Category: ಇತರೆ

ಇತರೆ

ಲಹರಿ

ಪ್ರೀತಿಯ ಆಸುಪಾಸು… ಚಂದ್ರಪ್ರಭ ಪ್ರೀತಿಯ ಆಸುಪಾಸು… ಒಮ್ಮೊಮ್ಮೆ ಹೇಳುತ್ತೇವೆ, ” ನಿನ್ನ ನಾ ಪ್ರೀತಿಸುತ್ತೇನೆ, ಆದರೆ..” ಈ ‘ಆದರೆ’ ಪ್ರೀತಿಸುತ್ತೇನೆ ಎನ್ನುವ ಸತ್ಯವನ್ನೇ ಹೊಡೆದುರುಳಿಸುತ್ತದೆ. ಪ್ರೀತಿಯಲ್ಲಿ ಹಾಗಿದ್ದಲ್ಲಿ, ಹೀಗಿದ್ದಲ್ಲಿ,ಆದರೆ ಗಳಿಗೆ ಜಾಗವಿಲ್ಲ. ಅಲ್ಲಿ ಆರಂಭ ಅಂತ್ಯವೂ ಇಲ್ಲ. ಅಲ್ಲಿ ಪ್ರೀತಿ ಇದೆ ಅಷ್ಟೇ.. ಎಂದೆಂದಿಗೂ. ಭಾವನೆಗಳ ಕಲಸುಮೇಲೋಗರದಲ್ಲಿ ಹೀಗೆ ಬಂದು ಹಾಗೆ ಹೋಗುವ ಕ್ಷಣದ ಚಂಚಲತೆ, ಉತ್ಕಟತೆ ಅದಲ್ಲ. ಆರಂಭ ಅಂತ್ಯಗಳಿಲ್ಲದ ಷರತ್ತುಗಳಿಲ್ಲದ ಎದೆಯ ತುಡಿತ ಪ್ರೀತಿ. ಎದೆಯೆ ಅದರ ಮನೆ.. ದೇವರ ಗುಡಿ ಅದಕ್ಕೆ. ಎದೆಯ […]

ಪ್ರಸ್ತುತ

ಕೇಂದ್ರದ ಬಜೆಟ್ ಗಣೇಶ್ ಭಟ್ ಶಿರಸಿ ಕೇಂದ್ರ ಬಜೆಟ್ 2020 ಬಜೆಟ್ ಒಂದರಿಂದಲೇ ಇಡೀ ಅರ್ಥವ್ಯವಸ್ಥೆ ಬದಲಾಗಿ ಬಿಡುತ್ತದೆ ಎಂದು ಭಾವಿಸುವದು ಮೂರ್ಖತನ. ಆದರೆ, ಬಜೆಟ್‍ನಲ್ಲಿ ಮಂಡಿಸುವ ವಿಚಾರಗಳು, ಆದಾಯದ ಮೂಲಗಳು ಮತ್ತು ಖರ್ಚುವೆಚ್ಚಗಳನ್ನು ನಿಭಾಯಿಸುವ ವಿವರಗಳಿಂದ ಅರ್ಥವ್ಯವಸ್ಥೆ ಸಾಗುತ್ತಿರುವ ದಿಸೆಯನ್ನು ಸುಲಭದಲ್ಲಿ ಗುರ್ತಿಸಲು ಸಾಧ್ಯ. ಹಲವು ಕ್ಷೇತ್ರಗಳಿಗೆ ಬಜೆಟ್‍ನಲ್ಲಿ ಮೀಸಲಾಗಿಟ್ಟಿರುವ ಮೊತ್ತವನ್ನು ಗಮನಿಸಿದಾಗ ಸರ್ಕಾರದ ನಿಲುವುಗಳನ್ನು ಗ್ರಹಿಸುವುದು ಸುಲಭ ಸಾಧ್ಯ. ವರ್ಷ ವರ್ಷವೂ ಹಿಗ್ಗುತ್ತಿರುವ ಬಜೆಟ್ ಗಾತ್ರದ ಜೊತೆಗೆ ಏರುತ್ತಿರುವ ಬೆಲೆಗಳು, ಹೆಚ್ಚುತ್ತಿರುವ ಖರ್ಚುಗಳ ಹಿನ್ನೆಲೆಯಲ್ಲಿ […]

