Category: ಇತರೆ

ಇತರೆ

ವಿದಾಯ

ಚಂದ್ರಕಾಂತ ಕುಸನೂರು ಖ್ಯಾತ ಸಾಹಿತಿ, ಚಿತ್ರ ಕಲಾವಿದ ಮತ್ತು ಹೈಕು ಗಾರುಡಿಗ ಚಂದ್ರಕಾಂತ ಕುಸನೂರು..! ಖ್ಯಾತ ಕಾದಂಬರಿಕಾರ ಚಂದ್ರಕಾಂತ ಕುಸನೂರ ಇಂದು ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕನ್ನಡ ಸಾಹಿತ್ಯದಲ್ಲಿ ಅಸಂಗತ ನಾಟಕ ಮತ್ತು ಜಪಾನಿ ಮಾದರಿಯ ಹೈಕುಗಳನ್ನು ಪರಿಚಯಿಸಿದ್ದರು ಅವರು. ಹೈಕು ಮಾದರಿಯ ಕವಿತೆಗಳನ್ನು ಸಹ ಕನ್ನಡಕ್ಕೆ ಪರಿಚಯಿಸಿದ್ದರು… ಖ್ಯಾತ ಕಾದಂಬರಿಕಾರ ಚಂದ್ರಕಾಂತ ಕುಸನೂರ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ನಾಲ್ವರು ಗಂಡುಮಕ್ಕಳು ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ. ಕಲಬುರಗಿ […]

ಪ್ರಸ್ತುತ

ಕೋರೋನದ ತಲ್ಲಣಗಳು ಎನ್ . ಶೈಲಜಾ ಹಾಸನ,   ಕೋರೋನದ ತಲ್ಲಣಗಳು ಸರಾಗವಾಗಿ ಹರಿಯುತ್ತಿದ್ದ ಬದುಕಿನ ಬಂಡಿ ಕನಸಿನಲ್ಲಿಯೂ ನೆನೆಸದಂತೆ ನಿಂತು ಬಿಟ್ಟಿತು.ಅದೇನಾಗಿ ಹೋಯಿತೋ,ಕಂಡರಿಯದ ವೈರಾಣವೊಂದು ಇಡಿ ಪ್ರಪಂಚವನ್ನೆ ತಲ್ಲಣಗೊಳಿಸಿಬಿಟ್ಟಿದೆ. ದೂರದ ಅದ್ಯಾವುದೋ ದೇಶದಲ್ಲಿ ಅದೆಷ್ಟೋ ಪ್ರಾಣಗಳನ್ನು ತೆಗೆಯುತ್ತಿದೆ , ಅದೆಷ್ಟೋ ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ ಅಂತೆ ಅಂತ ದೃಶ್ಯ ಮಾಧ್ಯಮಗಳಲ್ಲಿ ನೋಡುತ್ತಾ ಅಯ್ಯೋ ಪಾಪ ಅಂತ ಕನಿಕರ ಪಡುತ್ತಿರುವಾಗಲೆ ದಿಢೀರನೆ ನಮ್ಮ ದೇಶಕ್ಕೂ ಆ ಕ್ಷುದ್ರ ವೈರಸ್ ಬಂದು ಅಪ್ಪಳಿಸಿದೆ ಅಂತ ಗೊತ್ತಾದಾಗ ದಿಗಿಲು […]

