Category: ಅಂಕಣ

ಅಂಕಣ

ಆರ್.ದಿಲೀಪ್ ಕುಮಾರ್
ವಚನ ವಿಶ್ಲೇಷಣೆ ಮಾಡುತ್ತಾ-
ಇಲ್ಲಿ ಬಾಯಾರಿಕೆಯಿಂದ ಬಳಲುತ್ತಿರುವ ವ್ಯಕ್ತಿಗೆ ಪಾಯಸವನ್ನು ಕೊಡುವ ಚಿತ್ರಣವನ್ನು ಕೊಟ್ಟು ದೈವವೆನ್ನುವುದು, ಆತ್ಮಜ್ಞಾನವೆನ್ನುವುದು ಬಾಯಾರಿಗೆಯನ್ನು ತೊಡೆಯುವ ಪರಿಶುದ್ಧವಾದ ನೀರಿನ ಹಾಗೆ ಎಂದು ಸೂಚಿಸುತ್ತಾನೆ

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-16 ಆತ್ಮಾನುಸಂಧಾನ ಗಂಗಾವಳಿಯಲ್ಲಿ ಮೂಲ್ಕಿ ಓದಿದ ದಿನಗಳು ನಮ್ಮ ಊರಿನಲ್ಲಿ ಪೂರ್ಣ ಪ್ರಾಥಮಿಕ ಶಾಲೆ ಇರಲಿಲ್ಲ. ಮುಂದಿನ ತರಗತಿಗಳಿಗಾಗಿ ಗಂಗಾವಳಿ ಭಾಗದ “ಜೋಗಣೆ ಗುಡ್ಡ” ಎಂಬಲ್ಲಿರುವ ಹಿರಿಯ ಪ್ರಾಥಮಿಕ ಶಾಲೆಗೆ ಸೇರಬೇಕಾಯಿತು. ಹಾರು ಮಾಸ್ಕೇರಿ ಶಾಲೆಯ ಕುಪ್ಪಯ್ಯ ಗೌಡ, ಗಣಪತಿ ಗೌಡ ಮುಂತಾದವರೊಡನೆ ಮಾಸ್ಕೇರಿಯ ದೇವರಾಯ ಇತ್ಯಾದಿ ಗೆಳೆಯರೊಂದಿಗೆ ಗಂಗಾವಳಿಯ ಶಾಲೆಗೆ ಸೇರಿಕೊಂಡೆವು.             ಅಲ್ಲಿ ಗಾಬಿತ ಸಮಾಜದ ರಾಧಾಕೃಷ್ಣ ಎಂಬುವವರು ಬಹುಶಃ ಮುಖ್ಯಾಧ್ಯಾಪಕರಾಗಿದ್ದರು ಎಂದು ನೆನಪು. ತುಂಬ ಶಾಂತ […]

ಇನ್ನೊಂದು ‘ಹಕ್ಕಿ-ಕಂಬಳ’. ನಮ್ಮೂರಿನ ಗದ್ದೆ ಬಯಲಿನಲ್ಲಿರುವ ಕೆರೆದಂಡೆ, ಹಳ್ಳದ ದಂಡೆಗಳ ಮೇಲೆ ಬೆಳೆದು ನಿಂತ ಮುಳ್ಳು ಪೊದೆಗಳಲ್ಲಿ, ಕೇದಗೆ ಹಿಂಡುಗಳಲ್ಲಿ ‘ಹುಂಡು ಕೋಳಿ’ ಎಂಬ ಹಕ್ಕಿಗಳ ಗುಂಪು ಸದಾ ನೆಲೆಸಿರುತ್ತಿದ್ದವು.