ಲಹರಿ

ಗುಬ್ಬಿಯ ಅಳಲು ತಾರಾ ಸತ್ಯನಾರಾಯಣ “ಗುಬ್ಬಿಯ ಅಳಲು”                ನನ್ನ ಸಂಸಾರದ ಹೊಟ್ಟೆ ತುಂಬಿಸಲು ನಾನು ದೂರ ಬಹುದೂರ ಬಂದರೂ ……ಎಲ್ಲಿಯೂ ನನಗೆ ಹಣ್ಣುಗಳಿರುವ ಮರಗಳೇ ಕಾಣುತ್ತಿಲ್ಲ.ಎಲ್ಲಿ ನೋಡಿದರೂ ಬರೀ ಕಟ್ಟಡ ಕೆಲವಂತೂ ಗಗನಚುಂಬಿ ಕಟ್ಟಡಗಳು ಕೆಳಗಡೆ ನೋಡಿದರೆ ಟಾರಿನ ರಸ್ತೆಗಳು ಹೋಗಲಿ ಮನೆಗಳಿರುವ ಕಡೆಯೇ ಹೋಗೋಣವೆಂದರೆ ಅಲ್ಲೂ ಕೂಡ ಮನೆಯ ಸುತ್ತ ಮುತ್ತ ಸಿಮೆಂಟಿನಿಂದ ಕೂಡಿದ ನೆಲ. ಮನೆಯ ಮುಂಭಾಗದಲ್ಲಿ ಮನೆಯ ಹಿಂಭಾಗದಲ್ಲಿ ಗಿಡಮರಗಳಿಲ್ಲ. ಎರಡು  ಮೂರು […]

ಹಾಸ್ಯಲೋಕ

ನಾಯಿ ಬೇಕಾ ನಾಯಿ! ತಾರಾ ಸತ್ಯನಾರಾಯಣ ನಾಯಿ ಬೇಕಾ ನಾಯಿ! ನನ್ನ ನಾಲ್ಕು ವರ್ಷದ ಮಗಳು ಸೋನುಗೆ ನಾಯಿ ಕಂಡರೆ ತುಂಬಾ ಇಷ್ಟ.ಎಲ್ಲೇ ಹೋಗ್ತಾ ಇದ್ದರೂ……… ಬೀದಿ ನಲ್ಲಿ ಯಾವ ನಾಯಿ ನೋಡಿದರೂ……. .ನೋಡುತ್ತಾ ನಿಂತುಬಿಡುತ್ತಿದ್ದಳು.ಆ ಸ್ಥಳದಲ್ಲೇ ನಂಗೂ ನಾಯಿಮರಿಬೇಕು ತಂದುಕೊಡು ಅಂತ ಹಠ ಮಾಡುತ್ತಿದ್ದಳು. ಇವಳ ಜೊತೆ ನನ್ನ ಹೆಂಡತಿ ಬೇರೆ, “ನೋಡಿ ಮಗು ನಾಯಿಮರಿ ಬೇಕು ಅಂತ ಎಷ್ಟು ಹಠ ಮಾಡುತ್ತಾಳೆ ಅವಳ ಜೊತೆಗೆ ಒಂದು ನಾಯಿಮರಿ ಇದ್ದರೆ ಅವಳ ಪಾಡಿಗೆ ಅವಳು ಆಟ […]

ಪ್ರಸ್ತುತ

ನಿರುದ್ಯೋಗದ ವಿರುದ್ದ ಹೋರಾಟ ಗಣೇಶಭಟ್ ಶಿರಸಿ ನಿರುದ್ಯೋಗದ ವಿರುದ್ಧ ಹೋರಾಟ….. ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚುತ್ತಿದೆ, ಹೊಸ ಉದ್ಯೋಗಗಳು ಸೃಷ್ಟಿಯಾಗುತ್ತಿಲ್ಲ, ಉದ್ಯಮಗಳು ಮುಚ್ಚುತ್ತಿರುವುದರಿಂದ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ಏರುತ್ತಿದೆಯೆಂಬುದನ್ನು ಹಲವು ವರದಿಗಳು ಹೇಳುತ್ತಿವೆ. ಆರ್ಥಿಕ ಹಿಂಜರಿತ ಉಂಟಾಗಿರುವುದೇ ಇದಕ್ಕೆ ಕಾರಣವೆಂದು ತಜ್ಞರು ಹೇಳುತ್ತಾರೆ. ನಿರುದ್ಯೋಗ ಸಮಸ್ಯೆಗೆ ಸೂಕ್ತ ಪರಿಹಾರ ಹುಡುಕುವ ಬದಲಿಗೆ, ರಾಜಕೀಯ ಪಕ್ಷಗಳ ಪರಸ್ಪರ ಕೆಸರೆರಚಾಟ ನಡೆದಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿಯೊಬ್ಬರು ನಿರುದ್ಯೋಗದ ವಿರುದ್ಧ ಹೋರಾಟ ಮಾಡುವುದಾಗಿ ಘೋಷಣೆ ಮಾಡಿ ನಿರ್ದಿಷ್ಟ ಮೊಬೈಲ್ ಸಂಖ್ಯೆಗೆ ಕರೆಮಾಡಿ […]

