Category: ಇತರೆ

ಇತರೆ

ಎಲೆಗಳ ಬಲೆಯಲ್ಲಿ…

ಲಲಿತ ಪ್ರಬಂಧ ಎಲೆಗಳ ಬಲೆಯಲ್ಲಿ…                                                             ಟಿ.ಎಸ್.ಶ್ರವಣಕುಮಾರಿ ಈ ಹದಿಮೂರು ಎಲೆಗಳಿಗೊಂದು ವಿಶಿಷ್ಟ ಆಕರ್ಷಣೆಯಿದೆ, ಸೆಳೆತವಿದೆ. ಕೆಲವರು ರಮ್ಮಿ, ಬ್ರಿಡ್ಜ್‌, ಮೂರೆಲೆ ಎನ್ನುತ್ತಾ ಇಸ್ಪೀಟಿನ ಹಿಂದೆ ಬಿದ್ದರೆ, ಇನ್ನು ಕೆಲವರು ಸಾಲಿಟೇರ್‌, ಫ್ರೀಸೆಲ್‌ ಎನ್ನುತ್ತಾ ಕಂಪ್ಯೂಟರಿನಲ್ಲಿ ಅದೇ ಹದಿಮೂರು ಎಲೆಗಳಲ್ಲಿ ಅಡಗಿಕೊಂಡಿರುತ್ತಾರೆ. ʻಅಂದರ್‌ ಬಾಹರ್‌ ಅಂದರ್‌ ಬಾಹರ್‌ʼ ಎಂದು ಕೋರಸ್‌ನಲ್ಲಿ ಗುನುಗುತ್ತ ʻಎಕ್ಕ ರಾಜ ರಾಣಿ ನನ್ನ ಕೈಯೊಳಗೆ, ಹಿಡಿಮಣ್ಣು ನಿನ್ನ ಬಾಯೊಳಗೆʼ ಎಂದು ಹಾಡುತ್ತ ಜಾಕಿ ಚಲನಚಿತ್ರದಲ್ಲಿ ಪುನೀತ್‌ ರಾಜ್‌ಕುಮಾರ್‌ ತನ್ನೆಲ್ಲಾ ಅಭಿಮಾನಿಗಳನ್ನೂ ವಶೀಕರಣ ಮಾಡಿಕೊಂಡಿದ್ದು […]

ವಿಚಿತ್ರ ಆಸೆಗಳು…ಹೀಗೊಂದಷ್ಟು,

ಲಲಿತ ಪ್ರಬಂಧ ವಿಚಿತ್ರ  ಆಸೆಗಳು…ಹೀಗೊಂದಷ್ಟು, ಸಮತಾ ಆರ್. “ಕಕ್ ಕಕ್ ಕಕ್ ಕೊಕ್ಕೋಕ್ಕೊ” ಅಂತ ಒಂದು ಬಿಳಿ,ಬೂದು,ಕೆಂಪು ಬಣ್ಣದ ರೆಕ್ಕೆ ಪುಕ್ಕಗಳ,ಅಂಗೈ ಅಗಲದ ಜುಟ್ಟಿದ್ದ,ಕಮ್ಮಿ ಅಂದರೂ ನಾಲ್ಕೈದು ಕೆಜಿ ತೂಗುತ್ತಿದ್ದ ಗಿರಿರಾಜ ಹುಂಜ ವೊಂದು ಹೆಜ್ಜೆಯ ಮೇಲೆ ಹೆಜ್ಜೆ ಇಡುತ್ತಾ ಗತ್ತಿನಿಂದ ,ಅತ್ತಿಂದಿತ್ತ ಇತ್ತಿಂದತ್ತ ಓಡಾಡುತ್ತಿದ್ದಾಗ,ಸುತ್ತ ನಾಲ್ಕೈದು ಮಕ್ಕಳನ್ನು ಸಾಮಾಜಿಕ ಅಂತರದಲ್ಲಿ ಕೂರಿಸಿಕೊಂಡು ವಿದ್ಯಾಗಮ ಕಾರ್ಯಕ್ರಮದ ಅಡಿಯಲ್ಲಿ ಕಲಿಸುತ್ತಿದ್ದ ನನಗೆ ಎಷ್ಟು ಪ್ರಯತ್ನ ಪಟ್ಟರೂ ಆ ಹುಂಜನಿಂದ ಕಣ್ಣು ಕೀಳ ಲಾಗಲಿಲ್ಲ. ನನ್ನಿಂದ ಅನತಿ ದೂರದಲ್ಲಿ ಕುಳಿತಿದ್ದ […]

