Category: ಇತರೆ

ಇತರೆ

ಪ್ರಸ್ತುತ

ಕ್ಯಾಂಪಸ್ ಕೋಲಾಹಲ…… ಗಣೇಶ್ ಭಟ್ ಶಿರಸಿ ದೆಹಲಿಯ ಜವಾಹರಲಾಲ ನೆಹರೂ ವಿಶ್ವವಿದ್ಯಾಲಯ (ಜೆಎನ್‍ಯು) ಪುನಃ ಸುದ್ಧಿಯಲ್ಲಿದೆ. ವಿವಿಧ ಶುಲ್ಕಗಳ ಏರಿಕೆಯ ವಿರುದ್ಧ ಪ್ರತಿಭಟನೆ ನಡೆಸಿ, ಕೆಲವು ವಾರಗಳ ಹಿಂದೆ ಮಾಧ್ಯಮಗಳಿಗೆ ಆಹಾರವಾಗಿದ್ದ ಜೆಎನ್‍ಯುನಲ್ಲಿ ಮುಸುಕುಧಾರಿಗಳು ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹೊಡೆದು ಬಡಿದಿದ್ದಾರೆಂಬ ವಿಷಯ ಬಿತ್ತರವಾಗುತ್ತಿದೆ. ಕ್ಯಾಂಪಸ್‍ನಲ್ಲೇ ವಿದ್ಯಾರ್ಥಿಗಳಿಗೆ ರಕ್ಷಣೆ ಇಲ್ಲವೆಂಬ ವಿಷಯ ದೇಶದಾದ್ಯಂತ ಹಲವು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳನ್ನು ಕೆರಳಿಸಿ, ಪ್ರತಿಭಟನೆ ನಡೆಸಲು ಕಾರಣವಾಗಿದೆ. ನಾಲ್ಕಾರು ದಶಕಗಳ ಹಿಂದೆ ವಿಶ್ವವಿದ್ಯಾಲಯಗಳಲ್ಲಿ ಸೈದ್ಧಾಂತಿಕ ಚರ್ಚೆಗಳು ಇರುತ್ತಿದ್ದವು. ಅಭಿಪ್ರಾಯ ಭೇದಗಳು ಇದ್ದವು. ಆದರೆ […]

ಶ್ರದ್ದಾಂಜಲಿ

ನಮ್ಮನ್ನಗಲಿದ ಸಾಹಿತಿ, ಸಂಶೋಧಕ, ಪ್ರೋ. ಎಂ.ಚಿದಾನಂದಮರ್ತಿ..! ಕೆ.ಶಿವು ಲಕ್ಕಣ್ಣವರ ಪ್ರೋ. ಎಂ.ಚಿದಾನಂದಮರ್ತಿ..! ಸಾಹಿತಿ, ಸಂಶೋಧಕ ಪ್ರೋ. ಎಂ.ಚಿದಾನಂದಮೂರ್ತಿ ಅವರ ಬಗೆಗೆ ಇತ್ತೀಚಿನ ಎಡಪಂಥೀಯರ ಏನೇ ತಕರಾರಿದ್ದರು. ಅದನ್ನೆಲ್ಲ ಬದಿಗಿರಿಸಿ ಅವರು ಕೊನೆ ಉಸಿರೆಳದ ಈ ಗಳಿಗೆಯಲ್ಲಿ ಅವರ ಕುರಿತು ಈ ಪುಟ್ಟ ಲೇಖನ ಸ್ಮರಣೆ… ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಸಂಶೋಧಕ, ಪ್ರೋಫೆಸರ್​ ಚಿದಾನಂದ ಮೂರ್ತಿಯವರು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇವತ್ತು ಬೆಳಗಿನ ಜಾವ 3.30ರ ಸುಮಾರಿಗೆ ಚಿಕಿತ್ಸೆ […]

ಪ್ರಸ್ತುತ

16ನೇಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನ ಕಲ್ಕುಳಿ ವಿಠಲ ಹೆಗಡೆಯವರ ಅಧ್ಯಕ್ಷ ಬಾಷಣ [15:50, 1/10/2020] H C. 2: ನಮ್ಮ ಶೃಂಗೇರಿಯ ಆದಿಕವಿ ಬಾಹುಬಲಿಯನ್ನು ಸ್ಮರಿಸುತ್ತಾ ನನ್ನ ಭಾಷಣವನ್ನು ಪ್ರಾರಂಭಿಸುತ್ತಿದ್ದೇನೆ. ಜಿಲ್ಲಾ ೧೬ನೇ ಕನ್ನಡ ಸಾ ಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪದವಿಯ ಈ ಗೌರವವನ್ನು ನಾನು ಬಯಸಿರಲಿಲ್ಲ; ನಿರೀಕ್ಷಿಸಿಯೂ ಇರಲಿಲ್ಲ. ಆದರೂ ನೀವೆಲ್ಲರೂ ಪ್ರೀತಿಯಿಂದ ಈ ಗೌರವ ನೀಡಿದ್ದೀರಿ. ಇದಕ್ಕಾಗಿ ನಾನು ನಿಮಗೆಲ್ಲರಿಗೂ ಅಭಾರಿಯಾಗಿದ್ದೇನೆ.. ನಾನು ಈ ಮೊದಲು ಸ್ಮರಿಸಿದ ಬಾಹುಬಲಿ ಎಂಬ ಜೈನ ಕವಿಯು, ಶೃಂಗೇರಿಯೂ […]

