Category: ಇತರೆ

ಇತರೆ

ಆರೋಗ್ಯದ ಬಗ್ಗೆ ಕಾಳಜಿ ಇರಲಿ

ಅನುಭವ ಆರೋಗ್ಯದ ಬಗ್ಗೆ ಕಾಳಜಿ ಇರಲಿ ಚಂದ್ರಮತಿ ಅದೊಂದು ಸಂಜೆ ! ಸಹಿಸಲಾರದ ವೇದನೆ ಆತಂಕ .ಬಲಹೀನ ತೋಳುಗಳು . ಏನಾಯ್ತು , ಹೇಗಾಯ್ತು ಮುಂದೆ ನಾನು  ಕೆಲಸ ಮಾಡೋದು ಹೇಗೆ  ಎಂದೆಲ್ಲ ಯೋಚಿಸ್ತಾ ಸಮಯ ವ್ಯರ್ಥಮಾಡಿ ಸಹಿಸಿಕೊಳ್ಳಲು ಅಸಾಧ್ಯ ವಾದಾಗ ಮೊರೆ ಹೋಗಿದ್ದು ಗೂಗಲ್ ಮಹಾಶಯನನ್ನು . ಅವನ ಸಲಹೆಯಂತೆ ಮನೆಯ ಸನಿಹದಲ್ಲೇ ಇರುವ ರೂಪೇಶ್ ಆರ್ಥೋಪೆಡಿಕ್ ಸೆಂಟರ್ಗೆ ಬೇಟಿ ಕೊಟ್ಟಾಗ ಅಲ್ಲಿಯ ಡಾ. ರೂಪೇಶ್ ಅವರು ಸರಳ ಮಾತು ಹಾಗೂ ಸೌಜನ್ಯತೆಯಿಂದ ಸರಿಯಾದ ಚಿಕಿತ್ಸೆ […]

ಲಂಕೇಶ್ ವಿಶೇಷ ಲಂಕೇಶ್ ಪತ್ರಿಕೆಯ ಪ್ರಭಾವ ಚಂದ್ರಪ್ರಭ  ಎಂಭತ್ತರ ದಶಕದ ದಿನಗಳವು. ನಾವೆಲ್ಲ ಮಾಧ್ಯಮಿಕ ಶಾಲಾ ಶಿಕ್ಷಣದ ಹಂತದಲ್ಲಿದ್ದ ಸಮಯ. ಅಪ್ಪನ ಪುಸ್ತಕ ಪ್ರೇಮದಿಂದಾಗಿ ಸಹಜವಾಗಿ ನಾವೆಲ್ಲ ಮಕ್ಕಳು ಆ ಪ್ರಭಾವಕ್ಕೆ ಒಳಗಾಗಿದ್ದ ಸಂದರ್ಭ. ಚಂದಮಾಮ,  ಸುಧಾ ಪತ್ರಿಕೆಗಳು ನಿಯಮಿತವಾಗಿ ಓದಿಗೆ ಸಿಗ್ತಿದ್ದುವು. ಜೊತೆಗೆ ನಿತ್ಯ ಸಂಗಾತಿ ಪ್ರಜಾವಾಣಿ. ಲಂಕೇಶ್ ಪತ್ರಿಕೆ ಎಂಬ ಹೊಸ ಪತ್ರಿಕೆಯೊಂದು ಮನೆ ಪ್ರವೇಶಿಸಿತು. ಅಷ್ಟೇ ಸಲೀಸಾಗಿ ಮನಸ್ಸನ್ನೂ ಪ್ರವೇಶಿಸಿತು. ಮುಖ್ಯವಾಗಿ ಜಾಹೀರಾತುಗಳೇ ಇಲ್ಲದ ಹೊಸ ವಿನ್ಯಾಸ, ಆಕರ್ಷಕ ಶೀರ್ಷಿಕೆಗಳು ಪತ್ರಿಕೆಯ ವೈಶಿಷ್ಟ್ಯವಾಗಿದ್ದವು. […]

