ಅಂಕಣ

ಅಂಕಣ

ಅಂಕಣ
ದೀಪದ ನುಡಿ

ಈ ಬದುಕಿನಲ್ಲಿ ಗಳಿಸಿದ ಪ್ರತಿಯೊಂದನ್ನೂ ಕಾಲದ ಜೊತೆಜೊತೆಗೇ ಮುಂದೆ ಸಾಗುತ್ತ ಪ್ರತಿಯೊಬ್ಬರೂ ಕಳೆದುಕೊಳ್ಳಲೇಬೇಕಾಗುತ್ತದೆ. ಹುಟ್ಟಿನೊಂದಿಗೆ ಅಂಟಿಕೊಂಡ ನಂಟುಗಳ ಜೊತೆಜೊತೆಗೇ ಗಳಿಸಿದ ಸಮಸ್ತವೂ ಬದುಕಿನ ಸಂಕಲನಕ್ಕೆ ಬಂದರೆ ಎಲ್ಲೆಲ್ಲಿ ಯಾವ ಯಾವುದರ ಘಳಿಗೆ ತೀರುತ್ತದೋ ಅಲ್ಲಲ್ಲಿ ಅವುಗಳೆಲ್ಲಾ ಬದುಕಿನಿಂದ ಕಳೆದುಹೋಗಲಾರಂಭಿಸುತ್ತವೆ.

Read More
ಅಂಕಣ
ಕೇರಿ ಕೊಪ್ಪಗಳ ನಡುವೆ

ಅಂಕಣ ಬರಹ . ರಾಮಕೃಷ್ಣ ಗುಂದಿ ಅವರ ಆತ್ಮಕಥೆ—23 ಆತ್ಮಾನುಸಂಧಾನ ಅಂಕೋಲೆಯ ಗೋಖಲೆ ಸೆಂಟನರಿ ಕಾಲೇಜಿಗೆ… ಬಿ.ಎ. ಪದವಿ ಶಿಕ್ಷಣ ಪಡೆಯುವುದಕ್ಕಾಗಿ ಅಂಕೋಲೆಯ ಗೋಖಲೆ ಸೆಂಟನರಿ ಕಾಲೇಜಿಗೆ ಸೇರಲು ಬಯಸಿದೆ. 1966ರಲ್ಲಿ ಮಾನ್ಯ ದಿನಕರ ದೇಸಾಯಿಯವರು ತಮ್ಮ ಕೆನರಾ ವೆಲ್ಫೇರ್ ಟ್ರಸ್ಟ್ ಶಿಕ್ಷಣ ಸಂಸ್ಥೆಯ ಮೂಲಕ ಸ್ಥಾಪಿಸಿದ ಗೋಖಲೆ ಸೆಂಟನರಿ ಕಾಲೇಜು ನನ್ನಂಥ ಸಾವಿರಾರು ಬಡ ವಿದ್ಯಾರ್ಥಿ ಗಳ ಪದವಿ ಶಿಕ್ಷಣದ ಕನಸನ್ನು ನನಸಾಗಿಸಿದ್ದು ಈಗ ಇತಿಹಾಸ. ನಾನು ವಿದ್ಯಾರ್ಥಿಯಾಗಿ ಕಾಲೇಜು ಸೇರುವ ಹೊತ್ತಿಗೆ ಪದವಿ ಅಭ್ಯಾಸ […]

Read More
ಅಂಕಣ
ರಂಗ ರಂಗೋಲಿ

ಎತ್ತರದ ಹೊಸ್ತಿಲಿನಾಚೆಗಿನ ಅಂಗಳಕ್ಕೆ ಮನೆಯ ಸೊಸೆ ದಾಟಿ ಬಂದದ್ದೇ, ನಾಟಕದ ಮೊದಲ ದೃಶ್ಯಕ್ಕೆ ತೆರೆ ತೆರೆದಂತೆಯೇ, ಅಲ್ಲವೇ.

