Category: ಇತರೆ

ಇತರೆ

ಚಪ್ಪರದ ಗಳಿಕೆ

ಅನುಭವ ಚಪ್ಪರದ ಗಳಿಕೆ ಶಾಂತಿವಾಸು ನಮ್ಮ ಮನೆಗೆ ಹೊದ್ದಿಸಿದ ಸಿಮೆಂಟ್ ಶೀಟ್ ಮೇಲೆ ಹತ್ತಿ ನಡೆಯಲಾರಂಭಿಸಿದರೆ ಸುಮಾರು ಇಪ್ಪತ್ತು ಮನೆಗಳನ್ನು ದಾಟಬಹುದಿತ್ತು.  ನಲವತ್ತು ವರ್ಷಗಳ ಮೊದಲು ನಮ್ಮ ರಸ್ತೆಯಲ್ಲಿ ಯಾವುದೇ ಮಹಡಿ ಮನೆ ಇರಲಿಲ್ಲ. ನೆರಳಿಗಾಗಿ ನಮ್ಮ ಮನೆಯ ಹೊಸ್ತಿಲಿನ ನಂತರ ಹತ್ತು ಅಡಿಗಳಷ್ಟು ಮುಂದಕ್ಕೆ, ಮೇಲೆ ಕವಲುಹೊಡೆದ ಉದ್ದದ ಊರುಗೋಲುಗಳನ್ನು ನಿಲ್ಲಿಸಿ ಮೇಲೆ ಚೌಕಟ್ಟು ಮಾಡಿ  ಇಪ್ಪತ್ತು ಅಡಿಗಳಷ್ಟು ಅಗಲಕ್ಕೆ ತೆಂಗಿನ ಗರಿಗಳನ್ನು ಹೊದಿಸಿದ್ದರು. ನಮ್ಮ ಮನೆ ಬಿಟ್ಟು ಎಡಗಡೆಗೆ ಬಾಡಿಗೆ ಮನೆಗಳು ಹಾಗೂ ಬಲಗಡೆಗೆ […]

ಲೆಕ್ಕಕ್ಕೊಂದು ಸೇರ್ಪಡೆ

ಲೇಖನ ಲೆಕ್ಕಕ್ಕೊಂದು ಸೇರ್ಪಡೆ ಶಾಂತಿ ವಾಸು ಚೀನಿಯರ ಕೆಟ್ಟ ಮನಸ್ಥಿತಿಯ ಕನ್ನಡಿ ಕೊರೊನ, ಭಾರತವನ್ನು ಪ್ರವೇಶಿಸುವ ಮೊದಲೇ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದ, ಸಂಪೂರ್ಣ ದೇಹವನ್ನು ಅದೇನೋ ಹೊಸತರಹದ ದಿರಿಸಿನಿಂದ ಮುಖಸಹಿತ ಮುಚ್ಚಿಕೊಂಡ ಜನರು ಪ್ಲಾಸ್ಟಿಕ್ ಚೀಲದಲ್ಲಿ ಬಿಗಿಯಾಗಿ ಸುತ್ತಿದ ನೂರಾರು ಜನರ ಮೃತದೇಹಗಳನ್ನು ಒಟ್ಟೊಟ್ಟಿಗೇ, ಆಳವಾದ ಒಂದೇ ಹಳ್ಳದಲ್ಲಿ ಹಾಕಿ ಮಣ್ಣು ಮುಚ್ಚುವುದು ಹಾಗೂ ಪೆಟ್ರೋಲ್ ಸುರಿದು ಸಾಮೂಹಿಕವಾಗಿ ಸುಡುವುದನ್ನು ನೋಡಿಯೇ ಪ್ರಪಂಚವು ನಡುಗಿಹೋಗಿತ್ತು. ಇದೇನು?? ಹೊಸದಾಗಿ ನಡೆದದ್ದೇ? ಅಥವಾ ಯಾವುದಾದರೂ ಸಿನಿಮಾಗಾಗಿ ಇರಬಹುದೇನೋ ಎಂದು ಗೊಂದಲಗೊಂಡ ಕೋಟ್ಯಂತರ […]

ಉತ್ತರ ಕನ್ನಡ ಜಿಲ್ಲೆ ದಾರಿಯಲ್ಲಿ ಗಾಂಧಿ ಬಂದು ಹೋಗಿದ್ದರು….

