ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಪ್ರಸ್ತುತ

ಗ್ರಾಮಮಟ್ಟದಿಂದ ರಾಜ್ಯ ಮಟ್ಟದವರೆಗೂ ಸ್ವಾವಲಂಬನೆ ಗಣೇಶಭಟ್ ಮಾನ್ಯ ಪ್ರಧಾನಿಯವರು ಸ್ವಾವಲಂಬಿ ಭಾರತ, ಗ್ರಾಮಮಟ್ಟದಿಂದ ರಾಜ್ಯ ಮಟ್ಟದವರೆಗೂ ಸ್ವಾವಲಂಬನೆಯ ಕುರಿತು ಟ್ವೀಟಿಸಿದ್ದಾರೆ. https://twitter.com/PMOIndia/status/1253562403544915970 ಇಂದು ದೇಶ ಅನುಸರಿಸುತ್ತಿರುವ ಬಂಡವಾಳವಾದ ನೀತಿಯಿಂದ ಈ ಉದ್ದೇಶ ಈಡೇರಲು ಸಾಧ್ಯವಿಲ್ಲ.ಲಕ್ಷ ಲಕ್ಷ ಕೋಟಿ ಹಣ ಸುರಿದರೂ ಅಷ್ಟೇ. ಮಿಶ್ರ ಆರ್ಥಿಕನೀತಿ, ಗಾಂಧೀವಾದ,ಸರ್ವೋದಯ,ಜೆಪಿ ಚಿಂತನೆ,ಸಮಾಜವಾದ ಮುಂತಾದವುಗಳೆಲ್ಲವೂ ಬಂಡವಾಳವಾದದ ವಿವಿಧ ರೂಪಗಳು. ಕಮ್ಯೂನಿಸಮ್ ಎಂಬುದು state capitalism. ಪ್ರಾದೇಶಿಕ ಸ್ವಾವಲಂಬನೆಗೆ ಬೇಕಾದುದು ನವ ಆರ್ಥಿಕ ಚಿಂತನೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಆಧರಿಸಿ ರೂಪುಗೊಳ್ಳುವ ತಳ ಮಟ್ಟದ ಯೋಜನೆಗಳು. ಕಳೆದ ಹಲವು ವರ್ಷಗಳಿಂದಲೂ ಪ್ರಾದೇಶಿಕ ಆರ್ಥಿಕ ಸ್ವಾವಲಂಬನೆಯ ಕುರಿತು ಪ್ರಉತ(ಪ್ರಗತಿಶೀಲ ಉಪಯೋಗ ತತ್ವ)ದ ಅಧಾರದ ಮೇಲೆ ಬರೆಯುತ್ತಿದ್ದೇನೆ. ಒಂದೆರಡು ಸ್ಯಾಂಪಲ್ ಗಳು: ಆಗಸ್ಟ್ 10, 2018 · ಪ್ರಾದೇಶಿಕ ಅಸಮಾನತೆ ದೂರೀಕರಿಸುವ ಪರಿ ಪ್ರತಿಯೊಂದು ಪ್ರದೇಶದ ಭೌಗೋಳಿಕ ಪರಿಸ್ಥಿತಿ, ನದಿ ಕೊಳ್ಳಗಳ ಸ್ಥಿತಿ, ಪರಿಸರ, ಮಣ್ಣಿನ ಗುಣ ಲಕ್ಷಣ, ಮಳೆ, ಹವಾಮಾನ ಮುಂತಾದವುಗಳ ಜೊತೆಗೆ ಜನರ ಮಾನಸಿಕತೆಯನ್ನು ಪರಿಗಣಿಸಿ ಯೋಜನೆಗಳು ರೂಪುಗೊಳ್ಳಬೇಕು. ಸ್ಥಳೀಯ ಸಂಪನ್ಮೂಲಗಳನ್ನು ಬಳಸಿ, ಸ್ಥಳೀಯರಿಗೆ ಉದ್ಯೋಗ ಸೃಷ್ಟಿಸುವ ಯೋಜನೆಗಳು ತಾಲೂಕು ವಾರು ರೂಪುಗೊಂಡು, ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಕ್ರೋಢೀಕೃತಗೊಳ್ಳಬೇಕು. ಪ್ರತಿಯೊಂದು ರಾಜ್ಯವೂ ತನ್ನ ಎಲ್ಲ ನಾಗರಿಕರಿಗೆ ಉದ್ಯೋಗ ಸೃಷ್ಟಿಸುವ, ತಾನು ಆರ್ಥಿಕವಾಗಿ ಸ್ವಾವಲಂಬಿಯಾಗುವಂತಹ ಪ್ರಯತ್ನ ನಡೆಸಬೇಕು. ಈ ಉದ್ದೇಶದಿಂದಲೇ ಅಭಿವೃದ್ಧಿ ಯೋಜನೆಗಳು ರೂಪುಗೊಳ್ಳಬೇಕು. 13 ಫೆಬ್ರವರಿ · ಡಾ. ಸರೋಜಿನಿ ಮಹಿಷಿ ವರದಿಯಾಚೆಗೆ .. ಈ ಸಮಸ್ಯೆಗಳಿಗೆ ಪರಿಹಾರವೆಂದರೆ ವಿಕೇಂದ್ರೀಕೃತ ಅರ್ಥವ್ಯವಸ್ಥೆಯ ಅನುಷ್ಠಾನ. ಇದರ ಮೊದಲ ಹಂತವೆಂದರೆ ಆರ್ಥಿಕವಾಗಿ ಸ್ವಯಂ ಸ್ವಾವಲಂಬಿಯಾಗಬಲ್ಲ ಭೌಗೋಳಿಕ ಕ್ಷೇತ್ರಗಳನ್ನು ಗುರ್ತಿಸುವುದು. 2 ಏಪ್ರಿಲ್ 2020 ಹೊಸ ಮನ್ವಂತರ ದಾರಿ ತೋರಲಿರುವ ಕೊರೋನಾ ಪಿಡುಗು ಕೊರೊನಾ ಭಯದಿಂದ ಹೊರಬಂದು ಪುನಃ ದೇಶದ ಹಾಗೂ ವೈಯಕ್ತಿಕ ಆರ್ಥಿಕತೆಯನ್ನು ಬಲಪಡಿಸುವುದು ಈಗ ಅನುಸರಿಸುತ್ತಿರುವ ಅಭಿವೃದ್ಧಿಯ ಮಾದರಿ ಎಂದರೆ ಬಂಡವಾಳವಾದ ಆಧಾರಿತ ಕೇಂದ್ರೀಕೃತ ಅರ್ಥನೀತಿಯನ್ವಯ ಸಾಧ್ಯವಾಗದ ಕೆಲಸ. ಈ ನಿರಾಶಾದಾಯಕ ಸ್ಥಿತಿಯಲ್ಲಿ ಅಭಿವ್ಯದ್ಧಿಯ ಪರ್ಯಾಯ ಮಾದರಿಗಳ ಕುರಿತು ಚಿಂತಿಸುವುದು ಅನಿವಾರ್ಯವಾಗಲಿದೆ. 24 ಏಪ್ರಿಲ್ ರಂದು, 10:31 ಪೂರ್ವಾಹ್ನ ಸಮಯಕ್ಕೆ · ಕೊರೊನಾ ಮುಖಾಂತರ ಪ್ರಕೃತಿ ಹೇಳಿದ ಪಾಠ ಪೃಥ್ವಿಯ ಎಲ್ಲೆಡೆ ಪ್ರಕೃತಿ ಸಂಪನ್ಮೂಲಗಳನ್ನು ಹಂಚಿದೆ. ಅವನ್ನು ಗುರ್ತಿಸಿ ಬಳಸುವ ಬುದ್ದಿಮತ್ತೆಯನ್ನು ಮಾನವನಿಗೆ ನೀಡಿದೆ. ಸ್ಥಳೀಯ ಸಂಪನ್ಮೂಲಗಳನ್ನು ಆಧರಿಸಿ ಆರ್ಥಿಕ ಚಟುವಟಿಕೆಗಳು ನಡೆದು ಜನರು ತಾವಿರುವ ಊರಿನಲ್ಲಿ ಉದ್ಯೋಗ ಪಡೆದು ಬದುಕು ಕಟ್ಟಿಕೊಳ್ಳಲು ಪ್ರಕೃತಿ ಅವಕಾಶ ಸೃಷ್ಟಿಸಿದೆ .. ಮಾನವತೆಯ ಹಿತ ಬಯಸುವವರು ಪರ್ಯಾಯ ವ್ಯವಸ್ಥೆಯ ಕುರಿತು ಚಿಂತಿಸಲೇಬೇಕಾದ ಸಂದರ್ಭವಿದು. ********

ಪ್ರಸ್ತುತ Read Post »

ಇತರೆ

ಪ್ರಸ್ತುತ

ಅವಕಾಶ  –   ವಂಚಿತರ ಗೆಲುವಿನ ಹೆಬ್ಬಾಗಿಲು! ವಸುಂಧರಾ ಕದಲೂರು   ಜನರು ಅವಕಾಶ ವಂಚಿತರಾಗಲು ಇರುವ ಕಾರಣಗಳು ಬಹಳ ಸಲ ಕ್ಷುಲ್ಲಕವಾಗಿರುತ್ತವೆ. ಅದರಲ್ಲೂ ಬಣ್ಣ, ಹಣ, ಅಧಿಕಾರ, ಜಾತಿ- ಇತರೆ ತಾರತಮ್ಯಗಳು ಪ್ರಮುಖವಾದವು. ಆದರೆ ಕೇವಲ ‘ಹೆಣ್ಣು’ ಎಂಬ ಕಾರಣಕ್ಕೇ ಅವಕಾಶ ವಂಚಿತರಾಗುವುದು ಇದೆಯಲ್ಲಾ ಇದಕ್ಕೆ ಏನೆನ್ನುವುದು..?            ತಮಗೆ ದೊರಕಿದ ಒಂದು ಸದಾವಕಾಶದಿಂದ ಎತ್ತರದ ಸಾಧನೆ ಮಾಡಿರುವ ಸುಧಾಮೂರ್ತಿ, ಕಿರಣ್ ಮಜುಂದಾರ್, ಹಿಮಾದಾಸ್ ಗುಪ್ತಾ, ಸಾನಿಯಾ ಮಿರ್ಜಾ, ಪಿ ಟಿ ಉಷಾ, ಪಂಢರೀಬಾಯಿ, ಲಕ್ಷ್ಮೀ, ಮಾಧವಿ, ಮಾಧುರಿ ದೀಕ್ಷಿತ್, ವೈದೇಹಿ, ತ್ರಿವೇಣಿ, ಬಿ. ಜಯಶ್ರೀ, ಎಸ್. ಜಾನಕಿ, ಬಿ ಆರ್ ಛಾಯಾ, ಡಾ. ಆಶಾ ಬೆನಕಪ್ಪ, ಡಾ. ವಿಜಯಲಕ್ಷ್ಮಿ ಬಾಳೆಕುಂದ್ರಿ, ಡಾ. ಮಲ್ಲಿಕಾ ಘಂಟಿ, ಡಾ. ಲೀಲಾ ಅಪ್ಪಾಜಿ, ಡಾ. ಉಷಾದಾತಾರ್, ಮಂಜುಭಾರ್ಗವಿ… ಹೀಗೆ ನಾನಾ ಬಗೆಯ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದವರನ್ನು ಜಗತ್ತು ಹೆಮ್ಮೆಯಿಂದ ಮೆಚ್ಚುತ್ತದೆ. ಆದರೆ, ಅದೆಷ್ಟೋ ಹೆಣ್ಣು ಜೀವಗಳು ಬದುಕುವ ಅವಕಾಶವೇ ಸಿಗದೆ, ತಾವು ಜೀವಂತ ಇರುವ ಕುರುಹನ್ನು ಬಿಟ್ಟುಕೊಡಲಾಗದೇ ಹೇಗೋ ದಿನದೂಡುತ್ತಿರುವುದನ್ನು ನಿರಾಕರಿಸಲಾಗುವುದೇ?   ತಾವೂ ಸಹ ಇತರರಂತೆಯೇ ಅಪಾರ ಸಾಮರ್ಥ್ಯ- ಸಾಧ್ಯತೆಗಳನ್ನು ಹೊಂದಿರುವವರು, ಅನನ್ಯ ಪ್ರತಿಭೆಗಳ ಪ್ರತಿನಿಧಿಗಳಾಗಿರುವವರು, ತಮಗೂ ಸಹ ಸೂಕ್ತ ವೇದಿಕೆ ದೊರೆತರೆ ಜಗಮಗಿಸಿ ಮಿಂಚಬಲ್ಲೆವು ಎನ್ನುವ ಹಲವಾರು ಪ್ರತಿಭಾನ್ವಿತರು ನಮ್ಮೊಡನಿದ್ದಾರೆ. ಆದರೆ ಅವರು ಅವಕಾಶ ವಂಚಿತರಾಗಿ ಅಜ್ಞಾತವಾಸ ಮಾಡುತ್ತಿದ್ದಾರೆ.  ಹೀಗೆ ಕತ್ತಲಲ್ಲಿ ಕೊಳೆಯುತ್ತಿರುವ ಚೈತನ್ಯಗಳನ್ನು ಬೆಳಕಿನ ಬಯಲಿಗೆ ತರುವುದು ಹೇಗೆ?             ನಮ್ಮ ನಡುವೆಯೇ ಹಲವು ಬಗೆಯಲ್ಲಿ ಅವಕಾಶ ವಂಚಿತರಾಗಿರುವವರಿದ್ದಾರೆ. ಒಂದಷ್ಟು ತಾಳ್ಮೆ ಹಾಗೂ ಅಂತಃಕರುಣೆಯಿಂದ ನೋಡಿದರೆ ಅಂತಹವರು ಕಣ್ಣಿಗೆ ಕಂಡಾರು…     ಆಕೆ ನನ್ನ ಅಕ್ಕನ ಕಾಲೇಜು ಗೆಳತಿ. ಆಕೆಗೆ ಸಂಬಂಧದಲ್ಲೇ ಮದುವೆಯಾಗಿ ಊರಿನಲ್ಲೇ ಉಳಿದವಳು. ಕಾಲೇಜಿನ ಸಾಂಸ್ಕೃತಿಕ ವೇದಿಕೆಗಳಲಿ ಮಿಂಚುತ್ತಿದ್ದವಳಿಗೆ ಪದವಿ ಶಿಕ್ಷಣ ಮುಗಿಸಿ, ಮುಂದೆಯೂ ಹೆಚ್ಚು ಓದಿ, ಉದ್ಯೋಗ ಹಿಡಿಯುವ ಮಹದಾಸೆ ಇತ್ತು. ಅದೇನಾಯಿತೋ ತಿಳಿಯದು, ಪದವಿಯ ಕೊನೆಯ ವರ್ಷದಲ್ಲಿ ಮದುವೆಯಾಗಿ ಹೋಯಿತು. ವರ್ಷ ಕಳೆಯುವಷ್ಟರಲ್ಲಿ ಒಂದು ಮಗುವಿನ ತಾಯಿಯೂ ಆದಳು. ಇನ್ನು ಪದವಿ ಮುಗಿಸುವುದಂತೂ ಅವಳ ಕನಸಾಗಿ ಉಳಿಯಿತು. ಕಳೆದ ವರ್ಷ ಯಾವುದೋ ಸಮಾರಂಭದಲ್ಲಿ  ಭೇಟಿಯಾದಾಗ ಆಕೆ ಹೇಳಿದ್ದಿಷ್ಟಿ, “ಮಗು ಬೆಳೆದು ದೊಡ್ಡದಾಯ್ತು. ಈಗಷ್ಟೇ ಎಜುಕೇಷನ್ ಕಂಪ್ಲೀಟ್ ಆಯ್ತು.  ಇನ್ನು ದೊಡ್ಡ ನಗರಕ್ಕೆ ಹೋಗಿ ಉದ್ಯೋಗ ಹಿಡಿದು ಲೈಫ್ ಸೆಟಲ್ ಮಾಡಿಕೊಳ್ಳಬೇಕನ್ನೋ ಹುಮ್ಮಸ್ಸಿನಲ್ಲಿದೆ. ನಂಗೆ ಖುಷಿ. ಆದರೆ ಮನೇಲಿ ನಾನು ಒಬ್ಬಳೇ ಉಳಿದೆ. ಈಗ ನನಗೂ ಏನಾದ್ರು ಮಾಡಬೇಕನ್ನೋ ಆಸೆಯಾಗ್ತಿದೆ. ಅಟ್ ಲೀಸ್ಟ್ ಡಿಗ್ರೀನಾದ್ರೂ ಕಂಪ್ಲೀಟ್ ಮಾಡ್ಕೊಳ್ಳೋಣ ಅಂತ” ಎಂದಳು.            ಆ ದಿನವೆಲ್ಲಾ ಆಕೆಯದ್ದೇ ಗುಂಗು ನನಗೆ. ಆಕೆಯ  ಪಾಸಿಟೀವ್ ನೇಚರ್ ನೋಡಿ ಖುಷಿ. ಆದರೆ ಅಪಾರ ಉತ್ಸುಕಳಾಗಿರುವ ಆಕೆಗೆ, ಹಿಂದೆ ಎಂದೋ ಅರ್ಧಕ್ಕೇ ಕೊನೆಗೊಂಡಿದ್ದ ಪದವಿ ಶಿಕ್ಷಣವನ್ನು ಪೂರ್ಣಗೊಳಿಸುವ ಚಿಗುರಿದ ಕನಸು ಹೆಮ್ಮರವಾಗಲು ಸಾಧ್ಯವಾದರೆ…! ಅದಕ್ಕಾಗಿ ಆಕೆಗೊಂದು ಅವಕಾಶ ಬೇಕಿದೆ.            ನಾಗರತ್ನ ನನ್ನ ಹೈಸ್ಕೂಲಿನ ಸಹಪಾಠಿ. ಉತ್ತಮ ಕ್ರೀಡಾಪಟು. ಓಟದಲ್ಲಂತೂ ಚಿಗರೆಯೇ. ಶಾಲೆಯನ್ನು ಪ್ರತಿನಿಧಿಸಿ ರಾಜ್ಯಮಟ್ಟದವರೆಗೆ ಹೋಗಿದ್ದವಳು..!ಮುಂದೇನಾಯಿತೋ ಗೊತ್ತಿಲ್ಲ. ಆಕೆ ಪಿ ಯು ಸಿ ಗೂ ಸಹ ಕಾಲೇಜಿನ ಮೆಟ್ಟಿಲು ಹತ್ತಲಿಲ್ಲ. ಡಾಕ್ಟರಳಾಗಲು ಆಕೆಗೆ ಬಹಳ ಆಸೆಯಿತ್ತು. ಸಾಧನೆಯ ಮೆಡೆಲುಗಳಿಗೆ ತಲೆಬಾಗಬೇಕಾದವಳು ಅದಾವ ಜವಾಬ್ದಾರಿಯ ನೊಗ ಎಳೆಯಲು ತನ್ನ ಹೆಗಲು ನೀಡಿದಳೋ..  ಮನೆಯ ಬಡತನ, ನೆರವು- ಅರಿವು- ಅವಕಾಶದ ಕೊರತೆಯೋ ತಿಳಿಯದು. ಆ ಚೇತನ ಈಗ ಅಸಮಾಧಾನದ ನಿಟ್ಟುಸಿರಿಡುತ್ತಾ ಅದೆಲ್ಲಿ ಬೇಯುತ್ತಿದೆಯೋ. ಪ್ರತಿಭಾವಂತ ಹುಡುಗಿಯೊಬ್ಬಳು ಅವಕಾಶ ವಂಚಿತಳಾಗಿ ಇತಿಹಾಸ ನಿರ್ಮಿಸುವುದನ್ನು ನಾವು ಕಾಣದಾದೆವು.                  ಸುಗುಣಾಗೆ ಇಬ್ಬರು ಹೆಣ್ಣುಮಕ್ಕಳು. ಸಾಕಷ್ಟು ಸ್ಥಿತಿವಂತರಾಗಿದ್ದ ಆಕೆಯ ಮನೆಯವರಿಗೆ ತಮ್ಮ ವಂಶೋದ್ಧಾರಕ್ಕಾಗಿ ಒಂದು ಗಂಡು ಮಗು ಬೇಕೆಂದು ಮುಂದಿನ ಮೂರು ಗರ್ಭಧಾರಣೆಯಲ್ಲೂ ನಿಷೇಧಿತ ಭ್ರೂಣಲಿಂಗಪತ್ತೆ ಮಾಡಿಸುವ ಮೂಲಕ ಆ ಭ್ರೂಣ ಹೆಣ್ಣೆಂದು ತಿಳಿದುಕೊಂಡು  ಸತತ ಮೂರು ಗರ್ಭಪಾತ ಮಾಡಿಸಿದ್ದರು. ಇದರಲ್ಲಿ ಆಕೆಯ ತಾಯಿ ಮನೆ ಹಾಗೂ ಅತ್ತೆ ಮನೆಯವರ ಪಾಲು ಸಮವಾಗಿತ್ತು. ಮನೆತನದ ಮರ್ಯಾದೆಗಾಗಿ, ಆರ್ಥಿಕ ಸ್ವಾವಲಂಬನೆಯಿಲ್ಲದೆ, ಹೆಚ್ಚಿನ ವಿದ್ಯಾನುಕೂಲವಿಲ್ಲದೆ ಸುಗುಣಾ ನಿರಂತರ ಗರ್ಭಧರಿಸುವಿಕೆ ಹಾಗೂ ಅವೈಜ್ಞಾನಿಕ ಗರ್ಭಾಪಾತಗಳಿಂದಾಗಿ, ತನ್ನ ಎರಡು ಹೆಣ್ಣುಮಕ್ಕಳನ್ನು ಇದೀಗ ಮಲತಾಯಿಯ ವಶಕ್ಕೊಪ್ಪಿಸಿ ತಾನು ಯಮನ ಪಾಲಾದಳು. ಸಹಜವಾಗಿ ಬದುಕುವ ಅವಕಾಶದಿಂದಲೇ ವಂಚಿತಳಾದಳು.     ಇಂತಹ ಹಲವು ವಿಚಾರಗಳನ್ನು ಎಲ್ಲಿಯೋ ನೋಡಿದಾಗ, ಕೇಳಿದಾಗ, ಓದಿದಾಗ ನಮ್ಮಹೃದಯಭಾರವಾಗುವುದು ಸಹಜ. ಮನಸ್ಸು ಸಹಾಯಕ್ಕೆ ತುಡಿಯುವುದೂ ಉಂಟು. ಹಾಗೆಂದ ಮಾತ್ರಕ್ಕೆ ಅವಕಾಶ ವಂಚಿತರಾಗಿರುವ ಎಲ್ಲರಿಗೂ ನಾವೊಬ್ಬರೇ ಅವಕಾಶ ಕಲ್ಪಿಸಿ ಕೊಡಲಾಗದು. ನಿಜ, ಆದರೆ, ಯಾರಿಗೆ ಅವಕಾಶವಾಗುವುದೋ ಅವರು ಇತರರಿಗೆ ಸಹಾಯ ಮಾಡಬಹುದಲ್ಲವೇ? ಯಾರು ತಮಗೆ ಈಗಾಗಲೇ ಸಿಕ್ಕಿರುವ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡು ಮೇಲೇರಿದ್ದಾರೆಯೋ ಅವರ ಬಗ್ಗೆ ವೃಥಾ ಕರುಬದೇ ಅವರ ಸಾಧನೆಗೆ  ಸಹೃದಯ ಮೆಚ್ಚುಗೆಯನ್ನು ನೀಡಬಹುದಲ್ಲವೇ! ಯಾರು ಇನ್ನೂ ಬದುಕಿನಲ್ಲಿ ಮೇಲೆ ಬರುವ ಪ್ರಯತ್ನದಲ್ಲಿದ್ದಾರೆಯೋ ಅವರಿಗೆ ನಿರ್ವಂಚನೆ ಭರವಸೆಯನ್ನು ತುಂಬಬಹುದಲ್ಲವೇ? ಬನ್ನಿ ಈ ಶುಭಕಾರ್ಯಕ್ಕೆ ಕೈಜೋಡಿಸೋಣ. **************