ಗಜಲ್ ಸಾಹಿತ್ಯ ಮತ್ತು ಸವಾಲುಗಳು

ಲೇಖನ ಗಜಲ್ ಸಾಹಿತ್ಯ ಮತ್ತು ಸವಾಲುಗಳು ಡಾ. ಮಲ್ಲಿನಾಥ ಎಸ್.ತಳವಾರ ಪ್ರಕೃತಿಯನ್ನೊಮ್ಮೆ ಅವಲೋಕಿಸಿದಾಗ ‘ಮನುಷ್ಯ’ ನ ವಿಕಾಸ ದಿಗ್ಭ್ರಮೆಯನ್ನು ಮೂಡಿಸುತ್ತದೆ. ಅದೊಂದು ರೀತಿಯಲ್ಲಿ ಪವಾಡವೇ ಸರಿ ! ಎಲ್ಲ ಪ್ರಾಣಿ ಸಂಕುಲಗಳಿಂದ ಆತನು ವಿಭಿನ್ನವೆನಿಸಿದ್ದು ಮಾತ್ರ ಭಾಷೆಯ ಬಳಕೆಯಿಂದ. ತನ್ನ ಭಾವನೆಗಳನ್ನು ಸಶಕ್ತವಾಗಿ ಅಭಿವ್ಯಕ್ತಿಪಡಿಸಲು ‘ಭಾಷೆ’ ಯನ್ನು ಸಾಧನವನ್ನಾಗಿ ಮಾರ್ಪಡಿಸಿಕೊಂಡನು. ಈ ಭಾಷೆಯ ಉದಯದೊಂದಿಗೆ ಸಾಹಿತ್ಯವೂ ಉದಯವಾಯಿತು ಎನ್ನಬಹುದು. “ಭಾಷೆಯ ಉದಯವೆಂದರೆ ಸಾಹಿತ್ಯದ ಉದಯವೆ ಸರಿ” ( ಕನ್ನಡ ಸಾಹಿತ್ಯ ಚರಿತ್ರೆ, ಪು- ೦೧) ಎಂಬ ರಂ. […]

ಪ್ರಶಸ್ತಿ ಘೋಷಣೆ

ಪ್ರಶಸ್ತಿ ಘೋಷಣೆ ಉತ್ತರ ಸಾಹಿತ್ಯ ವೇದಿಕೆ ಶಿಗ್ಗಾಂವ ಪ್ರಶಸ್ತಿಗಳು ಉತ್ತರ ಸಾಹಿತ್ಯ ವೇದಿಕೆ ಶಿಗ್ಗಾಂವ ಇವರ ವತಿಯಿಂದ ಪ್ರತಿ ವರ್ಷ ಸಾಹಿತ್ಯ,ಶಿಕ್ಷಣ,ಸಮಾಜಸೇವೆಯಲ್ಲಿ ಸೇವೆ ಸಲ್ಲಿಸಿದ ನಾಡಿನ ಹಿರಿಯ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಿಕೊಂಡು ಬರಲಾಗುತ್ತಿದೆ 2019-20 ನೇ ಸಾಲಿನಲ್ಲಿಕನಕ ಶರೀಫ ಪುರಸ್ಕಾರ 1-ಬಿ.ಶ್ರೀನಿವಾಸ-2019 ದಾವಣಗೆರೆ2-ಅಲ್ಲಾಗಿರಿರಾಜ-2020 ಕೊಪ್ಪಳ ಡಾ.ಹಿರೇಮಲ್ಲೂರ ಈಶ್ವರನ್ ಶಿಕ್ಷಕ ಪುರಸ್ಕಾರ 1-ಡಾ.ವಾಯ್.ಎಂ.ಯಾಕೊಳ್ಳಿ-2019 ಬೆಳಗಾವಿ2-ಜಿ.ಎಸ್.ಬಿಜಾಪುರ-2020 ಬಾಗಲಕೋಟೆ ಡಾ.ಅರಟಾಳ ರುದ್ರಗೌಡರ ಸಾಮಾಜಿಕ ಸೇವಾ ಪುರಸ್ಕಾರ 1-ಡಾ.ಹನುಮಂತಪ್ಪ ಪಿ.ಎಚ್.2019 ಶಿಗ್ಗಾಂವ2-ಅಕ್ಷತಾ ಕೆ.ಸಿ.2020 ಹಾವೇರಿ. ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಜನೇವರಿ 2021 […]