ನೆನಪು

ದಾವಣಗೆರೆಯ ಕಪ್ಪು ಗುಲಾಬಿ ಮಲ್ಲಿಕಾರ್ಜುನ ಕಡಕೋಳ ಕಣ್ಮರೆಯಾದ ದಾವಣಗೆರೆಯ ಕಪ್ಪು ಗುಲಾಬಿ ಆ ಪುಟ್ಟ ಕಂದನಿಗೆ ಎರಡು ವರ್ಷವೂ ತುಂಬಿರಲಿಲ್ಲ. ಮೊಲೆಹಾಲು ಕುಡಿಯುವ ಆ ಹಸುಳೆಯ ತಂದೆ ಜೈಲು ಸೇರಬೇಕಾದ ದುಃಸ್ಥಿತಿ. ಅವರೇನು ಕಳ್ತನ, ದರೋಡೆ ಮಾಡಿ ಜೈಲು ಸೇರಿದ್ದಲ್ಲ. ಮಿಲ್ಲುಗಳಲ್ಲಿ ದುಡಿಯುವ ಕೂಲಿ ಕಾರ್ಮಿಕರ ಪರವಾಗಿ ಹೋರಾಟ ಮಾಡಿ ಕಾರಾಗೃಹ ಸೇರಬೇಕಾಯ್ತು. ದಿಟ್ಟ ಹೋರಾಟಕ್ಕೆ ಸಿಕ್ಕ ಕೆಟ್ಟ ಪ್ರತಿಫಲ ಎಂಬಂತೆ ಒಂದಲ್ಲ ಎರಡು ಬಾರಿ, ಒಟ್ಟು ಹದಿನಾಲ್ಕು ವರುಷ ಈ ತಂದೆ ಜೈಲು ಪಾಲಾದರು. ತಂದೆಯ […]

ವಿಜ್ಞಾನ

ವಿಜ್ಞಾನದ ಕ್ಷಿತಿಜ, ಮನುಕುಲದ ಪ್ರಗತಿ ವಿಸ್ತರಿಸುವ ಮೈಕ್ರೊವೈಟಾ         ವಿಶೇಷವಾದ ಜ್ಞಾನವೇ ವಿಜ್ಞಾನ.  ಹೊಸ ಸಂಶೋಧನೆಗಳು, ಹೊಸ ಆವಿಷ್ಕಾರಗಳಿಗೆ  ಮೂಲ ಕಾರಣ, ಕನಸನ್ನು ಕಾಣುವ  ಮತ್ತು ಅದನ್ನು  ನನಸಾಗಿಸುವ  ತೀವ್ರ ತುಡಿತ ಜೊತೆಗೆ ನಿರಂತರ  ಪ್ರಯತ್ನ. ಹಕ್ಕಿಗಳಂತೆ ತಾನು ಆಕಾಶದಲ್ಲಿ  ವಿಹರಿಸಬೇಕೆಂಬ ಕನಸನ್ನು ಕಂಡು ನನಸಾಗಿಸಿದವರಿಂದಾಗಿ ಇಂದು ವಾಯುಯಾನ ಸಾಧ್ಯವಾಗಿದೆ. ಸ್ಥೂಲ  ಜಗತ್ತೇ ಸರ್ವಸ್ವ ಎಂದುಕೊಂಡಲ್ಲಿಂದ  ನ್ಯಾನೋ ತಂತ್ರಜ್ಞಾನದ ಬಳಕೆಯ  ದಿನಗಳು ಬಂದಿವೆ. ಇಡೀ ವಿಶ್ವವು  ತರಂಗರೂಪಿ ಅಸ್ತಿತ್ವವೆಂಬ ಅರಿವಿನಿಂದಾಗಿ, ವಿಜ್ಞಾನದ  ಮೂಲ ನಂಬಿಕೆಗಳೂ ಬದಲಾಗುತ್ತಿವೆ. ಪ್ರೋಟೋನ್, […]

