Category: ಇತರೆ

ಇತರೆ

ನಮ್ಮ ಮಕ್ಕಳು ಮಕ್ಕಳಲ್ಲ

ಸರಿತಾ ಮಧು ಮಕ್ಕಳಿಗಾಗಿ ಹಂಬಲ ಎಲ್ಲರದು. ಅಂದಿನಿಂದ ಇಂದಿನವರೆಗೂ ಮಕ್ಕಳು ಮನೆಯ ನಂದಾದೀಪ. ಮಕ್ಕಳಿರಲವ್ವ ಮನೆತುಂಬ ಎನ್ನುವ ಕಾಲ ಸರಿದು ಆರತಿಗೊಬ್ಬಳು ಕೀರ್ತಿ ಗೊಬ್ಬ , ತದನಂತರ ನಾವಿಬ್ಬರು ನಮಗೊಂದು ಮಗು ಅನ್ನುವ ಕಾಲಘಟ್ಟದಲ್ಲಿದ್ದೇವೆ. ಇದೆಲ್ಲವೂ ಸರಿಯಷ್ಟೇ ಆಧುನಿಕತೆಯ ಬೆನ್ನನೇರಿದ ಈಗಿನವರು ಮಗುವಿನ್ನೂ ಗರ್ಭದಲ್ಲಿರುವಾಗಲೇ ವಿದ್ಯಾಭ್ಯಾಸದ ವಿಚಾರಕ್ಕೆ ತಲೆಬಿಸಿ ಮಾಡಿಕೊಳ್ಳುತ್ತಾರೆ.ಮೊದಲೆಲ್ಲಾ ಹೀಗಿರುತ್ತಿತ್ತೇ? ಅವಿಭಕ್ತ ಕುಟುಂಬಗಳಲ್ಲಿ ಅನೌಪಚಾರಿಕವಾಗಿ ಪ್ರಾಥಮಿಕ ಶಿಕ್ಷಣ ಆರಂಭವಾಗುತ್ತಿತ್ತು.ಐದುವರ್ಷಗಳು ಪೂರ್ಣ ತುಂಬುವವರೆಗೂ ಬಾಲ್ಯಾವಸ್ಥೆಯ ಎಲ್ಲಾ ಸುಖಗಳನ್ನು ಸಂಪೂರ್ಣ ಬಾಚಿಕೊಳ್ಳುತ್ತಿದ್ದೆವು. ಮನೆಯ ಅಜ್ಜ ಅಜ್ಜಿ, ದೊಡ್ಡಪ್ಪ ದೊಡ್ಡಮ್ಮ, […]

ವರ್ಧಮಾನ ಸಾಹಿತ್ಯ ಪ್ರಶಸ್ತಿ

ವರ್ಧಮಾನ ಸಾಹಿತ್ಯ ಪ್ರಶಸ್ತಿ ಡಾಕ್ಟರ್ ಬಾಳಾ ಸಾಹೇಬ ಲೋಕಾಪುರ ಮತ್ತು ಡಾ ರಾಜಶೇಖರ ಹಳೆಮನೆ ಅವರಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ ಕಳೆದ ಮೂವತ್ತೊಂಬತ್ತು ವರ್ಷಗಳಿಂದ ಪ್ರತಿಷ್ಠಿತ ವರ್ಧಮಾನ ಸಾಹಿತ್ಯ ಪ್ರಶಸ್ತಿಯನ್ನು ನೀಡುತ್ತಾ ಬಂದಿರುವ ಮೂಡಬಿದಿರೆಯ ವರ್ಧಮಾನ ಪ್ರಶಸ್ತಿ ಪೀಠವು ೨೦೧೯ರ ಸಾಲಿನ ಪ್ರಶಸ್ತಿಗಳನ್ನು ನಿರ್ಣಯಿಸಿದ್ದು ಅಥಣಿಯ ಡಾ ಬಾಳಾಸಾಹೇಬ ಲೋಕಾಪುರ ಅವರಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ ಮತ್ತು ಉಜಿರೆಯ ಡಾ ರಾಜಶೇಖರ ಹಳೆಮನೆ ಅವರಿಗೆ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಯನ್ನು ಘೋಷಿಸಿದೆ . ವರ್ಧಮಾನ ಸಾಹಿತ್ಯ ಪ್ರಶಸ್ತಿಗೆ […]

