Category: ಇತರೆ

ಇತರೆ

ಭಗತ್ ಸಿಂಗ್ ಮಾತೆ ಮೈಸೂರಿನಲ್ಲಿ

ನೆನಪು ಭಗತ್ ಸಿಂಗ್ ಮಾತೆ ಮೈಸೂರಿನಲ್ಲಿ ಡಾ. ಅರಕಲಗೂಡು ನೀಲಕಂಠ ಮೂರ್ತಿ ಸರಿಸುಮಾರು ಐದು ದಶಕಗಳ ಹಿಂದಿನ ಸಮಾಚಾರ. ಸಾವಿರದ ಎಪ್ಪತ್ತು ಎಪ್ಪತ್ತೊಂದರ ಸಮಯ. ನನಗೆ ಕರಾರುವಾಕ್ಕಾಗಿ ದಿನಾಂಕ ಮತ್ತು ಮಾಹೆ ಸದ್ಯ ಜ್ಞಾಪಕ ಇಲ್ಲ. ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ನಾನು ನಾಲ್ಕನೇ ವರ್ಷದಲ್ಲಿ ಓದುತ್ತಿದ್ದಾಗ. ಆ ಕಾಲಕ್ಕೆ ನಮ್ಮ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ, ಅದರಿಂದಾಗಿ ಸಾಂಸ್ಕೃತಿಕ ಚಟುವಟಿಕೆಗಳು ಉತ್ತುಂಗಕ್ಕೆ ಏರಿದ್ದ ಕಾಲ. ಈಗ ಹೇಗೋ ನಾ ಕಾಣೆ. ವಾಸ್ತವವಾಗಿ ವಾರ್ಷಿಕೋತ್ಸವದಲ್ಲಿ ನಾಟಕ ನಿರ್ದೇಶನಕ್ಕೆ ಸಿನಿಮಾ […]

ಚೆಗುವೆರ ಎಂಬ ಮುಗಿಯದ ಪಯಣ

ಕವಿತೆ ಚೆಗುವೆರ ಎಂಬ ಮುಗಿಯದ ಪಯಣ ಚೆ ಗುವೆರ ೧೯೨೮ ಲ್ಲಿ ರೊಸಾರಿಯೋ,ಅರ್ಜೆಂಟೀನದಲ್ಲಿ ಹುಟ್ಟಿದರು. ಇವರು ಜನಪ್ರಿಯವಾಗಿ ಚೇ ಗುವಾರ, ಎಲ್ ಚೇ ಅಥವ ಬರಿ ಚೇ ಎಂದು ಕರೆಯಲ್ಪಡುತ್ತಾರೆ. ಅರ್ಜೆಂಟೀನಾದಲ್ಲಿ ಹುಟ್ಟಿದ ಮಾರ್ಕ್ಸ್ ವಾದಿ, ಕ್ರಾಂತಿವಾದಿ, ರಾಜಕೀಯ ವ್ಯಕ್ತಿ, ಮತ್ತು ಕ್ಯೂಬ ಮತ್ತು ಅಂತರರಾಷ್ಟ್ರೀಯ ಗೆರಿಲ್ಲಾಗಳ ನಾಯಕ.  ಅವರು ಬ್ಯೂನಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಪಡೆದರು. ವೈದ್ಯನಾಗಲು ಕನಸುಕಂಡಿದ್ದ ಆತ ತನ್ನ ರಜಾದಿನಗಳಲ್ಲಿ ಲ್ಯಾಟಿನ್ ಅಮೆರಿಕದ ಉದ್ದಕ್ಕೂ ಪ್ರವಾಸ ಕೈಗೊಂಡಿದ್ದ.  ಈ ಸಮಯದಲ್ಲಿ ಆತನಲ್ಲಿ ಆದ ಅನುಭವಗಳು […]