ಕುಮಾರವ್ಯಾಸ ಜಯಂತಿ

ಕನ್ನಡ ಸಾಹಿತ್ಯದ ದಿಗ್ಗಜ ಕುಮಾರವ್ಯಾಸ..! ಕೆ.ಶಿವು ಲಕ್ಕಣ್ಣವರ ದಿನಾಂಕ ೯ ಕುಮಾರವ್ಯಾಸನ ಜಯಂತಿ. ಆ ನಿಮಿತ್ತವಾಗಿ ಕುಮಾರವ್ಯಾಸ ಕುರಿತು ಈ ಲೇಖನ… ಕುಮಾರವ್ಯಾಸ (ಕ್ರಿ.ಶ. ೧೩೫೦-೧೪೦೦) ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕನ್ನಡ ಸಾಹಿತ್ಯದ ದಿಗ್ಗಜರಲ್ಲಿ ಒಬ್ಬ ಎಂದರೆ ತಪ್ಪಾಗಲಾರದು. ಕುಮಾರವ್ಯಾಸನ ಮೂಲ ಹೆಸರು ನಾರಾಯಣಪ್ಪ. “ಗದುಗಿನ ನಾರಾಯಣಪ್ಪ” ಎಂದು ಸಾಮಾನ್ಯವಾಗಿ ಕುಮಾರವ್ಯಾಸನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ. ವ್ಯಾಸ ಮಹಾಕವಿಯ ಸಂಸ್ಕೃತ ಮಹಾಭಾರತದ ಅತ್ಯದ್ಭುತ ಕನ್ನಡ ರೂಪವನ್ನು ರಚಿಸಿದ್ದರಿಂದ, ವ್ಯಾಸ ಮಹಾಕವಿಯ ಮಾನಸಪುತ್ರ ತಾನೆನ್ನುವ […]

ವಿಶ್ಲೇಷಣೆ

ಶಬ್ದ-ಅರ್ಥಗಳ ಅನುಸಂಧಾನದಲ್ಲಿ “ಶಬ್ದವೇಧಿ” ಡಾ.ಗೋವಿಂದ ಹೆಗಡೆ ಶಬ್ದ-ಅರ್ಥಗಳ ಅನುಸಂಧಾನದಲ್ಲಿ “ಶಬ್ದವೇಧಿ” ವಸ್ತುವೈವಿಧ್ಯ,ಲಯ-ಛಂದೋ ವೈವಿಧ್ಯಗಳನ್ನು ವಿಪುಲವಾಗಿ ತಮ್ಮ ಕಾವ್ಯ ಕ್ರಿಯೆಯಲ್ಲಿ ತಂದ ನಮ್ಮ ಕವಿಗಳಲ್ಲಿ ಡಾ. ಎಚ್ಎಸ್ ವೆಂಕಟೇಶಮೂರ್ತಿ ಅವರು ಅಗ್ರಪಂಕ್ತಿಯಲ್ಲಿ ನಿಲ್ಲುತ್ತಾರೆ. ಪರಂಪರೆಯೊಡನೆ ಅನುಸಂಧಾನದ ರೀತಿ ಅವರದು ಎನ್ನುವ ಕೆ ವಿ ತಿರುಮಲೇಶ್ “ಅವರು ಕನ್ನಡದ ಕಾವ್ಯ ಧಾತುವಿಗೆ ಅಂಟಿಕೊಂಡಿರುವ ಕವಿ” ಎಂದು ಗುರುತಿಸುತ್ತಾರೆ. ‘ಈ ಅನುಸಂಧಾನದ ಒಂದು ಎಳೆ ಎಂದರೆ ಛಂದಸ್ಸಿನ ಬಗ್ಗೆ ಅವರಿಗಿರುವ ಮೋಹ.. ಅವರು ಛಂದೋಬದ್ಧವಾಗಿ ಬರೆಯದಿದ್ದರೂ ಛಂದಸ್ಸನ್ನು ಧಿಕ್ಕರಿಸಿಯೂ ಬರೆದಿಲ್ಲ’ ಎಂಬುದು […]