ಪ್ರಸ್ತುತ Read Post »

ಇತರೆ

ಪ್ರಸ್ತುತ

ಆರೋಗ್ಯ ಸಹಾಯಕರ ಸೇವೆ ಗುರುತಿಸುವ ಕಣ್ಣುಗಳಿಲ್ಲ ಮಲ್ಲಿಕಾರ್ಜುನ ಕಡಕೋಳ ಕೊರೊನಾ ಎಂಬ ಕರಾಳ ನೆರಳಿನಲ್ಲಿ ಯುದ್ಧೋಪಾದಿ ಕೆಲಸ ಮಾಡುತ್ತಿರುವವರು ಆರೋಗ್ಯ ಇಲಾಖೆಯ ವೈದ್ಯರು, ಶುಶ್ರೂಷಕರು, ಆಶಾ ಕಾರ್ಯಕರ್ತೆಯರು. ಇವರನ್ನು ಹೆಲ್ತ್ ವಾರಿಯರ್ಸ್ ಎಂದೇ ಬಣ್ಣಿಸಿ ಎಲ್ಲ ಕಡೆಗೂ ಅವರ ಸೇವಾ ಬಾಹುಳ್ಯ ಕೊಂಡಾಡಿ ಗೌರವಿಸುವುದನ್ನು ನಿತ್ಯವೂ ಕಾಣುತ್ತಿದ್ದೇವೆ. ಇದು ಸಂತಸ ಪಡುವ ವಿಷಯವೇ. ಆದರೆ ಇದೇ ಸಂದರ್ಭದಲ್ಲಿ ಅದೇ ಕೊರೊನಾ ಯುದ್ಧ ಭೂಮಿಯೊಳಗೆ ಅಕ್ಷರಶಃ ರಣರಂಗದ ಯೋಧರಂತೆ ಕೆಲಸ ಮಾಡುತ್ತಿರುವ ಬಹು ದೊಡ್ಡದಾದ ಮತ್ತೊಂದು ಆರೋಗ್ಯ ಸಮುದಾಯವೇ ಇಲ್ಲಿದೆ ಎಂಬುದನ್ನು ನಾವು ಮರೆತಿದ್ದೇವೆ. ನಾವು ಮರೆತ ಆ ಸಮುದಾಯದ ಹೆಸರು ಆರೋಗ್ಯ ಸಹಾಯಕರು. ಪ್ರಸ್ತುತ ಕೊರೊನಾ ಸಮರ ಭೂಮಿಯಲ್ಲಿ ಆರೋಗ್ಯ ಇಲಾಖೆಯ ಹದಿನೈದು ಸಾವಿರ ಮಹಿಳಾ ಮತ್ತು ಆರೇಳು ಸಾವಿರ ಪುರುಷ ಆರೋಗ್ಯ ಸಹಾಯಕರು ಸಂಪೂರ್ಣವಾಗಿ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ. ಜನಾರೋಗ್ಯ ಕಾಪಾಡುವ, ಅದರಲ್ಲೂ ವಿಶೇಷವಾಗಿ ಸಾಂಕ್ರಾಮಿಕ ರೋಗಗಳ ಹುಟ್ಟು, ಬೆಳವಣಿಗೆ, ರೋಗ ಹರಡುವಿಕೆಯ ವಿವಿಧ ಹಂತಗಳ ಕುರಿತಾಗಿ ಮೂರು ವರ್ಷಗಳ ಅವಧಿಯ ನಿಪುಣ ತರಬೇತಿಯನ್ನು ಇವರು ಸರಕಾರದ ತರಬೇತಿ ಕೇಂದ್ರಗಳಲ್ಲಿ ಪಡೆದಿರುತ್ತಾರೆ. ಐದುಸಾವಿರ ಜನಸಂಖ್ಯೆಗೆ ಓರ್ವ ಮಹಿಳಾ, ಓರ್ವ ಪುರುಷ ಆರೋಗ್ಯ ಸಹಾಯಕರನ್ನು ಸರಕಾರ ಜನಾರೋಗ್ಯ ಸೇವಾ ರಕ್ಷಣೆಗೆಂದು ನೇಮಿಸಿರುತ್ತದೆ. ಅದು ಎಂದಿನಂತೆ ಅವರ ದಿನನಿತ್ಯದ ರುಟೀನ್ ಡ್ಯೂಟಿ. ಸಾಂಕ್ರಾಮಿಕ ರೋಗಗಳು ಬಾರದಂತೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಂದು ಹಳ್ಳಿಗಳ ಮನೆ ಮನೆ ಭೆಟ್ಟಿಮೂಲಕ ಸೇವೆಮುಟ್ಟಿಸುವಲ್ಲಿ ಇವರು ಕರ್ತವ್ಯನಿರತರಾಗಿರುತ್ತಾರೆ. ಹೀಗಾಗಿ ಸಾಂಕ್ರಾಮಿಕ ರೋಗಗಳ ಪಿಡುಗಿನ ತೀವ್ರತೆ ಬಗ್ಗೆ ಆರೋಗ್ಯ ಸಹಾಯಕರಿಗೆ ಅಗತ್ಯ ಮಾಹಿತಿ, ಜ್ಞಾನ ಇರುವುದು ಸಹಜ. ಈ ಆರೋಗ್ಯ ಸಹಾಯಕರು ಈಗ ಹಳ್ಳಿ, ನಗರ, ಪಟ್ಟಣಗಳೆನ್ನದೇ ತಳಮಟ್ಟದಲ್ಲಿ ಮನೆ, ಮನೆ ಭೆಟ್ಟಿ ಕೊಟ್ಟು ಕೊರೊನಾ ಸಮೀಕ್ಷೆ ಮಾಡುವ ಕಾರ್ಯದಲ್ಲಿ ತೀವ್ರವಾಗಿ ತೊಡಗಿಸಿಕೊಂಡಿದ್ದಾರೆ. ಜೀವದ ಹಂಗು ತೊರೆದು ಹಗಲು ರಾತ್ರಿಗಳನ್ನು ಲೆಕ್ಕಿಸದೇ ನಿಸ್ಪೃಹ ಕೆಲಸವಲ್ಲ ಸೇವೆಯನ್ನೇ ಮಾಡುತ್ತಿದ್ದಾರೆ. ಕೊರೊನಾ ರೋಗದ ತಪಾಸಣೆ, ಕ್ವಾರಂಟೈನ್ ಡ್ಯೂಟಿ, ಹಾಟ್ ಸ್ಪಾಟ್ ಡ್ಯೂಟಿ, ಚೆಕ್ ಪೋಷ್ಟ್, ರಾಷ್ಟ್ರೀಯ ಹೆದ್ದಾರಿ ಡ್ಯೂಟಿ… ಹೀಗೆ ಒಂದಲ್ಲ ಎರಡಲ್ಲ ಹತ್ತು ಹಲವು ರಿಸ್ಕಗಳ ನಡುವೆ ವಯಕ್ತಿಕ ರಕ್ಷಾಕವಚ(ಪಿ.ಪಿ.ಇ. ಕಿಟ್)ಗಳಿಲ್ಲದೇ ಗಲ್ಲಿ, ಮೊಹಲ್ಲಾಗಳೆನ್ನದೇ, ತಮ್ಮ ಕುಟುಂಬಗಳ ಹಿತಾಸಕ್ತಿ ಮರೆತು ಕೊರೊನಾ ನಿರ್ಮೂಲನಾ ಸೈನಿಕರಂತೆ ಕೆಲಸ ಮಾಡುತ್ತಿದ್ದಾರೆ. ಎಷ್ಟೋ ಮಂದಿ ಕರ್ತವ್ಯನಿರತ ಆರೋಗ್ಯ ಸಹಾಯಕರು ಸಾರ್ವಜನಿಕರ, ಪೋಲೀಸರ ಲಾಠಿ ಏಟುಗಳಿಗೆ ತಮ್ಮ ಕೈ ಕಾಲುಗಳನ್ನು ಬಲಿ ಕೊಟ್ಟಿದ್ದಾರೆ. ಉದಾ: ಬೆಳಗಾವಿ ಮತ್ತು ಕಲಬುರ್ಗಿ ಜಿಲ್ಲೆಯ ಸೇಡಂ, ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ ಘಟನೆಗಳು. ಇದು ಆರೋಗ್ಯ ಸಹಾಯಕರ ಪಾಲಿನ ವರ್ತಮಾನದ ಕೊರೊನಾ ಯುದ್ಧ ಮಾತ್ರವಲ್ಲ. ಶತಮಾನದಷ್ಟು ಹಳತಾದ ಸಾಮಾಜಿಕ ಪಿಡುಗುಗಳಾಗಿಯೂ ಮನುಷ್ಯ ಕುಲವನ್ನು ಕಾಡಿದ, ಮನುಷ್ಯರ ಅಂಗವಿಕಲತೆಗೆ ಕಾರಣವಾಗುತ್ತಿದ್ದ ಸಿಡುಬು, ಕುಷ್ಠ, ನಾರುಹುಣ್ಣು, ಪೋಲಿಯೊ ಹೀಗೆ ಹತ್ತಾರು ಭಯಾನಕ ಮತ್ತು ಸಾಮಾಜಿಕವಾಗಿ ಕಳಂಕ ಭಾವಗಳ ಮೊತ್ತವೇ ಆಗಿದ್ದ ಅನೇಕ ಸಾಂಕ್ರಾಮಿಕ ರೋಗಗಳ ನಿರ್ಮೂಲನೆಯಲ್ಲಿ ಆರೋಗ್ಯ ಸಹಾಯಕರ ಪಾತ್ರ ಅಕ್ಷರಶಃ ಪ್ರಾತಃಸ್ಮರಣೀಯ. ಹೀಗೆ ನೂರೈವತ್ತಕ್ಕೂ ಹೆಚ್ಚು ವರ್ಷಗಳಿಂದ ಜನಾರೋಗ್ಯ ರಕ್ಷಣಾ ಕಾರ್ಯದಲ್ಲಿ ತಮ್ಮ ಆರೋಗ್ಯದ ಕಡೆಗೂ ಹೆಚ್ಚು ನಿಗಾವಹಿಸದೇ ಆರೋಗ್ಯ ಸಹಾಯಕರು ನಿರಂತರವಾಗಿ ವೈರಸ್, ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಿದ ಇತಿಹಾಸವಿದೆ. ಅದೇರೀತಿ ಇವತ್ತು ಸೈನಿಕರೋಪಾದಿಯಲ್ಲಿ ಕೊವಿಡ್-19 ರ ವಿರುದ್ಧ ಹೋರಾಡುತ್ತಿದ್ದಾರೆ. ಈ ಆರೋಗ್ಯ ಸಹಾಯಕ ಸೇನಾನಿಗಳು ಯಾವೊಂದು ಪ್ರಶಸ್ತಿ, ಸನ್ಮಾನ, ಶ್ಲಾಘನೆಗಳ ನಿರೀಕ್ಷೆಗಳಿಲ್ಲದೇ ಇಲಾಖೆಯ ಹುಟ್ಟಿನಿಂದಲೂ ತಮ್ಮ ಸೇವಾ ಅಸ್ಮಿತೆಯನ್ನು ಕಾಪಿಟ್ಟುಕೊಂಡಿದ್ದಾರೆ. ಇಂಥವರ ಕುರಿತು ಹೊಗಳಿಕೆ, ಗೌರವ, ಸನ್ಮಾನಗಳು ಒತ್ತಟ್ಟಿಗಿರಲಿ. ಮಾಧ್ಯಮಗಳಿಂದಾಗಲಿ, ಮಂತ್ರಿಗಳಿಂದಾಗಲಿ ಸಣ್ಣದೊಂದು ಶಹಬ್ಬಾಶ್ ಎನ್ನುವ ಸ್ಪೂರ್ತಿ, ಪ್ರೋತ್ಸಾಹದಾಯಕ ಮಾತುಗಳು ಕೇಳಿ ಬರುತ್ತಿಲ್ಲ. ಆರೋಗ್ಯ ಸಹಾಯಕರ ಸಮರೋಪಾದಿ ಸೇವಾ ಕೈಂಕರ್ಯ ಗುರುತಿಸುವ ಕಣ್ಣುಗಳೇ ಮಾಯವಾದವೇ? ಆರೋಗ್ಯ ಇಲಾಖೆ ಎಂದೊಡನೆ ಮಂತ್ರಿಗಳಿಗೆ ಮತ್ತು ಮಾಧ್ಯಮಗಳಿಗೆ ಥಟ್ಟಂತ್ ಕಾಣಿಸೋದು ಡಾಕ್ಟರ್ಸ್ ಮತ್ತು ನರ್ಸಸ್ ಹೆಚ್ಚೆಂದರೆ ಕಂಪೌಂಡರ್ಸ್. ಈ ಕಾಣುವಿಕೆ ನಾಲ್ಕು ಗೋಡೆಗಳ ನಡುವಿನ ಆಸ್ಪತ್ರೆಯ ಜಗತ್ತು. ಗುಡ್ಡಗಾಡು, ಹಳ್ಳಿ, ಮೊಹಲ್ಲಾ, ನಗರ, ಪಟ್ಟಣಗಳಲ್ಲಿ ಎಲ್ಲೆಲ್ಲಿ ಮನುಷ್ಯರು ವಾಸವಾಗಿರುವರೋ ಅಲ್ಲೆಲ್ಲ ಆರೋಗ್ಯ ಸಹಾಯಕರ ಸೇವಾ ಕೈಂಕರ್ಯ ನಾಡಿನ ಸಮಸ್ತ ಸಮುದಾಯಕ್ಕೆ ಸಲ್ಲುತ್ತಲಿದೆ. ಆದರೆ ಇತ್ತೀಚಿನ ದಿನಮಾನಗಳಲ್ಲಿ (೨೦೦೫ ರಿಂದ) ಹೊರಗುತ್ತಿಗೆಯಾಗಿ ನೇಮಕಗೊಂಡಿರುವ ಆಶಾ ಕಾರ್ಯಕರ್ತೆಯರು ಮಾತ್ರ ಸಮುದಾಯದ ನಿಕಟ ಸಂಪರ್ಕದ ಫ್ರಂಟ್‌ಲೈನ್ ಸೇನಾನಿಗಳು ಎಂಬಂತೆ ಮಾಧ್ಯಮಗಳಲ್ಲಿ, ಪ್ರಭುತ್ವದ ಕಣ್ಣುಗಳಲ್ಲಿ ಬಿಂಬಿತವಾಗಿ ಆರೋಗ್ಯ ಸಹಾಯಕರ ಚರಿತ್ರಾರ್ಹ ಸೇವಾ ಕೈಂಕರ್ಯವು ನೇಪಥ್ಯಕ್ಕೆ ಸರಿದಿರಬಹುದು.? ಕಾರಣ ಏನೇ ಇರಲಿ ಆರೋಗ್ಯ ಸಹಾಯಕರು ಸಲ್ಲಿಸುತ್ತಿರುವ ಗುಣಮಟ್ಟದ ಸೇವೆಗಳನ್ನು ಮಾಧ್ಯಮಗಳು, ಮಂತ್ರಿ ಮಹೋದಯರು ಗುರುತಿಸದಿದ್ದರೆ ಹೇಗೆ? ಆರೋಗ್ಯ ಇಲಾಖೆಯ ಬಹುದೊಡ್ಡ ಸೇವಾವಲಯ ಕುರಿತು ಯಾಕೆ ಮೀನಾ ಮೇಷ…? ಇದೇ ಕಾಲಘಟ್ಟದಲ್ಲಿ ಆರೋಗ್ಯ ಮಂತ್ರಿಗಳು ಶುಶ್ರೂಷಕರ ಸೇವೆಮೆಚ್ಚಿ ಭಕ್ಷೀಸೆಂಬಂತೆ “ಶುಶ್ರೂಷಾಧಿಕಾರಿ” ಎಂದು ಅವರ ಪದನಾಮ ಬದಲಾವಣೆ ಮಾಡುವ ಬೇಡಿಕೆ ಕುರಿತು ಸುದ್ದಿ ಕೇಳಿಬಂದ ಮರುದಿನವೇ ಶುಶ್ರೂಷಾ ದಿನಾಚರಣೆಯಂದು ಸರ್ಕಾರ “ಶುಶ್ರೂಷಾಧಿಕಾರಿ” ಎಂದು ಪದನಾಮ ಬದಲಾಯಿಸಿ ಆದೇಶ ಹೊರಡಿಸಿದೆ. ಆದರೆ ಕಳೆದೊಂದು ವರ್ಷದಿಂದ ” ಸಮುದಾಯ ಆರೋಗ್ಯಾಧಿಕಾರಿ ” ಎಂದು ತಮ್ಮ ಪದನಾಮ ಬದಲಾವಣೆ ಮಾಡುವ ಕುರಿತು ಆರೋಗ್ಯ ಸಹಾಯಕರು ಬೇಡಿಕೆ ಸಲ್ಲಿಸಿದ್ದರೂ ಆರೋಗ್ಯ ಮಂತ್ರಿಗಳು ಇದುವರೆಗೆ ಯಾವುದೇ ಪ್ರತಿಕ್ರಿಯೆ ತೋರಿಲ್ಲ. ಹೀಗಾಗಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿರುವ ಆರೋಗ್ಯ ಸಹಾಯಕರಿಗೆ ತಾವು ಸಲ್ಲಿಸುತ್ತಿರುವ ಸೇವೆಗಳ ಕುರಿತಾಗಲಿ ಅವರ ಅಸ್ತಿತ್ವ ಕುರಿತಾಗಲಿ ಪ್ರಭುತ್ವಕ್ಕೆ ಯಾಕಿಂಥ ಉದಾಸೀನ ಎಂಬುದು ಅನಾರೋಗ್ಯದ ಪ್ರಶ್ನೆಯಾಗಿ ಕಾಡತೊಡಗಿದೆ. **********

ಪ್ರಸ್ತುತ Read Post »