Read More
ಅಂಕಣ

ವಸುಂಧರಾ ಕದಲೂರು ಹೊಸ ಅಂಕಣ ‘ತೊರೆಯ ಹರಿವು’

ಸಮೂಹ ಪ್ರಜ್ಞೆ ಜಾಗೃತವಾಗಬೇಕಾದರೆ, ಸಾಮಾಜಿಕರ ವೈಯಕ್ತಿಕವಾದ ನಿಲವುಗಳು ಸ್ಪಷ್ಟವಾಗಿರಬೇಕು. ತರ್ಕಬದ್ಧವಾಗಿರಬೇಕು. ದೈನಂದಿನ ವಿವರಗಳಲ್ಲಿ ವಿಜ್ಞಾನವನ್ನು ಕೇವಲ ಉಪಯೋಗಿತ ಉಪಕರಣಗಳಿಗೆ ಸೀಮಿತಗೊಳಿಸಿಕೊಳ್ಳದೇ, ವಿವೇಚನೆಗೆ ಮೂಲ ಇಂಧನವಾಗಿಸಿ ಕೊಳ್ಳಬೇಕು

Read More
ಅಂಕಣ
ಕಾಲಾ ಪಾನಿ

ಅಂಕಣ ಬರಹ ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ ಸರಣಿಬರಹ……….. ಅದ್ಯಾಯ-8 ಸ್ಕೂಬಾ ಡೈವಿಂಗ್ ಬಗ್ಗೆ ಓದಿ ಮಾತ್ರ ಗೊತ್ತು. ಸತೀಶ್ ಅವರನ್ನು ಬಿಟ್ಟು ನಾನು ಡೈವ್ ಮಾಡಲು ಹೋಗುವುದು ಸಾಧ್ಯವಿರಲಿಲ್ಲ. ಮಕ್ಕಳಿಬ್ಬರೂ ಗಣೇಶಣ್ಣನ ಕುಟುಂಬದ ಜೊತೆ ಸ್ಕೂಬಾ ಡೈವಿಂಗ್ ನ ಅನುಭವವನ್ನು ಪಡೆಯಲು ಹೋದರು. ಅಂಡಮಾನ್ ಗೆ ಹೊರಡುವಾಗ ಮಾಡಿದ ತಯಾರಿಯಲ್ಲಿ ಸಾಕಷ್ಟು ಚಿಲ್ಲರೆ ದುಡ್ಡು ಐವತ್ತು, ನೂರು, ಇನ್ನೂರರ ನೋಟುಗಳನ್ನು ಇಟ್ಟುಕೊಂಡಿದ್ದೆವು. ಹತ್ತು ಇಪ್ಪತ್ತರ ನೋಟುಗಳು ಕೂಡಾ. ಆದರೆ […]

Read More
ಅಂಕಣ
ದೀಪದ ನುಡಿ

ಅಂಕಣ ಬರಹ ಬೆಳೆದು ದೊಡ್ಡವರಾಗುವುದೆಂದರೆ ಬೆಳೆದು ದೊಡ್ಡವರಾಗುವುದೆಂದರೆ ಪ್ರಜ್ಞೆ ಮತ್ತು ಸೂಕ್ಷ್ಮತೆಗಳನ್ನು ಕಳೆದುಕೊಳ್ಳುವುದಲ್ಲ.ಹದಿಹರೆಯದಲ್ಲಿ ಮಕ್ಕಳು ಬೆಳೆಸಿಕೊಳ್ಳುವ ಮನೋಧೋರಣೆಯನ್ನ ನಂತರ ಬದಲಿಸುವುದು ಬಹಳ ಕಷ್ಟ. ಇದೇ ಕಾರಣಕ್ಕೆ ಹದಿಹರೆಯದ ಮಕ್ಕಳ ತಾಯ್ತಂದೆಯರು ಬಹಳ ವ್ಯಥಿತರಾಗುವುದು.ಮಕ್ಕಳು ಹೇಳುವ ಒಂದು ಸಣ್ಣ ಸುಳ್ಳು , ಅವರು ತೋರುವ ಒಂದು ಸಣ್ಣ ನಿರ್ಲಕ್ಷ್ಯ ತಂದೆ ತಾಯಿಗೆ ಬಹಳ ನೋವನ್ನುಂಟುಮಾಡುತ್ತದೆ. ಮಕ್ಕಳೇ ಅವರ ಜಗತ್ತು.ಮಕ್ಕಳಿಗಾಗೇ ಬದುಕು ಸವೆಸುವ ತಾಯ್ತಂದೆಯರನ್ನ ಮಕ್ಕಳು ಅರ್ಥ ಮಾಡಿಕೊಳ್ಳುವಲ್ಲಿ ಬಹಳಷ್ಟು ಸಲ ಎಲ್ಲೋ ಸೋಲುತ್ತಾರೆ. ಹಾಗೊಮ್ಮೆ ಅರ್ಥ ಮಾಡಿಕೊಂಡರೂ ಕಾಲ […]

