Category: ಇತರೆ

ಇತರೆ

ಭರವಸೆಯ ಹೊರತು ಬೇರೇನೂ ಉಳಿದಿಲ್ಲ

ಲಹರಿ  ವಸುಂಧರಾ ಕದಲೂರು  ಖಾಲಿ ಮಂಕರಿ ಕವಚಿ ಹಾಕಿದಂತೆ ಎಲ್ಲಾ ಖಾಲಿಖಾಲಿಯಾದ ಭಾವ. ನಿರಾಳ ಅಂತೇನಲ್ಲ. ಮನಸ್ಸು ಭಾರವಾಗಿದೆ. ಏನೆಲ್ಲಾ ಇದೆ. ಆದರೂ ಏನೇನೂ ಇಲ್ಲ ಎನ್ನುವ ಒಂಟಿತನ ಹಿಂಡಿಹಿಪ್ಪೆ ಮಾಡುವಂತೆ. ಬಿಸಿಲಿಗೆ ಒಣ ಹಾಕಿದ ಬಟ್ಟೆ ಒಣಗೀ ಒಣಗೀ ಅಲ್ಲೇ ಇದ್ದು ಕೊನೆಗೆ ಬಣ್ಣಗೆಟ್ಟಂತೆ…      ಸದಾ ಗಿಜಿಗಿಜಿ ಗಜಿಬಿಜಿಯಲ್ಲಿ ಸುತ್ತಾಡುತ್ತಿದ್ದ ಮೈ ಮನಸ್ಸೆಲ್ಲಾ ಒಂದು ಕ್ಷಣಕ್ಕೆ  ಥಟ್ ಎಂದು ಏಕಾಂತ ವಾಸಕ್ಕೆ ನಿರ್ಜನ ಕಾಡ ಮಧ್ಯದಲ್ಲಿ ವಿರಮಿಸಿದಂತೆ ಭಾಸವಾಯಿತು. ಆಹಾ..!! ಇದೇ ಬೇಕಾಗಿತ್ತು […]

ದಬದಬೆಗೆ ಧೈರ್ಯ ಕೊಟ್ಟವನೂ ಸೀರೆಯುಟ್ಟ ಇಣಚಿಯೂ

ದಬದಬೆಗೆ ಧೈರ್ಯ ಕೊಟ್ಟವನೂ ಸೀರೆಯುಟ್ಟ ಇಣಚಿಯೂ ಪ್ರಜ್ಞಾ ಮತ್ತಿಹಳ್ಳಿ            ತನ್ನೆಲ್ಲ ಎಲೆಗಳನ್ನುದುರಿಸಿಕೊಂಡು ಒಣಗಿ ನಿಟಾರನೆ ನಿಂತುಕೊಂಡ ಬಿದಿರು ಗಳದಂತಹ ಎಲುಬುಗಳಿಗೆ   ಚರ್ಮ ಸುತ್ತಿ ಇಟ್ಟ ಹಾಗೆ ಭಾಸವಾಗುವ ಅವಳ ಕುತ್ತಿಗೆಯ ನರಗಳು ಹಸಿರು ಕಾಡು ಬಳ್ಳಿಗಳಂತೆ ಉಬ್ಬುಬ್ಬಿ ಗಂಟಲು ಹರಿದು ಹೊರಬಂದು ಬಿಡುತ್ತವೋ ಎಂಬಂತೆ ಕಾಣುತ್ತಿದ್ದವು. ಹಕ್ಕಿಯೊಂದು ಮೊಟ್ಟೆಯಿಡಲು ಮರದ ಕಾಂಡದಲ್ಲಿ ಹುಡುಕಿಕೊಂಡ ಡೊಗರಿನ ಹಾಗೆ ಎಲುಬುಗಳ ನಡುವೆ ಖಾಲಿ ಜಾಗ ಎದ್ದು ಕಾಣುತ್ತಿತ್ತು.  ಬದುಕಿನ ನಲವತ್ತು ವರ್ಷ ಜೊತೆಗಿದ್ದ ಅಸ್ತಮಾ ಅವಳ ಉಸಿರಾಟದ ರೀತಿಯನ್ನೇ […]

