Category: ಅಂಕಣ

ಅಂಕಣ

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—40 ಆತ್ಮಾನುಸಂಧಾನ ಆಗೇರ ಸಮಾಜದ ತರುಣನಿಗೆ ಪ್ರಾಧ್ಯಾಪಕ ಹುದ್ದೆ”— ಎಂದು ಸುದ್ದಿಯಾದೆ : ಧಾರವಾಡ ಮತ್ತು ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಕಳೆದ ಎರಡು ವರ್ಷಗಳು ಕಳೆದು ಹೋದದ್ದೇ ತಿಳಿಯಲಿಲ್ಲ. ಬಹುಪಾಲು ತಂಪಾಗಿಯೇ ಇರುವ ಪ್ರಾಕೃತಿಕ ಪರಿಸರ, ಬಯಲು ಸೀಮೆಯ ಆಪ್ತವೆನ್ನಿಸುವ ಕನ್ನಡ ಭಾಷೆಯ ಸೊಗಸು, ಮತ್ತೆ ಮತ್ತೆ ಕರ್ನಾಟಕ ವಿದ್ಯಾವರ್ಧಕ ಸಂಘದ, ಕನ್ನಡ ವಿಭಾಗದ ಕಾರ್ಯಕ್ರಮಗಳು, ಅಲ್ಲಿಗೆ ಬಂದು ಹೋಗುವ ಹಿರಿ-ಕಿರಿಯ ಲೇಖಕರು, ಕವಿಗಳು, ವಿದ್ವಾಂಸರು ಇವರನ್ನೆಲ್ಲ ನೋಡುವುದೇ ಕೇಳುವುದೇ […]

ನಮ್ಮ ನಡುವಿನ ಜೀವಪರ ಕಾಳಜಿಯ ಕವಯಿತ್ರಿ ವಿಜಯಶ್ರೀ ಹಾಲಾಡಿಯವರು ಸಂಗಾತಿಗಾಗಿ ಬರೆಯುತ್ತಿದ್ದಾರೆ. ಅಂಕಣದ ಮೊದಲ ಕಂತು ನಿಮ್ಮ ಮುಂದಿದೆ. ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ಈ ಅಂಕಣ ಪ್ರಕಟವಾಗಲಿದೆ

ದಾನದೊಡನೆ ಸಿಗುವ ಸಾಧನಗಳನ್ನು ದಾನಕೊಟ್ಟವರ ಯೋಗ್ಯತೆ ಅಳೆಯಲು ಮಾಪಕವಾಗಿ ಬಳಸುವ ಮಂದಿಯೇ ಈಗ ಹೆಚ್ಚು. ಹೇಗೋ ಬಂದು ಸೇರಿಬಿಟ್ಟ ತಮಗೆ ಇಷ್ಟವಾಗದ ದಾನದ ವಸ್ತುವನ್ನು ಹಾಗೆಯೇ ಮತ್ತೊಂದು ನೆಪ ಮಾಡಿ ಮತ್ತೊಬ್ಬರಿಗೆ ದಾಟಿಸುವುದು ಈಗಿನವರ ಚಾಣಾಕ್ಷತನ. ಆದ್ದರಿಂದಲೇ ನಾವು ‘ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಿಗೆ ಹೋಗಿ ಮೊಳಹಾಕುವುದು’

ನಾಡಿನ ಕ್ರಾಂತಿಕಾರಿ ಕವಿ, ರೈತ ಚಳುವಳಿಯ ನಾಯಕ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆನರಾವೆಲ್‌ಫೇರ್ ಟ್ರಸ್ಟ್ ಶಿಕ್ಷಣ ಸಂಸ್ಥೆಯ ಮೂಲಕ ಅಕ್ಷರ ಸೂಯನನ್ನು ಬೆಳಗಿಸಿದ ಮಾನ್ಯ ಡಾ|| ದಿನಕರ ದೇಸಾಯಿಯವರ ಕೃಪಾ ದೃಷ್ಟಿಗೆ ಪಾತ್ರನಾದ ಬಾಲಕ ಸಣ್ಣು ಅವರ ಆಶ್ರಯದಲ್ಲೇ ಇದ್ದುಕೊಂಡು ಇಂಟರ್ ಮೀಡಿಯೇಟ್ ವರೆಗೆ ಶಿಕ್ಷಣ ಪಡೆದದ್ದು ಬಹುದೊಡ್ಡ ಅದೃಷ್ಟವೇ ಸರಿ.

