Category: ಇತರೆ

ಇತರೆ

ನಿತ್ಯೋತ್ಸವದ ಕವಿಗೆ ನಮನ

ನಿತ್ಯೋತ್ಸವದ ಕವಿಗೆ ನಮನ ಜೋಗದ ಸಿರಿ ಬೆಳಕಿನಲ್ಲಿ, ತುಂಗೆಯ ತೆನೆ ಬಳುಕಿನಲ್ಲಿ ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ ನಿತ್ಯಹರಿದ್ವರ್ಣವನದ ತೇಗ ಗಂಧ ತರುಗಳಲ್ಲಿ ನಿತ್ಯೋತ್ಸವ ತಾಯಿ ನಿತ್ಯೋತ್ಸವ ನಿನಗೆ ನಿತ್ಯೋತ್ಸವ ತಾಯಿ ನಿತ್ಯೋತ್ಸವ…. ಈ ಹಾಡು ಕೇಳದವರಾರು, ಈ ಹಾಡು ಹಾಡದವರಾರು.ಕನ್ನಡಮ್ಮನಿಗೆ ನಿತ್ಯೋತ್ಸವದ ಹಾಡು ಬರೆದು ಕನ್ನಡದ ಹಿರಿಮೆ ಹೆಚ್ಚಿಸಿದ ಕವಿ ನಿಸಾರ್ ಅಹಮದ್ ಅವರು ನಮ್ಮನ್ನು ಅಗಲಿದ್ದು ಸಾರಸ್ವತ ಲೋಕಕ್ಕೆ ಅಪಾರ ನಷ್ಟವಾಗಿದೆ. ಪ್ರೊ. ನಿಸಾರ್ ಅಹಮದ್ ಎಂದೇ ಖ್ಯಾತರಾದ ಕೊಕ್ಕೆರೆ ಹೊಸಳ್ಳಿ ಹೈದರ ನಿಸಾರ್ […]

ಹೆಣ್ಣು ಬದುಕಿನ ಘನತೆ

  ಹೆಣ್ಣು ಬದುಕಿನ ಘನತೆ ವಸುಂಧರಾ ಕದಲೂರು. ವಸುಂಧರಾ ಕದಲೂರು. ಒಪ್ಪಿಗೆ ಇಲ್ಲದೇ ಮಹಿಳೆ ಮೈ ಮುಟ್ಟುವಂತಿಲ್ಲ ( ದೆಹಲಿ ನ್ಯಾಯಾಲಯ ತೀರ್ಪು 22-1-2018) ‘ಅರೆ.., ಹೆಣ್ಣಿನ ಮೈ ಮುಟ್ಟಲು, ಆಕೆಯ ಒಪ್ಪಿಗೆಯ ಅಗತ್ಯವಿದೆಯಾ’ ಎಂದು ಕುಹಕವಾಡುವ ಮಂದಿಯ ನಡುವಲ್ಲೇ ‘ಇದನ್ನೂ ಸಹ ನ್ಯಾಯಾಲಯವೇ ಹೇಳಿಕೊಡಬೇಕೆ ಅಷ್ಟೂ ಸೂಕ್ಷ್ಮ ಅರ್ಥವಾಗದೇ’ ಎಂದು ನೊಂದುಕೊಳ್ಳುವ ಮನಸ್ಸುಗಳು ಎಷ್ಟಿವೆಯೋ..      ಏನೆಲ್ಲಾ ಸಾಧಸಿ ಸೈ ಎನಿಸಿಕೊಂಡರೂ ಈ ಕ್ಷಣಕ್ಕೂ  ಹೆಣ್ಣುಮಗುವಾಗಿ  ಹುಟ್ಟುವ ಹಕ್ಕಿನಿಂದ ವಂಚಿತವಾಗಿ ಗರ್ಭ ಸೀಳಿಸಿಕೊಂಡು ಹೊರಬಂದು […]