ಜಂಬಿಕೊಳ್ಳಿ ಮತ್ತು ಪುಟ್ಟವಿಜಿ

ಅನುಭವ ಕಥನ ಕಾಡಿನಲ್ಲಿ ಓದು ವಿಜಯಶ್ರೀ ಹಾಲಾಡಿ  ವಿಜಿ ಮತ್ತು ಅವಳಂತಹ ಆಗಿನ ಕಾಲದ ಮಕ್ಕಳು ಸಣ್ಣ ವಯಸ್ಸಿನಲ್ಲಿದ್ದಾಗ ಎದ್ದುಬಿದ್ದು ಓದುವುದೆಲ್ಲ ಏನೂ  ಇರಲಿಲ್ಲ. ಮನೆಕೆಲಸ, ಆಟ, ಹಾಡಿ-ಗುಡ್ಡಗಳ ಸುತ್ತಾಟ,   ಎಲ್ಲದರ ನಡುವೆ ಶಾಲೆಗೂ ಹೋಗಿಬರುತ್ತಿದ್ದರು!  ಪರೀಕ್ಷೆ ಬಂದಾಗ ಅಲ್ಪಸ್ವಲ್ಪ ಓದಿಕೊಳ್ಳುತ್ತಿದ್ದರು. ಹಾಗಂತ ಶಾಲೆಗೆ ಹೋಗುವುದು ಅವರಿಗೆ ಸುಲಭವೇನೂ ಆಗಿರಲಿಲ್ಲ.  ಗದ್ದೆ, ತೋಡು, ಕಾಡುಗಳಲ್ಲಿ ಮೈಲಿಗಟ್ಟಲೆ ನಡೆದು ಹೋಗಿಬರಬೇಕಿತ್ತು . ಆದರೆ ‘ಓದಿ ಓದಿ’ ಎಂದು ಶಾಲೆಯಲ್ಲೂ ಮನೆಯಲ್ಲೂ ಯಾರೂ ಅವರ ತಲೆ ತಿನ್ನುತ್ತಿರಲಿಲ್ಲ. ಹಾಗಾಗಿ ಮನಸ್ಸಾದರೆ […]

ಕರೋನ ಮುಕ್ತ ಶಾಲೆ

ಸರಿತಾಮಧು ಎಂದಿಗೆ ಬರಲಿದೆಯೋ ಶಾಲೆಗೆ ಹೋಗಿ ನಲಿಯುವ ದಿನಗಳು ಎಂದು ಕಾತರಿಸುವ ಮಕ್ಕಳಿಗೆ ಅಪ್ಪ ಅಮ್ಮ ಇಬ್ಬರೂ ಕೆಲಸಕ್ಕೆ ಹೊರಟಾಗ ಮನೆಯಲ್ಲಿ ತಾವಷ್ಟೇ ಇರಬೇಕಾ ಎನ್ನುವ ಭಯ. ಹಾಗೆ ಮಕ್ಕಳನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗುವ ಪೋಷಕರಿಗೂ ಇದೇ ಚಿಂತೆಯಾಗಿದೆ. ಬದಲಾದ ಪರಿಸ್ಥಿತಿಯಲ್ಲಿ ಶಾಲೆಗಳು ತೆರೆಯುವ ಸೂಚನೆ ಸದ್ಯಕ್ಕೆ ಇಲ್ಲವೇನೋ? ಹೀಗಿರುವಾಗ ಮಕ್ಕಳ ಕಲಿಕೆ ಹೇಗೆ ಎಂದು ಚಿಂತಿಸಿ ಆನ್ಲೈನ್ ಮೂಲಕ ಶಿಕ್ಷಣ ನೀಡುವುದು ಒಳಿತೋ ಕೆಡುಕೋ ಎಂಬ ಜಿಜ್ಞಾಸೆ ಎಲ್ಲರ ಮನದಲ್ಲೂ ಮೂಡಿದೆ.ಪ್ರಾಥಮಿಕ ಹಂತದಿಂದಲೇ ಈ […]

