Category: ಇತರೆ

ಇತರೆ

ತೆರೆ ಮರೆಯಾಗಲಿರುವ ನತದೃಷ್ಟ ೨೦೨೦

ತೆರೆ ಮರೆಯಾಗಲಿರುವ ನತದೃಷ್ಟ ೨೦೨೦ ಚಂದಕಚರ್ಲ ರಮೇಶ ಬಾಬು ಒಂದು ವರ್ಷ ಸರಿದು ಹೋಗುವಾಗ ಅದು ಕೊನೆಗೆ ಕೊಟ್ಟ ಬವಣೆಯನ್ನು ಕಂಡು ವರ್ಷವನ್ನೇ ದೂರಲಾಗುವುದಿಲ್ಲ. ಎಂದಿನ ಹೊಸ ವರ್ಷದಂತೆ ೨೦೨೦ ರನ್ನು ಸಹ ನಾವೆಲ್ಲ ಸಂಭ್ರಮದಿಂದಲೇ ಸ್ವಾಗತಿಸಿದೆವು. ನಮ್ಮ ಕನಸುಗಳನ್ನು ನನಸಾಗಿಸಲು ಈ ವರ್ಷ ತನ್ನ ಪಾತ್ರ ಪೋಷಿಸುತ್ತದೆ ಎಂಬ ಭರವಸೆಯ ಆಶೆ ಹೊತ್ತೆವು. ಮೊದಲೆರಡು ತಿಂಗಳೂ ಯಾವುದಕ್ಕೂ ಕೊರತೆಯೆನಿಸಲಿಲ್ಲ. ಹಬ್ಬಗಳೂ, ಹರಿದಿನಗಳೂ, ಮದುವೆಗಳೂ ಎಲ್ಲ ಎಲ್ಲರೂ ಅಂದುಕೊಂಡಂತೆ ನಡೆದವು. ಅಷ್ಟರಲ್ಲೇ ಚೀನಾಕ್ಕೆ ಕೊರೋನಾದ ಸೋಂಕು ಕಾಲಿಟ್ಟಿತ್ತು. […]

ಆಶ್ಚರ್ಯ,ಆಘಾತಗಳ ವರ್ಷ

ಆಶ್ಚರ್ಯ,ಆಘಾತಗಳ ವರ್ಷ ನೂತನ ದೋಶೆಟ್ಟಿ 2020ರ ವರ್ಷಕ್ಕೆ ಒಂದು ಪದದಲ್ಲಿ  ಶೀರ್ಷಿಕೆ ಕೊಡಿ ಎಂದರೆ ನಾನು ‘ದಿಗಿಲು’ ಎಂದು ಕೊಡುತ್ತೇನೆ. ಇದು ಭಯ, ಆಶ್ಚರ್ಯ, ಆಘಾತ ಮೊದಲಾದವುಗಳು ಒಟ್ಟು ಸೇರಿ ಉಂಟು ಮಾಡಬಹುದಾದ ಹೇಳಲು ಆಗದ ಒಂದು ಸ್ಥಿತಿ. ಇಂಥ ಸ್ಥಿತಿ ಆಗಾಗ ಎಲ್ಲರ ಜೀವನದಲ್ಲೂ ಬರುತ್ತಲೇ ಇರುತ್ತದೆ. ಆದರೆ ಒಟ್ಟಾರೆ ಮನುಕುಲವೇ ಇಂಥ ಸಮೂಹ ಸ್ಥಿತಿಗೆ ಒಳಗಾಗಿದ್ದು ಆಧುನಿಕ ಕಾಲದಲ್ಲಿ ಇದು ಮೊದಲ ಬಾರಿ ಎಂದು ಹೇಳಬಹುದು. ವಿಶ್ವ ಮಹಾಯುದ್ಧ ಗಳು  ನಡೆದ ಕಾಲದಲ್ಲಿ ಮಾಧ್ಯಮಗಳು, […]