ಕೊಂಕಣಿ ಕವಿಗಳ ಪರಿಚಯ

ಕೊಂಕಣಿ ಕವಿಗಳ ಪರಿಚಯ ಪರಿಚಯಿಸಿದವರು ಶ್ರೀಯುತ ಗುರುದತ್ ಬಂಟ್ವಾಳಕಾರ್.(ಗುರು ಬಾಳಿಗಾ) ಕರ್ನಾಟಕದ ಕೊಂಕಣಿ ಕವಿಗಳನ್ನು ಪರಿಚಯಿಸುವ ಒಂದು ಜವಾಬ್ದಾರಿಯನ್ನು ಸಂಗಾತಿ ಪತ್ರಿಕೆ ನನಗೆ ಕೊಟ್ಟಿದೆ. ಮೊದಲಿಗೆ ನಾನು ಪರಿಚಯಿಸಲು ಇಚ್ಛಿಸುವ ಕವಿ ಶ್ರೀಯುತ ಗುರುದತ್ ಬಂಟ್ವಾಳಕಾರ್. ಗುರು ಬಾಳಿಗಾ ಎಂಬ ಕಾವ್ಯನಾಮದಿಂದ ಬರೆಯುವ ಇವರ ಕವಿತೆಗಳು ಸರಳ ಶಬ್ದಗಳಲ್ಲಿ ಆಳವಾದ ವಿಚಾರಗಳನ್ನು ಮಂಡಿಸುವುದರಲ್ಲಿ ಯಶಸ್ವಿಯಾಗುತ್ತವೆ. ಪ್ರಸ್ತುತ ಮಂಗಳೂರಿನ ಶಕ್ತಿನಗರದಲ್ಲಿರುವ “ವಿಶ್ವ ಕೊಂಕಣಿ ಕೇಂದ್ರ” ದಲ್ಲಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಗುರುದತ್ ಬಂಟ್ವಾಳಕಾರ್ ಅವರು ಅಲ್ಲಿನ ಕೊಂಕಣಿ ಭಾಷಾ […]

ಕ್ಷಮಯಾ ಧರಿತ್ರೀ …

ಕ್ಷಮಯಾ ಧರಿತ್ರೀ … ಲಕ್ಷ್ಮಿ ನಾರಾಯಣ ಭಟ್ ಜೀವನ ಪ್ರವಾಹ ನಿಂತ ನೀರಲ್ಲ; ಅದು ಚಿರಂತನ. ನಿರಂತರವಾಗಿ ಹರಿಯುತ್ತಲೇ ಇರುವುದು ಅದರ ಸ್ವ-ಭಾವ. ಯಾವುದು ವ್ಯಕ್ತಿ/ವಸ್ತುವೊಂದಕ್ಕೆ ಸಹಜ ಭಾವವಾಗಿರುತ್ತದೋ ಅದೇ ಅದರ ಸ್ವಭಾವ. ಆದರೆ ಸ್ವಭಾವವನ್ನು ಪರಿಶ್ರಮ, ಚಿಂತನೆಗಳಿಂದ ಪರಿಷ್ಕರಿಸಿಕೊಳ್ಳಬಹುದು. ಇದು ಮನುಷ್ಯನಾದವನಿಗೆ ಮಾತ್ರ ಪ್ರಕೃತಿಯೇ ಕರುಣಿಸಿದ ವಿಶೇಷ ಕರ್ತೃತ್ವ. ಇದರಿಂದ ಆತ ಪ್ರಕೃತಿಯನ್ನೂ ಮಣಿಸಬಲ್ಲ! ಉದಾಹರಣೆಗೆ, ಎತ್ತರದಿಂದ ತಗ್ಗಿಗೆ ಹರಿಯುವುದು ನೀರಿನ ಸ್ವಭಾವವಲ್ಲವೇ? ಆ ಸ್ವಭಾವವನ್ನು ನಮ್ಮ ಅಗತ್ಯಕ್ಕೆ ತಕ್ಕಂತೆ ಪರಿರ್ತಿಸಿದಾಗ, ಜೋಗದಲ್ಲಿ ಜಲಪಾತವಾಗಿ ಧುಮುಕುವ […]

