Category: ಇತರೆ

ಇತರೆ

ಅವಳ ಬದುಕಿನ ಪುಟಗಳಲ್ಲೊಂದು ಇಣುಕು…

ವಾರದ ಕಥೆ ಅವಳ ಬದುಕಿನ ಪುಟಗಳಲ್ಲೊಂದು ಇಣುಕು… ಟಿ.ಎಸ್.ಶ್ರವಣಕುಮಾರಿ ಆರನೆಯ ನಂಬರಿನ ಡಬಲ್‌ ಡೆಕರ್‌ ಬಸ್‌ ಹೊರಡುತ್ತಿದ್ದುದು ಜಯನಗರ ನಾಲ್ಕನೇ ಬ್ಲಾಕಿನ ಬಸ್‌ ಸ್ಟಾಪಿನಿಂದ. 9.30ಕ್ಕೆ ನಿಲ್ದಾಣಕ್ಕೆ ಬರುವ ಬಸ್ಸು 9.40ಕ್ಕೆ ಸರಿಯಾಗಿ ಅಲ್ಲಿಂದ ಹೊರಟು ಶಿವಾಜಿನಗರಕ್ಕೆ ಹೋಗುತ್ತಿದ್ದ ಆ ಬಸ್ಸಿಗೆ ವೀಣಾ ದಿನನಿತ್ಯದ ಪಯಣಿಗಳು. ಸ್ಟ್ಯಾಂಡಿಗ್‌ ಸೀಟಿನ ಕಚಿಪಿಚಿ ಇರುವುದಿಲ್ಲವಾದ್ದರಿಂದ ಅವಳಿಗೆ ಮಹಡಿಯೇ ಹಿತವೆನ್ನಿಸುತ್ತಿತ್ತು. ಬಸ್‌ ಹತ್ತಿದ ತಕ್ಷಣ ಮಹಡಿಯನ್ನೇರಿ ಮುಂದಿನಿಂದ ಎಡಭಾಗದ ಮೂರನೆಯ ಸೀಟಿನ ಕಿಟಕಿಯ ಬಳಿ ಖಾಯಮ್ಮಾಗಿ ಕುಳಿತು ಟಿಕೇಟು ಪಡೆದುಕೊಂಡ ತಕ್ಷಣವೇ, […]

ಗಜಲ್ ತೇಜಾವತಿ ಹೆಚ್.ಡಿ. ಅನುಭವಿಸುವಿಯಾದರೆ ನನ್ನೆಲ್ಲಾ ನೋವುಗಳೂ ನಿನ್ನರಸಿ ಬಳಿಬರುವವು ಸಖದೂಷಿಸುವಿಯಾದರೆ ನನ್ನೊಲವಿನ ಕ್ಷಣಗಳೂ ನಿನ್ನನ್ನು ತೊರೆದೋಡುವವವು ಸಖ ರಕ್ಷಿಸುವಿಯಾದರೆ ನಿನ್ನ ತೋಳ್ತೆಕ್ಕೆಯಲಿ ಅಲುಗಾಡದೆ ಸ್ತಬ್ಧವಾಗಿರುವೆನುಭಕ್ಷಿಸುವಿಯಾದರೆ ನನ್ನಿರುವಿಕೆಯ ಸುಳಿವುಗಳೂ ಹಿಂಬಾಲಿಸದಿರುವವು ಸಖ ಪೂಜಿಸುವೆಯಾದರೆ ಪಯಣದುದ್ದಕ್ಕೂ ನಿನ್ನಡಿಗಳಿಗೆ ಮೆಟ್ಟಿಲಾಗಿ ನಿಲ್ಲುವೆನುಧಿಕ್ಕರಿಸುವಿಯಾದರೆ ನನ್ನಡಿಯ ಧೂಳು ಕಣಗಳೂ ಸೋಕದಿರುವವು ಸಖ ಗೌರವಿಸುವಿಯಾದರೆ ಮನದ ಮೂಲೆಯಾದರೂ ಸಾಕು ಅಸ್ತಿತ್ವಕ್ಕೆಅವಮಾನಿಸುವಿಯಾದರೆ ನೆನಪುಗಳು ಹೃದಯದಿಂದಲೇ ಬೇರುಸಹಿತ ಕಿತ್ತೊಗೆಯುವವು ಸಖ ಪ್ರೇಮಿಸುವಿಯಾದರೆ ನೂರು ದಿನದ ಬದುಕು ಮೂರೇ ಕ್ಷಣವಾದರೂ ತೃಪ್ತಿ ‘ತೇಜ’ದ್ವೇಷಿಸುವಿಯಾದರೆ ಸಹಸ್ರ ವರ್ಷಗಳೂ ಕೂಡ ಸಂಕೋಲೆಯ […]

