Category: ನಿಮ್ಮೊಂದಿಗೆ

ನಿಮ್ಮೊಂದಿಗೆ

ಗಜಲ್‌

ಗಜಲ್ ಶ್ರೀಲಕ್ಷ್ಮೀ ಅದ್ಯಪಾಡಿ ಕಣ್ಣ ಹನಿ ಜಾರುವ ಮುನ್ನ ಬೊಗಸೆಯೊಡ್ಡುವ ಭರವಸೆಯನ್ನು ಇತ್ತವನುನೀನಲ್ಲವೇ ಮುಚ್ಚಿಟ್ಟ ನೂರಾರು ಕನಸುಗಳಿಗೆಚಂದದ ಮರು ಜೀವವನ್ನುಇತ್ತವನುನೀನಲ್ಲವೇ – ಸಾಮಾನ್ಯಳಾದ ನನ್ನಲ್ಲಿ ಅಸಾಮಾನ್ಯಳೆಂಬ ಆತ್ಮ ವಿಶ್ವಾಸವನ್ನುತುಂಬಿದವನೇ ನೀನು ನಿನಗಾಗಿ ಏನಾದರೂ ಮಾಡಬಲ್ಲೆ ಎಂಬ ಭರವಸೆಯನ್ನು ಇತ್ತವನುನೀನಲ್ಲವೇ – ಸಾವಿರ ಹಸಿದ ಕಣ್ಣುಗಳ ನಡುವೆಯೂ ಪ್ರೇಮದ ಬೆಳಕು ಹೊತ್ತ ಕಣ್ಣಿನವನು ನೀನು ಎದೆಯ ಕತ್ತಲ ನೋವುಗಳನೆಲ್ಲಮರೆಸಿ ನಗುವಿನ ಮಿಂಚನ್ನುಇತ್ತವನುನೀನಲ್ಲವೇ – ಬರಿದೆಬಯಲಮರೀಚಿಕೆಯಂತಿದ್ದಭವಿತವ್ಯದಬದುಕಿನಲಿಹೊಂಗನಸತುಂಬಿದೆ ನೀನು ಸುಡುವ ಬೆಂಗಾಡಾಗಿದ್ದಮರುಭೂಮಿಯಲಿತಣ್ಣನೆಯನೆಳಲನ್ನುಇತ್ತವನುನೀನಲ್ಲವೇ – ನನ್ನೆದೆಯಕ್ಯಾನ್ವಾಸ್ ಮೇಲೆ ಬಣ್ಣ ಬಣ್ಣದ ಕಾಮನಬಿಲ್ಲನುಮೂಡಿಸಿದವನು ನೀನು […]

ಗಜಲ್

ಗಜಲ್ ಶೈಲಜಾ.ವಿ.ಕೋಲಾರ ಊರಿಗೆ ಊರೇ ಬೆಂಕಿಯಲ್ಲಿ ಬೇಯುತ್ತಿದೆ ಕಾಯುವರಾರಿಲ್ಲಿಜಾತಿಗೆ ಜಾತಿ ಜಿದ್ದಾಜಿದ್ದಿ ಶಾಂತಿ ಸೊರಗುತ್ತಿದೆ ಕಾಯುವರಾರಿಲ್ಲಿ ಕಳೆ ಬೆಳೆದ ಹೊಲದಲ್ಲಿ ಬೆಳೆ ಬೆಳೆಯಲು ಜಾಗವುಂಟೇಕೂಳಿಲ್ಲದ ಹಸುಳೆಯ ಕೂಗು ಒಣಗುತ್ತಿದೆ ಕಾಯುವರಾರಿಲ್ಲಿ ಸ್ವಸ್ಥ ಸಂದೇಶ ಹೊತ್ತುಬಂದ ಬಿಳಿ ಪಾರಿವಾಳ ಕೆಂಪಾಗಿ ಹಾರುತ್ತಿದೆಗಾಯ ಒಸರುವ ರಕ್ತಕೆ ಗಾಳಿ ಗೋಳಾಡುತ್ತಿದೆ ಕಾಯುವರಾರಿಲ್ಲಿ ಮೇಲು ಕೀಳೆಂಬ ಬೇರು ಬಲವಾಗಿ ಮತ ಧರ್ಮ ಸಿಟಿಲೊಡೆದಿದೆಊರ ಕೆರೆ ಜಾಲಿ ಮರದ ಮುಳ್ಳು ನಂಜೇರುತ್ತಿದೆ ಕಾಯುವರಾರಿಲ್ಲಿ ಹಲವು ಹೂಗಳು ಒಂದೇ ಮಾಲೆಯಲಿ ನೋಟ ಸೆಳೆದಿವೆಕುರಬುವ ಕೈಗೆ ಮಾತಿಲ್ಲದ […]