ಲಾಕ್ಡೌನ್ ಕಾಲಘಟ್ಟದ ದಾಂಪತ್ಯ

ಲೇಖನ ಲಾಕ್ಡೌನ್ ಕಾಲಘಟ್ಟದ ದಾಂಪತ್ಯ ಅಂಜಲಿ ರಾಮಣ್ಣ ಬೆಳಗಿನಲ್ಲಿ ಅವನು ಬಲು ಸುಭಗ. ರಾತ್ರಿಯಾಯಿತೆಂದರೆ ಕೀಚಕನೇ ಮೈಯೇರಿದ್ದಾನೆ ಎನ್ನುವಂತೆ ಇರುತ್ತಿದ್ದ. ಅವಳ ಮೈಮೇಲಿನ ಹಲ್ಗುರುತು, ಉಗುರ್ಗೆರೆ, ಸಿಗರೇಟಿನ ಬೊಟ್ಟು ಕತ್ತಲಲ್ಲೂ ಮಿರಮಿರ ಉರಿಯುತ್ತಿತ್ತು. ಸಹಿಸುತ್ತಲೇ ಅವಳ ದಾಂಪತ್ಯಕ್ಕೆ ಮೂರು ವರ್ಷ ಕಳೆದುಹೋಗಿತ್ತು. ಸ್ನಾನದ ನೀರು ಬಿದ್ದರೆ ಧಗಧಗ ಎನ್ನುವ ದೇಹ ದಹನಕ್ಕೆ ಹೆದರಿದ್ದ ದಾಕ್ಶಾಯಣಿ  ಅವಳು ಅದೆಷ್ಟೋ ದಿನಗಳಿಗೆ ಒಮ್ಮೆ ಸ್ನಾನ ಮಾಡುತ್ತಿದ್ದಳು. ಕತ್ತಲಲ್ಲಿ ಅವಳಾತ್ಮವನ್ನು ಹೀಗೆ ಚರ್ಮದಂತೆ ಸಂಸ್ಕರಿಸುತ್ತಿದ್ದವ ಬೆಳಕಿನಲ್ಲಿ ಬೆಕ್ಕಿನ ಮರಿಯಂತೆ ಆಗುತ್ತಿದ್ದ. ಆಫೀಸಿನಲ್ಲಿ […]

ಪರಿಣಾಮ

ಲೇಖನ ಪರಿಣಾಮ ಡಾ. ಅರಕಲಗೂಡು ನೀಲಕಂಠ ಮೂರ್ತಿ ಮನುಷ್ಯ ಸಾಮಾನ್ಯವಾಗಿ ಯಾವುದೇ ಕೆಲಸ ಮಾಡಬೇಕಾದರೆ, ಅಥವ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಮೊದಲು, ಅದರ ಪರಿಣಾಮದ ಬಗ್ಗೆ ಖಂಡಿತ ಕೂಲಂಕುಷವಾಗಿ ಚಿಂತಿಸುತ್ತಾನೆ. ಆದರೆ ಎಂಥ ಸಂದರ್ಭಗಳಲ್ಲೂ ಸಹ ಕೆಲವರು, ಉಡಾಫೆ ಬದುಕಿನವರು, ಪ್ರಪ್ರಥಮವಾಗಿ ಆಳವನ್ನೂ ಅಂದಾಜಿಸದೆ, ನೇರ ಭಾವಿಗೇ ದಿಢೀರಂತ ಧುಮಿಕಿಬಿಡುತ್ತಾರೆ. ನಂತರ ಪರಿಣಾಮದತ್ತ ಗಮನ ಹರಿಸಿದ ಹಾಗೆ, ಕೈಕಾಲುಗಳನ್ನು ಆತುರಾತುರವಾಗಿ ಬಡಿಯತೊಡಗುತ್ತಾರೆ. ಆಗ ತುಂಬ ತಡವಾಗಿ ಪಶ್ಚಾತ್ತಾಪ ಪಟ್ಟು ಸಂಕಟದ ಕೆಸರೊಳಗೆ ಒದ್ದಾಡುತ್ತಾರೆ. ಬಹಳ ಒಳ್ಳೆಯ, ಆದರೆ […]

ದಾರಾವಾಹಿ- ಅದ್ಯಾಯ-12 ತನ್ನ ಕುತಂತ್ರಕ್ಕೆ ಬಲಿಯಾಗಿ ಬೀದಿ ಬಿಕಾರಿಯಾದ ಸಂತಾನಪ್ಪ, ಇಂದಲ್ಲ ನಾಳೆ ರಾತ್ರೋರಾತ್ರಿ ಊರು ಬಿಟ್ಟೇ ಓಡಿ ಹೋಗುತ್ತಾನೆ ಅಥವಾ ಮುಂಚಿನಂತೆಯೇ ಬಾಲ ಮುದುರಿ ಕೂಲಿನಾಲಿ ಮಾಡಿಕೊಂಡು ಬದುಕುತ್ತಾನೆ ಎಂದು ಭಾವಿಸಿದ್ದ ಶಂಕರನ ಯೋಚನೆಯು ಪರಮೇಶನ ಬಿಸಿಬಿಸಿ ಸುದ್ದಿಯಿಂದ ಪೂರ್ತಿ ತಲೆಕೆಳಗಾಗಿಬಿಟ್ಟಿತು. ಬಯಲುಸೀಮೆಯ ಒಣಹವೆಯನ್ನೂ ಖಡಕ್ ಜೋಳದ ರೊಟ್ಟಿಯೊಂದಿಗೆ ಈರುಳ್ಳಿ ಮತ್ತು ಹಸಿ ಮೆಣಸಿನಕಾಯಿಯಂಥ ವ್ಯಂಜನವನ್ನು ಜಜ್ಜಿ ಜಗಿದುಣ್ಣುತ್ತ ಒರಟು ಮಂದಿಯ ನಡುವೆ ಹುಟ್ಟಿ ಬೆಳೆದ, ಆರಡಿ ಎತ್ತರದ ಆಜಾನುಬಾಹು ಸಂತಾನಪ್ಪ ಬಡತನದ ಬೇಗೆಯಿಂದ ಮುಗ್ಧ […]