ವಚನ ಚಿಂತನೆ

ಚಿಂತನೆ ಡಾ.ವೈ.ಎಂ.ಯಾಕೊಳ್ಳಿ ಕಾಮ ಕಾಲದ ಕಾಡುವ ಮಾಯೆ ನಳಲುಗತ್ತಲೆ ನೀನು ಮಾಯೆ ಸಂಗ ಸುಖದಿಂದ ಹಿಂಗುವರಾರು ಇಲ್ಲ ಬಿಗಿದ ಕುಚ,ಉರ ಮಧ್ಯವು ಲಿಂಗಾಕಾರವು ಮಹೇಶ್ವರಗೆಯೂ ಪ್ರೀತಿಯು ಸನ್ಮೋಹ ಅಮೃತ ಸಾರವು ಇಳೆ ಉತ್ಪತ್ಯಕ್ಕೆ ಆಧಾರವು ಇಂಥ‌ ಮೋಹ ಪ್ರಿಯವಾದ ಮೋಹಿನಿಯರ ಅಗಲುವದೆಂತೋ ಕರಸ್ಥಳದ ಇಷ್ಟಲಿಂಗೇಶ್ವರಾ ಇಡೀ ವಚನ ಸಾಹಿತ್ಯವನ್ನು ಅಧ್ಯಯನ ಮಾಡಿದರೂ ಒಂದು ವಿಶೇಷ ನೆಲೆಯಲ್ಲಿ‌ ನಿಲ್ಲುವ ವಚನ‌ ಇದು . ಇದನ್ನು ರಚಿಸಿದವನು ಮೆಡ್ಲೇರಿ ಶಿವಲಿಂಗನೆಂಬ ಹದಿನಾರನೆಯ ಶತಮಾನದ ವಚನಕಾರ.ಡಾ ವೀರಣ್ಣ ರಾಜೂರ ಅವರು ಸಂಪಾದಿಸಿದ […]

ಕಾಲ ಎಂದಿಗೂ ನಿಲ್ಲುವದಿಲ್ಲ

ಸ್ಮಿತಾ ಭಟ್ ಮಿಲಿಯನ್ ಗಟ್ಟಲೆ ವರ್ಷಗಳಿಂದ ಈ ಭೂಮಿಯ ಮೇಲೆ ಏನೆಲ್ಲ ಸಂಭವಿಸಿತೋ ಇಂದಿನವರೆಗೂ ಯಾರಿಗೂ ಸ್ಪಷ್ಟವಾದ ಮಾಹಿತಿ ಇಲ್ಲ. ಹೀಗಿತ್ತು,ಹಾಗಿತ್ತು,ಏನೋ ನಡೆದಿತ್ತು, ಎಂದು ಇತಿಹಾಸ ಪುಟಗಳಿಂದ ಅಷ್ಟೊ ಇಷ್ಟೊ ತಿಳಿಯುತ್ತೇವೆ,ಮತ್ತೊಂದಿಷ್ಟು ನಮ್ಮ ಊಹೆ. ಕಾಲದ ಜೊತೆಗೆ ಎಲ್ಲವೂ ಉರುಳುತ್ತವೆ ಎನ್ನುವದು ನಿತ್ಯ ಸತ್ಯ. ಸವೆದ ಹೆಜ್ಜೆಗಳ ಜಾಡು ಎಷ್ಟರ ಮಟ್ಟಿಗೆ ಇಂದು ಉಳಿದುಕೊಂಡಿದೆ.ಎಲ್ಲವೂ ಮಸುಕಾಗುತ್ತಲೇ ಹೋಗುತ್ತದೆ. ಹೊಸ ನೀರಿಗೆ ಹಳೆಯ ನೀರು ಕೊಚ್ಚಿಹೋಗಿ ಸಮುದ್ರಸೇರಿ ಅಸ್ತಿತ್ವವನ್ನೇ ಕಳೆದುಕೊಂಡಂತೆ. ಆಳಿದ ರಾಜ, ಕಟ್ಟಿದ ಕೋಟೆ,ಜಾರಿಯಾದ ನಿಯಮ,ತ್ಯಾಗದ ಬದುಕು,ಮಾಡಿದ […]

