Category: ಇತರೆ

ಇತರೆ

ಬನ್ನಿ ಮನೆಗೆ ಹೋಗೋಣ. . .

ವಿಶೇಷ ಲೇಖನ ಬನ್ನಿ ಮನೆಗೆ ಹೋಗೋಣ. . . ಅಂಜಲಿ ರಾಮಣ್ಣ ಬಡತನ ಮತ್ತು ಒಳ್ಳೆಯ ವಿದ್ಯಾಭ್ಯಾಸ ಸಿಗುತ್ತದೆ ಎನ್ನುವ ಕಾರಣಗಳನ್ನು ನೀಡಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ತಾಯ್ತಂದೆಯರು ತಮ್ಮ ಮಕ್ಕಳನ್ನು ಬೆಂಗಳೂರಿನ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ, NGOಗಳಲ್ಲಿ ದಾಖಲಿಸಿರುತ್ತಾರೆ. ಈ ಕಾರಣಗಳು ಒಂದು ಹಂತದವರೆಗೂ ನಿಜವೇ ಆದರೂ ಹೀಗೆ ಮಕ್ಕಳನ್ನು ದೂರ ಮಾಡಿರುವ ತಂದೆ ತಾಯಿಯರಲ್ಲಿ ತಮ್ಮ ಜವಾಬ್ದಾರಿಯನ್ನು ವರ್ಗಾವಣೆ ಮಾಡುವ ಮನೋಭಾವವೇ ಎದ್ದು ಕಾಣುತ್ತದೆ. ಅವರುಗಳ ಉಡಾಫೆತನವನ್ನು ವ್ಯಾಪಾರೀಕರಣಗೊಳಿಸಿ,  ಸಮಾಜ ಸೇವೆ ಎನ್ನುವ […]

ಧರೆ ಹತ್ತಿ ಉರಿದೊಡೆ

ಲೇಖನ ಧರೆ ಹತ್ತಿ ಉರಿದೊಡೆ ಜಯಶ್ರೀ.ಜೆ.ಅಬ್ಬಿಗೇರಿ ರಾತ್ರಿ ಹನ್ನೆರಡು ಹೊಡೆದರೂ ಹಾಡು ಹಗಲಿನಂತೆ ಕಿಕ್ಕಿರಿದು ಜನ ತುಂಬಿರುತ್ತಿದ್ದ ಬೀದಿಗಳೆಲ್ಲ ಬಿಕೋ ಎನ್ನುತ್ತಿವೆ. ಸಂಖ್ಯೆಗೆ ಸಿಗದಷ್ಟು ದೇಹಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಉರಿದು ಹೋಗುತ್ತಿವೆ.ಇದೊಂಥರ  ಮರದಲ್ಲಿನ ಹಣ್ಣು ಉದುರಿ ಬೀಳುವಂತೆ ಬೀಳುತ್ತಿವೆ. ಅಳಿದುಳಿದ ಕಾಯಿಗಳ ಹಣ್ಣುಗಳ ದುಃಖ ಅರಣ್ಯರೋಧನವಾಗಿದೆ. ಎಲ್ಲೆಲ್ಲೂ ಅಲ್ಲೋಲ ಕಲ್ಲೋಲ.ಇಂಥದ್ದೊಂದು ದಿನ ಬರುತ್ತದೆ ಅಂತ ಯಾರೂ ಊಹಿಸಿರಲಿಲ್ಲ. ಜೀವನ ಹಿಡಿತಕ್ಕೆ ಸಿಗದಂತಾಗಿದೆ. ಬಿರುಗಾಳಿಗೆ ಸಿಕ್ಕ ಹಡಗಿನಂತಾಗಿದೆ.ಬದುಕನ್ನು ಯಾವ ಕಡೆಯಿಂದ ನಿಯಂತ್ರಿಸಿದರೆ ಹಿಡಿತಕ್ಕೆ ಸಿಗಬಹುದು ಎಂಬುದು ಯಕ್ಷ […]

