Category: ಇತರೆ

ಇತರೆ

ಹಾಸ್ಯಲೇಖನ

ನಾ ಮಾಡಿದ ಉಪ್ಪಿಟ್ಟು  ಗೋಪಿನಾಥ್ ನಾ ಮಾಡಿದ ಉಪ್ಪಿಟ್ಟು  ರೀ ಒಂದ್ ಸಲ ಸೌಟು ಹಿಡಿದು ನೋಡಿ ಗೊತ್ತಾಗುತ್ತೆ ಅಡಿಗೆ ಮಾಡುವುದು ಏನು ಮಹಾ ಅಂತಿರಲ್ಲಾ, ಮೂವತ್ತು ಅಂಕ ಗಳಿಸಿ ಸಾಕೆಂದಳು ! ನಾ ಅವಳ ಚಾಲೆಂಜ್ ಒಪ್ಪಿಕೊಂಡೆ..ಆದರೆ ಒಂದ್ ಕಂಡಿಷನ್. ನೀನು ಯಾವುದೇ ಕಾರಣಕ್ಕೂಅಡಿಗೆಮನೆಯೊಳಗೆ ‌ಬರಬಾರದು ! ಅವಳು ಖುಷಿಯಿಂದ ನಿಮ್ಮಗ್ರಹಚಾರಕ್ಕೆ ನಾನೇನು ಮಾಡಲಾದೀತೆಂದು ರೂಮು ಸೇರಿದಳು. ನಾನು ಬಹಳ ಹುಮ್ಮಸ್ಸಿನಲ್ಲಿದ್ದೆ, ಅಡಿಗೆ ಮನೆಗೆ ಹೋಗಿ ಸೌಟು ಕೈಲಿ ಹಿಡಿದು ಕೈ ಚೌಕವನ್ನು ಹೆಗಲಿಗೇರಿಸಿ ನಳಮಹರಾಜನ […]

ಪ್ರಸ್ತುತ

ಶಿವ ಒಂದುವಿಶ್ಲೇಷಣೆ ಗಣೇಶ ಭಟ್ ಶಿರಸಿ ಪ್ರತಿವರ್ಷ ಶಿವರಾತ್ರಿ ಬಂದೊಡನೆ ಶಿವನ ಆರಾಧನೆ ಜೋರಾಗುತ್ತದೆ; ಶಿವನ ಕುರಿತಾಗಿ ಲೇಖನಗಳು, ಪುಸ್ತಕಗಳು ಬರುತ್ತವೆ. ಎಲ್ಲವೂ ಹೆಚ್ಚು ಕಡಿಮೆ ಒಂದೇ ಅಚ್ಚಿನಲ್ಲಿ ಎರಕಹೊಯ್ದಂತಿರುತ್ತವೆ. ನಾನಿಲ್ಲಿ ಹೇಳಹೊರಟಿರುವದು ಶಿವನ ಕುರಿತಾದ ಒಂದು ವಿಶಿಷ್ಟ ಪುಸ್ತಕದ ಕುರಿತು. ಅದರ ಹೆಸರೇ ನಮಃ ಶಿವಾಯ ಶಾಂತಾಯ. ಶ್ರೀ ಶ್ರೀ ಆನಂದಮೂರ್ತಿ ಎಂದು ಅನುಯಾಯಿಗಳಿಂದ ಕರೆಯಲ್ಪಡುವ ಶ್ರೀ ಪ್ರಭಾತ ರಂಜನ್ ಸರ್ಕಾರರು 1982 ರ ಎಪ್ರಿಲ್ 11 ರಿಂದ ಪ್ರಾರಂಭಿಸಿ 13 ಅಗಸ್ಟ್ 1982 ರವರೆಗೆ […]

