Category: ಇತರೆ

ಇತರೆ

ಮಕ್ಕಳ ಹಾಡು

ನಮ್ಮಯ ಬದುಕು ಮಲಿಕಜಾನ ಶೇಖ ಹಂಸಮ್ಮಾ ಬಂದಳು ಹಂಸಮ್ಮಾ ಕ್ವ್ಯಾಕ್ -ಕ್ವ್ಯಾಕ್ ಕ್ವ್ಯಾಕ್-ಕ್ವ್ಯಾಕ್ ನುಡಿಯುತ್ತಾ ಶ್ವೇತ ಬಣ್ಣ ನನ್ನದು ಹಾಲು-ಮೀನು ಕಂಡರೆ ನಾನು ಕರಿವೆ ಎಂದಳು ಮಕ್ಕಳ-ಮರಿಯನ್ನು. ಹುಂಜಪ್ಪಾ ಬಂದನು ಹುಂಜಪ್ಪಾ ಕುಕ್ಕು-ಕೂ ಕುಕ್ಕು- ಕೂ ಕೂಗುತ್ತಾ ತೆಲೆಯಲಿ ಫುಂಜ ನನ್ನದು ಹುಳವ-ಗಿಳವ ಕಂಡರೆ ನಾನು ಕರಿವೆ ಎಂದನು, ಹೆಂಡತಿ ಮಕ್ಕಳನು. ಕಾಗಣ್ಣ ಬಂದ ಕಾಗಣ್ಣ ಕಾವ್-ಕಾವ್ ಕಾವ್-ಕಾವ್ ಕಿರಚುತ್ತಾ ಕಪ್ಪು ಬಣ್ಣದು ನನ್ನದು ಅನ್ನದ ಅಗಳ ಕಂಡರೆ ನಾನು ಕರಿವೆ ಎಂದನು, ಬಂಧು-ಬಳಗವನು. ಗುಬ್ಬಕ್ಕಾ ಬಂದಳು […]

ಅಂತಿಮ ನಮನ

ಟಿ.ಎಲ್.ರಾಮಸ್ವಾಮಿ ಅಪರೂಪದ ಕ್ರಿಯಾಶೀಲ, ಸೃಜನಶೀಲ ಪತ್ರಿಕಾ ಛಾಯಾಗ್ರಾಹಕ ಟಿ.ಎಲ್‌.ರಾಮಸ್ವಾಮಿಯವರು..! ಒಂದು ಚಿತ್ರ ಸಾವಿರ ಪದಗಳಿಗೆ ಸಮ ಎಂಬ ಮಾತಿದೆ. ಅದರಂತೆ ಕ್ರಿಯಾಶೀಲ ಮತ್ತು ಸೃಜನಶೀಲ ಪತ್ರಿಕಾ ಛಾಯಾಚಿತ್ರ ಗ್ರಾಹಕ ಟಿ.ಎಲ್. ರಾಮಸ್ವಾಮಿಯವರು ತೀರಿದ್ದಾರೆ. ಅವರು ಆರು ದಶಕಗಳಿಗೂ ಹೆಚ್ಚು ಕಾಲದಿಂದ ಪತ್ರಿಕಾ ಛಾಯಾಗ್ರಾಹಕರಾಗಿ ಸಾವಿರಾರು ಚಿತ್ರಗಳ ಮೂಲಕ ಕರ್ನಾಟಕದ ಆಗುಹೋಗುಗಳನ್ನು ಸೆರೆಹಿಡಿದವರು. ಅವರು ಪತ್ರಿಕಾ ಛಾಯಾಚಿತ್ರ ಕಲೆಯಲ್ಲಿ ವಿಶಿಷ್ಟ ಪ್ರತಿಭೆಯನ್ನೂ ತೋರಿ ದೇಶ ವಿದೇಶಗಳ ಪತ್ರಿಕೆಗಳ ಗೌರವಾದರ ಪಡೆದವರು… 1950 ರಿಂದ 1985 ರವರೆಗೆ ಡೆಕ್ಕನ್ ಹೆರಾಲ್ಡ್, […]