ದಾರಾವಾಹಿ ಅದ್ಯಾಯ-15 ಏಕನಾಥರ ಪತ್ನಿ ನೀಡಿದ ಬೆಲ್ಲದ ಕಾಫಿ ಕುಡಿದ ಶಂಕರನಿಗೆ ಕಥೆ ಹೇಳುವ ಹುಮ್ಮಸ್ಸು ಇನ್ನಷ್ಟು ಹೆಚ್ಚಿದ್ದರಿಂದ ಮತ್ತೇನೋ ನೆನಪಾಯಿತು. ‘ಅಂದಹಾಗೆ ಗುರೂಜೀ, ಪುರಂದರಣ್ಣನಿಗೆ ಆ ಕಾಡು ಜನರು ಎಲ್ಲಿ ಸಿಕ್ಕಿದರು ಅಂತ ಕೇಳಿದಿರಿಲ್ಲಾ, ಹೇಳುತ್ತೇನೆ ಕೇಳಿ. ಇಲ್ಲೆ ಸಮೀಪದ ನೆರ್ಗಿಹಿತ್ತಲು ಗ್ರಾಮದ ತಮ್ಮ ಮೂಲದ ಮನೆಯಲ್ಲಿ ಪುರಂದರಣ್ಣನಿಗೆ ಎಕರೆಗಟ್ಟಲೆ ಪಿತ್ರಾರ್ಜಿತ ಆಸ್ತಿ ಉಂಟಲ್ಲವಾ. ಆ ಹೊಲಗದ್ದೆಗಳಲ್ಲಿ ಅವರೇ ನಿಂತು ಬೇಸಾಯ ಮಾಡಿಸುತ್ತಾರೆ. ಆ ಭೂಮಿಯ ಸುತ್ತಮುತ್ತ ದಟ್ಟ ಹಾಡಿಗಳಿವೆ. ಅವುಗಳಲ್ಲಿರುವ ನೂರಾರು ಕಾಡುಹಂದಿಗಳು ಯಾವಾಗಲೂ […]

ಛೇ! ಏನಾಗುತ್ತಿದೆ…

ಅಗಲಿದ ಹಿರಿಯ ಗೆಳೆಯ ಜರಗನಹಳ್ಳಿ ಶಿವಶಂಕರ್ ಅವರಿಗೆ ಭಾವಪೂರ್ಣ ನಮನ.
ಆರ್ ಜಿ ಹಳ್ಳಿ ನಾಗರಾಜ

ನಿಮಗೆ ದಾನ ಮಾಡುವ ಮನಸ್ಸಿದ್ದರೆ ಹೀಗೆ ಮಾಡಿ …

ಅಂಜಲಿ ರಾಮಣ್ಣ ಬರೆಯುತ್ತಾರೆ

ನಿಮಗೆ ದಾನ ಮಾಡುವ ಮನಸ್ಸಿದ್ದರೆ ಹೀಗೆ ಮಾಡಿ …

ಹೋದಿರೆಲ್ಲಿ..?

ಮಕ್ಕಳ ಕವಿತೆ ಹೋದಿರೆಲ್ಲಿ..? ಮಲಿಕಜಾನ ಶೇಖ ಗುಬ್ಬಿ ಗುಬ್ಬಿ ಪುಟ್ಟನೆ ಗುಬ್ಬಿಚಿಂವ್ ಚಿಂವ್ ಹಾಡುತ್ತಾಮನೆಯಲಿ ಬಂದುಕನ್ನಡಿ ನೋಡುತಾಮುಖವನು ತೋರುತಾಆಡುತಾ ಹಾರುತಾಹೋಗುತಲಿದ್ದೆ ನೀ ಅಂದುಕಾಣುತ್ತಿಲ್ಲ ನೀನು,,ಹೋದೆ ಎಲ್ಲಿ ಇಂದು..? ಜಿಂಕೆ ಜಿಂಕೆ ಮುದ್ದಿನ ಜಿಂಕೆಜಿಗಿಯುತ ನಲಿಯುತತೋಟಕೆ ಬಂದುಚಿಗುರಿದ ಹುಲ್ಲುತಂಪನೆ ನೀರುಕುಡಿಯುತ ಆಡುತಾಓಡತಲಿದ್ದೆ ನೀ ಅಂದುಕಾಣುತ್ತಿಲ್ಲ ನೀನು,,ಹೋದೆ ಎಲ್ಲಿ ಇಂದು..? ಗಿಳಿಯೆ ಗಿಳಿಯೆ ಮುದ್ದಿನ ಗಿಳಿಯೆಮಿಟು ಮಿಟು ಗುನಗುತಾಹಿತ್ತಲ ಬಂದುಸವಿ ಸವಿ ಪೇರಲತರ ತರ ಕಾಯಿತಿನ್ನುತಾ ಕುಣಿಯುತಾಹಾರುತಲಿದ್ದೆ ನೀ ಅಂದುಕಾಣುತ್ತಿಲ್ಲ ನೀನು,,ಹೋದೆ ಎಲ್ಲಿ ಇಂದು..? ಗರುಡನೆ ಗರುಡನೆ ಶೌರ್ಯದ ಗರುಡನೆಭರ್ರನೆ […]