ದತ್ತಿ ಪ್ರಶಸ್ತಿವಿಜೇತರು

ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪಡೆದ ಸಂಗಾತಿಯ ಬರಹಗಾರರು ವಿಶಾಲಾ ಆರಾಧ್ಯ ಕನ್ನಡ ಸಾಹಿತ್ಯ ಪರಿಷತ್ತಿನ‘ವಸುದೇವ ಭೂಪಾಲಂ’ ದತ್ತಿ ಪ್ರಶಸ್ತಿ ಬೊಂಬಾಯಿ ಮಿಠಾಯಿಮಕ್ಕಳ ಕವಿತೆಗಳು ವಿಭಾ ಪುರೋಹಿತ್ ರತ್ನಾಕರವರ್ಣಿ ಮುದ್ದಣ ಅನಾಮಿಕ ದತ್ತಿ ಪ್ರಶಸ್ತಿ. ಕಲ್ಲೆದೆ ಬಿರಿದಾಗ ( ಕವನಸಂಕಲನ ಹೆಸರು ಎನ್ ಆರ್ ರೂಪಶ್ರೀ ದತ್ತಿನಿಧಿ ಪ್ರಶಸ್ತಿಶ್ರೀಮತಿ ಶಾರದಾ ರಾಮಲಿಂಗಪ್ಪ ದತ್ತಿನಿಧಿ ಪ್ರಶಸ್ತಿ. ಪುಸ್ತಕದ ಹೆಸರುನಿನ್ನ ಪ್ರೀತಿಯ ನೆರಳಿನಲ್ಲಿ

ನಾದಬೇಕು …ನಾದ ಬೇಕು !!

ರಶ್ಮಿ ಬರೆಯುತ್ತಾರೆ
ಈಗ ಅಡಗಿ ಮಾಡೂದೆ ಒಂದು ಸಮಯ ನಿರ್ವಹಣೆಯ ತಂತ್ರ ಆಗಿ ಬದಲಾಗೇದ. ಅಡಗಿ ಮಾಡೋರಿಗೂ ವ್ಯವಧಾನ ಇಲ್ಲ. ಊಟ ಅಸ್ವಾದಿಸೋರಿಗೂ ಇಲ್ಲ. ಅಡಗಿ ಮಾಡೂದು ಬರೂದಿಲ್ಲ ಅಂತ ಹೇಳೂದೆ ನಾಜೂಕಿನ ಮಾತಾಗೇದ

ಒಕ್ಕಲುತನ

ಇನ್ನ ಕಬ್ಬ ಸುಲದು ರಸಾ ಹೀರೂದು ನಮ್ ಜನಕ್ಕೆ ಭಾರೀ ಸಲೀಸು. ಒಂದ ಕೈಯಾಗ ಸೈಕಲ್ ಹಿಡದು ಮತ್ತೊಂದ ಕೈಯಾಗ ಕಬ್ಬ ತಿನಕೋತ ಹೋಗವರನ್ನ ನೀವು ಎಲ್ಲೆಲ್ಲೂ ನೋಡಬಹುದು.

ಪರಿವರ್ತನೆಗೆ ದಾರಿ ಯಾವುದಾದರೇನು?