ಇತರೆ

ಲಹರಿ

ಅಮ್ಮ,ನಾವೂ ನಾಯಿ ಸಾಕೋಣ ಶೀಲಾ ಭಂಡಾರ್ಕರ್ ನಿನ್ನೆ ರಾತ್ರಿಯಿಂದಲೂ ನಮ್ಮ ಮನೆಯಲ್ಲಿ ಏನೋ ಗುಸುಗುಸು ಪಿಸುಪಿಸು ಕೇಳಿಸುತ್ತಿದೆ. ಇಡೀ ದಿನ ಬಿಡುವಿಲ್ಲದೇ ಮನೆಯ ಸ್ವಚ್ಛತೆಯಲ್ಲಿ ತೊಡಗಿದ್ದುದರಿಂದ ಅದರೆಡೆಗೆ ಅಷ್ಟಾಗಿ ಗಮನ ಕೊಡುವ ‌ಮನಸ್ಸಾಗಲಿಲ್ಲ ನನಗೆ. ಇವತ್ತು ಬೆಳಗಿನಿಂದಲೂ ಅತ್ಯಂತ ಶಾಂತ ವಾತಾವರಣ. ಯಾವುದೇ ಏರು ಧ್ವನಿಯ ಮಾತಿಲ್ಲ, ಜಗಳ ಕದನಗಳಿಲ್ಲ. ಕಿರುಚಾಟಗಳಿಲ್ಲ. ಮದ್ಯಾಹ್ನದವರೆಗೆ ಆರಾಮೋ ಆರಾಮ್. ಮದ್ಯಾಹ್ನ ಊಟದ ಸಮಯದಲ್ಲೂ ಒಬ್ಬರಿಗೊಬ್ಬರು ಸಹಕರಿಸಿಕೊಂಡು, ತಟ್ಟೆ, ನೀರು ಇಡುವುದರಿಂದ ಹಿಡಿದು ಮಾಡಿದ ಅಡುಗೆಯನ್ನು ಒಂದೊಂದಾಗಿ ಬಡಿಸುವಾಗಲೂ ಅದೇನು ಶಿಸ್ತು, ಅದೆಷ್ಟು ಸಂಯಮ. ತಟ್ಟೆಯಲ್ಲಿ ಬಡಿಸಿದ ಕೂಡಲೇ ಹುಡುಗಿಯರಿಬ್ಬರೂ ನಾವು ಬಾಲ್ಕನಿಗೆ ಹೋಗ್ತೇವೆ ಅಮ್ಮಾ ನೀನೂ ಅಲ್ಲಿಗೇ ಬಾ. ಅದೆಲ್ಲಿಂದ ಇಷ್ಟು ಪ್ರೀತಿ ಸುರೀತಿದೆ!? ಮೇಲೆ ಕೆಳಗೆ ನೋಡಿದೆ. ನಾನಿಷ್ಟು ಹೊತ್ತು ಹೇಳುತ್ತಾ ಇದ್ದ ಗುಸುಗುಸು, ಪಿಸುಪಿಸು, ಜಗಳ ಕದನ, ಶಾಂತಿ ಸಂಯಮ ಎಲ್ಲಾ ನಮ್ಮ ಮನೆಯ ಎರಡು ಹುಡುಗಿಯರ ಬಗ್ಗೆ. ದಿನ ಬೆಳಗಾದಲ್ಲಿಂದ ರಾತ್ರಿ ಮಲಗುವವರೆಗೆ ಒಂದಲ್ಲ ಒಂದು ಕಾರಣಕ್ಕೆ, ಒಂದಲ್ಲ ಒಂದು ಸಮಯದಲ್ಲಿ ಅರಚುವಿಕೆ, ಕಿರುಚುವಿಕೆ ಮತ್ತೆ ಸ್ವಲ್ಪ ಹೊತ್ತಿನಲ್ಲೇ ಅವರಿಬ್ಬರೂ ಜೊತೆಯಲ್ಲೇ ಕೂತು ಯಾವುದಾದರೂ ಸಿನೆಮಾ ನೋಡುತ್ತಾ ಜೋರಾಗಿ ಅಥವಾ ಕಿಲಕಿಲನೆ ನಗುತ್ತಾ ಇರುವುದು ನಮ್ಮ ಮನೆಯ ದಿನಚರಿ . ನಾನೂ ನನ್ನ ಊಟದ ತಟ್ಟೆಯೊಂದಿಗೆ ಬಾಲ್ಕನಿಗೆ ಬಂದೆ. ಮತ್ತದೇ ಗುಸುಗುಸು. ಗಮನಿಸದ ಹಾಗೆ ನಾನು ನನ್ನ ಪಾಡಿಗೆ ಊಟ ಮಾಡಲು ತೊಡಗಿದೆ. ಅಮ್ಮಾ.. ಏನೋ ಕೇಳಬೇಕಿತ್ತು. ಏನು? ಅಂದೆ. ನಾವು ಇಷ್ಟರವರೆಗೆ ಏನಾದರೂ ನಮಗೆ ಇಂಥದ್ದು ಬೇಕು ಎಂದು ಕೇಳಿದ್ದೇವಾ? ಇನ್ಯಾರು ಕೇಳಿದ್ದು ನಿಮ್ಮ ಪರವಾಗಿ, ಪಕ್ಕದ ಮನೆಯವರಾ!? ಅಲ್ಲಮ್ಮಾ.. ಬೇಕೇಬೇಕು ಅಂತ ಯಾವತ್ತಾದರೂ ಹಠ ಮಾಡಿದಿವಾ? ಇವತ್ತು ಹಠ ಮಾಡುವ ಯೋಚನೆಯಾ? ಕೇಳಿದೆ. ಹಾಗಂತ ಅಲ್ಲ. ಆದರೆ ಒಂದು ಆಸೆ. ನಿನಗೆ ಏನೂ ತೊಂದರೆ ಕೊಡಲ್ಲ. ನಾವೇ ಕೆಲಸ ಎಲ್ಲಾ ಮಾಡುತ್ತೇವೆ. ಏನು ವಿಷಯ? ವಿಷಯ ಏನು? ಅಂದೆ. ನೀನು ಹೇಳು ಅಂತ ಒಬ್ಬಳು ಇನ್ನೊಬ್ಬಳಿಗೆ. ದೊಡ್ಡವಳು ಅತ್ಯಂತ ಹಸನ್ಮುಖಿಯಾಗಿ ಕೂತಿದ್ದಳು. ಚಿಕ್ಕವಳು ಬಲು ಉತ್ಸಾಹದಿಂದ, ನಾನೇ ಹೇಳ್ತೇನೆ. ಎಂದು ಭಾಷಣ ಶುರು ಮಾಡುವ ಹಾಗೆ ನೆಟ್ಟಗೆ ಕೂತಳು. ನೀನು ಚಿಕ್ಕವಳಿದ್ದಾಗ ನಿಮ್ಮನೆಯಲ್ಲಿ ಒಂದು ಬೆಕ್ಕು ಇತ್ತು ಅಂತ ಹೇಳಿದ್ದೆ ಅಲ್ವಾ? ಅದರ ಹೆಸರು ಮೀನಾಕ್ಷಿ ಅಂತ ಇತ್ತು ಅಂತ ಕೂಡ.. ಅನ್ನುವುದರೊಳಗೆ, ನಾನು ಕೇಳಿದೆ, ಈಗ ಏನು ಬೆಕ್ಕು ತರ್ತೀರಾ? ಅಲ್ಲ. ನಾಯಿ. ಎಲಾ!! ಮತ್ತೆ ನಮ್ಮ ಮನೆಯ ಮೀನಾಕ್ಷಿ ವಿಷಯ ಯಾಕೆ ಬಂತು? ನಿಂಗೂ ಪ್ರಾಣಿಗಳನ್ನು ಸಾಕಿ ಗೊತ್ತಲ್ವಾ? ಮರೆತಿದ್ರೆ ಅಂತ ನೆನಪಿಸಿದ್ದು. ಅಂದಳು. ನಾಯಿ ಸಾಕಿದ್ರೆ ಎಷ್ಟು ಕೆಲಸ ಇದೆ ಗೊತ್ತಾ? ಅಂದೆ. ನಾವೇ ಮಾಡ್ತಿವಿ, ನಾವೇ ಮಾಡ್ತೀವಿ. ನಾನು ದಿನಾ ವಾಕಿಂಗ್ ಕರಕೊಂಡು ಹೋಗ್ತಿನಿ ಅಂದಳು ಚಿಕ್ಕವಳು. ಇಷ್ಟು ಹೊತ್ತೂ ಮಾತಾಡಿದ್ದೆಲ್ಲಾ ಚಿಕ್ಕವಳೆ. ನನ್ನ ಫ್ರೆಂಡ್ ಸಿಂಚನಾ ಹತ್ರನೂ ನಾಯಿ ಇದೆ. ಅವಳೇ ವಾಕ್ ಕರಕೊಂಡು ಹೋಗ್ತಾಳೆ. ನಾನೂ ಅವಳ ಜತೆ ಹೋಗ್ತೀನಿ. ನಾವಿಬ್ರೂ ಪಾಠದ ಬಗ್ಗೆ ಚರ್ಚೆ ಮಾಡಬಹುದು. ಯಾಕಂದ್ರೆ ಅವಳೂ ಕಾಮರ್ಸ್. ನಿಂಗೆ ಖುಷಿ ಆಗ್ತದೆ ಅಲ್ವಾ! ಮತ್ತೆ ನನಗೂ ವ್ಯಾಯಾಮ ಆಗುತ್ತೆ. ಬಡಬಡ ಹೇಳಿ ನಿಲ್ಲಿಸಿದಳು. ನೋಡಮ್ಮ, ಎಷ್ಟೆಲ್ಲಾ ಒಳ್ಳೆಯದಾಗುತ್ತೆ ಅದರಿಂದ. ದೊಡ್ಡವಳು ಬಾಯಿ ಬಿಟ್ಟಳು. ಮತ್ತೆ.. ಚಿಕ್ಕವಳದು ಶುರುವಾಯಿತು. ಅದರ ಎಲ್ಲಾ ಕೆಲಸ ನಾವೇ ಮಾಡ್ತೇವೆ. ಒಂದು ಎರಡು ಎಲ್ಲಾ ನಾವೇ ಕ್ಲೀನ್ ಮಾಡ್ತೇವೆ. ಹೋ… ನಾನು ಸ್ವಲ್ಪ ಎತ್ತರದ ದನಿಯಲ್ಲಿ , ಹೌದೌದು ಮಾಡೋ ಸಣ್ಣ ಪುಟ್ಟ ಕೆಲಸಕ್ಕೂ ದಿನಾ ಹೇಳಬೇಕು ನಿಮಗೆ. ಇನ್ನು ಇದೂ ನನ್ನ ತಲೆಗೆ ಬರುತ್ತೆ. ಚಿಕ್ಕವಳಿಗೆ ವಾಷಿಂಗ್ ಮೆಷಿನ್ ಗೆ ಬಟ್ಟೆ ಹಾಕೋ ಕೆಲಸ. ಹೇಗೆ ಹಾಕೋದು ಅಂತ ಹೇಳಿ ಕೊಡ್ತೀನಿ ಬಾ ಅಂತ ಕರೆದಾಗ ಕಿವಿಯೊಳಗೆ ವಯರ್ ಸಿಗಿಸಿಕೊಂಡು ಬಂದು ನಿಂತಳು. ಅದೆಷ್ಟು ಕೇಳಿಸಿತೋ ಅವಳಿಗೇ ಗೊತ್ತು. ವಯರ್ ಕಿತ್ತು ಎಳೆದೆ, ನೀನು ಹೇಳು. ನಂಗೆ ಕೇಳಿಸುತ್ತೆ ಅಂತ ಮತ್ತೆ ಸಿಕ್ಕಿಸಿಕೊಂಡು ಅದರ ಜೊತೆಗೆ ಹಾಡುತ್ತಾ ನಿಂತಳು. ಗೊತ್ತಾಯ್ತಾ? ಅಂತ ಸನ್ನೆ ಮಾಡಿದ್ರೆ. ಗೊತ್ತಾಯ್ತೂ ಅಂತ ಕಿರುಚಿದಳು. ಯಾಕಂದ್ರೆ ಜೋರಾಗಿ ಹಾಡು ಹಾಕಿದ್ದಳಲ್ಲ ಕಿವಿಯೊಳಗೆ. ಸರಿಯಾದ ಸಮಯಕ್ಕೆ ವಾಷಿಂಗ್ ಕೆಲಸ ಆಗ್ತಾ ಇದೆ. ಖುಷಿಯಾಯ್ತು. ಆದರೆ.. ಬಟ್ಟೆ ಏನೋ ಒಂಥರಾ ವಾಸನೆ. ಘಮ್ ಅನ್ನುತಿಲ್ಲ. ಅವಳನ್ನು ಕರೆದು ಕೇಳಿದೆ. ಕಂಫರ್ಟ್ ಹಾಕ್ತಿದ್ದಿಯಲ್ವಾ? ಇಲ್ಲ.. ಅದೆಲ್ಲಾ ಹಾಕಬೇಕಾ? ಕೇಳ್ತಾಳೆ. ಅಯ್ಯೋ ಸೋಪಿನ ಪುಡಿ ಜೊತೆ ಕಂಫರ್ಟ್ ಕೂಡ ಹಾಕಬೇಕು ಅಂದಿಲ್ವಾ ಅಂದೆ. ಆಟೋಮೆಟಿಕ್ ಅಲ್ವಾ ಅದೆಲ್ಲಾ ನಾವು ಹಾಕ್ಕೋಬೇಕಾ? ಬರೀ ಸ್ವಿಚ್ ಮಾತ್ರ ನಾವು ಹಾಕೋದಲ್ವಾ? ಮತ್ತೆಲ್ಲಾ ಅದೇ ಮಾಡ್ಕೊಳ್ಳುತ್ತೆ ಅಂತ ತಾನೇ ಆಟೋಮೆಟಿಕ್ ಅಂದ್ರೆ. ತಲೆ ಚಚ್ಚಿಕೊಂಡೆ. ಇಂಥವಳು ನಾಯಿ ತಂದ್ರೆ ಒಂದು ಎರಡು ಮೂರು ಎಲ್ಲಾ ಕೆಲಸನೂ ತಾನು ಮಾಡುತ್ತಾಳಂತೆ. ಸ್ವಲ್ಪ ವ್ಯಂಗ್ಯವಾಗಿ ನೆನಪಿಸಿದೆ. ಆಗ ಗೊತ್ತಿರಲಿಲ್ಲ. ಈಗ ಸರಿ ಮಾಡ್ತಿದಿನಿ ಅಲ್ವಾ? ಅದೆಲ್ಲಾ ಕೆಲಸ ಮಾಡಿದ್ರೆ ನಾಳೆ ನಾವು ದೊಡ್ಡವರಾಗಿ ಮದುವೆ ಆಗಿ ಮಕ್ಕಳಾದಾಗ, ಮಕ್ಕಳ ಕೆಲಸ ಮಾಡಲು ಸುಲಭ ಆಗುತ್ತೆ. ಆಗ ಕಷ್ಟ ಅನಿಸಲ್ಲ. ಅಲ್ವಾ ಅಂತ ದೊಡ್ಡವಳನ್ನು ನೋಡಿದಳು. ಅವಳು ಹಲ್ಲು ಕಚ್ಚಿ ಹಿಡಿದು, ನಿಂಗೆ ಎಷ್ಟು ಮಾತಾಡಕ್ಕೆ ಹೇಳಿದ್ನೋ ಅಷ್ಟೇ ಮಾತಾಡು. ಜಾಸ್ತಿ ಬೇಡ. ಅಂದಳು. ಚಿಕ್ಕವಳು ತಲೆ ತಗ್ಗಿಸಿ ಊಟ ಮಾಡಲು ತೊಡಗಿದಳು. ದುಡ್ಡು ಎಷ್ಟು ಬೇಕು ಅದಕ್ಕೆ? ಆಮೇಲೆ ಖರ್ಚು ಎಷ್ಟಿದೆ ಗೊತ್ತಾ ಅದರದ್ದು? ಅಂದೆ. ಚಿಕ್ಕವಳು ಏನಂತಾಳೆ ಗೊತ್ತಾ.. ನಾನು ಸೈನ್ಸ್ ತಗೊಂಡಿದ್ರೆ ಟ್ಯೂಷನ್, ಪೆಟ್ರೋಲ್ ಅಂತ ಎಷ್ಟೊಂದು ದುಡ್ಡು ಖರ್ಚಾಗ್ತಿರಲಿಲ್ವಾ? ಅದು ಉಳಿದಿಲ್ವಾ? ಹಾಗಾದ್ರೆ ನಾಯಿ ತರೊ ಯೋಚನೆ ನೀನು ಕಾಮರ್ಸ್ ತಗೊಳ್ತಿನಿ ಅನ್ನುವಾಗಲೇ ಇತ್ತಾ? ಕೇಳಿದೆ. ಇಲ್ಲಾ ನಿನ್ನೆ ಶುರುವಾಯ್ತು. ತುಂಬಾ ಆಸೆ ಮಾಡುತ್ತಮ್ಮ ಅದು. ನಿಂಗೂ, ಅಪ್ಪನಿಗೂ ಎಷ್ಟು ಖುಷಿಯಾಗುತ್ತೆ ಗೊತ್ತಾ ಆಮೇಲೆ. ದೊಡ್ಡವಳು ಕೂಡಲೇ ಕಣ್ಣು ಇಷ್ಟು ದೊಡ್ಡದು ಮಾಡಿ, ಅವಳನ್ನು ಕಣ್ಣಲ್ಲೇ ಕಿರುಚಿ ಗದರಿಸಿದಳು. ಆಮೇಲೆ ಮೆಲ್ಲ ಅತ್ಯಂತ ಮೃದುವಾಗಿ ತಂಗಿಗೆ, “ನೀನಿನ್ನು ಹೋಗು. ಇಷ್ಟೇ ಇದ್ದಿದ್ದು ನಿಂಗೆ ಮಾತಾಡ್ಲಿಕ್ಕೆ.” ಅವಳು ಎದ್ದು ಹೋಗುವಾಗ ತಿರುಗಿ ನೋಡಿ. ಹೆಂಗೆ? ನಾನಲ್ವಾ ಒಪ್ಪಿಸಿದ್ದು. ಅಂದಳು. ಯೇಯ್ ಬಾ.. ಇಲ್ಲಿ. ನಾನು ಯಾವಾಗ ಒಪ್ಪಿದೆ? ನಾನಿನ್ನೂ ಯೋಚನೆನೂ ಮಾಡಿಲ್ಲ ಅಂದೆ. ಒಪ್ಪಿಲ್ವಾ? ಛೆ! ಇಷ್ಟು ಹೊತ್ತು ಎಷ್ಟು ಕಷ್ಟ ಪಟ್ಟು ಏನೇನೋ ಹೇಳಿದೆ. ಒಪ್ಪಲ್ವಾ!?? ಅಂದಳು. ಕಣ್ಣಲ್ಲಿ ನೀರು ತುಂಬಿ ತುಳುಕುತ್ತಿದೆ. ದೊಡ್ಡವಳನ್ನು ನೋಡಿದರೆ ಅವಳೂ ಅತ್ಯಂತ ದೀನಳಾಗಿ ನೋಡುತಿದ್ದಾಳೆ. ಪಾಪ ಅನಿಸಿತು. ಆಯ್ತು ಅಂದಿದಿನಿ. ಹೊಸದರಲ್ಲಿ ಅಗಸ ಗೋಣಿ ಒಗೆದಂತೆ, ಆಮೇಲೆ ನನ್ನ ತಲೆಗೆ ಕಟ್ಟುತ್ತಾರೆ. ನನ್ನ ಪರವಾಗಿ ಸಾಕ್ಷಿಗೆ ಬೇಕಾಗಬಹುದು ಅಂತ ನಿಮಗೆ ತಿಳಿಸಿದೆ. ನೋಡೋಣ ಯಾರೆಲ್ಲಾ ಬರ್ತೀರಿ ಅಂತ. **********************************

ಲಹರಿ Read Post »