ಗಾಂಧಿ ವಿಶೇಷ  ಉತ್ತರ ಕನ್ನಡ ಜಿಲ್ಲೆ ದಾರಿಯಲ್ಲಿ  ಗಾಂಧಿ  ಬಂದು ಹೋಗಿದ್ದರು…. ಗಾಂಧಿಜೀ ಉತ್ತರ ಕನ್ನಡ ಜಿಲ್ಲೆಯ ಪ್ರವಾದ ನನಗೆ  ಮುಖ್ಯವಾಗುವುದು ಮೂರು ಕಾರಣಗಳಿಗೆ. ಒಂದನೇ ಕಾರಣ ಗಾಂಧಿಜೀ ಅಸ್ಪೃಶ್ಯತೆಯನ್ನು ಜನರ ಮನದಿಂದ ಕಿತ್ತೊಗೆಯಲು ಪ್ರಾಮಾಣಿಕ ಪ್ರಯತ್ನ ಮಾಡಿದರು. ಎರಡನೇ ಕಾರಣ ದೇವಸ್ಥಾನದಲ್ಲಿನ ಪ್ರಾಣಿ ಬಲಿ ನಿಲ್ಲಿಸಲು ಯತ್ನಿಸಿದರು ಹಾಗೂ ಇದರಲ್ಲಿ ಯಶಸ್ವಿಯಾದರು. ಮೂರನೇ ಕಾರಣ  ಬಾಲವಿಧವೆಯರ ಕೇಶ ಮುಂಡನೆಯಂಥ ಸಂಪ್ರದಾಯವನ್ನು ನಿಲ್ಲಿಸಿದರು. ವಿಶೇಷವೆಂದರೆ ಈ ಮೂರು ಘಟನೆಗಳು ನಡೆದದ್ದು ೧೯೩೪ ರಲ್ಲಿ ಉತ್ತರ ಕನ್ನಡ ಜಿಲ್ಲೆಯ […]

ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..!

ಲೇಖನ ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..! ಕೆ.ಶಿವು ಲಕ್ಕಣ್ಣವರ ಹಿಂದಿ ಹೇರಿಕೆಯು ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..! ಕರ್ನಾಟಕದಲ್ಲಿ ಎರಡು ವರ್ಷಗಳ ಹಿಂದೆ ಕೇಂದ್ರ ಸರ್ಕಾರದ ಅಣತಿ ಮೇರಗೆ ಬೆಂಗಳೂರು ಮೆಟ್ರೋ ಆಡಳಿತ ಮಂಡಳಿ ಇಲ್ಲಿನ ಮೆಟ್ರೋ ನಿಲ್ದಾಣಗಳಲ್ಲಿ ಹಿಂದಿ ಭಾಷೆಯಲ್ಲಿ ಫಲಕಗಳನ್ನು ಹಾಕಿದಾಗಲೇ ಸ್ಥಳೀಯ ಕನ್ನಡಪರ ಹೋರಾಟಗಾರರು ಹಿಂದಿ ಫಲಕಗಳಿಗೆ ಬಣ್ಣ ಬಳಿದು ಪ್ರತಿಭಟಿಸಿದ್ದರು. ಈ ಸಂದರ್ಭದಲ್ಲಿ ಸಂವಿಧಾನದಲ್ಲಿ ಯಾವ ಭಾಷೆಗೂ ರಾಷ್ಟ್ರಭಾಷೆ ಎಂಬ ವಿಶೇಷ ಸ್ಥಾನಮಾನ ನೀಡಲಾಗಿಲ್ಲ ಎಂಬುದನ್ನು […]

ನಂದ ಗೋಕುಲ

ಅನುಭವ ನಂದ  ಗೋಕುಲ ಮಾಲಾ ಕಮಲಾಪುರ್ ನಾನು  ಸರ್ಕಾರಿ ಶಾಲೆಯಲ್ಲಿ  ಶಿಕ್ಷಕಿ ಯಾಗಿ ಕೆಲಸ ನಿರ್ವಹಿಸುವಾಗ ನಡೆದ ಘಟನೆ. ಒಂದು ದಿನಾ ನಾಲ್ಕನೆಯ ತರಗತಿಯಲ್ಲಿ ಓದುತ್ತಿದ್ದ ಹೆಣ್ಣು ಮಗು ತರಗತಿಯಲ್ಲಿಯೇ ಮೊದಲು ಆಕಿಗೆ ಕಲಿಕೆಯಲ್ಲಿ ಆಸಕ್ತಿ. ಮನೆಯಲ್ಲಿ ತಾಯಿ ಸಹ ಕೂಲಿ ನಾಲಿಮಾಡಿ ಓದಿಸುತ್ತಿದ್ದಳು ತಂದೆಗೆ ಇದಾವ ಪರಿವೇ ಇಲ್ಲದೆ ಸದಾ ಕುಡಿದುಕೊಂಡು ಮನೆಗೆ ಬಂದು ಹೆಂಡತಿ ಮಗುವಿಗೆ ಹೊಡೆದು ಬಡೆದು ಮನೆ ಬಿಟ್ಟು ಹೋಗುವದು ಇದೆಲ್ಲದರ ನಡುವೆ ಮಗು ಗುಡಿಸಿಲಿನಲ್ಲಿ ಓದುವುದು ರಜೆಯದಿನ ಹೊಲದಲ್ಲಿ ತಾಯಿಗೆ […]

