Category: ಇತರೆ

ಇತರೆ

ಪ್ರಸ್ತುತ

ಮಕ್ಕಳ ಆಯ್ಕೆಯಲ್ಲಿ ನಂಬಿಕೆ ಏಕಿಲ್ಲ….? ಅನಿತ.ಕೆ.ಬಿ.   ವಿವಾಹವೆಂಬುದು ನಮ್ಮ ಸಮಾಜದಲ್ಲಿ ಕಂಡುಬರುವಂತಹ ಒಂದು ಸಂಸ್ಥೆ. ಗಂಡಿಗೆ ಹೆಣ್ಣು,ಹೆಣ್ಣಿಗೆ ಗಂಡು ಆಸರೆಯಾಗಿರುತ್ತಾರೆಂಬ ನಂಬಿಕೆಯಿಂದ ವಿವಾಹ ಅವಶ್ಶಕ ಹಾಗೂ ಅನಿವಾರ್ಯ. ಮದುವೆಯನ್ನು ಪುರಾಣಗಳ ಕಾಲದಲ್ಲಿ ಸ್ವಯಂವರ ರೀತಿ ನಡೆಸಲಾಗಿದೆ.    ಹಾಗದರೆ ಮದುವೆ ಎಂದರೇನು…? ಎಂಬ ಪ್ರಶ್ನೆಗೆ ಸಮಾಜಶಾಸ್ತ್ರಜ್ಞರಲ್ಲಿ ಒಬ್ಬರಾದ ಮ್ಶಾಲಿನೊಸ್ಕಿರವರು “ಸ್ತ್ರೀ-ಪುರುಷರ ನಡುವೆ ಲೈಂಗಿಕ ಹಾಗೂ ಮಾನಸಿಕ ಸಂಬಂಧವನ್ನ ದೃಢಪಡಿಸುವ ಮತ್ತು ಸಂತಾನೋತ್ಪತ್ತಿಗಾಗಿ ಉದ್ದೇಶಪೂರ್ವಕವಾಗಿ ಏರ್ಪಡಿಸುವ ಒಪ್ಪಂದ” ಎಂದಿದ್ದಾರೆ.     ಮದುವೆ ಇಲ್ಲದೆ ಜೀವನ ನಡೆಸಲು ಸಾಧ್ಶವಿಲ್ಲವೇ? […]

ಚಿಂತನೆ

ಅರಿಷಡ್ಬರ್ಗಗಳನು  ದಾಟಿ….. ಅಶ್ವಥ್ ಕಳೆದ ವಾರ ಗೆಳೆಯನೊಬ್ಬನಿಗೆ ಏನೋ ಗೊಂದಲವಾಗಿ ಕೆಲವು ಪ್ರಶ್ನೆಗಳನ್ನು ಒಂದಕ್ಕೊಂದು ಪೋಣಿಸಿ ಪ್ರಶ್ನೆಗಳ ಒಂದು ಮಾಲೆಯನ್ನೇ ಮಾಡಿಟ್ಟುಕೊಂಡಿದ್ದ. ನಾವು ಕತೆ ಕೇಳ್ತೇವೆ, ಇತಿಹಾಸ ಅಧ್ಯಯನ ಮಾಡ್ತೇವೆ, ಪುರಾಣ ಪುಣ್ಯಕತೆಗಳನ್ನು ಓದುವುದು ಕೇಳುವುದು ನೋಡುವುದು ಇದ್ದೇ ಇದೆ. ಇಷ್ಟೇ ಅಲ್ಲದೇ ನಮ್ಮ ತಲೆಮಾರಿನವರಿಗೆ ಬಾಲ್ಯದಲ್ಲಿ ಪೌರಾಣಿಕ ನಾಟಕಗಳು, ಹರಿಕತೆಗಳು, ಬೀದಿನಾಟಕ, ಗೊಂಬೆನಾಟಕ ಹೀಗೆ ಹತ್ತು ಹಲವು ರೀತಿಯಲ್ಲಿ ನಮ್ಮ ಹೊರಗನ್ನು ತಿಳಿಯುವ ಸಾಮಾನ್ಯ ಸಾಧ್ಯತೆಗಳಿದ್ದವು. ಈಗ ಹಳೆಯ ಈ ಮಾಧ್ಯಮಗಳೆಲ್ಲ ಹಿನ್ನೆಲೆಗೆ ಸರಿದು, ಸಿನಿಮಾ, […]

