Category: ಇತರೆ

ಇತರೆ

ಏಕಾಂತದಿಂದ ಲೋಕಾಂತಕ್ಕೆ

ಏಕಾಂತದಿಂದ ಲೋಕಾಂತಕ್ಕೆ –ಲೇಖಿಕಾ ಸಾಹಿತ್ಯ ವೇದಿಕೆ ಪುಸ್ತಕ ಪರಿಚಯ ಸಾರ್ಥ್ಯಕ್ಯ ಡಿ.ಯಶೋದಾ ವಿಶ್ವಕ್ಕೇ ಕೊರೋನ   ಕಾರ್ಮೋಡ ಕವಿದಿರುವ ಇಂತಹ ಕಾಲದಲ್ಲಿ ಎಲ್ಲರೂ ಒಟ್ಟಿಗೆ ಸೇರಿ ತಾಂತ್ರಿಕತೆಯ ಮೂಲಕ ಒಂದು ಗೂಡುವು ದು ವಿಶೇಷ. ಏಕಾಂತದಿಂದ ಲೋಕಾಂತಕ್ಕೆ ಎಂಬಂತೆ ತಂತ್ರ ಜ್ಞಾನದ ಮೂಲಕ ಸಂವಹನ ಮಾಡುವುದು ಇಂದಿಗೆ ಅತಿ ಮುಖ್ಯ ಎಂಬುದು ಹಿರಿಯ ಪತ್ರಕರ್ತೆ ಡಾ. ಆರ್. ಪೂರ್ಣಿಮಾ ಅಭಿಮತ.ಲೇಖಿಕಾ ಸಾಹಿತ್ಯ ವೇದಿಕೆ ಯ ನನ್ನ ಮೆಚ್ಚಿನ ಪುಸ್ತಕ ಪರಿಚಯದ ಫೇಸ್‌ಬುಕ್ ಲೈವ್ ಸರಣಿ ಕಾರ್ಯಕ್ರಮದ ಅವಲೋಕನದಲ್ಲಿ ಮಾತನಾಡಿದ ಅವರು, […]

ಆಕಾಶಯಾನವೂ ಆಧ್ಯಾತ್ಮಿಕ ಚಿಂತನೆಯೂ

ಲೇಖನ ಚಂದಕಚರ್ಲ ರಮೇಶ ಬಾಬು ತಲೆಬರಹ ನೋಡಿಯೇ ಇದೇನಪ್ಪ ಇವನು ಯಾವುದನ್ನ ಯಾವುದಕ್ಕೋ ಜೋಡಿಸ ತೊಡಗಿದ್ದಾನೆ ಎನ್ನುತ್ತೀರಾ ! ಕರ್ಮಸಿದ್ಧಾಂತಕ್ಕೂ ನಾವು ಕೈಗೊಳ್ಳುವ ವಿಮಾನಯಾನಕ್ಕೂ ಎಲ್ಲಿಯ ಸಾಪತ್ಯ ವೆನ್ನುತ್ತೀರಾ !. ಏನೋ ಹೇಳಲು ಹೋಗಿ ಏನೋ ಹೇಳ್ತಿದೀನಿ ಅಂತ ಅನ್ನಿಸ್ತಿದೆಯಾ ? ಅದೇನೂ ಅಲ್ಲ. ನಾನು ನಿಮಗೆ ಅನುಭವಗಳ ದೃಷ್ಟಾಂತಗಳನ್ನು ಕೊಡುತ್ತಾ ಹೋದಾಗ ನೀವೇ ಒಪ್ತೀರಾ ! ಆದ್ರೆ ಒಂದು. ಇದು ಹೊಂದೋದು ವಿದೇಶೀ ವಿಮಾನಯಾನಕ್ಕೆ ಮಾತ್ರ.  ಈಗ ನಾವು ಇದರ ಚರ್ಚೆಗೆ ಬರೋಣ. ನೀವು ನಮ್ಮ […]