ಅಂಬರ ಫಲ!

ಕವಿತೆ ಅಂಬರ ಫಲ! ಗಣಪತಿ ಗೌಡ ಅಂಬರದಲಿ ತೂಗುತಿಹುದುಒಂದೇ ಒಂದು ಹಣ್ಣು,ಬೆಳದಿಂಗಳ ರಸವೇ ಕುಡಿದು––ತಂಪು ರಸಿಕ ಕಣ್ಣು!/ಅಂಬರದಲಿ. ……// ಕೆಲ ದಿನದಲಿ ಕರಗಿ ಬಲಿತುತುಂಬಿ ಪೂರ್ಣ ಪ್ರಾಯ!ಹೊರ ಸೂಸಿದೆ ಹೊನ್ನ ಕಿರಣಕುಡಿದು ಹೊನ್ನ ಪೇಯ!/ಅಂಬರದಲಿ……….// ಹೊಂಬೆಳಕದು ಸುರಿವ ಜೇನು!ಚಪ್ಪರಿಸುತ ಜಿಹ್ವೆ,ಮುಳುಗೇಳುತ ಆನಂದದಿ,ಮರೆತು ಎಲ್ಲ ನೋವೇ!/ಅಂಬರದಲಿ……….// ತಂಪು ಬೆಳಕ ಬೆರಳಿನಲ್ಲಿನೇವರಿಸುತ ಎಲ್ಲ,‘ಶಾಂತಗೊಳ್ಳಿ’ ಎನುವ ತೆರದಿಸವರುತೆಲ್ಲ ಗಲ್ಲ! /ಅಂಬರದಲಿ………..// *****************************************

ಕಲ್ಲಾಗಿಯೇ ಇರಬೇಕಿತ್ತು!

ಕವಿತೆ ಕಲ್ಲಾಗಿಯೇ ಇರಬೇಕಿತ್ತು! ರಾಜೇಶ್ವರಿ ಭೋಗಯ್ಯ ಇದ್ದದ್ದು ನಿಜವಾಗಿದ್ದರೆ ಅಹಲ್ಯೆಹೇಗೆ ಸಹಿಸಿಕೊಂಡಳೋನೋವನ್ನೂ ಅವಮಾನವನ್ನು ತನ್ನ ತಪ್ಪಿಲ್ಲದಿದ್ದರೂ ಶಾಪವಿಟ್ಟ ಅವಮಾನಕ್ಕೆವಿನಾಕಾರಣ ಕಲ್ಲಾಗಿಸಿದ ನೋವಿಗೆಹೇಗೆ ಸಹಿಸಿಕೊಂಡಳೋ ಅಬಲೆ ಹೆಂಡತಿಯನ್ನು ನೆಲಕ್ಕೆ ತುಳಿದುನಿನ್ನನ್ನು ಮೇಲಕ್ಕೆತ್ತುವ ಹಿಂದೆಯಾವ ಲೋಕ ಕಲ್ಯಾಣದ ಸಂಚಿತ್ತು ಗೌತಮ ಸಹಕರಿಸಲಿಲ್ಲಇಂದ್ರನೂ ಕಾಪಾಡಲಿಲ್ಲವ್ರತಕೆಟ್ಟರೂ ಸುಖಪಡಲಿಲ್ಲಅನ್ಯಾಯವ ಸಹಿಸಿಕೊಂಡು ಸುಮ್ಮನಿರಬಾರದಿತ್ತು ಕಲ್ಲಾಗಿಯೇ ಇರಬೇಕಿತ್ತು ನೀನುರಾಮನ ಪಾದಸ್ಪರ್ಶ ಯಾಕೆ ಬೇಕಿತ್ತುಒಳಗೇ ಹುದುಗಿರಬೇಕಿತ್ತು ನೀನುನಿಜ ಧರ್ಮ ತಿಳಿದವ ಬುದ್ದಬಂದು ನಿನ್ನ ಮೈ ದಡವುವವರೆಗೂ. **********************

