Category: ಇತರೆ

ಇತರೆ

ಹಾಗಾಗಿ ತನ್ನ ಹೆಸರಿಗೆ ತಕ್ಕಂತೆ ಮಸಣದಗುಡ್ಡೆಯ ಕೂಲಿ ಕಾರ್ಮಿಕರ ಕಾಲೋನಿಯ, ತನ್ನದೇ ಜಾತಿಯ ಹರೆಯದ ಹುಡುಗಿಯೊಬ್ಬಳನ್ನು ಮೋಹಿಸಿ ಬಲೆಗೆ ಬೀಳಿಸಿಕೊಂಡು, ‘ಮೇಲ್ಸಂಸಾರ’ ಹೂಡಲು ಮನಸ್ಸು ಮಾಡಿದ

ಪದಗಳು

ಲೇಖನ ಲಾವಣಿಪದ /ಗೀಗೀಪದ ಶಾಲಿನಿ ಆರ್. ಜನಪದ ಕಾವ್ಯದ ಕಥಾತ್ಮಕ ಭಾಗವನ್ನು ಕುರಿತದ್ದಾಗಿದೆ ಲಾವಣಿ/ ಗೀಗೀಪದಗಳು. ಲಾವಣಿ/ ಗೀಗೀಪದಗಳು ಮುಖ್ಯವಾಗಿ ಒಂದು ಹಾಡ್ಗತೆ. “ಕಥೆ ಹೇಳುವ ಗೀತೆ ಅಥವಾ ಗೀತೆಯಲ್ಲಿ ಹೇಳಿದ ಕಥೆ”. ಇವು ಕ್ರಿಯೆಯ ಮೇಲೆ ಹೆಚ್ಚು ಒತ್ತು ನೀಡುತ್ತದೆ. ಕ್ರಿಯೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಾದ ಕ್ರಮವನ್ನು ಅನುಸರಿಸುತ್ತದೆ. ಕ್ರಿಯೆ ಸಾಮಾನ್ಯವಾಗಿ ವಸ್ತುವಿನ ಸ್ವರೂಪದ್ದಾಗಿರುತ್ತದೆ. ಹಾಗೆಯೇ, ಇವುಗಳಲ್ಲಿ ಸರಳತೆ ಸಹ ಒಂದು ಅಂಶವಾಗಿದೆ. ಈ ಪದಗಳಲ್ಲಿ/ ಹಾಡುಗಾರಿಕೆಯಲ್ಲಿ ಏಕ ಘಟನೆಯ ಮೇಲೆ ನಿಂತಿದೆ ಎಂಬುದು ಇನ್ನೊಂದು ಲಕ್ಷಣ. […]

ನೋಟ

ನೋಟ ಕಮಲಾ ಹೆಮ್ಮಿಗೆ ಮೂರು ಬೆಟ್ಟದ ತಪ್ಪಲ ಮದ್ಯದಲ್ಲಿ ಆಡುವ ಹಿಡಿದು ಮೇಯಿಸುತ್ತಿರಲಾಗಿ ಅಡ್ಡ ಬೆಟ್ಟದಲ್ಲಿ ದೊಡ್ಡ ಹುಲಿ ಹುಟ್ಟಿ ಹಾಯಿತ್ತು ಹಸುವ ಉದ್ದಿಹ ಬೆಟ್ಟದಲ್ಲಿ ಭದ್ರ ಗಜ ಬಂದು ಎಸೆದಿತ್ತು ಎತ್ತ ಮಧ್ಯದ ಬೆಟ್ಟದಲ್ಲಿತೋಳ ಕೋದಿತ್ತು  ಕರುವಿನ ಕರುಳ ಕಿತ್ತು ಹುಲಿ,ಗಜ,ತೋಳನ ಉಡ ನುಂಗಿದ್ದ ಕಂಡೆಗೋಪತಿನಾಥ ವಿಶ್ವೇಶ್ವರ ಲಿಂಗವನರಿಯಲಾಗಿ ಹನ್ನೆರಡನೆಯ ಶತಮಾನದ ತಳಮಟ್ಟದಿಂದ ಬಂದು ಜ್ಞಾನ ಪ್ರಸಾರ ಮಾಡಿದ  ಅಂಬಿಗರ ಚೌಡಯ್ಯ,ನುಲಿಯ ಚಂದಯ್ಯ,ಹೆಂಡದ ಮಾರಯ್ಯ, ಉರಿಲಿಂಗ ಪೆದ್ದಿ,ಕದಿರ  ರೇಮವ್ವೆ, ಕಾಳವ್ವೆ ಮುಂತಾದವರ ಗುಂಪಿನಲ್ಲಿ ಎದ್ದು ಕಾಣುವ […]

ಅಕ್ಕ, ಲಲ್ಲಾ, ರಾಬಿಯಾ..!