” ನಮ್ಮೊಳಗಿನ ಸತ್ಯ ನಾವ ಹುಡುಕಬೇಕು”

” ನಮ್ಮೊಳಗಿನ ಸತ್ಯ ನಾವ ಹುಡುಕಬೇಕು” ರಶ್ಮಿ ಎಸ್. ನಮ್ಮನ್ಯಾಗ ಮಾತ್ರ ಪ್ರೀತಿಯ ದೀಪ ಜಗಮಗಸಾತಿತ್ತು… ಕಾರಣ ಡಿ. 6,7,8 ಬಾಬರಿ ಮಸೀದಿ ಪ್ರಕರಣ ಆದಾಗ ಇಡೀ ದೇಶ ಕೋಮು ದಳ್ಳುರಿಯೊಳಗ ಧಗಧಗಿಸುತ್ತಿತ್ತು… ನಮ್ಮನ್ಯಾಗ ಮಾತ್ರ ಪ್ರೀತಿಯ ದೀಪ ಜಗಮಗಸಾತಿತ್ತು… ಕಾರಣ … ಮುಗಲ ಮಾರಿಯೊಳಗ ದೇವರ ನಗಿ ನೋಡ್ಕೊಂತ… ನನ್ನ ತಾಯಾ, (ದೊಡ್ಡಪ್ಪ) ಅಂಗಳದೊಳಗ ಅರಾಮ ಕುರ್ಚಿ ಹಾಕ್ಕೊಂಡು ಆಕಾಶ ನೋಡ್ಕೊಂತ ಕುಂತಾರ ಅಂದ್ರ ಏನೋ ಚಿಂತಿ ಕಾಡ್ತದ ಅಂತನೇ ಅರ್ಥ. ಅವಾಗ ನಾವು ಯಾರೂ […]

ಡಾ.ಬಿ.ಆರ್.ಅಂಬೇಡ್ಕರ್ ರ ಕೊನೆಯ ಸಂದೇಶ..!

ಡಾ.ಬಿ.ಆರ್.ಅಂಬೇಡ್ಕರ್ ರ ಕೊನೆಯ ಸಂದೇಶ..! ಕೆ.ಶಿವು.ಲಕ್ಕಣ್ಣವರ ‘ಮಹಾನಾಯಕ’ ಡಾ.ಬಿ.ಆರ್.ಅಂಬೇಡ್ಕರ್ ರ ಕೊನೆಯ ಸಂದೇಶ..! ಡಿ. 6 ದೇಶದ ಮಹಾನಾಯಕ ಅಂಬೇಡ್ಕರ್ ಅವರನ್ನು ಕಳೆದುಕೊಂಡ ದಿನ. ಅವರ ಕೊನೆಯ ಸಂದೇಶವನ್ನು ಪ್ರತಿಯೊಬ್ಬರು ತಿಳಿಯಬೇಕು ಅಂದು ಡಿಸೆಂಬರ್  6, 1956. ಇಡೀ ಭಾರತದಲ್ಲಿ ಕಣ್ಣೀರ ಕೋಡಿ ಹರಿದ ದಿನ. ಕತ್ತಲಲ್ಲಿದ್ದ ಭಾರತಕ್ಕೆ ಬೆಳಕಿನ ಕಿರಣ ನೀಡಿ, ವಿಶ್ವವೇ ಬೆರಗಾಗುವಂತೆ ಮಾಡಿದ್ದ, ಆಧುನಿಕ ಭಾರತದ ನಿರ್ಮಾತೃ, ಸಂವಿಧಾನ ಶಿಲ್ಪಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಿಬ್ಬಾಣ ಹೊಂದಿದ ದಿನ. ಭಾರತದ ಕಣ್ತೆರೆಸಿ, […]