ಡಾ.ರಾಮಕೃಷ್ಣ ಗುಂದಿಯವರ ಆತ್ಮಕಥೆ

ನಮ್ಮ ಗೆಳೆಯರ ಗುಂಪು ಈ ಚಹಾ ಅವಲಕ್ಕಿಯ ಭಾಗ್ಯಕ್ಕಾಗಿ ಪರಸಂಗದುದ್ದಕ್ಕೂ ಎಚ್ಚರಿದ್ದು ಅನಿವಾರ್ಯವಾಗಿ ಕಥಾನಕವನ್ನು ಆಲಿಸುತ್ತ ನಮಗೆ ಅರಿವಿಲ್ಲದಂತೆ ಈ ಕಲೆಯ ಕುರಿತು ಆಸಕ್ತಿ ಅನುಭವ ಗಳಿಸಿಕೊಂಡದ್ದು ಮಾತ್ರ ತುಂಬ ವಿಚಿತ್ರವೇ ಅನ್ನಿಸುತ್ತದೆ.

ಆರ್.ದಿಲೀಪ್ ಕುಮಾರ್
ಈ ಸತ್ತಿಗೆ ಕಾಯಕದ ಮಾರಿತಂದೆಯ ಒಟ್ಟೂ ೧೦ ವಚನಗಳು ಇದುವರೆವಿಗೂ ದೊರೆತಿವೆ. ಐಘಂಟೇಶ್ವರಲಿಂಗ ಎಂಬ ಅಂಕಿತನಾಮವನ್ನು ಇವು ಹೊಂದಿವೆ. ಅವನ ಒಂದು ಅತ್ಯದ್ಭುತ ವಚನವು ಹೀಗಿದೆ. ಇದೇ ವಚನವನ್ನು ಬಳಸಿ ಅವನ ಕಾಯಕವೆಂದು ಮಹಾಸಂಪುಟ ಸಂಪಾದಕರು ವ್ಯಾಖ್ಯಾನವನ್ನು ಮಾಡಿರುವುದು

ಪೂರ್ಣಿಮಾ ಸುರೇಶ್
ಈಗ ಅನಿಸುತ್ತದೆ. ನವರಸಗಳನ್ನು ರಂಗದಲ್ಲಿ ಅನುಭವಿಸಿ ಎದುರಿನಲ್ಲಿ ಕೂತು ನೋಡುವ ಮನಸ್ಸುಗಳಿಗೆ ವರ್ಗಾಯಿಸಬೇಕಾದರೆ, ಮೊದಲು ಅದಕ್ಕಿಂತ ಹಿರಿದಾದ ರಂದಲ್ಲಿ ನಾವೂ ಪಾತ್ರವಾಗುವ ಅದ್ಬುತಕ್ಕೆ ತೆರೆದುಕೊಳ್ಳುತ್ತ, ಭಾವಗಳನ್ನು ಆರ್ತಿಯಿಂದ ಹೃದಯದೊಳಗೆ ಭರಿಸಬೇಕು. ಆಗ ರಂಗಭೂಮಿಯಲ್ಲಿ ಭಾವನೆಗಳ ಜೊತೆಗಿನ ಆಟ ಸುಲಲಿತವಾದೀತು.

ಈ ಮೇಲಿನ ವಚನಗಳನ್ನು ಇಟ್ಟಿರುವ ಕ್ರಮದಿಂದ ಇಬ್ಬರು ವ್ಯಕ್ತಿಗಳ ನಡುವಿನ ಸಂವಾದದೋಪಾದಿಯಲ್ಲಿ ಕಾಣುತ್ತಿದೆ. ಇದೊಂದು ಕಾಲ್ಪನಿಕ‌ ಗ್ರಹಿಕೆಯಷ್ಟೇ. ಹೀಗೆ ನಡೆದಿರಬಹುದು ಎಂಬುದು ನನ್ನ ಗ್ರಹಿಕೆಯಷ್ಟೇ. ನಾನು ಗಮನಿಸಿರುವ ಹಾಗೆ ಈ ಸಂವಾದ ಕ್ರಮವೆಂಬುದನ್ನು ಹಲಗೆಯಾರ್ಯನ ಶೂನ್ಯಸಂಪಾದನೆ ಈ ಎರಡು ವಚನಗಳಿಗೆ ಅನುಸರಿಸಿಲ್ಲ.

