Category: ಇತರೆ

ಇತರೆ

ದಾರಾವಾಹಿ ಆವರ್ತನ ಅದ್ಯಾಯ-27 ಗುರೂಜಿಯ ಮನೆಯಿಂದ ಹಿಂದಿರುಗಿದ ಸುಮಿತ್ರಮ್ಮ ಆತುರಾತುರವಾಗಿ ಮನೆಗೆ ಬಂದವರು ಕೈಕಾಲು ಮುಖ ತೊಳೆಯಲು ಬಚ್ಚಲಿಗೆ ಹೋದರು. ಆಹೊತ್ತು ಲಕ್ಷ್ಮಣಯ್ಯ ವರಾಂಡದಲ್ಲಿ ಕುಳಿತುಕೊಂಡು ಜೈಮಿನಿ ಭಾರತದ ಚಂದ್ರಹಾಸನ ಪ್ರಸಂಗವನ್ನು ಓದುತ್ತಿದ್ದರು. ಅದರಲ್ಲಿ, “ಮಂತ್ರಿ ದುಷ್ಟಬುದ್ಧಿಯು ಕುಳಿಂದನನ್ನು ಸೆರೆಯಲ್ಲಿಟ್ಟು ಕುಂತಳಪುರಕ್ಕೆ ಬರುವಾಗ ಹಾವೊಂದು ಅವನೆದುರು ಬಂದು, ನಿನ್ನ ಮನೆಯಲ್ಲಿದ್ದ ನಿಧಿಯನ್ನು ಕಾಯುತ್ತಿದ್ದೆ. ಆದರೆ ನಿನ್ನ ಮಗ ಅದೆಲ್ಲವನ್ನೂ ವೆಚ್ಚ ಮಾಡಿದ! ಎಂದು ಹೇಳಿ ಹೊರಟು ಹೋಯಿತು” ಎಂಬ ಕಥೆಯ ಕೊನೆಯಲ್ಲಿದ್ದರು. ಅಷ್ಟೊತ್ತಿಗೆ ಸುಮಿತ್ರಮ್ಮ ನಗುತ್ತ ಬಂದು […]

‘ಗುರುಕುಲ ಸಾಹಿತ್ಯ ಶರಭ

ಗುರುಕುಲ ಸಾಹಿತ್ಯ ಶರಭ’ ಪ್ರಶಸ್ತಿಗೆ ರಾಘವೇಂದ್ರ ಈ ಹೊರಬೈಲು ಅವರ ಕೃತಿ ಆಯ್ಕೆ ಮೂಲತಃ ಶಿವಮೊಗ್ಗ ಜಿಲ್ಲೆಯ ಹೊರಬೈಲು ಗ್ರಾಮದ, ಪ್ರಸ್ತುತ ಚಿಕ್ಕಬಳ್ಳಾಪುರ ಜಿಲ್ಲೆ, ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆಂಗ್ಲಭಾಷಾ ಶಿಕ್ಷಕರೂ ಹಾಗೂ ಹವ್ಯಾಸಿ ಬರಹಗಾರರೂ ಆಗಿರುವ ರಾಘವೇಂದ್ರ ಈ ಹೊರಬೈಲು ಅವರ ‘ಬದುಕು ಪುಕ್ಸಟ್ಟೆ ಅಲ್ಲ’ ಎಂಬ ಲೇಖನ ಸಂಕಲನಕ್ಕೆ ಗುರುಕುಲ ಕಲಾ ಪ್ರತಿಷ್ಠಾನ(ರಿ) ರಾಜ್ಯ ಘಟಕ-ತುಮಕೂರುರವರು ಕೊಡುವ ‘ಗುರುಕುಲ ಸಾಹಿತ್ಯ ಶರಭ’ ಪ್ರಶಸ್ತಿ ಒಲಿದಿದೆ. ತುಮಕೂರಿನಲ್ಲಿ ನಡೆಯುವ ಪ್ರಥಮ ‘ಗುರುಕುಲ ಸಾಹಿತ್ಯ […]