ಇತರೆ

ನೆನಪುಗಳು

ಹಲಸಿನ ಹಪ್ಪಳ ಸಂಧ್ಯಾಶೆಣೈ ಇವತ್ತು ನಮ್ಮ ಕೆಳಗಿನ ಮನೆಯವರು ಒಂದು ಸಣ್ಣ ತುಂಡು ಹಲಸಿನ ಗುಜ್ಜೆ ಕೊಟ್ಟಿದ್ದರು ..ಅದನ್ನು ಅಕ್ಕಿಯ ಆಳಾವಣದಲ್ಲಿ ಹಾಕಿ ಫ್ರೈ ಮಾಡಿದೆ ..ಆಗ ನನಗೆ ಸೋಮೇಶ್ವರದ ದಿನಗಳು ನೆನಪಾದವು.. ಹೀಗೆ ಬೇಸಿಗೆ ದಿನಗಳಲ್ಲಿ ಮನೆಗೆ ಆಗಾಗ ಹಲಸಿನ ಕಾಯಿ ಬರುತ್ತಿತ್ತು..ಉಪಿಗೆ ಸೋಳೆ ಹಾಕಲು.. ಹಪ್ಪಳ ಮಾಡಲು ಎಂದು.. ಆಗೆಲ್ಲ ಅಮ್ಮ ಹಲಸಿನ ಕಾಯಿಯ ವೈವಿಧ್ಯಮಯ ಪಲ್ಯಗಳನ್ನು ಮಾಡುತ್ತಿದ್ದರು.. ಸೋಳೆ ಹಾಕಲು ತಂದ ಹಲಸಿನ ಕಾಯಿಯ ಉಪಕ್ಕರಿ .ಅದರ ಒಟ್ಟಿಗೆ ಸೌತೆ ಕಾಯಿ ಹಾಕಿ ಮಾಡಿದ ಗುಜ್ಜ.. ಹಲಸಿನ ಕಾಯಿ ಮತ್ತೆ ಧಾನ್ಯ ಹಾಕಿ ಕೊದ್ದೆಲು.. ಎಳೇಕಡಗಿ ಸಣ್ಣ ಸಣ್ಣ ಬೀಜ ಆಗುತ್ತಾ ಇರುವಂತಹ ಹಲಸಿನ ಕಾಯಿಯಿಂದ ಪೋಡಿ.. ಒಂದೇ ಎರಡೇ .. ಹಣ್ಣು ಸಿಕ್ಕಿದರೆ ದೋಸೆ ..ಇಡ್ಲಿ.. ಪಾತ್ತೋಳಿ. ಪಾಯಸ.. ಮೂಳಿಕ ಎಂದು ಎಷ್ಟೆಲ್ಲ ಬಗೆ ಮಾಡುತ್ತಿದ್ದರು.. ಈಗ ನೋಡಿದ್ರೆ ಅನ್ನಿಸ್ತಾ ಇದೆ ಪಾಪ! ನಮ್ಮ ಬಾಯಿ ರುಚಿಗಾಗಿ ಎಷ್ಟೆಲ್ಲ ಕಷ್ಟಕರ ಕೆಲಸವನ್ನು ಮಾಡುತ್ತಿದ್ದರು ..ನಾವಂತೂ ಬಕಾಸುರರು ಏನು ಮಾಡಿಟ್ಟರು ಸ್ವಾಹ ಎನ್ನುತ್ತಿದ್ದೆವು. ನಾವು ಬೆಳಿಗ್ಗೆ ಎದ್ದು ಬರುವಾಗಲೇ ಅಜ್ಜಿ ಹಲಸಿನ ಹಣ್ಣನ್ನು ಕೊಯ್ದು ಗೋಣಿಯ ಮೇಲೆ ಶೇಡು ಶೇಡು ಮಾಡಿ ಇಟ್ಟಿರುತ್ತಿದ್ದರು .ನಾವು ಎದ್ದವರೇ ಬೇಕಾದಷ್ಟು ತಿಂದು ಸ್ವಲ್ಪ ಹಣ್ಣನ್ನು ಬಿಡಿಸಿ ಸೊಳೆ ಬೇರೆ ಬೀಜ ಬೇರೆ ಮಾಡಿ ಬಿಡುತ್ತಿದ್ದೆವು . ಅಮ್ಮ ಹೇಳುತ್ತಿದ್ದರು ಹಸಿದ ಹಲಸು ಉ೦ಡ ಮಾವು ಎಂದು.. ಅಂದ್ರೆ ಹಸಿದಿರುವಾಗ ಹಲಸಿನ ಹಣ್ಣು ತಿನ್ನಬೇಕು ಊಟ ಆದ ಮೇಲೆ ಮಾವಿನ ಹಣ್ಣು ತಿನ್ನಬೇಕು ಎಂದು. ಇಷ್ಟು ಮಾತ್ರವೇ ಆ ದಿನಗಳಲ್ಲಿ ನಮ್ಮ ಬೇಸಿಗೆ ರಜೆಯಲ್ಲಿ ಹಲಸಿನ ಹಪ್ಪಳದ ಫ್ಯಾಕ್ಟರಿಯೇ ನಮ್ಮಲ್ಲಿ ನಡೆಯುತ್ತಿತ್ತು. ರಾತ್ರಿ ದೊಡ್ಡ ದೊಡ್ಡ ಹಲಸಿನ ಕಾಯಿಗಳನ್ನು ಕರ್ಕು ಎಂಬ ಹೆಸರಿನ ಹೆಂಗಸು ತಲೆಯ ಮೇಲೆ ಹೊತ್ತು ತಂದು ನಮ್ಮ ಮನೆಯಲ್ಲಿ ಹಾಕಿ ಅದನ್ನು ಕೊಡಲಿಯಿಂದ ನಾಲ್ಕು ನಾಲ್ಕು ಭಾಗ ಮಾಡಿ ಹಾಕಿ ಹೋಗುತ್ತಿದ್ದಳು.. ಈಗ ಎಣಿಸಿದರೆ ಅವಳ ಆ ಶಕ್ತಿ ವಿಸ್ಮಯಕಾರಿ ಅನ್ನಿಸುತ್ತಾ ಇದೆ. ಒಂದಲ್ಲ ಎರಡಲ್ಲ ಕೆಲವೊಮ್ಮೆ ಮೂರು ನಾಲ್ಕು ಹಲಸಿನ ಕಾಯಿಯನ್ನು ತಲೆಯ ಮೇಲೆ ಹೊತ್ತುಕೊಂಡು ಎರಡು ಮೂರು ಮೈಲು ನಡೆದುಕೊಂಡು ಬರುತ್ತಿದ್ದಳು.. ಪಾಪ ಅದನ್ನು ನಮ್ಮಲ್ಲಿ ಹಾಕಿ ಒಡೆದು ಕೊಟ್ಟು ಅಮ್ಮ ಕೊಟ್ಟ ಕಾಫಿಯನ್ನು ಕುಡಿದು ಹೋಗುತ್ತಿದ್ದಳು. ಆಮೇಲೆ ಅಜ್ಜಿಯಾಗಿ ಕೆಲಸದವರಾಗಲಿ ಅದನ್ನು ಶಾಡ್ ಶಾಡ್ ಮಾಡಿ ತುಂಡು ಮಾಡಿ ಹಾಕುತ್ತಿದ್ದರು. ನಾವೆಲ್ಲರೂ. ತುಳಸಿ ಕಟ್ಟೆಯ ಎದುರಿನ ದಂಡೆ ಮೇಲೆ ಕುಳಿತುಕೊಂಡು ಆ ಹಲಸಿನಕಾಯಿಯನ್ನು ಬಿಡಿಸುತ್ತಿದ್ದೆವು. ಆಗ ಅಮ್ಮನಾಗಲೀ ಅಕ್ಕನಾಗಲೀ ಏನಾದರೂ ಕಥೆಯನ್ನು ನಮಗೆ ಹೇಳುತ್ತಿದ್ದರು.. ಅದನ್ನು ಕೇಳುತ್ತಾ ಕೇಳುತ್ತಾ ಹಲಸಿನ ಕಾಯಿ ಬಿಡಿಸಿದ್ದೇ ನಮಗೆ ತಿಳಿಯುತ್ತಿರಲಿಲ್ಲ.. ಬೆಳಿಗ್ಗೆ ನಾವು ಏಳುವಾಗ ಕಾಫಿ ತಿ೦ಡಿಯಾದ ಮೇಲೆ ಇಡ್ಲಿ ಬೇಯಿಸುವ ಪಾತ್ರೆಯಲ್ಲಿ ಹಲಸಿನ ಕಾಯಿ ಹದವಾಗಿ ಬೆಂದು ತಯಾರಾಗುತ್ತಿತ್ತು.. ಅದನ್ನು ಒರಳು ಕಲ್ಲಿನಲ್ಲಿ ಹಾಕಿ ಮರದ ಗುದ್ದಲಿಯಿಂದ ಗುದ್ಧಿ ಗುದ್ಧಿ ನಮ್ಮ ಕೆಲಸದ ಹೆಂಗಸು ಹಿಟ್ಟು ಮಾಡಿ ಕೊಡುತ್ತಿದ್ದರು.. ಕೆಲವೊಮ್ಮೆ ಅಜ್ಜಿಯೇ ಹಿಟ್ಟು ಮಾಡುತ್ತಿದ್ದರು ..ಅದರೊಂದಿಗೆ ಹದವಾಗಿ ಗುದ್ದಿಟ್ಟ ಮೆಣಸು.. ಕೊತ್ತಂಬರಿ ..ಉಪ್ಪು ..ಹಾಕಿ ಹದವಾಗಿ ಹಿಟ್ಟು ತಯಾರಾಗುತ್ತಿತ್ತು.. ತಯಾರಾದ ಹಿಟ್ಟನ್ನು ಒಂದು ಪಾತ್ರೆಯಲ್ಲಿ ಹಾಕಿ ಸುಮಾರು ಹತ್ತು ಹನ್ನೊಂದು ಗಂಟೆ ಹೊತ್ತಿಗೆ ನಾವೆಲ್ಲರೂ ಕೂತು ಹಲಸಿನ ಹಪ್ಪಳ ಮಾಡುವ ಕಾರ್ಯಾಗಾರವನ್ನು ಶುರು ಮಾಡುತ್ತಿದ್ದೆವು ..ಹೆಚ್ಚಾಗಿ ಅಜ್ಜಿ ಅಥವಾ ಅಮ್ಮ ಉರುಟುರುಟು ಉಂಡೆ ಕಟ್ಟಿ ಇಡುತ್ತಿದ್ದರು.. ಅದನ್ನು ನಾವು ಮಕ್ಕಳು ಎರಡು ಪ್ಲಾಸ್ಟಿಕ್ಕಿನ ನಡುವೆ ಇಟ್ಟು ಒತ್ತುತ್ತಿದ್ದೆವು ಅದನ್ನು ಅಮ್ಮನಾಗಲೀ ಅಜ್ಜಿಯಾಗಲೀ ತಟ್ಟಿ ತಟ್ಟಿ ದೊಡ್ಡ ಹಪ್ಪಳವನ್ನಾಗಿ ಮಾಡುತ್ತಿದ್ದರೆ ಅದನ್ನು ನಾವು ಯಾರಾದರೊಬ್ಬರು ಚಾಪೆಗೆ ಹಚ್ಚುತ್ತಿದ್ದೆವು.. ಚಾಪೆ ತುಂಬಿದ ಮೇಲೆ ಹೊರಗೆ ಅಂಗಳದಲ್ಲಿ ಚಾಪೆಯನ್ನು ತೆಗೆದುಕೊಂಡು ಹೋಗಿ ಹಾಕುತ್ತಿದ್ದೆವು ..ಆ ಕೆಲಸ ಭಹುಷ್ಯ ಮಧ್ಯಾಹ್ನದೊಳಗೆ ಮುಗಿಯುತ್ತಿತ್ತು.. ಹಪ್ಪಳ ತಟ್ಟುತ್ತಾ ತಟ್ಟುತ್ತಾ ನಾವು ಅದೆಷ್ಟು ಹಿಟ್ಟನ್ನು ಎಣ್ಣೆಯಲ್ಲಿ ಮುಳುಗಿಸಿ ಮುಳುಗಿಸಿ ತಿನ್ನುತ್ತಿದ್ದೆವು ಲೆಕ್ಕವೇ ಇಲ್ಲ .ಆ ಹಿಟ್ಟು ಎಷ್ಟು ರುಚಿಯಾಗಿರುತ್ತದೆ ಎಂದರೆ ನಾವೆಲ್ಲರೂ ದೊಡ್ಡವರಾದ ಮೇಲೆ ಕೇವಲ ಹಿಟ್ಟು ತಿನ್ನುವುದು ಗೋಸ್ಕರ ಹಲಸಿನ ಹಪ್ಪಳದ ಹಿಟ್ಟನ್ನು ಅಮ್ಮ ಮಾಡುತ್ತಿದ್ದರು.ನಮ್ಮ ಭಾಗ್ಯಕ್ಕೆ ಅಮ್ಮನಿಗೂ ಇಂಥದ್ದೆಲ್ಲ ತಿನ್ನುವುದೆಂದರೆ ತುಂಬಾ ಇಷ್ಟ ..ಹಾಗಾಗಿ ಅಮ್ಮ ಇದನ್ನೆಲ್ಲ ಬಹಳ ಉತ್ಸಾಹದಿಂದಲೇ ಮಾಡುತ್ತಿದ್ದರು .ಅಜ್ಜಿಗೆ ಅದನ್ನೆಲ್ಲ ತಿನ್ನುವ ಆಸಕ್ತಿ ಇಲ್ಲದಿದ್ದರೂ ನಮ್ಮೆಲ್ಲರ ಸಂತೋಷಕ್ಕಾಗಿ ನಿಷ್ಠೆಯಿಂದ ತಮ್ಮ ಕೆಲಸವನ್ನು ಮಾಡುತ್ತಿದ್ದರು . ಹಪ್ಪಳ ಹೊರಗೆ ಹಾಕಿದ ಮೇಲೆ ಇರುವುದು ಇನ್ನೂ ದೊಡ್ಡ ಕೆಲಸ .ಅದೇನೆಂದರೆ ಹಪ್ಪಳವನ್ನು ಕಾಗೆ ..ನಾಯಿ ತೆಗೆದುಕೊಂಡು ಹೋಗದಂತೆ ಕಾಯುವುದು. ಅದಕ್ಕಂತೂ ನಾವ್ಯಾರೂ ಸುತಾರಾಂ ಒಪ್ಪುತ್ತಿರಲಿಲ್ಲ .ಭಯಂಕರ ಬೋರಿಂಗ್ ಕೆಲಸ ಅದು.ಇದಕ್ಕಿಂತ ಈಗ ಲಾಕ್ ಡಾನ್ ಅವಧಿಯಲ್ಲಿ ಮನೆಯಲ್ಲಿ ಇರುವುದೇ ಎಷ್ಟೋ ಉತ್ತಮ.. ನಾವಂತೂ ಮಕ್ಕಳು.. ಆಡುವುದರಲ್ಲೇ ತಲೆ ನಮಗೆ ..ಎಷ್ಟು ಹಪ್ಪಳ ಕಾಯುತ್ತೇವೆ ..ಕೆಲವೊಮ್ಮೆ ಅಲ್ಲಿ ಜಗಲಿಯ ಮೇಲೆ ಆಡಿಕೊಂಡು ಹಪ್ಪಳದ ಕಡೆ ನೋಡುತ್ತಾ ಇರುತ್ತಿದ್ದೆವು.. ಆದರೂ ನಮ್ಮ ಕಣ್ತಪ್ಪಿಸಿ ಕಾಗೆ ಬಂದೇ ಬಿಡುತ್ತಿತ್ತು.. ಹಾಗಾಗಿ ಮಧ್ಯಾಹ್ನ ನಂತರ ಹೆಚ್ಚಾಗಿ ಅಜ್ಜಿ ಒಂದು ಚಂದಮಾಮವನ್ನೋ ಮಯುರವನ್ನೋ ಹಿಡಿದುಕೊಂಡು ಓದುತ್ತ ಒಂದು ಉದ್ದಕೋಲನ್ನು ಹಿಡಿದುಕೊಂಡು ಕಾಗೆಯನ್ನು ಓಡಿಸುತ್ತಿದ್ದದ್ದು ಇವತ್ತಿಗೂ ಕಣ್ಣೆದುರು ಕಾಣಿಸುತ್ತಿದೆ .. ಇಷ್ಟೇ ಮಾತ್ರವಲ್ಲ ಅರ್ಧ ಒಣಗಿದ ಹಲಸಿನ ಹಪ್ಪಳವನ್ನು ತೆಂಗಿನೆಣ್ಣೆಯಲ್ಲಿ ಮುಳುಗಿಸಿ ತಿನ್ನುವ ಇನ್ನೊಂದು ರುಚಿಯೂ ವರ್ಣಿಸಲಸಾಧ್ಯ. ಹಾಗಾಗಿ ಕೆಲವೊಮ್ಮೆ ನಾವೆಲ್ಲರೂ ಸೇರಿ ಅರ್ಧ ಚಾಪೆಯನ್ನೇ ಖಾಲಿ ಮಾಡಿ ಬಿಡುತ್ತಿದ್ದೆವು. ಅಮ್ಮ ಸುಳ್ಳು ಸುಳ್ಳೇ ಬೈಯುತ್ತಿದ್ದರು. ಯಾಕೆಂದರೆ ಅವರಿಗೂ ಅಂಥದ್ದೆಲ್ಲ ತಿನ್ನುವುದೆಂದರೆ ಬಹಳ ಇಷ್ಟ. ಹಾಗಾಗಿ ಅವರ ಬೈಗಳನು ನಾವೇನು ಬಹಳ ಸೀರಿಯಸ್ಸಾಗಿ ತೆಗೆದುಕೊಳ್ಳುತ್ತಿರಲಿಲ್ಲ ..ನಮ್ಮ ಕೆಲಸ ನಾವು ಮಾಡುತ್ತಾನೆ ಹೋಗ್ತಿದ್ದೆವು. ಎರಡು ಮೂರು ದಿನ ಒಣಗಿ ಬಂದ ಹಪ್ಪಳ ಇಪ್ಪತ್ತೈದು ಇಪ್ಪತ್ತೈದು ಲೆಕ್ಕ ಮಾಡಿ ಕೊಡುವುದೇ ನಮ್ಮ ಸಂಭ್ರಮದ ಕೆಲಸ.. ಆಗ ಪ್ಲಾಸ್ಟಿಕ್ ಯುಗ ಅಲ್ಲದ ಕಾರಣ ಹಪ್ಪಳವನ್ನು ಬಾಳೆನಾರಿನ ಹಗ್ಗದಲ್ಲಿ ಚೆಂದವಾಗಿ ಕಟ್ಟಿ ಪುನಃ ಮತ್ತೊಂದು ದಿನ ಬಿಸಿಲಿನಲ್ಲಿಟ್ಟು ಆಮೇಲೆ ಡಬ್ಬಿಯಲ್ಲಿ ಹಾಕಿಟ್ಟರೆ ಹಪ್ಪಳದ ಮಹಾಕಾರ್ಯ ಮುಗಿದಂತೆ . ಮತ್ತೆ ಮಳೆಗಾಲದಲ್ಲಿ ನಮ್ಮೂರ ಎಡೆಬಿಡದ ಮಳೆಯಲ್ಲಿ ನಮಗೆ ಶಾಲೆಗೆ ರಜೆ ಇದ್ದೇ ಇರುತ್ತಿತ್ತು.. ಆ ಸಮಯದಲ್ಲಿ ಕೆಂಡದ ಮೇಲೆ ಸುಟ್ಟು ಅಥವಾ ತೆಂಗಿನ ಎಣ್ಣೆಯಲ್ಲಿ ಕರಿದು ತಿನ್ನುವ ಈ ಹಪ್ಪಳದ ರುಚಿ ಇದೆಯಲ್ಲ ಅದು ಭಹುಷ್ಯ ಅಮೃತ ಸಮಾನ ನಿಮ್ಮೆಲ್ಲರಿಗೂ ಇದನ್ನು ಓದುವಾಗ ಎಣ್ಣೆಯಲ್ಲಿ ಕರಿದ ಹಲಸಿನ ಹಪ್ಪಳ ಮತ್ತೆ ತೆಂಗಿನಕಾಯಿ ಚೂರು ತಿಂದ ಅನುಭವ ಆಗುತ್ತಾ ಇದೆಯಲ್ಲವೇ ********

ನೆನಪುಗಳು Read Post »

ಇತರೆ

ಸಿನಿಮಾ

ಥಪ್ಪಡ್ ಮಡದೀಯ ಬಡಿದಾನ…   ಮಡದೀಯ ಬಡಿದಾನ…  ಈಚೆಗೆ ‘ಥಪ್ಪಡ್’ ಎಂಬ ಹಿಂದಿ ಸಿನೆಮಾ ನೋಡಿದೆ. ಕೇವಲ ‘ಒಂದು ಏಟು’ ಎಂದು ನಿರ್ಲಕ್ಷ್ಯ ತೋರಿ ಮರೆತುಬಿಡುವ ಪ್ರಸಂಗವನ್ನು ‘ಹೆಣ್ಣಿನ ಆತ್ಮಗೌರವ’ದ ಹೆಸರಿನಲ್ಲಿ ತೆರೆಯ ಮೇಲೆ ತೋರಿಸಿರುವ ರೀತಿ ಸ್ತ್ರೀಕುಲದ ಆತ್ಮಸಾಕ್ಷಿಯಂತಿದೆ. ಸಂಕುಚಿತ ಸಮಾಜಕ್ಕೆ ಮಾಡಿದ ಕಪಾಳಮೋಕ್ಷವಾಗಿದೆ. ನಿಜಕ್ಕೂ ಈ ಸಿನೆಮಾ ಸೂಕ್ಷ್ಮವಾಗಿ ಸಮುದಾಯಕ್ಕೆ ದಾಟಿಸುವ ಸಂದೇಶ ಇದೆಯಲ್ಲಾ ಅದು ಅದ್ಭುತ..!   ಜನಪದ ಗೀತೆಯೊಂದಿದೆ,    “ಮಡದೀಯ ಬಡಿದಾನ ಮನದೊಳಗೆ   ಮರುಗ್ಯಾನ, ಒಳಹೋಗಿ ಸೆರಗ ಹಿಡಿದು   ತಾ ಕೇಳಾನ ನಾ ಹೆಚ್ಚೋ ನಿನ್ನ ತವರು ಹೆಚ್ಚೋ…”       ಜನಪದ ಗೀತೆಯ ಮಾತಿಗೇ ಬರೋಣ. ಹೆಂಡತಿಗೆ ಯಾವುದೋ ಮಾತಿಗೋ, ಕಾರಣಕ್ಕೋ ಹೊಡೆದು ಬಿಡುವ ಗಂಡನು ಅನಂತರ ಸಮಜಾಯಿಷಿ ಕೊಡಲಿಕ್ಕೋ ಅಥವಾ ಅವಳನ್ನು ರಮಿಸಲಿಕ್ಕೋ ಆಕೆ ಬಳಿಹೋದಾಗಿನ ಪ್ರಸಂಗದ ವಿವರಣೆ ಇಲ್ಲಿದೆ.    ‘ಕೊಟ್ಟ ಹೆಣ್ಣು ಕುಲಕ್ಕೆ ಹೊರಗು’ ಎನ್ನುವ ಜಾಯಮಾನ ಉಳ್ಳ ಸಮಾಜದವರಾದ ನಾವು, ಹೆಣ್ಣಿನ ಮನದಾಳದ ಭಾವನೆಗಳಿಗೂ ನಮ್ಮದೇ ಬಣ್ಣ ಕಟ್ಟುವವರು. ಈ ಹಾಡೂ ಅಂತೆಯೇ.. ಹೆಂಡತಿಗೆ ಬಡಿದ ಗಂಡನಿಗೆ ತನ್ನ ಬಡಿತದಿಂದ ಆಕೆ ಮುನಿದುಕೊಂಡಿದ್ದರೆ, ಸಿಟ್ಟಿಗೆದ್ದಿದ್ದರೆ ಆಕೆ ತವರನ್ನು ನೆನೆದಿರಬಹುದು ಎಂದು ಯೋಚಿಸುವಂತೆ ಮಾಡಿಸುತ್ತದೆ. ಇದಕ್ಕೇನು ಹೇಳುವುದು? ಇದು ಸಮಾಜವು ಹೆಣ್ಣನ್ನು ಅರ್ಥೈಸಿಕೊಂಡಿರುವ ಬಗೆ ಎಂದು ಹೇಳಬಹುದಷ್ಟೇ. ಆದರೆ  ತವರಿನಲ್ಲಿ ಇದಕ್ಕೂ ನಿಕೃಷ್ಟವಾದ ಬದುಕು ಆಕೆಯದಿದ್ದರೆ  ಖಂಡಿತ ತವರನ್ನು ಆಕೆ ನೆನೆದಿರುತ್ತಾಳೆಯೇ..? ಹಾಗೆಯೇ ಮೊದಲ ಸಾಲಿನಲ್ಲಿರುವ ‘ಮಡದೀಯ ಬಡಿದಾನ’ ಎಂಬಲ್ಲಿ ಬಳಕೆಯಾಗಿರುವ ‘ಬಡಿದಾನ’ ಪದವು ಕೇಳಲು ಎಷ್ಟು ಕಠೋರವಾಗಿದೆ. ದನಕ್ಕೆ ಬಡಿದ ಹಾಗೆ.., ಸುತ್ತಿಗೆ ಬಡಿದ ಹಾಗೆ.., ಬಡಿದು ಬಿಸ್ಹಾಕು..,ಇಲ್ಲೆಲ್ಲಾ ಬಡಿದು ಎನ್ನುವುದು ಬಹಳ ಘೋರವಾದ ಅತೀ ಕಠಿಣತಮ ಶಬ್ಧಾರ್ಥವಾಗಿ ಪ್ರಯೋಗವಾಗಿದೆ. ಬಡಿಯುವುದು ಗಂಡಿನ ಜನ್ಮಸಿದ್ಧ ಹಕ್ಕು ಹಾಗೂ ಬಡಿಸಿಕೊಳ್ಳುವುದು ಹೆಣ್ಣಿನ ಹಣೆಬರಹ ಎಂಬುದು ಸಮಾಜದ ಸೃಜನೆಯಾಗಿರುವಾಗ ಗಂಡನಾದವನು ಬಡಿಯದೇ ಮತ್ತೇನು ಮಾಡಿಯಾನು?! ಮಡದಿಯೂ ಸಹ ಒಂದು ಪ್ರಾಣಿಯೋ ವಸ್ತುವೋ ಎಂದು ಭಾವಿಸಿ ಬಡಿದಿರುವ ಆತ ತನ್ನ ಮನದಲ್ಲಿ ತನ್ನ ಕೃತ್ಯಕ್ಕಾಗಿ ಖಂಡಿತ ಮರುಗಿರುತ್ತಾನೆಯೇ..?      ಜನಪದದ ಕಾಲ ನಿರ್ಣಾಯಕವಾಗಿಲ್ಲ. ನೂರಾರು ವರ್ಷಗಳಿಂದಲೂ ಹುಟ್ಟಿ ಹರಿದು ಬಂದಿರುವ ಜನಪದ ತೊರೆಯ ಮೂಲ ಯಾವುದೆಂದು ಕಾಣುವುದು ಅಷ್ಟು ಸುಲಭವಲ್ಲ. ಹಾಗಾದ ಮೇಲೆ ಇಂತಹ ಜನಪದ ಹಾಡುಗಳಿಗೂ ಇಪ್ಪತ್ತೊಂದನೆಯ ಶತಮಾನದ ‘ಥಪ್ಪಡ್’ ನಂತಹ ಸಿನೆಮಾದಲ್ಲಿ ತೋರಿರುವ ಹೆಣ್ಣಿನ ಕುರಿತ ಅಸಡ್ಡೆಯ ಭಾವನೆಗೂ ಅವಿನಾಭಾವ ಸಂಬಂಧವಿದೆ. ಹಾಗಾದರೆ, ಅನಾದಿಯಿಂದ ಇಂದಿನವರೆಗೂ ಹೆಣ್ಣಿನ ಸ್ಥಿತಿಗತಿಯಲ್ಲಿ, ಆಕೆಯ ಕುರಿತ ಸಮಾಜದ ಮನೋಭಾವದಲ್ಲಿ ಬಹಳ ಸುಧಾರಣೆಯೇನೂ ಕಂಡಿಲ್ಲ ಎಂದಾಯಿತಲ್ಲವೇ..?     ಹೀಗೆ ಕೇಳುವ ಪ್ರಶ್ನೆಗಳನ್ನೂ ಅಪಹಾಸ್ಯಕ್ಕೆ ಗುರಿಮಾಡುವ  ಸಮುದಾಯದ ನಡುವೆ ಮಹಿಳೆಯರಿದ್ದಾರೆ. ಅಭಿಮಾನ, ಆತ್ಮಗೌರವ, ಸ್ವಾಭಿಮಾನ, ಸ್ವಾಭಿಪ್ರಾಯ ಮೊದಲಾದ ಪದಗಳಿಗೆ ಮಹಿಳೆಯರ ಪದಕೋಶದಲ್ಲಿ ಸ್ಥಾನ ನೀಡದವರ ನಡುವಲ್ಲಿ ಮಹಿಳೆಯರು ಛಲದಿಂದ ಬದುಕಬೇಕಿದೆ. ಅಂಥ ನಿರ್ಭಾವುಕ ಜನರ ನಿರ್ಲಕ್ಷ್ಯಕ್ಕಿಂತಲೂ ಭಾವುಕ ಮನಸ್ಸಿನ ಮಹಿಳೆಯರ ನಿರೀಕ್ಷೆಗಳು ಮಹತ್ವವಾದವು ಎಂಬುದನ್ನು ಅರಿಯಲು ‘ಥಪ್ಪಡ್’ ನಂತಹ ಸೂಕ್ಷ್ಮ ನಿರ್ದೇಶನದ ಚಿತ್ರವನ್ನು ಎಲ್ಲರೂ ನೋಡಬೇಕು.       ಇನ್ನು ‘ತಾಪ್ಸಿ ಪನ್ನು’ ಎನ್ನುವ ನಟನಾಲೋಕದ ಧ್ರುವತಾರೆ ತನ್ನಕಾಲದ ಇತರೆ ಹೀರೋಯಿನ್ ಗಿಂತ ಹೇಗೆ ಭಿನ್ನ, ಆಕೆ ನಟನೆಗೆ ಆರಿಸಿಕೊಳ್ಳುವ ಸಿನೆಮಾಗಳ ವಸ್ತು ವಿಷಯ ಎಷ್ಟು ಅರ್ಥಪೂರ್ಣ, ವೈವಿಧ್ಯವಾಗಿರುತ್ತವೆ ಮತ್ತು ಆಕೆಯ ನಟನೆ ಎಷ್ಟು ಸಹಜವಾಗಿರುತ್ತದೆ ಎಂಬುದನ್ನು ಆಕೆ ಅಭಿನಯಿಸಿರುವ ಸಿನೆಮಾ, ಕಿರುಚಿತ್ರ ( short films) ಗಳನ್ನು ನೋಡಿಯೇ ತಿಳಿಯಬೇಕು.    ‘ಥಪ್ಪಡ್’ ಕೇವಲ ಒಂದು ಸಿನೆಮಾ ಅಲ್ಲ ಅಥವಾ ‘ಮಡದೀಯ ಬಡಿದಾನ..’ ಎನ್ನುವುದು ಕೇವಲ ಒಂದು ದೈನಂದಿನ ಸಂಗತಿಯಲ್ಲ. ಈ ಲೇಖನದ ಮೂಲಕ ಆ ಕುರಿತ ವಿಚಾರವೊಂದನ್ನು ಆತ್ಮಶೋಧನೆಗೆ ಹಚ್ಚುವ ಪ್ರಯತ್ನ ಮಾಡಲಾಗಿದೆ. ಏಕೆಂದರೆ, ‘ಹೆಣ್ಣಿನ ಘನತೆ ಬಿಟ್ಟಿಬಿದ್ದಿಲ್ಲ…’ 