ಕಸಾಪಕ್ಕೆ ಮಹಿಳೆ ಅಧ್ಯಕ್ಷರಾಗಬೇಕು

12ನೇ ಶತಮಾನದಿಂದ ಇಲ್ಲಿಯವರೆಗೂ ಮಹಿಳೆಯರಾದ ನಾವು ಪ್ರತಿಯೊಂದು ವಿಷಯದಲ್ಲೂ ಪ್ರತಿಭಟನೆಯ ಮಾಡಿಯೇ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳುತ್ತಾ ಬಂದಿದ್ದೇವೆ. ಸಮಾನತೆಯೆಂದು ಎಷ್ಟೇ ಬೊಬ್ಬೆ ಹೊಡೆದರು ಅದರ ಸಂಪೂರ್ಣ ಫಲ ದೊರೆಯುತ್ತಿಲ್ಲ .ಹಾಗಾಗಿ ಮಹಿಳೆಯರು ಒಂದು ಹೆಜ್ಜೆ ಮುಂದೆ ಇಡಬೇಕು .ಇಲ್ಲವೆಂದರೆ ನಮ್ಮನ್ನು ನಾವೇ ಅಂತರ್ಯದಲ್ಲಿ ಅಂಜಿಕೆ ಎಂಬ ಶೋಷಣೆ ಮಾಡಿಕೊಂಡಂತಾಗುತ್ತದೆ . ಡಾಕ್ಟರ್ ಗುರುರಾಜ ಕರ್ಜಗಿ ಅವರು ಹೇಳುವಂತೆ ಚಕ್ರವರ್ತಿ ಆಗಬೇಕೆಂದರೆ ಯಾವುದೇ ಅದೃಷ್ಟದ ಗೆರೆಗಳು ಬೇಕಾಗಿಲ್ಲ .ಆತ್ಮಸ್ಥೈರ್ಯವಿದ್ದರೆ ಸಾಕು . ಆ ಬಲದಿಂದಲೇ ಏನನ್ನು ನಾವು ಗೆಲ್ಲಬಹುದು. […]

ಕಸಾಪಕ್ಕೆ ಮಹಿಳಾ ಅಧ್ಯಕ್ಷರೇ ಸಿಗುತ್ತಿಲ್ಲವೋ, ಬೇಕಿಲ್ಲವೋ ?

ಕಸಾಪಕ್ಕೆ ಮಹಿಳಾ ಅಧ್ಯಕ್ಷರೇ ಸಿಗುತ್ತಿಲ್ಲವೋ, ಬೇಕಿಲ್ಲವೋ ? ಡಾ. ಅಜಿತ್ ಹರೀಶಿ ಕಸಾಪಕ್ಕೆ ಮಹಿಳಾ ಅಧ್ಯಕ್ಷರೇ ಸಿಗುತ್ತಿಲ್ಲವೋ, ಬೇಕಿಲ್ಲವೋ ? ಕಸಾಪಕ್ಕೆ ಮಹಿಳೆಯೋರ್ವರು ಅಧ್ಯಕ್ಷರಾಗಲಿ ಎಂಬುದು ಸೂಕ್ತವೇ ಆಗಿದೆ. ಆದರೆ ಕೆಲವು ಅಂಶಗಳನ್ನು ನಾನು ಇಲ್ಲಿ ಈ ಸಂದರ್ಭದಲ್ಲಿ ಚರ್ಚಿಸಲು ಬಯಸುತ್ತೇನೆ. ತುರ್ತುಪರಿಸ್ಥಿತಿಯೇ ಕೊನೆ. ಆನಂತರ ದೊಡ್ಡ ಹೋರಾಟವೇ ಇಲ್ಲದ ಜಿಡ್ಡುಗಟ್ಟಿದ ವಾತಾವರಣ ರಾಜಕೀಯ ವಲಯದಲ್ಲಿ ಸೃಷ್ಟಿಯಾಯಿತು. ಸಾಹಿತ್ಯದಲ್ಲೂ ಬಂಡಾಯ, ದಲಿತ ಹೋರಾಟಗಳ ನಂತರದ ಸ್ಥಿತಿ ನಿಂತ ನೀರೀಗ! ಯಾವುದೇ ಆಗ್ರಹವನ್ನು ಅನುಮಾನದಿಂದ ನೋಡುವ ಪ್ರವೃತ್ತಿ ಇಂದಿನ […]