ಜಾನಪದ

ಗರ್ದಿ ಗಮ್ಮತ್ತು ಅಳಿದು ಹೋದ ಜಾನಪದ ಕಲೆ ನಮ್ಮ ಎಳೆಯ ಕಾಲದ ‘ಗರ್ದಿ ಗಮ್ಮತ್ತು’..! ವಿಧಾನಸೌಧ ನೋಡ… ಹೇಮಾ ಮಾಲಿನಿ ನೋಡ… ದುರ್ಗಪ್ಪನ; ‘ಗರ್ದಿ ಗಮ್ಮತ್ತು’ ನೋಡ..!! 1970 ಮತ್ತು 1980ರ ಆಸುಪಾಸಿನಲ್ಲಿ ಮನರಂಜನೆ ಎಂಬುದೇ ವಿರಳವಾಗಿತ್ತು. ಆಗ ಸಿನೆಮಾಗಳು ಹಾಗೂ ವರ್ಷಕ್ಕೊಮ್ಮೆ ಜರುಗುವ ಜಾತ್ರೆ, ಹಬ್ಬಹರಿದಿನಗಳು ಇವುಗಳೇ ಮನರಂಜನೆಯಾಗಿದ್ದವು… ಆ ಸಮಯದಲ್ಲಿ ಪ್ರತಿ ಜಾತ್ರೆಯಲ್ಲಿ ತಪ್ಪದೇ ಕಾಣುತ್ತಿದ್ದ ಒಂದು ವಿಶೇಷ ಅಂದರೆ ‘ಗರ್ದಿ ಗಮ್ಮತ್ತು’. ಮೊಬೈಲ್, ವಾಟ್ಸ್ ಅಪ್‌ನಲ್ಲಿ ಕಳೆದುಹೋದ ಇಂದಿನ ಬಹುತೇಕ ಮಕ್ಕಳಿಗೆ ‘ಗರ್ದಿ […]

ಮಕ್ಕಳ ವಿಭಾಗ

ಗುಬ್ಬಚ್ಚಿ ಮಲಿಕಜಾನ್ ಶೇಖ್  ಒಂದು ಸುಂದರ ಕಾಡು. ಅಲ್ಲೊಂದು ಸಿಹಿ ನೀರಿನ ಹೊಂಡ. ಅದರ ದಂಡೆಗೆ ಆಲದ ಮರ, ಅದರ ಕೆಳಗಿದ್ದ ಜಾಲಿ ಮರವು ನೀರಿನತ್ತ ಬಾಗಿತ್ತು. ಅದರ ಟೊಂಗೆಗೆ ಒಂದು ಗುಬ್ಬಚ್ಚಿ ಗೂಡು ಕಟ್ಟಿಕೊಂಡು ಮಕ್ಕಳ ಜೊತೆ ವಾಸವಿತ್ತು. ಆ ಆಲದ ಮರದ ಮೇಲೆ ಕಾಗೆಗಳ ಗ್ಯಾಂಗು. ಅವರಲ್ಲಿ ಸಭ್ಯ ಕೋಗಿಲೊಂದು ವಾಸವಿತ್ತು.            ಗುಬ್ಬಚ್ಚಿಗೆ ಶಿಸ್ತು ಮತ್ತು ಸ್ವಚ್ಛತೆ ಬಹಳ ಇಷ್ಟ. ಅರುಣೋದಯದ ಮುಂಚೆ ಗೂಡಿನ ಹೊರ ಬಂದು ದೂರ ಹೋಗಿ ಶೌಚ ಮಾಡಿ, […]

ಪ್ರಸ್ತುತ

ನಿಜವಾದ ವಿಮೋಚಕ ಸುರೇಶ ಎನ್ ಶಿಕಾರಿಪುರ ಹಿಂದೂ ಧರ್ಮದ ಪ್ರಕಾರ ಹೆಣ್ಣುಮಕ್ಕಳಿಗೆ ಆಸ್ತಿಯ ಹಕ್ಕಿರಲಿಲ್ಲ. ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆ ಎಂಬ ಮಾತಿನ ಮೂಲಕ ತವರಿನ ಯಾವುದೇ ಆಸ್ತಿಗೆ ಆಕೆ ಹಕ್ಕುದಾರಳಲ್ಲ ಸಂಬಂಧದವಳಲ್ಲ ಎಂಬುದನ್ನು ನೆಲೆಗೊಳಿಸಲಾಗಿತ್ತು. ಅವಳಿಗೆ ತವರಿನ ಆಸ್ತಿಯೇನಾದರೂ ಇದ್ದರೆ ಅದು ಆಕೆಯ ತಾಯಿ ಮಾತ್ರವೇ ಆಗಿರುತ್ತಿದ್ದಳು. ಅದೂ ಬದುಕಿದ್ದರೆ ಇಲ್ಲದಿದ್ದರೆ ಅದೂ ಇಲ್ಲ. ಹಿಂದೆಲ್ಲಾ ಬಾಲ್ಯ ವಿವಾಹವಾಗಿ ಚಿಕ್ಕ ವಯಸ್ಸಿನಲ್ಲೇ ಗಂಡ ತೀರಿ ಹೋದರಂತೂ ಮುಗಿಯಿತು. ಇಟ್ಟುಕೊಂಡರೆ ಗಂಡನ ಮನೆ ಇಲ್ಲದಿದ್ದರೆ ತವರು ಮನೆ. […]