ಮಕ್ಕಳಿಗಾಗಿ ಅನುಭವ ಕಥನ ಕಾಡಂಚಿನಊರಿನಲ್ಲಿ….. ವಿಜಯಶ್ರೀ ಹಾಲಾಡಿ ವಿಜಿ ಸಣ್ಣವಳಿರುವಾಗ, ಅಜ್ಜಿ ಅಂದಿಗೆ ಸುಮಾರು ಐವತ್ತೈದು-ಅರವತ್ತು ವರ್ಷಗಳ ಹಿಂದೆ (ಅಂದರೆ ಇವತ್ತಿಗೆ ತೊಂಬತ್ತು-ತೊಂಬತ್ತೈದು ವರ್ಷಗಳ ಹಿಂದೆ) ನಡೆದ ಘಟನೆಯನ್ನು ಹೇಳುತ್ತಿದ್ದರು. ಅಜ್ಜಿಯ ಮಾವ ಮುಂತಾದ ಹಿರಿಯರಿದ್ದ ಸಮಯವದು. ಆಗ ನಮ್ಮೂರು `ಮುದೂರಿ’ಯ ಸುತ್ತಲಿನ ಕಾಡುಗಳಲ್ಲಿ ಹುಲಿಯಿತ್ತಂತೆ! ಎಷ್ಟು ಹುಲಿಗಳಿದ್ದವೋ, ತಿಳಿಯದು, ಆದರೆ ಊರಿಗೆ ಬಂದು ದನಗಳನ್ನು ಕೊಂಡೊಯ್ದ ಅನೇಕ ಪ್ರಸಂಗಗಳಿದ್ದವು. ಹಟ್ಟಿಯ ಗೋಡೆಯನ್ನು ಮಣ್ಣಿನಿಂದ ಗಟ್ಟಿಯಾಗಿ ನಿರ್ಮಿಸಿ ಬಂದೋಬಸ್ತು ಮಾಡಿದ್ದರೂ ಬಾಗಿಲು ಸ್ವಲ್ಪ ಸದರ ಇದ್ದರೆ ಅದರ […]

ಅಂಬೇಡ್ಕರ್ ವಿಶೇಷ ಬರಹ ಭಾರತದ ಸಂವಿಧಾನದ ಪೀಠಿಕೆಯೂ..! ಭಾರತದ ಸಂವಿಧಾನದ ಪೀಠಿಕೆಯೂ..! ಭಾರತ ವಾಸಿಗಳಾದ ನಾವು, ಭಾರತವನ್ನು ಸಾರ್ವಭೌಮ ಸಮಾಜವಾದಿ ಜಾತ್ಯಾತೀತ (೧೯೭೬ರಲ್ಲಿ ಇಂದಿರಾಗಾಂಧಿಯವರಿಂದ ಸೇರಿಸಲ್ಪಟ್ಟದ್ದು). ಲೋಕತಂತ್ರಿಕ ಗಣತಂತ್ರವನ್ನಾಗಿ ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲಾ ಪ್ರಜೆಗಳಿಗೆ ಈ ಕೆಳಗಿನ ಹಕ್ಕುಗಳಾದ– ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯ; ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ; ಗಳನ್ನು ದೊರಕಿಸಿ, ವೈಯುಕ್ತಿಕ ಘನತೆ ಮತ್ತು ದೇಶದ ಒಗ್ಗಟ್ಟು ಮತ್ತು ಐಕ್ಯತೆಗೆ ಎಲ್ಲರಲ್ಲೂ […]

