Category: ಇತರೆ

ಇತರೆ

ಭಾವಪೂರ್ಣ ಅಂತಿಮ ನಮನ.

ಭಾವಪೂರ್ಣ ಅಂತಿಮ ನಮನ. ಹುಬ್ಬಳ್ಳಿ ಯ ಕರ್ಮವೀರ ಕಾಲದಿಂದಲೂ ನಿನ್ನೆ ಮೊನ್ನೆಯವರಿಗೂ ಸುಮಾರು ಇಪ್ಪತ್ತು ವರ್ಷಗಳ ಆತ್ಮೀಯ ಒಡನಾಟ ಹೊಂದಿದ್ದ ನಾಡಿನ ದೈತ್ಯ ಬರಹಗಾರ ಆತ್ಮೀಯ ರವಿ ಬೆಳಗೆರೆ ಅವರ ಸಾವು ತುಂಬಾ ನೋವು ತಂದಿದೆ. ಅವರ ಆತ್ಮಕ್ಕೆ ಚಿರಶಾಂತಿ ಕೋರುವೆ.ನನ್ನ ನೂರಾರು ಹನಿಗವನ ,ಕವನ, ಗಜಲ್, ಕಥೆ,ಬರಹ ಪ್ರಕಟಿಸಿ ನನಗೆ ಒಂದು ಶಕ್ತಿಯಾಗಿದ್ದ ಈ ಓದುಗರ ದೊರೆ ನನಗೆ ಸ್ನೇಹಿತನಾಗಿದ್ದ ಎಂಬ ಹೆಮ್ಮೆ.ಈ ಕೊಂಡಿ ಇಷ್ಟು ಬೇಗ ಕಳಚಬಾರದಿತ್ತು. ಹುಬ್ಬಳ್ಳಿ ಯ ಕಸ್ತೂರಿ, ಸಂಯುಕ್ತ ಕರ್ನಾಟಕ […]

ಶೋಭಾ ನಾಯ್ಕರ ಅವ್ವ ಮತ್ತು ಅಬ್ಬಲಿಗೆ ಕೃತಿಗೆ `ಸರಳಾ ರಂಗನಾಥರಾವ್ ಪ್ರಶಸ್ತಿ

ಪ್ರಶಸ್ತಿ ಶೋಭಾ ನಾಯ್ಕರ ಅವ್ವ ಮತ್ತು ಅಬ್ಬಲಿಗೆ ಕೃತಿಗೆ `ಸರಳಾ ರಂಗನಾಥರಾವ್ ಪ್ರಶಸ್ತಿ ಸರಳಾ ರಂಗನಾಥರಾವ್ ಸ್ಮಾರಕ ಪ್ರತಿಷ್ಠಾನವು ಕೊಡುವ ೨೦೧೯ನೇ ಸಾಲಿನ ಸರಳಾ ರಂಗನಾಥರಾವ್ ಪ್ರಶಸ್ತಿಗೆ ಶಿರಸಿಯ ಕವಯಿತ್ರಿ ಶೋಭಾ ಹಿರೇಕೈ ಕೊಂಡ್ರಾಜಿ ಅವರು ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಲೇಖಕಿಯರ ಚೊಚ್ಚಲ ಕೃತಿಗೆ ಕೊಡಲಾಗುತ್ತಿದ್ದು, ಶೋಭಾ ಅವರ ಅವ್ವ ಮತ್ತು ಅಬ್ಬಲಿಗೆ ಕವನ ಸಂಕಲನ  ಈ ಪ್ರಶಸ್ತಿಗೆ ಆಯ್ಕೆಯಾಗಿದೆ. ಶೋಭಾ ಹಿರೇಕೈ ಕೊಂಡ್ರಾಜಿ ಅವರು  ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಂಡ್ರಾಜಿಯವರು. ಪ್ರಸ್ತುತ ಸಿದ್ದಾಪುರ […]