ಲೇಖನ ಅಕ್ಕ, ಲಲ್ಲಾ, ರಾಬಿಯಾ..! ಕೆ.ಶಿವು.ಲಕ್ಕಣ್ಣವರ ಹೆಣ್ತನ ಸಹಜವಾಗಿ ಅಧ್ಯಾತ್ಮ ಪ್ರವೃತ್ತಿಯನ್ನು ಹೊಂದಿರುವಂಥದ್ದು. ಹೆಣ್ತನ ಅಂದರೆ ಹೆಣ್ಣಿನ ದೇಹವಲ್ಲ, ಹೆಣ್ಣಿನ ಭಾವ. ಆದ್ದರಿಂದಲೇ ಗಂಡು ಆಧ್ಯಾತ್ಮಿಕ ಸಾಧನೆ ಮಾಡಬೇಕೆಂದರೆ ಆತ ಹೆಣ್ತನವನ್ನು ರೂಢಿಸಿಕೊಳ್ಳಲೇಬೇಕಾಗುತ್ತದೆ. ಆದರೆ ಹೆಣ್ಣು ಹೆಚ್ಚು ಕಷ್ಟವಿಲ್ಲದೇ ಸಹಜವಾಗಿ ತನ್ನ ಅಂತರಂಗವನ್ನು ಕಂಡುಕೊಂಡು ಸಾಧಕಿಯಾಗುತ್ತಾಳೆ.     ಏಕೋ ಏನೋ ದಿನದ ಯಾವುದೇ ಕುಷಿಯ ಪ್ರಯುಕ್ತ ಇಲ್ಲಿ ಮೂವರು ಅಧ್ಯಾತ್ಮ ಸಾಧಕಿಯರ ಚಿಕ್ಕ ರಚನೆಗಳನ್ನು ನೀಡಲಾಗಿದೆ..! # ಅಕ್ಕಮಹಾದೇವಿ …………………… ಅಯ್ಯಾ, ಸರ್ವಮೂಲಹಂಕಾರವಿಡಿದು ಕುಲಭ್ರಮೆ ಲಭ್ರಮೆ ಜಾತಿಭ್ರಮೆ, ನಾಮ […]

ದಾರಾವಾಹಿ ಅದ್ಯಾಯ-08 ಆವತ್ತು ಬೆಳಿಗ್ಗೆ ರಾಧಾಳಿಂದ ಮುನ್ನೂರು ರೂಪಾಯಿ ಪಡೆದುಕೊಂಡು ಮನೆಯಿಂದ ಹೊರಟ ಗೋಪಾಲ ಪುತ್ತೂರಿನ ಶಂಕರನಾರಾಯಣ ದೇವಸ್ಥಾನದ ಎದುರುಗಡೆ, ರಸ್ತೆಬದಿಯ ಮೈಲುಗಲ್ಲೊಂದರ ಮೇಲೆ ಕಾಲೂರಿ ಸೈಕಲ್ ನಿಲ್ಲಿಸಿ ಬೀಡಿಯೊಂದನ್ನು ಹೊತ್ತಿಸಿ ನಿಧಾನವಾಗಿ ಸೇದಿದ. ನಂತರ ದೇವಸ್ಥಾನದ ಎದುರು ಹೋಗಿ ನಿಂತುಕೊಂಡು ಭಕ್ತಿಯಿಂದ ದೇವರಿಗೆ ಕೈಮುಗಿದು ಸೈಕಲು ಹತ್ತಿದವನು ನೆರ್ಗಿಹಿತ್ತಲು ಗ್ರಾಮದ ಶಂಕರನ ಸೈಟಿಗೆ ಬಂದು ತಲುಪಿದ. ಆ ಹೊತ್ತಿಗೆ ಶಂಕರ ತನ್ನ ಕೆಲಸಗಾರರಿಗೆ ಅಂದಿನ ಕೆಲಸಕಾರ್ಯದ ಮಾಹಿತಿ ನೀಡುತ್ತಿದ್ದ. ಅದನ್ನು ಗಮನಿಸಿದ ಗೋಪಾಲ ಸ್ವಲ್ಪ ದೂರದಲ್ಲಿ […]

ಸಿರಿಗರ ಹೊಡೆದವರ. . . . .

