Category: ಅಂಕಣ

ಅಂಕಣ

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—25 ಆತ್ಮಾನುಸಂಧಾನ ತುಂಬ ಪ್ರಭಾವ ಬೀರಿದ ಪ್ರಾಚಾರ್ಯರು ಪ್ರಾಧ್ಯಾಪಕರು ಪದವಿ ಶಿಕ್ಷಣದ ಕಾಲೇಜು ಜೀವನದಲ್ಲಿ ಪ್ರಾಮಾಣಿಕ ನಿಷ್ಠೆ ತೋರಿದ್ದರೆ ಅಪಾರವಾದ ಜ್ಞಾನನಿಧಿ ಕೈವಶ ಮಾಡಿಕೊಳ್ಳುವ ಎಲ್ಲ ಅವಕಾಶಗಳೂ ಇದ್ದವು. ಆದರೆ ಸೂಕ್ತ ಮಾರ್ಗದರ್ಶನ, ತಿಳುವಳಿಕೆಯ ಕೊರತೆಯಿಂದಾಗಿ ಕೇವಲ ಹರೆಯದ ಹುಡುಗಾಟಿಕೆಯಲ್ಲಿ ಪದವಿ ಶಿಕ್ಷಣದ ಮೂರು ವರ್ಷಗಳು ತೀರ ಹಗುರವಾಗಿ ಕಳೆದು ಹೋದವು. ಆದರೂ ತಮ್ಮ ಪಾಠ ಕ್ರಮದ ವಿಶಿಷ್ಠತೆ, ವೇಷಭೂಷಣ, ನಡೆನುಡಿಗಳಿಂದಲೇ ಮನಸ್ಸನ್ನು ಗಾಢವಾಗಿ ಪ್ರಭಾವಿಸಿದ ಅಧ್ಯಾಪಕರು ಮತ್ತಿತರ ವ್ಯಕ್ತಿಗಳನ್ನು […]

ಕಲಿಕೆಯ ದೃಷ್ಟಿಯಿಂದ ಸರಸಮ್ಮನ ಸಮಾಧಿಯ ಚಿತ್ರೀಕರಣದ ಸಮಯದಲ್ಲಿ ಹಲವಾರು ಕಲಾವಿದರ ಅಭಿನಯ, ದೇಹಭಾಷೆ, ತೊಡಗಿಸಿಕೊಳ್ಳುವ ಪರಿ, ಸಂಭಾಷಣೆಯನ್ನು ಉಚ್ಚರಿಸುವ ಬಗೆ ಇವನ್ನೆಲ್ಲ ಬಹಳ ಸಮೀಪದಿಂದ ಗಮನಿಸಿದ್ದೆ. ಇದು ನನ್ನೊಳಗಿನ ರಂಗದ ಹುಚ್ಚಿಗೆ ಬಹಳ ಕಾಣಿಕೆ ನೀಡಿದೆ.

ಮತ್ತೆ ಏನೇನೋ ವಿಚಾರಗಳಿವೆ ಬರೆಯಲಿಕ್ಕೆ. ಆದರೆ ಬರೆಯ ಹೊರಟ ಕೂಡಲೇ ಅದು ಸುತ್ತಿ ಸುತ್ತಿ ಸುಳಿದು ಮತ್ತದೇ ದಾರಿಗೆ ಹೊರಳಿಬಿಡುವುದು ಪರಿಸ್ಥಿತಿಯ ನಾವು ತಳ್ಳಿ ಹಾಕಲಾಗದ ಪ್ರಭಾವವೇ ಇರಬಹುದು. ಅದನ್ನು ಮೀರಬೇಕಾದ ಸಾವಾಲೊಂದು ಮುಂದೆ ಕುಳಿತಿದೆ. ಅದನ್ನೀಗ ಮೀರಲೇಬೇಕಿದೆ.

ಮನುಷ್ಯರ ಅಭಿವ್ಯಕ್ತಿಯು ನಾನಾ ರೂಪಗಳಲ್ಲಿ ಆಗುತ್ತಿರುವುದರಿಂದ ಅವರ ಯಶಸ್ಸನ್ನು ಅಳೆಯವುದಕ್ಕೆ ತೊಡಗುತ್ತೇವೆಯಾ? ಎಂದರೆ, ಅದೂ ಅಲ್ಲವೆನಿಸುತ್ತದೆ. ಮರಗಿಡ, ನದಿ,ಬೆಟ್ಟ ಪಶುಪಕ್ಷಿಗಳಾದಿಯಾಗಿ ಸಕವ ಚರಾಚರ ಜೀವಚೇತನಗಳೂ ತಮ್ಮ ಸಾಮರ್ಥ್ಯವನ್ನು ನಾನಾ ಬಗೆಯಲ್ಲಿ ಸಮರ್ಥವಾಗಿ ನಿರೂಪಿಸುತ್ತಿವೆಯಲ್ಲಾ!