ಆಕಾಶದೀಪದ ಪ್ರಾಧಾನ್ಯತೆ

ಲೇಖನ ಆಕಾಶದೀಪದ ಪ್ರಾಧಾನ್ಯತೆ ವೀಣಾ. ಎನ್. ರಾವ್. ದೀಪಾವಳಿ ಬಂತೆಂದರೆ ಮಕ್ಕಳಿಂದ ಹಿಡಿದು ಎಲ್ಲಾ ವಯಸ್ಸಿನವರಿಗೂ ವಿನೂತನವಾದ ಸಂತಸ. ಹಾಗೆಯೇ ದೀಪಾವಳಿಯ ಸಮಯದಲ್ಲಿ ಅದರಲ್ಲೂ ವಿಶೇಷವಾಗಿ ಹಳ್ಳಿಗಳಲ್ಲಿ “ಆಕಾಶದೀಪ”ವನ್ನು ಮನೆಯ ಮುಂದೆ ತೂಗು ಹಾಕುತ್ತಾರೆ.  ಈ ‘ಆಕಾಶದೀಪ’ವು, “ಗೂಡುದೀಪ”,”ನಕ್ಷತ್ರದೀಪ”,ಎಂದು ಪರಿಚಿತವಾದರೆ, ಹಳ್ಳಿಗಳಲ್ಲಿ “ಯಮದೀಪ”,”ವ್ಯೋಮದೀಪ”  ಎಂದು ಕೂಡಾ ಕರೆಯುತ್ತಾರೆ.            ಬಿದಿರಿನ ಕಡ್ಡಿಗಳಿಂದ ಎಂಟು ಮೂಲೆಗಳಿರುವಂತೆ ಯಾವ ಆಕಾರಕ್ಕೆ ಬೇಕೊ ಆ ರೀತಿಯಾಗಿ ಕಟ್ಟಿ ಅದರ ಸುತ್ತಲೂ ಬಣ್ಣದ ಪೇಪರನ್ನು ಅಂಟಿಸಿ ಬಾಲಂಗೋಚಿಯನ್ನು ಇಳಿಬಿಟ್ಟು ಮನೆಯಲ್ಲೆ ತಯಾರಿಸುವ ಈ […]

ಕಾದಂಬರಿ ಕುರಿತು ಮರಳಿ ಮಣ್ಣಿಗೆ ಡಾ.ಶಿವರಾಮ ಕಾರಂತ ಮರಳಿ ಮಣ್ಣಿಗೆ  ಲೇಖಕರು :ಡಾ. ಕೆ‌. ಶಿವರಾಮ ಕಾರಂತ ನಾನು ಶಿವರಾಮ ಕಾರಂತರ ಎಲ್ಲಾ ಕಾದಂಬರಿಗಳನ್ನು ಓದಿಲ್ಲವಾದರೂ ಕೆಲವೊಂದನ್ನು ಓದಿದ್ದೇನೆ.  ಅದರಲ್ಲಿ ನನಗಿಷ್ಟವಾದ ಕಾದಂಬರಿ ” ಮರಳಿ ಮಣ್ಣಿಗೆ”    ಈ ಕೃತಿಯನ್ನು ಓದುವಾಗ ಓದಿ ಮುಗಿಸುವ ತನಕ ಪುಸ್ತಕ ಮುಚ್ಚಿಡಲು ಆಗದಷ್ಟು ಆಸಕ್ತಿ ನಮ್ಮನ್ನು ಓದಿಸಿ ಕೊಂಡು ಹೋಗುತ್ತದೆ. ಇಡೀ ಕಥೆಯೆ ನಮ್ಮ ಕಣ್ಮುಂದೆ ಹಾದು ಹೋಗುವ ಅನುಭವವಾಗುತ್ತದೆ. ಇದಕ್ಕೆ ಕಾರಣ ಅಲ್ಲಿನ ಘಟನೆಗಳು, ಮಾತುಕತೆಗಳು ಹಾಗು […]