ದೊಡ್ಡವರ ಮನೆಯ ಸಣ್ಣ ಕತೆ

ಅನುಭವ ದೊಡ್ಡವರ ಮನೆಯ ಸಣ್ಣ ಕತೆ ವೀಣಾ ನಿರಂಜನ್ ಈ ದೊಡ್ಡವರ ಮನೆಯ ಕತೆಗಳು ಬಹಳ ಸ್ವಾರಸ್ಯಕರವಾಗಿರುತ್ತವೆ. ನಾನು ಇಲ್ಲಿ ಹೇಳ ಹೊರಟಿರುವುದು ಒಂದು ಸ್ಯಾಂಪಲ್ ಅಷ್ಟೇ. ಆ ದಿನ ಮನೆ ಮಂದಿಯೆಲ್ಲ ಸಡಗರದಿಂದ ಓಡಾಡುತ್ತಿದ್ದರು. ಮನೆಯ ಮಗನ ಹುಟ್ಟುಹಬ್ಬ ಎಂದರೆ ಕೇಳಬೇಕೆ. ಶೇಖರ್ ಬಾಬು ಬೆಳಿಗ್ಗೆಯೇ ಮಗನಿಗೆ ಇಂಪೋರ್ಟೆಡ್ ಶಾಂಪೂ, ಸೋಪು ಹಾಕಿ ಹಿತವಾಗಿ ಸ್ನಾನ ಮಾಡಿಸಿದರು. ಮಕ್ಕಳಿಬ್ಬರೂ ಸಂಭ್ರಮದಿಂದ ತಂದೆಗೆ ನೆರವಾದರು. ಶರಾವತಿ ಸಂಜೆ ಪಾರ್ಟಿಗೆ ಯಾರ್ಯಾರನ್ನು ಕರೆಯಬೇಕು, ಏನೇನು ಆರ್ಡರ್ ಮಾಡಬೇಕು ಅದೆಲ್ಲವನ್ನೂ […]

ಪಾರಿಜಾತ ಗಿಡ

ಲಲಿತ ಪ್ರಬಂಧ ಪಾರಿಜಾತ ಗಿಡ ವಿದ್ಯಾ ಶ್ರೀ ಎಸ್ ಅಡೂರ್. ಪಾರಿಜಾತ ಹೂವಿನ ಮರ ಎಂದರೆ ಚಿಕ್ಕಂದಿನಿಂದಲೂ ನನಗೆ ಅದೆಂತದೋ  ಒಂದು  ರೀತಿಯ ಪ್ರೀತಿ.ಅದೊಂದು ದೇವಲೋಕದ ಸುವಸ್ತು, ಕೃಷ್ಣ ತನ್ನ ಮಡದಿ ಸತ್ಯಭಾಮೆಗಾಗಿ ತಂದ ಹೂವು ಎಂದೆಲ್ಲ  ಅರ್ದಂಬರ್ದ ಕಥೆಗಳು ಕಲಸುಮೇಲೋಗರ ವಾಗಿ ಒಂದು ಅಲೌಕಿಕ ಆಕರ್ಷಣೆ ಯಾಗಿ ಬೆಳೆದಿದೆ.             ಕೆಲವು ವರ್ಷಗಳ ಹಿಂದೆ ಎಲ್ಲೋ ನೆಂಟರ ಮನೆಗೆ ಹೋಗಿದ್ದಾಗ ಒಂದು ಗೆಲ್ಲು ಕೇಳಿ ತಂದು ಮನೆಯ ಹಿತ್ತಿಲಲ್ಲಿ ನೆಟ್ಟಿದ್ದೆ. ಕಾಲಮಾನ ಕ್ಕೆ ಅನುಗುಣವಾಗಿ ಅದು […]

