Category: ಇತರೆ

ಇತರೆ

ಸಂತೆಯಲ್ಲಿ ನಿಂತ ಅವಳು

ಲೇಖನ ಸಂತೆಯಲ್ಲಿ ನಿಂತ ಅವಳು (ಮಹಿಳಾ ಜಾಹಿರಾತು) ಸಂತೆಯಲ್ಲಿ ನಿಂತ ಅವಳು (ಮಹಿಳಾ ಜಾಹಿರಾತು) ಸಂತೆಯಲ್ಲಿ ನಿಂತ ಅವಳು (ಮಹಿಳಾ ಜಾಹಿರಾತು)             ಪ್ರಾಚೀನ ಕಾಲದಿಂದ ಇಂದಿನವರೆಗೂ ಮಾರುಕಟ್ಟೆಗೆ ಒಂದು ಆರೋಗ್ಯಕರವಾದ ನೀತಿ ಸಂಹಿತೆಯನ್ನು ರೂಪಿಸುವ ವಿವೇಕ ಮತ್ತು ವ್ಯವಧಾನ ಸಾಮುದಾಯಿಕ ಜವಾಬ್ದಾರಿಯಾಗಿ ಯಾವ ಕಾಲದಲ್ಲಿ ಯಾರಲ್ಲಿಯೂ ಕಾಣಿಸಿಕೊಂಡಿಲ್ಲ. ಆರೋಗ್ಯಕರ ಸಮಾಜಕ್ಕೆ ಲಾಭಗಳಿಕೆಯ ವ್ಯವಹಾರಿಕತೆಯನ್ನು ನಿಯಂತ್ರಿಸುವ ಶಕ್ತಿಯಿಲ್ಲದಿದ್ದರೆ ಇಡೀ ವ್ಯವಸ್ಥೆಯೇ ನರಳಬೇಕಾಗುತ್ತದೆ. ಮಾರುಕಟ್ಟೆ ಸಂಸ್ಕೃತಿ ಗಳಿಕೆಯ ತೂಗು ಕತ್ತಿಯನ್ನು ನಿರಂತರ ಗ್ರಾಹಕನ ಮೇಲೆ ಬೀಸುತ್ತಿರುತ್ತದೆ. ಇದರಿಂದ ವ್ಯಕ್ತಿ […]

ಪಾರ್ವತಿಯ ಖುಷಿ ಪ್ರತೀ ಹೆಣ್ಣಿಗೂ ಸಿಗಲಿ

ಲಹರಿ ಪಾರ್ವತಿಯ ಖುಷಿ ಪ್ರತೀ ಹೆಣ್ಣಿಗೂ ಸಿಗಲಿ ಸ್ಮಿತಾ ಭಟ್ ತವರು ಎನ್ನುವದು ಮುಗಿಯಲಾರದ ಸೆಳೆತ ಮತ್ತದು ಹೆಣ್ಮಕ್ಕಳಿಗೆ ಮಾತ್ರ ಸೀಮಿತ. ತಲೆ ತಲಾಂತರಗಳಿಂದಲೂ ತವರು ಮತ್ತು ಹೆಣ್ಣು ಸಯಾಮಿಯಂತೆ ಬದುಕುತ್ತ ಬಂದಿದ್ದಾರೆ. ಹೆಣ್ಣಿನೊಳಗೆ ತವರಿನ ಸೆಳೆತ,ಪುಳಕ,ಅಪ್ಯಾಯ ಭಾವಗಳು ಶುರುವಾಗುವದೇ ಮದುವೆಯೆಂಬ ಬಂಧನದಲಿ,ಭಾವದಲಿ,ಸಿಲುಕಿ ತವರ ತೊರೆದು ಹೊರನಡೆದಾಗಲೇ. ಅಲ್ಲಿಯವರೆಗೆ ಸುಪ್ತವಾಗಿದ್ದ ನಯ ನಾಜೂಕಿನ ಭಾವನೆಗಳೆಲ್ಲ ಕಟ್ಟೆಯೊಡೆದು ಹೃದಯವನ್ನು ತಲ್ಲಣಗೊಳಿಸಿಬಿಡುತ್ತವೆ. ಎಂತಹ ಐಶಾರಾಮಿ ಗಂಡನಮನೆಯೇ ಸಿಗಲಿ ತವರಿನಿಂದ ಬರುವ ಪುಟ್ಟ ಉಡುಗೊರೆಗಾಗಿ  ಹೆಣ್ಣು ಕಾತರದಿಂದ ಕಾಯುತ್ತಾಳೆ. ತವರೂರಿನ ಹೆಸರು […]