ಕಾರ್ಮಿಕ ದಿನದ ವಿಶೇಷ-ಬರಹ

ಮೇ 1 ಚಿಂತನೆ- ಚಿಂತೆಗಳು ಪೂರ್ಣಿಮಾ ಸುರೇಶ್ ಮೇ 1 ಚಿಂತನೆ- ಚಿಂತೆಗಳು ಮೇ ದಿನ ಅಂದರೆ ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ, (ಅಂತರರಾಷ್ಟ್ರೀಯ ಶೃಮಿಕ ದಿನಾಚರಣೆಯೂ ಹೌದು )ವರ್ಗ ಹೋರಾಟಗಳ ವಾರ್ಷಿಕ ದಿನಾಚರಣೆಯಾಗಿ ಕಾರ್ಮಿಕ ವರ್ಗ ಆಚರಿಸುತ್ತಿದ್ದಾರೆ. ಕಾರ್ಮಿಕರ ಸಭೆ, ವಿಚಾರಗೋಷ್ಠಿ,ಪ್ರದರ್ಶನ, ಹಕ್ಕುಗಳನ್ನು ಸಾಧಿಸಲು ಮೆರವಣಿಗೆ ಮುಂತಾದವುಗಳನ್ನು ಹಮ್ಮಿಕೊಳ್ಳುವ ಕಾರ್ಮಿಕರ ಉತ್ಸವದ ದಿನ . ಸಾರ್ವಜನಿಕ ರಜಾ ದಿನವಾಗಿಯೂ ಘೋಷಿತವಾಗಿದೆ .ದೇಶವೊಂದರ ಜೀವನಾಡಿಯಂತಿರುವ ಕಾರ್ಮಿಕರ ಬದುಕಿನ ಸಮಾನತೆಗಾಗಿ ಅವರ ಹೋರಾಟದ ಬದುಕನ್ನು ನೆನಪಿಸುವ ದಿನದ ಆಚರಣೆಯ ಹಿಂದೆ […]

ಕಾರ್ಮಿಕ ದಿನದ ವಿಶೇಷ-ಬರಹ

ಕಾರ್ಮಿಕ ದಿನಾಚರಣೆಯೂ ವರ್ತಮಾನದ ಆತಂಕವೂ ರಾಮಸ್ವಾಮಿ ಡಿ.ಎಸ್. ಕಾರ್ಮಿಕ ದಿನಾಚರಣೆಯೂ ವರ್ತಮಾನದ ಆತಂಕವೂ ಮೇ ಒಂದನೇ ತಾರೀಖು ಬರುವ ವಾರ ಮೊದಲೇ ಬಂಟಿಂಗ್ಸ್, ಬ್ಯಾನರ್, ಪ್ಲಕಾರ್ಡುಗಳನ್ನು ಸಿದ್ಧಪಡಿಸಿ ಎಲ್ಲ ಕಛೇರಿಗಳ ಕಾರ್ಮಿಕ ಸಂಘಟನೆಗಳಿಗೆ ಮನವಿ ಪತ್ರ ಕಳಿಸಿ ಒಂದನೇ ತಾರೀಖಿನ ಬಹಿರಂಗ ಸಭೆ ಮತ್ತು ಮತಪ್ರದರ್ಶನಕ್ಕೆ ಬರಲು ಒತ್ತಾಯಿಸುತ್ತಿದ್ದ ದಿನಗಳು ನೆನಪಿಗೆ ಬಂದವು. ನಾನಿರುವ ಊರಿನಲ್ಲಿ ದೊಡ್ಡ ಕಾರ್ಖಾನೆಗಳೇನೂ ಇಲ್ಲ. ಹಾಗಾಗಿ ನಮ್ಮ ಮೇ ದಿನದ ಸಭೆಗೆ ಬ್ಯಾಂಕ್, ಎಲ್ಲೈಸಿ, ಟೆಲಿಫೋನ್, ಅಂಚೆ ಕಛೇರಿಗಳ ನೌಕರರನ್ನು ಸೇರಿಸುತ್ತಿದ್ದೆವಾದರೂ […]

ಕಾವ್ಯಯಾನ

ಮೇ – ಒಂದು ಕಪ್ಪು ಹಾಡು ನೂರುಲ್ಲಾ ತ್ಯಾಮಗೊಂಡ್ಲು ಮೇ – ಒಂದು ಕಪ್ಪು ಹಾಡು ಕಾರ್ಲ್ ಮಾರ್ಕ್ಸ್ ನ ಹೆಣ ಹೊತ್ತ ಕೈಗಳಿನ್ನು  ಬೀದಿ ಬೀದಿ ತರಗೆಲೆಯಂತೆ ತೆವಳುತ್ತಲೇ ಇವೆ  ಸಂಜೆಯ ಸೂರ್ಯ ಸದ್ದಿಲ್ಲದೆ ನೋಡುತ್ತಾನೆ  ಕೈಗಳಿಗಂಟಿದ ಕತ್ತಲನ್ನು  ಶತಮಾನಗಳಿಂದಲೂ ಹೀಗೆ ಬದುಕು  ಸಂಕೇತಗಳಲ್ಲಿ ಹರಿದು ಹೋಗಿದೆ   ಸಂಜೆ ಮಲ್ಲಿಗೆಯ ಕನಸಿನಲ್ಲಿ  ಕಂಪಿನ ಹಿತವಿಲ್ಲ  ಖಾಲಿ ಜೋಬುಗಳ ತುಂಬ  ಸ್ವೇದದ ಕಮಟು   ಹೆಂಡತಿ ಮಕ್ಕಳು ಕೈ ನೀಡಿದಾಗ  ತಬ್ಬಿಕೊಳ್ಳುವ ಕೈಗಳಲ್ಲಿ ನಿತ್ರಾಣವಿಲ್ಲ  ಒಂದು ಹಗಲು ಅಥವಾ  […]