ಆರದಿರಲೀ ದೀಪ

ಕವಿತೆ ಆರದಿರಲೀ ದೀಪ ಶಾಂತಲಾ ಮಧು ಆರದಿರಲೀ ದೀಪಉತ್ಸಾಹದೀ ದೀಪಆರದಿರಲಿ ಕ್ಷಣಿಕ ಬದುಕಿನಸುಡುವ ಗಾಳಿಯಕನಸ ಮಾತಿನಭ್ರಮೆಯ ಬೆಂಕಿಗೆಆರದಿರಲಿ ದೀಪ ಮುಗಿಲ ಮೋಡದನಡುವೆ ಇಣುಕುವತಮವ ಕಳೆಯುವರವಿಯ ತೆರದಲಿ ಸ್ನೇಹ ಸಿಂಚನ ರಕ್ಷೆ ಇರಲಿಹರಿವ ನದಿಯ ಹರಿತವಿರಲಿಆರದಿರಲಿ ಉತ್ಸಾಹದೀ ದೀಪಆರದಿರಲಿ ಪ್ರೀತಿಉಸಿರ ಹಸಿರು ಉಳಿಯಲಿಮನಸು ಮನಸಿಗೆದೀಪವಾಗಲಿಆರದಿರಲಿ ದೀಪಉತ್ಸಾಹದೀ ದೀಪಆರದಿರಲಿ *******************

ರಾಜ್ಯೋತ್ಸವದ ಶುಭಾಶಯಗಳು

ಪ್ರಿಯರೆ, ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಿದ್ದೇವೆ.‌ ಕರ್ನಾಟಕ ಹಾಗೂ ಅದಕ್ಕೂ ಮೊದಲು ವಿಶಾಲ ಮೈಸೂರು ಎಂಬ ಹೆಸರು ಮತ್ತು ಒಗ್ಗೂಡುವಿಕೆಯ ಹಿಂದಿನ ಇತಿಹಾಸ ಅರಿಯುವುದು ಲೇಖಕರಾದ ನಮ್ಮೆಲ್ಲರ ಹೊಣೆ.‌ ೧೯೦೫ ರಿಂದ ೧೯೨೦ ರ ಸಮಯದಲ್ಲಿ ಕನ್ನಡ ಮಾತಾಡುವ ಪ್ರದೇಶದ ಒಗ್ಗೂಡುವಿಕೆಯ ಹೋರಾಟ ಸಹ ಆರಂಭವಾಯಿತು. ಕರ್ನಾಟಕ ವಿದ್ಯಾವರ್ದಕ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ತನ ಹೋರಾಟವೂ ಕನ್ನಡ ಮಾತಾಡುವ ಪ್ರದೇಶಗಳ ಒಗ್ಗೂಡಿಸುವಿಕೆಯಲ್ಲಿದೆ. ಮದ್ರಾಸ್ , ಹೈದರಾಬಾದ್, ಮುಂಬಯಿ ಪ್ರಾಂತಗಳಲ್ಲಿ ಹರಿದು ಹಂಚಿ ಹೋಗಿದ್ದ ಕನ್ನಡ ನಾಡು ಒಗ್ಗೂಡುವಿಕೆಯಲ್ಲಿ […]