ಅಕಾರಣ ಅಕಾಲ

ಕವಿತೆಯ ಕುರಿತು ಅಕಾರಣ ಅಕಾಲ ನಾಗರೇಖಾ ಗಾಂವಕರ್ ಸಾಹಿತ್ಯದ ನಿಲುವುಗಳು ಭಿನ್ನ ರೀತಿಯಲ್ಲಿ ಎಂದಿಗೂ ಅಭಿವ್ಯಕ್ತಿಗೊಳ್ಳುತ್ತಲೇ ಇರುವುವು. ಸಮಾಜದ ಓರೆಕೋರೆಗಳಿಗೆ ಕನ್ನಡಿ ಹಿಡಿಯುವ ಸಾಹಿತಿಗಳು, ಕವಿಗಳು ತಮ್ಮ ವ್ಯಕ್ತಿತ್ವವನ್ನು ಅಷ್ಟೇ ಶುದ್ಧ ಪಾರದರ್ಶಕತೆಗೆ ಒಗ್ಗಿಕೊಂಡು, ನಡೆದಂತೆ ನುಡಿಯುವ  ಛಾತಿಯುಳ್ಳವರಾಗಿರಬೇಕು. ಇಲ್ಲವಾದಲ್ಲಿ ಅದು ಅಪಹಾಸ್ಯಕ್ಕೆ ಗುರಿಯಾದ ಸಂದರ್ಭಗಳಿವೆ. ಹಾಗೇ ಕವಿತೆಯಲ್ಲಿ ಕವಿಯನ್ನು ಹುಡುಕುವ ಪ್ರಯತ್ನ ಸಲ್ಲ ಎಂಬ ವಾದವೂ ಇದೆ. ಆದರೆ ಇದು ಕೂಡಾ ಎಲ್ಲ ಸಂದರ್ಭಗಳಿಗೆ ಸರಿಯಾಗದು. ಕವಿತೆ ಭಾವನೆಗಳ ಪದಲಹರಿ. ಹಾಗಾಗಿ ಅನ್ಯರ ಅನುಭವಗಳ ಮೇಲೆ […]

ಕಾದಂಬರಿ ಕುರಿತು ಚೋಮನ ದುಡಿ ಡಾ.ಶಿವರಾಮ ಕಾರಂತ ತಿಲಕ ನಾಗರಾಜ್ ಹಿರಿಯಡಕ ಚೋಮನ ದುಡಿಯ ಮೋಡಿಗೆ ಮನಸೋತಿರುವೆ…  ಯಾವುದೇ ಕೃತಿ ಓದಿದರೂ ನನ್ನನ್ನು ಮತ್ತೆ ಮತ್ತೆ ಕಾಡುವುದು ನೆಚ್ಚಿನ ಸಾಹಿತಿ ಕಾರಂತಜ್ಜರ ‘ಚೋಮನ ದುಡಿ’ ಅಂದಿನ ಕಾಲದ ಕಾರ್ಗತ್ತಲ ಸ್ವರೂಪ, ಆ ಕತ್ತಲನ್ನು ಲೆಕ್ಕಿಸದೆ ಜನರು ಊರ ಜಾತ್ರೆಯನ್ನು ಸಂಭ್ರಮಿಸುತ್ತಿದ್ದ ಪರಿ, ಇಂದು ಹಗಲಿನಂತೆ ಬೆಳಗುವ ರಾತ್ರಿಯ ಕಾಣುವ ನಮನ್ನು ಬೇರಾವುದೋ ಲೋಕಕ್ಕೆ ಕೊಂಡೊಯ್ಯುತ್ತದೆ. ಚೋಮನ ದುಡಿಯಲ್ಲಿ ಬರುವ ಪ್ರತಿಯೊಂದು ಪಾತ್ರಗಳು ಮನಸ್ಸಿಗಿಳಿಯುತ್ತವೆ. ನಮಗಿವತ್ತು ಕೇವಲವೆನಿಸುವ  ಇಪ್ಪತ್ತು […]