ಸಿನಿಮಾ Read Post »

ಇತರೆ

ಕಾದಂಬರಿಕಾರರು

ಉತ್ತಮ ಕಾದಂಬರಿಕಾರರು ಚಂದ್ರು ಪಿ.ಹಾಸನ  ಕುಂಬಾರ ಮಾಡಿದ ಕುಡಿಕೆಯಲ್ಲಿ ನಿಷ್ಕಲ್ಮಶ ಮನಸ್ಸಿನ ಎಣ್ಣೆ ತುಂಬಿ ಒಗ್ಗಟ್ಟಿನ ಬತ್ತಿಯನ್ನು ಹಚ್ಚಿದಾಗ ಆ ಕುಂಬಿಕೆಯು ದೀಪವೆಂಬ ಹೆಸರನ್ನು ಪಡೆಯುತ್ತದೆ.ಅದು ಹೊರಹೊಮ್ಮುವ ಪ್ರಶಾಂತ ಕಿರಣಗಳು ಅಡಗಿಸಿ ಕೊಳ್ಳುತ್ತಿರುವ ನಕಾರಾತ್ಮಕತೆಯನ್ನು ಹೊಡೆದೋಡಿಸಿ ಧನಾತ್ಮಕತೆಯನ್ನು ತುಂಬುತ್ತದೆ. ಎಲ್ಲೆಡೆ ಪ್ರಶಾಂತತೆಯನ್ನು ಹೊಮ್ಮುತ್ತದೆ.ಇದರಿಂದ ಜೀವಿಗಳ ಚೈತನ್ಯ ಪ್ರಾಪ್ತಿಯಾಗುವುದಿಲ್ಲದೆ ಬೆಳವಣಿಗೆ ಹೊಸ ಜೀವಿಗಳ ಉದಯ ಹೀಗೆ ಪ್ರತಿಯೊಂದರಲ್ಲೂ ತನ್ನ ಸ್ಥಾನವನ್ನು ಬೆಳೆಸಿ ತನ್ನ ಸುತ್ತಲೂ ಉತ್ತಮ ಪರಿಸರವನ್ನು ಸೃಷ್ಟಿಸುತ್ತದೆ. ಇಂತಹ ದೀಪದಂತೆ ಅಲ್ಲಲ್ಲಿ ಕಾದಂಬರಿಕಾರರು ಜನಿಸಿದ್ದು, ಆಧುನಿಕ ಕನ್ನಡ ಸಾಹಿತ್ಯದ ಸೊಗಡನ್ನು ಶ್ರೀಮಂತಗೊಳಿಸಿದಲ್ಲದೆ ಅವರ ಬರವಣಿಗೆಯಿಂದ ಸಮಾಜಕ್ಕೆ ಕನ್ನಡಿ ಹಿಡಿದು ಅದರ ಪ್ರತಿಬಿಂಬವನ್ನು ಎಲ್ಲಡೆ ತೋರಿಸುವಂತ್ತಾ,  ಉತ್ತಮ ಸಮಾಜದ ಬಗ್ಗೆ ಬೆಳಕು ಚೆಲ್ಲುವಂತಹ ಕಾರ್ಯಗಳನ್ನು ಮಾಡಿದ್ದಾರೆ ಮತ್ತು ಮಾಡುತ್ತಿದ್ದಾರೆ.          ಒಂದು ಉತ್ತಮ ಸಮಾಜ ರೂಪುಗೊಳ್ಳಬೇಕಾದರೆ ಈ ಸಮಾಜದಲ್ಲಿನ ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವ ವಿಕಸನ ವಾಗಬೇಕು. ಅವನಲ್ಲಿ ಮಾನಸಿಕ ಸ್ಪೂರ್ತಿಯನ್ನು ಚಿಮ್ಮುವಂತೆ ಮಾಡಿದಾಗ ನಾಗರಿಕ ಮಾನವನ ವಾತಾವರಣ ಸೃಷ್ಟಿಯಾಗುತ್ತದೆ. ಸಮಾಜದಲ್ಲಿ ನಡೆಯುವ ಆಗುಹೋಗುಗಳ ಮುಂದೆ ಕನ್ನಡಿ ಹಿಡಿದಾಗ ಎಲ್ಲಾ ನೈಜ ಚಿತ್ರಣವನ್ನು ಸಮಾಜಕ್ಕೆ ಪ್ರತಿಬಿಂಬಿಸುತ್ತದೆ. ಇಂತಹ ನಿಟ್ಟಿನಲ್ಲಿ ನಮ್ಮ ಕಾದಂಬರಿಕಾರರು ತಮ್ಮ ಬರವಣಿಗೆಯ ಮೂಲಕ ಸಮಾಜದ ಚಿತ್ರಣವನ್ನು ಕಾದಂಬರಿಯಲ್ಲಿ ಚಿತ್ರಸಿದ್ದಾರೆ. ಅಲ್ಲದೆ ಪರೋಕ್ಷವಾಗಿ ಉತ್ತಮ ಸಮಾಜದ ನಿರ್ಮಿತಿಗೆ ಇವರು ಕಾರಣಕರ್ತರಾಗಿದ್ದಾರೆ. ಅವುಗಳು ಹಳ್ಳಿಯ ಜನರ ಮೂಡ ಆಚಾರ-ವಿಚಾರಗಳನ್ನು ಹೇಳುವುದರ ಜೊತೆಗೆ ಅದರಿಂದಾಗುವ ಕೆಡುಕುಗಳ ಮೇಲೆ ವೈಚಾರಿಕ ಮನೋಭಾವ ಬರುವಂತೆ ತನ್ನ ಕಾದಂಬರಿಗಳಲ್ಲಿ ಚಿತ್ರಸಿದ್ದಾರೆ.            “ರವಿ ಕಾಣದ್ದನ್ನು ಕವಿ ಕಂಡ” ಎನ್ನುವಂತೆ ಕಾದಂಬರಿಕಾರನ ವೈಶಿಷ್ಟ್ಯವೇ ಅಂಥಹದ್ದು ಏಕೆಂದರೆ ಪದರಚನೆಯ ಸಾರಸ್ವತ ಲೋಕವು ವೈಭವೋಪೇತವಾಗಿದೆಯೆಂದರೆ ಅದರಲ್ಲಿ ಕಾದಂಬರಿಗಳ ಪಾತ್ರ ಬಹಳ ಹಿರಿದಾದದ್ದು. ಸಾಹಿತ್ಯದ ಪ್ರಕಾರಗಳು ಆಯಾ ಕಾಲಘಟ್ಟಕ್ಕೆ ತಕ್ಕಂತೆ ಹೊಸ ಆಯಾಮಗಳನ್ನು ಪಡೆದು ಕೊಂಡು ವರ್ತಮಾನದಲ್ಲಿ ಅಪ್ರಾಮಾಣಿಕತೆ ವಿರೋಧಿಸಿ ಮಾನವೀಯ ಮೌಲ್ಯವನ್ನು ಎತ್ತಿ ಹಿಡಿಯುವ ಪ್ರಯತ್ನ ಮಾಡುತ್ತವೆ.               ಕಾದಂಬರಿಯು ಉದ್ದವಾದ ನೀಲ ಕಥೆಯ ವಿಸ್ತೃತ ರೂಪ ವಲ್ಲ. ಸಂದೇಶವನ್ನು ನೀಡುವಂತಹ ಮತ್ತು ಮಾನವನ ಅಧ್ಯಯನಕ್ಕೆ ಒಂದು ಕೈಗನ್ನಡಿ. ಕೆಲವು ಪತ್ತೆದಾರಿ ಕಾದಂಬರಿಗಳಲ್ಲಿ ಸಮಾಜಕ್ಕೆ ಸಂದೇಶ ವನ್ನು ನೀಡುವಂತಹ ವಸ್ತುಗಳಿರುತ್ತವೆ.ಇಂದಿನ ಸಮಾಜದ ಸ್ಥಿತಿಯ ಬಗ್ಗೆ ಕೆಲವು ಮಾತುಗಳನ್ನು ತುಂಬಿ ಪ್ರತಿಯೊಬ್ಬ ನಾಗರಿಕರಿಗೂ ಬರವಣಿಗೆ ಮೂಲಕ ಉತ್ತಮ ಮೌಲ್ಯವನ್ನು ತುಂಬಿಸುವಲ್ಲಿ ಕಾದಂಬರಿಕಾರ ನೆರವಾಗುತ್ತಾನೆ *ಪೂರ್ಣಚಂದ್ರ ತೇಜಸ್ವಿಯವರ* ‘ಮಹಾಪಲಾಯನ’ ಕಾದಂಬರಿಯು ಕೈದಿಯೊಬ್ಬ ಮಾನಸಿಕವಾಗಿ ಬದಲಾಗಿ ಉತ್ತಮ ಸಮಾಜದಲ್ಲಿ ಬರೆದುಕೊಳ್ಳುವ ಬಗ್ಗೆ, ಮತ್ತು ‘ಕಿರಿಗೂರಿನ ಗಯ್ಯಾಳಿಗಳು’ ಕಾದಂಬರಿಯಮೂಲಕ ರಾಜಕೀಯ ಪಿತೂರಿ ಅನಕ್ಷರಸ್ಥರ ಮೇಲೆ ನಡೆಯುವ ದೌರ್ಜನ್ಯ ಜಾತಿವ್ಯವಸ್ಥೆ ಗಳೆಂಬ ಸಮಾಜದ ಅನಿಷ್ಠ ಪದ್ಧತಿಗಳ ಮೇಲೆ ನಡೆಯುವ ಸ್ಥಿತಿಗಳ ಮೇಲೆ ಬೆಳಕು ಚೆಲ್ಲುವ ಮೂಲಕಉತ್ತಮ ಸಮಾಜಕ್ಕೆ ಬದಲಾವಣೆಯ ಚೌಕಟ್ಟನ್ನು ತಮ್ಮ ಕಾದಂಬರಿಗಳಿಂದ ಓದುಗರಿಗೆ ಸಮಾಜಕ್ಕೆ ಅರಿವಿನ ಮಾರ್ಗವನ್ನು ತಿಳಿಸಿದ್ದಾರೆ.       *ಕುವೆಂಪು* ಅವರ ‘ಕಾನೂರು ಹೆಗ್ಗಡತಿ’ ಕಾದಂಬರಿಯ ಸ್ವತಂತ್ರಪೂರ್ವದಲ್ಲಿ ಮಲೆನಾಡು ವೈಚಾರಿಕತೆ ಮತ್ತು ಅರಿವಿನ ಜನಜೀವನ ಮತ್ತು ಆಲೋಚನೆಗಳ ಬಗ್ಗೆ ಇನ್ನು ‘ಮಲೆಗಳಲ್ಲಿ ಮದುಮಗಳು’ ಎಂಬ ಮಿನಿ ಕಾದಂಬರಿ ಅಂತರ್ಜಾತಿ ವಿವಾಹ ಮತ್ತು ಮಲೆನಾಡಿನ ಧಾರ್ಮಿಕ ಪರಂಪರೆಯ ಮೇಲೆ ಸಾಮಾಜಿಕವಾಗಿ ಬೆಳಕು ಚೆಲ್ಲುತ್ತದೆ.      ಕಾದಂಬರಿಕಾರರಲ್ಲಿ ಸಮಾಜದಲ್ಲಿ ಅತಿ ಹೆಚ್ಚು ಬದಲಾವಣೆಗಳನ್ನು ತಂದು ಅಪಾರ ಯಶಸ್ಸು ತಂದವರಲ್ಲಿ *ಅ ನ ಕೃ* ಅವರು ಕೂಡ ಒಬ್ಬರು ‘ಕಾದಂಬರಿಗಳ ಸಾರ್ವಭೌಮ’ ಎಂದು ಖ್ಯಾತಿ ಪಡೆದಿದ್ದವರು. ಅವರ ತೊಂಬತ್ತಕ್ಕೂ ಹೆಚ್ಚು ಸಾಮಾಜಿಕ ಕಾದಂಬರಿಗಳಾಗಿದ್ದು, ಇವುಗಳಲ್ಲಿ ಸಮಕಾಲೀನ ಜೀವನದ ಬೇರೆ ಬೇರೆ ಮುಖಗಳನ್ನು ತೋರಿಸಿದ್ದಾರೆ. ಕಲಾವಿದರ ಸಮಸ್ಯೆಗಳು, ಆಧುನಿಕ ವಿದ್ಯಾಭ್ಯಾಸದ ಪರಿಣಾಮ, ಭಾರತೀಯ ಸಂಸ್ಕೃತಿಯ ಮೌಲ್ಯಗಳ ಮಹತ್ವ, ಅವಿಭಕ್ತ ಕುಟುಂಬ ಜೀವನ, ಒಡೆಯುತ್ತಿರುವ ಬದುಕು, ವೇಶ್ಯಾ ಸಮಸ್ಯೆ , ಲಂಚಗುಳಿತನ, ಸ್ತ್ರೀ-ಸ್ವಾತಂತ್ರ್ಯ , ಜೈಲುಗಳ ಸುಧಾರಣೆ, ದಾಂಪತ್ಯ ವಿಚ್ಛೇದನ , ಜಾತೀಯತೆಯ ಭೂತ,  ರಾಜಕೀಯ ದೊಂಬರಾಟ, ಪವಿತ್ರ ಪ್ರೇಮ, ಕೊಳಚೆಯ ಕಾಮ, ಪಾನಿರೋಧದ ಸಮಸ್ಯೆ, ಶ್ರೀಮಂತಿಕೆಯ ಡೌಲು, ಬಡತನದ ದಾರುಣತೆ, ಪೂರ್ವ-ಪಶ್ಚಿಮಗಳ ಸಂಗಮ, ಧಾರ್ಮಿಕತೆಯ ಸೋಗು, ಆಡಳಿತದ ಆರ್ಭಟಗಳು, ಸ್ವಾತಂತ್ರ್ಯದ ಕಿಚ್ಚು , ಬದುಕಿನ ಮೇಲೆ ವಿಜ್ಞಾನದ ಪ್ರಭಾವ , ಹೀಗೆ ನಾನಾ ಸಂಗತಿಗಳ ಕುರಿತು ತಮ್ಮ ಕಥನ ಕೌಶಲ, ನಿರರ್ಗಳವಾದಶೈಲಿ ಮತ್ತು ಸಂಭಾಷಣೆಯ ಚಾತುರ್ಯ ಇವುಗಳಿಂದ ಜನಮನಸೆಳೆದ ಅರ್ಥೈಸುವ ಪ್ರಯತ್ನ ಮಾಡಿದ್ದಾರೆ. ಅವರ ಮೇಲೆ ಅಶ್ಲೀಲತೆಯ ಆರೋಪ ಬಂದಾಗ ದೂರಮಾಡಲು ‘ಸಾಹಿತ್ಯ ಮತ್ತು ಕಾಮಪ್ರಚೋದನೆ’ ಕಾದಂಬರಿಯಲ್ಲಿ ಸೂಳೆಯ ಸುಖದುಃಖಗಳನ್ನು ಮತ್ತು ನಾರಿಯ ಸಂಸ್ಕೃತಿ ಎತ್ತಿಹಿಡಿಯಲು ಇರುವ ನಾರಿ ಪಾತ್ರಗಳನ್ನು ಹಲವಾರು ಕಾದಂಬರಿಗಳಲ್ಲಿ ಅರ್ಥೈಸಿದ್ದಾರೆ.      ತ್ರಿವೇಣಿಯವರ ‘ಶರಪಂಜರ’ ಕಾದಂಬರಿಯಲ್ಲಿ ಇನ್ನೊಬ್ಬಳ ಮಾನಸಿಕ ಗೊಂದಲ ಹಾಗೂ ನೋವುಗಳನ್ನು ಮತ್ತು ಗುಣ ಹೊಂದಿದರು ಸಮಾಜದ ದೃಷ್ಟಿಕೋನವು ಹೇಗಿರುವುದು ತಿಳಿಸಿದ್ದಾರೆ              ಗಿರೀಶ್ ಕಾರ್ನಾಡರ ‘ನಾಗಮಂಡಲ’ ಸಾಮಾಜಿಕ ಜೀವನ ಜನರ ಸ್ಥಿತಿಗತಿ ಮತ್ತು ಕಳಕಳಿಯನ್ನು ಜೀವನವೆಲ್ಲ ಸಮಾಜಕ್ಕೆ ಬೆಳಕು ಚೆಲ್ಲುವಲ್ಲಿ ಮುಖ್ಯ ಪಾತ್ರವಹಿಸುತ್ತವೆ.         ಅನಂತ    ಮೂರ್ತಿಯವರ ‘ಸಂಸ್ಕಾರ’ ಕಾದಂಬರಿಯಲ್ಲಿ ಸಾಮಾಜಿಕ ಜಾತಿ ಸಂಪ್ರದಾಯಗಳ ಬಗ್ಗೆ ಬೆಳಕು ಚೆಲ್ಲುವಂತಹ ಕೆಲಸ ನಡೆದಿದೆ.        ಕಾರಂತರ ಸಾಮಾಜಿಕ ಕಾದಂಬರಿಗಳಾದ ‘ಯಕ್ಷಗಾನ ಬಯಲಾಟದಲ್ಲಿ’ ಸಾಮಾಜಿಕ ಬೆಳಕು ಚೆಲ್ಲುವಲ್ಲಿ ಮುಖ್ಯ ಪಾತ್ರವಾಗುತ್ತದೆ ‘ಬೆಟ್ಟದಜೀವ’ ಇದರಲ್ಲಿ ಮಲೆನಾಡಿನ ವೃದ್ಧ ದಂಪತಿಗಳ ಜೀವನ ಪರಿಸರದ ಮೇಲೆ ಇರುವ ಕಾಳಜಿ ಬಿಂಬಿಸುತ್ತದೆ. ‘ಚೋಮನದುಡಿ’ ಕಾದಂಬರಿಯಲ್ಲಿ ಬರುವ ಪಾತ್ರಗಳು ಜಾತಿ-ಮತ ಮೇಲು-ಕೀಳು ತೊಲಗಲಿ ಎನ್ನುತ್ತಾ ಸಮಾಜದ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಮಾಡಿದೆ.  ಹೀಗೆ ಕಾದಂಬರಿಯಲ್ಲಿ ಸೃಷ್ಟಿಸುವ ಪ್ರತಿಯೊಂದು ಪಾತ್ರಗಳು ಆಗಿರಬಹುದು ಸಂದೇಶಗಳ ಆಗಿರಬಹುದು ಪ್ರತಿಯೊಂದು ಅರ್ಥಪೂರ್ಣ. ಇಲ್ಲಿ ಚಿತ್ರಿಸುವ ಘಟನೆ ಸನ್ನಿವೇಶ ಸಂಬಂಧಗಳ ಮೂಲಕ ವಾಸ್ತವ ಸಂಗತಿಗಳನ್ನು ಮರೆಮಾಚದೆ ಸತ್ಯ ನಿಷ್ಠೆಗೆ ಬೆಲೆ ಕೊಟ್ಟಂತಹ ಕಾದಂಬರಿಕಾರರು ಬರಹದ ಮೂಲಕ ಆದರ್ಶ ಕನಸುಗಳನ್ನು ಎತ್ತಿಹಿಡಿದಿದ್ದಾರೆ. ಅದನ್ನು ಸ್ವೀಕರಿಸುವ ಜನರು ಆಧುನಿಕ ಪ್ರಜ್ಞೆಯೂ ಬದುಕಿನಲ್ಲಿ ಸವಾಲಾಗಿ ಮನಸ್ಸಿನ ಆಳಕ್ಕೆ ಧೈರ್ಯ ತುಂಬಬಹುದು. ಮಾನವನ ಸಮಾಜ ಕುಟುಂಬ ವ್ಯಕ್ತಿ ಪರಿಸರ ಶಾಲೆ ಮೈದಾನ ಸಾಹಿತ್ಯ ಕೃಷಿ ಸಂಸ್ಕೃತಿ ಬದುಕು ಸಮಾಜಸೇವೆ ಪ್ರಕೃತಿಯೊಂದಿಗೆ ಹೇಗೆ ಬದುಕಬೇಕು ಎಂಬುದನ್ನು ಕಾದಂಬರಿಕಾರರು ಮನದಲ್ಲಿ ನೆಲೆಸುವಂತೆ ಬರೆದು ಸಮಾಜದಲ್ಲಿ ನಡೆಯುವ ಅನ್ಯಾಯ, ಅತ್ಯಾಚಾರ, ಮೋಸ ವಂಚನೆ, ದಬ್ಬಾಳಿಕೆ, ಜಾತೀಯತೆ, ಮೂಡನಂಬಿಕೆಗಳು ಹೀಗೆ ಹಲವಾರು ಅಹಿತಕರ ಘಟನೆಗಳನ್ನು ಎದುರಿಸುವ ಬಗೆಯನ್ನು ದಾರದಷ್ಟೇ ಎಳೆಎಳೆಯಾಗಿ ಬರೆದಿರುತ್ತಾರೆ. ಪ್ರೇಮದ ಹಾದಿ, ಮೋಸದ ಹಾದಿ, ಸೋತೋನು ಮುಂದೆ ಗೆದ್ದು ಬಂದ ಹಾದಿ, ಹೆತ್ತು ಹೊತ್ತು ತುತ್ತು ನೀಡಿದವರು ಮತ್ತು ಮುತ್ತುನೀಡಿದವರು ಇವರಿಬ್ಬರಿಗೂ ನ್ಯಾಯ ಒದಗಿಸಿ ಅನುಸರಣೆಯಿಂದ ಕುಟುಂಬದ ಯಶಸ್ಸಿನ ಹಾದಿ ಎಂಬುದನ್ನು ತೋರುವಂತೆ ಇರುತ್ತವೆ. ಇದು ಕೇವಲ ಸಾಹಿತ್ಯ ವಾಗಿರದೆ ಒಂದು ಸಾಮಾಜಿಕ ನೆಲೆಗಟ್ಟಿನಲ್ಲಿ ವಾಸಿಸುವ ಜನರ ಜೀವನ ಭಾಷಾ ಸೊಗಡು ಆಚಾರ-ವಿಚಾರಗಳು ಸಂಸ್ಕೃತಿಗಳ ಇತಿಹಾಸ ಭಾವಗಳು ಹೀಗೆ ಪ್ರತಿಯೊಂದರಲ್ಲೂ ಮನೋಜ್ಞವಾಗಿ ಚಿತ್ರಿಸುವುದರ ಜೊತೆಗೆ, ಆ ಮೌಲ್ಯಗಳನ್ನು ರೂಢಿಸಿಕೊಳ್ಳುವಲ್ಲಿ ಯಶಸ್ವಿಯಾಗುತ್ತದೆ. ಆದ್ದರಿಂದ ಮೊದಲೇ ತಿಳಿಸಿದಂತೆ ಕಾದಂಬರಿಕಾರರು ಉತ್ತಮ ಸಮಾಜದ ಯುವ ಪೀಳಿಗೆಗೆ ಕನ್ನಡಿ ಎಂದು ಹೇಳಿದರೆ ತಪ್ಪಾಗಲಾರದು.