ಶಿಶುಗೀತೆ

ತಲ ಷಟ್ಪದಿಯಲ್ಲಿ ಶಿಶುಗೀತೆ ತೇಜಾವತಿ ಹೆಚ್. ಡಿ ಗೊಲ್ಲನೊಬ್ಬತೋಟದೊಳಗೆಕುರಿಯ ಮಂದೆ ಹಾಕಿದ |ಭಾರ ಹೊರಲುಕತ್ತೆ ಹಿಂಡುಎತ್ತು ಕುದುರೆ ಸಾಕಿದ || ಬೇಟೆಗೆಂದುನಾಯಿ ತಂದುಚತುರ ಸುಂಕು ಕಲಿಸಿದ |ಎಲ್ಲ ಸೇರಿಕೂಡಿ ಬಾಳ್ವಪ್ರೇಮವನ್ನು ಬೆಳೆಸಿದ || ನಿತ್ಯ ತಾನುಬೇಗ ಎದ್ದುಕುರಿಯ ಕಾಯತೊಡಗಿದ|ಸಂಜೆಯೊಳಗೆಮರಳಿ ಬಂದುತನ್ನ ಗೂಡ ಸೇರಿದ || ಒಂದು ಇರುಳುಹೊಂಚು ಹಾಕಿತೋಳವೊಂದು ಬಂದಿತು|ರೊಪ್ಪದೊಳಗೆಇದ್ದ ಕುರಿಯಮರಿಯ ನೋಡಿ ನಲಿಯಿತು|| ಇಂದು ಎನಗೆಹೊಟ್ಟೆ ತುಂಬಾರುಚಿಯ ಬೇಟೆ ಎನ್ನುತ|ಓಡಿ ಬಂದುಮರಿಯ ಮೇಲೆಹಲ್ಲು ನೆಟ್ಟು ಎರಗಲು|| ನಿದ್ರಿಸಿದ್ದನಾಯಿ ತಾನುಒಂದೇ ಸಮನೆ ಬೊಗಳಲು|ಕತ್ತೆ ಕೂಡಎದ್ದು ನಿಂತುಕಾಲು ಕೊಡವಿ […]

ಮರಳಿಗೂಡಿಗೆ

ಲಹರಿ ಅನುಪಮಾ ರಾಘವೇಂದ್ರ                              “ಎಲ್ಲಿ ಹೋದರೂ ಹಿಂತಿರುಗಿ ಮನೆಗೆ ತಲುಪುವವರೆಗೆ ಮನಸ್ಸಿಗೆ ಸಮಾಧಾನವೇ ಇಲ್ಲ”  ಎಂಬ  ಭಾವ ಮೂಡಿದಾಗಲೇ  ‘ಜನನೀ ಜನ್ಮ ಭೂಮಿಶ್ಚ ಸ್ವರ್ಗಾದಪಿ ಗರೀಯಸಿ’ ಎಂಬ ಮಾತು ಎಷ್ಟು ಅರ್ಥಪೂರ್ಣ ಅನಿಸಿದ್ದು.       ತಿಂಗಳ ಹಿಂದೆ ಹಕ್ಕಿಯೊಂದು ನಮ್ಮ aಮೊಟ್ಟೆಗಳನ್ನಿಟ್ಟು,ಕಾವು ನೀಡಿ , ಮರಿ ಮಾಡಿತ್ತು. ಅಷ್ಟು ದಿನಗಳಲ್ಲಿಯೇ ಆ ಹಕ್ಕಿ ಸಂಸಾರ ಹಾಗೂ ನನ್ನ ಮಧ್ಯೆ ಅನಿರ್ವಚನೀಯ ಬಂಧವೊಂದು ಬೆಳೆದುಬಿಟ್ಟಿತ್ತು. ಆ ಮರಿಗಳ ರೆಕ್ಕೆ ಬಲಿಯುವವರೆಗೂ ತಾಯಿ ತಂದೆ ತಾವೇ ಆಹಾರ ತಂದು […]

ಶಿಕ್ಷಣ ಆನ್ ಲೈನ್!