ಶಾಂತಲಾ ಮಧು ಬಹುಮುಖ ಪ್ರತಿಭೆ

ಶಾಂತಲಾ ಮಧು ಬಹುಮುಖ ಪ್ರತಿಭೆ ಶಾಂತಲಾ ಮಧು ಅವರ ಪರಿಚಯ ಶಾಂತಲಾ ಮಧು ಅವರು ಅಂತಾರಾಷ್ಟ್ರೀಯ ಯೋಗ ಗುರುವಾಗಿ ಕೆಲಸ ಮಾಡುತ್ತಿದ್ದಾರೆ. ಉಸ್ತಾದ್ ಬಾಲೇಖಾನ್ ಶಿಷ್ಯೆಯಾಗಿ ಸಿತಾರ್ ವಾದನ ಕಲಿತಿದ್ದಾರೆ. ಬಯಲು ಕವನ ಸಂಕಲನ ಪ್ರಕಟಿಸಿದ್ದಾರೆ. ಚಿತ್ರಕಲಾವಿದೆ ಸಹ . ಏಕವ್ಯಕ್ತಿ ಪ್ರದರ್ಶನ ನೀಡಿದ್ದಾರೆ . ಪತಿ ಮಧು ಅವರು ಯಾರ್ಡ್ಲಿ ಸಂಸ್ಥೆಯ ಉಪಾಧ್ಯಕ್ಷರು. ಪುತ್ರಿ ರಶ್ಮಿ ಅವರು ವೈದ್ಯೆ . ಮಗ ಗೌತಮ್ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಶಾಂತಲಾ ಅವರು ಕನ್ನಡ ಸಾಹಿತ್ಯ ಸ್ನಾತಕೋತ್ತರ ಪದವೀಧರೆ […]

ಹುಯಿಲಗೋಳ ನಾರಾಯಣರಾಯ..!

ಲೇಖನ ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು’ವಿನ ಹುಯಿಲಗೋಳ ನಾರಾಯಣರಾಯ..! ಇಂದು ಹುಯಿಲಗೋಳ ನಾರಾಯಣರಾಯರ ಜನ್ಮದಿನ. ಆ ನೆನಪಲ್ಲಿ ಈ ಬರಹ… ಹುಯಿಲಗೋಳ ನಾರಾಯಣರಾಯರು ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಕರ್ನಾಟಕ ನಾಡಗೀತೆಯೆನಿಸಿದ್ದ ‘ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು’ ಗೀತೆಯನ್ನು ರಚಿಸಿದವರು. ೧೮೮೪ ಅಕ್ಟೋಬರ್ ೪ ರಂದು ಗದಗದಲ್ಲಿ ಜನಿಸಿದವರು. ಇವರ ತಂದೆ ಕೃಷ್ಣರಾಯರು, ತಾಯಿ ರಾಧಾಬಾಯಿ(ಬಹಿಣಕ್ಕ). ಬಾಲ್ಯದ ಶಿಕ್ಷಣವನ್ನು ಗದಗ, ಗೋಕಾಕ ಹಾಗೂ ಧಾರವಾಡಗಳಲ್ಲಿ ಪೂರೈಸಿದರು. ೧೯೦೨ ರಲ್ಲಿ ಧಾರವಾಡದಲ್ಲಿ ಮೆಟ್ರಿಕ್ ಪರೀಕ್ಷೆಯನ್ನು ಮುಗಿಸಿ ಉಚ್ಚ ಶಿಕ್ಷಣಕ್ಕಾಗಿ […]

ಯಾಕೆ ನೆಗೆಟಿವಿಟಿ?