ಒಂದು ಫ್ಯಾಷನ್ ಬೊಂಬೆಯೇ ಬಾರ್ಬಿ ಕತೆ

ಒಂದು ಫ್ಯಾಷನ್ ಬೊಂಬೆಯೇ ಬಾರ್ಬಿ ಕತೆ ಆಶಾ ಸಿದ್ದಲಿಂಗಯ್ಯ ಅಮೆರಿಕಾದ ಗೊಂಬೆ-ತಯಾರಿಕಾ ಕಂಪೆನಿ ಮಾಟೆಲ್ ಇಂಕ್ 1959ರ ಮಾರ್ಚ್‌ನಲ್ಲಿ ಬಿಡುಗಡೆ ಮಾಡಿದ ಒಂದು ಫ್ಯಾಷನ್ ಬೊಂಬೆಯೇ ಬಾರ್ಬಿ. ಅಮೆರಿಕಾದ ಮಹಿಳಾ ಉದ್ಯಮಿ ರುತ್ ಹ್ಯಾಂಡ್ಲರ್ (1916-2002) ಬಿಲ್ಡ್ ಲಿಲ್ಲಿ ಎಂಬ ಜರ್ಮನ್‌ ಗೊಂಬೆಯಿಂದ ಸ್ಪೂರ್ತಿ ಪಡೆದು ಬಾರ್ಬಿಯನ್ನು ರೂಪಿಸಿದರು.ಐವತ್ತು ವರ್ಷಗಳಲ್ಲಿ ಗೊಂಬೆ ಮಾರುಕಟ್ಟೆಯಲ್ಲಿ ಹಲವು ವಿವಾದ ವ್ಯಾಜ್ಯಗಳನ್ನು ಹುಟ್ಟುಹಾಕುತ್ತಲೇ ಟೀಕೆಗೆ ಒಳಗಾಗುತ್ತಲೇ ಬೆಳೆಯಿತು ಬಾರ್ಬಿ ಹಾಗೂ ಆಕೆಯ ಜೀವನ ಶೈಲಿ. ಇತ್ತೀಚಿನ ದಿನಗಳಲ್ಲಿ ಬಾರ್ಬಿಗೆ ಪ್ರತಿಸ್ಪರ್ಧಿಯಾಗಿ ಬ್ರಾಜ್ಸರಣಿಯ […]

ಗೃಹಬಂಧ

ಕೊರೊನಾ ಕಾಡಿದ ವರ್ಷಾಂತ್ಯದಲ್ಲಿ ನಿಂತು ಗೃಹಬಂಧ ರೇಶ್ಮಾ ಗುಳೇದಗುಡ್ಡಾಕರ್ ಕರೋನಾ ಎಂಬ ಅಂತಕದ ಅಲೆ ಹೊತ್ತು ಬಂದ ವರ್ಷ ಇಗ ಕಳೆಯುವ ದಿನದಲ್ಲಿ ನಾವು ಇದ್ದೇವೆ .ಹೊಸ ವರ್ಷದ ಬಳಿ ಸಾಗುತ್ತಾ ಇದ್ದೇವೆ . ಆಪಾರ ಭರವಸೆಗಳೊಂದಿಗೆ ಇಡೀ ಭೂಮಂಡಲವನ್ನೆ ತಲ್ಲಣಿಸಿದ ವರ್ಷವಿದು .ನಾವು ಕಂಡು ಕೇಳಿರದ ಸಂಗತಿಗಳು ನಮಗೆ ಎದುರಾದವು .ಸಂಕ್ರಾಮಿಕ ರೋಗದ ಅಬ್ಬರ ಓದಿದ್ದೆವು .ಅದರಲ್ಲೂ ಬಂಕಿಮ ಚಂದ್ರ ಚಟರ್ಜಿ ಅವರ ಆನಂದ ಮಠ ಓದಿದಾಗ ಸಂಕ್ರಾಮಿಕ ರೋಗದ ಕ್ರೂರ ,ಭೀಕರ , ಓದುಗರಿಗೆ […]

2020 ಎಂಬ ‘ಮಾಯಾವಿ ವರ್ಷ’