ನೀ ಒಂದು ಸಾರಿ ನನ್ನ ಮನ್ನಿಸು

ನೀ ಒಂದು ಸಾರಿ ನನ್ನ ಮನ್ನಿಸು ಜಯಶ್ರೀ ಜೆ.ಅಬ್ಬಿಗೇರಿ ಪ್ರೀತಿ ಪ್ರೇಮದ ವಿಷಯದಲ್ಲಿ ತಿರಸ್ಕರಿಸಲ್ಪಟ್ಟರೆ ಅದೆಂಥ ಭಯಂಕರ ನೋವು ಆಗುತ್ತದೆ ಅನ್ನೋದು ಅನುಭವಿಸಿದವರಿಗೆ ಗೊತ್ತು. ಅದೊಂಥರ ಹಲ್ಲು ನೋವಿದ್ದ ಹಾಗೆ. ಎಂಥ ಹುಲಿಯಂಥ ಮನುಷ್ಯನನ್ನೂ ನರಮ್ ಮಾಡಿಬಿಡುತ್ತದೆ. ಈ ಸಾಲುಗಳು ನಿನ್ನ ಭಾವ ಪ್ರಪಂಚವನ್ನು ತಟ್ಟುತ್ತವೆ ಅಂದುಕೊಂಡಿದೀನಿ. ಇವು ಕೇವಲ ಪದಗಳಲ್ಲ. ನಿನಗಾಗಿ ಬರೆದ ಮೌನ ಮಿಲನದ ಮುದ್ದು ಮನವಿ ಪತ್ರ. ಪ್ರೀತಿಯ ಭಾವದಲ್ಲಿ ವಿರಹದ ಉರಿ ಸಣ್ಣಗೆ ಮನಸ್ಸನ್ನು ಸುಡುತ್ತಿದೆ. ಒಂದೇ ಒಂದು ಸಾರಿ ಎದೆಗವಚಿಕೊಂಡು […]

ಕಾಡುವ ವಿಚಾರ…

ಕಾಡುವ ವಿಚಾರ… ವಸುಂಧರಾ ಕದಲೂರು               ಆ ದಿನ ನಿಜಕ್ಕೂ ಬಹಳ ಕಳವಳಪಟ್ಟಿದ್ದೆ. ಏನು ಮಾಡಿದರೂ ನನಗೆ ನಂಬಿಕೆ ಮೂಡುತ್ತಿರಲಿಲ್ಲ. ಏಕೋ ಎದೆಯಾಳದಲಿ ತೀವ್ರ ನೋವಾಗುತ್ತಿರುವ ಅನುಭವ. ಆ ಕ್ಷಣಕ್ಕೆ ಆಶಾಭಂಗದ ಅರ್ಥವೂ, ದಿಗ್ಭ್ರಮೆ ಎಂಬುದರ ಪರಿಚಯವೂ ಆಗಿಹೋಯಿತು. ಎಳೆ ಮನದ ಭಿತ್ತಿಯಲಿ  ಉದಿಸಿದ ದುಃಖ ಹಸಿ ನೆಲದಲ್ಲಿ ಬೇರೂರಿದ ಬೀಜದಂತಾಯ್ತು.       ಹೌದು, ಮೊದಲ ಬಾರಿಗೆ ಪ್ರೀತಿಯ ‘ಗಾಂಧಿ’ ಅವರ ಸಾವು ಹೇಗಾಯಿತೆಂದು ತಿಳಿದಾಗ ನನಗಾದ ಅನುಭವವೇ ಈ ಮೇಲಿನದ್ದು. ‘ಮಹಾತ್ಮ […]