ಶ್ರದ್ದಾಂಜಲಿ

‘ವಿಡಂಬಾರಿ’ ಕಣ್ಮರೆ..! ಕೆ.ಶಿವು ಲಕ್ಕಣ್ಣವರ ಖ್ಯಾತ ಚುಟುಕು ಕವಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ‘ವಿಡಂಬಾರಿ’ ಕಣ್ಮರೆ..! ಖ್ಯಾತ ಚುಟುಕು ಕವಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಡಂಬಾರಿ ಅವರು ಕಡತೋಕೆಯಲ್ಲಿ ತಮ್ಮ ಮಗಳ ಮನೆಯಲ್ಲಿ ನಿನ್ನೆ ನಿಧನರಾಗಿದ್ದಾರೆ… ‘ವಿಡಂಬಾರಿ’ ಕಾವ್ಯನಾಮದಿಂದ ಬರೆಯುತ್ತಿದ್ದ ವಿಷ್ಣುಗ. ಭಂಡಾರಿ ಜನಿಸಿದ್ದು 1935 ಫೆಬ್ರುವರಿ 29 ರಂದು. ‘ವಿಶಾಲ ಕರ್ನಾಟಕ’ದಲ್ಲಿ ಮೊದಲ ಚುಟುಕು ಪ್ರಕಟವಾಯಿತು. ವಿ.ಗ.ಭಂಡಾರಿ ಬದಲು ಸಂಪಾದಕರು ‘ವಿಡಂಬಾರಿ’ ಎಂದು ಬದಲಿಸಿ ಪ್ರಕಟಿಸಿದರು (ಅಂಚೆ ನೌಕರರಾಗಿದ್ದ ವಿಷ್ಣು ಅವರ ಹೆಸರಿನಲ್ಲಿಯೇ ಪ್ರಕಟವಾದರೆ ಅನವಶ್ಯಕ […]

ಪ್ರಸ್ತುತ

ಡಾ. ಸರೋಜಿನಿ ಮಹಿಷಿ ವರದಿಯಾಚೆಗೆ .. ಗಣೇಶ್ ಭಟ್ ಶಿರಸಿ ಡಾ. ಸರೋಜಿನಿ ಮಹಿಷಿ ವರದಿಯಾಚೆಗೆ .. ಕನ್ನಡ ನಾಡಿನಲ್ಲಿ ಕನ್ನಡಿಗರೇ ಸಾರ್ವಭೌಮ, ಕನ್ನಡಕ್ಕೇ ಮೊದಲ ಸ್ಥಾನ ಎನ್ನುವುದನ್ನು ಜನರು ಒಪ್ಪಿದರೂ, ಸರ್ಕಾರಗಳು ಅನುಷ್ಠಾನಕ್ಕೆ ತರಲು ಹಿಂದೇಟು ಹಾಕುತ್ತಿವೆ. ವೋಟಿಗಾಗಿ ನಾಟಕ ಮಾಡುವ ರಾಜಕೀಯ ಪಕ್ಷಗಳೆಲ್ಲವೂ ಕುಂಟು ನೆಪ ಮುಂದೆ ಮಾಡಿ ಡಾ. ಸರೋಜಿನಿ ಮಹಿಷಿ ವರದಿಯ ಜಾರಿಯನ್ನು ಮುಂದೂಡುತ್ತಲೇ ಇವೆ. ಕಳೆದ 35 ವರ್ಷಗಳಿಂದ ಅಧಿಕಾರದಲ್ಲಿದ್ದ ವಿವಿಧ ಪಕ್ಷಗಳು ( ಜನತಾ, ಕಾಂಗ್ರೆಸ್, ಬಿಜೆಪಿ) ಕನ್ನಡ […]

ವ್ಯಾಲಂಟೈನ್ಸ್ ಡೇ ಸ್ಪೆಶಲ್

ಒಲವು-ಗೆಲುವು ದೀಪಾಜಿ ಒಂದು ಕಾಲು ಕೆಜಿಯಷ್ಟು ತೂಗುವ ಗ್ರೀಟಂಗೂ ಕವರಿನಿಂದಾಚೆ ತೆಗೆದೊಡನೆ ಎರಡು ಪುಟದ ಮೇಲೊಂದಂದು ಬಿಳಿ ಪಾರಿವಾಳಗಳು ಪುಟಿದು ಕುಳತದ್ದು ನೋಡುತ್ತಿದ್ದಂತೆ ಮದ್ಯದಲ್ಲಿನ ಅಂಗೈ ಅಗಲದ ಕಡುಗೆಂಪು ಹೃದಯ ಅದರಾಳದೊಳಗಿಂತ ವಾದ್ಯಸಂಗೀತ ಕಿವಿ ದಾಟಿ ಎದೆ ತಾಕುತ್ತದೆ. ಪುಟ ತಿರುಗಿಸಿದರೆ ಜೋಡಿ ಗುಲಾಬಿ ಹೂ ಗಳು ಅದರ ಕೆಳಗೆ ಮೂರು ಸಾಲಿನ ಹನಿಗವನ.    ಮೂರು ಬಾರಿ ಉಸಿರೆ…. ಉಸಿರೆ.. ಉಸಿರೆ… ಉಸಿರಾಗಿ ಬಾ ಹೆಸರಾಗಿ ಬಾ ಈ ಬರಡು ಬದುಕಿಗೆ ಹಸಿರಾಗಿ ಬಾ..   […]