ಅನುಭವ

                      ಮನೆ……. ಹಕ್ಕಿ ಮನೆ ಅನುಪಮಾ ರಾಘವೇಂದ್ರ                       ಮನೆ……. ಹಕ್ಕಿ ಮನೆ        ಈ ಮರೆವು  ಅನ್ನೋದು ಮನುಷ್ಯರಿಗೆ ಮಾತ್ರವೋ….? ಅಲ್ಲಾ ಪ್ರಾಣಿ ಪಕ್ಷಿಗಳಿಗೂ ಇರುತ್ತೋ…..? ನನಗೀ ಸಂಶಯ ಬರಲು ಕಾರಣವೇನೋ ಇದೆ. ಕೆಲವು ದಿನಗಳ ಹಿಂದಿನ ಘಟನೆ……          ಸಂಜೆ ವೇಳೆ ಹಟ್ಟಿ ಬಳಿಗೆ ಹೋದಾಗ ಹಟ್ಟಿಯ ಒಳಗಿನಿಂದ ಹಕ್ಕಿಯೊಂದು ಪುರ್ರನೆ ಹಾರಿ ಹೋಯ್ತು. ಮರುದಿನ ಬೆಳಗ್ಗೆಯೂ ಅದೇ ರೀತಿ ಹಕ್ಕಿ  ಹಾರುವುದು ಕಂಡಿತು. ಹಕ್ಕಿಗಳ ಕಿಚ ಪಿಚ ಸುಮಧುರವಾದ ಸಂಗೀತ…… ನಾನು ಹೋದ […]

ಪ್ರಸ್ತುತ

ಕೊರೊನಾ ಕಾಲದ ರಂಗಸಂಸ್ಕೃತಿ ಚಿಂತನೆಗಳು ಮಲ್ಲಿಕಾರ್ಜುನ ಕಡಕೋಳ ಕೊರೊನಾ ಎಂಬ ಕರಾಳ ರಾಕ್ಷಸ ಹಾವಳಿಯಿಂದಾಗಿ ಮನುಷ್ಯರ ಬದುಕು ತೀವ್ರ ಸ್ವರೂಪದ ಆಘಾತವನ್ನು ಎದುರಿಸುವಂತಾಗಿದೆ. ಸಾಂಸ್ಕೃತಿಕ ಬದುಕಿಗೂ ತೀವ್ರವಾದ ಪೆಟ್ಟು ಬಿದ್ದಿದೆ. ನಿಸ್ಸಂದೇಹವಾಗಿ ಅದನ್ನು ಯಾರೂ ಅಲ್ಲಗಳೆಯಲಾರರು. ಹಾಗಂತ ಕೊರೊನಾ ಪೂರ್ವದಲ್ಲಿ ನಮ್ಮ ಸಾಹಿತ್ಯ, ಸಂಗೀತ, ನಾಟಕ ಹೀಗೆ ಎಲ್ಲಾ ಕಲೆಗಳಿಗೆ ಸಿಗುತ್ತಿದ್ದ ಪ್ರೋತ್ಸಾಹ, ಸಹಾಯ, ಸಹಕಾರ, ಅಭಿವ್ಯಕ್ತಿ ಸ್ವಾತಂತ್ರ್ಯ ಅಮೋಘವಾಗಿತ್ತು. ಅದರಿಂದಾಗಿ ಅತ್ಯಂತ ಸಮೃದ್ಧವಾದ ಸಾಂಸ್ಕೃತಿಕ ಬದುಕು ಮೈಮನ ತುಂಬಿ ಚೆಂಗುಲಾಬಿಯಂತೆ ಅರಳಿಕೊಂಡಿತ್ತೆಂದು ಭ್ರಮಿಸಬೇಕಿಲ್ಲ. ಈಗ ಕೊರೊನಾ […]