ಒಂದು ಲಸಿಕೆ ಹನಿ

ಕವಿತೆ ಒಂದು ಲಸಿಕೆ ಹನಿ ಕೊಟ್ರೇಶ್ ಅರಸೀಕೆರೆ ತಮ್ಮದಲ್ಲದ ತಪ್ಪಿಗೆ ಜೀವ ತೆತ್ತವರಿಗಾಗಿಬೂದಿ ಮುಚ್ಚಿದ ಕೆಂಡದ ಬದುಕುಒಡಲಲಿಟ್ಟುಕೊಂಡವರಿಗಾಗಿಬರಿಗಾಲಲ್ಲಿ ನಡೆದ ಪುಟ್ಟ ಕಂದಮ್ಮಗಳಿಗೆನನ್ನ ಆತ್ಮಗೌರವ ಬಿಟ್ಟು ಕೇಳಿಕೊಳ್ಳತ್ತೇನೆಒಂದು ಲಸಿಕೆ ಹನಿಯನ್ನು ಚುಮುಕಿಸಿನಿಮಗಾಗಿಯೇ ಓಟು ಒತ್ತುತ್ತೇನೆ! ರಾತ್ರಿಯೆಲ್ಲ ಕೆಮ್ಮಿ ಉಸಿರಿಗಾಗಿ ಹೋರಾಡಿಪ್ರಾಣ ಬಿಟ್ಟವರಿಗಾಗಿಮಕ್ಕಳನ್ನು ಮನೆಯಲ್ಲಿರಿಸಿ ಸೇವೆಗೈದ ವೈದ್ಯದಾದಿಯರಿಗಾಗಿಸೇವೆ ಮಾಡುತ್ತಲೇ ಪ್ರಾಣ ಬಿಟ್ಟವರ ಪರವಾಗಿಮಂಡಿಯೂರಿ ಕೇಳಿಕೊಳ್ಳುತ್ತೇನೆ ಒಂದು ಹನಿಲಸಿಕೆ ಚುಮುಕಿಸಿ ನಿಮಗಾಗಿ ಓಟು ಒತ್ತುತ್ತೇನೆ! ನಾನು ಯಾರಲ್ಲೂ ಹೇಳುವುದಿಲ್ಲ ನೀವು ಪರಮ ದ್ರೋಹಿಗಳೆಂದುನಾನು ಯಾರಲ್ಲೂ ಹೇಳುವುದಿಲ್ಲ ನೀವುಠಕ್ಕ ದೇಶಭಕ್ತರೆಂದುನಾನು ಯಾರಲ್ಲೂ ಹೇಳುವುದಿಲ್ಲ […]

ಮಾತಿನಲ್ಲಿಯೇ ಇದೆ ಎಲ್ಲವೂ…

ಲೇಖನ ಮಾತಿನಲ್ಲಿಯೇ ಇದೆ ಎಲ್ಲವೂ… ಪೂಜಾ ನಾಯಕ್ ನುಡಿದರೆ ಮುತ್ತಿನ ಹಾರದಂತಿರಬೇಕು| ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು| ನುಡಿದರೆ ಸ್ಫಟಿಕದ ಶಲಾಕೆಯಂತಿರಬೇಕು| ನುಡಿದರೆ ಲಿಂಗ ಮೆಚ್ಚಿ ಅಹುದಹುದೆನಬೇಕು| ನುಡಿಯೊಳಗಾಗಿ ನಡೆಯದಿದ್ದರೆ, ಕೂಡಲಸಂಗಮದೇವನೆಂತೊಲಿವನಯ್ಯ ? ಇತ್ತೀಚಿಗೆ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದಾಗ ಒಮ್ಮೆಲೇ ಹಿಂದೆ ಪ್ರೌಢಶಾಲೆಯಲ್ಲಿ ಓದಿದ ಬಸವಣ್ಣನವರ ವಚನದ ಈ ಸಾಲುಗಳು ಥಟ್ಟನೆ ನೆನಪಾಯಿತು. ನೆನಪಾಗುವುದರ ಹಿಂದೆ ಒಂದು ಘಟನೆಯಿದೆ.              ಅಂದು ಐದರ ಇಳಿ ಸಂಜೆಯ ಹೊತ್ತು. ನಾನು ಮತ್ತು ನನ್ನ ಗೆಳತಿ, ರಸಾಯನಶಾಸ್ತ್ರ ವಿಷಯದ ಪ್ರಾಯೋಗಿಕ ತರಗತಿಗಳನೆಲ್ಲ […]