ದೀಪ ಮತ್ತೊಂದು ದೀಪವನ್ನು ಹಚ್ಚುತ್ತದೆಯೆ ಹೊರತು ಅಸೂಯೆಯಿಂದ ತಾನೇ ಬೆಳಗಬೇಕೆಂಬ ಸ್ವಾರ್ಥದಿಂದ ಅಥವಾ ಅಹಂನಿಂದ ಇನ್ನೊಂದು ದೀಪವನ್ನು ನಂದಿಸುವುದಿಲ್ಲ. ನಾವುಗಳೂ ದೀಪಗಳಾಗಬೇಕಿದೆ. ಹಿತಶತೃಗಳ ಮುಖವಾಡ ಕಿತ್ತೆಸೆದು ನಿಜ ಮಾನವರಾಗಿ ಬದುಕಬೇಕಿದೆ

ಬಸ್ಸು ಅಂಕೋಲೆಯ ಬಸ್ ನಿಲ್ದಾಣದಲ್ಲಿ ಬಂದು ನಿಲ್ಲುವ ಹೊತ್ತಿಗೆ ಸರಿಯಾಗಿ ಸುತ್ತಲಿನ ಬೇಲೇಕೇರಿ, ಭಾವಿಕೇರಿ, ಕಣಗಿಲ ಮುಂತಾದ ಊರುಗಳಿಂದಲೂ ಬಸ್ಸುಗಳು ಬಂದು ನಿಲ್ಲುತ್ತಿದ್ದವು. ಎಲ್ಲ ಬಸ್ಸುಗಳಲ್ಲಿಯೂ ಅಷ್ಟಿಷ್ಟು ಕಾಲೇಜು ವಿದ್ಯಾರ್ಥಿಗಳು ಇರುತ್ತಿದ್ದರು. ಎಲ್ಲರೂ ಕೂಡಿಯೇ ಕಾಲೇಜಿನವರೆಗೆ ಕಾಲ್ನಡಿಗೆಯಲ್ಲಿ ನಡೆಯುವಾಗ ಇಂದಿನ ‘ದಿನಕರ ದೇಸಾಯಿ ರಸ್ತೆ’ ಅಕ್ಷರಶಃ ಜಾತ್ರೆ ಹೊರಟಂತೆ ಕಾಣುತ್ತಿತ್ತು

ರಂಗದ ಮೇಲಿನ ಕೆಮಿಸ್ಟ್ರಿಗೆ, ರಂಗದ ಕೆಳಗಿನ ಕಲಾವಿದರ ಅನ್ಯೋನ್ಯತೆ, ಕಾಳಜಿ, , ಹಾಸ್ಯ ಲಾಸ್ಯಗಳು ಅತ್ಯಂತ ಅಗತ್ಯ ಜೀವತಂತುಗಳು ಎಂಬುದನ್ನು ನಾನು ನಿಧಾನವಾಗಿ, ಪಾರಿವಾಳ ಒಂದೊಂದೇ ಕಾಳುಗಳನ್ನು ಹೆಕ್ಕಿ ನುಂಗುವಂತೆ, ಕಲಿಯುತ್ತಲೇ ಇದ್ದೆ.

ಹಾಗಾಗಿ ಮನಸ್ಸನ್ನು ಹಗುರವಾಗಿ ಪರಿಗಣಿಸದೇ, ಕಣ್ಣಿದುರಿಗೆ ಬಾರದ ಈ ಅನಿವಾರ್ಯದ ಅನಂಗವನ್ನು ಬಹಳ ಗೌರವದಿಂದ ಕಾಣುತ್ತಾ, ನಂನಮ್ಮ ಮನಸ್ಸು ಎಲ್ಲೋ ಮಾಯವಾಗಲು ಬಿಡದೆ ಅದರ ಸ್ವಾಸ್ಥ್ಯ ಕಾಯ್ದುಕೊಳ್ಳೋಣ. ಕೀಟಲೆಯ ಮನಸ್ಸು ನಮಗಿದ್ದರೂ ಸರಿಯೇ ಆದರೆ, ಇತರರನ್ನು ಕಾಡುವ ಕೋಟಲೆಯ ರಾಕ್ಷಸ ಮನಸ್ಸು ನಮ್ಮದಾಗದಿರಲಿ

ಅಂಕಣ ಬರಹ ಮೂರು ಗಳಿಗೆಯ ಬಾಳಿನಲ್ಲಿ…           ಯಾರಿಗೆ ಯಾರುಂಟು ಎರವಿನ ಸಂಸಾರ ನೀರ ಮೇಲಣ ಗುಳ್ಳೆ ನಿಜವಲ್ಲ ಹರಿಯೆ..        ಶುದ್ಧ ವೈರಾಗ್ಯ ಮೂಡಿಸುವ ಈ ದಾಸರ ಪದವನ್ನು  ಬಹುಶಃ ಹಳೆಯ ತಲೆಮಾರಿನವರು ಅದೆಷ್ಟು ಸಲ ಗುಣುಗುಣಿಸಿರಬಹದೋ ಏನೋ..        ನಿಜವೆ ?  ಈ ಪ್ರಪಂಚದಲ್ಲಿ ಯಾರಿಗೂ ಇಲ್ಲವೆ? ಲೌಕಿಕ ವ್ಯಾಪಾರಿಗಳಾದ ನಾವುಗಳು ಕಟ್ಟಿಕೊಂಡ ಸಂಸಾರ , ಕೈಕೊಂಡ ವೃತ್ತಿ , ಗೆಳೆಯರು ,ಬಂಧುಗಳು ಇವರೆಲ್ಲ ಏನೂ ಅಲ್ಲವೆ? ನೀರಿನೊಳಗಿದ್ದರೂ ನೀರನ್ನು ಸೋಕಿಸಿಕೊಳ್ಳದ ಕಮಲಪತ್ರದಂತಹ ಬದುಕು […]

Back To Top