ಲಲಿತ ಪ್ರಬಂಧ ಪರಿವರ್ತನೆಗೆ ದಾರಿ ಯಾವುದಾದರೇನು? ನಾಗರೇಖಾ ಗಾಂವಕರ್ ಹೊಸ ಸುತ್ತೋಲೆಯಂತೆ ಪದವಿ-ಪೂರ್ವ ಹಂತಕ್ಕೂ ಪ್ರಾರ್ಥನೆಯನ್ನು ಕಡ್ಡಾಯಗೊಳಿಸಿ ಇಲಾಖೆ ಆದೇಶ ಹೊರಡಿಸಿದ್ದು ಪಡ್ಡೆ ಹುಡುಗರಿಗೆ ಕೊಂಚವೂ ಇಷ್ಟವಿಲ್ಲ. ಆಗಾಗ ಆ ಬಗ್ಗೆ ತಕರಾರು ಮಾಡುವ ಗುಂಪು ಇದ್ದೇ ಇತ್ತು. ಆದರೂ ಪ್ರಾಚಾರ್ಯರು ಅದಕ್ಕೆಲ್ಲ ಅವಕಾಶ ಕೊಡದೆ ಕಡ್ಡಾಯ ಎಂದು ನೋಟೀಸು ತೆಗೆದು ಒತ್ತಡ ಹೇರಿದ್ದರು. ಹಾಗಾಗಿ  ವಿದ್ಯಾರ್ಥಿಗಳು  ಪ್ರಾರ್ಥನೆಗೆ ಹಾಜರಾಗುವುದು ಅನಿವಾರ್ಯವಾಗಿತ್ತು. ವಾಣಿಜ್ಯ ವಿಭಾಗದ ಆ ತರಗತಿಯಲ್ಲಿ ಇರುವುದು ಬರಿಯ ಇಪ್ಪತೆಂಟು ವಿದ್ಯಾರ್ಥಿಗಳು  ಮಾತ್ರ. ಉಳಿದೆಲ್ಲ ಮಕ್ಕಳು […]

ಅಂಕಣ ಬರಹ ಕಗ್ಗಗಳ ಲೋಕ ಆದರಣೀಯ ಡಾII ಡಿ. ವಿ. ಗುಂಡಪ್ಪನವರು ರಚಿಸಿದ ‘ಮಂಕುತಿಮ್ಮನ ಕಗ್ಗ’ ಒಂದು ಮೇರುಕೃತಿ. ಅವರ ಒಂದೊಂದು ಮುಕ್ತಕವೂ ಕೂಡ ಸಾರ್ವಕಾಲಿಕ ಸತ್ಯ! ಜೀವನದಲ್ಲಿ ಎದುರಾಗುವ ಸಾವಿರಾರು ಪ್ರಶ್ನೆಗಳಿಗೆ ತತ್ವಶಾಸ್ತ್ರ,ಸ್ವಾನುಭವ ಮತ್ತು ಆಧ್ಯಾತ್ಮದ ಹಿನ್ನೆಲೆಯಲ್ಲಿ ಉತ್ತರ ನೀಡುವ ಕಗ್ಗಗಳು ಓದುಗರಿಗೆ ಆಪ್ತವಾಗಿ ಬಿಡುತ್ತವೆ. ಒಬ್ಬ ಸಾಮಾನ್ಯ ಮನುಷ್ಯನಂತೆ ಮೈತ್ರಿಭಾವದಿಂದ ಬರೆದ ಈ ಕಗ್ಗಗಳು ಅಸಂಖ್ಯ ಮಂದಿಗೆ ಸಾಂತ್ವನ ನೀಡುತ್ತವೆ. “ಎಲ್ಲದರಲ್ಲೂ, ಎಲ್ಲರಲ್ಲೂ ಒಳ್ಳೆಯದನ್ನೇ ಕಂಡು , ಜೀವನದ ಸೊಬಗನ್ನು ಸವಿಯಬೇಕು” ಎಂದು ದಾರಿತೋರುವ […]

ಪಿ.ಲಂಕೇಶ್ ಎಂಬ ‘ಹುಳಿಮಾವಿನ ಮರ’..!