ಲೇಖನ ಯಾಕೆ ನೆಗೆಟಿವಿಟಿ? ಮಾಲಾ.ಮ. ಅಕ್ಕಿಶೆಟ್ಟಿ.  “ಆಕೆ ಯಾವಾಗಲೂ ಹಾಗೆಯೇ ಬಿಡಿ. ಏನ್ ಹೇಳಿದ್ರು ನೆಗೆಟಿವ್ ಆಗಿ ಯೋಚಿಸಿ, ಅದರಲ್ಲೇ ಮುಳುಗಿರುತ್ತಾಳೆ. ಇದ್ದ ಗಳಿಗೆಯನ್ನು ಆನಂದಿಸಲು ಬರಲ್ಲ. ಬರೀ ನೆಗೆಟಿವ್. ಜೀವನವನ್ನು ಆನಂದಿಸುವುದೂ ಒಂದು ಕಲೆ. ಅದು ಆಕೆಗೆ ಗೊತ್ತಿಲ್ಲ. ಎಲ್ಲರದೂ ಒಂದೊಂದು ಸಮಸ್ಯೆ ಇದ್ದೇ ಇರುತ್ತೆ. ಯಾರಿಗೂ ಸಮಸ್ಯೆ ತಪ್ಪಿದ್ದಿಲ್ಲ. ಜೀವನ ಇದ್ದ ಹಾಗೆ ನಡೆದುಕೊಂಡು ಹೋಗಬೇಕು. ಅದು ಬಿಟ್ಟು ಸತತ ಇಪ್ಪತ್ತನಾಲ್ಕು ಗಂಟೆಯೂ ನಕಾರಾತ್ಮಕವಾಗಿ ಯೋಚಿಸಿದರೆ ಹೇಗೆ? ಅದೇನೊ ಅಂತಾರಲ್ಲ ಪ್ರತಿ ಪರಿಹಾರಕ್ಕೂ ಇಂಥವರು […]

‘ಜೈ ಜವಾನ್, ಜೈ ಕಿಸಾನ್’

ಲೇಖನ ‘ಜೈ ಜವಾನ್, ಜೈ ಕಿಸಾನ್’ ಜಯಘೋಷದ ಲಾಲ್ ಬಹಾದ್ದೂರ್ ಶಾಸ್ತ್ರಿ ಇಂದು ಮಹಾತ್ಮ ಗಾಂಧಿ ಹುಟ್ಟಿದ ದಿನವೂ ಹೌದು. ಹಾಗೆಯೇ ಲಾಲ್ ಬಹಾದ್ದೂರ್ ಶಾಸ್ತ್ರೀಯ ಹುಟ್ಟು ಹಬ್ಬವೂ ಹೌದು. ಗಾಂಧಿ ಸ್ಮರೀಸಿ, ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಸ್ಮರಣೆ ಮಾಡದೇ ಬಿಟ್ಟರೆ ಅದು ಮಹಾ ತಪ್ಪಾಗುತ್ತದೆ. ಇಬ್ಬರೂ ರಾಷ್ಟ್ರದ ಹಿತ ಚಿಂತಕರು, ಆ ಕಾರಣಕ್ಕೆ ಈ ಇಬ್ಬರ ಒಂದೇ ದಿನದ ಹುಟ್ಟು ಹಬ್ಬದ ಸ್ಮರಣೆಯನ್ನು ಮಾಡೋಣ… ಇತರರಿಗೆ ಹೋಲಿಸಿದರೆ, ರಾಷ್ಟ್ರದ ಅತ್ಯುನ್ನತ ಹುದ್ದೆಗೆ ಹೊಸಬರಾಗಿದ್ದರೂ ಸಹ, 1965ರಲ್ಲಿ […]

ಮಹಾತ್ಮಾಗಾಂಧೀಜಿಯವರ ಚಿಂತನೆಗಳ ಪ್ರಸ್ತುತತೆ :

ಲೇಖನ ಮಹಾತ್ಮಾಗಾಂಧೀಜಿಯವರ  ಚಿಂತನೆಗಳ ಪ್ರಸ್ತುತತೆ : “ಹಸಿದ ಹೊಟ್ಟೆಯವನಿಗೆ ಯಾವ ಉಪದೇಶವೂ ಮುಖ್ಯವಲ್ಲ” ಪಾಪವನ್ನು ದ್ವೇಷಿಸಿ ಪಾಪಿಯನ್ನಲ್ಲ” ಇವು ನಮ್ಮ ನೆಚ್ಚಿನ ಬಾಪೂಜಿಯವರ ನುಡಿಮುತ್ತುಗಳು.”ಅಯ್ಯಾ ನೀನೇನು ದೇವರಲ್ಲ, ಆದರೆ ದೇವರನ್ನು ಬಲವಾಗಿ ನಂಬಿದವನು, ದಂತವಿಲ್ಲದಿದ್ದರೂ ಬದುಕಿದ್ದ ಕಾಲದಲ್ಲೇ ದಂತಕಥೆಯಾದವನು” ಇವು  ಮಹಾತ್ಮಾ ಗಾಂಧೀಜಿಯವರ ಕುರಿತು ಕವಿ ಸಿ.ಪಿ.ಕೆ.ತಮ್ಮ ವಂದನೆ ಕವಿತೆಯಲ್ಲಿ ಮನೋಜ್ಞವಾಗಿ ಮೂಡಿಸಿದ ಸಾಲುಗಳು. ಮೋಹನದಾಸ ಕರಮಚಂದ ಗಾಂಧಿ ಎಂಬ ಬಾಲಕ ಯಾರಿಗೂ ನಿಲುಕದ ಅತಿಮಾನವನೇನೂ ಆಗಿರಲಿಲ್ಲ. ಎಲ್ಲರಂತೆಯೇ ಹುಟ್ಟಿ ಬೆಳೆದ ಒಬ್ಬ ಸಾಮಾನ್ಯ ಮಗು. ಅವರ […]

