Category: ಇತರೆ

ಇತರೆ

ದೀಪ್ತಿ ಭದ್ರಾವತಿ ಕವಿತೆಗಳು ಲೂಟಿಯಾದವರು ಅಗೋ ಸಿಕ್ಕಿಯೇಬಿಟ್ಟ ನಿನ್ನೆಯಷ್ಟೇ ಎಷ್ಟೆಲ್ಲ ಜನರ ಉಸಿರು ಕದ್ದು ನಡೆದವ ಇಂದಿಲ್ಲಿ ಆಸ್ಪತ್ರೆಯ ಕಲ್ಲು ಬೆಂಚಿನ ಮೇಲೆ ಸದ್ದಿಲ್ಲದೆ ಮಲಗಿದ್ದಾನೆ ಸೂರೆ ಹೋದವರು ಸೂರು ಹಾರುವಂತೆ ಕಿರುಚುತ್ತಿದ್ದರೂ ಗಮನಿಸದೆ ತನ್ನದೇ ಕನಸಲೋಕದಲ್ಲಿ ಹಾಯಾಗಿ ಕನಸುಕಾಣುತ್ತಿದ್ದಾನೆ ಲೂಟಿಯಾದವರು ಇದೀಗ ಇಲ್ಲಿ ಒಳಗಡೆಗೆ ನುಗ್ಗಲಿದ್ದಾರೆ ಎಬ್ಬಿಸಿ ಇವನನ್ನು ಬೀದಿಗೆಳೆದು ತಂದು ಆರೋಪಪಟ್ಟಿಯ ಸಿದ್ದವಾಗಿಸಿ ಕಂಬಕ್ಕೆ ಕಟ್ಟಿ ಥಳಿಸಲಿದ್ದಾರೆ “ಆಳಿಗೊಂದು ಕಲ್ಲು, ತಲೆಗೊಂದು ಮಾತು” ಕನ್ನ ಹಾಕುವುದೆ ಕಾಯಕ ಎಂದುಕೊಂಡವನಿಗೆ ಯಾವುದೂ ಹೊಸತಲ್ಲ ಪ್ರತಿ ಬಾರಿ […]

ಚರ್ಚೆ- ಮುದ್ರಣ ಮಾಧ್ಯಮ ಮತ್ತು ಸಾಹಿತ್ಯೋಪಾಸನೆ

ಚರ್ಚೆ- ಮುದ್ರಣ ಮಾಧ್ಯಮ ಮತ್ತು ಸಾಹಿತ್ಯೋಪಾಸನೆ ಡಿ.ಎಸ್.ರಾಮಸ್ವಾಮಿ ಸಾಹಿತ್ಯವನ್ನು ಮುದ್ರಣ ಮಾಧ್ಯಮ ನಿರ್ಲಕ್ಷಿಸುತ್ತಿದೆ ಎಂದು ಸಂಗಾತಿಯ ಸಂಪಾದಕರು ಅಲವತ್ತುಕೊಂಡಿದ್ದಾರೆ. ಪ್ರತಿ ಭಾನುವಾರ ಎಲ್ಲ ಪತ್ರಿಕೆಗಳ ಪುರವಣಿಗಳನ್ನು ಹರಡಿಕೊಂಡು ಓದುತ್ತಿದ್ದ ಅನುಭೂತಿ ಈ ಕೋವಿಡ್ ನೆವದಿಂದಾಗಿ ಇಲ್ಲವಾದದ್ದು ನೆನಪಾಗಿ ಸಂಗಾತಿಯ ಸಂಪಾದಕರ ಆರೋಪ ಸರಿ ಅನ್ನಿಸಿತು ಕೂಡ. ಆದರೆ ಸ್ವಲ್ಪ ಕಾಲ ಯೋಚಿಸಿದ ಮೇಲೆ ಆ ಅಭಿಪ್ರಾಯ ತಾತ್ಕಾಲಿಕ ಅನ್ನಿಸುತ್ತಿದೆ. ಓದುಗರೇ ಇಲ್ಲದೆ ಪ್ರಸರಣವೇ ಇಲ್ಲದೆ ಪತ್ರಿಕೆಗಳೇ ಮುಚ್ಚುತ್ತಿರುವ ಕಾಲದಲ್ಲಿ ಸಾಹಿತ್ಯ ಸಂಸ್ಕೃತಿ ಅಂತೆಲ್ಲ ಕೇಳುವುದು ಹೊಟ್ಟೆ ಹಸಿದು […]