Read More
ಅಂಕಣ
ಮರಣವೇ ಮಹಾನವಮಿ

ಎರಡು ವಚನಗಳನ್ನು ಗಮನಿಸಿದರೆ ಎರಡು ತನ್ನ ಭಾಷೆ, ರಾಚನಿಕ ವಿನ್ಯಾಸ ಮತ್ತು ಕೇಳುಗನ ಮೇಲೆ ಬೀರುವ ಪರಣಾಮದಲ್ಲಿ ಭಿನ್ನವಾದ ಮಾರ್ಗಗಳನ್ನು ಹಿಡಿದವುಗಳೇ ಆಗಿವೆ. ಒಂದು ಪ್ರಶ್ನಾರ್ಥಕವಾಗಿ ನಡೆದರೆ, ಮತ್ತೊಂದು ಬದಲಾದ ಕಾಲ, ಸಮಾಜಕ್ಕೆ ಹಿಂದಿನ ಮೌಲ್ಯವೊಂದನ್ನು ಸಾರಿ ಹೇಳಬೇಕಾದಾಗ ಉಂಟಾದ ಖೇಧ, ಸಿಟ್ಟುಗಳು ಕೆಲಸ ಮಾಡಿವೆ. ‘ಅರಿವುಳ್ಳೊಡೆ’ ಎಂಬ ಒಂದು ಪದವನ್ನು ಬಳಸಿ ಅರಿವನ್ನು ಉಂಟುಮಾಡುವುದರ ಕಡೆಗೆ ತನ್ನ ಉದ್ದೇಶವನ್ನು ದಾಸಿಮ್ಮಯ್ಯ ಯಶಸ್ವಿಯಾಗಿ ಹಸ್ತಾಂತರ ಮಾಡಿಬಿಡುತ್ತಾನೆ, ಆದರೆ ಬಸವಣ್ಣನವರಲ್ಲಿ ಸಿಟ್ಟು, ದೋಷಣೆಗಳು ಬಂದಿವೆ

Read More
ಅಂಕಣ
ಕೇರಿ ಕೊಪ್ಪಗಳ ನಡುವೆ

ನಾಡು ಮಾಸ್ಕೇರಿಯಿಂದ ನಾನು, ಹಾರು ಮಾಸ್ಕೇರಿಯ ಕುಪ್ಪಯ್ಯ ಗೌಡ, ಮುಕುಂದ ಪ್ರಭು, ಗಂಗಾವಳಿಯ ಯುಸೂಫ್, ಸದಾನಂದ ಕೂರ್ಲೆ, ಬಾವಿಕೊಡ್ಲಿನ ರಮೇಶ ಗೌಡ ಮೊದಲಾಗಿ ಆರೆಂಟು ಜನ ಸೇರಿ ದಿನವೂ ಕಾಲ್ನಡಿಗೆಯಲ್ಲೇ ಗೋಕರ್ಣಕ್ಕೆ ಹೋಗಿ ಬರುತ್ತಿದ್ದೆವು.