ಕೊಟ್ಟ ಮಾತು, ವಾಗ್ದಾನ, ವಚನ, ಆಣೆ, ಮಾತುಕೊಡು ಇವೆಲ್ಲಾ ಪ್ರತಿಜ್ಞೆ ಪದದ ಸಮಾನಾರ್ಥಕಗಳು. ಆದರೆ ಎಲ್ಲವೂ ಪ್ರತಿಜ್ಞೆಯೇ ಆಗುವುದಿಲ್ಲ. ಹರಕೆ, ವ್ರತ, ಅಂದುಕೊಳ್ಳುವುದು, ಇಚ್ಛೆ, ಶಪಥ, ಆಸೆ, ಬಯಕೆ ಎಂಬಿತ್ಯಾದಿ ನಾನಾರ್ಥಗಳನ್ನು ಆರೋಪಿಸಬಹುದಾದರೂ ಪ್ರತಿಜ್ಞೆಯ ತೂಕವೇ ಬೇರೆ. ಅಂದುಕೊಂಡಂತೆ ನಡೆದುಕೊಂಡರೆ!! ವಾಗ್ದಾನ ಮುರಿದವರೆಷ್ಟು ಮಂದಿಯಿಲ್ಲ? ಯಾವುದೋ ಆವೇಶ, ಉದ್ವೇಗ, ಚಿತಾವಣೆಗೆ ಒಳಗಾಗಿ ಪ್ರತಿಜ್ಞೆ ಮಾಡಿ ಮುಂದೆ ಪೇಚಿಗೆ ಸಿಲುಕಿ ಪಜೀತಿ ಪಟ್ಟವರು ಹಲವಾರು ಮಂದಿ ಇರುತ್ತಾರೆ.

ಪೂರ್ಣಚಂದ್ರ ತೇಜಸ್ವಿ ಅವರು ‘ಮರವೆನ್ನುವ ಕಾರ್ಖಾನೆ’ ಎಂಬ ಬರಹದಲ್ಲಿ “ಮರಗಳು ತಮ್ಮ ಜಟಿಲವಾದ ಬೇರಿನ ಜಾಲದಿಂದ ನೂರಾರು ಅಡಿ ಎತ್ತರಕ್ಕೆ ನೆಲದಿಂದ ನೀರನ್ನೆತ್ತುತ್ತವೆ. ಒಂದು ಸಾಧಾರಣ ಮರ ಎಲೆಗಳ ಮುಖಾಂತರ ಜೈವಿಕ ಕ್ರಿಯೆಯಲ್ಲಿ ಆವಿಯಾಗಿ ಬಿಡುಗಡೆ ಮಾಡುವ ನೀರಿನ ಪ್ರಮಾಣ ದಿನಕ್ಕೆ ಐವತ್ತು ಲೀಟರ್! ಈ ಕ್ರಿಯೆಯಲ್ಲಿ ಒಂದು ಮರ ತಿಂಗಳಿಗೆ ಸರಾಸರಿ ಹದಿನಾಲ್ಕು ಟನ್ ನೀರನ್ನು ನೆಲದಾಳದಿಂದ ಮೇಲಕ್ಕೆತ್ತಿ ವಾತಾವರಣಕ್ಕೆ ಬಿಡುಗಡೆ ಮಾಡುತ್ತದೆ”

ಕೆಲವೇ ದಿನಗಳಲ್ಲಿ ಒಂದು ದಿನ “ನಾಗಮ್ಮತ್ತೆ ರಾತ್ರಿ ಮಲಗಿದವಳು ಮುಂಜಾನೆ ನಾಪತ್ತೆಯಾಗಿದ್ದಾಳೆ” ಎಂಬ ಆತಂಕದ ಸುದ್ದಿ ತಂದರು. ಅಪ್ಪ ನಮ್ಮ ದಾಯಾದಿ ಇಬ್ಬರು ಚಿಕ್ಕಪ್ಪಂದಿರೊಂದಿಗೆ ಹಿಲ್ಲೂರಿಗೆ ಹೋದರು. ಅಲ್ಲಿ ಮತ್ತೆರಡು ದಿನಗಳವರೆಗೆ ಬೆಟ್ಟ, ಗುಡ್ಡ, ನದಿ, ಕೆರೆ, ಬಾವಿ ಇತ್ಯಾದಿ ಎಲ್ಲ ಕಡೆಗಳಲ್ಲಿಯೂ ಹುಡುಕಾಟ ಮಾಡಿದ್ದಾರೆ. ಆಗಲೂ ಮಂತ್ರವಾದಿಗಳು “ಅವಳು ಬದುಕಿದ್ದಾಳೆ… ಉತ್ತರ ದಿಕ್ಕಿನಲ್ಲಿ ಇದ್ದಾಳೆ…” ಇತ್ಯಾದಿ ಭವಿಷ್ಯ ನುಡಿದು ಹುಡುಕಾಟದ ತಂಡವನ್ನು ಅಲೆದಾಡಿಸಿ ನೋಡಿದರಲ್ಲದೆ ಅತ್ತೆಯು ಎಲ್ಲಿಯೂ ಕಾಣಸಿಗಲಿಲ್ಲ.