ಲಂಕೇಶ್ ವಿಶೇಷ ಪಿ.ಲಂಕೇಶ್ ಎಂಬ ‘ಹುಳಿಮಾವಿನ ಮರ’..! ಪಿ. ಲಂಕೇಶ್ ಅವರು ಕನ್ನಡ ಸಾಹಿತ್ಯದ ಪ್ರಮುಖ ಲೇಖಕರಲ್ಲಿ ಒಬ್ಬರು. ಪತ್ರಕರ್ತ-ಸಾಹಿತಿಯಾಗಿ ಜನಪ್ರಿಯರಾಗಿರುವ ಪಾಳ್ಯದ ಲಂಕೇಶ್ ಅವರ ಬದುಕು-ಬರಹ ವೈವಿಧ್ಯದಿಂದ ಕೂಡಿದೆ. ಕವಿಯಾಗಿ, ಕಥೆಗಾರನಾಗಿ, ಕಾದಂಬರಿಕಾರನಾಗಿ, ಅನುವಾದಕನಾಗಿ, ನಾಟಕಕಾರನಾಗಿ, ನಟನಾಗಿ, ಚಲನಚಿತ್ರ ನಿರ್ದೇಶಕನಾಗಿ, ವಾರಪತ್ರಿಕೆ ಲಂಕೇಶ್ ಸಂಪಾದಕನಾಗಿ, ಕೃಷಿಕನಾಗಿಯೂ ಪ್ರಸಿದ್ಧನಾಗಿ ಹೆಸರು ಮಾಡಿದವರು ಪಿ.ಲಂಕೇಶ್ ಅವರು. ಹೀಗೆಯೇ ಅವರ ಪ್ರತಿಭೆಗೆ ಹಲವು ಮುಖ. ಕೆಲಸ ಮಾಡಿದ ಕ್ಷೇತ್ರದಲ್ಲೆಲ್ಲ ತನ್ನದೇ ಛಾಪು ಮೂಡಿಸಿದವರು   ಪಿ.ಲಂಕೇಶ್. ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ತಾಲೂಕಿನ […]

ಕಾಡುಗೊಲ್ಲ ಮತ್ತು ತೋಡ ಜನಾಂಗದ ಗುಡಿಸಲಿನಲ್ಲಿ ಸಾಮ್ಯತೆ

ಬುಡಕಟ್ಟು ಜನಾಂಗದ ಬಗ್ಗೆ ಬೆಳಕು ಚೆಲ್ಲುವ ಲೇಖನ ಕಾಡುಗೊಲ್ಲ ಮತ್ತು ತೋಡ ಜನಾಂಗದ ಗುಡಿಸಲಿನಲ್ಲಿ ಸಾಮ್ಯತೆ ಆಶಾ ಸಿದ್ದಲಿಂಗಯ್ಯ ಕಾಡುಗೊಲ್ಲ ಬುಡಕಟ್ಟು ಜನಾಂಗವು ತುಮಕೂರು, ಮತ್ತು ಚಿತ್ರದುರ್ಗ,ಜಿಲ್ಲೆಯಲ್ಲಿ ಹೆಚ್ಚಾಗಿ ನೆಲೆಗೊಂಡಿದ್ದಾರೆ ಉಳಿದಂತೆ   ದಾವಣಗೆರೆ, ಬಳ್ಳಾರಿ ಗಡಿಭಾಗ  ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ , ರಾಮನಗರ  , ಮಂಡ್ಯ, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಂಗಳೂರು ಜಿಲ್ಲೆಯಲ್ಲಿ  ವಿರಳವಾಗಿ ಕಾಣಸಿಗುತ್ತಾರೆ. ಒಟ್ಟಾರೆ ಕರ್ನಾಟಕದಲ್ಲಿ ಇವರ ಜನಸಂಖ್ಯೆ ಹತ್ತು ಲಕ್ಷ ಇದೆ. ಕಾಡುಗೊಲ್ಲರನ್ನು ಮುನ್ನೆಲೆಗೆ ತರಲು  ಮತ್ತು ಸರ್ಕಾರ ಅವರನ್ನು ಗುರುತಿಸಲು […]

Back To Top