಲಗಿದ್ದೆ. ಚಿಕ್ಕಮಗಳೂರಿನ ಭದ್ರಾ ರಕ್ಷಿತಾರಣ್ಯದಲ್ಲಿ ಸ್ಕೌಟ್ ಕ್ಯಾಂಪ್ ಅದು. ವಿದ್ಯುತ್ ದೀಪಗಳು ಇರಲಿಲ್ಲ, ಕತ್ತಲು ಸುತ್ತಲೂ.  ವರ್ಷಗಳ ಹಿಂದೆ ದೂರ ನಕ್ಷತ್ರ ಗಳಿಂದ ಯಾತ್ರೆ ಹೊರಟು ಯಾತ್ರೆಯ ದಣಿವಿನಿಂದ ಮಂದವಾದ ಕಿರಣಗಳು, ತಂಗದಿರನ ಸೌಮ್ಯ ಬೆಳಕು ಮಾತ್ರ ಆ ಕಾಡನ್ನು ತಬ್ಬಿದ್ದವು. ಟೆಂಟು ಸುತ್ತಲೂ ಗಗನಕ್ಕೆ ಗೆಲ್ಲು ಚಾಚಿದ ಬೃಹತ್ ವೃಕ್ಷಗಳು. ಅವುಗಳಿಂದಾಚೆಗೆ ಕತ್ತಲೆ […]

Back To Top