ಕಸಾಪಗೆ ಮಹಿಳಾ ಅಧ್ಯಕ್ಷರು ಬೇಕು

ಹೆಣ್ಣು ಸಾಹಿತ್ಯ,ಸಂಸ್ಕೃತಿ ಮತ್ತು ಸಂಸ್ಕಾರದ ಪ್ರತೀಕ , ಅಡುಗೆ ಮನೆ ಸೌಟು ಹಿಡಿದಿರಬಹುದಾದ ಹೆಣ್ಣು ತಾಯಿಯಾಗಿ ,ಸೋದರಿಯಾಗಿ ಪತ್ನಿಯಾಗಿ ಸಂಸಾರದ ಕಣ್ಣಾಗಿದ್ದಾಳೆ ,ಸಮಾಜದ ಎಲ್ಲ ರಂಗಗಳಲ್ಲಿ ಸಕ್ರಿಯಳಾಗಿ ಸೈ  ಎನಿಸಿಕೊಂಡಿರುವ ಆಕೆ ವೈದ್ಯಳಾಗಿ .ಯೋಧಳಾಗಿ .ಪ್ರಧಾನಿಯಾಗಿ,ರಾಷ್ಟ್ರಪತಿಯಾಗಿ ತನ್ನ ಸಾಮರ್ಥ್ಯ ಮೆರೆದಿದ್ದಾಳೆ . ಅಲ್ಲದೆ ಪುರುಷರಿಗೆ ಸಮನಾಗಿ ಎಲ್ಲ ಸ್ತರಗಳಲ್ಲಿ ಕಾರ್ಯವೆಸಗುವುದರಲ್ಲಿ ಯಶಸ್ವಿಯಾಗಿದ್ದಾಳೆ. ಸಾಹಿತ್ಯಮತ್ತು ಸಂಸ್ಕಾರಕ್ಕೆ ಅವಳ ಕೊಡುಗೆ ಅಪಾರ,  ಹೆಣ್ಣು ಸಮಾಜದ ಕಣ್ಣು .   ಆದರೆ ಕನ್ನಡದ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತು ಏಕೊ ಏನೋ […]

ಮಹಿಳಾ ಅಧ್ಯಕ್ಷರು ಯಾಕಿಲ್ಲ… !

ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ 1915 ರಲ್ಲಿ ಸ್ಥಾಪನೆಯಾದ ‘ಕರ್ನಾಟಕ ಸಾಹಿತ್ಯ ಪರಿಷತ್ತು’ ಆಗಿನ ಮೈಸೂರಿನ ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಂದ ಚಲನೆಗೊಂಡಿತು. ನಂತರ 1938 ರಲ್ಲಿ ‘ಕನ್ನಡ ಸಾಹಿತ್ಯ ಪರಿಷತ್ತು’ ಎಂದು ಬದಲಾಯಿತು. ಉದ್ದೇಶ : ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು -ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಇದು ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುವುದರ ಮೂಲಕ ಕನ್ನಡ ಸಾಹಿತ್ಯವನ್ನು ನಾಡಿನ ಮೂಲೆ ಮೂಲೆಗಳಲ್ಲಿ ಹರಡಲು […]