ಹರಟೆ ಕಟ್ಟೆ

ಲಹರಿ ಹರಟೆ ಕಟ್ಟೆ ಮಾಲಾ  ಕಮಲಾಪುರ್   ನಾನು  ಹೇಳುವ ಮಾತು ಇದು  ಮೂವತ್ತು ವರ್ಷ ಗಳ ಹಿಂದು ಮುಂದಿನ ಮಾತು ಆಗಿನ ಜನರು ಗಂಡಾಗಲಿ ಹೆಣ್ಣಾಗಲಿ  ಭೇದ  ಭಾವ ಇಲ್ಲದೆ ತನ್ನವರು ನನ್ನವರು ಎನ್ನುವ ಭಾವನೆ ಯೊಂದಿಗೆ ಬೆರೆತು ಹರಟೆ ಹೊಡಿಯುತ್ತಿದ್ದರು. ತಮಗೆ ಬಿಡುವಾದಾಗ ಒಬ್ಬರಿಗೊಬ್ಬರು ಸಂಜೆಗೆ ಹರಟೆ ಕಟ್ಟೆಗೆ ಬಂದು ಹರಟೆ ಹೊಡೆದು ಹೋಗುತ್ತಿದ್ದರು. ಅಷ್ಟೇ ಅಲ್ಲ  ಸುಖ ದುಃಖ ದಲ್ಲಿ ಪಾಲ್ಗೊಂಡು  ತಮ್ಮ ಮನೆಯವರಂತೆ  ಹಚ್ಚಿಕೊಂಡು ಕೆಲಸ ಮಾಡುತ್ತಿದ್ದರು. ಮನೆಯ ಯಜಮಾನಿಯಂತೂ ತನ್ನ ಊಟ […]

ಕೊಂಕಣಿ ಕವಿ ಪರಿಚಯ

ಕೊಂಕಣಿ ಕವಿ ಪರಿಚಯ ವಿಲ್ಸನ್ ಕಟೀಲ್ ವಿಲ್ಸನ್ ಕಟೀಲ್ ಕಾವ್ಯನಾಮದಿಂದ ಬರೆಯುವ ವಿಲ್ಸನ್ ರೋಶನ್ ಸಿಕ್ವೇರಾ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಟೀಲಿನವರು. ಹುಟ್ಟಿದ ದಿನಾಂಕ – 31.08.1980. ತಂದೆಯ ಹೆಸರು ಗ್ರೆಗರಿ ಸಿಕ್ವೇರಾ, ತಾಯಿ ಬೆನೆಡಿಕ್ಟ ಸಿಕ್ವೇರಾ. ಕಾರಣಾಂತರಗಳಿಂದ ಇಂಜಿನಿಯರಿಂಗ್ ವ್ಯಾಸಂಗವನ್ನು ತ್ಯಜಿಸಿ ಸಾಹಿತ್ಯದತ್ತ ಆಕರ್ಷಣೆ. ತಮಿಳು ಹಾಡುಗಳಿಂದ ಸ್ಪೂರ್ಥಿಗೊಂಡು ಕಾವ್ಯದತ್ತ ಒಲವು. ತನ್ನ ತಾಯಿಭಾಷೆ ಕೊಂಕಣಿಯಲ್ಲಿ ಕತೆ, ಕವಿತೆ, ಗೀತೆ ಹಾಗೂ ಇನ್ನಿತರ ಸಾಹಿತ್ಯ ಕೃಷಿಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೊಂಕಣಿಯಲ್ಲಿ ಇದುವರೆಗೆ ’ದೀಕ್ ಆನಿ ಪೀಕ್’’, […]