ನಿಮ್ಮೊಂದಿಗೆ

ಸಂಪಾದಕೀಯ ಇವತ್ತಿಗೆ ಸಂಗಾತಿಗೆ ವರ್ಷ ತುಂಬಿತು. ಈ ಪಯಣದಲ್ಲಿ ಜೊತೆ ನೀಡಿದ    ನನ್ನೆಲ್ಲ ಓದುಗಮತ್ತು ಬರಹಗಾರ ಮಿತ್ರರುಗಳಿಗೆ ದನ್ಯವಾದಗಳು. ಸಂಗಾತಿಯ ಸಾಧನೆಯೇನು? ಕೇಳಿದವರಿಗೆ ನನ್ನ ಉತ್ತರ: ಒಂದು ವಿನಮ್ರ ಮುಗುಳ್ನಗುವಷ್ಟೆ! ಹೆಚ್ಚೇನು ಹೇಳಲಿ? ಸಾಕ್ಷಿಗೆ ಸಂಗಾತಿಯಬರಹಗಳೇ ಇವೆ. ** ಆದರೂ ಕೆಲವನ್ನು ನಿಮಗಾದರೂ ಹೇಳಲೇಬೇಕು: ಮುನ್ನೂರ ಅರವತ್ತೈದು ದಿನಗಳು, ಮುನ್ನೂರ ಐವತ್ತಕ್ಕೂ ಅಧಿಕ ಲೇಖಕರು, ಮೂರು ಸಾವಿರಕ್ಕೂ ಹೆಚ್ಚಿನ  ಬರಹಗಳು ಹದಿನೈದಕ್ಕೂ ಹೆಚ್ಚು ಅಂಕಣಗಳು ಅಮೇರಿಕಾದ ಅಶ್ವಥ್ ರಿಂದ ಹಿಡಿದು ಚಾಮರಾಜನಗರದ  ಮಾಲತಿ ಯವರವರೆಗು ಹರಡಿದ ವಿಶಾಲ […]

ಕಲಿಕೆ ಕಸಿದ ಕರೋನ

ಕವಿತೆ ಕಲಿಕೆ ಕಸಿದ ಕರೋನ ಜಿ.ಎಸ್.ಹೆಗಡೆ ಶಾಲೆಯ ಅಂಗಳದಿ ಬೆಳೆದಿವೆ ಈಗಮುಳ್ಳಿನ ಜೊತೆಗೆ ಕಳ್ಳಿಗಳುಕಲಿಕಾಕೋಣೆಯ ಚಪ್ಪರ ತುಂಬಿದೆಜೇಡರ ಬಲೆಯೊಳು ಕೀಟಗಳುಹಾಜರಿ ವಹಿಗೆ ಮೆತ್ತುತ್ತಿದೆ ಈಗಮಣಗಟ್ಟಲೆ ಧೂಳುಅಡುಗೆ ಮನೆಯಲಿ ಓಡಾಡುತಿವೆಇಲಿ ಜಿರಲೆಗಳು ಜೋರು ಪರಿಮಳವಾದ ಪೆನ್ಸಿಲ್ ರಬ್ಬರ್ಬ್ಯಾಗೊಳು ಹಾಗೆ ಇವೆಹೊಸ ಹೊದಿಕೆಯನು ಧರಿಸಿಹ ಪುಸ್ತಕತೆರೆಯಲು ಕಾಯುತಿವೆಅಪ್ಪನು ಕೊಡಿಸಿಹ ಬಣ್ಣದ ಛತ್ರಿಮಳೆಯೊಳು ಆಡು ಎನ್ನುತಿದೆಮಾವನು ಕೊಡಿಸಿಹ ಹೊಸ ಬಟ್ಟೆಯುಹುಟ್ಟುಹಬ್ಬವನು ನೆನಪಿಸಿವೆ ಶಾಲೆಗೆ ಹೋದರೆ ಗುರುಗಳು ಎಂದರು‘ಬರಬೇಡವೋ ನೀನು ಶಾಲೆ‌ ಕಡೆ,ನೀನಿದ್ದಲ್ಲಿಗೆ ನಾನೇ ಬರುವೆನುನೀಡಿರಿ ಗಮನವ ವಿದ್ಯೆಯೆಡೆ’ಊರಿನ ಗುಡಿಗೋಪುರ ಅಂಗಣದಲ್ಲಿ‌ಮಕ್ಕಳ ಮೊಗಕೆ […]

Back To Top