ಗಜಲ್ ಪ್ರತಿಮಾ ಕೋಮಾರ ವೈಷಮ್ಯದ ಮನಸುಗಳ ಪ್ರೀತಿಯ ಮಾತಿನಿಂದ ಸೆಳೆಯಬೇಕು ನಾವುಒಡೆದ ಕನಸುಗಳ ಬೆಳಕಿನ ದೀಪವಿಟ್ಟು ಹೊಸೆಯಬೇಕು ನಾವು ತಾಳ್ಮೆಯಿಲ್ಲದ ಬದುಕು ಸರಿಯ ದಡ ಸೇರುವುದೇ?ವೃಕ್ಷದ ಫಲ ಹಣ್ಣಾಗಿ ಮಾಗುವವರೆಗೆ ಕಾಯಬೇಕು ನಾವು ಸುಖ ದುಃಖಗಳು ಎಲ್ಲರ ಜೀವನದ ಇಬ್ಬದಿಗಳುನೋವ ಕಂಗಳ ಸಾಂತ್ವನದ ಹಾಡಿನಿಂದ ನಗಿಸಬೇಕು ನಾವು ಸಾಧನೆಯ ಹಾದಿಯಲಿ ಮಲ್ಲಿಗೆಯ ಹಾಸಿರದು ಎಂದಿಗೂಎಡರು ತೊಡರುಗಳನ್ನು ಹಠದಿಂದ ಮೀರಿ ಜಯಿಸಬೇಕು ನಾವು ಹುಟ್ಟಿದ ಎಲ್ಲಾ ಜೀವಿಗಳು ಬಾಳ ಸವೆಸಿ ಹೋಗುವುವುಬಾಡಿದ “ಪ್ರತಿ “ಬದುಕ ಮಾಣಿಕ್ಯವಾಗಿಸಲು ಪ್ರಯತ್ನಿಸಬೇಕು ನಾವು […]

ಗಜಲ್ ಸ್ಮಿತಾ ಭಟ್ ಎದೆಯ ಮಾತುಗಳು ಮೊರೆಯುತ್ತಿದೆ ನನಗೂ ನಿನಗೂ/ಅಂತರಂಗದ ಆಹ್ವಾನ ಹಿತನೀಡುತ್ತಿದೆ ನನಗೂ ನಿನಗೂ/ ಕಣ್ಣ ಗೊಳದಲಿ ನೂರಾರು ಕನಸುಗಳ ಚಲನವಲನನಭವ ತೋರಿಸಿ ಹಗುರಾಗಬೇಕಿದೆ ನನಗೂ ನಿನಗೂ/ ಆತುಕೊಂಡೇ ಬದುಕುವ ಹಂಬಲ ಕೆರಳುತ್ತದೆ ಕೆಲವೊಮ್ಮೆಸಾಕೆಂದು ಸರಿಸದೆ ಒಳಗೊಳ್ಳುವುದಿದೆ ನನಗೂ ನಿನಗೂ/ ಮೋಹದ ಸೆಳೆತಕೆ ಮನಸೋತ ವಾಂಛೆಯಲ್ಲವಿದು ಗೆಳೆಯಾಈಗಷ್ಟೇ ಹನಿಯಾಗಿದ್ದೇನೆ ಕಡಲಾಗುವುದಿದೆ ನನಗೂ ನಿನಗೂ/ ಪಯಣದ ತಿರುವುಗಳಿಗೆ ಹೆಸರಲಿಗೆಯ ಹಂಗೇಕೆ ದೊರೆಯೇಮರೆಯದೇ ಸರಿ ದಾರಿಯಲಿ ಕೂಡುವುದಿದೆ ನನಗೂ ನಿನಗೂ/ ಮೌನವಾಗಿದ್ದೇ ಮುನ್ನುಡಿ ಬರೆದಾಗಿದೆ ಬದುಕಿಗೆ ಓದಿ ಬಿಡುಇಲ್ಲಬಿಡು […]