ಪ್ರಸ್ತುತ

ಮಹಾನ್ ಮಾನವತಾವಾದಿ ಅಂಬೇಡ್ಕರ ರೇಷ್ಮಾ ಕಂದಕೂರ ನಮ್ಮ ದೇಶದ ಕಾನೂನು ವ್ಯವಸ್ಥೆಗೆ ಪ್ರತೀಕವಾಗಾರುವ ಲಿಖಿತ ದಾಖಲೆಯ ಹೊತ್ತಿಗೆ ಸಂವಿಧಾನ ಇದರ ರಚನೆಗೆ ಮಹತ್ವದ ಕೊಡುಗೆ ನೀಡಿದ ಮಹನೀಯ ಅಂಬೇಡ್ಕರ.ಸ್ವಾತಂತ್ರ್ಯ,ಸಮಾನತೆ,ಬಂಧುತ್ವದ ಆಧಾರವನ್ನು ಅಳವಡಿಸಿಕೊಂಡು ನಮ್ಮ ಸಂವಿಧಾನ ರಚಿತವಾಗಿದೆ. ನಮ್ಮ ಹಕ್ಕು,ಕರ್ತವ್ಯಗಳನ್ನು ತಿಳಿಸಿ ಶಾಸಕಾಂಗ,ಕಾರ್ಯಾಂಗ,ನ್ಯಾಯಾಂಗ ವ್ಯವಸ್ಥೆಗಳ ಅರಿವು ನೀಡುವ ವಿಶ್ವದಲ್ಲಿಯೇ ಬ್ರಹತ್ ಸಂವಿಧಾನ ಇಂಗ್ಲೆಂಡನ ಸಂವಿಧಾನ ಮಾದರಿಯನ್ನು ಅಳವಡಿಸಿ ಕೊಳ್ಳಲಾಯಿತು. ಅಂಬೇಡ್ಕರ ಬಾಲಕನಿದ್ದಾಗಲೇ ಪ್ರತಿಭಾವಂತ, ಕಲಿಯುವ ಹಂಬಲ,ಸೂಕ್ಷ್ಮತೆಯನ್ನು ಗುರುತಿಸಿ ಶಿಕ್ಷಕರ ಪ್ರೀತಿಗೆ ಪಾತ್ರರಾದರು.ಅಮೇರಿಕಾ,ಇಂಗ್ಲೆಂಡಿನಲ್ಲಿ ಉನ್ನತ ವ್ಯಾಸಂಗ ಮಾಡಿದರು.ಸಾಹು ಮಹಾರಾಜರಿಂದ ಶಿಷ್ಯವೇತನ […]