ಶ್ರೀದೇವಿಗೆ ಶ್ರೀ ವಿಜಯ ಪ್ರಶಸ್ತಿ

ಶ್ರೀದೇವಿಗೆ ಶ್ರೀ ವಿಜಯ ಪ್ರಶಸ್ತಿ ‘ಸಂಗಾತಿ’ಯ ಮೂರನೇ ಆಯಾಮ ಅಂಕಣಬರೆಯುತ್ತಿರುವ ಶ್ರೀದೇವಿ ಕೆರೆಮನೆಯವರಿಗೆ ಶ್ರೀ ವಿಜಯ ಪ್ರಶಸ್ತಿ ದೊರಕಿದ್ದು ಪತ್ರಿಕೆಅವರನ್ನು ಅಭಿನಂದಿಸುತ್ತದೆ ಶ್ರೀದೇವಿ ಕೆರೆಮನೆಗೆ ಶ್ರೀವಿಜಯ ಪ್ರಶಸ್ತಿ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ನಾಡಿನ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ‌ ಶ್ರೀ ವಿಜಯ ಪ್ರಶಸ್ತಿಗೆ ಜಿಲ್ಲೆಯ ಕವಿಯತ್ರಿ, ಕಥೆಗಾರ್ತಿ, ಅಂಕಣಗಾರ್ತಿ ಶ್ರೀದೇವಿ ಕೆರೆಮನೆ ಭಾಜನರಾಗಿದ್ದಾರೆ. ಈಗಾಗಲೇ ತಮ್ಮ ಕಥೆ ಕವನ ಅಂಕಣಗಳಿಂದ ಮನೆಮಾತಾಗಿರುವ ಶ್ರೀದೇವಿ ಕೆರೆಮನೆಯವರು ಐದು ಕವನ ಸಂಕಲನ, ಐದು ಅಂಕಣ ಬರಹ ಸಂಕಲನ, ಎರಡು ಗಜಲ್ […]

ಟೆಲಿಮೆಡಿಸನ್-

ಲೇಖನ ಟೆಲಿಮೆಡಿಸನ್- ದೂರವಾಣಿಯಮೂಲಕತಲುಪಿಸುವಸಹಾಯವಾಣಿ ಡಾ.ವಿಜಯಲಕ್ಚ್ಮೀಪುರೋಹಿತ್ ದೂರವಾಣಿಯಮೂಲಕವೇರೋಗಿಯ/ ರೋಗದಅವಸ್ಥೆತಿಳಿದುಕೊಂಡುಸೂಕ್ತಸಲಹೆ, ಸಂಶಯಪರಿಹಾರ, ಪಥ್ಯಪಾಲನೆ, ಔಷಧಿ, ಉಪಚಾರಕ್ರಮ, ಮನೋಸ್ಥೈರ್ಯಬೆಳೆಸುವದು,ಅವಶ್ಯಕತೆಇದ್ದಲ್ಲಿಅಂಬುಲನ್ಸವ್ಯವಸ್ಥೆಕಲ್ಪಿಸುವದು, ರೋಗಿಯನ್ನಸೂಕ್ತವಾದಆಸ್ಪತ್ರೆಗೆಸೇರಿಸುವದುಇತ್ಯಾದಿಸೇವೆಗಳನ್ನುಬರೀದೂರವಾಣಿಸಂಭಾಷಣೆಯಮೂಲಕಒದಗಿಸುವಮಹತ್ವದಕಾರ್ಯವನ್ನುಈಟೆಲಿಮೆಡಿಸಿನ್ಸೇವೆಯಮೂಲಕಮಾಡಲಾಗುತ್ತದೆ. ಕೋವಿಡ 19 , ಇದುಕೊರೊನಾಎಂಬವೈರಸ್ಮುಖಾಂತರಮನುಕುಲಕ್ಕೆಬಂದುತೊಂದರೆಉಂಟುಮಾಡಿದಹೊಸಕಾಯಿಲೆ . ಕಣ್ಣು, ಮೂಗುಬಾಯಿಯಮೂಲಕಮಾನವದೇಹವನ್ನುಸೇರುವಈವೈರಾಣುಗಂಟಲಪ್ರವೇಶಿಸಿಅಲ್ಲಿಂದlungs ಪುಪ್ಪುಸದಕಾರ್ಯಕ್ಷಮತೆಯನ್ನುತಗ್ಗಿಸುತ್ತಹೋಗುತ್ತದೆ. ಹಾಗೆಯೆಉಸಿರಾಟದತೊಂದರೆಗಂಭೀರವಾಗಬಹುದು, ಅಲ್ಲದೆಬೇರೆಅವಯವಗಳಿಗೂರೋಗಹರಡಿತೀವ್ರತೊಂದರೆಉಂಟಾಗಬಹುದುಒಮ್ಮೊಮ್ಮೆರೋಗಿಯುಸಾವನ್ನಪ್ಪಬಹುದು. ಇಂತಹವಿಷಮಪರಿಸ್ಥಿತಿಯಲ್ಲಿನಮ್ಮಕರ್ನಾಟಕಸರಕಾರವನ್ನುಅವರಶ್ಲಾಘನೀಯಕೆಲಸವನ್ನುನಾವೆಲ್ಲಮೆಚ್ಚಲೇಬೇಕು. “ಆಪ್ತಮಿತ್ರ“ಸಹಾಯವಾಣಿಸಂಪರ್ಕನಾಡಿನಎಲ್ಲಜನತೆಗೂಕಲ್ಪಿಸಿಕೋಟ್ಟಿದ್ದಾರೆ. ಈಸಹಾಯವಾಣಿಯುನಮ್ಮಮಾನ್ಯಮುಖ್ಯಮಂತ್ರಿಗಳಾದಶ್ರೀಯಡಿಯೂರಪ್ಪನವರು, ಆರೋಗ್ಯಇಲಾಖೆಯಮಂತ್ರಿಗಳುಅಲ್ಲದೇ disaster management team (ವಿಪತ್ತುನಿರ್ವಹಣೆತಂಡ.) ಮತ್ತುಕರ್ನಾಟಕದಆರೋಗ್ಯಹಾಗೂಕುಟುಂಬರಕ್ಷಣೆಯವರೂ ( karnataka health and family welfare)ಈಸಹಾಯವಾಣಿಯಸದುದ್ದೇಶದಲ್ಲಿಭಾಗವಹಿಸಿದ್ದಾರೆ. ನಮ್ಮಆಯುಷ್ಯಇಲಾಖೆಯ joint director dr sridhar ಅವರೂ commissionar _ಆದಶ್ರೀಮತಿ ಮೀನಾಕ್ಷಿನೇಗಿಅವರುಸೇರಿದಂತೆರೋಗದಹತೋಟಿಗೆಸರಿಯಾದಸಮಯಕ್ಕೆಇದನ್ನುಸಾರ್ವಜನಿಕಬಳಕೆಗೆಸಿಧ್ದಪಡಿಸಿದ್ದಾರೆ. ಅಲ್ಲದೇಈಡಿಜಿಟಲ್ಆ್ಯಾಪ( digital app) ಮಾಡುವಲ್ಲಿ(Infosys )ಇನಫೋಸಿಸ್ಸಂಸ್ಥೆಯವರಸಹಾಯಹಸ್ತವೂಇದೆ. CRM system  develop ಮಾಡಿದ್ದಾರೆ. […]