ಕಾರ್ಮಿಕ ದಿನದ ವಿಶೇಷ-ಬರಹ

ಮನೆಯ ಕಾರ್ಮಿಕರು ವಸುಂಧರಾ ಕದಲೂರು.     ‘ಮನೆಯ ಕಾರ್ಮಿಕರು’      ‘ಮನೆಯ ಗಂಡನ ಮನೆವಾರ್ತೆಯನೇನ ಹೇಳುವೆನವ್ವ ‘ ಎಂದು ಪ್ರಾರಂಭವಾಗುವ ಬಸವಣ್ಣನವರ ಒಂದು ವಚನವಿದೆ.  ‘ಕಾಯಕವೇ ಕೈಲಾಸ’ ವೆಂದು ಜೀವನದ ನಿಜತತ್ವ ಸಾರಿದ ಬಸವಣ್ಣನವರದು ಶರಣ ಸತಿ ಲಿಂಗ ಪತಿಯ ಭಾವ.      ಲಾಕ್ ಡೌನ್ ಸಮಯದಲ್ಲಿ ಮನೆವಾರ್ತೆಗೆ ಎಳಸುತ್ತಿರುವ ಗಂಡಂದಿರು ಅದೆಷ್ಟು ಜನವೋ.. ಬಹುಶಃ ಕೆಲವರಿಗಾದರೂ ಈಗ ಮನೆಕೆಲಸದ ಮಹತ್ವ ಅರಿವಾಗಿರಬಹುದು. ಇಲ್ಲವಾದರೆ, “ನನ್ನ ಹೆಂಡತಿಯೇ..? ಎಲ್ಲೂ ಕೆಲಸಕ್ಕೋಗಲ್ಲ, ಮನೇಲಿರ್ತಾಳೆ” ಎಂದು ಮೂಗು […]

ಕಾರ್ಮಿಕ ದಿನದ ವಿಶೇಷ -ಲೇಖನ

ಕಾರ್ಮಿಕರ ದಿನಕ್ಕೊಂದು ಬೆಲೆ ಬರಬೇಕಿದೆ ಶಿವಲೀಲಾ ಹುಣಸಗಿ ಕಾರ್ಮಿಕರ ದಿನಕ್ಕೊಂದು ಬೆಲೆ ಬರಬೇಕಿದೆ ಇಂದು ಸಮಾನತೆ,ಅಸಮಾನತೆಗಳ ನಡುವೆ ತುಟಿಕಚ್ಚಿ ಹಿಡಿದು ಮೌನದೊಳಗೆ ತನ್ನಾತ್ಮವನ್ನು ಬಿಗಿದು ಒಡಲೊಳಗೆ ಅಗ್ನಿಯನ್ನು ಬಚ್ಚಿಟ್ಟು ನಡೆಯುವ ಸಂಸಾರದ ನೋಗವನ್ನು ಎಳೆಯುವ ಜೀವವೆಂದರೆ ಅದು ಹೆಣ್ಣು… ಸಾಧನೆಯ ಮೆಟ್ಟಿಲೇರಿದ ಮಹಿಳೆಯರ ಸಾಲು ಬೆರಳೆನಿಕೆಯಷ್ಟಿದ್ದರೂ,ಅದೇ ಮಹತ್ತರ ಶಿಖರವೆಂಬಂತೆ ಬಿಂಬಿಸಿ, ಮಹಿಳಾ ಸಬಲೀಕರಣವಾಗಿದೆಯೆಂದು ಕಾಣುವ ಪರಂಪರೆ ಭಾರತದ ನಾಗರಿಕ ಸಮಾಜದಲ್ಲಿ ಬೇರೂರಿದೆ..ನಮ್ಮ ದೇಶ ಪುರುಷ ಪ್ರಧಾನ ಸಮಾಜದ ಅಡಿಯಲ್ಲಿ ಮುಂದುವರೆದಿದ್ದಕ್ಕೆ ಇತಿಹಾಸ ಸಾಕ್ಷಿ….ಆದರೆ  ಸಾಧಕರೂ ಇನ್ನೂ ಎಲೆಮರೆಯಕಾಯಿಯಂತೆ […]