ಪ್ರಸ್ತುತ

ಪರೀಕ್ಷೆಗಳತ್ತ ಚಿತ್ತ ವನಜಾ ಸುರೇಶ್ ಪರೀಕ್ಷೆಗೆ  ದಿನಗಣನೆ  ಆರಂಭವಾಗಿದೆ  . ಕೆಲವು  ಮಕ್ಕಳಿಗೆ.  ಪರೀಕ್ಷೆ  ಮುಗಿದರೆ ಸಾಕೆಂಬ ಮನೋಭಾವವು ಇದೆ . ಕೆಲವರಲ್ಲಿ ಭಯವೂ ಇದೆ. 2019 ಜೂನ್ ನಿಂದು ಪ್ರಾರಂಬಿದ  ಪರೀಕ್ಷಾ ತಯಾರಿ  ಅಂತಿಮ ಹಂತಕ್ಕೆ ಬಂದು ನಿಂತಿದೆ.   ಡಿಸೆಂಬರ್ ಗೆ ಬೋದಿಸಬೇಕಾದ ಪಠ್ಯಭಾಗವನ್ನು  ಮುಗಿಸಿ  ಜನವರಿಯಿಂದ  ಪುನರಾವರ್ತನೆ ಮಾಡಲಾಗಿದೆ  ಫೆಬ್ರವರಿಯಿಂದ  ಸಾಕಷ್ಟು ಸರಣಿ ಪರೀಕ್ಷೆಗಳನ್ನು ಮಾಡಿ  ಬರವಣಿಗೆ ದೋಷವನ್ನು ಸರಿಪಡಿಸಿಕೊಳಲು ತಿಳುವಳಿಕೆ ಹೇಳಲಾಗಿದೆ ಕ್ಲಿಷ್ಟಕರಕರವೆನಿಸಿದ  ಪಠ್ಯಭಾಗವನ್ನು  ಪುನಃ ಪುನಃ ಬೋಧನೆ ಮಾಡಿ ಪರೀಕ್ಷೆ […]

ಪ್ರಸ್ತುತ

ಹೊಸ ಮನ್ವಂತರ ಗಣೇಶಭಟ್ ಶಿರಸಿ ಹೊಸ ಮನ್ವಂತರ ದಾರಿ ತೋರಲಿರುವ ಕೊರೋನಾ ಪಿಡುಗು ಆಗಿದ್ದೆಲ್ಲ ಒಳ್ಳೆಯದಕ್ಕೇ, ಆಗುತ್ತಿರುವುದು ಒಳ್ಳೆಯದಕ್ಕೆ. ಮುಂದಾಗುವುದೂ ಒಳ್ಳೆಯದಕ್ಕೇ ಎಂಬುದು ಭಗವದ್ಗೀತೆಯ ಪಾಠ. ಕೊರೊನಾ ಪಿಡುಗಿನಿಂದ ಉಂಟಾಗಿರುವ ಆವಾಂತರವನ್ನು ಗಮನಸಿದಾಗ ಮುಂಬರುವ ದಿನಗಳಲ್ಲಿ ಆಗುವ ಒಳಿತನ್ನು ಸುಲಭದಲ್ಲಿ ಊಹಿಸಬಹುದು. ಕೊರೊನಾ ಕುರಿತು ಮಾಧ್ಯಮಗಳು ಬಿತ್ತರಿಸುವ ಸುದ್ದಿಗಳು ಭೀತಿಯನ್ನು ಹುಟ್ಟಿಸುತ್ತಿವೆ. ಕೊರೊನಾ ವೈರಾಣುವಿನಿಂದ ಸತ್ತವರ ಸಂಖ್ಯೆ ಮೂವತ್ತು ಸಾವಿರ ಮೀರಿದೆ. ಸೋಂಕಿತರ ಸಂಖ್ಯೆ ಐದು ಲಕ್ಷ ಮೀರುತ್ತಿದೆ ಇತ್ಯಾದಿ. ಯಾವುದೇ ರೋಗ ಇಡೀ ಪ್ರಪಂಚವನ್ನು ಕಾಡುತ್ತಿರುವದು […]