ಲಹರಿ

ಪ್ರೀತಿಯ ಆಸುಪಾಸು… ಚಂದ್ರಪ್ರಭ ಪ್ರೀತಿಯ ಆಸುಪಾಸು… ಒಮ್ಮೊಮ್ಮೆ ಹೇಳುತ್ತೇವೆ, ” ನಿನ್ನ ನಾ ಪ್ರೀತಿಸುತ್ತೇನೆ, ಆದರೆ..” ಈ ‘ಆದರೆ’ ಪ್ರೀತಿಸುತ್ತೇನೆ ಎನ್ನುವ ಸತ್ಯವನ್ನೇ ಹೊಡೆದುರುಳಿಸುತ್ತದೆ. ಪ್ರೀತಿಯಲ್ಲಿ ಹಾಗಿದ್ದಲ್ಲಿ, ಹೀಗಿದ್ದಲ್ಲಿ,ಆದರೆ ಗಳಿಗೆ ಜಾಗವಿಲ್ಲ. ಅಲ್ಲಿ ಆರಂಭ ಅಂತ್ಯವೂ ಇಲ್ಲ. ಅಲ್ಲಿ ಪ್ರೀತಿ ಇದೆ ಅಷ್ಟೇ.. ಎಂದೆಂದಿಗೂ. ಭಾವನೆಗಳ ಕಲಸುಮೇಲೋಗರದಲ್ಲಿ ಹೀಗೆ ಬಂದು ಹಾಗೆ ಹೋಗುವ ಕ್ಷಣದ ಚಂಚಲತೆ, ಉತ್ಕಟತೆ ಅದಲ್ಲ. ಆರಂಭ ಅಂತ್ಯಗಳಿಲ್ಲದ ಷರತ್ತುಗಳಿಲ್ಲದ ಎದೆಯ ತುಡಿತ ಪ್ರೀತಿ. ಎದೆಯೆ ಅದರ ಮನೆ.. ದೇವರ ಗುಡಿ ಅದಕ್ಕೆ. ಎದೆಯ […]

ಪ್ರಸ್ತುತ

ಕೇಂದ್ರದ ಬಜೆಟ್ ಗಣೇಶ್ ಭಟ್ ಶಿರಸಿ ಕೇಂದ್ರ ಬಜೆಟ್ 2020 ಬಜೆಟ್ ಒಂದರಿಂದಲೇ ಇಡೀ ಅರ್ಥವ್ಯವಸ್ಥೆ ಬದಲಾಗಿ ಬಿಡುತ್ತದೆ ಎಂದು ಭಾವಿಸುವದು ಮೂರ್ಖತನ. ಆದರೆ, ಬಜೆಟ್‍ನಲ್ಲಿ ಮಂಡಿಸುವ ವಿಚಾರಗಳು, ಆದಾಯದ ಮೂಲಗಳು ಮತ್ತು ಖರ್ಚುವೆಚ್ಚಗಳನ್ನು ನಿಭಾಯಿಸುವ ವಿವರಗಳಿಂದ ಅರ್ಥವ್ಯವಸ್ಥೆ ಸಾಗುತ್ತಿರುವ ದಿಸೆಯನ್ನು ಸುಲಭದಲ್ಲಿ ಗುರ್ತಿಸಲು ಸಾಧ್ಯ. ಹಲವು ಕ್ಷೇತ್ರಗಳಿಗೆ ಬಜೆಟ್‍ನಲ್ಲಿ ಮೀಸಲಾಗಿಟ್ಟಿರುವ ಮೊತ್ತವನ್ನು ಗಮನಿಸಿದಾಗ ಸರ್ಕಾರದ ನಿಲುವುಗಳನ್ನು ಗ್ರಹಿಸುವುದು ಸುಲಭ ಸಾಧ್ಯ. ವರ್ಷ ವರ್ಷವೂ ಹಿಗ್ಗುತ್ತಿರುವ ಬಜೆಟ್ ಗಾತ್ರದ ಜೊತೆಗೆ ಏರುತ್ತಿರುವ ಬೆಲೆಗಳು, ಹೆಚ್ಚುತ್ತಿರುವ ಖರ್ಚುಗಳ ಹಿನ್ನೆಲೆಯಲ್ಲಿ […]