ಅಂಬೇಡ್ಕರ್ ಜಯಂತಿ ವಿಶೇಷ ಬರಹ ಅಸ್ಪೃಶ್ಯತೆಯ ವಿರುದ್ದ ಅಂಬೇಡ್ಕರ್ ರವರ ಹೋರಾಟ ೧೯೨೭ರಿಂದ ೧೯೩೨ರವರೆಗೆ, ಅಹಿಂಸಾತ್ಮಕ ಆಂದೋಲನಗಳ ಮುಂದಾಳತ್ವ ವಹಿಸಿ ಅಸ್ಪೃಶ್ಯರಿಗೆ ದೇವಾಲಯ ಪ್ರವೇಶದ ಹಕ್ಕು, ಸಾರ್ವಜನಿಕ ಕೆರೆ, ಬಾವಿಗಳಿಂದ ನೀರು ಸೇದುವ ಹಕ್ಕು ಇತ್ಯಾದಿಗಳಿಗಾಗಿ ಹೋರಾಡಿದರು. ಇವುಗಳಲ್ಲಿ ನಾಸಿಕದಲ್ಲಿಯ ಕಾಳ ರಾಮನ ದೇವಸ್ಥಾನ ಮತ್ತು ಮಹಾಡದ ಚೌಡಾರ್ ಕೆರೆಯ ವಿಷಯವಾಗಿ ಅಸ್ಪೃಶ್ಯರನ್ನು ಹೊರಗಿಟ್ಟಿರುವರ ವಿರುದ್ಧ ಮಾಡಿದ ಆಂದೋಲನಗಳು ಗಮನಾರ್ಹವಾಗಿವೆ. ಸಹಸ್ರಾರು ಅಸ್ಪೃಶ್ಯ ಸತ್ಯಾಗ್ರಹಿಗಳು ಭಾಗವಹಿಸಿದ ಈ ಅಹಿಂಸಾತ್ಮಕ ಚಳುವಳಿಗಳಿಗೆ ಸವರ್ಣೀಯರು ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿದರು. ನ್ಯಾಯಾಲಯದ ಕಟ್ಟೆ […]

ಯುಗ ಯುಗಾದಿ ಕಳೆದರೂ..!

ಯುಗಾದಿ ವಿಶೇಷ ಬರಹ ಯುಗ ಯುಗಾದಿ ಕಳೆದರೂ..! ಯುಗ ಯುಗಾದಿ ಕಳೆದರೂ ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ.                     ಹೊಂಗೆ ಹೂವ ತೊಂಗಳಲಿ,                     ಭೃಂಗದ ಸಂಗೀತ ಕೇಳಿ                     ಮತ್ತೆ ಕೇಳ ಬರುತಿದೆ.                     ಬೇವಿನ ಕಹಿ ಬಾಳಿನಲಿ                     ಹೂವಿನ ನಸುಗಂಪು ಸೂಸಿ                     ಜೀವಕಳೆಯ ತರುತಿದೆ. ವರುಷಕೊಂದು ಹೊಸತು ಜನ್ಮ, ಹರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾತಕೆ. ಒಂದೇ ಒಂದು […]

ಯುಗಾದಿ ವಿಶೇಷ ಬರಹ ಯುಗಾದಿಯೆಂಬ ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದೆ ಎಂದು ಹೇಳುವುದು ಪ್ರಮುಖವಾಗಿ ಭಾಷೆ,  ಆಚರಣೆ-ಸಂಪ್ರದಾಯಗಳು, ಉಡುಗೆ-ತೊಡುಗೆ, ಆಹಾರ ಮೊದಲಾದವುಗಳಿಗೆ ಸಂಬಂಧಿಸಿದಂತೆ . ಇಲ್ಲಿನ  ವೈವಿಧ್ಯತೆ ಎಷ್ಟೆಂದರೆ  ರಾಜ್ಯ ರಾಜ್ಯಗಳ ನಡುವಿನ ಮಾತಿರಲಿ, ಅಕ್ಕಪಕ್ಕದ ತಾಲೂಕುಗಳಲ್ಲಿ, ಊರುಗಳಲ್ಲೇ ಭಿನ್ನತೆಯನ್ನು ಕಾಣಬಹುದು.   ಆದರೆ ಕಳೆದ 2 ದಶಕಗಳಿಂದ ಇಂಥ ಪ್ರಾದೇಶಿಕ ಭಿನ್ನತೆಗಳು ಬದಲಾಗುತ್ತಿವೆ  ಅಥವಾ  ಕೆಲವು  ಇಲ್ಲವಾಗಿವೆ. ಇದಕ್ಕೆ ಬಹುಮುಖ್ಯ ಕಾರಣ ದೊಡ್ಡ ಪಟ್ಟಣ ಹಾಗೂ ಶಹರಗಳಿಗೆ ಉದ್ಯೋಗ ಹಾಗೂ  ಜೀವನ ನಿರ್ವಹಣೆಯ ದಾರಿಗಳನ್ನು ಅರಸುತ್ತ […]

Back To Top