ಕಸಾಪಗೆಮಹಿಳಾ ಅಧ್ಯಕ್ಷರು

ತೊಟ್ಟಿಲ ತೂಗುವ ಕೈ ಜಗತ್ತನ್ನೇ ತೂಗಬಲ್ಲದು ಎಂಬ ಮಾತನ್ನು ನಾವೆಲ್ಲ ನೆನಪಿಸಿಕೊಳ್ಳಬೇಕು. ಸಾಹಿತ್ಯ, ಸಂಗೀತ ಕಲೆ ಇತ್ಯಾದಿಗಳು ಹೆಣ್ಣಿನ ಮನದಲ್ಲಿ ನೈಜವಾಗಿ ಹಾಸು ಹೊಕ್ಕಾಗಿರುತ್ತೆ. ಆದರೆ ಎಷ್ಷ್ಟೊ ಸಲ ಮಹಿಳೆ ತನ್ನ ಸಂಸಾರದ ಜವಾಬ್ದ್ದಾರಿ, ಇತರೆ ಕರ್ತವ್ಯಗಳಲ್ಲಿ ತನ್ನ ಪ್ರತಿಭೆಗೆ ಬೆನ್ನು ತೋರಿಸಿದ್ದೂ ಕಾಣುತ್ತೆವೆ. ಕಣ್ಣಿಗೆ ಕಾಣಿಸುವ ತನ್ಮ ಕೆಲಸ, ಮನೆಯವರನ್ನೆಲ್ಲ ತನ್ನ ಕರ್ತವ್ಯ ದಲ್ಲಿ ಚ್ಯುತಿ ಬರದಂತೆ, ಸಹನೆಯಿಂದ ದುಡಿಯುವದೊಂದೆ ತನ್ನ ಕಾಯಕ‌ ‌ಎಂದು ಕೊಂಡ ಮಹಿಳೆ ಈಗ ತನ್ನತನವನ್ನು‌ ಅರಿತು ಕಪ್ಪೆಚಿಪ್ಪಿನಿಂದ ಹೊರಬಂದು ಸಾಧನೆ […]

ಕಸಾಪಗೆ ಮಹಿಳಾ ಅಧ್ಯಕ್ಷರು ಬೇಕು

ತೊಟ್ಟಿಲು ತೂಗುವ ಕೈ ಜಗತ್ತನ್ನೂ ತೂಗಿದೆ. ದೇಶವನ್ನೂ ಆಳಿದೆ.ಸೌಟು ಹಿಡಿದ ಕೈ ಲೇಖನಿಯನ್ನೂ ಸಮರ್ಥವಾಗಿ ಬಳಸಿದೆ . ಅಡುಗೆ ಮನೆಯನ್ನು ಸಂಭಾಳಿಸುವ ಮಹಿಳೆ ಕನ್ನಡ ಸಾಹಿತ್ಯ ಪರಿಷತ್ತನ್ನು ನಿಭಾಯಿಸಲಾರಳೇ? ನಾನಿಲ್ಲಿ ಪುರುಷರು ಸರ್ವಾಧಿಕಾರಿಯಾಗಿದ್ದಾರೆ ಎಂದಾಗಲಿ, ಮಹಿಳೆಯರನ್ನು ತುಳಿದಿದ್ದಾರೆಂದಾಗಲಿ ಹೇಳುತ್ತಿಲ್ಲ. ಅಸಲಿಗೆ, ಮಹಿಳೆಯರೇ ಮನಸ್ಸು ಮಾಡಿರಲಿಕ್ಕಿಲ್ಲ ಎಂದು ಅನಿಸುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಗಿ ನೂರರ ಮೇಲೆ ಆರು ವರುಷಗಳಾದರೂ ಇದುವರೆಗೆ ಅಧ್ಯಕ್ಷ ಸ್ಥಾನವನ್ನು ಒಬ್ಬ ಮಹಿಳೆ ವಹಿಸಿಲ್ಲ ಎನ್ನುವುದರ ಹಿಂದೆ ಪುರುಷರಿಗಿಂತ ಮಹಿಳೆಯರದೇ ಹೆಚ್ಚಿನ ಪಾಲಿದೆ. ಬೆಂಗಳೂರಿನ ಶ್ರೀ […]