ಅವಳೇ ಕಾರಣ…

ಲಹರಿ ಅವಳೇ ಕಾರಣ… ಸ್ಮಿತಾ ಭಟ್ ಏನೇ ಹೇಳಿ ಮಕ್ಕಳನ್ನು ಸಂಭಾಳಿಸುವ ವಿಷಯದಲ್ಲಿ ತಾಯಿಗೇ ಹೆಚ್ಚಿನ ಪ್ರಶಸ್ತಿಗಳು ಸಲ್ಲಬೇಕು.ಎಲ್ಲದಕ್ಕೂ ಅಮ್ಮಾ ಎಂದೇ ಕೂಗುವ ಕಂದಮ್ಮಗಳನ್ನು ತೃಪ್ತಿ ಪಡಿಸುವುದು ಸುಲಭದ ವಿಷಯವಂತೂ ಅಲ್ಲ. ಏಕ ಕಾಲದಲ್ಲಿ ನೂರು ಮಕ್ಕಳನ್ನು ಗಾಂಧಾರಿ ಹೇಗೆ ಸಂಭಾಳಿಸಿದಳೋ ಎಂದು, ಒಂದೇ ಮಗುವಿನ ತಾಯಿಯಾದ ನನಗೆ ಸದಾ ಕಾಡುವ ಸಂಗತಿ. “ಅಯ್ಯೋ ನಮ್ಮ ಕಾಲದಲ್ಲಿ ಹೀಗಿರಲಿಲ್ಲಪ್ಪ” ಈಗಿನ ಕಾಲದ ಮಕ್ಳೇ ಹಾಗೋ, ಪಾಲಕರೇ ಹಾಗೋ ಅನ್ನುವ, ಅವಕಾಶ ವಂಚಿತರಾಗದಂತೆ ಹಿರಿಯರಾಡುವ ಮಾತುಗಳು ನೇರ ತಾಕುವುದು […]

ಡಿ.ಎಸ್.ರಾಮಸ್ವಾಮಿ ಕವಿತೆಗಳು ಗೆ; ಕವಿತೆಯ ಮೊಳಕೆಯೊಡೆಸುತ್ತದೆನಿನ್ನದೊಂದು ನಗು, ಸಣ್ಣ ಸಂದೇಶಎಂದಂದು ನಿನ್ನನ್ನು ಮರುಳುಮಾಡುವುದಿಲ್ಲ; ಜೊತೆಗಿರದೆಯೂ ಜೊತೆಗೇ ಇರುವಾಗ.ನಟ್ಟ ನಡುವೆ ಎದ್ದು ಹೋಗುವ ಮಾತಿಗೆಖಬರಿಲ್ಲ, ಅನ್ನುವುದಕ್ಕೆ ಪುರಾವೆ ಯೊದಗಿಸಲಾರೆ, ಬದುಕ ದುರಿತದ ನಡುವೆ.ಆಡದೇ ಉಳಿದ ಮಾತುಗಳು ಎದೆ ತುಂಬಉಳಿದದ್ದಕ್ಕೆ ಸಾಕ್ಷಿ, ಕವಿತೆಯ ಸಾಲುಗಳಲ್ಲಿ ನೀನು, ಪದೇ ಪದೇ ಇಣುಕುತ್ತೀಯ, ಮುಖಾಮುಖಿ-ಯಾಗದೆಯೂ, ಒಳಗೇ ಉಳಿದ ಬೆಳಕು.ಹಂಚಿಕೊಳ್ಳುವುದಕ್ಕೇನು ಉಳಿದಿದೆ ಎನ್ನುವುದೆಲ್ಲ ಬರಿಯ ಒಣ ತರ್ಕದ ದೇಶಾವರಿ ಹೇಳಿಕೆಇಬ್ಬರಿಗಲ್ಲದೇ ಮತ್ತಾರಿಗೂ ಗೊತ್ತಾಗಬಾರದ ಸತ್ಯ.ಹೆಗಲಿಗೊರಗಿ, ಬೆರಳ ಹೆಣೆದು ಅನೂಹ್ಯ ಲೋಕಕ್ಕೆ ಜಾರಿ, ಮನಸ್ಸಲ್ಲೇ ಕೂಡಿದ್ದು, […]

ಸಜ್ಜನರ ಸಂಗ ಲೇಸು ಕಂಡಯ್ಯಾ…!