ಸಾರ್ವಜನಿಕವಾಗಿ ನಮ್ಮ ನಡೆ ನುಡಿ ಅಂದರೆ ನಾವು ಕಾಣಿಸಿಕೊಳ್ಳುವ ರೀತಿ ನಡೆಯುವಾಗಿನ ಗತ್ತು ನಿಲ್ಲುವ ಭಂಗಿ ಕೂರುವ ಬಗೆ ಮಾತನಾಡುವ ಪರಿ ಇದರ ಮೇಲೆ ವ್ಯಕ್ತಿಯ ವ್ಯಕ್ತಿತ್ವದ ಕುರಿತಾಗಿ ಒಂದು ಚಿತ್ರಣ ರೂಪುಗೊಳ್ಳುತ್ತದೆ. ಆದರೆ ಕೇವಲ ಆಂಗಿಕ ಭಾಷೆಯಿಂದಲೇ ವ್ಯಕ್ತಿ ಅಹಂಕಾರಿ ಇಲ್ಲವೇ ವಿನಯವಂತ ಎಂದು ನಿರ್ಣಯಿಸಿ ಬಿಡುವುದು ಹಲವು ಸಲ ತಪ್ಪು ಎಂದೆನಿಸುವುದು

ಆ ಕಾಲವೊಂದಿತ್ತು..

ದೇವಯಾನಿ ಬರೆಯುತ್ತಾರೆ—
ಬರೆಯಬೇಕು , ಬರೆದುದನು ಸಂಭ್ರಮಿಸಬೇಕು ನಿಜ .ಆದರೆ ಬರವಣಿಗೆ ಮಾಗುವವರೆಗೂ ತಾಳ್ಮೆಯಿಂದ ಕಾಯಬೇಕು…

ಅಜ್ಜಿಮನೆಯ ಬಾಲ್ಯಸ್ಮೃತಿ

ನೆನಪು ಅಜ್ಜಿಮನೆಯ ಬಾಲ್ಯಸ್ಮೃತಿ ಹೇಮಚಂದ್ರ ದಾಳಗೌಡನಹಳ್ಳಿ ನಾನು ನನ್ನ ಅಜ್ಜಿಯ ಊರಲ್ಲೇ ಪ್ರಾಥಮಿಕ ವಿದ್ಯಾಭ್ಯಾಸ ಕಲಿತದ್ದು. ನಾನು ಅಜ್ಜಿಯ ಮನೆಗೆ ಹೋಗಿದ್ದೇ ಅಥವಾ ಅಜ್ಜಿ ನನ್ನನ್ನು ತನ್ನೂರಿಗೆ ಕರಕೊಂಡು ಹೋಗಿದ್ದೇ ಒಂದು ಆಕಸ್ಮಿಕ. ನಮ್ಮ ತಂದೆ ತಾಯಿಗೆ ನಾವು ನಾಲ್ವರು ಮಕ್ಕಳು. ನಾನು ಕೊನೆಯವನು. ಒಂದು ದಿನ ನನ್ನಪ್ಪನ ತಾಯಿಗೆ ಯಮನ ಕರೆ ಬಂತೆಂದು ಎಲ್ಲರೂ ತೀರ್ಮಾನಿಸಿ, ಒಳಗೆ ಅವನ ಕೋಣ ನುಗ್ಗಲು ಕಷ್ಟವೆಂದೋ ಏನೋ ಅಜ್ಜಿಯನ್ನು ಹೊರಜಗುಲಿಯ ಮೇಲೆ ಮಲಗಿಸಿ ಬೀಳ್ಕೊಡುಗೆ ಕೊಡುವ ತಯಾರಿ ಮಾಡಿಕೊಳ್ಳುತ್ತಿದ್ದರಂತೆ. […]

Back To Top