ಕಾದಂಬರಿಕಾರರು Read Post »

ಇತರೆ

ಪ್ರಸ್ತುತ

ಮತ್ತೆ ಸಿಕ್ಕಿದ್ದಳು ವಸಂತ ಪ್ರಮೀಳಾ .ಎಸ್.ಪಿ. ನಿತ್ಯವೂ ಶಾಲೆಗೆ ಹೋಗುವ ದಾರಿಯುದ್ದಕ್ಕೂ ನನ್ನ ಗಂಡನನ್ನು ಬೈದುಕೊಂಡೇ ಹೋಗುತ್ತೇನೆ.ಇವರಿಂದ ನನಗೆ ಸಮಯ ಮೀರಿತು,ಮನೆಗೆ ಬಂದ ಅತಿಥಿಗಳು ಹೊರಡಲು ಸಿದ್ಧರಾದರೂ ಅವರಿಗೆ ತಿಂಡಿ ಕಾಫಿ ಕೊಡಲು ಅದೇಶಿಸುತ್ತಾರೆ.ಇಲ್ಲವೋ ಹೊರಟ ಹೊತ್ತಿಗೆ ಚಹಾ ಕೇಳುತ್ತಾರೆ ಎಂದೆಲ್ಲಾ ಅಂದುಕೊಂಡು ಆತುರದಲ್ಲಿ ಹೋಗುವ ದಾರಿಯಲ್ಲಿ ಸಿಗುವ ಮನೆ ‘ವಸಂತಳದ್ದು’. ಸಂಜೆ ಬರುವ ವೇಳೆಗೆ ಬಾಗಿಲಲ್ಲಿ ನಿಂತು ಮುಗುಳ್ನಗೆ ಬೀರಿ ಮಾತು ಪ್ರಾರಂಭಿಸುತ್ತಾಳೆ.ಒಂದೊಂದು ದಿನಕ್ಕೆ ಒಂದೊಂದು ಘಟನೆ ಹೇಳಿಬಿಡುತ್ತಾಳೆ.ಹಾಗೆಂದು ಎಂದೂ ಸಂಪೂರ್ಣವಾಗಿ ಹೇಳಿದಳು ಎಂದಿಲ್ಲ.ಇಡೀ ಬೀದಿಯಲ್ಲಿ ಯಾರೊಂದಿಗೂ ಅವಳ ಮಾತಿಲ್ಲ.’ಬಜಾರಿ’ ಎಂಬ ಪಟ್ಟ ಅದ್ಯಾವಾಗ ಲೋ ಧಕ್ಕಿ ಬಿಟ್ಟಿದೆ ಅವಳಿಗೆ.ನನ್ನೊಂದಿಗೆ ಮಾತಿಗೆ ನಿಂತಾಗಲು ನಾನು ಕೇವಲ ಶ್ರೋತೃದಾರಳು.ಅವಳು ಹೇಳಿದ್ದನ್ನೆಲ್ಲಾ ಅವಲೋಕಿಸಿದಾಗ … ವಸಂತ ಬಡ ಕುಟುಂಬದ ಹೆಣ್ಣು ಮಗಳು.ಬದುಕು ಕಟ್ಟಿಕೊಳ್ಳಲು ಬೆಂಗಳೂರಿನ ಗಾರ್ಮೆಂಟ್ಸ್ ಸೇರಿದ್ದಳು.ಅಲ್ಲಿಯೇ ಅನ್ಯಜಾತಿಯ ಯುವಕನೊಂದಿಗೆ ವಿವಾಹ ವಾದ ಕಾರಣ ಎರೆಡೂ ಮನೆಯವರಿಗೂ ಬೇಡವಾಗಿದ್ದರು.ಈ ನಡುವೆ ಹುಟ್ಟಿದ ಮೊದಲನೇ ಮಗ ವಿಕಲಚೇತನ ನಾಗಿದ್ದ.ಇದರಿಂದಾಗಿ ಅವಳು ಕೆಲಸಕ್ಕೆ ಹೋಗಲು ಸಾಧ್ಯವಾಗದೇ ಕುಟುಂಬ ನಿರ್ವಹಣೆ ಕಷ್ಟವಾಗಿ ಜಿಲ್ಲಾ ಕೇಂದ್ರವೊಂದಕ್ಕೆ ಬಂದು ಬಾಡಿಗೆ ಮನೆಯೊಂದರಲ್ಲಿ ಜೀವನ ಪ್ರಾರಂಭಿಸಿದ್ದರು.ಮತ್ತೊಬ್ಬ ಮಗಳು ಹುಟ್ಟಿದಳು.ಬಡತನಕ್ಕೆ ಮಕ್ಕಳು ಜಾಸ್ತಿ ಎಂಬಂತೆ ಈಗ ನಾಲ್ಕು ಜನರ ಕುಟುಂಬವಾಯ್ತು.ಗಂಡನೊಬ್ಬನೇ ದುಡಿಯಬೇಕಾಯ್ತು.ಹಾಗೂ ಹೀಗೂ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ‘ಗೋಬಿ ಮಂಚೂರಿ’ ಮಾರುವ ವ್ಯಾಪಾರ ಆರಂಭಿಸಿದರು. ನಾನು ಅವಳಿಗೆ ಸಿಕ್ಕ ದಿನವೆಲ್ಲಾ ಅದರದ್ದೇ ವಿಷಯ ಅವಳ ಬಾಯಲ್ಲಿ… ನನ್ನ ಗಂಡ ರಾಜನಂಗೆ ಬೆಳೆದವರು, ಅವರಿಗೆ ಕಷ್ಟ ಸುಖ ಏನು ಗೊತ್ತಿಲ್ಲ.ಬೆಳಿಗ್ಗೆ ನಾನೇ ಮನೆಯಲ್ಲಿ ಗೋಬಿ ತಯಾರಿಸಿ,ಬೇಕಾದ ಎಲ್ಲಾ ಸಿದ್ಧತೆ ಮಾಡಿ ಅವರನ್ನು ನೀಟಾಗಿ ಬಟ್ಟೆ ಹಾಕೊಂಡು ಹೋಗಿ ಮಾರಲು ಕಳಿಸ್ತಾ ಇದ್ದೇನೆ.ಅದಕ್ಕೆ ಹೆಚ್ಚು ಜನ ನಮ್ಮ ಅಂಗಡಿಯಲ್ಲಿ ಬಂದು ತಿನ್ನುತ್ತಾರೆ.ಒಂದೊಂದು ದಿನ ಒಂದು ಸಾವಿರ ರೂಪಾಯಿಗಳ ವ್ಯಾಪಾರ ಆಗುತ್ತೆ.ಹೆಂಡತಿ ಮಕ್ಕಳು ಎಂದರೆ ನನ್ನ ಗಂಡನಿಗೆ ಪ್ರಾಣ.ಎರೆಡು ಲೀಟರ್ ಹಾಲು ತಗೊ ಅಂತಾರೆ,ಹಣ್ಣು,ಬ್ರೆಡ್ಡು,ಬಿಸ್ಕತ್ ಇಲ್ಲದೆ ಮನೆಗೆ ಬರಲ್ಲ.ಬೇಕಾದಷ್ಟು ತಂದು ಹಾಕ್ತಾರೆ. ನನ್ನ ಅಪ್ಪ ಅಮ್ಮ ಕೈ ಬಿಟ್ಟರೂ ನನ್ ಗಂಡ ಕೈ ಬಿಡಲಿಲ್ಲ, ನನ್ನ ಎರೆಡೂ ಮಕ್ಕಳು ಹುಟ್ಟಿದಾಗ ಇವರೇ ಬಾಣಂತನ ಮಾಡಿದ್ರು.ಇಷ್ಟೊಂದು ಬಾಡಿಗೆ ಕಟ್ಟಿಕೊಂಡು ಇಂತಹ ಮನೆಯಲ್ಲಿ ಸಾಕಿಕೊಂಡು ಹೋಗ್ತಾ ಅವ್ರೇ….. ಹೀಗೆ ಸಾಲು ಸಾಲುಗಳಲ್ಲಿ ತನ್ನ ಸಂಸಾರದ ಬಗ್ಗೆ ಹೇಳ್ತಾ ಗಂಡನನ್ನು ಹೊಗಳು ತಿದ್ದಳು ವಸಂತ. ಬೆಳಿಗ್ಗೆ ನನ್ನ ಪತಿಯನ್ನು ಬೈಕೊಂಡು ಹೋಗೋ ನಾನು ಸಂಜೆ ಬರುವಾಗ ಅವಳ ಮಾತು ಕೇಳಿ ಸಂತೋಷ ಪಡುತ್ತಾ ಮನೆಗೆ ಬರುತ್ತಿದ್ದೆ. ಅವಳ ಮಕ್ಕಳ ಮುಖ ನೋಡಿ ನಕ್ಕು ಮಾತಾಡಿಸಿ ಮನೆಗೆ ಬಂದರೆ ನನಗೂ ಒಂದು ರೀತಿ ಸಮಾಧಾನ ಆಗುತಿತ್ತು. ಬೇಸಿಗೆ ರಜೆಯಲ್ಲಿ ಮಕ್ಕಳಿಗೆ ಕಲಿಕಾ ಸಾಮಗ್ರಿ ತಂದು ಕೊಡುತ್ತೇನೆ ಎಂದು ಹೇಳಿ ಬಂದಿದ್ದೆ.ಆದರೆ ಅವಧಿಗೆ ಮುಂಚೆಯೇ ಶಾಲೆಯ ಬಾಗಿಲು ಹಾಕಿತ್ತು.ಕರೊನಾ ಕಾರಣದ ಲಾಕ್ ಡೌನ್ ನಿಂದಾಗಿ ನಲವತ್ತು ದಿನಗಳಿಂದ ವಸಂತಳ ಮನೆ ಕಡೆ ಹೋಗಲೇ ಇಲ್ಲ. ನಿನ್ನೆ ಒಮ್ಮೆ ಹೋಗಿ ಮಕ್ಕಳ ನೋಡಿ ಬರೋಣ ಎಂದು ಹೋಗಿದ್ದೆ. ನನ್ನ ಕಂಡ ತಕ್ಷಣವೇ ಮಕ್ಕಳು ನಕ್ಕರು.ವಸಂತ ಮಾತು ಆರಂಭಿಸಿದಳು… . ಎರೆಡು ತಿಂಗಳಾಯ್ತು,ಬೀದಿ ಬದಿ ಅಂಗಡಿ,ಹೋಟೆಲ್ ಬಾಗಿಲು ಹಾಕಿ, ಕೈಲಿ ಒಂದು ರೂಪಾಯಿ ಇಲ್ಲ,ಬಾಡಿಗೆ ಕಟ್ಟಿಲ್ಲ,ಮಕ್ಕಳಿಗೆ ಹಾಲು,ಬ್ರೆಡ್,ಬಿಸ್ಕಿಟ್ ತರಲು ಆಗಿಲ್ಲ.ವಿಕಲಚೇತನ ಮಗನಿಗೆ ಮಾತ್ರೆ ತಂದಿಲ್ಲ.ಅತ್ತ ಅತ್ತೆ ಮನೆಯೂ ಇಲ್ಲ,ಇತ್ತ ತಾಯಿ ಮನೆಯೂ ಇಲ್ಲ. ಗಂಡನಿಗೆ ಕೆಲಸ ಇಲ್ಲ.ಅಕ್ಕಿ ಬೇಳೆ ಬಿಟ್ಟರೆ ಬೇರೇನೂ ಇಲ್ಲ. ನನ್ನ ಗಂಡ ಎಲ್ಲಾ ಕಡೆ ಹೋಗಿ ಕೆಲಸ ಹೋಗಿ ಕೇಳಿದ್ರೂ… ಎಲ್ಲೂ ಕೆಲಸ ಸಿಗಲಿಲ್ಲ. ಮೊನ್ನೆಯಷ್ಟೇ ಹಾಲಿನ ಡೈರಿ ಯ ಲಾರಿಯಲ್ಲಿ ಹಳ್ಳಿ ಹಳ್ಳಿಗೆ ದನಗಳ ಮೇವು ಇಳಿಸಲು ಹೋಗುತ್ತಿದ್ದಾರೆ.ದಿನಕ್ಕೆ ಇನ್ನೂರು ಐವತ್ತು ರೂಪಾಯಿ ಕೊಡ್ತಾ ಇದ್ದಾರೆ. ಬೆನ್ನ ಮೇಲೆ ಮೂಟೆ ಹೊತ್ತು ಬೆನ್ನೆಲ್ಲಾ ಬರೆ ಬಂದಿದೆ ನೋಡಿ ಎಂದು ಕಣ್ಣಲ್ಲಿ ನೀರು ಸುರಿಸುತ್ತಾ ತನ್ನ ಗಂಡನ ಶರ್ಟ್ ಎತ್ತಿ ಬೆನ್ನು ತೋರಿಸಿದಳು.ಮಕ್ಕಳು ಬಡ ವಾಗಿ ಹೋಗಿವೆ ಎಂದು ದುಃಖಿಸಿದಳು. ಇಷ್ಟು ದಿನ ಉಳಿಸಿದ ಹಣ ಎಲ್ಲಿ? ಎಂದೆ. ಚೀಟಿ ಹಾಕಿದ್ದೆವು.ಅವನು ಈಗ ದುಡ್ಡಿಲ್ಲ ಎಂದುಬಿಟ್ಟ ಎಂದಳು.ಬಾಡಿದ ಅವಳ ಮುಖ,ಕತ್ತು ಬಗ್ಗಿಸಿ ಕುಳಿತ ಅವಳ ಗಂಡನ ನೋಡಿ ಮನಸ್ಸು ಭಾರವಾಯಿತು. ಆರಕ್ಕೇರದ,ಮೂರಕ್ಕಿಳಿಯದ ನನ್ನ ಸಂಬಳದಲ್ಲಿ ನಾನಾದರೂ ಏನು ಸಹಾಯ ಮಾಡಲಿ?? ಅವರಿಬ್ಬರ ಮೊಬೈಲ್ ಗೆ ಕರೆನ್ಸಿ ಹಾಕಿಸಿದೆ.ಮಕ್ಕಳಿಗೆ ಬಿಸ್ಕಿಟ್ ತಂದು ಕೊಟ್ಟು ಮನೆ ಕಡೆ ಹೆಜ್ಜೆ ಹಾಕಿದೆ. ರಾತ್ರಿ ನಿದ್ದೆ ಸುಳಿಯಲಿಲ್ಲ. ಕಾಣದ ಜೀವಿಯೊಂದು ಅದೆಷ್ಟು ಜನರ ಜೀವನವನ್ನು ಬಲಿ ತೆಗೆದುಕೊಳ್ಳುವುದರ ಜೊತೆಗೆ ಬದುಕಿದವರನ್ನು ಬರಿದಾಗಿಸಿದೆ… ಅಲ್ಲವೇ… ******

ಪ್ರಸ್ತುತ Read Post »