ಲೇಖನ ಸಜ್ಜನರ ಸಂಗ ಲೇಸು ಕಂಡಯ್ಯಾ…! ಬಾಲಾಜಿ ಕುಂಬಾರ, ಹನ್ನೆರಡನೇ ಶತಮಾನದ ಬಸವಣ್ಣನವರ ಸಮಕಾಲೀನ ಪ್ರಮಥರಲ್ಲಿ ವೀರಗೊಲ್ಲಾಳ ಎನ್ನುವ ತತ್ವನಿಷ್ಠೆಯ ವಚನಕಾರ ಹಾಗೂ ಅನುಭಾವಿ ಶರಣನಾಗಿದ್ದನು. ಈತನ ಮೂಲತಃ ಇಂದಿನ ವಿಜಾಪೂರ ಜಿಲ್ಲೆಯ ಸಿಂದಗಿ ತಾಲೂಕಿನ ಗೊಲಗೇರಿ ಗ್ರಾಮ. ಈತನನ್ನು ‘ಕಾಟಕೋಟ’ ಎಂಬ ಹೆಸರಿನಿಂದಲೂ ಕರೆಯುತ್ತಾರೆ. ಕುರಿ ಕಾಯುವುದು ಈತನ ಕಾಯಕವಾಗಿತ್ತು.ಕುರಿಯ ಹಿಕ್ಕೆಯನ್ನೇ ಲಿಂಗವೆಂದು ಪೂಜಿಸಿ ಆತ್ಮಜ್ಞಾನ ಪಡೆದುಕೊಂಡು ಶರಣತತ್ವ ಪರಿಪಾಲಕನಾಗಿದ್ದನು.ತನ್ನ ವೃತ್ತಿ ಪರಿಭಾಷೆಯನ್ನು ಹಾಗೂ ತತ್ವಪರಿಭಾಷೆಯನ್ನು ಬಳಸಿಕೊಂಡು ರಚಿಸಿರುವ ಬಹುಚಿಂತನೆಯ 10 ವಚನಗಳು ಪ್ರಸ್ತುತವಾಗಿ ಲಭ್ಯವಾಗಿವೆ. […]

ಪಾತ್ರೆಗಳ ಲೋಕದಲ್ಲಿ..

ಲಲಿತ ಪ್ರಬಂಧ ಪಾತ್ರೆಗಳ ಲೋಕದಲ್ಲಿ.. ಜ್ಯೋತಿ ಡಿ.ಬೊಮ್ಮಾ. ಹಬ್ಬಗಳಲ್ಲೆ ದೊಡ್ಡ ಹಬ್ಬ ದಸರಾ .ನಮ್ಮ ಉತ್ತರ ಕರ್ನಾಟಕದಲ್ಲಿ ಮತ್ತು ಮಹಾರಾಷ್ಟ್ರದ ಕೆಲವು ಕಡೆ ಈ ಹಬ್ಬವನ್ನು ಅಂಬಾ ಭವಾನಿಯ ಹೆಸರಿನಲ್ಲಿ ಆಚರಿಸಲಾಗುತ್ತದೆ.ಪ್ರತಿಯೊಬ್ಬರ ಮನೆಗಳು ದಸರಾ ಹಬ್ಬಕ್ಕೆ ಸುಣ್ಣ ಬಣ್ಣ ಬಳಿದುಕೊಂಡು ದೇವಿಯ ಪ್ರತಿಷ್ಟಾಪನೆಗೆ ಸಜ್ಜುಗೊಳ್ಳುತ್ತವೆ. ನಾವು ಚಿಕ್ಕವರಿದ್ದಾಗ ಮನೆಗೆ ಸುಣ್ಣ ಬಣ್ಣ ಮಾಡುವ ಸಂದರ್ಭ ತುಂಬಾ ಸಂತೋಷದಾಯಕವಾಗಿರುತಿತ್ತು.ಆ ಸಂದರ್ಭ ದಲ್ಲಿ ಮನೆಯೊಳಗಿನ ಎಲ್ಲಾ ವಸ್ತುಗಳು ಅಂಗಳಕ್ಕೆ ಬಂದು ಬೀಳುತಿದ್ದವು. ಮನೆಯ ಹಿರಿಯರು ಡಬ್ಬದೊಳಗಿನ ದವಸ ಧಾನ್ಯಗಳನ್ನು ಒಣಗಿಸಿ […]

ಖುಷಿ ನಮ್ಮಲ್ಲೇ!!!