ಇತರೆ

ಸಂಸ್ಕೃತಿ ಉಳಿಸಿ  ಶೈಲಜಾ ಹಾಸನ ಮಕ್ಕಳಿಂದ ಸಂಸ್ಕೃತಿ ಉಳಿಸಿ ಬೆಳೆಸುವ ಪೋಷಕರ ಪಾತ್ರ        ಸಾಂಸ್ಕೃತಿಕವಾಗಿ ಶ್ರೀಮಂತವಾಗಿರೋ ಈ ದೇಶದಲ್ಲಿ  ಅದನ್ನು ಉಳಿಸಿ ಬೆಳೆಸುವ, ತಲೆಮಾರಿನಿಂದ ತಲೆಮಾರಿಗೆ ಅದನ್ನು ವರ್ಗಾಯಿಸುವ ಕಾರ್ಯಗಳು  ಇಂದು ಅಗತ್ಯ ವಾಗಿವೆ. ಇಂತಹ ಕಾರ್ಯಗಳನ್ನು ನಾವು ಮಕ್ಕಳಿಂದಲೇ ಪ್ರಾರಂಭ ಮಾಡುವದು ಸಂಸ್ಕೃತಿ ಯನ್ನು ಉಳಿಸುವ ದೃಷ್ಟಿಯಿಂದ ಹೆಚ್ಚು ಸೂಕ್ತ ಅನಿಸುತ್ತದೆ.ಆದರೆ ಅದು ಹೇಗೆ  ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಉದ್ಭವವಾಗುವುದು  ಸಹಜ.       ಮಕ್ಕಳು ತೋಟದಲ್ಲಿ ಅರಳಿ […]

ಲಹರಿ

ನಿನಗಾಗಿ ಶಾಲಿನಿ ಆರ್. ಹೌದು, ಬೆಳಗ್ಗೆ ಬೆಳಗ್ಗೆ ಆ ಪ್ರಾಥಃ ಸ್ಪರ್ಶ ಇರತ್ತಲ್ಲ ಅದನ್ನ ಆಸ್ವಾದಿಸೋದೆ ಒಂದು ಹಬ್ಬ ನನಗೆ.ಇದನ್ನ ಬರಿವಾಗ ಕೋಗಿಲೆ ಹಾಡ್ತಿದೆ. ಜಸ್ಟ ವಾಕಿಂಗ್ ಮುಗ್ಸಿ ಬಂದೆ. ಬಂದ್ ಕೂಡ್ಲೆ ಮನದಲ್ಲಿ ಒಂದು ಆಲಾಪನೆ ಶುರುವಾಯಿತು. ಅದಕ್ಕೆ ಈ ನೂರಾರು ಪದಗಳ ಹರವನ್ನ ,ಬದುಕಿನ‌ ಹದಗಳನ್ನ ಹರಡಿಕೊಂಡು ಕುಳಿತೆ.    ಐದುವರಿಯಿಂದ ಆರು ಇಪ್ಪತ್ತು ರವರೆಗೆ  ವಾಕಿಂಗ್  ಹೋಗಿದ್ದೆ.ದಾರಿಲಿ, ಪಾರಿಜಾತದ ಪರಿಮಳ ,ಮಲ್ಲಿಗೆ ಸುವಾಸನೆ, ದೂರದಲ್ಲಿ ಕೂಗೋ ನವಿಲು, ಕೋಗಿಲೆಯ ಆ ಪಂಚಮಸ್ವರ ಜೊತೆಗೆ […]