ಲಹರಿ

ಗುಬ್ಬಿಯ ಅಳಲು ತಾರಾ ಸತ್ಯನಾರಾಯಣ “ಗುಬ್ಬಿಯ ಅಳಲು”                ನನ್ನ ಸಂಸಾರದ ಹೊಟ್ಟೆ ತುಂಬಿಸಲು ನಾನು ದೂರ ಬಹುದೂರ ಬಂದರೂ ……ಎಲ್ಲಿಯೂ ನನಗೆ ಹಣ್ಣುಗಳಿರುವ ಮರಗಳೇ ಕಾಣುತ್ತಿಲ್ಲ.ಎಲ್ಲಿ ನೋಡಿದರೂ ಬರೀ ಕಟ್ಟಡ ಕೆಲವಂತೂ ಗಗನಚುಂಬಿ ಕಟ್ಟಡಗಳು ಕೆಳಗಡೆ ನೋಡಿದರೆ ಟಾರಿನ ರಸ್ತೆಗಳು ಹೋಗಲಿ ಮನೆಗಳಿರುವ ಕಡೆಯೇ ಹೋಗೋಣವೆಂದರೆ ಅಲ್ಲೂ ಕೂಡ ಮನೆಯ ಸುತ್ತ ಮುತ್ತ ಸಿಮೆಂಟಿನಿಂದ ಕೂಡಿದ ನೆಲ. ಮನೆಯ ಮುಂಭಾಗದಲ್ಲಿ ಮನೆಯ ಹಿಂಭಾಗದಲ್ಲಿ ಗಿಡಮರಗಳಿಲ್ಲ. ಎರಡು  ಮೂರು […]

ಹಾಸ್ಯಲೋಕ

ನಾಯಿ ಬೇಕಾ ನಾಯಿ! ತಾರಾ ಸತ್ಯನಾರಾಯಣ ನಾಯಿ ಬೇಕಾ ನಾಯಿ! ನನ್ನ ನಾಲ್ಕು ವರ್ಷದ ಮಗಳು ಸೋನುಗೆ ನಾಯಿ ಕಂಡರೆ ತುಂಬಾ ಇಷ್ಟ.ಎಲ್ಲೇ ಹೋಗ್ತಾ ಇದ್ದರೂ……… ಬೀದಿ ನಲ್ಲಿ ಯಾವ ನಾಯಿ ನೋಡಿದರೂ……. .ನೋಡುತ್ತಾ ನಿಂತುಬಿಡುತ್ತಿದ್ದಳು.ಆ ಸ್ಥಳದಲ್ಲೇ ನಂಗೂ ನಾಯಿಮರಿಬೇಕು ತಂದುಕೊಡು ಅಂತ ಹಠ ಮಾಡುತ್ತಿದ್ದಳು. ಇವಳ ಜೊತೆ ನನ್ನ ಹೆಂಡತಿ ಬೇರೆ, “ನೋಡಿ ಮಗು ನಾಯಿಮರಿ ಬೇಕು ಅಂತ ಎಷ್ಟು ಹಠ ಮಾಡುತ್ತಾಳೆ ಅವಳ ಜೊತೆಗೆ ಒಂದು ನಾಯಿಮರಿ ಇದ್ದರೆ ಅವಳ ಪಾಡಿಗೆ ಅವಳು ಆಟ […]

ಪ್ರಸ್ತುತ

ನಿರುದ್ಯೋಗದ ವಿರುದ್ದ ಹೋರಾಟ ಗಣೇಶಭಟ್ ಶಿರಸಿ ನಿರುದ್ಯೋಗದ ವಿರುದ್ಧ ಹೋರಾಟ….. ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚುತ್ತಿದೆ, ಹೊಸ ಉದ್ಯೋಗಗಳು ಸೃಷ್ಟಿಯಾಗುತ್ತಿಲ್ಲ, ಉದ್ಯಮಗಳು ಮುಚ್ಚುತ್ತಿರುವುದರಿಂದ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ಏರುತ್ತಿದೆಯೆಂಬುದನ್ನು ಹಲವು ವರದಿಗಳು ಹೇಳುತ್ತಿವೆ. ಆರ್ಥಿಕ ಹಿಂಜರಿತ ಉಂಟಾಗಿರುವುದೇ ಇದಕ್ಕೆ ಕಾರಣವೆಂದು ತಜ್ಞರು ಹೇಳುತ್ತಾರೆ. ನಿರುದ್ಯೋಗ ಸಮಸ್ಯೆಗೆ ಸೂಕ್ತ ಪರಿಹಾರ ಹುಡುಕುವ ಬದಲಿಗೆ, ರಾಜಕೀಯ ಪಕ್ಷಗಳ ಪರಸ್ಪರ ಕೆಸರೆರಚಾಟ ನಡೆದಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿಯೊಬ್ಬರು ನಿರುದ್ಯೋಗದ ವಿರುದ್ಧ ಹೋರಾಟ ಮಾಡುವುದಾಗಿ ಘೋಷಣೆ ಮಾಡಿ ನಿರ್ದಿಷ್ಟ ಮೊಬೈಲ್ ಸಂಖ್ಯೆಗೆ ಕರೆಮಾಡಿ […]

Back To Top