ದಾರಾವಾಹಿ ಅಧ್ಯಾಯ: 14 ಶಂಕರನ ರೋಚಕ ಪ್ರಹಸನವನ್ನು ಏಕನಾಥರು ತಮ್ಮ ಕಣ್ಣು ಕಿವಿಗಳೆರಡನ್ನೂ ಒಂದು ಮಾಡಿ ಅರೆಬಾಯಿ ಬಿಟ್ಟುಕೊಂಡು ಕೇಳುತ್ತಿದ್ದರೆ ಅತ್ತ ದೇವಕಿ ಒಳಕೋಣೆಯ ದಾರಂದಕ್ಕೊರಗಿ ಕುತೂಹಲದಿಂದ ಆಲಿಸುತ್ತಿದ್ದಳು. ಆದರೆ ಅವಳನ್ನು ಗಮನಿಸಿದ ಮೇಲೆಯೇ ಶಂಕರನ ಕಥೆಯಲ್ಲಿ ದುಪ್ಪಟ್ಟು ನವರಸಗಳು ತುಂಬಿ ತುಳುಕತೊಡಗಿದವು ಎಂಬುದು ಏಕನಾಥರಿಗೆ ತಿಳಿಯಲಿಲ್ಲ. ಆದ್ದರಿಂದ ಕಥೆ ಕೇಳುವ ಆತುರದಲ್ಲಿದ್ದ ಅವರು, ‘ಮತ್ತೇನಾಯಿತು ಮಾರಾಯಾ…? ಆ ಹಂದಿ ನಿನ್ನ ಪುರಂದರಣ್ಣನ ಕುಂಡೆಗೆ ತಿವಿದೇ ಬಿಟ್ಟಿತಾ ಹೇಗೇ…!’ ಎಂದು ಹಾಸ್ಯ ಮಾಡಿ ನಕ್ಕರು. ಆಗ ಶಂಕರ […]

2017 ರಲ್ಲಿ ಸೃಷ್ಟಿಯಾದ ಸಂಪತ್ತಿನ ಶೇ.73 ರಷ್ಟು ಪಾಲು ಶೇ.1 ರಷ್ಟು ಸಿರಿವಂತರು ಹಂಚಿಕೊಂಡಿದ್ದರೆ, ಭಾರತದ ಅತಿಬಡತನದಲ್ಲಿರುವ ಶೇ.50 ರಷ್ಟು ಜನಸಂಖ್ಯೆ (67 ಕೋಟಿ ಭಾರತೀಯರು) ಕೇವಲ ಶೇ.1ರಷ್ಟು ಸಂಪತ್ತು ಹೆಚ್ಚಳವನ್ನು ಕಂಡಿದ್ದಾರೆಂದು ವರದಿಯಾಗಿದೆ.

ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿ

ವಿಶೇಷ ಲೇಖನ ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿ ಆಶಾ ಸಿದ್ದಲಿಂಗಯ್ಯ ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರಿವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಗುರುತಿಸ ಬಹುದಾಗಿದೆ. ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಅಕ್ಕ, ಎದುರಿಸಿದ ಪರೀಕ್ಷೆಗಳು ಬಹಳಷ್ಟು.  ಸಾಕ್ಷಾತ್ ಶಿವ ( ಮಲ್ಲಿಕಾರ್ಜುನ)ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ನಡೆದ ಅಕ್ಕಮಹಾದೇವಿಯವರು ಜನಿಸಿದ್ದು ಶಿವಮೊಗ್ಗ ಜಿಲ್ಲೆ, ಶಿಕಾರಿಪುರ-ಶಿರಾಳ ಕೊಪ್ಪದ […]

ಮಕ್ಕಳ ಹಕ್ಕು,ಮೊದಲ ಹುಡುಗ

ಲೇಖನ ಮಕ್ಕಳ ಹಕ್ಕು,ಮೊದಲ ಹುಡುಗ ಅಂಜಲಿ ರಾಮಣ್ಣ ಈ ಸಂಪರ್ಕ ಸಂಖ್ಯೆಯೊಡನೆ ಮಾತು ನಿಂತು ಮೂರು ತಿಂಗಳಾಗಿತ್ತೇ?! ಗಮನಕ್ಕೇ ಬರಲಿಲ್ಲವಲ್ಲ. ಎಂದುಕೊಳ್ಳುತ್ತಲೇ ಬಂದಿದ್ದ ಆಡಿಯೋ ಸಂದೇಶವನ್ನು ತೆರೆದೆ “ ಲೇ ಲೇ ರಾಮಣ್ಣನ ಮಗಳೇ. . .” ಎಂದು ರಾಗವಾಗಿ ಹಾಡಿದ್ದ ಅವನು. ಆ ರಾಗಕ್ಕೆ ತಾಳವಾಗುವ ಮನಸ್ಸು ಇರಲಿಲ್ಲ. ಆದರೆ ಉತ್ತರಿಸುವುದು ಬೇಕಾಗಿತ್ತು. ಪ್ರಾಮಾಣಿಕವಾಗಿ ಹೇಳಿದೆ “ ಪಾಪ ಆ ಹುಡುಗಿ ಹತ್ತಿರ ಸೆಕ್ಶನ್ 94ರಲ್ಲಿ ಹೇಳಿರುವ ಯಾವ ದಾಖಲೆಯೂ ಇಲ್ಲ. ಏನು ಮಾಡೋದು ಅಂತ […]

Back To Top