ಗಜಲ್ ಪ್ರಭಾವತಿ ಎಸ್ ದೇಸಾಯಿ ವಿರಹದುರಿಗೆ ಜೀವವು ಪತಂಗದಂತೆ ಸುಟ್ಟು ಶವವಾಗಲಿ ರಾತ್ರಿಕಂಡ ಕನಸ ಹೂ ದಳಗಳು ಉದುರಿ ಉಸಿರು ಸಮಾಧಿಯಾಗಲಿ ರಾತ್ರಿ ಎದೆಭಾರವಾಗಿದೆ ನೆನಪಿನ ಗಂಟು ಹೊತ್ತು ಬಂಡಿ ಸಾಗಲಿ ರಾತ್ರಿಬದುಕು ಹಗುರಾಗಲು ಬೆಂದು ಉರಿವ ದೇಹಕೆ ತಂಬೆಳಕಾಗಲಿ ರಾತ್ರಿ ದಣಿದ ಕಣ್ಣ ರೆಪ್ಪೆಗಳು ನಿಂತು ನಿದ್ದೆಗೆ ಬೇಲಿಯಾಗಲಿ ರಾತ್ರಿಮಧುರ ಗಳಿಗೆಗಳ ಕಾಯುವ ಹೃದಯಗಳು ಒಲಿದು ಒಂದಾಗಲಿ ರಾತ್ರಿ ಮನದಾಳದಲ್ಲಿ ಎದ್ದ ಪ್ರಶ್ನೆಗಳಿಗೆ ಉತ್ತರವಾಗಲಿ ರಾತ್ರಿನೊಂದ ಜೀವಿಗಳಿಗೆ ಜಗದ ಎಲ್ಲ ಸುಖವು ಅನುಭವವಾಗಲಿ ರಾತ್ರಿ ಅಗಲಿಕೆ […]

ಗಜಲ್ ಮದುಶಾಲೆಯ ಹೊಸ್ತಿಲಲ್ಲಿ…

ವಿಶೇಷ ಲೇಖನ ಗಜಲ್ ಮದುಶಾಲೆಯ ಹೊಸ್ತಿಲಲ್ಲಿ… ಡಾ. ಮಲ್ಲಿನಾಥ ಎಸ್. ತಳವಾರ        ಪ್ರೀತಿಯೇ ಈ ಜಗದ ಸುಂದರ ಬುನಾದಿ. ಎಲ್ಲ ಚಟುವಟಿಕೆಗಳಿಗೆ ಹೃದಯ ಬಡಿತದ ಪಿಸುಮಾತೆ ಕಾರಣ. ಸ್ಪರ್ಶಕ್ಕೂ ಎಟುಕದ ಅನುಭವಗಳೆಲ್ಲವನ್ನು ಕಟ್ಟಿಕೊಡುವುದೆ ಸಾಹಿತ್ಯ. ಆ ಸಾಹಿತ್ಯದ ಸಸಿಗೆ ನಮ್ಮ ಭಾವನೆಗಳೆ ವರ್ಷಧಾರೆ..!! ಭಾವಗಳ ಸಂಗಮವೇ ಆ ಅಕ್ಷರ ಅಕ್ಷಯ ಪಾತ್ರೆ. ಸುಂದರ ಸಮಾಜದ ಪ್ರತಿಬಿಂಬವನ್ನು ಪ್ರತಿನಿಧಿಸುವ ದರ್ಪಣವೇ‌ ಈ ಅಕ್ಷರ ಲೋಕ..!! ಇದೊಂದು ಭಾವನೆಗಳ ಕಲ್ಪನಾತ್ಮಕ ಪರಪಂಚ. ಇದು ಕ್ರಿಯಾಶೀಲತೆ, ಭಾಷೆ, ವರ್ಣಗಳು ಮತ್ತು […]