ಇತರೆ

“ಕಲ್ಲಂಗಡಿ ಹಣ್ಣಿನ ಪೂಜೆ” ತಾರಾ ಸತ್ಯನಾರಾಯಣ ನನ್ನ ಮದುವೆಯಾಗಿದ್ದ ಹೊಸದು ಮದುವೆಯಾಗಿ ಹದಿನೈದು ದಿನಕ್ಕೆ ಯುಗಾದಿ ಹಬ್ಬ ಬಂತು ಹಬ್ಬಕ್ಕೆ ನಮ್ಮಿಬ್ಬರನ್ನು ಕರೆದುಕೊಂಡು ಹೋಗಲು ನನ್ನ ಅಣ್ಣ ಬಂದ ಇವರಿಗೆ ಆಫೀಸಿನ ಕೆಲಸದ ನಿಮಿತ್ತ ಚೆನ್ನೈಗೆ ಹೋಗಬೇಕಾದ್ದರಿಂದ ಇವರು “ನಾನು ಬರಲು ಸಾಧ್ಯವಿಲ್ಲ ನೀನು ಹೋಗಿ ಬಾ “ಎಂದು ಹೇಳಿದರು. ನಾನು ಅಣ್ಣನ ಜೊತೆ ತವರಿಗೆ ಹೋದೆ.ಹಬ್ಬ ಮುಗಿಸಿಕೊಂಡು ಅಣ್ಣನ ಜೊತೆ ಗಂಡನ ಮನೆಗೆ ಹೊರಟೆ .ನಾನು ಹೋಗುವ ಹಿಂದಿನ ದಿನ ಅವನ ಫ್ರೆಂಡ್  ತೋಟದಿಂದ ಒಂದೆರಡು […]

ಇತರೆ

ಎಲ್ಲಿ ಕಳೆದು ಹೋಯಿತು ಆ ಜಾತ್ರೆಯ ಸೊಬಗು ಬಿದಲೋಟಿ ರಂಗನಾಥ್ ಎಲ್ಲಿ ಕಳೆದು ಹೋಯಿತು ಆ ಜಾತ್ರೆಯ ಸೊಬಗು ಅದು ಎಂಬತ್ತರ ದಶಕ ಬಂದ ಫಸಲನ್ನು ಕೂಡಿಟ್ಟು ಮನೆಗೊಯ್ದು ಅವರೆ ಸೊಗಡನು ಬಿಡಿಸುವ ಕಾಲ, ಇನ್ನೂ ಕ್ಯಾಮೇನಹಳ್ಳಿ ಜಾತ್ರೆ ತಿಂಗಳಿರುವಾಗಲೇ , ಕೂಲಿ ನಾಲಿ ಮಾಡಿ ಬಂದ ಸಣ್ಣ ಕಾಸಿನಲ್ಲೇ ಮಕ್ಕಳಿಗೆ ಬಟ್ಟೆ ತರುವ ಅಪ್ಪನ ಇರಾದೆ. ವಾರದ ಮುಂಚೆಯೇ ಸಂತೆ ಬಟ್ಟೆ ತಂದು ಪೆಟಾರಿಯಲ್ಲಿ ಬಚ್ಚಿಡುವ ಪ್ರೀತಿ.ಅದರಲ್ಲು ಮೂವರು ಮಕ್ಕಳಿಗೂ ಒಂದೆ ತರಹದ ಬಣ್ಣ ಬಣ್ಣದ […]

ಪ್ರಸ್ತುತ

ಅಕ್ಷರಸಂತ ಹಾಜಬ್ಬ ಕೆ.ಶಿವು ಲಕ್ಕಣ್ಣವರ ಸ್ವಂತ ದುಡುಮೆಯಿಂದ ಶಾಲೆ ಕಟ್ಟಿಸಿದ ಹರೆಕಳ ಹಾಜಬ್ಬರು ಪದ್ಮಶ್ರೀ ಪಡೆದ ಸಾಹಸಗಾಥೆ..! ಆ ವ್ಯಕ್ತಿ ಕೋಟ್ಯಾಧಿಪತಿಯಲ್ಲ. ಸ್ವಂತಮನೆಯೂ ಅವನಿಗೆ ಇರಲಿಲ್ಲ. ಉನ್ನತ ವಿದ್ಯಾಭ್ಯಾಸವಂತೂ ದೂರದ ಬೆಟ್ಟವಾದರೂ ಅಕ್ಷರ ಸ್ನೇಹಿ. ಮಂಗಳೂರಿನ ರಸ್ತೆ ಬದಿಗಳಲ್ಲಿ ಕಿತ್ತಳೆ ಹಣ್ಣು ಮಾರಿಕೊಂಡು ನಿತ್ಯ ಜೀವನ ಸಾಗಿಸುತ್ತಿರುವ ಹರೆಕಳ ಹಾಜಬ್ಬನವರು ತಮ್ಮ ಜೀವನ ಸುಃಖಗಿಂತಲೂ ಬೇರೆಯವರ ನೋವಿಗೆ ಸ್ಪಂದಿಸುವವರು… ಹಾಜಬ್ಬನವರು ಕಿತ್ತಳೆ ವ್ಯಾಪಾರದಿಂದ ಅವರಿಗೆ ದಿನಕ್ಕೆ ಲಭಿಸುವುದು ಕೇವಲ 100 ರಿಂದ 120ರೂಪಾಯಿ. ಮಂಗಳೂರು ನಗರದಲ್ಲಿ ಕಿತ್ತಳೆ […]