ಇತರೆ

ಸಿನಿಮಾ ಸಾಹಿತ್ಯ

ಯೋಗರಾಜ್ ಭಟ್ಟರ ಗೀತೆಗಳ ಗಮ್ಮತ್ತು ರಾಘವೇಂದ್ರ ಈ ಹೊರಬೈಲು “ಯಾವ ಹನಿಗಳಿಂದ ಯಾವ ನೆಲವು ಹಸಿರಾಗುವುದೋ ಯಾರ ಸ್ಪರ್ಷದಿಂದ ಯಾರ ಮನವು ಹಸಿಯಾಗುವುದೋ ಯಾರ ಉಸಿರಲ್ಯಾರ ಹೆಸರೋ ಯಾರು ಬರೆದರೋ” ಹತ್ತು ವರ್ಷಗಳ ಹಿಂದೆ, ಹಿರಿಯರು ಕಿರಿಯರೆನ್ನದೆ ಕರುನಾಡಿನ, ಅಷ್ಟೇ ಏಕೆ ಅದರಾಚೆಯ ಎಲ್ಲರೆದೆಯೊಳಗೂ ತಣ್ಣನೆ ಹನಿಹನಿಯಾಗಿ ಸುರಿದು, ಆರ್ದ್ರಗೊಳಿಸಿ, ಮನಸಿನೊಳಗೆ ಚಿರಂತನವಾಗಿ ನಿಂತ “ಮುಂಗಾರು ಮಳೆ” ಎಂಬ ಚಿತ್ರದ ಅಮರ ಗೀತೆಯ ಸಾಲುಗಳಿವು. ‘ಮುಂಗಾರು ಮಳೆಯೇ ಏನು ನಿನ್ನ ಹನಿಗಳ ಲೀಲೆ’ ಎಂದು ಪ್ರಾರಂಭವಾಗುವ ಈ ಹಾಡಿನ ಮೇಲಿನ ಸಾಲುಗಳನ್ನು ಈ ಹತ್ತು ವರ್ಷಗಳಲ್ಲಿ ಅದೆಷ್ಟು ಸಾವಿರ ಬಾರಿ ಕೇಳಿದ್ದೇನೋ, ಅದೆಷ್ಟು ಸಾವಿರ ಬಾರಿ ಗುನುಗಿದ್ದೇನೋ ನನಗೇ ಗೊತ್ತಿಲ್ಲ. ಮುಂಗಾರು ಮಳೆಗಿಂತ ಹಿಂದೆ ಹಾಗೂ ಅದು ಬಂದ ನಂತರ ಕೂಡಾ ಅಮೋಘ ಎನ್ನಬಹುದಾದ ಅದೆಷ್ಟೋ ಹಾಡುಗಳನ್ನು ಕೇಳಿದ್ದರೂ, ಈ ಹಾಡಿನ ಪ್ರತೀ ಸಾಲೂ ಮಾಡಿದ ಮೋಡಿ ಪದಗಳಲ್ಲಿ ವರ್ಣಿಸಲಸಾಧ್ಯ. ಇಂತಹ ಅನನ್ಯ ಗೀತೆಯನ್ನು ನೀಡಿದ ಮಹಾನ್ ಬರಹಗಾರ ಯೋಗರಾಜ್ ಭಟ್ಟರ ಬಗ್ಗೆ ಅದಕ್ಕೂ ಮೊದಲು ಕೆಲವೊಮ್ಮೆ ಮಾತ್ರ ಕೇಳಿದ್ದೆ. ಆದರೆ ಈ ಹಾಡಿನ ನಂತರ ನಾನಷ್ಟೇ ಅಲ್ಲ ಕರ್ನಾಟಕದ ಎಲ್ಲ ಸಂಗೀತ ಪ್ರಿಯರು, ಪ್ರಿಯರಲ್ಲದವರೂ ಪಕ್ಕಾ ಅವರ ಅಭಿಮಾನಿಗಳಾದದ್ದು ಸುಳ್ಳಾಗುವುದಕ್ಕೆ ಸಾಧ್ಯವೇ ಇಲ್ಲ. ಇಂತಹ ಅನೇಕ ಮಾಧುರ್ಯದ ಗೀತೆಗಳಾಚೆ ತಮ್ಮದೇ ವಿಶೇಷ ಶೈಲಿಯ, ಮಾತನ್ನೇ ಹಾಡಾಗಿಸುವ ಅವರ ರೀತಿ ನಿಜವಾಗಿಯೂ ನಿಬ್ಬೆರಗಾಗಿಸುತ್ತದೆ. ಉಡಾಳತನದಲ್ಲಿ ಪ್ರಾರಂಭವಾಗುವ ಹಾಡಿಗೆ ಗಾಂಭೀರ್ಯತೆಯ, ತಾತ್ವಿಕತೆಯ ಅಂತ್ಯ ಹೇಳುವ ಮಹಾನ್ ಮೇಧಾವಿ ಅವರು. ಮೇಲ್ನೋಟಕ್ಕೆ ಹಾಡಿನಲ್ಲಿ ಉಡಾಫೆತನವಿದ್ದರೂ ತಕ್ಷಣವೇ ತನ್ನತ್ತ ಕಿವಿಗೊಡಿಸುವ ಸೆಳೆತವಿರುವುದು ಅವರ ಈ ಹಾಡುಗಳ ಶಕ್ತಿ. “ಅಲ್ಲಾಡ್ಸು ಅಲ್ಲಾಡ್ಸು” ಎಂದು ಪ್ರಾರಂಭಿಸುತ್ತಲೇ ಜೀವನವನ್ನು ಟಾನಿಕ್ಕು ಬಾಟಲನ್ನಾಗಿಸಿ, ಅಂತ್ಯದಲ್ಲಿ “ನಿನ್ನ ಜೀವನಾನ ನೀನೇ ಅಲ್ಲಡಿಸಬೇಕೋ” ಎಂಬಲ್ಲಿಗೆ ತಂದು ನಿಲ್ಲಿಸೋ ಶಕ್ತಿ ಕೇವಲ ಭಟ್ಟರಿಗೆ ಮಾತ್ರ ಸಾಧ್ಯವೇನೋ. “ಗಿಜಿ ಗಿಜಿ ಕಯ ಕಯ ಪಂ ಪಂ ಪಂ” ಎಂದು ವಕ್ರ ವಕ್ರವಾಗಿ ಪ್ರಾರಂಭಿಸುವ ಭಟ್ಟರು, “ಕುಬೇರ ಮೂಲೆ ಮಾತ್ರ ಕಟ್ಸಿ ಟಾಯ್ಲೆಟ್ನಲ್ಲಿ ಹೋಗಿ ಮಲ್ಕೊ” ಎಂದು ನಮ್ಮ ಸಮಾಜದ ಒಂದು ಕುರುಡು ನಂಬಿಕೆ ಮತ್ತು ವ್ಯವಸ್ಥೆಯ ಮೇಲೆ ತಣ್ಣನೆ ಚಾಟಿ ಬೀಸ್ತಾರೆ. “ಯಕ್ಕ ರಾಜ ರಾಣಿ ನಿನ್ನ ಕೈಯೊಳಗೆ. … ಕಾಕಾ ಕಾಕಾ ಕಾಕಾ ಕಾಕಾ ಅಂದರ್ ಬಾಹರ್” ಎನ್ನುತ್ತಲೇ ” ದೇವ್ರವ್ನೇ ಮನೆ ಮಾರಿಬಿಡಿ” ಎಂದು ಕುಟುಕಿ ಅಂದರ್ ಬಾಹರ್ನಿಂದ ಮನೆ ಮಾನ ಕಳ್ಕೊಂಡವರಿಗೆ ಮರ್ಯಾದೆಯಿಂದ ಬುದ್ಧಿ ಹೇಳ್ತಾರೆ. “ಕತ್ಲಲ್ಲಿ ಕರಡೀಗೆ ಜಾಮೂನು ತನಿಸೋಕೆ ಯಾವತ್ತೂ ಹೋಗ್ಬಾರ್ದು ರೀ” ಎಂದು ಕತ್ತಲು ಕರಡಿ ಹೀಗೆ ಏನೇನೋ ಹೇಳುತ್ತಲೇ “ಮಾಡರ್ನು ಪ್ರೇಮಕ್ಕೆ ಮೈಲೇಜು ಕಮ್ಮಿ” ಎಂದು ಇಂದಿನ ‘ಪಾಕೆಟ್ ಖಾಲಿಯಾಗೋವರೆಗಿನ, ತೆವಲು ತೀರಿಸಿಕೊಳ್ಳುವಂತ ಪ್ರೀತಿಗೆ’ ಪಾಠ ಹೇಳ್ತಾರೆ. “ಹತ್ರುಪಾಯ್ಗೊಂದ್ ಹತ್ರುಪಾಯ್ಗೊಂದ್” ಎನ್ನುತ್ತಲೇ ಇಂದಿನ ಸಂಬಂಧಗಳೇ ಮಾರಾಟಕ್ಕಿಟ್ಟಿರುವ ಸರಕಾಗಿರುವುದರ ಬಗ್ಗೆ‌ ನಾಜೂಕಾಗಿಯೇ ಚುರುಕು ಮುಟ್ಟಿಸುತ್ತಾರೆ. ಇವು ಕೆಲವೇ ಉದಾಹರಣೆಗಳಷ್ಟೇ. ಪ್ರಾರಂಭದಲ್ಲಿ ವಕ್ರ ವಕ್ರವೆನ್ನುವಂತೆ ಭಾಸವಾಗುವ ಹಾಡುಗಳಿಗೆ ಗಂಭೀರ ಸಂದೇಶ ತುಂಬಿ ತಾತ್ವಿಕ ನೆಲೆಗಟ್ಟಿನಲ್ಲಿ ನಿಲ್ಲಿಸಿ, ಎಲ್ಲರೂ ಒಮ್ಮೆ ಯೋಚಿಸುವಂತೆ, ಮತ್ತೆ ಮತ್ತೆ ಕೇಳುವಂತೆ ಮಾಡುವ, ಹರಿತವಾದ ಭಾಷೆಯನ್ನು ತನ್ನದೇ ಧಾಟಿಯಲ್ಲಿ ದಾಟಿಸುವ ತಾಕತ್ತು, ಸಮಾಜದ ಗಾಯವನ್ನು ಬೇರೆಯದೇ ರೀತಿಯಲ್ಲಿ ತೋರಿಸುತ್ತಾ, ಅದಕ್ಕೆ ಮುಲಾಮನ್ನೂ ತಮ್ಮ ಸಾಹಿತ್ಯದ ಮೂಲಕವೇ ನೀಡುವ ಕಲೆ ಭಟ್ಟರಿಗಿರುವುದು ಅವರ ದೊಡ್ಡ ಶಕ್ತಿ. “ಅದೇನು ಸಾಹಿತ್ಯನಪ್ಪ, ‘ಕಾಲಿ ಕ್ವಾಟ್ರು, ಅಲ್ಲಾಡ್ಸು, ಕಾ ಕಾ ಕಾ’ ಅಂತ ಅಸಭ್ಯ” ಅಂತ ಭಟ್ಟರ ಸಾಹಿತ್ಯವನ್ನು ಛೇಡಿಸುವವರೂ ಇರಬಹುದು. ಛೇಡಿಸುವವರ ಬಾಯ್ಮುಚ್ಚಿಸುವ ಸಾಹಿತ್ಯ ಭಟ್ಟರ ಬಾಂಡಲಿಯಿಂದ ಗರಿಗರಿಯಾಗಿ ಹೊರಬರುತ್ತಿವೆ. ಭಟ್ಟರನ್ನು ಮೀರಿಸುವ ಇನ್ನೂ ಅತ್ಯದ್ಭುತ ಸಾಹಿತಿಗಳಿರಬಹುದು. ಕನ್ನಡ ಚಲನಚಿತ್ರ ಇತಿಹಾಸದಲ್ಲಿ ಅಜರಾಮರವಾಗುವಂತ ತುಂಬಾ ದೊಡ್ಡ ಹೆಸರುಗಳಿವೆ. ಆದರೆ ಭಟ್ಟರು ಅವರಿಗಿಂತ ಕಡಿಮೆಯೇನೂ ಇಲ್ಲ ಎಂಬುದೂ ಇಲ್ಲಿಯ ಕಳಕಳಿ. ಅವರ ಮುಗುಳುನಗೆ ಹಾಡಿನ ಕುರಿತು ಒಮ್ಮೆ ಸ್ನೇಹಿತ, ಸಾಹಿತಿ ಸದಾಶಿವ ಸೊರಟೂರು ಬರೆದ ಮುದ್ದಾದ ಲೇಖನಕ್ಕೆ ಅಷ್ಟೇ ಮುದ್ದಾಗಿ, ಪ್ರಾಮಾಣಿಕವಾಗಿ “ನಾನಿನ್ನು ಕೂತ್ಕೊಂಡು ನೆಟ್ಟಗೆ ಬರೀತೀನಿ” ಎಂದುತ್ತರಿಸಿದ ಭಟ್ಟರ ರೀತಿ ಇಂದಿನ ಅದೆಷ್ಟೋ ‘ಸ್ವಯಂ ಹೊಗಳು ಕವಿಗಳಿಗೆ’ ಬೆತ್ತವಿಲ್ಲದ ಪಾಠ. ನಾನೊಬ್ಬ ದೊಡ್ಡ ಬರಹಗಾರನೆಂಬ ಹಮ್ಮಿಲ್ಲದ ಭಟ್ಟರ ಸ್ವಭಾವವೋ ಅಥವಾ ಸದಾಶಿವರವರ ಬರಹದ ಮೋಡಿಯೋ ಅಥವಾ ಎರಡೂನೋ ಗೊತ್ತಿಲ್ಲ. ಆದರೆ ಒಂದಂತೂ ಸತ್ಯ. ಅವರೇ ಹೇಳುವಂತೆ ನೆಟ್ಟಗೆ ಕೂತ್ಕೊಂಡು ಬರೆಯದೆಯೇ ಅದ್ಭುತ ಸಾಹಿತ್ಯ ನೀಡುತ್ತಿರುವ ಭಟ್ಟರು, ಸರಿಯಾಗಿ ಬರೆಯಲು ಪ್ರಾರಂಭಿಸಿದರಾದರೆ ಅದೆಂತಹ ಅತ್ಯದ್ಭುತ ಬರಹ ಹೊರಬರಬಹುದು, ಅದೆಂತಹ ದೊಡ್ಡ ಸಾಹಿತಿಯ ಉಗಮವಾಗಬಹುದು ಅಲ್ವಾ? ಅಂತಹ ಅತ್ಯದ್ಭುತ ಬರಹ ಭಟ್ಟರಿಂದ ಸಾವಿರಾರು ಬರಲಿ, ಅದರಿಂದ ನನ್ನಂತಹ ಕೋಟ್ಯಂತರ ಸಾಹಿತ್ಯಾಭಿಮಾನಿಗಳಿಗೆ ಸ್ಪೂರ್ತಿಯ ಚಿಲುಮೆಯಾಗಲಿ ಎಂಬ ಚಿಕ್ಕ ಬಯಕೆ. ************

ಸಿನಿಮಾ ಸಾಹಿತ್ಯ Read Post »