ಕೊರೊನಾ ಕಾಡಿದ ವರ್ಷಾಂತ್ಯದಲ್ಲಿ ನಿಂತು 2020 ಎಂಬ ‘ಮಾಯಾವಿ ವರ್ಷ’ ಚಂದ್ರ ಪ್ರಭಾ.ಬಿ. . 2020 ಎಂಬ ‘ಮಾಯಾವಿ ವರ್ಷ’  ಕುದುರೆಯಂತೆ ಕೆನೆಯುತ್ತ ಆಗಮಿಸಿ ವ್ಯಾಘ್ರನಾಗಿ ಮನುಕುಲವನ್ನು ನುಂಗಿ ಆಪೋಶನ ತೆಗೆದುಕೊಂಡುದು ಇಷ್ಟರಲ್ಲೇ ಇತಿಹಾಸದ ಪುಟ ಸೇರಲಿದೆ. ಆಗಮನಕ್ಕೂ ಮುನ್ನ ಆ ಕುರಿತು ಒಬ್ಬೊಬ್ಬರಲ್ಲಿ ಒಂದೊಂದು ಬಗೆ ವಿಸ್ಮಯಕಾರಿ ನಿರೀಕ್ಷೆ ಇದ್ದುದು ನಿಜ. T20 ಎಂಬ ಚುಟುಕು ಕ್ರಿಕೆಟ್ ಮೂಡಿಸಿದ ಸಂಚಲನ ಅದಕ್ಕೆ ಕಾರಣ. T20 ಮನೆ ಮನ ಮೈದಾನ ಪ್ರವೇಶಿಸಿದ ಹೊಸತರಲ್ಲಿ ಇಷ್ಟು ಕಡಿಮೆ ಓವರ್ […]

ಹೊಸ ಭರವಸೆಯೊಂದಿಗೆ..

ಕೊರೊನಾ ಕಾಡಿದ ವರ್ಷಾಂತ್ಯದಲ್ಲಿ ನಿಂತು ಹೊಸ ಭರವಸೆಯೊಂದಿಗೆ..    ಜ್ಯೋತಿ  ಡಿ.ಬೊಮ್ಮ. ಹೊಸ ವರ್ಷದ ಹೊಸ್ತಿಲಲ್ಲಿ ನಿಂತು ಹಿಂದಿರುಗಿ ನೋಡಿದಾಗ ನಿಟ್ಟುಸಿರಿನೊಂದಿಗೆ ವಿಷಾದದ ವಿಷಣ್ಣ ನಗೆಯೊಂದು ಮೂಡುತ್ತದೆ ಕಂಡು ಕಾಣದಂತೆ. 2020 ನೆಯ ವರ್ಷವನ್ನು ಕೂಡ ಒಂದು ಹೊಸ ಭರವಸೆಯಿಂದಲೆ ಬರಮಾಡಿಕೊಂಡಿದ್ದೆವು.ಹಿಂದೊಂದು ಕಾಣದ ಸಾಂಕ್ರಾಮಿಕ ಪಿಡುಗಿನ ಭಯಾನಕ ರೂಪ ಇಡೀ ಮನಕುಲವನ್ನೆ ತಲ್ಲಣಿಸಿಬಿಟ್ಟಿತು. ಎಂಥ ಅನಿಶ್ಚಿತತೆಯ ವಾತಾವರಣ ,ಇಡೀ ಜಗತ್ತೇ ಸ್ಥಬ್ದವಾದಂತಹ ಅಸಹಾಯಕ ಸ್ಥಿತಿ.ರೋಗದ ಭಯ ಎಷ್ಟು ವ್ಯಾಪಿಸಿಬಿಟ್ಟಿತೆಂದರೆ ವೈದ್ಯಕೀಯ ಕ್ಷೇತ್ರವು ಕಂಪಿಸಿತು. ಯಾರಿಗೆ ಯಾವಾಗ ರೋಗ […]

ಮದರಂಗಿ (ಮೆಹೆಂದಿ)