ಪ್ರಸ್ತುತ

ಅಪ್ಪ ರಾಘವೇಂದ್ರ ಈ ಹೊರಬೈಲು “ಮಾತೃದೇವೋಭವ ಪಿತೃದೇವೋಭವ ಆಚಾರ್ಯ ದೇವೋಭವ” ಭೂಮಿಯ ಮೇಲೆ ಕಣ್ಣಿಗೆ ಕಾಣುವ, ಜೊತೆಯಲ್ಲಿಯೇ ಇರುವ, ಕಷ್ಟವೆಂದಾಗ ಮರುಗುವ, ದಾರಿಗೆಡದಂತೆ ಮಾರ್ಗದರ್ಶನ ಮಾಡುವ ಮೂರು ದೈವಗಳೆಂದರೆ ತಂದೆ, ತಾಯಿ ಮತ್ತು ಗುರು. ಇಡೀ ಭೂಮಂಡಲದ ಪ್ರತಿಯೊಬ್ಬರಿಗೂ ಇವರೇ ನಿಜವಾದ ತ್ರಿಮೂರ್ತಿಗಳು. ಮಗುವನ್ನು ಸದ್ಗತಿಗೆ ತರುವಲ್ಲಿ ಮೂವರ ಪಾತ್ರವೂ ಬಹುಮುಖ್ಯವಾದುದು. ತಾಯಿಯಾದವಳು ಕರುಣಾಮಯಿಯಾಗಿ, ಮುದ್ದು ಮಾಡುತ್ತಾ, ಸದಾ ಮಗುವಿನ ಹಿತಕ್ಕಾಗಿಯೇ ಬದುಕುವವಳು. ಗುರುವಾದವನು ಮಗುವು ದಾರಿ ತಪ್ಪದಂತೆ ಮಾರ್ಗದರ್ಶನ ನೀಡಿ, ಜಗತ್ತಿನ ಪರಿಚಯ ಮಾಡಿಕೊಡುವವನು. ಆದರೆ […]

ಪ್ರಸ್ತುತ

ಶಿಕ್ಷಣದ ಬದಲಾವಣೆ ಅನಿವಾರ್ಯ ರೇಷ್ಮಾ ಕಂದಕೂರ ಶಿಕ್ಷಣದ  ಬದಲಾವಣೆ ಅನಿವಾರ್ಯ ಶಾಲೆ ಎಂಬುದು ಗಾರೆ ತುಂಬಿದ ಕಟ್ಟಡವಲ್ಲ ಜೀವಕೆ ಜೀವನ ನೀಡುವ ಸಂಗ್ರಹಾಗಾರ .ಕಾಲ ಘಟ್ಟದೊಂದಿಗೆ ಸದಾ ಹರಿವ ನೀರಿನಂತೆ ಬದಲಾಗುವ ರೀತಿಯ ಅರಿತು ಮಕ್ಕಳ ಮನವ ಅರಿತು ಬದಲಾಗುವ ಶೈಲಿಯ ರೂಢಿಸಿಕೊಂಡು ಮುಗ್ಧ ಮನಸುಗಳ ವಿಕಾಸಕ್ಕೆ ದಾರಿ ದೀಪವಾಗ ಬೇಕೆ ವಿನಃ ಕಟ್ಟುಪಾಡುಗಳಿಂದ ಚೌಕಟ್ಟಿನಲಿ ಜೋತು ಬೀಳಬಾರದು. ಅಂಕ ಶ್ರೇಣಿಯ ಹೊರತಾಗಿಯೂ ಬದುಕುವ ಜೀವನ ಶೈಲಿಗೆ ಹೊಂದಿಕೊಳ್ಳುವ ರೀತಿಯಲ್ಲಿ ಸಾಗಬೇಕು.             ಮಾನವ ಜನಾಂಗದ ಪ್ರಗತಿಗೆ […]