ಇತರೆ

ಲಹರಿ

ಹೆತ್ತಮ್ಮನಲ್ಲದ ಅಮ್ಮ ಸಂಧ್ಯಾ ಶೆಣೈ [5:25 pm, 10/05/2020] SANDHYA. SHENOY: ನಮ್ಮ ಮಟ್ಟಿಗೆ ಪ್ರತಿಯೊಂದು ದಿನವೂ ತಾಯಂದಿರ ದಿನವೇ. ಆದರೂ ಕೆಲವೊಂದು ದಿನಗಳ ಹೆಸರನ್ನು ಕೇಳುವಾಗ ಮೈ ಪುಳಕಗೊಂಡು ನಮಗೆ ತಾಯಿಯಂತಹ ಪ್ರೀತಿಯನ್ನು ಕೊಟ್ಟವರ ನೆನಪೆಲ್ಲವೂ ಆಗುತ್ತದೆ .ಹಾಗಾಗಿ ಈ ದಿನವನ್ನು ನಾನು ಹೆತ್ತಮ್ಮ ನಲ್ಲದಿದ್ದರೂ ಅಮ್ಮನಂತೆ ಪ್ರೀತಿಸುವ ನಮ್ಮೆಲ್ಲ ಅಮ್ಮಂದಿರ ದಿನ ಎಂದೇ ಕರೆಯಲು ಬಯಸುತ್ತೇನೆ. ಹಾಗೂ ಇವತ್ತಿನ ಈ ನನ್ನ ಲೇಖನವನ್ನು ನಮ್ಮ ಪ್ರೀತಿಯ ಸೋದರತ್ತೆಯ ತಾರಮಕ್ಕಳಿಗೆ ಅರ್ಪಿಸುತ್ತೇನೆ. ಈಗ ಅವಳು ಹೇಳಬಹುದು “ಆ ಹುಚ್ಚಿ ನನ್ನ ಬಗ್ಗೆ ಏನು ಬರೀತಾಳಾ..” ಎಂದು . ನಾವು ಚಿಕ್ಕವರಿರುವಾಗ ನಮಗೆ ರಜೆ ಬಂದ ಕೂಡಲೇ ನಾವು ಪೆಠಾರಿ ಕಟ್ಟುವುದು ಒಂದೇ ತೀರ್ಥಹಳ್ಳಿಯ ಚಿಕ್ಕಪ್ಪನ ಮನೆಗೆ ..ಇಲ್ಲವೇ ಉಡುಪಿಯ ನಮ್ಮ ಸೋದರತ್ತೆ ತಾರಮಕ್ಕನ ಮನೆಗೆ .ಎರಡೂ ಕಡೆ ನಮ್ಮ ಸಮವಯಸ್ಕರು ಇದ್ದರು ಮಾತ್ರವಲ್ಲ ನಮ್ಮನ್ನು ತಮ್ಮ ಮಕ್ಕಳಂತೆ ಪ್ರೀತಿಸುವ ಅಮ್ಮಂದಿರು ಇದ್ದರು .ಚಿಕ್ಕಮ್ಮನ ವಿಷಯ ಇನ್ನೊಮ್ಮೆ ಬರೆಯುತ್ತೇನೆ . ನಾನು ಬಹಳ ಚಿಕ್ಕವಳಿರುವಾಗ ಅಮ್ಮನೊಡನೆ ಉಡುಪಿಗೆ ಹೋಗುತ್ತಿದ್ದೆ. ಆಗ ಬ್ರೆಡ್ ಗೆ ಮನೆಯಲ್ಲಿ ಕಡೆದ ಬೆಣ್ಣೆಯನ್ನು ದಪ್ಪಗೆ ಹಚ್ಚಿ ಅದರ ಮೇಲೆ ಸಕ್ಕರೆ ಹಾಕಿ ತಿಂದಿದ್ದು ಅದೇ ಅಲ್ಲಿಯೇ ಮೊದಲು .ನನಗಂತೂ ಆ ದಿನದ ಆ ಬ್ರೆಡ್ ಮತ್ತು ಬೆಣ್ಣೆ ಸಕ್ಕರೆಯ ರುಚಿ ಇಂದಿಗೂ ನಾಲಿಗೆ ತುದಿಯಲ್ಲಿಯೇ ಇದೆ. ಅಷ್ಟೊಂದು ರುಚಿಕರವಾಗಿ ಇದ್ದಂತಹ ಆ ಬ್ರೆಡ್ ಮತ್ತು ಬೆಣ್ಣೆಯ ಖುಷಿಯನ್ನು ತೋರಿಸಿದವರು ನಮಗೆ ತಾರಮಕ್ಕ. ಆ ಮನೆಯ ಕಾಂಪೌಂಡಿನಲ್ಲಿರುವ ಮಂದಾರ.. ಕರವೀರ.. ಕರಿಬೇವಿನ ಮರ ಇವುಗಳ ನಡುವೆ ಆಡಿದ್ದು ನನಗಿನ್ನೂ ನೆನಪಿದೆ .ಅಕ್ಕಪಕ್ಕದ ಮನೆಯವರೂ ನೆನಪಿದ್ದಾರೆ. ಹಾಗೆ ಸ್ವಲ್ಪ ಸಮಯದಲ್ಲಿ ಅವರು ವಳಕಾಡಿನ ಮನೆಗೆ ಶಿಫ್ಟ್ ಮಾಡಿದರು. ಮನೆ ತುಂಬಾ ದೊಡ್ಡದಿತ್ತು. ಆದರೆ ಬೇಸಿಗೆಯಲ್ಲಿ ನೀರಿಗೆ ಬಹಳ ಅಭಾವವಿತ್ತು. ನಮಗೆ ಮಕ್ಕಳಿಗೆ ಎಲ್ಲಿ ತಿಳಿಯುತ್ತದೆ ಅವರ ಕಷ್ಟ .ರಜೆ ಅಂದ ಕೂಡಲೇ ಅವರ ಮನೆಗೆ ಹೊರಡುತ್ತಿದ್ದೆ. ಉಡುಪಿಗೆ ಬಸ್ಸಿನಲ್ಲಿ ಬರುವಾಗ ಮಣಿಪಾಲದಲ್ಲಿ ಬಸ್ಸು ನಿಂತಿದ್ದಾಗ ಅಲ್ಲೇ ಇರುವ ಸಿನಿಮಾ ಬೋರ್ಡನ್ನು ನೋಡುತ್ತಿದ್ದೆ .ಯಾಕೆಂದರೆ ನನಗೆ ನೂರಕ್ಕೆ ನೂರು ಪರ್ಸೆಂಟ್ ಗೊತ್ತಿತ್ತು ತಾರಮಕ್ಕ ನನಗೆ ಒಂದಾದರೂ ಸಿನಿಮಾ ನೋಡಲು ಕಳಿಸಿಯೇ ಕಳಿಸುತ್ತಾರೆ ಎಂದು. ಹಾಗಾಗಿ ಈಗ ಯಾವ ಸಿನಿಮಾ ನಡೀತಾ ಇದೆ .ನಾನು ಯಾವುದು ನೋಡಬಹುದು ಎಂದು ಮಣಿಪಾಲದಿಂದ ಉಡುಪಿಯ ತನಕ ಲೆಕ್ಕಾಚಾರ ಹಾಕುತ್ತಲೇ ಬರುತ್ತಿದ್ದೆ. ಬಂದವಳು ಸಣ್ಣ ಹುಡುಗಿಯಾದರೂ ಯಾರೋ ವಿಐಪಿ ಬಂದಂತೆ ಪ್ರೀತಿಯಿಂದಲೇ ಸ್ವಾಗತಿಸುತ್ತಿದ್ದಳು. ಸರಿ ಮರುದಿನದಿಂದಲೇ ನಾನು ಮನೋಹರ ನಿತಿನ ಸೇರಿ ಅಜರ್ಕಾಡಿಗೆ ಹೋಗುವುದೇನು.. ದೇವಸ್ಥಾನದ ಕೆರೆಯಲ್ಲಿ ಮಕ್ಕಳು ಈಜುವುದನ್ನು ನೋಡಲು ಹೋಗುವುದೇನು.. ದೊಡ್ಡಮ್ಮನ ಮನೆಗೆ ಹೋಗುವುದೇನು ..ಆ ಬೇಸಿಗೆರಜೆ ಸಮಯದಲ್ಲಿ ಹೆಚ್ಚಾಗಿ ಸರ್ಕಸ್ ಕೂಡ ಇರುತ್ತಿತ್ತು. ಆ ಸರ್ಕಸ್ ನೋಡಲು ನಮ್ಮ ಕೇಶವಮಾಮ ನೊಟ್ಟಿಗೆ ಹೋಗುವುದೇನು ..ಒಟ್ಟಾರೆ ಸಮಯ ಕಳೆದದ್ದೇ ಗೊತ್ತಾಗುತ್ತಿರಲಿಲ್ಲ .ನಾನು ಮೊದಲೇ ಹೇಳಿದಂತೆ ಯಾವುದಾದರೂ ಒಂದು ಕೆಲವೊಮ್ಮೆ ಎರಡೂ ಸಿನಿಮಾ ನಮಗೆ ನೋಡಲು ಖಂಡಿತವಾಗಿಯೂ ಸಾಧ್ಯವಾಗುತ್ತಿತ್ತು. ಸಿನಿಮಾ ನೋಡಿದ ಮೇಲೆ ಅಲ್ಲೇ ಪಕ್ಕದಲ್ಲಿರುವ ಡಯಾನ ಹೊಟೇಲಿನಲ್ಲಿ ನಮಗೆ ಐಸ್ಕ್ರೀಂ ತಿನ್ನಿಸುವ ಪರಿಪಾಠವಿತ್ತು. ಮನೋಹರ ಮತ್ತೆ ನಿತಿನ ಅದ್ಯಾಕೋ ಫ್ರೂಟ್ ಸಲಾಡ್ ತಿನ್ನುತ್ತಿದ್ದರು. ನನಗೆ ಫ್ರೂಟ್ ಸಲಾಡ್ ತಗೊಂಡರೆ ಐಸ್ ಕ್ರೀಂ ಸ್ವಲ್ಪ ಕಡಿಮೆ ಪ್ರಮಾಣದಲ್ಲಿ ಬರಬಹುದು ಎಂದು ಐಸ್ಕ್ರೀಮೇ ಬೇಕೆಂದು ಹೇಳುತ್ತಿದ್ದೆ .ಆ ಗಾಜಿನ ಬೌಲ್ನಲ್ಲಿ ಇದ್ದಂತಹ ಐಸ್ಕ್ರೀಂ ಮತ್ತು ಅದಕ್ಕಾಗಿಯೇ ಇರುವ ಚಮಚದಿಂದ ಚೂರು ಚೂರೇ ತೆಗೆದು ಬಾಯಿಯಲ್ಲಿ ಹಾಕಿ ತಿನ್ನುತ್ತಾ ಅನುಭವಿಸುವ ಸ್ವರ್ಗ ಸುಖ ಬಹುಶಃ ಈಗ ಯಾವ ಐಸ್ಕ್ರೀಂ ತಿಂದರೂ ಸಿಗಲಿಕ್ಕಿಲ್ಲ . ನಾನಾಗಲೇ ಹೇಳಿದಂತೆ ಮನೆಯ ಪಕ್ಕದ ಬಾವಿಯಲ್ಲಿ ನೀರು ಖಾಲಿಯಾಗಿ ಸ್ವಲ್ಪ ದೂರದ ಬಾವಿಯಿಂದಲೇ ನೀರು ತರಬೇಕಿತ್ತು ಆದರೆ ಈ ನಮ್ಮ ತಾರಮಕ್ಕ ಒಂದೇ ಒಂದು ದಿನವೂ ನಮ್ಮ ಬಳಿ ತಮ್ಮ ನೀರಿನ ಕಷ್ಟವಾಗಲಿ ಅಥವಾ ನಾವು ಬಂದು ಅವರಿಗೆ ಕಷ್ಟವಾಗಿದೆ ಎಂದಾಗಲಿ ಹೇಳಿದ್ದು ಇಲ್ಲವೇ ಇಲ್ಲ..ಈಗಲೂ ಉಡುಪಿಯಲ್ಲಿ ಮೇ ತಿಂಗಳಲ್ಲಿ ಬಹಳ ನೀರಿನ ಅಭಾವವಿರುತ್ತದೆ ಹಾಗಾಗಿ ನನ್ನ ಪರಿಚಿತರು ಯಾರಾದರೂ ಉಡುಪಿಗೆ ಬರುವುದಿದ್ದರೆ ನಾನು ಮೊದಲೇ ಹೇಳುತ್ತೇನೆ “ನೀವು ಉಡುಪಿಗೆ ಬರುವ ಪ್ಲಾನನ್ನು ಏಪ್ರಿಲ್ ಮೇ ತಿಂಗಳಲ್ಲಿ ಹಾಕಲೇಬೇಡಿ. ಯಾಕೆಂದರೆ ಇಲ್ಲಿ ಒಂದು ತುಂಬಾ ಸೆಕೆ ..ಎರಡನೆಯದು ನೀರಿನ ಅಭಾವ.. ಹಾಗಾಗಿ ಏನು ಬರುವುದಿದ್ದರೂ ಆಗಸ್ಟ್ ನಂತರ ಫೆಬ್ರವರಿ ತಿಂಗಳೊಳಗೆ ಬಂದುಬಿಡಿ” ಎಂದೇ ಹೇಳುತ್ತೇನೆ. ಯಾರಿಗೋ ಯಾಕೆ ನನ್ನ ಸ್ವಂತ ಮಗಳಿಗೆ ಕೂಡ “ನೀನು ಬರುವುದಾದರೆ ಏಪ್ರಿಲ್ ನಲ್ಲೇ ಬಾ ಮಾರಾಯತಿ.. ಮೇ ತಿಂಗಳಲ್ಲಿ ಬೇಡ ..ಮೇ ತಿಂಗಳಲ್ಲಿ ನೀನು ನಿನ್ನ ಗಂಡನ ಮನೆಯಲ್ಲೇ ಇರು” ಎನ್ನುತ್ತೇನೆ. ಆಗೆಲ್ಲ ಒಂದೆ ಫ್ಯಾನ್ ಇದ್ದುದರಿಂದ ಎಲ್ಲರೂ ಒತ್ತೊತ್ತಾಗಿ ಅದೇ ಫ್ಯಾನ್ ನಡಿಯಲ್ಲಿ ಮಲಗುತ್ತಿದ್ದದ್ದು ನೆನಪಾದರೆ ಬಹಳ ಖುಷಿ ಅನ್ನಿಸ್ತಾ ಇದೆ .ಹಾಗೆ ಮನೆಯಲ್ಲಿ ಗ್ಯಾಸ್ ಇಲ್ಲದಿದ್ದರೂ ಈಗಿನಂತೆ ಮಿಕ್ಸಿ ಗ್ರ್ಯಾಂಡರ್ ಏನೂ ಇಲ್ಲದಿದ್ದರೂ ಕಟ್ಟಿಗೆ ಒಲೆ ..ಹಾಗೆ ಮರದ ಹುಡಿಯನ್ನು ಪ್ರತಿದಿನವೂ ತುಂಬಿಸಿ ತುಂಬಿಸಿ ಅವರೇ ಮಾಡುತ್ತಿದ್ದಂತಹ ಒಂದು ಡಬ್ಬಿ ಅಂತಹ ಒಲೆ ಯಲ್ಲಿಯೇ ಬಹಳ ರುಚಿಯಾದ ಅಡುಗೆಯನ್ನು ಮಾಡಿ ಬಹಳ ಪ್ರೀತಿಯಿಂದ ಬಡಿಸುತ್ತಿದ್ದರು . ಅಡುಗೆ ಮನೆಯನ್ನು ಕನ್ನಡಿಯಂತೆ ಶುಭ್ರಗೊಳಿಸಿ ತಾವು ಕೂಡ ಅತ್ಯಂತ ಶುಭ್ರವಾಗಿ ಯಾವಾಗಲೂ ಸ್ವಚ್ಛವಾದ ಕಾಟನ್ ಸೀರೆಯನ್ನು ಉಟ್ಟು ಶಿಸ್ತಿನಿಂದ ಇರುತ್ತಿದ್ದ ತಾರಮಕ್ಕಳನ್ನು ನೆನೆಸಿದರೆ.. ಈಗ ಮನೆಯಲ್ಲಿ ಎಲ್ಲಾ ಸೌಕರ್ಯವಿದ್ದರೂ ಕೊಳಕು ಕೊಳಕಾಗಿ ಇರುವ ಹೆಂಗಸರನ್ನು ನೋಡಿದರೆ ತಲೆ ಬಿಸಿಯಾಗುತ್ತದೆ .. ನಾನು ಮುಂಬೈ ಶಹರವನ್ನು ಬಿಟ್ಟು ಉಡುಪಿಯಲ್ಲಿ ನನ್ನ ಗಂಡನ ಮನೆಗೆ ಬಂದು ಇದ್ದಾಗ ನನ್ನ ಯಜಮಾನರು ಸೌದಿ ಅರೇಬಿಯಾದಲ್ಲಿದ್ದು ಆಗ ಚಿಕ್ಕ ಮಗುವನ್ನು ಕರೆದುಕೊಂಡು ನಾನು ಆಗಾಗ ತಾರಮಕ್ಕಳ ಮನೆಗೆ ಒಳಕಾಡಿಗೆ ಹೋಗುತ್ತಿದ್ದೆ.. ಒಂದು ದಿನ ನಾನು ಹೋಗುವಾಗ ಗುರುವಾರ .ನಾನು ಹೋದವಳು ಹೇಳಿದೆ “ತಾರಮಕ್ಕ ..ಗುರುವಾರ ನಾನು ರಾತ್ರಿ ಊಟ ಮಾಡುವುದಿಲ್ಲ ಹಾಗಾಗಿ ಒಂದಿಷ್ಟು ಅವಲಕ್ಕಿ ಮಾಡಿ ಕೊಡ್ತೀರಾ” ಎಂದೆ.. “ಆಯ್ತಾಯ್ತು “ಎಂದು ಹೇಳಿದರು ಆಮೇಲೆ ರಾತ್ರಿ ಊಟಕ್ಕೆ ಕೂತಾಗ ನನಗೆ ಬಿಸ್ಕೂಟ್೦ಬಡೇ ಕೊಡ್ತಾ ಇದ್ದಾರೆ .ನಾನು ಹೇಳಿದೆ . “ತಾರಮಕ್ಕ ನಿನ್ನದೊಂದು ಯಾಕೆ ಬಿಸ್ಕಿಟ್೦ಬಡೇ ಮಾಡಿದ್ದು” ಎಂದಾಗ “ಇರಲಿಯಾ ..ನಾವೂ ತಿನ್ನದೇ ಬಹಳ ದಿನವಾಯಿತು “ಎಂದು ಹೇಳಿ ನಾಳೆಗೆಂದು ಮಾಡಿ ಇಟ್ಟ ಉದ್ದಿನ ಹಿಟ್ಟಿನಲ್ಲಿಯೇ ಸ್ವಲ್ಪ ಹಿಟ್ಟು ತೆಗೆದು ಬಿಸ್ಕೂಟ್೦ಬಡೆ ಮಾಡಿಕೊಟ್ಟಿದ್ದನ್ನು ನಾನು ಯಾವತ್ತೂ ಮರೆಯುವುದಿಲ್ಲ. ಅಷ್ಟು ಪ್ರೀತಿ ಅವರಿಗೆ . ನನ್ನನ್ನು ಐದಾರು ತಿಂಗಳ ಮಗುವಿನೊಂದಿಗೆ ಒತ್ತಾಯಪೂರ್ವಕ ಅವರ ಮನೆಯಲ್ಲಿ ಆ ರಾತ್ರಿ ಉಳಿಸಿಕೊಂಡು ಮರುದಿನ ಹೊಸ ಸಾಬೂನು ತೆಗೆದು ಆ ಮಗುವಿಗೆ ಸ್ನಾನ ಮಾಡಿಸಿ ಅದಕ್ಕೆ ಕಿಟಿಕಿಯ ಹತ್ತಿರವೇ ಹಾಸಿಗೆಯನ್ನು ಹಾಕಿ ..ತಮ್ಮ ಮೆದು ಮೆದುವಾದ ಸೀರೆಯನ್ನು ಹಾಸಿಗೆ ಮೇಲೆ ಹರಡಿ ..ಮಲಗಿಸಿದ್ದು ನನಗಿನ್ನೂ ಕಣ್ಣೆದುರು ಕಾಣಿಸ್ತಾ ಇದೆ .ತಮ್ಮ ಹಳೆಯ ವಾಯಿಲ್ ಸೀರೆಗಳನ್ನೇ ಅವರು ಹಾಸಿಗೆಗೆ ಬೆಡ್ಶೀಟ್ಟನಂತೆ ಹಾಕುತ್ತಿದ್ದರಿಂದ ಆ ಮೃದುವಾದ ಸೀರೆಯ ಮೇಲೆ ಮಲಗುವ ಸುಖ ಇವತ್ತು ಯಾವುದೇ ಬಾಂಬೆ ಡೈಯಿಂಗ್ ಬೆಡ್ಶೀಟಿನಲ್ಲಿ ಸಿಗಲಿಕ್ಕಿಲ್ಲ .ಇವತ್ತು ನಾನು ಹೊದ್ದುಕೊಳ್ಳುವುದೂ ಅವರದೇ ಎರಡು ಮೂರು ಸೀರೆಗಳನ್ನು ಸೇರಿಸಿ ಮಾಡಿದ ಒಂದು ಗೊದ್ದೋಡಿಯನ್ನು. ದೊಡ್ಡಮ್ಮನ ಮನೆಯಲ್ಲಿ ಯಾವುದೇ ಶ್ರಾದ್ಧ ..ಏನಾದರೂ ವಿಶೇಷ ಆದರೆ ಮುಂಚಿನ ದಿನ ಹೋಗಿ ಕಡೆಯುವ ಕಲ್ಲಿನಲ್ಲಿ ಏನೆಲ್ಲಾ ರುಬ್ಬಬೇಕು ಅದನ್ನೆಲ್ಲ ರುಬ್ಬಿಟ್ಟು. ನಾನು ಕೆಲವೊಮ್ಮೆ ಸಂಜೆ ದೊಡ್ಡಮ್ಮನ ಮನೆಗೆ ಹೋದಾಗ ಈ ತಾರಮಕ್ಕ ಎಂದಿನಂತೆ ತಮ್ಮ ಕಾಟನ್ ಸೀರೆಯನ್ನು ನೀಟಾಗಿ ಉಟ್ಟು ನಗುತ್ತಾ ಕುಳಿತಿರುವುದು ನನ್ನ ಕಣ್ಣಿಗೆ ಕಟ್ಟಿದಂತಿದೆ. ಎಷ್ಟೇ ಕೆಲಸವಿರಲಿ ತಮ್ಮ ಆ ಕಾಟನ್ ಸೀರೆಗಳಿಗೆ ಹದವಾಗಿ ಗಂಜಿ ಹಾಕಿ …ಕೈಯಿಂದ ತಿಕ್ಕಿ ತಿಕ್ಕಿ ನೀಟಾಗಿ ಮಡಚಿ ಅದನ್ನು ಹಾಸಿಗೆಯ ಅಡಿಯಲ್ಲಿಟ್ಟು ಇಸ್ತ್ರಿಪೆಟಿಗೆ ಇಲ್ಲದಿದ್ದರೂ ಈ ಇಸ್ತ್ರೀಯನ್ನು ಮಾಡಿ ಅದನ್ನು ಉಟ್ಟುಕೊಂಡು ಬರುತ್ತಿದ್ದರೆ ಎಂಥವರಿಗಾದರೂ ಗೌರವ ಉಕ್ಕಿ ಬರಬೇಕು. ಹಾಗಾಗಿ ನನ್ನ ಅಣ್ಣ ಅವರನ್ನು ಕಾಟನ್ ಕುಂತಿ ಎಂದೇ ಕರೆಯುತ್ತಾರೆ. ಯಾಕೆಂದರೆ ಯಾವಾಗಲೂ ಕಾಟನ್ ಸೀರೆಯನ್ನು ಉಡುವ ಇವರಿಗೂ ಕುಂತಿಯಂತೆ ಐವರು ಗಂಡು ಮಕ್ಕಳು. ನನ್ನ ದೊಡ್ಡ ಅಕ್ಕನ ಹೆರಿಗೆ ಸಮಯದಲ್ಲಿ ಅಜ್ಜಿ ಏನನ್ನೋ ತರಲು ಮಾಳಿಗೆಗೆ ಹತ್ತಿದವರು ಇಳಿಯುವಾಗ ಬಿದ್ದು ಕಾಲು ಮುರಿದು ಮಣಿಪಾಲ ಆಸ್ಪತ್ರೆಯಲ್ಲಿ ತಿಂಗಳಾನುಗಟ್ಟಲೆ ಇದ್ದರು .ಆ ಸಮಯದಲ್ಲಿ ಮಧ್ಯಾಹ್ನದ ಊಟ ..ಹಾಗೂ ರಾತ್ರಿ ಊಟ ಸೋಮೇಶ್ವರದಿಂದ ಬಸ್ಸಿನಲ್ಲಿ ಬರುತ್ತಿತ್ತು .ಆದರೆ ಬೆಳಗ್ಗಿನ ಉಪಾಹಾರ ಕೇಶವ್ ಮಾಮ ಮಣಿಪಾಲಕ್ಕೆ ಆಫೀಸಿಗೆ ಬರುವಾಗ ತಂದು ಆಸ್ಪತ್ರೆಗೆ ಕೊಟ್ಟು ಹೋಗುತ್ತಿದ್ದರು .ಹಾಗೇ ಸಂಜೆ ತಿಂಡಿಯನ್ನು ತಾರಮಕ್ಕ ತಮ್ಮ ಮನೆಯಿಂದಲೇ ತರುತ್ತಿದ್ದರು. ತಮ್ಮ ಮನೆ ಕೆಲಸಗಳನ್ನೆಲ್ಲ ಬೇಗನೆ ಮುಗಿಸಿ ನಾಳೆ ಬೆಳಗ್ಗಿನ ತಿಂಡಿಯ ತಯಾರಿಯನ್ನು ಮಾಡಿಟ್ಟು ರಾತ್ರಿಯ ತಯಾರಿಯನ್ನೂ ಮುಗಿಸಿ.. ಮಧ್ಯಾಹ್ನ ಊಟವಾದ ಮೇಲೆ ಬಿಸಿಲಿನಲ್ಲಿ ಸಾಧಾರಣ ತಮ್ಮ ಮನೆಯಿಂದ ಒಂದೂವರೆ ಕಿಲೋಮೀಟರ್ ದೂರದಲ್ಲಿರುವ ಸಿಟಿ ಬಸ್ ಸ್ಟ್ಯಾಂಡಿನ ವರೆಗೆ ನಡೆದುಕೊಂಡು ಬಂದು .ಅಲ್ಲಿ ಈಗಿನಂತೆ ಗಳಿಗೆಗೊಂದು ಬಸ್ಸಿನಂತೆ ಇರದೆ ವಿರಳವಾಗಿರುತ್ತಿದ್ದ ಬಸ್ಸಿಗೆ ಕಾದು ..ಮಣಿಪಾಲಕ್ಕೆ ಬಂದು.. ಅಲ್ಲಿಂದ ಬಾಳಿಗಾ ವಾರ್ಡಿನ ತನಕ ನಡೆದುಕೊಂಡು ಬಂದು ನಮಗೆ ತಿಂಡಿಯನ್ನು ಕೊಟ್ಟು.. ವಾಪಸು ಪುನಃ ಬಸ್ಸಿನಲ್ಲಿ ಸಿಟಿ ಬಸ್ ಸ್ಟ್ಯಾಂಡಿಗೆ ಹೋಗಿ ಮನೆ ತನಕ ನಡೆದುಕೊಂಡು ಹೋಗಿ ಪುನಃ ತಮ್ಮ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದರು. ಇದು ಒಂದು ದಿನವಲ್ಲ ಪೂರ್ತಿ ಅಜ್ಜಿ ಇರುವಷ್ಟು ದಿನ.ಆಗೆಲ್ಲಾ ಯಾಕೋ ಹೊರಗಿನಿಂದ ತಿಂಡಿ ತಂದು ತಿನ್ನುವ ಕ್ರಮವೇ ಇರಲಿಲ್ಲ ಹಾಗಾಗಿ ಈ ಒಂದು ಕೆಲಸವನ್ನು ಅವರು ಚಾಚೂ ತಪ್ಪದೆ ಮಾಡುತ್ತಿದ್ದರು. ಇಷ್ಟು ಮಾತ್ರವೇ ಮಿಷನ್ ಹಾಸ್ಪಿಟಲ್ ನಲ್ಲಿ ಯಾರಾದರೂ ಎಡ್ಮಿಟ್ ಆದರು ಅವರ ಮನೆಯಿಂದಲೇ ಊಟ ತಿಂಡಿ ಸರಬರಾಜು .. ಹಾಗೆ ಅವರ ಮಕ್ಕಳೆಲ್ಲರೂ ಮುಂಬಯಿಗೆ ಹೋದ ಮೇಲೆ ಕೇಶವಮಾಮನಿಗೆ ಆರೋಗ್ಯ ತಪ್ಪಿದಾಗ ಅನಿವಾರ್ಯವಾಗಿ ಅವರಿಗೆ ಉಡುಪಿಯ ಮನೆಯನ್ನು ಬಿಟ್ಟು ಮಕ್ಕಳಿರುವ ಕಡೆ ಮುಂಬಯಿಗೆ ಹೋಗಲೇಬೇಕಾಯಿತು. ತಮ್ಮಉಡುಪಿಯ ಮನೆಯ ಅಕ್ಕಪಕ್ಕದಲ್ಲಿರುವ ಮನೆಯವರನ್ನು ಪ್ರೀತಿಸುತ್ತಾ.. ಅವರ ಪ್ರೀತಿಯನ್ನು ಪಡೆಯುತ್ತಾ .. ತನ್ನಿಚ್ಛೆಯಂತೆ ಬದುಕುತ್ತಾ ಒಂದೇ ಜಾಗದಲ್ಲಿ ಬಹಳ ವರ್ಷದಿಂದ ಇದ್ದು ಅಭ್ಯಾಸವಿದ್ದವರು.. ಬೊಂಬಾಯಿ ಜೀವನಕೆ ಅಷ್ಟೇನೂ ಖುಷಿಯಿಂದ ಹೋದದ್ದಲ್ಲ .. ಆದರೂ ಮನೋಹರ ಅವರಿಗಾಗಿಯೇ ಒಂದು ಸಣ್ಣ ಮನೆಯನ್ನು ಅಂಬಾಡಿ ರೋಡಿನಲ್ಲಿ ಮಾಡಿದ್ದರಿಂದ ಅಲ್ಲಿ ಒಂದು ರೀತಿಯ ಸಂತೋಷದಲ್ಲೇ ಇದ್ದರು .ಆದರೂ ಇಷ್ಟು ವರ್ಷಗಳಿಂದ ಇದ್ದ ಒಂದು ಜಾಗವನ್ನು ಬಿಟ್ಟು ಇನ್ನೊಂದು ಜಾಗಕ್ಕೆ ಹೋಗಿ ಹೊಸತಾಗಿ ಜೀವನ ಮಾಡುವುದು ಅಷ್ಟೊಂದು ಸುಲಭದ ವಿಚಾರವೇನೂ ಅಲ್ಲವಲ್ಲ. ನಾನ೦ತೂ ಮುಂಬಯಿಗೆ ಹೋದಾಗ ಅವರ ಮನೆಗೂ ಒಂದು ಭೇಟಿ ಇದ್ದೇ ಇತ್ತು. ಅದಾಗಿ ಸ್ವಲ್ಪ ಸಮಯದ ನಂತರ ಮನೋಹರ ಅವನ ಮದುವೆಯಾಗುವ ಸಮಯದಲ್ಲಿ ಅವರ ಹಿರಿಮಗ ಅಂದರೆ ನನ್ನ ದೊಡ್ಡ ಭಾವನ ಮನೆಯ ಹತ್ತಿರದಲ್ಲೇ ಒಂದು ಸ್ವಲ್ಪ ದೊಡ್ಡ ಮನೆಯನ್ನೇ ಖರೀದಿಸಿದ್ದ.

ಲಹರಿ Read Post »

You cannot copy content of this page