ಕಾರ್ಮಿಕದಿನದ ವಿಶೇಷ-ಲೇಖನ

ಅರ್ಥ ಕಳೆದುಕೊಳ್ಳುವ ಸಮಯ ಪ್ರಮೀಳಾ .ಎಸ್.ಪಿ.ಜಯಾನಂದ್. ಅರ್ಥ ಕಳೆದುಕೊಳ್ಳುವ ಸಮಯ. “ರೈತ ದೇಶದ ಬೆನ್ನೆಲುಬು” ಎನ್ನುವರು.ಹಸಿವು ಇಂಗಿಸುವ ಕಾಯಕ ಮಾಡುವ ರೈತ ದೇಹದ ಮತ್ತು ದೇಶದ ಆಧಾರ  ವಾಗಿರುವುದು ಸತ್ಯ. ಹಾಗಾಗಿಯೇ ದೇಶದ ಹಲವಾರು ಯೋಜನೆಗಳು ರೈತರ ಪರವಾಗಿ ಬಂದು ನಿಲ್ಲುತ್ತವೆ.ಆದರೆ ಕೃಷಿಭೂಮಿ ಇಲ್ಲದವರು,ಕಾರ್ಖಾನೆ ಗಳಲ್ಲಿ ದುಡಿಯುವ ಮಂದಿ,ಕೂಲಿ ಕಾರ್ಮಿಕರು, ಹಲವಾರು ಸ್ತರಗಳಲ್ಲಿ ದುಡಿದು ದೇಶದ ಅಭಿವೃದ್ಧಿಗೆ ಕರಣರಾಗುತ್ತಾರೆ.ಇವರುಗಳಲ್ಲಿ ಎರಡು ವಿಧ. 1-ಸಂಘಟಿತ ಕಾರ್ಮಿಕರು 2-ಅಸಂಘಟಿತ ಕಾರ್ಮಿಕರು. ಈ ದೇಶದ ಕಾರ್ಮಿಕ ಕಾಯ್ದೆಯು ಹಲವು ಸೌಲಭ್ಯಗಳು ಮತ್ತು […]

ಕಾರ್ಮಿಕ ದಿನದ ವಿಶೇಷ ಲೇಖನ

ಕಾರ್ಮಿಕರಿಲ್ಲದ  ಕಾರ್ಮಿಕ ದಿನಾಚರಣೆ ಗಣೇಶ್ ಭಟ್ ಶಿರಸಿ ಕಾರ್ಮಿಕರಿಲ್ಲದ  ಕಾರ್ಮಿಕ ದಿನಾಚರಣೆ              ಕೆಂಪು ಧ್ವಜಗಳ ಹಾರಾಟ,  ಜನರ ಮೆರವಣ ಗೆಗಳಿಲ್ಲದ  ಕಾರ್ಮಿಕ ದಿನಾಚರಣೆ  ನಡೆಯುತ್ತಿದೆ. ಎಂದಿನಂತೆ  ಸರ್ಕಾರ ರಜೆ   ಘೋಷಿಸಿದ್ದರೂ, ರಜೆಯನ್ನು  ಅನುಭವಿಸಲಾರದ ಸ್ಥಿತಿಗೆ ಜಗತ್ತಿನಾದ್ಯಂತ ಕಾರ್ಮಿಕರು ತಲ್ಪಿದ್ದಾರೆ.            ಮೇ 1 ನೇ ತಾರೀಕಿನಂದು ಕಾರ್ಮಿಕ ದಿನ ಆಚರಿಸಲು ಕಾರಣವಾದ  ಘಟನೆ ನಡೆದಿದ್ದು 1886 ರಲ್ಲಿ.  ಅಮೇರಿಕಾವು ಅದಾಗಲೇ ಆರ್ಥಿಕ ಹಿಂಜರಿತದಿಂದ ಜರ್ಝರಿತವಾಗಿತ್ತು. 1882 ರಿಂದಲೂ ಮಂದಗತಿಯಲ್ಲಿದ್ದ  ಆರ್ಥಿಕ ಸ್ಥಿತಿಯಿಂದಾಗಿ ಕಾರ್ಮಿಕರು ಕೆಲಸ ಕಳೆದುಕೊಳ್ಳುತ್ತಿದ್ದರು.  […]

Back To Top