ಗಾಂಧಿ ವಿಶೇಷ ರಾಮಭಕ್ತ ಗಾಂಧೀಜಿ-– ಭಾರತವ ಬೆಳಗಿಸಲು ತತ್ವಗಳ ಮಾಡಿ, ದೇಶವನುಳಿಸಲು ಅಹಿರ್ನಿಶಿ ದುಡಿದರು….ಕಾಲುನಡಿಗೆಯೇ ಮುದ್ರೆಯಾಗಿಸಿ, ನಿದ್ರೆ ಮರೆತು ದೇಹದಂಡಿಸಿ ಸಾಗಿದರು…. ಊರೂರು ಅಲೆದರು, ಜನಗಳ ಒಟ್ಟಾಗಿಸಿ ತಾನೊಬ್ಬನೇ ಎಂದು ಮೆರೆಯದವರು….ದಂಡಿನೊಡನೆ ನಡಿಗೆ ಹೊರಟು, ಉಪ್ಪಿಗೆ ತೆರ ತೆರಲಾಗದೆಂದು ಸತ್ಯಾಗ್ರಹವ ಘೋಷಿಸಿದವರು…. ಹೋರಾಟಕ್ಕಾಗಿಯೇ ಹುಟ್ಟಿಬಂದು ಹೊಡೆದಾಟವ ಒಪ್ಪದಾತ್ಮ, ಶಾಂತಿಯನ್ನಪ್ಪಿ ನಡೆಯಿತು…ಇಷ್ಟಪಟ್ಟ ಕಡಲೆಕಾಯಿ, ನಿತ್ಯ ಪ್ರಯೋಗದ ಜೀವನ ಈ ಒಣದೇಹಿಯ ಮುಂದೆ ಮಂಡಿಯೂರಿತು…. ಹುಡುಕಿಬಂದ ಕಷ್ಟಗಳನು ಇಷ್ಟಪಟ್ಟು ಮೆಟ್ಟಿನಡೆದು, ಗದ್ದುಗೆಯಾಸೆ ಪಡದವರು….ದೇಶವೊಂದೇ ಗಮನದಲ್ಲಿ, ಸೇವೆಯೊಂದೇ ಕಾರ್ಯದಲೆಂದು ತೋರಲು ಮುಂದಾಳಾಗಿ […]