ಪ್ರಸ್ತುತ

ಬುದ್ದಿಗೆ  ಹಿಡಿದ  ಗ್ರಹಣದ   ಬಿಡುಗಡೆ  ಎಂತು? ಗಣೇಶಭಟ್ ಶಿರಸಿ ಬುದ್ದಿಗೆ  ಹಿಡಿದ  ಗ್ರಹಣದ   ಬಿಡುಗಡೆ  ಎಂತು?    ಕಳೆದ ವಾರ ಅಂದರೆ 26-12-2019  ರಂದು  ನಡೆದ  ಅಪೂರ್ವ ನೈಸರ್ಗಿಕ ವಿದ್ಯಮಾನ ಸೂರ್ಯಗ್ರಹಣ ಹಲವರ  ಕಣ್ತುಂಬಿಸಿದರೆ,  ಹಲವರು ಭಯದಿಂದ  ಕುಗ್ಗಿ ಹೋದರು. ಸೂರ್ಯನಿಗೆ  ಗ್ರಹಣದಿಂದ  ಬಿಡುಗಡೆ   ದೊರಕಿದರೂ ಜನರ ಬುದ್ಧಿಗೆ  ಹಿಡಿದ  ಗ್ರಹಣ  ಬಿಡುವ ಸೂಚನೆಗಳು ಕಾಣುತ್ತಿಲ್ಲ.   ಆಕಾಶ ಕಾಯಗಳ  ಕುರಿತು,  ಅವುಗಳ ಚಲನೆಯ  ಬಗ್ಗೆ  ಏನೂ ತಿಳಿದಿರದ ಕಾಲಘಟ್ಟದಲ್ಲಿ  ಅಂದರೆ ಸಾವಿರಾರು ವರ್ಷಗಳ ಹಿಂದೆ, ಪ್ರಕೃತಿಯ  ಜೊತೆ […]

ಅಕ್ಷರದ ಅವ್ವ

ಸಾವಿತ್ರಿಬಾಯಿ ಪುಲೆ ಕೆ.ಶಿವು ಲಕ್ಕಣ್ಣವರ ಶೈಕ್ಷಣಿಕ, ಸಾಮಾಜಿಕ ಕ್ರಾಂತಿಯ ‘ಅಕ್ಷರದ ಅವ್ವ’ ಸಾವಿತ್ರಿಬಾಯಿ ಪುಲೆ..! ಇಂದು ಶೈಕ್ಷಣಿಕ, ಸಾಮಾಜಿಕ ಕ್ರಾಂತಿಯ ‘ಅಕ್ಷರದ ಅವ್ವ’ ಸಾವಿತ್ರಿಬಾಯಿ ಪುಲೆ ಹುಟ್ಟಿದ ದಿನ. ಆ ಕಾರಣವಾವಾಗಿ ಈ ಲೇಖನ ಸ್ಮರಣೆ… ಸಾವಿತ್ರಿಬಾಯಿ ಫುಲೆ(೧೮೩೧-೧೮೯೭)ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ. ಭಾರತದ ಮೊಟ್ಟ ಮೊದಲ ಶಿಕ್ಷಕಿ. ದಣಿವರಿಯದ ಸತ್ಯಶೋಧಕಿ. ಆಧುನಿಕ ಶಿಕ್ಷಣದ ತಾಯಿ. ಸಾವಿತ್ರಿಬಾಯಿ ಅವರ ವೇಷ ಭೂಷಣ ಸರಳವಾಗಿತ್ತು. ಖಾದಿ ಸೀರೆಯನ್ನೇ ಅವರು ಧರಿಸುತ್ತಿದ್ದರು ಅವರು… ಸಾವಿತ್ರಿಬಾಯಿ […]