ಹರಟೆ

ಮರೆವು ಅನುಪಮಾ ರಾಘವೇಂದ್ರ        ಅರಿತೋ…ಮರೆತೋ…ಒಂದೊಮ್ಮೆ ದಾರಿ ತಪ್ಪಿದರೂ ಕೂಡ ಮತ್ತೆ ಎಚ್ಚರಗೊಂಡು ಮೈಕೊಡವಿ ನಿಲ್ಲಬೇಕು. ಆಗ ಮರೆವು ಮರೆಯಾಗಿ ಅರಿವಿನ ಜ್ಯೋತಿ ಬೆಳಗುತ್ತದೆ ಎಂದಿದ್ದಾರೆ ವಿದ್ವಾಂಸರು. ಮರೆವು ದೇವರು ಕೊಟ್ಟ ವರ. ಆದರೆ ಯಾವುದನ್ನು ಮರೆಯಬೇಕು, ಯಾವುದನ್ನು ಮರೆಯಬಾರದು ಎಂಬ ಅರಿವು ನಮ್ಮಲ್ಲಿರಬೇಕು.         ಅದೇನೋ ಸರಿ…….. ಆದರೆ ಮೊನ್ನೆ ನಾನು ಅಡಿಗೆ ಮಾಡುತ್ತಿರುವಾಗ ಬೇರೇನೋ ನೆನಪಾಗಿ ಸ್ಟೋರ್ ರೂಮಿನ ಒಳ ಹೊಕ್ಕಾಗ ಯಾವ ಕಾರಣಕ್ಕೆ ಅಲ್ಲಿಗೆ ಹೋದೆ ಎಂಬುದೇ ಮರೆತು ಹೋಗಿತ್ತು. ಮತ್ತೆ ಮೊದಲಿದ್ದಲ್ಲಿಗೇ […]

ಲಹರಿ

ಮಾಸ್ಕಿನ ಮುಸುಕಿನಲಿ ಮುಂಗಾರು ಶಾಲಿನಿ ಆರ್. ಮತ್ತೆ ಮುಂಗಾರು. ಆದರೆ ಇದು ಕೊರೋನಾ ಮುಂಗಾರು. ಜೀವನದಲ್ಲಿ ಮೊದಲ ಬಾರಿ‌ ಮಳೆ ಮತ್ತು ನಾನು, ನನ್ನ ಗಾಡಿ ಮತ್ತೆ ನಿನ್ನ ಮೌನ, ಒಂದಕ್ಕೊಂದು ಸಂಬಂಧ ಇಲ್ಲದ ಹಾಗೆ ಲಾಕ್ ಡೌನ್ ಆಗಿರೋದು.  ಪ್ರತಿ ಸಾರಿ ಕಾಯೋ ಹಾಗೆ ಈ ಸಾರಿ ಮುಂಗಾರು ಅನುಭವಿಸಲಿಕ್ಕೆ ಮನಸ್ಸು ಹಿಂದೆ ಮುಂದೆ ನೋಡ್ತಿದೆ.ಇಳೆಯೇನೋ ತೋಯ್ತಾ, ಅದರ ಸಿರಿ ಸಂಭ್ರಮನ ಅದು ಸಂಭ್ರಮಿಸ್ತಿದೆ. ಯಾಕಂದ್ರ ಬಾಳ ವರುಷದ ಮ್ಯಾಲ ಅದಕ್ಕೆ ತನ್ನದೇ ಆದ ಸಮ್ಮಾನ […]