ಕಾದಂಬರಿ ಕುರಿತು ಮಲೆಗಳಲ್ಲಿ ಮದುಮಗಳು ಕುವೆಂಪು ಚಂದ್ರಿಕಾ ನಾಗರಾಜ್ ಹಿರಿಯಡಕ ಮಲೆಯ ಝೇಂಕಾರಗಳಿಗೆ ಕಿವಿಯಾಗುತ್ತಾ… ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅನೇಕ ಕಾದಂಬರಿಗಳು ಜೀವಂತಿಕೆ ಪಡಕೊಂಡಿವೆ. ಅನೇಕ ಸಾಹಿತಿಗಳು ತಮ್ಮ ಕೃತಿಗಳ ಮೂಲಕಾನೇ ಉಸಿರಾಡುತ್ತಿದ್ದಾರೆ. ಅಂತಹ ಮೇರು ಸಾಹಿತಿಗಳಲ್ಲಿ ಪ್ರಮುಖರು ಕುವೆಂಪು. ಪ್ರಕೃತಿಯೊಂದಿಗಿನ ನಂಟಿನಲ್ಲೇ ಸಂಬಂಧಗಳನ್ನು ಅರಳಿಸುತ್ತಾ ಸಾಗಿಸುವ ಶ್ರೇಷ್ಠ ಕವಿ ಕುವೆಂಪು. ಅವರ ಕೃತಿಗಳಲ್ಲಿ ನನ್ನನ್ನು ಬಹುವಾಗಿ ಕಾಡಿದ್ದು “ಮಲೆಗಳಲ್ಲಿ ಮದುಮಗಳು”. ಕಣ್ಣಿಗೆ ದಣಿವೇ ನೀಡದೆ ಓದಿಸಿಕೊಂಡು ಹೋಗುವ ಕಾದಂಬರಿ. ಮಲೆಗಳಲ್ಲಿ ಕಾಡುವ ಮದುಮಗಳ ಬರಹ ಕಾವ್ಯವಿದು.ಕಾದಂಬರಿಯ […]

ಕಾದಂಬರಿ ಕುರಿತು ಕರ್ವಾಲೊ ಪೂರ್ಣಚಂದ್ರ ತೇಜಸ್ವಿ ಅರುಣಾ ರಾವ್ [10:21 AM, 11/7/2020] ARUNA RAO: ಪೂರ್ಣ ಚಂದ್ರ ತೇಜಸ್ವಿ ನನ್ನ ಯಾವತ್ತಿನ ಫೇವರೇಟ್ ರೈಟರ್. ಅವರ ಎಲ್ಲ ಕಾದಂಬರಿಗಳೂ ನನ್ನ ಬಳಿ ಇವೆ ಎಂದು ಹೇಳಿಕೊಳ್ಳಲು ನನಗೆ ಖುಷಿ. ಪ್ಯಾಪಿಲಾನ್, ಚಿದಂಬರ ರಹಸ್ಯ, ಅಬಚೂರಿನ ಫೋಸ್ಟ ಆಫೀಸ್, ತಬರನ ಕತೆ, ಅಡ್ವೆಂಚರ್ ಸೀರೀಸ್, ಅಲೆಮಾರಿ ಅಂಡಮಾನ್ ಎಲ್ಲವೂ ನನ್ನ ಪುಸ್ತಕ ಖಜಾನೆಯನ್ನು ಶ್ರೀಮಂತಗೊಳಿಸಿವೆ.ತೇಜಸ್ವಿಯವರ ಕಾದಂಬರಿಗಳು ಕೇವಲ ಮನರಂಜನಾ ಸಾಧನವಾಗಿರದೆ ಬುದ್ದಿಗೆ, ಮಂಥನಕ್ಕೆ ಆಹಾರವನ್ನು ಒದಗಿಸುತ್ತದೆ.ತೀರ ಇತ್ತೀಚೆಗಷ್ಟೇ […]