ಮಕಾನದಾರರ ಪ್ಯಾರಿ ಪದ್ಯಗಳಲ್ಲಿ ಭಾಷೆಯ ಬೆಡಗು

ಮಕಾನದಾರರ ಪ್ಯಾರಿ ಪದ್ಯಗಳಲ್ಲಿ ಭಾಷೆಯ ಬೆಡಗು ಶಮಾ. ಜಮಾದಾರ.   ಮಾನವೀಯ ಸಂಬಂಧಗಳನ್ನು ಸಾಹಿತ್ಯದಲ್ಲಿ ಹುಡುಕುವ ಸಮನ್ವಯ ಕವಿ, ಎ. ಎಸ್. ಮಕಾನದಾರ ಅವರು. ನ್ಯಾಯಾಲಯದ ಕಡತಗಳಲ್ಲಿ ತಡಕಾಡುತ್ತಲೇ ಸಾಹಿತ್ಯದ ಲೋಕದಲ್ಲಿ ಸದಾ ಸುದ್ದಿಯಲ್ಲಿ ಇರುತ್ತಾರೆ.. ಅಕ್ಕಡಿಸಾಲುಗಳಲ್ಲಿ ಅಕ್ಷರ ಬೀಜ ಬಿತ್ತುತ್ತಾ..ಮತ್ತು ಪ್ಯಾರಿಯ ಎದೆಯಲ್ಲಿ ಪ್ರೀತಿಯ ದೀಪ ಬೆಳಗುತ್ತಾ. ಸುಮಾರು ವರ್ಷಗಳಿಂದ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡ ಎ. ಎಸ್. ಮಕಾನದಾರ ಅವರು ಈವರೆಗೂ ಆರು ಸ್ವರಚಿತ ಕವನ ಸಂಕಲನಗಳನ್ನು ನಮ್ಮ ಕೈಯಲ್ಲಿ ಇಟ್ಟಿದ್ದಾರೆ. ಉಳಿದ ಪ್ರಕಾರದ ಸಾಹಿತ್ಯದಲ್ಲೂ […]

ಪಟ ಗಾಳಿಯಲಿ ಹಾರಿ

ಕೆಲವು ದಶಕಗಳ ಹಿಂದೆ ಆಷಾಢಮಾಸದಲ್ಲಿ ತಲೆಯೆತ್ತಿದರೆ “ ಜಿಗಿ ಜಿಗಿಯುತ ಪಟ ಗಾಳಿಯಲಿ ತೇಲಿ ಬಾನಲ್ಲಿ ಹಾರಾಡುತ್ತಿದ್ದ ಪಟಗಳು ಕಾಣುತ್ತಿದ್ದವು ನಮ್ಮ ಹಳೇ ಮೈಸೂರು ಪ್ರದೇಶದ ಊರು, ಕೇರಿ, ಹಳ್ಳಿ ಹಾಡಿಗಳಲ್ಲಿ. ಈಗ ಅವೆಲ್ಲಾ ಮರೆಯಾಗಿವೆ

ಅಷ್ಟು ಕೇಳಿದ ಸುಮಿತ್ರಮ್ಮನಿಗೆ ವಿಸ್ಮಯವಾಯಿತು. ‘ಅಯ್ಯೋ ದೇವರೇ, ಇವರ ಶಕ್ತಿಯೇ…!’ ಎಂದುಕೊಂಡವರು ಗುರೂಜಿಯ ಮೇಲೆ ಇನ್ನಷ್ಟು ಗೌರವ ತಳೆದು, ‘ಹೌದು ಹೌದು ಗುರೂಜೀ…ಅದೊಂದು ಘಟನೆಯಲ್ಲಿ ನಾವಿಬ್ಬರೂ ಅರೆಜೀವವಾಗಿ ಬಿಟ್ಟಿದ್ದೆವು!’ ಎಂದರು ನೋವಿನಿಂದ.

ಸಂಬಂಧಗಳು_ ಒಲವು, ಪ್ರೀತಿ ಪರಿಶುದ್ಧತೆ

ಸ್ನೇಹಕ್ಕೆ ಆಡಂಬರ ಅಡ್ಡಿಯಾಗಬಾರದು. ಪ್ರೀತಿ ಷರತ್ತುಗಳಿಗೆ ಒಳಪಡಬಾರದು. ಸಂಬಂಧಗಳು ಲೆಕ್ಕಾಚಾರದ ಹಣಿಯ ಮೇಲೆ ನಿಲ್ಲಬಾರದು. ನಿಷ್ಕಲ್ಮಷ ನಿಸ್ವಾರ್ಥ ಗೆಳೆತನದಿಂದ ಜೀವನದ ಮಹತ್ವ ಎಷ್ಟು ಎತ್ತರಕ್ಕೆ ಏರುತ್ತದಲ್ಲವೇ??