ಜಿ. ಪಿ. ರಾಜರತ್ನಂ ಜನ್ಮದಿನ

ಇಂದು ಕನ್ನಡದ ಧೀಮಂತ ಸಾಹಿತಿ ಪ್ರೊ.ಜಿ.ಪಿ.ರಾಜರತ್ನಂ ಅವರು ಜನಿಸಿದ ದಿನ ಬಾಲ್ಯ ‘ಜಿ. ಪಿ. ರಾಜರತ್ನಂ'(೧೯೦೪-೧೯೭೯) ರವರು ಮೂಲತಃ ಚಾಮರಾಜ ನಗರ ಜಿಲ್ಲೆಯ ಗುಂಡ್ಲುಪೇಟೆಯವರು. ಇವರ ಪೂರ್ವಜರು ತಮಿಳುನಾಡಿನ “ನಾಗಪಟ್ಟಣ”ಕ್ಕೆ ಸೇರಿದ ತಿರುಕ್ಕಣ್ಣಾಪುರ ಎಂಬ ಅಗ್ರಹಾರದಿಂದ ೧೯೦೬ ರಲ್ಲಿ ಮೈಸೂರಿಗೆ ಬಂದರು. ಹೆಸರಾಂತ ಗುಂಡ್ಲು ಪಂಡಿತ ವಂಶ ದಲ್ಲಿ ಡಿಸೆಂಬರ್ ೦೫, ೧೯೦೪ರಂದು ರಾಮನಗರದಲ್ಲಿ ಜನಿಸಿದರು. ಮೊದಲಿಗೆ ಇವರ ಹೆಸರು ಜಿ.ಪಿ.ರಾಜಯ್ಯಂಗಾರ್ ಎಂದಿತ್ತು. ಇವರು ಲೋಯರ್ ಸೆಕೆಂಡರಿ ಓದುತ್ತಿದ್ದಾಗ ಚೇಷ್ಟೆಗಾಗಿ ಶಾಲೆಯ ಗುಮಾಸ್ತರನ್ನು ಪುಸಲಾಯಿಸಿ ತಮ್ಮ ಹೆಸರನ್ನು […]

ಸ್ನೇಹ

ವಾರದ ಕಥೆ ಸ್ನೇಹ ಜ್ಯೋತಿ ಡಿ ಭೊಮ್ಮಾ ಮದುವೆಯಾಗಿ ಮುವತೈದು ವಸಂತಗಳನ್ನು ಜೊತೆಯಲ್ಲಿ ಕಳೆದ ನಿರ್ಮಲಾ ಮತ್ತು ಮೂರ್ತಿ ದಂಪತಿಗಳಿಗೆ ಈಗ ಬದುಕಿನ ಎಲ್ಲಾ ಜವಾಬ್ದಾರಿ ಮುಗಿಸಿ ನಿರಮ್ಮಳವಾಗಿ ಬದುಕು ಸಾಗಿಸುವ ಸಮಯ.ಮಗನ ಮತ್ತು ಮಗಳ ಮದುವೆ ಮಾಡಿ ಅವರನ್ನು ಒಂದು ದಡಕ್ಕೆಸೇರಿಸಬೇಕಾದರೆ ಜೀವನದ ಸಮಯವೆಲ್ಲ ಮುಡುಪಾಗಿಡಬೇಕಾಯಿತು. ಈಗ ನಿವೃತ್ತಿ ಜೀವನ ನಡೆಸುತ್ತಿರುವ ಅವರಿಗೆ ಎಲ್ಲವೂ ಒಮ್ಮೆಲೆ ಖಾಲಿಯಾದ ಅನುಭವ,ಯಾವದರಲ್ಲೂ ಉತ್ಸಾಹವಿಲ್ಲ.ಇಷ್ಟು ದಿನ ನೌಕರಿ ಹಣಗಳಿಕೆ ಪ್ರತಿಷ್ಠೆ ಮಕ್ಕಳ ವಿದ್ಯಾಭ್ಯಾಸ ಮದುವೆಗಳ ಜವಾಬ್ದಾರಿಗಳೆಲ್ಲ ಒಂದೋಂದಾಗಿ ಮುಗಿಯುತ್ತಿದ್ದಂತೆ ಜೀವನದಲ್ಲಿ […]

Back To Top