ಅಂಕಣ ಬರಹ ತೊರೆಯ ಹರಿವು ಅಕ್ಷಯ ವಸ್ತ್ರವೂ.. ಅಕ್ಷೋಹಿಣಿ ಸೈನ್ಯವೂ… ತಂದೆ ಕೊಡಿಸೋ ಸೀರೆ; ಮದುವೆ ಆಗೋವರೆಗೆ. ತಾಯಿ ಕೊಡಿಸೋ ಸೀರೆ; ತಾಯಿ ಆಗೋವರೆಗೆ, ಬಂಧು ಕೊಡಿಸೋ ಸೀರೇ ಬಣ್ಣ ಹೋಗೋವರೆಗೆ, ಗಂಡಾ ಕೊಡಿಸೋ ಸೀರೇೇೇ… ಕುಂಕುಮ ಇರುವವರೆಗೆ, ಹೆಣ್ಣಿನ ಜನುಮ ಕಳೆಯುವವರೆಗೆ, ಮಣ್ಣಿನ ಮಮತೆ ಮರೆಯೋವರೆಗೆ…’ ಹೆಣ್ಣು ಮನಸ್ಸುಗಳನ್ನು ಕಲಕಿ ಬಿಡುವ ಅಣ್ಣಾವ್ರ ದನಿಯಲ್ಲಿ ಬಂದ ಈ ಹಾಡಿಗಿರುವ ವೈಟೇಜೇ ಬೇರೆ…             ಸ್ತ್ರೀವಾದ, ಸ್ವಾಭಿಮಾನ ಮುಂತಾದವೆಲ್ಲಾ ಅರ್ಥವಾಗದ ಮುಗ್ಧೆಯರಿಂದ […]

ಒಮ್ಮೆ ಕಾರವಾರದಲ್ಲಿ ‘ಗಂಡಭೇರುಂಡ’ ಚಲನ ಚಿತ್ರದ ಚಿತ್ರೀಕರಣ ನಡೆಯುತ್ತಿರುವಾಗ ನನ್ನನ್ನು ಕರೆಸಿಕೊಂಡ ಕೃಷ್ಣಮೂರ್ತಿ ಚಿತ್ರತಂಡದ ಭೇಟಿಗೆ ಅವಕಾಶ ಪಡೆದುಕೊಂಡಿದ್ದ. ಅಂದು ಕಾರವಾರದ ಪ್ರತಿಷ್ಠಿತ ಗೋವರ್ಧನ ಹೋಟೆಲಿನಲ್ಲಿ ನಾಯಕ ನಟರಾದ ಶ್ರೀನಾಥ, ಶಂಕರನಾಗ್, ಖಳನಟ ವಜ್ರಮುನಿ ಮತ್ತು ನಾಯಕಿ ಜಯಮಾಲಾ ಅವರ ಜೊತೆಯಲ್ಲಿ ಒಂದೆರಡು ಗಂಟೆಗಳ ಕಾಲ ಸಮಯ ಕಳೆದದ್ದು ಒಂದು ಅವಿಸ್ಮರಣೀಯ ಸಂದರ್ಭವೇ ಆಗಿತ್ತು

‘ಕುರಿಗಳು ಸಾರ್ ಕುರಿಗಳು..’ ಎಂಬಂತಹ ನಾವು ನೀವು ಅವರು ಇವರು…ತಲೆತಗ್ಗಿಸಿಯೇ ಮುನ್ನಡೆಯುವವರಾಗಿರುವುದರಿಂದ ಎದುರಿರುವ ಸತ್ಯ ಕಾಣುವುದು ಹೇಗೆ? ಮರೆ ಮಾಚಿದನ್ನೇ ಮುಂದುವರೆಸಿಕೊಂಡು ಹೋಗುವುದರಲ್ಲಿ ಮಾತ್ರ ಕ್ರಿಯಾಶೀಲರಾಗಿರುತ್ತೇವೆ.

Back To Top