ಜ್ಞಾನಪೀಠ ವಿಜೇತರು

ಗಿರೀಶ್ ಕಾರ್ನಾಡ್ ಗಿರೀಶ್ ಕಾರ್ನಾಡ್ ಕನ್ನಡ ಸಾಹಿತ್ಯ ಲೋಕ ಕಂಡ ಅದ್ಭುತ ನಾಟಕಕಾರ, ಸಾಹಿತಿ , ಚಿತ್ರ ನಟ ಮತ್ತು ನಿರ್ದೇಶಕ. ಕನ್ನಡ, ಹಿಂದಿ, ತೆಲಗು,ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ತಮ್ಮ ಅಭಿನಯದಿಂದ ವಿಶಿಷ್ಠ ಮುದ್ರೆ ಒತ್ತಿರುವ ಇವರು ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡದ ಏಳನೇ ಸಾಹಿತಿ. ಪ್ರಗತಿಶೀಲ ಸಮತಾವಾದ ಮತ್ತು ಜಾತ್ಯಾತೀತತೆಯನ್ನು ಪ್ರತಿಪಾದಿಸುವ ಇವರು ಕೆಲವು ಬಾರಿ ತಮ್ಮ ನೇರ ನುಡಿಗಳ ಮೂಲಕ ಹಲವು ವಿವಾದಗಳಲ್ಲಿ ಸಿಲುಕಿದ್ದುಂಟು… 1938 ಮೇ 19 ರಂದು ಮಹಾರಾಷ್ಟ್ರದ […]

ಕವಿ-ಪರಿಚಯ

ಕಮಲಾದಾಸ್ ಶೀಲ ಮತ್ತು ಅಶ್ಲೀಲ ನಡುವಿನ ಗೋಡೆಯನ್ನು ಕೆಡುವಿದ ವಿವಾದಿತ ಮಲಯಾಳಂ ಮತ್ತು ಇಂಗ್ಲೀಷ್ ಲೇಖಕಿ ಕಮಲಾದಾಸ್..! ಕಮಲಾದಾಸ್ ರೆಂದರೆ ನಮ್ಮ ಕನ್ನಡದ ಲೇಖಕಿ ಕಮಲಾ ಹೆಮ್ಮಿಗೆಯವರಿಗೆ ಅದೆಂತದೋ ಪ್ರೀತಿ. ಈ ಲೇಖಕಿ ಕಮಲಾ ಹೆಮ್ಮಿಗೆಯವರ ಬಹುತೇಕ ಕೃತಿಗಳಲ್ಲಿ ಇದೇ ಕಮಲಾದಾಸ್ ರ ನೆರಳನ್ನು ಕಾಣಬಹುದು ಎಂಬ ಅಭಿಪ್ರಾಯ ನನ್ನದು. ಈ ಕಮಲಾ ಹೆಮ್ಮಿಗೆಯವರ ಪ್ರತಿ ಕೃತಿಗಳಲ್ಲೂ ನಾನು ಇದೇ ಕಮಲಾದಾಸ್ ರ ಛಾಪನ್ನು ಕಂಡಿದ್ದೇನೆ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಹೀಗೆ ಹೇಳುತ್ತಲೇ ಈ ಕಮಲಾದಾಸ್ […]