ಗಾಂಧಿ ವಿಶೇಷ ಕನ್ನಡ ಶಾಯರಿಗಳು 01 ಅಜ್ಜ… ರೇಛಲೋ ಇತ್ತು ನೋಡ್ರೀನಿಮ್ಮ ಕಾಲ್ದಗಾಸತ್ಯ, ನ್ಯಾಯ, ನೀತಿ, ಧರ್ಮಕಾಲು ಮುಕ್ಕಡೋ ಇದ್ದವ್ರೀಈಗಲೂ ಇದ್ದಾವ್… ರೀಕಿಮ್ಮತ್ ಇಲ್ರೀಅವೇ..!ಹಿಕ್ಮತ್ ಮಾಡ್ಯಾರ್ರೀ !! 02 ಬಾಪುಸ್ವಾತಂತ್ರ್ಯ ಪೂರ್ವದಾಗನಿಮ್ಮಾತು ತಣ್ಣಗಿತ್ತುಬೆಚ್ಚಗಾತು ರಕ್ತಹರಿಲಿಲ್ಲ ಮತ್ತೆ..?ಅದೇ ಮಹಾತ್ಮನತಾಕತ್ತು ಅಲ್ವೇನ್ರೀ…? 03 ಮಹಾತ್ಮ ಅಂಥಜಗತ್ತಿನಾಗ್ಕ್ಯಾಮೆರಾದೊಳಗಕೂಡಲಿಲ್ಲ ನೋಡ್ರೀ..!ನಮ್ಮ ಎದಿಯಾಗನಿಮ್ಮ ಇಟಗೊಂಡಿವ್ರೀಹಂಗಾ ಬದುಕ್ದ್ರೀ ನೀವು…!! 04 ಬ್ರಿಟಿಷರಿಗೆದಂಡಿಗೆ ಹೋದ್ರುಚಳುವಳಿಗೆ ಹೋದ್ರುನಿಮ್ಮ ನಡಿಗೆಹಾವು ಹರದ್ಹಂಗಸಾಯ್ ಹೊಡದ್ಹಂಗರೀ…! 05 ಖರೇ ಹೇಳಾವ್ರೇನೀವು ಒಬ್ಬರೇನೋಡ್ರಲ್ಲಾ..!ರಾಮ್ ರಹೀಮ್ಮನ್ ಮೇ ಹೈಸಬ್ಕಾ ಭಗವಾನ್ ಏಕ್ಹೈ ಅಂದೋರೂ..!! *************************** ಹುಳಿಯಾರ್ […]

ಗಾಂಧಿ ವಿಶೇಷ ಗಾಂಧೀಗೆ, ಗಾಂಧೀ ಎಂದಾಗ,ಅದಾರು ಈ ಗಾಂಧೀಎಂಬ ಪ್ರಶ್ನೆ ಭುಗಿಲೆನ್ನುತ್ತದೆ.ಹೀಗೀಗೆ ಹೀಗೀಗೆ ಎಂದು ಬಿಡಿಸಿಟ್ಟಾಗ,ಓ ಅದಾ,ಲಂಗೋಟಿ ಅಜ್ಜ ಎನ್ನದವರಿಲ್ಲ.ಮೂರ್ಖ ಮುದುಕ,ಸತ್ತ ಅಹಿಂಸೆಯ ಫಾರ್ಮಲಾ ಬಳಸಿಬ್ರಟಿಷರನ್ನೇನೋ ನಡುಗಿಸಿದ ಆದರೆಭಾರತೀಯನಿಂದೇ ಮುಳುಗಿದ.ಎಷ್ಟೆಲ್ಲಾ ಇತ್ತು,ಕುರ್ಚಿಯ ಗಟ್ಟಿ ತಾಕತ್ತುಇರಲಿಲ್ಲವೆಂದ ಮೇಲೆಅವನದೇನು ಆದರ್ಶ.ಹಗರಣದಿ ಸಿಲುಕಿಜೇಲಿನಲ್ಲಿದ್ದೂ ಮಂತ್ರಿಯಾಗುವಈಗಿನ ಬಿಳಿ ಟೋಪಿಯವರಲ್ಲಿಇವನ್ಯಾವ ಲೆಕ್ಕ.ನಿಜವಾಗಿಯೂ ತನ್ನಫ್ಯೂಚರ್ ಹಾಳು ಮಾಡಿಕೊಂಡ.ಸ್ವತಂತ್ರ ಭಾರತ,ಸ್ವತಂತ್ರ ನಾಡೆಂದುದಿಕ್ಕು ದಿವಾಳಿಯಿಲ್ಲದೇ ಅಡ್ಡಾಡಿಬದುಕ ಕೊನೆ ಮಾಡಿಕೊಂಡ.ಆದರೂ ಅಜ್ಜಮತ್ತೆ ಹುಟ್ಟಿ ಬರುವಯತ್ನ ಮಾತ್ರ ಬೇಡ.ಬಂದರೂ ನಾ ಗಾಂಧೀಎನ್ನಬೇಡ.ಪಕ್ಷ,ಓಟು,ಕುರ್ಚಿಯಲಿನಿನ್ನ ಎಳದಾಡಿಕ್ಷಣ ಕ್ಷಣವೂ ಕೊಲ್ಲುತ್ತಾರೆ‌ಅಷ್ಟೊಂದು ಮುಂದುವರೆದಿದೆನೀ ಕಟ್ಟಿದ ನಿನ್ನ ಭಾರತ. […]

Back To Top