ಶಿಶುಗೀತೆ

ಇರುವೆ ತೇಜಾವತಿ ಹೆಚ್.ಡಿ. ಇರುವೆ ಇರುವೆ ಎಲ್ಲಿರುವೆಎಲ್ಲಾ ಕಡೆಯಲು ನೀನಿರುವೆಶಿಸ್ತಿಗೆ ನೀನೇ ಹೆಸರಾಗಿರುವೆಹೆಚ್ಚಿನ ಭಾರವ ನೀನೊರುವೆ ಇರುವೆ ಇರುವೆ ಕೆಂಬಿರುವೆಕೋಪದಿ ಏಕೆ ನೀನಿರುವೆಅರಿಯದೆ ನಿನ್ನ ಮುಟ್ಟಿದರೆಚುರುಚುರು ಅಂತ ಕಚ್ಚಿರುವೆ ಇರುವೆ ಇರುವೆ ಕಟ್ಟಿರುವೆದಾರಿಲಿ ಏಕೆ ನಡೆದಿರುವೆಅರಿಯದೆ ಪಾದವ ಮೆಟ್ಟಿದರೆಸಾಲನು ಬಿಟ್ಟೇ ಚುಚ್ಚಿರುವೆ ಇರುವೆ ಇರುವೆ ಚಗಳಿರುವೆಕೊಟ್ಟೆಯ ಎಲ್ಲಿ ಕಟ್ಟಿರುವೆಚಟ್ನಿಗೆ ನೀನು ಚಂದಿರುವೆಮಲ್ನಾಡ ಸೀಮೆಲಿ ನೀನಿರುವೆ ಇರುವೆ ಇರುವೆ ಕಪ್ಪಿರುವೆತತ್ತಿಯ ಎಲ್ಲಿ ಬಿಟ್ಟಿರುವೆಬೆಲ್ಲವ ನೀನು ಮುತ್ತಿರುವೆಹಿಡಿಯ ಹೋದ್ರೆ ಬುಳುಗುಡುವೆ ***********

ಲಹರಿ

ಮಳೆಗಾಲದ ಹಸಿ ಪ್ರೇಮಪತ್ರ… ಆಶಾಜಗದೀಶ್ ಯಾರೋ ಹುಡುಗ ಹೇಳಿದನಂತೆ ತನ್ನ ಹುಡುಗಿಗೆ, “ಹೋಗಿ ಮಳೆಯ ಹನಿಗಳನ್ನು ಎಣಿಸು.. ನಾ ನಿನ್ನನ್ನು ಅಷ್ಟು ಪ್ರೀತಿಸುತ್ತೇನೆ” ಎಂದು. ನನ್ನ ಅದೆಷ್ಟೋ ಸಂದರ್ಭಗಳ ಪ್ರೇಮದ ಉತ್ಕಟತೆಗೆ ಮಾತಾಗಿ ನಿಂತಿತ್ತು ಈ ಕಥೆ. ಏನೊಂದು ಹೇಳದೆಯೂ “ನನ್ನ ಪ್ರೀತಿ ಇದು” ಎಂದು ಹೇಳಿದ ಮೌನ ಮಾತಾಗಿತ್ತು ಈ ಕಥೆ. ಅರೆ… ಆ ಹೆದ್ದಾರಿಯ ಮಗ್ಗುಲ ಕಾಲುದಾರಿಯ ಪೊದೆಗೆ ಎಲ್ಲ ಗೊತ್ತಿದೆ. ನಾವು ಹೃದಯವನ್ನು  ಹಂಚಿಕೊಳ್ಳುತ್ತಾ ನಮ್ಮ ಆತ್ಮಗಳನ್ನು ಒಂದಾಗಿಸಿದ್ದನ್ನು ಕಂಡಿದೆ ಅದು. ನೋಯಿಸುವಷ್ಟು […]

Back To Top