ವಿನುತಾ ಹಂಚಿನಮನಿ ವಿಕಾಸ ವಾದ (Evolution theory) ದ ಪ್ರಕಾರ ಜೀವಿಗಳ ಅಳಿವು ಉಳಿವು ಯಾವುದರ ಮೇಲೆ ಅವಲಂಬಿಸಿದೆ? ಯಾರು ಬದಲಾಗುತ್ತಿರುವ ಪರಿಸರಕ್ಕೆ ಹೊಂದಾಣಿಕೆ ಮಾಡಿಕೊಂಡರೋ ಅವರು ಗೆದ್ದವರು. ಬಲವಾನರು, ಬುದ್ಧಿವಂತರು ಇದರಲ್ಲಿ ಸೋತರು. ಪ್ರಾಣಿ ಇರಲಿ ಮನುಷ್ಯನಿರಲಿ ಪರಿಸರಕ್ಕೆ, ಪರಿಸ್ಥಿತಿಗೆ ಹೊಂದಿಕೊಂಡು ಜೀವಿಸುವದನ್ನು ಕಲಿತರಷ್ಟೇ ಬದುಕಬಹುದು. ಅದೇ ಸೂಕ್ತರು ಬದುಕುವರು ಸಶಕ್ತರಲ್ಲ ಅನ್ನುವುದು (survival of the fittest). ಈ ಬದಲಾಗುವ ಕ್ರಮ ಪ್ರಕೃತಿಯಲ್ಲಿ ಅನಿವಾರ್ಯ. ಪರಿವರ್ತನೆ ಜಗದ ನಿಯಮ. ಇದು ಎಲ್ಲ ಕ್ರಾಂತಿಗಳಿಗೂ ಅನ್ವಯಿಸುವುದು. […]

ಆನ್ಲೈನ್ ಶಿಕ್ಷಣ – ಪ್ರಯೋಗ?

ಅರ್ಪಣಾ ಮೂರ್ತಿ ಪ್ರಸ್ತುತ ಪರಿಸ್ಥಿತಿಯಲ್ಲಿ ಶೈಕ್ಷಣಿಕ ವರ್ಷದ ಆರಂಭವೇ ಗೊಂದಲಗಳಿಂದ ಕೂಡಿರುವ ಈ ಸಂದರ್ಭದಲ್ಲಿ, ಅನೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಇದಾಗಲೇ ಕಂಡುಕೊಂಡಿರುವ ಶಿಕ್ಷಣದ ಪರ್ಯಾಯ ಮಾರ್ಗದ ಹೆಸರೇ ಈ ಆನ್ಲೈನ್ ಶಿಕ್ಷಣ, ಈ ಪರ್ಯಾಯ ಮಾರ್ಗದ ಶಿಕ್ಷಣಕ್ಕೆ ಸರ್ಕಾರವು ಸಹ ಸಮ್ಮತಿಯ ಮುದ್ರೆ ಒತ್ತಿದೆ. ಈಗಿರುವ ಪ್ರಶ್ನೆಯೆಂದರೆ ಈ ಆನ್ಲೈನ್ ಶಿಕ್ಷಣ ಎಷ್ಟು ಪರಿಣಾಮಾತ್ಮಕವಾಗಿದೆ, ಮಕ್ಕಳ ಕಲಿಕೆಯ ಮಟ್ಟಕ್ಕೆ ಅದೆಷ್ಟು ಪೂರಕವಾಗಿದೆ ಅನ್ನುವುದು. ಮೊದಲಿಗೆ ಪ್ರಾಥಮಿಕ ಶಾಲಾ ಹಂತದ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ನೀಡುವುದರ ಕುರಿತು […]

Back To Top