ಪ್ರಬಂಧ

ಕರೊನ-ನೆಗಡಿ ಜ್ಯೋತಿ ಡಿ.ಬೊಮ್ಮಾ ಈಗ ಎಲ್ಲರೂ ಅಸ್ಪೃಶ್ಯರೆ ,ಒಬ್ಬರಿಂದ ಒಬ್ಬರು ದೂರ ಇರುವ ಅಸಹಾಯಕತೆ ತಂದೊಡ್ಡಿದ ಆ ಒಂದು ಚಿಕ್ಕ ವೈರಾಣುವಿಗೆ ಇಡೀ ಮನುಕುಲವೇ ಅಂಜಿ ನಡುಗುತ್ತಿದೆ. ಆಪ್ತವಾಗಬೇಕಿದ್ದ ಬಾಂಧವ್ಯಗಳು ಸಂಬಂಧಗಳು ಕರಗುತ್ತಿವೆ.ದೈಹಿಕ ಅಂತರ ಮನದಂತರವನ್ನು ದೂರಗೊಳಿಸುತ್ತಿದೆ ಒಬ್ಬರನ್ನೊಬ್ಬರು ಅನುಮಾನದಿಂದ ನೋಡಿಕೊಳ್ಳುತ್ತ ,ತಮ್ಮವರೊಡನೆಯೂ ಆಗಂತುಕರಂತೆ ಬದುಕುವಂತೆ ಮಾಡಿದ ಈ ಸಂದರ್ಭ ಯಾತಾನಾಮಯವಾಗಿದೆ. ಮನೆಯಲ್ಲಿ ಎಲ್ಲರೊಡನೆ ಬೆರೆತು ಊಟ ತಿಂಡಿ ಮಾಡುತಿದ್ದರೂ ಒಳಗೆಲ್ಲ ಎಕಾಂಗಿ ಭಾವ ,ಎನೋ ತಳಮಳ ಹೇಳಿಕೊಳ್ಳಲಾಗದ ಅಸಹಾಯಕತೆ ,ಹಿಂದೆಂದೂ ಕಾಡಿರದ ಅನಿಶ್ಚಿತತೆ ಮನ ಕೊರೆಯುವಂತೆ […]

ಭಯವೇ ಅಪಾಯಕಾರಿ

ಕೊರೋನಾ ಮತ್ತು ಭಯ ಗಣೇಶಭಟ್,ಶಿರಸಿ ಕೊರೊನಾಕ್ಕಿಂತ ಅದರ ಕುರಿತಾದ ಭಯವೇ ಅಪಾಯಕಾರಿ ಕೊರೊನಾ ವೈರಸ್ ಸೋಂಕಿನ ಅಪಾಯದಿಂದ ಪಾರಾಗುವ ಅತ್ಯುತ್ತಮ ವಿಧಾನವೆಂದರೆ ಮನುಷ್ಯರಲ್ಲಿ ರೋಗ ನಿರೋಧಕ ಶಕ್ತಿ ಬೆಳೆಸುವುದು. ಅನಾರೋಗ್ಯದಿಂದ ಬಳಲುತ್ತಿರುವವರು ಈ ಸೋಂಕಿಗೆ ಬಹುಬೇಗ ಬಲಿಯಾಗುತ್ತಾರೆ. ಕೊರೊನಾದಿಂದಾಗಿ ಮೃತಪಟ್ಟವರಲ್ಲಿ ಹೆಚ್ಚಿನವರಿಗೆ ಒಂದಿಲ್ಲೊಂದು ವಿಧದ ಅನಾರೋಗ್ಯ ಇದ್ದುದು ಕಂಡು ಬಂದಿದೆ ಹಾಗೂ ಅವರಲ್ಲಿ ಹೆಚ್ಚಿನವರು ಅರವತ್ತಕ್ಕಿಂತ ಹೆಚ್ಚಿನ ವಯಸ್ಸಾದವರು. ರೋಗನಿರೋಧಕ ಶಕ್ತಿಯನ್ನು ಬೆಳೆಸಿಕೊಳ್ಳಲು ಪೌಷ್ಠಿಕ ಆಹಾರ, ವ್ಯಾಯಾಮ, ಕಾಲಕಾಲಕ್ಕೆ ನೀರು ಸೇವನೆ, ಒಳ್ಳೆಯ ನಿದ್ದೆ ಹಾಗೂ ಎಲ್ಲಕ್ಕಿಂತ […]

Back To Top