ಹೀಗೆ ಗೇರು ಹಕ್ಕಲಿನಲ್ಲಿ ಹಾಕಿದ ಹೆಜ್ಜೆಗಳು ಮೆಲ್ಲಮೆಲ್ಲನೆ ತಾಳ ಗತಿಯ ಲಯಕ್ಕೆ ಹೊಂದಿಕೆಯಾಗುತ್ತಿದ್ದಂತೆಯೇ ಯಕ್ಷರಂಗದ ಆಸಕ್ತಿ ಹೆಚ್ಚುತ್ತ ಹೋಯಿತು. ಅದೇ ಸಮಯದಲ್ಲಿ ನಮ್ಮ ತಂದೆಯವರು ಸುತ್ತಲಿನ ಹಳ್ಳಿಯ ಹವ್ಯಾಸಿ ತಂಡಗಳಿಗೆ ಯಕ್ಷಗಾನ ಕಲಿಸಲು ಹೋಗುತ್ತಿದ್ದರು.

ವಿಕ್ರಮಶಿಲಾ” ಮೂರು ಮಹಡಿಯ ಕಟ್ಟಡದ ಮೆಟ್ಟಲುಗಳನ್ನು ಏರುತ್ತಿದ್ದೆ‌. ಹಂಚಿನ ಮಾಡಿನ ಶಾಲೆಯ ಆಂಗಳದಿಂದ ಮಂಗಳನ ನೆಲದತ್ತ ಹಾರಿ ಹೊರಟ ಉಪಗ್ರಹದ ಏಕಾಂಗೀ ಹೆಜ್ಜೆಗಳವು.

ಅಂಕಣ ಬರಹ ಊರೊಳಗೆ ಪಂಥ ರಣದೊಳಗೆ ಓಟವೆ ವಚನಕಾರರಲ್ಲಿ ಎಂಟು ಜನ ಮಾರಿತಂದೆ ಹೆಸರಿನವರು ಇದ್ದಾರೆ. ಅವರಲ್ಲಿ ಅರಿವಿನ ಮಾರಿತಂದೆಯೂ ಒಬ್ಬ. ಈತ ಹಿರಿಯ ವಚನಕಾರ. ಫ. ಗು. ಹಳಕಟ್ಟಿಯವರು “ಈತನು ಬಸವೇಶ್ವರರ ಕಾಲದಲ್ಲಿ ಶಿವಾನುಭವ ಮಂಟಪದಲ್ಲಿದ್ದನೆಂದು ವೀರಶೈವರಲ್ಲಿ ಐತಿಹ್ಯವಿರುವುದಿಲ್ಲ. ಆದ್ದರಿಂದ ಬಸವೇಶ್ವರನ ಕಾಲಕ್ಕಿಂತಲೂ ಈಚಿನವನಿರಬೇಕು. ಆದರೆ ೧೫ ನೇ ಶತಮಾನದ ಅಂತ್ಯಭಾಗದಲ್ಲಿದ್ದ ಪ್ರಸಿದ್ಧಿ ಹೊಂದಿದ ಗುಬ್ಬಿಯ ಮಲುಹಣನು ಈ ಅರಿವಿನ ಮಾರಿತಂದೆಯ ಉಕ್ತಿಗಳನ್ನು ತನ್ನ ‘ಗಣಭಾಷ್ಯ ರತ್ನಮಾಲೆ’ ಯಲ್ಲಿ ಉದಾಹರಿಸಿದ್ದಾನೆ. ಅಲ್ಲದೇ ಅನೇಕ ವಚನ ಸಂಗ್ರಹಗಳಲ್ಲಿ […]

Back To Top