ನೆಲೆ ಸಂಭ್ರಮ – 2020

ನೆಲೆ ಸಂಭ್ರಮ – 2020 ಫೇಸ್ಬುಕ್ ನಲ್ಲಿ ಕಾವ್ಯ ಓದುವುದರ ಮೂಲಕ ಕತೆ ಕೇಳುತ್ತಲೇ ಚಿಂತನೆಗಳನ್ನು ಮೆಲುಕು ಹಾಕುವುದರ ಜೊತೆಗೆ ನೆಲೆ ಸಂಭ್ರಮವನ್ನು ಆಚರಿಸೋಣ ಬನ್ನಿ…… ಎನ್ನುತ್ತಲೇ ಆರಂಭವಾದ ಸಿಂದಗಿಯ ನೆಲೆ ಪ್ರಕಾಶನ ಸಂಸ್ಥೆಗೆ ಇದೀಗ ನಾಲ್ಕು ದಶಕಗಳನ್ನು ಪೂರೈಸುತ್ತಿದೆ. ಇದರ ಹುಟ್ಟಿಗೆ ಪ್ರಮುಖ ಕಾರಣರು ಇದರ ಜೋಡಿ ಸ್ಥoಭದಂತಿರುವ ಡಾ. ಎಂ ಎಂ ಪಡಶೆಟ್ಟಿ ಹಾಗೂ ಡಾ. ಚನ್ನಪ್ಪ ಕಟ್ಟಿಯವರು. ಹವ್ಯಾಸಕ್ಕಾಗಿ ಹುಟ್ಟಿಕೊಂಡ ಸಂಸ್ಥೆ ಸ್ಥಳೀಯ ಲೇಖಕರ ಹಾಗೂ ಮಹಿಳೆಯರ ಕೃತಿಗಳ ಪ್ರಕಟಣೆಗೆ ಆದ್ಯತೆ ನೀಡುವುದರ […]

ನನ್ನ ಇಷ್ಟದ ಕವಿತೆ

ಪೂಜಾ ನಾಯಕ್ ಬೆಳಗು ಜಾವ ರಚನೆ :ದ. ರಾ. ಬೇಂದ್ರೆ ಏಳು ಚಿನ್ನ, ಬೆಳಗಾಯ್ತು ಅಣ್ಣ, ಮೂಡಲವು ತೆರೆಯೆ ಕಣ್ಣ, ನಕ್ಷತ್ರ ಜಾರಿ, ತಮವೆಲ್ಲ ಸೋರಿ, ಮಿಗಿಲಹುದು ಬಾನ ಬಣ್ಣ ಜೇನ್ನೊಣದ ಹೆದೆಗೆ, ಹೂಬಾಣ ಹೂಡಿ, ಜುಮ್ಮೆಂದು ಬಿಟ್ಟ ಮಾರ ಗುಡಿಗೋಪುರಕ್ಕು, ಬಲೆ ಬೀಸಿ ಬಂದ, ಅಗೋ ಬೆಳಕು-ಬೇಟೆಗಾರ. ನಿಶೆಯಿಳಿದ ಉಷೆಯ, ಎಳನಗೆಯ ಬಗೆಗೆ, ಸೋತಿರಲು ಜಗವು ಸವಿಗೆ ಕಣ್ಣಿದಿರು ಒಂದು, ಕಟ್ಟಿತ್ತು ಕನಸು; ಕೂಗೊಂದು ಬಂತು ಕಿವಿಗೆ. ಮಕ್ಕಳಿರ ಕೇಳಿ, ರಸ ಕುಡಿಯಲೇಳಿ, ಹುಸಿನಿದ್ದೆಗಿದ್ದೆ ಸಾಕು […]