ಸೋಮಾರಿತನದ ಸುಖ

ಆಗೆಲ್ಲ ಮನೆಗಳಲ್ಲಿ ಒಂದೇ ಒಂದು ಹಂಡೆ ಒಲೆಯ,ನೀರಿನ ತೊಟ್ಟಿಯ ಬಚ್ಚಲು ಮನೆ ಇರ್ತಾ ಇದ್ದದ್ದು.ಮನೆಯಿಂದ ಹೊರಗೆ ಒಂದು ಶೌಚಾಲಯ.ಈಗ ಬಚ್ಚಲು,ಶೌಚಗಳೆಲ್ಲ ಮಲಗುವ ಕೋಣೆಯ ಒಳಗೇ ಸೇರಿಕೊಂಡು ಬಿಟ್ಟಿವೆ.ಮನೆಯಲ್ಲಿ ಎಷ್ಟು ರೂಂಗಳಿವೆಯೋ ಅಷ್ಟು ಅಟ್ಯಚ್ಡ್ ಬಾತ್ ರೂಮ್ ಗಳು. ಅಷ್ಟೂ ತೊಳೆಯಲು ಮತ್ತಷ್ಟು ವಿಷಗಳು.

ಮೊದಲ ಮಳೆಯ ಜಿನುಗು

ಸುರಿಯುತ್ತಿದ್ದ ಮಳೆಯೊಂದು ಯಾವುದೋ ಅಡ್ಡ ಗಾಳಿಯ ನೆವಕೆ ಹಾರಿಯೇ ಬಿಟ್ಟಿತು. ಅವಳ ಸಂಬಂಧಿಗಳು ಊರು ಖಾಲಿ ಮಾಡಿ ಆ ಊರ ನೆಂಟಸ್ತಿಕೆ ತಪ್ಪಿ ಹೋಯಿತು. ಅವ ಓದಲಿಕ್ಕೆ ಮತ್ತೆಲ್ಲಿಗೋ ಹೋದ.ದಾರಿಗಳು ಹೇಳದೆ ಕೇಳದೆ ದಾರಿ ಬದಲಿಸಿದವು.

ದಾರಾವಾಹಿ ಆವರ್ತನ ಅದ್ಯಾಯ-25 ಸುಮಿತ್ರಮ್ಮನ ಭಯಭಕ್ತಿಯ ಪ್ರಾರ್ಥನೆಗೆ ಒಲಿದು ನಾಗರಹಾವು ಮಾಯವಾದುದು (ವಾಸ್ತವದಲ್ಲಿ  ಆ ಹಾವು ಅವರೆಲ್ಲರ ಕಣ್ಣು ತಪ್ಪಿಸಿ ಹೊರಗೆ ಹೊರಟು ಹೋದುದು) ವಠಾರದವರಿಗೆಲ್ಲ ವಿಸ್ಮಯವನ್ನು ತರಿಸಿತು! ಜೊತೆಗೆ ಸುಮಿತ್ರಮ್ಮನ ಮೇಲೆ ಅವರೆಲ್ಲರಲ್ಲಿ ಆವರೆಗೆ ಇದ್ದಂಥ ಅಸಹನೆ, ಅಸಡ್ಡೆಗಳೂ ತುಸು ಮರೆಯಾಗಿ ಅದರ ಬದಲಿಗೆ ಯರ್ರಾಬಿರ್ರಿ ಗೌರವಾದರಗಳು ಮೂಡಿಬಿಟ್ಟವು. ಇತ್ತ ತಮ್ಮ ಪ್ರಾರ್ಥನೆಗೆ ಬೆಲೆಕೊಟ್ಟು ನಾಗದೇವನು ಹೊರಟು ಹೋದುದು ಸುಮಿತ್ರಮ್ಮನನ್ನೂ ರೋಮಾಂಚನಗೊಳಿಸಿತು. ಅದೇ ಕಾರಣದಿಂದ ಅವರಲ್ಲಿ ನಾಗರಹಾವಿನ ಬಗ್ಗೆ ಸ್ವಲ್ಪ ಧೈರ್ಯವೂ ಹುಟ್ಟಿತು. ಆದರೆ ಲಕ್ಷ್ಮಣಯ್ಯನ […]

Back To Top