ಪ್ರಸ್ತುತ

ವಿವೇಕಾನಂದರ ಆಶಯ ಗಣೇಶಭಟ್ ಶಿರಸಿ ಸ್ವಾಮಿ ವಿವೇಕಾನಂದರ ಆಶಯಗಳು ವಾಸ್ತವವಾಗುವ ಬಗೆ…… ಪ್ರತಿವರ್ಷದಂತೆ ಈ ವರ್ಷವೂ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಯಿತು. ಅವರ ಫೋಟೊ ಇಟ್ಟು, ಹೂ ಹಾಕಿ, ಅವರ ಆದರ್ಶಗಳನ್ನು ಪಾಲಿಸಿ ಎಂದು ಭಾಷಣಗಳ ಸುರಿಮಳೆಯೂ ಆಯಿತು. ಆದರೆ, ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ವಾಸ್ತವವಾಗಿಸುವ ಬಗೆ ಹೇಗೆಂದು ಯಾವೊಬ್ಬ ಭಾಷಣಕಾರರೂ ಹೇಳಲಿಲ್ಲ. ಅವರ ಹೆಸರಿನಲ್ಲಿ ತಮ್ಮ ಸಂಘಟನೆಗಳನ್ನು ಬಲಪಡಿಸಿಕೊಳ್ಳುತ್ತಿರುವವರೂ ಸಹ ಸ್ವಾಮೀಜಿಯ ಉನ್ನತ ಆದರ್ಶಗಳನ್ನು ಭೂಮಿಗಿಳಿಸುವ ವ್ಯವಹಾರಿಕ ಚಿಂತನೆಯ ಕುರಿತಾಗಿ ಎಂದೂ ಹೇಳುವುದಿಲ್ಲ. ಯಾಕೆಂದರೆ, ವಿವೇಕಾನಂದರ […]

ಅಲೆಮಾರಿ ಬದುಕು

ಇಲ್ಲಗಳ ನಡುವಿನ ಅಲೆಮಾರಿ ಬದುಕು ಕೆ.ಶಿವು ಲಕ್ಕಣ್ಣವರ ಸ್ವಾತಂತ್ರ ‌ಭಾರತದಲ್ಲಿ ಇಲ್ಲಗಳ ನಡುವೆಯೇ ಅಲೆಮಾರಿ ಬದುಕು ಬದುಕುತ್ತಿರುವ ಬಸವಳಿದ ಜನ..! ವಾಸಿಸಲು ಮನೆ ಇಲ್ಲ, ವಿದ್ಯುತ್‌ ಇಲ್ಲ, ಕುಡಿಯಲು ನೀರಿಲ್ಲ, ಓಡಾಡಲು ರಸ್ತೆ ಇಲ್ಲ, ಇತರೆ ಸರ್ಕಾರದ ಸೌಲಭ್ಯಗಳು ಇಲ್ಲವೇ ಇಲ್ಲ. ಹೀಗೆ ಇಲ್ಲಗಳ ನಡುವೆಯೇ ಅಲೆಮಾರಿ ಕುಟುಂಬಗಳು ಬದುಕು ಸಾಗಿಸುತ್ತಿವೆ… ಊರಿನ ಹೊರ ವಲಯದಲ್ಲಿ ಬದುಕು ಸಾಗಿಸುವ ನೂರಾರು ಅಲೆಮಾರಿ ಕುಟುಂಬಗಳು ಸೇರಿದಂತೆ ಇತರೆ ಕುಟುಂಬಗಳು ವಾಸಿಸುತ್ತವೆ. ಊರೂರು ಅಲೆಯುವ ಈ ಕುಟುಂಬಗಳು ಅಲೆಮಾರಿ ಜೀವನ‌ […]

Back To Top