ಪ್ರಸ್ತುತ

ಮಹಾರಾಷ್ಟ್ರದ ಗಡಿ ತಗಾದೆ ಕೆ.ಶಿವು ಲಕ್ಕಣ್ಣವರ ಮತ್ತೆ ಭುಗಿಲೆದ್ದ ಬೆಳಗಾವಿ ಗಡಿ ವಿವಾದವೂ..! ‘ಮಹಾರಾಷ್ಟ್ರ’ ಗಡಿ ಕ್ಯಾತೆ ಕಥೆಯ ಪೂರ್ಣ ಚಿತ್ರಣವೂ..!! ಮಹಾರಾಷ್ಟ್ರಕ್ಕೆ ಏನೋ ಗತಿ ಕಾದಿದೆ. ಅದಕೇ ಅದು ಮೇಲಿಂದ ಮೇಲೆ ಗಡಿ ಕ್ಯಾತೆ ತೆಗೆಯುತ್ತಿದೆ. ಈ ಬಾರಿ ಸಮಗ್ರ ಕರ್ನಾಟಕ ಈ ಗಡಿ ಕ್ಯಾತೆಯ ವಿರುದ್ಧ ಮಹಾರಾಷ್ಟ್ರದ ನೀರು ಇಳಿಸಲು ಸಿದ್ಧವಾಗಿ ಈ ಗಡಿ ಕ್ಯಾತೆ ಹೋರಾಟದಲ್ಲಿ ದುಮುಕಿದೆ… ಮಹಾರಾಷ್ಟ್ರದ ಜತೆಗಿನ ಗಡಿ ವಿವಾದ ಸದಾ ಬೂದಿ ಮುಚ್ಚಿದ ಕೆಂಡದಂತೆ. ಸುಮ್ಮನಿರುವ ಕರ್ನಾಟಕವನ್ನು ಪದೇ […]

ಕುವೆಂಪು ಜನ್ಮದಿನ

“ವಿಶ್ವ ಮಾನವ” ಬರಹಗಾರ ಕುವೆಂಪು..! ಕೆ.ಶಿವು ಲಕ್ಕಣ್ಣವರ ಇಂದು ಡಿಸೆಂಬರ್ ೨೯. ಕುವೆಂಪು ಹುಟ್ಟಿದ ದಿನ. ಆ ವಿಶ್ವ ಮಾನವ ನೆನಪಿನಲ್ಲಿ ಈ ಬರಹ ಸ್ಮರಣೆ… ಮಲೆನಾಡಿನ ಹಿಂದುಳಿದ ವರ್ಗದಿಂದ ಹುಟ್ಟಿ ಬಂದ ಕುವೆಂಪು ಅವರು ತಾವೇ ಹೇಳಿಕೊಂಡಂತೆ ಮಲೆನಾಡಿನ ಕವಿ. ಕುವೆಂಪು ಅವರು ಈ ದೇಶದ ಸಮಕಾಲೀನ ಸೃಜನಶೀಲತೆಯ ಉತ್ಕರ್ಷದ ನಿಜವಾದ ಪ್ರತಿನಿಧಿಯಾಗಿದ್ದಾರೆ. ಅವರ ಸಾಹಿತ್ಯದ ಹರಹು, ವೈವಿದ್ಯ ಮತ್ತು ಎತ್ತರಗಳು ಅವರು ಮೂಡಿಬಂದ ಸಹ್ಯಾದ್ರಿಯ “ಪರ್ವತಾರಣ್ಯ ಪ್ರಪಂಚ”ದಂತೆ ಬೆರಗು ಹುಟ್ಟಿಸುತ್ತದೆ. ಅವರ ಮಹಾಕಾವ್ಯ , […]

ಕೃಷಿಬೆಲೆ ಆಯೋಗ

ಕರ್ನಾಟಕ ರೈತರ ಉತ್ಪನ್ನಗಳಿಗೆ ಖಾತರಿ ಬೆಲೆ ಕೊಡಿಸಲು….. ಗಣೇಶಭಟ್ ಶಿರಸಿ. ಕರ್ನಾಟಕ ರೈತರ ಉತ್ಪನ್ನಗಳಿಗೆ ಖಾತರಿ ಬೆಲೆ ಕೊಡಿಸಲು…… ಕರ್ನಾಟಕದ ರೈತರ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ನೇಮಿಸಿರುವ ಕರ್ನಾಟಕ ಕೃಷಿ ಬೆಲೆ ಆಯೋಗವು ಸಕ್ರಿಯವಾಗಿ ಚಿಂತಿಸುತ್ತಿದೆ. ರಾಜ್ಯದ ರೈತರ ಉತ್ಪನ್ನಗಳಿಗೆ ಖಾತರಿ ಬೆಲೆ ಮತ್ತು ಸದೃಢ ಮಾರುಕಟ್ಟೆ ಸಿಗಬೇಕೆಂಬ ಉದ್ದೇಶದಿಂದ ಈ ಆಯೋಗವು ಹಲವಾರು ಶಿಫಾರಸ್ಸುಗಳನ್ನು ಮಾಡಿದೆ. ಆಯೋಗ ಮಾಡಿರುವ ಪ್ರತಿಯೊಂದು ಶಿಫಾರಸ್ಸಿನಲ್ಲೂ ರೈತರ, ರೈತಾಬಿಯ ಕುರಿತಾದ ಪ್ರಾಮಾಣಿಕ ಕಾಳಜಿ ಎದ್ದುಕಾಣುತ್ತದೆ. ರಾಜ್ಯಸರ್ಕಾರ ಮನಸ್ಸು ಮಾಡಿದರೆ […]

Back To Top