ಬದುಕು ಎಷ್ಟೊಂದು ಸುಂದರ

ಲೇಖನ ಚಿಕ್ಕ ಪುಟ್ಟ ಸಂಗತಿಗಳಲ್ಲೇ ಸಂತೃಪ್ತಿ ಕಾಣುತ್ತಿರಿ ಆಗ ಬದುಕು ಎಷ್ಟೊಂದು ಸುಂದರ. ಪಲ್ಲವಿ ಪ್ರಸನ್ನ ಬೆಳಗಾಗಲೆoದೆ ಕತ್ತಲು ,ಗೆಲ್ಲಲೆoದೆ ಸೋಲು,ನಗುವಿನ ಜೊತೆ ದುಃಖ ಇದ್ದೇ ಇರುತ್ತದೆ ,ಅದರೂ ಚಿಕ್ಕ ಪುಟ್ಟ ಸಂಗತಿಗಳಲ್ಲೇ ನಾವು ಆನಂದ ಅನುಭವಿಸುತ್ತೇವಲ್ಲ ಅದು ನಮಗೆ ಅಪ್ಪಟ ಆರೋಗ್ಯ ,ಉಲ್ಲಾಸಿತರಾಗಿಡಲು ಸಹಾಯಮಾಡುತ್ತದೆ. ತಲೆ ಬಾಚಿಕೊಳ್ಳುವಾಗ ಉದುರಿದ ಕೂದಲ ಬಗ್ಗೆ  ಕೊರಗದೇ ಇದ್ದ ಕೂದಲನ್ನು ನೇವರಿಸುತ್ತ ಅದರ ಆರೈಕೆಯಲಿ ಮಗ್ನವಾಗಿ ಖುಷಿ ಅನುಭವಿಸಬೇಕು. ಒಂದು ಒಳ್ಳೆ ಪುಸ್ತಕವನ್ನು ಓದುವಾಗ ಅದರ ಇಂಚಿಂಚೂ ,ಪ್ರತೀ ಸಾಲನ್ನೂ […]

ಬೀದಿಯ ಪ್ರಪಂಚ….

ಲಲಿತ ಪ್ರಬಂಧ ಬೀದಿಯ ಪ್ರಪಂಚ…. ಟಿ.ಎಸ್.ಶ್ರವಣಕುಮಾರಿ ಹಾದಿ ಬೀದಿಗಳಿಗೆ ತನ್ನದೇ ಒಂದು ಆಕರ್ಷಣೆಯಿದೆ. ಅದರದ್ದೇ ಒಂದು ಪ್ರಪಂಚ. ಎಂಥ ಅಳುತ್ತಿರುವ ಪುಟ್ಟ ಮಕ್ಕಳನ್ನೂ ಎತ್ತಿಕೊಂಡು ಬೀದಿಗೆ ಕರೆದುಕೊಂಡು ಬಂದರೆ ಕೆಲವೇ ಕ್ಷಣಗಳಲ್ಲಿ ಅವುಗಳ ಅಳು ಮಾಯ. ಅವುಗಳಿಗೆ ತೋರಿಸುವುದಕ್ಕೆ ಇಡಿಯ ಪ್ರಪಂಚವೇ ಅಲ್ಲಿದೆ. “ಪುಟ್ಟೂ ಅಲ್ನೋಡು ಕಾರು.. ಬಂತು ಬಂತು ಬಂತು…. ಈಗ ಸ್ಕೂಟರ್ ನೋಡೋಣ.. ಮಾಮಾ ಬಂದ್ಮೇಲೆ ಸ್ಕೂಟರ್‌ನಲ್ಲಿ ರೌಂಡ್ ಹೋಗ್ತೀಯಾ…  ಇದೇನಿದು..? ಸ್ಕೂಲು ವ್ಯಾನು.. ಮುಂದಿನ್ವರ್ಷದಿಂದ ನೀನೂ ಸ್ಕೂಲಿಗೆ ಹೋಗ್ತೀಯಾ ಅಣ್ಣಾ ತರ…. ಇಲ್ನೋಡು […]