ಲೇಖನ ಖುಷಿ ನಮ್ಮಲ್ಲೇ!!! ಮಾಲಾ ಅಕ್ಕಿಶೆಟ್ಟಿ  ಕೈಯಲ್ಲಿ10 ರ ನೋಟು ಹಿಡಿದುಕೊಂಡು ಬಡ ಹುಡುಗ ರೋಡ್ ಮೇಲೆ ಇರುವ ಭಜಿ ಅಂಗಡಿಗೆ ಬಂದಿದ್ದ. ಆಸೆ ಕಂಗಳಿಂದ ಮೂರು ತರಹದ ಭಜಿ, ‌ಅಂದರೆ ‌ಕಾಂದಾ, ‌ಮಿರ್ಚಿ ‌ಮತ್ತು ‌ಮೈಸೂರ ‌ಭಜಿಯನ್ನು ‌‌ಒಂದೇ ‌ಸಮನೇ ನೋಡಿದ. ‌ಆ ‌ಅಂಗಡಿಯಲ್ಲಿ 4 ‌ಭಜಿಗಳ ‌ಪ್ಲೇಟ್ಗೆ 20 ‌ರೂಪಾಯಿ.ಒಂದು ಭಜಿಯನ್ನು ಕೊಡುವ ಸೌಲಭ್ಯವಿರುವದರಿಂದ 5ರೂಪಾಯಿಗೆ ‌ಯಾವುದಾದರು ‌ಭಜಿ ‌ತಿನ್ನಬಹುದು.ಆತ ‌ಡಿಸೈಡ್ ‌ಮಾಡಿ 5 ರೂ ‌ಕೊಟ್ಟು ‌ಮಿರ್ಚಿ ‌ಭಜಿಯನ್ನು ಸವಿದ.ಬಸಿಯಾಕಾರದಲ್ಲಿ ಕಣ್ಣು ತೆರೆದು, […]

ನಾವು ಕನ್ನಡಿಗರು’ – ಜಾಗತಿಕ ಸರಪಳಿಯ ಒಂದು ಕೊಂಡಿ

ಲೇಖನ ನಾವು ಕನ್ನಡಿಗರು’ ಜಾಗತಿಕ ಸರಪಳಿಯ ಒಂದು ಕೊಂಡಿ ಗಣೇಶ ಭಟ್ಟ ಆರ್ಥಿಕ, ಸಾಮಾಜಿಕ ಅಭಿವೃದ್ಧಿಯ ಉದ್ದೇಶದಿಂದ ಭಾಷೆ , ಸಂಸ್ಕೃತಿ, ಪರಂಪರೆಯ ಭಾವಧಾರೆಯನ್ನು ಬಳಸಿಕೊಂಡು ಒಗ್ಗಟ್ಟು ಮೂಡಿಸುವ ಪ್ರಯತ್ನವನ್ನು ಪ್ರಾದೇಶಿಕತೆಯನ್ನು ಪ್ರೋತ್ಸಾಹಿಸಿ, ದೇಶವನ್ನು ದುರ್ಬಲಗೊಳಿಸುವ ಕಾರ್ಯವೆಂದು ಕೆಲವರು ಅಕ್ಷೇಪಿಸುತ್ತಾರೆ. ಹಲವು ವಿಧದ ಹೂವುಗಳನ್ನು ಬಳಸಿ ಹಾರ ತಯಾರಿಸಿದಾಗ ಅದರ ಸೌಂದರ್ಯ ಹಾಳಾಗುತ್ತದೆಂದು ಗೊಣಗುವುದು ಸಮಂಜಸವೆನಿಸಲಾರದು. ಪ್ರತಿಯೊಂದು ಹೂವಿಗೂ ಅದರದ್ದೇ ಆದ ಸ್ವರೂಪ, ವೈಶಿಷ್ಟತೆ, ಸೌಂದರ್ಯ ಇದ್ದರೂ ಎಲ್ಲಾ ವಿಧದ ಹೂಗಳನ್ನು ಸಮರ್ಪಕವಾಗಿ ಪೋಣಿಸಿ ಹಾರವನ್ನು ಸುಂದರವಾಗಿಸಲು […]