ಮದರಂಗಿ (ಮೆಹೆಂದಿ) ಮದರಂಗಿಯಲ್ಲಿ ಮನಸ್ಸಿನ ರಂಗು ಮೂಡಿದೆ. ಆಶಾ ಸಿದ್ದಲಿಂಗಯ್ಯ ಮದುವೆಯ ಸಂದರ್ಭದಲ್ಲಿ ಮದುಮಗ ಅಥವಾ ಮದುಮಗಳಿಗೆ ಕೈಗೆ ಹಚ್ಚುವ ಪ್ರಾಕೃತಿಕ ಬಣ್ಣ. ಎಂದರೆ ಇದೊಂದು ಎಲ್ಲರಿಗೂ ಇಷ್ಟವಾಗುವ ನಿಸರ್ಗದ ಒಂದು ಗಿಡವಾಗಿದೆ. ಔಷಧೀಯ ಗುಣವುಳ್ಳ ಗಿಡವಾಗಿದ್ದು, ಇದರ ಸೊಪ್ಪನ್ನು ಔಷಧಕ್ಕೆ ಬಳಸುತ್ತಾರೆ. ಭಾರತೀಯ ಸಂಪ್ರದಾಯದಲ್ಲಿ ಕೈಗಳಿಗೆ ಬಣ್ಣವನ್ನು ಹಚ್ಚಿಕೊಳ್ಳುವ ರೂಢಿ ಇದೆ. ಮದರಂಗಿ ತಯಾರಿಕೆ ಮದರಂಗಿಯನ್ನು ಕೈಗಳಿಗೆ ಹಚ್ಚಿಕೊಳ್ಳುವುದಾದರೆ, ಮದರಂಗಿಯ ಸೊಪ್ಪು, ನಿಂಬೆಹಣ್ಣಿನ ರಸವನ್ನು ಸೇರಿಸಿ ಚೆನ್ನಾಗಿ ಅರೆದು, ಕೈಗಳಿಗೆ ಹಚ್ಚಬೇಕು. ವಿಜ್ಞಾನ ಮುಂದುವರಿದ ಹಾಗೆ […]

ಚಂದಿರನ ಬೆಳದಿಂಗಳಲ್ಲಿ

ಭಾವಲಹರಿ… ಭಾವಲಹರಿ… ರಶ್ಮಿ.ಎಸ್. ಒಬ್ಬಂಟಿಯೆನಿಸಿದಾಗಲೆಲ್ಲ ಬಾಲ್ಕನಿಗೆ ಬಂದು ನಿಲ್ತೇನಿ. ಅದೆಷ್ಟು ದೂರದ ಗೊತ್ತಿಲ್ಲ.. ಅಷ್ಟೂ ದೂರದಿಂದ ನಕ್ಷತ್ರವೊಂದು ಮಿಣಮಿಣ ಅಂತ ಮಿಣುಕ್ತದ. ಕಣ್ಣುಪಿಳುಕಿಸಿ, ಕಣ್ಣಾಗ ನಗ್ತದ. ನನ್ನ ಮನಿ ಮುಂದಿನ ಬೇವಿನ ಮರದ ಎಲೆಗಳು ತಣ್ಣಗ ಗಾಳಿ ಸೂಸ್ತದ. ಅದರೊಳಗೊಂದು ಕಹಿಯ ಕಂಪೂ ಇರ್ತದ. ಇರುಳಿನ ತಂಪೂ ಇರ್ತದ. ಅಪಾರ್ಟ್‌ಮೆಂಟಿನಾಗ ಸಾಕಿದ್ದ ನಾಯಿ ಚೂರಿ ಬಂದು ಬೊಗಳ್ತದ. ‘ಚೂರಿ ಮಲಗೂದು ಬ್ಯಾಡೇನು.. ಅಂದ್ರ ಸಾಕು..’ ಪಾಪ ತನಗೆ ಅನ್ಕೊಂಡು ಸುಮ್ನಾಗಿ ಒಳಗ ಹೋಗ್ತದ. ಮತ್ತದೆ ರಾತ್ರಿ, ಮತ್ತದೆ […]

ಮೋಹದ ಬೆನ್ನು ಹತ್ತಿದರೆ . . . . .