ಸಮಾಜ ಕಟ್ಟುವಲ್ಲಿ ಸಾಹಿತ್ಯದ ಪಾತ್ರ

ಲೇಖನ ಸಮಾಜ ಕಟ್ಟುವಲ್ಲಿ ಸಾಹಿತ್ಯದ ಪಾತ್ರ ಶಿವರಾಜ್ ಮೋತಿ ಸಮಾಜವೆಂದರೆ ಜನ,ಗುಂಪು ಎಂದರ್ಥವಾಗುತ್ತದೆ. ವಿಧವಿಧವಾದ ಜನ,ಅನೇಕ ಗುಂಪುಗಳು ಇರುತ್ತವೆ. ಆದರೆ ಇಂದಿನ ಸಮಾಜ ಮೂಲಭೂತವಾದಿ,ಡೊಂಗಿ ರಾಜಕಾರಣಿಗಳ ಕೈಗೆ ಸಿಕ್ಕು ವಿಲ-ವಿಲವಾಗಿ ಬಿದ್ದು ನರಳಾಡುತ್ತಿದೆ. ಸಮಾಜದಲ್ಲಿದ್ದ ನೂನ್ಯತೆಗಳನ್ನು ಸರಿಪಡಿಸಲು,ಸಮ ಸಮಾಜದ ಕನಸನ್ನು ಕಟ್ಟಲು ಹಲವಾರು ಮಾರ್ಗಗಳಿವೆ. ಅದರಲ್ಲೂ ವಿಶೇಷವಾಗಿ ಸಾಹಿತ್ಯವೂ ಒಂದು.ಸಾಹಿತ್ಯದಲ್ಲಿ ಹಲವಾರು ಪ್ರಕಾರಗಳು ಜನಪದ, ಜಾನಪದ,ಪುರಾಣ,ನಾಟಕ,ಕಲೆ, ಸಂಗೀತ ಮುಂತಾದವೆಲ್ಲವೂ ಒಂದಕ್ಕೊಂದು ಸಂಬಂಧವಿದ್ದೆ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಕಟ್ಟಲು ಅನೇಕ ಮಹನೀಯರು,ಶ್ರಮಿಸಿದ್ದಾರೆ,ಶ್ರಮಿಸುತ್ತಿದ್ದಾರೆ ಕೂಡ ಹೌದು.ಸಾಹಿತ್ಯವು ಒಡೆದ ಮನಸ್ಸುಗಳನ್ನು […]

ಹೋಳಿ ಹಬ್ಬದಲ್ಲಿ ಹಕ್ಕಿಪುಕ್ಕ!

ಅನುಭವ ಕಥನ  ಹೋಳಿ ಹಬ್ಬದಲ್ಲಿ ಹಕ್ಕಿಪುಕ್ಕ! ವಿಜಯಶ್ರೀ ಹಾಲಾಡಿ ಹೋಳಿಹಬ್ಬ ಬರುವುದು ಬೇಸಗೆಯ ವಸಂತಮಾಸದಲ್ಲಿ… ಅಂದರೆ ಮಾವು, ಗೇರು ಮತ್ತು ಕಾಡಿನ ಬಹುತೇಕ ಮರಗಳು ಚಿಗುರು, ಹೂ ಬಿಡುವಕಾಲದಲ್ಲಿ. ವಿಜಿಯ ಮನೆ ಹತ್ತಿರದ ಕಾಡುಗಳಲ್ಲಿ ಕೆಲವು ಮಾವಿನಮರಗಳಿದ್ದವಲ್ಲ, ಅವು ಚಿಗುರು ಬಿಡುವುದನ್ನು ನೋಡಬೇಕು! ಇಡಿ ಮರವೇ ಹೊಳೆಯುವ ಕೆಂಪು ಬಣ್ಣವಾಗಿಬಿಡುತ್ತಿತ್ತು. ಇದೇ ಸಂದರ್ಭದಲ್ಲಿ ಹೋಳಿಹಬ್ಬವೂ ತನ್ನ ಬಣ್ಣ ಸೇರಿಸಿ ಕೆಂಪು, ಹಳದಿ, ಹಸಿರು, ಕಿತ್ತಳೆ ವರ್ಣಗಳಲ್ಲಿ ಅವರ ಊರು ಹೊಳೆಯುತ್ತಿತ್ತು. ಅಲ್ಲಿ ಕುಡುಬಿ ಜನಾಂಗದವರ ಮನೆಗಳು ಸಾಕಷ್ಟಿದ್ದವು. […]

Back To Top