ವೃತ್ತಿಯಷ್ಟೇ ಹವ್ಯಾಸ ಮುಖ್ಯ

ಲೇಖನ ಚಂದಕಚರ್ಲ ರಮೇಶ ಬಾಬು ವೃತ್ತಿ ಅಂದರೆ ನಾವು ಜೀವನಕ್ಕಾಗಿ ಆರಿಸಿಕೊಂಡ ಕೆಲಸ. ಆ ಕೆಲಸದಲ್ಲಿ ನಮಗಿಷ್ಟವಿಲ್ಲದಿದ್ದರೂ ಹೊಟ್ಟೆ ಹೊರೆಯುವುದಕ್ಕಾಗಿ ಮಾಡಲೇಬೇಕಾದ ಅನಿವಾರ್ಯತೆ ಇರುತ್ತದೆ. ಮೇಲಧಿಕಾರಿಯ ದಬ್ಬಾಳಿಕೆ, ಅಲ್ಲಲ್ಲಿ ವರ್ಗಾವಣೆ, ಗ್ರಾಹಕರ ಜೊತೆ ಘರ್ಷಣೆ, ಸಹೋದ್ಯೋಗಿಗಳ ಕಿರುಕುಳ ಇವೆಲ್ಲ ವೃತ್ತಿಯ ಜೊತೆಯಿದ್ದು, ನಾವು ಗಳಿಸುವ ಸಂಬಳದ ಜೊತೆ ಬಂದು ಬೀಳುವ ಅಡ್ಡ ಒತ್ತಡಗಳು. ಇವನ್ನೆಲ್ಲ ತೂಗಿಸಿಕೊಂಡು ಹೋಗಲೇಬೇಕಾದ ಅನಿವಾರ್ಯತೆ. ಆಗ ನಮಗೆ ಗೊತ್ತಿಲ್ಲದೆಯೇ ನಮ್ಮಲ್ಲಿ ಒತ್ತಡ ಜಾಸ್ತಿಯಾಗುತ್ತದೆ. ಮನೆ, ಮಡದಿ, ಮಕ್ಕಳು ಮನೆಯಲ್ಲಿಯ ನೆಮ್ಮದಿ ಸ್ವಲ್ಪ ಮಟ್ಟಿಗೆ […]

ಜೀವನ ಪೂರ್ತಿ ಜೀವದ ಗೆಳೆಯ

ಜಯಶ್ರೀ ಜೆ.ಅಬ್ಬಿಗೇರಿ ಅದೆಷ್ಟೋ ದಿನಗಳಿಂದ ಹಗಲು ರಾತ್ರಿ ಪ್ರಯತ್ನಿಸಿದರೂ ನಿನ್ನನ್ನು ಮರೆಯಲಾಗುತ್ತಿಲ್ಲ. ನಿನ್ನ ನೆನಪುಗಳು ತಲೆಯಿಂದ ಆಚೀಚೆ ಕದಲದೇ ಕರಗದ ಗುಡ್ಡದಂತೆ ಕುಳಿತುಕೊಂಡು ಬಿಟ್ಟಿವೆ. ಅದ್ಯಾಕೋ ಮರೆಯಲಾಗುತ್ತಿಲ್ಲ. ಮರೆಯಬೇಕೆಂದಷ್ಟು ಹಟ ಹಿಡಿದರೂ ನಾ ಮುಂದು ತಾ ಮುಂದು ಎಂದು ಮನಃಪಟಲದ ಮೇಲೆ ನೆನಪಿಗೆ ಬಂದು ಕಾಡುತ್ತವೆ. ಹೀಗೇಕೆ? ಅಂತ ಹೃದಯ ನೂರಾರು ಬಾರಿ ಪ್ರಶ್ನಿಸಿದರೂ ಮನಸ್ಸು ತನ್ನ ಮಾತುಗಳನ್ನು ಹೇಳಲಾಗದೇ ತನ್ನ ನಾಲಿಗೆಗೆ ದೊಡ್ಡದೊಂದು ಬೀಗ ಹಾಕಿಕೊಂಡು ತನ್ನೊಳಗೆ ಮಾತುಗಳನ್ನು ಬಂಧಿಸಿಟ್ಟು ಮೌನದಲ್ಲೇ  ಕ್ಷಣ ಕ್ಷಣವೂ ನನ್ನನ್ನು […]

Back To Top