ಲಹರಿ ಅಕ್ಕ , ನೀನು ಯಾರಿಗೆ ಮಗಳಾಗಿದ್ದೆ ? ವೀಣಾ ದೇವರಾಜ್   ಮಗಳೇ ನೀನು ಯಾರಿಗೆ ಮಗಳಾಗಿದ್ದೆ. ಮಗಳ ಪ್ರೀತಿ ನಿನಗೆ ಗೊತ್ತೇ. ಅದನ್ನು ಎಂದಾದರೂ ಅನುಭವಿಸಿದ್ದೀಯಾ. ಹೇಗಿರಬಹುದೆಂದು ಯೋಚಿಸಿದ್ದೀಯ ಅಥವಾ ಬಯಸಿದ್ದೆಯ? ಒಮ್ಮೆ ಯೋಚಿಸಿ ನೋಡೋಣ… ಹಾಂ,ಸಿನೆಮಾದಲ್ಲಿ,, ಪುಟಾಣಿ ಪಾಪು , ಅದೇನು ಚೆಂದ,ಅಪ್ಪ ಅಮ್ಮನ ಮುದ್ದು ಮಗು ತಮ್ಮಿಷ್ಟದಂತೆ  ಅದನ್ನು ಸಿಂಗರಿಸಿದ್ದಾರೆ ನೋಡಿದವರೆಲ್ಲಿ ಕಣ್ಣುಬಿಟ್ಟು ದೃಷ್ಟಿ ತಾಗುವುದೋ ಎಂದು ದೃಷ್ಟಿಬೊಟ್ಟನ್ನೂ  ಇಟ್ಟಿದ್ದಾರೆ. ಒಂದು ನಿಮಿಷವೂ ಒಂಟಿಯಾಗಿ ಬಿಟ್ಟಿಲ್ಲ. ಇನ್ನೇನು ಶಾಲೆಗೆ ಸೇರಿಸುವ ವಯಸ್ಸು […]

ಕಾದಂಬರಿ ಕುರಿತು` ಬೆಟ್ಟದ ಜೀವ ಡಾ.ಶಿವರಾಮ ಕಾರಂತ ಶಾಂತಲಾ ಮಧು ನನ್ನ ನೆಚ್ಚಿನ “ಬೆಟ್ಟದ ಜೀವ”ಕಾದಂಬರಿಯ ಒಂದು ನೋಟ” “”ಬಾನಿನಲ್ಲಿ ಸೂರ‍್ಯನು ತುಸುವಾಗಿ ಮೇಲಕ್ಕೇರುತ್ತಾನೆ- ಎಂದಂತೆ ಒಮ್ಮೆಗೇ ಅವನ ರಶ್ಮಿಗಳು ಬೆಟ್ಟದ ತೆಂಕು ಮಗ್ಗುಲಿನ ಹಸುರನ್ನೆಲ್ಲ ಬೆಳಕಿಂದ ತೊಯ್ಯಿಸಿಬಿಟ್ಟವು! ಆ ಅಪೂರ್ವದ ನೋಟವು ಎಂದೂ ಮರೆಯುವಂಥದಲ್ಲ. ಆ ತನಕ- ಕಠಿಣವೂ ನಿರ‍್ದಾಕ್ಷಿಣ್ಯವೂ ಆಗಿ ನಿಂತ ಬೆಟ್ಟಕ್ಕೆ ಒಂದು ಬದಿಯಲ್ಲಿ ಮೃದುವಾದ ಹೃದಯವಿದ್ದಂತೆ ಕಂಡಿತು. ನೋಡುತ್ತಾ ನಿಂತಂತೆ, ಕೆಂಪಡರಿದ ಬಾನಿನ ಕಣ್ಣು ಕ್ರೂರವಾಗುತ್ತ ಬೆಂದ ಕಬ್ಬಿಣವನ್ನು ಕರಗಿಸಲು ಬಂದಂತೆ […]

Back To Top