ಮಕ್ಕಳ ಕವಿತೆ

ಧೂರ್ತ ಆಮೆ ನೀ.ಶ್ರೀಶೈಲ ಹುಲ್ಲೂರು ಹಂಸವೆರಡು ಕೊಳದ ಬಳಿನೀರನರಸಿ ಬಂದವುನೀರು ಕುಡಿದು ತಣಿದ ಮೇಲೆಆಮೆ ನೋಡಿ ನಿಂದವು ಹರಟೆ ಮಲ್ಲ ಆಮೆ ತಾನೆಕೊಳದ ರಾಜನೆಂದಿತುಅದನು ಇದನು ಏನೊ ಹೇಳಿಅವುಗಳ ತಲೆ ತಿಂದಿತು ಸರಿ,ನಾವು ಬರುವೆವಿನ್ನುಮತ್ತೆ ಸಿಗುವೆವೆಂದವುಬಿಡದ ಆಮೆ ನಡೆಯ ನೋಡಿಮನದಿ ತಾವೆ ನೊಂದವು ನನಗೆ ಕೊಳದ ಸಂಗ ಸಾಕುನದಿಯಲೀಜಬೇಕುಹಾಡಿ ಜಿಗಿದು ಕುಣಿದು ತಣಿದುಜಲದಿ ತೇಲಬೇಕು ದಮ್ಮಯ್ಯ ಎನುವೆ ನಾನುಮಾಡಿ ನೀವ್ ಉಪಾಯವಏನೆ ಬಂದರೂ ಸರಿಯೆಗೆಲುವೆ ನಾ ಅಪಾಯವ ಹಂಸವೆರಡು ಬಡಿಗೆ ತಂದುಆಚೆ ಈಚೆ ಹಿಡಿದವುನಡುವೆ ಆಮೆ ಬಡಿಗೆ […]

ನಾನು ಈಜು ಕಲಿತ ಪ್ರಸಂಗ:

ಪ್ರಬಂದ ನಾನು ಈಜು ಕಲಿತ ಪ್ರಸಂಗ: ಲಕ್ಷ್ಮಿನಾರಾಯಣ್ ಭಟ್ ಪಿ. ಚಿಕ್ಕಂದಿನಲ್ಲಿ ನನಗೆ ಈಜು ಕಲಿಯುವ ಉಮೇದು. ಅದಕ್ಕೆ ಮನೆಯಲ್ಲಿ ಯಥಾಪ್ರಕಾರ ಅಡ್ಡಿ – ‘ಮಾಣಿಗೆ ಏನಾದ್ರೂ ಹೆಚ್ಚು-ಕಮ್ಮಿ’ (ನೇರ ಮಾತಲ್ಲಿ ‘ಗೊಟಕ್!’) ಆದರೆ ಎಂಬ ಭಯ! ಅದಕ್ಕೆ ಸರಿಯಾಗಿ ಅದೇ ಸಮಯಕ್ಕೆ ನಮ್ಮ ಮನೆ ಪಕ್ಕದ ಸುಬ್ರಾಯ ದೇವಸ್ಥಾನದ ಚಿಕ್ಕ, ಅಷ್ಟೇನೂ ಆಳವಿಲ್ಲದಿದ್ದ ಕೆರೆಯಲ್ಲಿ ಈಜು ಕಲಿಯುವಾಗ ಓರಗೆಯ ಹುಡುಗನೊಬ್ಬ ಮುಳುಗಿ ಪ್ರಾಣಬಿಟ್ಟಿದ್ದ. ಅವನು ಮುಳುಗುವುದನ್ನು ನೋಡಿ ಉಳಿದ ಚಿಳ್ಳೆಪಿಳ್ಳೆಗಳೆಲ್ಲಾ ಹೆದರಿ ಪದ್ರಾಡ್! ( ತುಳು […]

Back To Top