ಪ್ರಸ್ತುತ

ದಲಿತ ಸೂರ್ಯ ದಲಿತ ಸೂರ್ಯ..ವಿಶ್ವಮಾನವ… ಜೈಭೀಮ….!              ಒಂದು ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ ಒಂದು ಗ್ರಂಥಾಲಯ ಕಟ್ಟಿಸಿದರೆ ಲಕ್ಷಾಂತರ ವಿದ್ವಾಂಸರು ಹುಟ್ಟಿಕೊಳ್ಳುತ್ತಾರೆ.” …………….ಡಾ!!ಬಿ.ಆರ್ ಅಂಬೇಡ್ಕರ್ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ವ್ಯಕ್ತಿತ್ವವಾಗಿ ಪರಿವರ್ತನೆಗೊಳ್ಳುವ ಸಮಯ ಬಹು ಕಷ್ಟದ್ದು.ಜೀವನದ ಪ್ರತಿಕ್ಷಣದಲ್ಲೂ ಏಳುಬೀಳುಗಳನ್ನು ಕಂಡು,ನೋವಿನ ಅಗ್ನಿ ಕುಂಡದಲ್ಲಿ ಬೆಂದರೂ,ಪುಟಕ್ಕಿಟ್ಟ ಚಿನ್ನದಂತೆ ಪ್ರಖರವಾದ ಪ್ರಕಾಶ ಹೊರಹೊಮ್ಮಿಸುತ್ತಿರುವುದು ಪ್ರತಿಭೆಯ ಆಗರದ ಪ್ರತಿಮೆಯೆಂದರೆ ತಪ್ಪಾಗದು.ಇಂದು ನಾವೆಲ್ಲ ಭವ್ಯ ಭಾರತದ ಶ್ರೇಷ್ಠ ನಾಯಕರಲ್ಲಿ ಅಗ್ರಸ್ಥಾನದಲ್ಲಿ  ಶ್ರೀ ಜಗಜ್ಯೋತಿ ಬಸವಣ್ಣನವರು  ಶ್ರೀ ಮಹಾತ್ಮಗಾಂಧೀಜಿ, ಡಾ!!ಬಿ.ಆರ್.ಅಂಬೇಡ್ಕರ್….ತ್ರಿಮೂರ್ತಿಗಳು ….ದೇಶ ವಿದೇಶಗಳಲ್ಲಿ […]

ಪ್ರಸ್ತುತ

ಡಾ.ಬಿ.ಆರ್.ಅಂಬೇಡ್ಕರ್..! ಎಲ್ಲಾ ಜನಾಂಗೀಯ ನಾಯಕ ಮತ್ತು ಸರ್ವರ ಅದರಲ್ಲೂ ದಲಿತರ ಏಳಿಗೆಗಾಗಿ ದುಡಿದ ಡಾ.ಬಿ.ಆರ್.ಅಂಬೇಡ್ಕರ್..! ಏಪ್ರಿಲ್ 14 ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ. ಆ ನಿಮಿತ್ತವಾಗಿ ಈ ಪುಟ್ಟ ಲೇಖನ… ಅಂದು ಆ ಬಾಲಕ ಅಸ್ಪೃಶ್ಯತೆ, ಬಡತನವನ್ನು ಮೆಟ್ಟಿ ನಿಂತು ವಿದ್ಯಾಭ್ಯಾಸ ಮಾಡದೆ ಹೋಗಿದ್ದರೆ ಇವತ್ತು ಈ ಅಖಂಡ ಭಾರತದಲ್ಲಿ ಮರೆಯಲಾರದ ಚೇತನವೊಂದು ಸೃಷ್ಟಿಯಾಗುತ್ತಿರಲಿಲ್ಲವೇನೋ? ಆ ಬಾಲಕ ಯಾರೆಂದು ಕ್ಷಣಮಾತ್ರದಲ್ಲಿ ಊಹಿಸಬಹುದು. ಅದೇ ಡಾ. ಬಿ.ಆರ್. ಅಂಬೇಡ್ಕರ್. ಈ ಹೆಸರು ಹೇಳುತ್ತಿದ್ದಂತೆಯೇ ಮೈ ರೋಮಾಂಚನಗೊಳ್ಳುತ್ತದೆ… ಭೀಮರಾವ್ ರಾಮ್‍ಜಿ ಅಂಬೇಡ್ಕರ್ […]

Back To Top