ಸಂತೆಯಲ್ಲಿ ನಿಂತ ಅವಳು

ಲೇಖನ ಸಂತೆಯಲ್ಲಿ ನಿಂತ ಅವಳು (ಮಹಿಳಾ ಜಾಹಿರಾತು) ಸಂತೆಯಲ್ಲಿ ನಿಂತ ಅವಳು (ಮಹಿಳಾ ಜಾಹಿರಾತು) ಸಂತೆಯಲ್ಲಿ ನಿಂತ ಅವಳು (ಮಹಿಳಾ ಜಾಹಿರಾತು)             ಪ್ರಾಚೀನ ಕಾಲದಿಂದ ಇಂದಿನವರೆಗೂ ಮಾರುಕಟ್ಟೆಗೆ ಒಂದು ಆರೋಗ್ಯಕರವಾದ ನೀತಿ ಸಂಹಿತೆಯನ್ನು ರೂಪಿಸುವ ವಿವೇಕ ಮತ್ತು ವ್ಯವಧಾನ ಸಾಮುದಾಯಿಕ ಜವಾಬ್ದಾರಿಯಾಗಿ ಯಾವ ಕಾಲದಲ್ಲಿ ಯಾರಲ್ಲಿಯೂ ಕಾಣಿಸಿಕೊಂಡಿಲ್ಲ. ಆರೋಗ್ಯಕರ ಸಮಾಜಕ್ಕೆ ಲಾಭಗಳಿಕೆಯ ವ್ಯವಹಾರಿಕತೆಯನ್ನು ನಿಯಂತ್ರಿಸುವ ಶಕ್ತಿಯಿಲ್ಲದಿದ್ದರೆ ಇಡೀ ವ್ಯವಸ್ಥೆಯೇ ನರಳಬೇಕಾಗುತ್ತದೆ. ಮಾರುಕಟ್ಟೆ ಸಂಸ್ಕೃತಿ ಗಳಿಕೆಯ ತೂಗು ಕತ್ತಿಯನ್ನು ನಿರಂತರ ಗ್ರಾಹಕನ ಮೇಲೆ ಬೀಸುತ್ತಿರುತ್ತದೆ. ಇದರಿಂದ ವ್ಯಕ್ತಿ […]

ಪಾರ್ವತಿಯ ಖುಷಿ ಪ್ರತೀ ಹೆಣ್ಣಿಗೂ ಸಿಗಲಿ

ಲಹರಿ ಪಾರ್ವತಿಯ ಖುಷಿ ಪ್ರತೀ ಹೆಣ್ಣಿಗೂ ಸಿಗಲಿ ಸ್ಮಿತಾ ಭಟ್ ತವರು ಎನ್ನುವದು ಮುಗಿಯಲಾರದ ಸೆಳೆತ ಮತ್ತದು ಹೆಣ್ಮಕ್ಕಳಿಗೆ ಮಾತ್ರ ಸೀಮಿತ. ತಲೆ ತಲಾಂತರಗಳಿಂದಲೂ ತವರು ಮತ್ತು ಹೆಣ್ಣು ಸಯಾಮಿಯಂತೆ ಬದುಕುತ್ತ ಬಂದಿದ್ದಾರೆ. ಹೆಣ್ಣಿನೊಳಗೆ ತವರಿನ ಸೆಳೆತ,ಪುಳಕ,ಅಪ್ಯಾಯ ಭಾವಗಳು ಶುರುವಾಗುವದೇ ಮದುವೆಯೆಂಬ ಬಂಧನದಲಿ,ಭಾವದಲಿ,ಸಿಲುಕಿ ತವರ ತೊರೆದು ಹೊರನಡೆದಾಗಲೇ. ಅಲ್ಲಿಯವರೆಗೆ ಸುಪ್ತವಾಗಿದ್ದ ನಯ ನಾಜೂಕಿನ ಭಾವನೆಗಳೆಲ್ಲ ಕಟ್ಟೆಯೊಡೆದು ಹೃದಯವನ್ನು ತಲ್ಲಣಗೊಳಿಸಿಬಿಡುತ್ತವೆ. ಎಂತಹ ಐಶಾರಾಮಿ ಗಂಡನಮನೆಯೇ ಸಿಗಲಿ ತವರಿನಿಂದ ಬರುವ ಪುಟ್ಟ ಉಡುಗೊರೆಗಾಗಿ  ಹೆಣ್ಣು ಕಾತರದಿಂದ ಕಾಯುತ್ತಾಳೆ. ತವರೂರಿನ ಹೆಸರು […]

Back To Top