ಕಲ್ಯಾಣ ಕರ್ನಾಟಕವೆಂಬ ಬಹುತ್ವದ ಮಹಾ ಬಯಲಲಿ

ಲೇಖನ ಕಲ್ಯಾಣ ಕರ್ನಾಟಕವೆಂಬ ಬಹುತ್ವದ ಮಹಾ ಬಯಲಲಿ ನಿಂತು ಮಲ್ಲಿಕಾರ್ಜುನ ಕಡಕೋಳ  ಕಳೆದವರ್ಷದವರೆಗೆ ಹೈದ್ರಾಬಾದ್ ಕರ್ನಾಟಕವೆಂದು ಕರೆಯಲಾಗುತ್ತಿದ್ದ  ಕಲಬುರಗಿ ನಾಡನ್ನು ೧೭.೦೯.೨೦೧೯ ರಂದು ಮುಖ್ಯಮಂತ್ರಿ ಯಡಿಯೂರಪ್ಪ  “ಕಲ್ಯಾಣ ಕರ್ನಾಟಕ” ಎಂದು ನಾಮಕರಣ ಮಾಡಿದರು. ಆ ಮೂಲಕ  ಹೈದ್ರಾಬಾದ್ ಕರ್ನಾಟಕ ಕನ್ನಡನಾಡ ಪ್ರಜ್ಞೆಗೆ ಹೊಸವಿನ್ಯಾಸದ ತಾಜಾ ತಾಜಾ ಖುಷಿ ದೊರಕಿದಂತಾಗಿದೆ. ಇದು ಸಾಂಸ್ಕೃತಿಕವಾಗಿ ವಿನೂತನ ಉಮೇದು. ಅಂದು ಕಳಚೂರಿ ಬಿಜ್ಜಳನ ಕಲ್ಯಾಣ ರಾಜ್ಯದ ಮಂತ್ರಿಯಾಗಿದ್ದ ಬಸವಣ್ಣ, ಪ್ರಭುತ್ವದ ಎಲ್ಲೆಮೀರಿ ವಚನಗಳ ಮೂಲಕ ಜನಚಳವಳಿ ರೂಪಿಸಿದ್ದು ಜನಕಲ್ಯಾಣದ ಕಳಕಳಿಯ ದ್ಯೋತಕ. […]

Back To Top