ಲೇಖನ ಮೋಹದ ಬೆನ್ನು ಹತ್ತಿದರೆ ಜಯಶ್ರೀ.ಜೆ. ಅಬ್ಬಿಗೇರಿ  ಹೊಸದಾಗಿ ಮದುವೆಯಾದ ದಿನಗಳಲ್ಲಿ ಬಾಳ ಸಂಗಾತಿಯ ಮೋಹ ಅತಿಯೆನಿಸುವಷ್ಟು ಇರುತ್ತದೆ ಎಂದು ವಿಶೇಷವಾಗಿ ಹೇಳಬೇಕಿಲ್ಲ. ಈ ಮೋಹವೆಂಬುದು ಲೋಕಾರೂಢಿ. ಅದರಲ್ಲೇನು ವಿಶೇಷವಿದೆ ಎಂದು ಮನಸ್ಸು ಪ್ರಶ್ನೆ ಹಾಕಿ ನಗುವುದುಂಟು. ಮೋಹದ ಕುರಿತಾಗಿ ಪುಂಖಾನುಪುಂಖವಾಗಿ ಘಟನೆಗಳನ್ನು ಉಲ್ಲೇಖಿಸಬಹುದು. ಅದರಲ್ಲೂ ತುಳಸಿದಾಸರ ಕಥೆ ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿದ್ದದ್ದೇ ಇದೆ. ಅದನ್ನು ಹಾಗೆ ಒಮ್ಮೆ ಮೆಲಕು ಹಾಕುವುದಾದರೆ ಹೀಗೆ ಸಾಗುತ್ತದೆ. ತುಳಸಿದಾಸರಿಗೆ ತಮ್ಮ ಪತ್ನಿಯಲ್ಲಿ ಅಪಾರ ಆಸಕ್ತಿ. ಆಕೆಯನ್ನು ಬಿಟ್ಟಿರಲು ಮನಸ್ಸು ಒಪ್ಪುತ್ತಲೇ […]

ಮಲೆನಾಡಿಗರ ತುಮುಲ

ಅನಿಸಿಕೆ ಮಲೆನಾಡಿಗರ ತುಮುಲ ಗಣೇಶಭಟ್ ಶಿರಸಿ ಪಶ್ಚಿಮ ಘಟ್ಟಗಳ ಹಾಗೂ ಅಲ್ಲಿನ ಜೀವವೈವಿದ್ಯ ರಕ್ಷಣೆಯ ಉದ್ದೇಶದಿಂದ ೨೦೧೧ರಲ್ಲಿ ಡಾ. ಮಾಧವ ಗಾಡ್ಗೀಲ್ ಸಮಿತಿ ನೀಡಿದ ವರದಿಯನ್ನು ತಿರಸ್ಕರಿಸಿದನಂತರ ವಿಜ್ಞಾನಿ ಕಸ್ತೂರಿರಂಗನ್ ನೇತೃತ್ವ ಸಮಿತಿ ರಚಿಸಲಾಗಿತ್ತು. ಪಶ್ಚಿಮ ಘಟ್ಟದಲ್ಲಿ ಮಾನವನ ಹಸ್ತಕ್ಷೇಪವನ್ನು ಸೀಮಿತಗೊಳಿಸಬೇಕೆಂದು ಸೂಚಿಸಿರುವ ಎರಡನೇ ವರದಿಯ ಅನುಷ್ಠಾನಕ್ಕೂ ಹಿಂಜರಿಯುತ್ತಿರುವ ಕರ್ನಾಟಕದ ಸರ್ಕಾರ ಹಸಿರು ನ್ಯಾಯಾಲಯದ ಮೆಟ್ತಲೇರುವ ಪ್ರಯತ್ನ ನಡೆಸಿದೆ. ಈ ಎರಡೂ ವರದಿಗಳು ಪರಿಸರ ಪೂರಕ ಅಭಿವೃದ್ಧಿಯನ್ನು ಪ್ರತಿಪಾದಿಸುತ್ತವೆಯಾದರೂ, ಡಾ. ಮಾಧವ ಗಾಡ್ಗೀಳ್ ವರದಿ ಹೆಚ್ಚು ಜನಪರವಾಗಿದೆ. […]

Back To Top