Read More
ಅಂಕಣ
ರಂಗ ರಂಗೋಲಿ

ಅಂಕಣ ಬರಹ “ಆಕಾಶವಾಣಿಯ ಅವಕಾಶದಾಕಾಶ” “ಬರೆದ ಕಥೆ ಹಾಗೇ ಬಿಡುವಂತಿಲ್ಲ. ವಿಳಾಸ ಕೊಡುತ್ತೇನೆ. ಆಕಾಶವಾಣಿಗೆ ಕಳುಹಿಸು. ನೋಡೋಣ! ನೀನು ಎಂತಹ  ಕಥೆಗಾರ್ತಿ”.ನಾನು ಬರೆದ ಕಥೆಯೊಂದು ಸರ್ ಗೆ ಸಿಕ್ಕಿ ಗಂಡ- ಹೆಂಡತಿ ಅದನ್ನು ಓದಿ ಮುಂದಿನ ಬಾರಿ ಅವರ ಮನೆಗೆ ಹೋದಾಗ ಇಬ್ಬರೂ ಸೇರಿ ವಿಚಾರಣೆಗೆ ಕಟಕಟೆಯಲ್ಲಿ ನಿಲ್ಲಿಸಿದ್ದರು. ತಲೆತಗ್ಗಿಸಿದವಳ ಪರ ಲಾಯರ್ ಆಗಿ ಅವರ ಶ್ರೀಮತಿ ನಿಂತಿದ್ದರು. ಕೊನೆಗೂ ತೀರ್ಪು ಹೊರಬಿದ್ದಿತ್ತು.  ಚಿಕ್ಕನಡುಕ,ಸಂಭ್ರಮ ಜೊತೆಯಾಗಿತ್ತು. ಆದರೆ ಸರ್ ಗೆ ಆಕಾಶವಾಣಿಯಲ್ಲಿ ಪರಿಚಯವಿದೆ. ಅವರು ಒಂದು ಮಾತು […]

Read More
ಅಂಕಣ
ಪಾರಿಜಾತ

ಅಂಕಣ ಬರಹ ಸವಡಿಯಾಗುವ ಸವತಿಯರು ಭಾರತ ಬಹುಸಂಸ್ಕೃತಿ ನಾಡು. ಅಂತೆಯೆ ಬಹು ಪತ್ನಿತ್ವ ಸಮಾಜವುಳ್ಳ ಕೇಂದ್ರಸ್ಥಾನವೂ ಹೌದು.ಒಬ್ಬ ಪುರುಷನನ್ನು ಇಬ್ಬರು ಮಹಿಳೆಯರು ಮದುವೆಯಾದರೆ ಅವರು ಒಬ್ಬರಿಗೊಬ್ಬರು ಸವತಿಯಾಗುವರು. ‘ಸವತಿ’ ಎನ್ನುವ ಈ ಶಬ್ದ ಮೂಲತಃ ಸಹವರ್ತಿ ಎನ್ನುವ ಪದದಿಂದ ಬಂದಿದ್ದು. ಇದರ ಅರ್ಥ ಇಬ್ಬರೂ ಸಮಾನ ಹಕ್ಕು ಹೊಂದಿರುವುದು ಎಂದಾಗುತ್ತದೆ. ಸಮಾನ ಹಕ್ಕುಗಳು, ಸಮಾನ ಸಕಲ ಸವಲತ್ತುಗಳನ್ನು ಸಮಾನವಾಗಿ ಪಡೆಯುವರನ್ನು ಸವತಿ ಎಂದು ಕರೆಯುವರು‌. ಈ ಸವತಿ ಎನ್ನುವ ಪದ ಹೊಟ್ಟೆಕಿಚ್ಚು, ಮತ್ಸರ, ವೈರಿ, ಅಸಹನೆ ಎಂಬ […]

Read More